ಗೆದ್ದಿದ್ದು ಕಾಂಗ್ರೆಸ್ಸ್ ಅಲ್ಲ ’ಸೋತಿದ್ದು ಬಿಜೆಪಿ’
- ರಾಕೇಶ್ ಶೆಟ್ಟಿ
ಮೇ೮ರಂದು ರಾಜ್ಯದ ರಾಜಕೀಯ ಪಂಡಿತರ ಲೆಕ್ಕಾಚಾರಗಳೆಲ್ಲ ತಲೆಕೆಳಕಾಗಿ ಖುದ್ದು ಕಾಂಗ್ರೆಸ್ಸಿಗರೇ ತಮ್ಮ “ಕೈ” ಚಿವುಟಿ ಚಿವುಟಿ ಕನಸೋ ನನಸೋ ಅನ್ನುವಷ್ಟರಲ್ಲಿ ಕಾಂಗ್ರೆಸ್ಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.ಪರಮೇಶ್ವರ್ ಸೋಲಿನಿಂದ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿಯೂ ಆಗಿಬಿಟ್ಟರು.
ಅತ್ತ ಕಾಂಗ್ರೆಸ್ಸ್ ಗೆದ್ದಿದ್ದೇ ತಡ,ಇತ್ತ ನಮ್ಮ ನಾಡಿನ ಪ್ರಗತಿಪರರು,ಬುದ್ದಿಜೀವಿಗಳು,ಸಾಕ್ಷಿಪ್ರಜ್ನೆಗಳು ಚುನಾವಣಾ ಫಲಿತಾಂಶದ ಬಗ್ಗೆ ಬರೆಯಲು ಕುಳಿತರು ನೋಡಿ. ಶುರುವಾಯ್ತು ಪದಪುಂಜಗಳ ಪಟ್ಟಿ.ಹೆಚ್ಚು ಕಡಿಮೆ ಆ ಎಲ್ಲಾ ಬರಹಗಳೂ ಈ ಧಾಟಿಯಲ್ಲಿದ್ದವು.
“ಸಂಘ ಪರಿವಾರದ ಪುಂಡಾಟಿಕೆಯಿಂದ,ವಿಷಮಯವಾದ ಹಿಂದುತ್ವದ ಅಜೆಂಡಾ,ಮತಾಂಧತೆ ಇತ್ಯಾದಿ ಇತ್ಯಾದಿಗಳಿಂದ ಅಲ್ಪಸಂಖ್ಯಾತರ ಜೀವನ ನರಕವಾಗಿದ್ದ ಕರ್ನಾಟಕ”ವನ್ನು ನೋಡಿ ಸಹಿಸಲಾಗದ ನಾಡಿನ ಪ್ರಜ್ಞಾವಂತ, ಪ್ರಗತಿಪರ,ಸಂವೇದನಾಶೀಲ,ಸಾಕ್ಷಿಪ್ರಜ್ನೆ ಕನ್ನಡಿಗರು ಕಾಂಗ್ರಸ್ ಪರ ನಿಂತರಂತೆ…!
ನಿಜವಾಗಿಯೂ ಕನ್ನಡಿಗರು ಕಾಂಗ್ರೆಸ್ಸ್ ಪರ ಮತ ಚಲಾಯಿಸದರೆ ಅಂತ ನೋಡ ಹೊರಟರೆ, ೬ ಸ್ಥಾನ ಗೆದ್ದ ಕೆ.ಜೆ.ಪಿ ೩೯ ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿದ್ದರೆ,ಬಿ.ಜೆ.ಪಿ ಸುಮಾರು ೩೦ ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿದ್ದರೆ,ಬಿ.ಆಸ್.ಆರ್ ಗೆದ್ದಿದ್ದು ೪ ಸೀಟುಗಳನ್ನು.ಅಂದರೆ ಬಿಜೆಪಿ+ಕೆಜೆಪಿ+ಬಿ.ಆಸ್.ಆರ್ ನಡುವೆ ಮತಗಳು ಚೆಲ್ಲಾಪಿಲ್ಲಿಯಾಗಿರುವುದರಿಂದ ಕಾಂಗ್ರೆಸ್ಸು ಗೆದ್ದಿದೆ.ಬಹುಷಃ ಬಿಜೆಪಿಯಿಂದ ಯಡ್ಯೂರಪ್ಪ ಹೊರಹೋಗದಿದ್ದರೆ ೮೦ರ ಹತ್ತಿರ ಬಂದು ತಲುಪುತಿತ್ತು.ಇನ್ನೂ ಸರಳವಾಗಿ ಹೇಳಬೇಕೆಂದರೆ ಗೆದ್ದಿದ್ದು ಕಾಂಗ್ರೆಸ್ಸ್ ಅಲ್ಲ ’ಸೋತಿದ್ದು ಬಿಜೆಪಿ’ ಅಷ್ಟೆ.ಗೆಲ್ಲಲ್ಲಿಕ್ಕೆ ಕಾಂಗ್ರೆಸ್ಸ್ ಏನಾದರೂ ವಿರೋಧ ಪಕ್ಷ ಕೆಲಸವನ್ನಾದರೂ ಸರಿಯಾಗಿ ನಿಭಾಯಿಸಿತ್ತೇ? ಇದೊಂತರ ಕೋಗಿಲೆ ಗೂಡಲ್ಲಿ ಕಾಗೆ ಮೊಟ್ಟೆ ಇಟ್ಟ ಹಾಗೆ …!!! ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆದು ಸಮರ್ಥ ವಿರೋಧ ಪಕ್ಷದ ಕೆಲಸ ಮಾಡಿದ್ದು ಜೆಡಿಎಸ್,ಗೆದ್ದಿದ್ದು ಕಾಂಗ್ರೆಸ್ಸ್ …!!!
ಇನ್ನು ಬಿಜೆಪಿ ಸೋಲಿಗೆ ಕಾರಣಗಳನ್ನು ದುರ್ಬೀನು ಹಾಕಿಕೊಂಡೇನು ಹುಡುಕಬೇಕಿಲ್ಲ.ಸಾಲು ಸಾಲು ಡಿ-ನೋಟಿಫಿಕೇಷನ್,ಭ್ರಷ್ಟಾಚಾರದ ಹಗರಣಗಳು,ಬ್ಲೂ-ಫಿಲಂ ಕರ್ಮಕಾಂಡ ಅದು ಇದು ಅಂತಲೇ ಪಟ್ಟಿ ಮಾಡಿಬಿಡಬಹುದು.ಇವೆಲ್ಲಕ್ಕೂ ಕಳಶವಿಟ್ಟಂತೆ ಬಿಜೆಪಿಯ ಮಾಸ್ ನಾಯಕ ಯಡ್ಯೂರಪ್ಪರನ್ನು, ಬೆಂಗಳೂರಿನ ತನ್ನ ಕ್ಷೇತ್ರವೊಂದನ್ನು ಬಿಟ್ಟು ಇನ್ನೆಲ್ಲೂ ನಿಂತು ಒಂದು ಸಂಸದನ ಸ್ಥಾನ ಗೆಲ್ಲಲಾಗದ ರಾಷ್ಟ್ರೀಯ ನಾಯಕ(?)ರೊಬ್ಬರ ಕುತಂತ್ರದಿಂದ ಪಕ್ಷ ತೊರೆದು ಹೋಗುವಂತೆ ಮಾಡಿದ್ದು ಮುಖ್ಯ ಕಾರಣ.ಇನ್ನು ದಕ್ಷಿಣ ಕನ್ನಡದಲ್ಲಿ ಹಾಲಾಡಿ,ಯೋಗಿಶ್ ಭಟ್,ನಾಗರಾಜ್ ಶೆಟ್ಟಿ ಅಂತವರ ವಿಷಯದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ನಡೆದುಕೊಂಡ ರೀತಿಯಿಂದ ಮತ್ತು ಸದಾನಂದ ಗೌಡರನ್ನ ವಿನಾಕಾರಣ ಕುರ್ಚಿಯಿಂದ ಇಳಿಸಿದ್ದು ಬಿಜೆಪಿಗೆ ಮುಳುವಾಯಿತು.
ಸಾಮಾಜಿಕ ಸಂಶೋಧನೆ ಯಾಕಾಗಿ?
- ಪ್ರೊ.ಜೆ.ಎಸ್.ಸದಾನಂದ
{ಪ್ರಜಾವಾಣಿಯಲ್ಲಿ ಪ್ರಕಟವಾದ ದೇವನೂರು ಮಹಾದೇವ ಅವರ ಲೇಖನಕ್ಕೆ ಪ್ರತಿಕ್ರಿಯೆ, ಈ ಲೇಖನವನ್ನು ಪ್ರಜಾವಾಣಿಗೆ ಬಹಳ ಹಿಂದೆಯೇ ಕಳುಹಿಸಿದ್ದು ಪ್ರಜಾವಾಣಿಯಲ್ಲಿ ಮಾತ್ರ ಇನ್ನೂ ಪ್ರಕಟಿಸಲಾಗಿಲ್ಲ}
ದೇವನೂರು ಮಹಾದೇವ ಅವರ ಲೇಖನದಲ್ಲಿ (ಪ್ರಜಾವಾಣಿ ದಿನಾಂಕ: 29/4/2013) ನಮಗೆ ಕಾಣುವುದು ನಮ್ಮ ಸಂಶೋಧನೆಯ ಬಗ್ಗೆ ಇರುವ ಕೋಪ, ಅಸಹನೆ ಹಾಗೂ ತಿರಸ್ಕಾರ. ಇದಕ್ಕೆ ಕಾರಣವೇನು? ಅವರನ್ನು ಸ್ವಲ್ಪಮಟ್ಟಿಗೆ ಬಲ್ಲ ನನಗೆ ಅನಿಸುವುದಿಷ್ಟು. ಇಂತಹ ಸಿಟ್ಟು ಅಸಹನೆಗೆ ಮೂಲ ಕಾರಣ ಸಮಾಜದಲ್ಲಿರುವ ಅನ್ಯಾಯ, ಶೋಷಣೆ ಮುಂತಾದ ನಕಾರಾತ್ಮಕ ಅಂಶಗಳನ್ನು ಬುಡಸಮೇತ ಕಿತ್ತೊಗೆಯಬೇಕೆಂಬ ಗುರಿಯ ಬಗ್ಗೆ ಅವರಿಗಿರುವ ಬದ್ಧತೆ ಹಾಗೂ ಅಂತಹ ಅನ್ಯಾಯ, ಶೋಷಣೆಗಳಿಗೆ ಮೂಲ ಕಾರಣ ಯಾವುದು ಎನ್ನುವುದು ಎನ್ನುವುದರ ಕುರಿತು ಅವರಿಗಿರುವ ದೃಢ ನಂಬಿಕೆ. ಜಾತಿ ವ್ಯವಸ್ಥೆಯನ್ನು ಕಿತ್ತೊಗೆಯದ ಹೊರತು ನಮ್ಮ ಸಮಾಜದ ಅನ್ಯಾಯಗಳನ್ನು ಸರಿಪಡಿಸಲಾಗದು ಎನ್ನುವುದರ ಬಗ್ಗೆ ಅವರಿಗೆ ಯಾವ ಸಂಶಯವೂ ಇಲ್ಲ. ಅವರು ಮುಟ್ಟಬೇಕಾದ ಗುರಿ ಹಾಗೂ ಆ ನಿಟ್ಟಿನಲ್ಲಿ ಅವರು ಸಾಗುತ್ತಿರುವ ಮಾರ್ಗದ ನಡುವೆ ಯಾವ ವ್ಯತ್ಯಾಸವೂ ಅವರಿಗೆ ಕಾಣಿಸುವುದಿಲ್ಲ. ಹಾಗಾಗಿ ಸಾಗುತ್ತಿರುವ ಮಾರ್ಗದ ಕುರಿತು ಎತ್ತಲಾಗುವ ಪ್ರಶ್ನೆಗಳು ಮುಟ್ಟಬೇಕಾದ ಗುರಿಯನ್ನೇ ಪ್ರಶ್ನಾರ್ಹಗೊಳಿಸುವಂತೆ ಅಥವಾ ಅಂತಹ ಗುರಿಗಳಿಂದ ನಮ್ಮನ್ನು ವಿಮುಖಗೊಳಿಸುವ ಹುನ್ನಾರದಂತೆ ಅವರಿಗನಿಸುತ್ತಿದೆ.
ಅವರ ಈ ಅನಿಸಿಕೆ ಎಷ್ಟರಮಟ್ಟಿಗೆ ಸರಿ? ಈ ಪ್ರಶ್ನೆಗೆ ಉತ್ತರಿಸಬೇಕಾದರೆ ಬಾಲುರವರು ಭಾರತದಲ್ಲಿ ಜಾತಿವ್ಯವಸ್ಥೆ ಇಲ್ಲ ಎನ್ನುವ ಪ್ರಾಕ್ಕಲ್ಪನೆಯನ್ನು (ಇದೊಂದು ಸಂಶೋಧನೆಯ ಮುಖಾಂತರ ಸಾಬೀತಾಗಬೇಕಾದ ಪ್ರಾಕ್ಕಲ್ಪನೆ ಮಾತ್ರ) ಏಕೆ ಮುಂದಿಡುತ್ತಾರೆ ಎನ್ನುವುದರ ಹಿನ್ನೆಲೆಯನ್ನು ನಾವು ನೋಡಬೇಕು. ಭಾರತದಲ್ಲಿ ಜಾತಿವ್ಯವಸ್ಥೆಯ ಸ್ವರೂಪ ಹಾಗು ಅದರ ಪರಿಣಾಮಗಳ ಕುರಿತು ಈಗಾಗಲೇ ಅಸಂಖ್ಯಾತ ಸಂಶೋಧನಾ ಗ್ರಂಥಗಳು ಹೊರಬಂದಿವೆ. ಜಾತಿವ್ಯವಸ್ಥೆಯ ಸ್ವರೂಪದ ಬಗ್ಗೆ ವಿದ್ವಾಂಸರಲ್ಲಿ ಒಮ್ಮತದ ಅಭಿಪ್ರಾಯವನ್ನು ನಾವು ಕಾಣುವುದಿಲ್ಲ. ಅದಕ್ಕೆ ತದ್ವಿರುದ್ದವಾಗಿ ಭಾರತದಲ್ಲಿ ಎಲ್ಲಡೆ ಕಂಡುಬರುವ ಜಾತಿಗಳನ್ನು ಒಂದು ಚೌಕಟ್ಟಿನಲ್ಲಿಟ್ಟು ನೋಡಲು ಸಾಧ್ಯವಿಲ್ಲ ಎನ್ನುವುದುನ್ನು ಎಲ್ಲಾ ವಿದ್ವಾಂಸರೂ ಹೆಚ್ಚು ಕಡಿಮೆ ಒಪ್ಪುತ್ತಾರೆ. ಬಾಲು ಅವರ ಪ್ರಕಾರ ಇದ್ಕಕೆ ಮುಖ್ಯ ಕಾರಣ ಈ ಎಲ್ಲಾ ಸಂಶೋಧನೆಗಳು ಜಾತಿವ್ಯವಸ್ಥೆ ಎನ್ನುವುದು ಹಿಂದೂ ರಿಲಿಜನ್ನ ಪ್ರಧಾನ ಲಕ್ಷಣ ಎನ್ನುವ ಇದುವರೆಗೆ ಯಾವುದೇ ಸಂಶೋಧನೆಯಿಂದ ಸಾಬೀತಾಗದ ನಂಬಿಕೆಯನ್ನು ಆಧರಿಸಿವೆ. ಹಿಂದೂ ರಿಲಿಜನ್ ಎನ್ನುವುದು ಅಸ್ತಿತ್ವದಲ್ಲಿ ಇದೆ ಮತ್ತು ಭಾರತದಲ್ಲಿರುವ ಎಲ್ಲಾ ಜಾತಿಗಳು ಅದರ ನ್ಯೆತಿಕ ನಿರ್ಬಂಧದಲ್ಲಿ ಬಂದಿಸಲ್ಪಟ್ಟಿವೆ ಎನ್ನುವುದು ಒಂದು ಸಾಮಾನ್ಯ ನಂಬಿಕೆಯಾಗಿ ಮುಂದುವರೆದುಕೊಂಡು ಬಂದಿದೆಯೇ ಹೊರತು ಅದಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳನ್ನು ಯಾರಿಗೂ ಕೊಡಲು ಸಾಧ್ಯವಾಗಿಲ್ಲ.
ಹೇಗೆ ಹೇಳಲಿ? ಏನು ಹೇಳಲಿ?
- ಪ್ರೊ.ರಾಜಾರಾಮ ಹೆಗಡೆ
ದೇವನೂರು ಮಹಾದೇವರವರ ಲೇಖನಕ್ಕೆ ಪ್ರತಿಕ್ರಿಯೆ {ಪ್ರಜಾವಾಣಿಯಲ್ಲಿ ಅಪ್ರಕಟಿತ ಲೇಖನ}
ದೇವನೂರು ಮಹಾದೇವರ ಪ್ರತಿಕ್ರಿಯೆಯನ್ನು ಓದಿದ ನಂತರ, ಅವರು ಏನನ್ನು ಹೇಗೆ ಹೇಳಿದ್ದಾರೆ ಎಂಬುದನ್ನು ಕಂಡ ನಂತರ ಅವರನ್ನು ಕಾಡಿದ ಆ “ಹೇಗೆ ಹೇಳಲಿ? ಏನು ಹೇಳಲಿ?” ಎಂಬ ಪ್ರಶ್ನೆ ಈಗ ಅವರದಕ್ಕಿಂತ ನನ್ನದೇ ಆಗಿದೆ. ಅವರು ನಮ್ಮ ಕುರಿತು ಏಕೆ ಇಂಥ ಭಾಷೆಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ ಎಂಬುದು ಸ್ಪಷ್ಟ. ಅವರಿಗೆ ಸಿಟ್ಟಿದೆ. ದೇವನೂರರು ಒಂದು ಸಮೂಹದ ಹಿತದೃಷ್ಟಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದಾರೆ. ಅವರ ಜೀವನ ಈ ಕುರಿತಾಗಿಯೇ ಒಂದು ಹೋರಾಟ ಎಂದರೂ ತಪ್ಪಿಲ್ಲ. ಇಷ್ಟನ್ನು ಖಚಿತವಾಗಿ ಹೇಳಬಲ್ಲಷ್ಟು ನಾನು ಅವರನ್ನು ಬಲ್ಲೆ. ಹಾಗೂ ಅದನ್ನು ಗಮನಿಸುವುದು ಮುಂದಿನ ಸಂವಾದಕ್ಕೆ ನಿರ್ಣಾಯಕ ಎಂಬುದಾಗಿ ನನಗನಿಸುತ್ತದೆ. ಏಕೆಂದರೆ ಯಾರದೇ ಪ್ರಾಮಾಣಿಕತೆಯ ಮೇಲೆ ಅಪನಂಬಿಕೆಯನ್ನಿಟ್ಟು ಬೌದ್ಧಿಕ ಚರ್ಚೆಯನ್ನು ಪ್ರಾರಂಭಿಸುವುದರಿಂದ ಚರ್ಚಿಸತಕ್ಕ ವಿಷಯಕ್ಕೆ ನ್ಯಾಯ ಸಲ್ಲುವುದಿಲ್ಲ.
ನಮ್ಮ ದುರುದ್ದೇಶದ ಕುರಿತು ಅವರು ಕಟ್ಟಿಕೊಂಡಿರುವ ಚಿತ್ರಗಳನ್ನು ಅವರ ಲೇಖನದ ಮೂಲಕ ಗ್ರಹಿಸುತ್ತ ಹೋದಾಗ ನಮ್ಮ ಕುರಿತು ಯಾವ ರೀತಿಯ ಚಿತ್ರಣವು ಅವರ ವಲಯದಲ್ಲಿ ಗಟ್ಟಿಯಾಗುತ್ತಿದೆ ಎಂಬುದಕ್ಕೆ ಮತ್ತೊಂದು ದೃಷ್ಟಾಂತ ಸಿಕ್ಕಂತಾಯಿತು. ಹಾಗಂತ ಇದೇನೂ ನನಗೆ ಆಘಾತ ನೀಡಲಿಲ್ಲ. ಈ ಥೆರಪಿಯನ್ನು ನನಗೆ ಹಾಗೂ ನನ್ನ ಗುಂಪಿಗೆ ನಾವು ಬಾಲು ಜೊತೆ ಸೇರಿ ಸಂಶೋಧನೆ ಪ್ರಾರಂಭಿಸಿದಾಗಿನಿಂದಲೂ ನೀಡಲಾಗುತ್ತಿದೆ. ಸಂಶೋಧನೆ ಮಾಡುವುದು ಕೇವಲ ಬೌದ್ಧಿಕ ಪ್ರಶ್ನೆಯೊಂದೇ ಅಲ್ಲ, ಅದು ಪ್ರವಾಹದ ವಿರುದ್ಧ ಈಜುವ ಕೆಲಸ ಕೂಡ ಆಗಿದೆ ಎಂಬುದು ನಮಗೆ ಈಗಾಗಲೇ ಅನುಭವ ವೇದ್ಯವಾಗಿದೆ. ನಮ್ಮ ದುರುದ್ದೇಶದ ಕುರಿತು ಹುಟ್ಟುತ್ತಿರುವ ಕಥೆ ಸಾಕಷ್ಟು ಬೇರುಬಿಡುತ್ತಿದೆ ಎಂಬುದನ್ನು ಪ್ರಜಾವಾಣಿ ಪ್ರತಿಕ್ರಿಯೆಗಳಿಂದ ಮನಗಾಣುತ್ತಿದ್ದೇನೆ. ದೇವನೂರರೇ ಕೊಟ್ಟ ಆಡಿನ ಕಥೆಯಂತೆ ಹತ್ತಾರು ಮಂದಿ ಒಂದು ಸುಳ್ಳನ್ನು ಹೇಳುತ್ತಿದ್ದರೆ, ಹಾಗೂ ನಾವು ಸುಮ್ಮನೇ ಇದ್ದರೆ ಜನ ಅದನ್ನೇ ಸತ್ಯವೆಂದು ನಂಬಿಬಿಡುವ ಸಾಧ್ಯತೆಯಿದೆ. ಒಂದೊಮ್ಮೆ ನಮ್ಮ ಸಂಶೋಧನೆಯು ದೇವನೂರರು ಅಂದುಕೊಂಡಂತೇ ಯಾವುದೇ ಮಾನವ ಸಮುದಾಯದ ಅಹಿತವನ್ನು ಬಯಸುವ ದುರುದ್ದೇಶವನ್ನು ಹೊಂದಿಲ್ಲ ಅಂತಾದರೆ, ಈ ನಿಟ್ಟಿನಲ್ಲಿ ಈಗಿರುವ ಜ್ಞಾನದ ಮಿತಿಗಳನ್ನು ಕಳೆದು ಇನ್ನೂ ಹೆಚ್ಚು ಸ್ಪಷ್ಟತೆಯನ್ನು, ನ್ಯಾಯವನ್ನು ಸಾಧಿಸುವುದು ಅಂತಾದರೆ, ದೇವನೂರರ ನೋವಿಗೆ ಇರಬಹುದಾದ ಕಾರಣಗಳೇ ಮಾಯವಾಗುತ್ತವೆ. ಮುಂದೆ ಅವರ ಜೊತೆ ಅರ್ಥಪೂರ್ಣ ಸಂವಾದ ಸಾಧ್ಯವಾಗಬಹುದು ಎಂಬ ಆಶಯದಿಂದ ಈ ಲೇಖನ.
ಸಾಮಾನ್ಯ ಭಾರತೀಯನೊಬ್ಬನ ಪ್ರಶ್ನೆಗಳು
- ಶಿವಶಂಕರ್ ಪುತ್ರನ್, ಕೊಡಿಯಾಲ್ ಬೈಲ್
ಅಲ್ಲಾ ಸ್ವಾಮಿ, ಮಹಾತ್ಮರ ಸಿದ್ದಾ೦ತಗಳನ್ನು ಪಾಲಿಸುವವರೆ, ಯಾರೋ ಒಬ್ಬ ಸ೦ಸತ್ ಸದಸ್ಯ ಶಫಿಯಕುರ್ ರೆಹಮಾನ್ ವಂದೇಮಾತರ೦ನ್ನ ಗೌರವಿಸದೆ,ಆಮೇಲೆ ತಾನು ಯಾಕೆ ಗೌರವಿಸಿಲ್ಲ
ಅನ್ನೋದಕ್ಕೆ ಸ್ಪಷ್ಟನೆ ನೀಡ್ತಾನೆ.ಆತನ ಆ ಕ್ರಿಯೆ ದೇಶದಲೆಲ್ಲ ದೊಡ್ಡ ಅಲ್ಲೋಲಕಲ್ಲೋಲವನ್ನ ಉ೦ಟು ಮಾಡುತ್ತೆ.ಸಾಮಾಜಿಕ ತಾಣಗಳಾದ ಫೇಸ್ಬುಕ್,ಟ್ವಿಟ್ಟರ್ಗಳಲ್ಲಿ ಅವನ ವಿರುದ್ದ ಜನ ತಮ್ಮ ಕ್ರೋಧ ವ್ಯಕ್ತಪಡಿಸುತ್ತಾರೆ.ಕನ್ನಡದ ಬ್ಲಾಗೊ೦ದರಲ್ಲಿ ಸತ್ಯವಿಶ್ವಾಸಿಗಳಿಗೆ ದೇಶಪ್ರೇಮವನ್ನ ಬೋಧಿಸಲು ಹೋದವನ ಲೇಖನಕ್ಕೆ ಉತ್ತರಿಸುವ ನೆಪದಲ್ಲಿ ಹಲವಾರು ವ್ಯಕ್ತಿಗಳು ತಾವು ಹಾಗು ತಮ್ಮವರು ಯಾಕೆ ವಂದೇಮಾತರ೦ ಹಾಡಬಾರದು,ಯಾಕೆ ಗೌರವಿಸಬಾರದೆ೦ದು ತಮ್ಮ ಸ೦ಸದನ ವರ್ತನೆಯನ್ನ ಸಮರ್ಥಿಸಿಕೊಳ್ಳುವಾಗ ಒಬ್ಬ ಹುಲು ಭಾರತಿಯನಾಗಿ,ಒಬ್ಬ ಸಾಮಾನ್ಯ ಹಿ೦ದುವಾಗಿ, ಅದರೆ ಒಬ್ಬ ಅಪ್ಪಟ್ಟ ಭಾರತೀಯನಾಗಿ ಮನದಲ್ಲಿ ಹುಟ್ಟುವ ಹಲವಾರು ಗೊ೦ದಲಗಳಿಗೆ ಉತ್ತರವೆ ಸಿಗುತ್ತಿಲ್ಲ.ಹಾಗೆ ಮು೦ದುವರಿದು ಕೆಲವು ಮಿತ್ರರಲ್ಲಿ ಕೇಳಿದೆ, ಅವರಿಗೂ ಅದೇ ಗೊಂದಲ.ಅವರಲ್ಲಿ ಕೆಲವರು ಸದ್ಯಕಷ್ಟೆ ರಾಜ್ಯದ ಚುನಾವಣೆಯಲ್ಲಿ ಬಾಗಿಯಾಗಿ ಕೆಲವರು ಭ್ರಮನಿರಸಗೊ೦ಡರೆ,ಕೆಲವರು ಪಕ್ಷ ನಿಷ್ಟೆ ಬದಲಿಸಿ ಹೊಟ್ಟೆತು೦ಬಿಸಿಕೊ೦ಡವರು.ಹಾಗಾಗಿ,ಅವರಲ್ಲಿ ಕೇಳುವುದು ವ್ಯರ್ಥವೆಂದೆನಿಸಿ ಯಾಕೆ ನಮ್ಮ ಮುಸಲ್ಮಾನ ಬ೦ಧುಗಳಲ್ಲೆ ಕೇಳಬಾರದು ಅನಿಸಿತು.ಸ೦ಸಾರದ ಗೊಂದಲಗಳ ನಡುವೆ ಪ್ರತಿಯೊಬ್ಬ ನನ್ನ ಭೇಟಿಮಾಡುವಸ್ಟು ಸಮಯವಿಲ್ಲದಿರುವುದರಿ೦ದ ಇಲ್ಲೇ ಕೇಳುತ್ತಿದ್ದೇನೆ.ಅಷ್ಟೆ ಅಲ್ಲದೆ, ಇನ್ನು ಕೆಲವು ದಿನಗಳಿ೦ದ ಮನಸಿನಲ್ಲಿ ನನ್ನ ಮುಂದಿನ ಜನಾ೦ಗದ ಬಗ್ಗೆ ಯೋಚಿಸಿ ಇನ್ನು ಕೆಲವು ಪ್ರಶ್ನೆಗಳನ್ನ ಇಡುತ್ತಿದೇನೆ.ಇದನ್ನ ನೇರವಾಗಿ ಕೇಳಿದರೆ ನನ್ನ ಜೀವಕ್ಕೆ ಅಪಾಯ ಯಾಕೆ೦ದರೆ ನಾನೊಬ್ಬ ಹಿ೦ದು ಹಾಗು ನನ್ನ ಜಾತಿಯ ಆಧಾರದಲ್ಲಿ ಚುನಾವಣೆಯ ಸಮಯದಲ್ಲಿ ನನ್ನ ಮತಕ್ಕೆ ಮಾತ್ರ ಮರ್ಯಾದೆ ಅಲ್ಲದೆ ನನ್ನ ರಕ್ಷಣೆಗಲ್ಲ ಎ೦ದು ಸಣ್ಣ೦ದಿನಲ್ಲೆ ನನಗೆ ಅರ್ಥವಾಗಾಗಿದೆ.ಆದುದರಿ೦ದ ನನ್ನ ಪ್ರಶ್ನೆ ಪ್ರತಿಯೊಬ್ಬ ಸಾಮಾನ್ಯ ಭಾರತೀಯನ(ನಿಮ್ಮ ಪ್ರಕಾರ ಸತ್ಯವಿಶ್ವಾಸಿಯಲ್ಲದ ಅಬ್ರಾಹಂನ ಸಿದ್ದಾ೦ತಗಳಿಗೆ ಒಳಪಡದ ಅಪ್ಪ-ಅಮ್ಮನಿಲ್ಲದ ಜನಾ೦ಗ)ಪ್ರಶ್ನೆಯೆಂದು ತಿಳಿಯಬಹುದು.
ವಂದೇ ಮಾತರಂ ಹಾಡಲಾಗದಿದ್ದರೆ…
-ಅಶ್ವಿನ್ ಅಮೀನ್
ಅದನ್ನು ಬರಿ ಗೀತೆ ಅನ್ನಬಹುದೇ?ಊಹೂಂ ಅದು ಗೀತೆಯಲ್ಲ, ಅದು ಭಾರತದ ಸ್ವಾತಂತ್ರ್ಯ ಹೋರಾಟದ ಬೀಜಮಂತ್ರ.ಬ್ರಿಟಿಷರ ನಿದ್ದೆ ಕೆಡಿಸುತ್ತಿದ್ದ ಮಂತ್ರವದು.ಎದೆಯುಬ್ಬಿಸಿ ಗರ್ವದಿಂದ ಗರ್ಜಿಸುವಾಗ ಮೈ ಮನಸ್ಸುಗಳು ರೋಮಾಂಚನಗೊಳ್ಳುತ್ತವೆ.. ಅದೆಂತಾ ಶಕ್ತಿಯಿದೆ ಈ ‘ವಂದೇ ಮಾತರಂ’ ನಲ್ಲಿ. ಅದೆಷ್ಟೋ ಹೋರಾಟಗಳ ಸ್ಪೂರ್ತಿ ಇದು, ದೇಶ ಪ್ರೇಮವ ಬಡಿದೆಬ್ಬಿಸುವ ಬೀಜಮಂತ್ರವಿದು. ಪ್ರತಿಯೊಬ್ಬ ಭಾರತೀಯನ ನಾಡಿ ಮಿಡಿತವಿದು… ವಂದೇ ಮಾತರಂ ಅನ್ನು ವಿಶ್ಲೇಷಿಸ ಹೊರಟರೆ ಆ ವಿಶ್ಲೇಷಣೆಯೇ ಒಂದು ವೀರ ಗೀತೆಯಾದೀತು…!!!!
ಆದರೆ…ವಂದೇ ಮಾತರಂ ಅನ್ನು ಗೌರವಿಸುವ ಮನಸ್ಸುಗಳ ನಡುವೆ ಧರ್ಮದ ನೆಪವೊಡ್ಡಿ ಅದನ್ನು ವಿರೋಧಿಸುವ ಕೆಲ ವಿಷ ಮನಸ್ಸುಗಳೂ ತುಂಬಿರುವುದು ಖೇದಕರ..
ಮೊನ್ನೆ ಮೊನ್ನೆ ತಾನೆ ತಾನು ಮುಸ್ಲಿಂ ಎಂಬ ಕಾರಣಕ್ಕೆ ವಂದೇ ಮಾತರಂ ಹಾಡುವುದಿಲ್ಲ ಎಂದು ವಂದೇ ಮಾತರಂ ಹಾಡಿನ ಮಧ್ಯೆಯೇ ಸಂಸತ್ತಿನಿಂದ ಹೊರನಡೆದು ಉದ್ದಟತನ ತೋರಿದ ಬಿಎಸ್ಪಿ ಸಂಸದ ಶಫಿಕುರ್ ರೆಹಮಾನ್ ಬಗ್ಗೆ ಕೇಳಿರುತ್ತೀರಿ. ಇಂತಹ ಮತಾಂಧವಾದದ ನಡೆ ಇದೇ ಮೊದಲಲ್ಲ. ವಂದೇ ಮಾತರಂ ಅನ್ನು ವಿರೋಧಿಸಿ ಭಾರತೀಯರಲ್ಲಿ ವಿಷ ಬೀಜ ಬಿತ್ತಿದವರಲ್ಲಿ ಆಲಿ ಸಹೋದರರು ಮೊದಲಿಗರಾಗಿ ಕಂಡು ಬರುತ್ತಾರೆ.
ಆ ಘಟನೆ ಹೀಗಿದೆ;
1923. ಆಂಧ್ರ ಪ್ರದೇಶದಲ್ಲಿ ಕಾಂಗ್ರೆಸ್ಸ್ ನ ರಾಷ್ಟ್ರೀಯ ಅಧಿವೇಶನ ನಡೆಯುತ್ತಿತ್ತು. ಆಗ ಪ್ರತಿ ಅಧಿವೇಶನದಲ್ಲಿ ವಂದೇ ಮಾತರಂ ಹಾಡುವ ಸಂಪ್ರದಾಯ ಬೆಳೆದು ಬಂದಿತ್ತು. ಪಂಡಿತ್ ವಿಷ್ಣು ದಿಗಂಬರ ಫಲುಸ್ಕರ್ ಪ್ರತಿ ವರ್ಷದಂತೆ ವಂದೇ ಮಾತರಂ ಹಾಡ ಹೊರಟಾಗ ಆಗಿನ ಕಾಂಗ್ರೆಸ್ಸ್ ಅಧ್ಯಕ್ಷ (ಮುಸ್ಲಿಂ ಲೀಗ್ ನ ಸ್ಥಾಪಕರಲ್ಲೊಬ್ಬರಾದ) ಮೌಲಾನ ಅಹಮದ್ ಆಲಿ ಆತನ ಸಹೋದರ ಶೌಕತ್ ಆಲಿ ತಡೆದರು. ಇಸ್ಲಾಂನ ಕಾನೂನಿನಂತೆ ಸಂಗೀತ ನಿಷಿದ್ಧ ಎಂಬುದು ಅವರು ಕೊಟ್ಟ ಕಾರಣವಾಗಿತ್ತು. ಹಠಾತ್ ಬೆಳವಣಿಗೆಯಿಂದ ಕೆಂಡಾ ಮಂಡಲರಾದ ಫಲುಸ್ಕರ್ ಇದು ಕಾಂಗ್ರೆಸ್ಸ್ ನ ಅಧಿವೇಶನ, ಒಂದು ಧರ್ಮದ ಸಭೆಯಲ್ಲ.. ಮುಸ್ಲಿಮರ ದರ್ಗಾ, ಮಸೀದಿಯೂ ಅಲ್ಲ.. ಈ ರಾಷ್ಟ್ರೀಯ ವೇದಿಕೆ ಮೇಲೆ ವಂದೇ ಮಾತರಂಗೆ ಅಡ್ಡಿಪಡಿಸಲು ನಿಮಗೇನು ಅಧಿಕಾರವಿದೆ? ಅಧಿವೇಶನ ಪ್ರಾರಂಭವಾಗುವ ಮೊದಲು ಅಧ್ಯಕ್ಷೀಯ ಮೆರವಣಿಗೆ ಯಲ್ಲಿ ವಿಜೃಂಭಣೆಯ ಸಂಗೀತ ವಾದ್ಯಗಳೊಂದಿಗೆ ಬರುವಾಗ ನಿಮಗೆ ಹಿಡಿಸಿತೇ ?! ವಂದೇ ಮಾತರಂಗೆ ವಿರೋಧ ಇರುವವರು ಧಾರಾಳವಾಗಿ ಹೊರ ನಡೆಯಬಹುದು ಎಂದು ಆಲಿ ಸಹೋದರರನ್ನು ಜಾಡಿಸಿದರು. ನಂತರ ವಂದೇ ಮಾತರಂ ಅನ್ನು ಪೂರ್ತಿಯಾಗಿ ಹಾಡಿ ವಂದಿಸಿ ಕೆಳಗಿಳಿದರು.
Read more 
ಸಿದ್ಧಾಂತ ಮತ್ತು ಐಡಿಯಾಲಜಿ ಒಂದೇ ಅಲ್ಲ – “ಗೆಳೆಯ ಫಣಿರಾಜ್ ರವರ ಪತ್ರಕ್ಕೆ ಒಂದು ಪ್ರತಿಕ್ರಿಯೆ”
- ಪ್ರೊ.ಜೆ.ಎಸ್.ಸದಾನಂದ
ನಿಮ್ಮ ಪತ್ರ ಓದಿದ ನಂತರ ಒಂದು ತರದ ಹಿತಕರ ಅನುಭವವಾಯಿತು. ಹಿತಕರ ಏಕೆಂದರೆ ಇದೂವರೆಗೂ ನಮ್ಮ ಬಗ್ಗೆ ಪ್ರತಿಕ್ರಿಯಿಸಿದ ಬಹಳಷ್ಟು ಮಂದಿಗೆ ನಮ್ಮ ಸಂಶೋಧನೆಯ ಹಿಂದಿರುವ ಕುತಂತ್ರ, ಹುನ್ನಾರ ಹಾಗೂ ಆಮಿಷಕ್ಕೆ ಒಳಗಾಗುತ್ತಿರುವುದಷ್ಟೇ ಕಾಣಿಸುತ್ತಿತ್ತು. ಅದಕ್ಕೆ ವ್ಯತಿರಿಕ್ತವಾಗಿ ನೀವು ನಮ್ಮ ಸಂಶೋಧನೆಯ ಬಗ್ಗೆ ನಿಮಗಿರುವ ಕೆಲವು ಸಂದೇಹಗಳ ಕುರಿತು ತುಂಬಾ (ಸಾಮಾಜಿಕ ಹೋರಾಟದಲ್ಲಿ ಬಹಳ ಕಾಲದಿಂದಲೂ ತೊಡಗಿಸಿಕೊಂಡ ಬದ್ಧತೆಯಿಂದ ಹುಟ್ಟಿದ) ಕಾಳಜಿಯಿಂದ ಚರ್ಚೆ ಮಾಡಲು ಹೊರಟಿದ್ದೀರಿ. ನಮ್ಮ ಉದ್ದೇಶವೂ ಸಹ ನಮ್ಮ ಕೇಂದ್ರದಲ್ಲಿ ಕ್ಯೆಗೊಳ್ಳುತ್ತಿರುವ ಸಂಶೋಧನೆಗಳು ಸಾರ್ವಜನಿಕ ವಿಮರ್ಶೆಗೊಳಪಡಬೇಕು ಮತ್ತು ಅದರ ಪರಿಣಾಮದಿಂದ ನಮಗೂ, ಈ ನಿಟ್ಟಿನಲ್ಲಿ ಸಂಶೋಧನೆ ಮಾಡುತ್ತಿರುವ, ಚಿಂತಿಸುತ್ತಿರುವ ಇತರರಿಗೂ ಪ್ರಚಲಿತ ಚಿಂತನೆಯಲ್ಲಿರುವ (ನಮ್ಮದನ್ನೂ ಒಳಗೊಂಡು) ಲೋಪದೋಷಗಳನ್ನು ಗುರುತಿಸಿ ಅವುಗಳನ್ನು ಸರಿಪಡಿಸಿಕೊಳ್ಳಲು ಸಹಾಯಕವಾಗಬೇಕು ಎನ್ನುವುದೇ ಆಗಿದೆ.
ನಮ್ಮ ಸಂಶೋಧನಾ ವಿಧಾನದ ಬಗ್ಗೆ ಈಗಾಗಲೇ ಹೇಳಿರುವುದರಿಂದ ಅದನ್ನು ಪುನರಾವರ್ತಿಸುವ ಅಗತ್ಯವಿಲ್ಲ. ಆದರೆ ಒಂದು ವಿಷಯವನ್ನು ಇಲ್ಲಿ ಸ್ಪಷ್ಟಪಡಿಸಲು ಬಯಸುತ್ತೇನೆ. ಜಾತಿವ್ಯವಸ್ಥೆ, ಸೆಕ್ಯುಲರಿಸಂ, ಮಡೆಸ್ನಾನ ಇತ್ಯಾದಿಗಳ ಬಗ್ಗೆ ನಾವಾಗಲೀ ಬಾಲುವಾಗಲಿ ಯಾವುದೇ ವ್ಯೆಜ್ಞಾನಿಕ ಸಿದ್ದಾಂತವನ್ನು ಮಂಡಿಸುತ್ತಿಲ್ಲ. ಮುಂದಿನ ಸಂಶೋಧನೆಗಳು ಕ್ಯೆಗೆತ್ತಿಕೊಳ್ಳಬಹುದಾದ ಸಂಶೋಧನಾ ಪ್ರಶ್ನೆಗಳನ್ನಷ್ಟೇ ಮುಂದಿಡುತ್ತಿದ್ದೇವೆ. ಅದರ ಮೊದಲ ಹಂತವಾಗಿ ಅವುಗಳ ಕುರಿತಾಗಿ ಬರೆದ ಲೇಖನಗಳು ಈ ವಿದ್ಯಮಾನಗಳ ಸದ್ಯದ ಗ್ರಹಿಕೆಯ ಸ್ವರೂಪದಲ್ಲಿ ಇರುವ ಸಮಸ್ಯೆಗಳನ್ನು ಮಾತ್ರ ಗುರುತಿಸುವ ಪ್ರಯತ್ನ ಮಾಡುತ್ತವೆ. ನಾವು ಒಪ್ಪಿಕೊಂಡಿರುವ ಲಿಬರಲ್ ಪ್ರಜಾಪ್ರಭುತ್ವ, ಸೆಕ್ಯುಲರರ ಹಾಗೂ ವ್ಯೆಚಾರಿಕ ಸಿದ್ಧಾಂತಗಳ ಚೌಕಟ್ಟಿನಲ್ಲಿ ಈ ಸಮಸ್ಯೆಯನ್ನು ಪರಿಹರಿಸಲು ಮುಂದಾದಾಗ ಉದ್ಭವಿಸುವ ಸಮಸ್ಯೆಗಳೇನು ಎಂದು ಗುರುತಿಸಲು ಪ್ರಯತ್ನಿಸಿದ್ದೇವೆ. ಇವುಗಳ ಬಗ್ಗೆ ಯಾವುದೇ ಸಂಶೋಧನೆ ನಡೆದಿಲ್ಲ. ಮುಂದೊಂದು ದಿನ ಯಾರಾದರೂ ಸಂಶೋಧನೆ ಕ್ಯೆಗೊಂಡರೆ ನಾವು ಸಮಸ್ಯೆಯನ್ನು ಗುರುತಿಸಿರುವ ವಿಧಾನದಲ್ಲೂ ತಪ್ಪಿದೆ ಎಂದು ತೋರಿಸುವ ಸಾಧ್ಯತೆ ಇದೆ. ಹಾಗಾದಾಗ ಅದನ್ನು ನಾವು ಒಪ್ಪಿಕೊಳ್ಳಲೇಬೇಕು. ನೀವೇಕೆ ಇಂತಹ ವಿಷಯಗಳನ್ನೇ ಸಂಶೋಧನೆಗೆ ಆಯ್ಕೆ ಮಾಡಿಕೊಳ್ಳುತ್ತಿದ್ದೀರಿ ಎಂದು ನಾವು ಖಂಡಿತಾ ಕೇಳುವುದಿಲ್ಲ.
ನಮ್ಮ ವಿಶ್ವವಿದ್ಯಾಲಯಗಳಲ್ಲಿ ಸಾಮಾಜಿಕ ಸಂಶೋಧನೆಗೆ ಭವಿಷ್ಯವಿದೆಯೆ?
ಪ್ರೊ. ರಾಜಾರಾಮ ಹೆಗಡೆ ಮತ್ತು ಡಾ. ಷಣ್ಮುಖ. ಎ
[ಪ್ರೊ.ರಾಜೇಂದ್ರ ಚೆನ್ನಿಯವರು ಬರೆದಿದ್ದು ಎನ್ನಲಾದ "ಭಾರತದಲ್ಲಿ ಜಾತಿವ್ಯವಸ್ಥೆ ಇದೆಯೆ?" ಎಂಬ ಪುಸ್ತಕದ ವಿಮರ್ಶೆಯು ಅವರ ಆಪ್ತ ವಲಯದಲ್ಲಿ ಸರ್ಕುಲೇಟ್ ಆಗುತ್ತಿದೆ. ಆ ವಿಮರ್ಶೆಯ ಮಿತಿಗಳು ಮತ್ತು ಪೂರ್ವಾಗ್ರಹಗಳನ್ನು ಸ್ಪಷ್ಟಪಡಿಬೇಕೆಂದು ಈ ಲೇಖನವನ್ನು ಬರೆಯಲಾಗಿದೆ]
ಇತ್ತೀಚೆಗೆ ಜಾಲತಾಣದಲ್ಲಿ ಸುತ್ತಾಡುತ್ತಿದ್ದ ಒಂದು ಪುಸ್ತಕ ವಿಮರ್ಶೆಯ ಪ್ರಾರಂಭಿಕ ಸಾಲುಗಳು ನಮ್ಮನ್ನು ಬೆಚ್ಚಿಬೀಳಿಸಿದವು. ಅವು ಹೀಗಿವೆ:
“ಈ ಕೃತಿಯು ನನ್ನಲ್ಲಿ ಹುಟ್ಟಿಸಿದ ವೈಚಾರಿಕ ಕುತೂಹಲವನ್ನು ಹೀಗೆ ವಿವರಿಸಬಹುದು. ಮನುಷ್ಯರು ಓದು, ಬುದ್ಧಿಶಕ್ತಿ, ತರ್ಕ ಹಾಗೂ ಭಾಷೆಯನ್ನು ಮಾನವ ದ್ವೇಷಿಯಾದ ಬೌದ್ಧಿಕ ಕೆಲಸಗಳಿಗೆ ಏಕೆ ಬಳಸುತ್ತಾರೆ? ಪಾಂಡಿತ್ಯವೆಂದು ಕರೆಯಲಾಗುವ ಸಂಗತಿಯು ಒಂದು ವಲಯದಲ್ಲಿ ಅಂತಃಕರಣ, ಪ್ರೀತಿ, ಇತರರ ಬಗ್ಗೆ ಸದ್ಭಾವನೆ ಮುಂತಾದ ಭಾವನೆಗಳಿಂದ ಸಂಪೂರ್ಣ ಪರಕೀಯವಾಗಿ, ಕ್ರೂರವಾದ ಅಭಿಪ್ರಾಯಗಳನ್ನು ಸಮರ್ಥಿಸುವ `ತರ್ಕದ ಟಗರ ಹೋರಟೆ’ ಯಾಕೆ ಆಗುತ್ತದೆ? ಬಹು ಸಂಖ್ಯಾತ ಜನರಿಗೆ ಮನುಷ್ಯರಾಗಿ ಬದುಕುವ ಅವಕಾಶಗಳೇ ಇಲ್ಲವಾಗುತ್ತಿರುವ ಬಡದೇಶದಲ್ಲಿ ಅತಿಶಯವಾದ ಸವಲತ್ತುಗಳನ್ನು ಪಡೆದಿರುವ ವಿಶ್ವವಿದ್ಯಾಲಯಗಳ ಬುದ್ಧಿಜೀವಿ ಹಾಗು ಸಂಶೋಧಕವರ್ಗವು ಈ ಜನರು ಆಳವಾಗಿ ನಂಬಿಕೊಂಡು ಬಂದಿರುವ ಸಮಾನತೆ, ನ್ಯಾಯ ಮುಂತಾದ ಮೌಲ್ಯಗಳನ್ನು ಉಡಾಫೆಯಿಂದ ತಿರಸ್ಕರಿಸುವ ದುಷ್ಟತನದ ಮೂಲವು ಎಲ್ಲಿದೆ? ನಿರ್ದಿಷ್ಟವಾಗಿ ಹೇಳುವುದಾದರೆ ಪಾಂಡಿತ್ಯ ಮತ್ತು ಬುದ್ಧಿಶಕ್ತಿಗಳು Evil ನ ಅತ್ಯಂತ ಆಳವಾದ ಕೆಡುಕಿನ ರೂಪಗಳೇಕೆ ಆಗುತ್ತವೆ?”
ದೇವನೂರರ ಬರಹದ ಕುರಿತು ನಡೆದ ಚರ್ಚೆಯ ಸುತ್ತ . . .
-ಡಾ. ಕಿರಣ್ ಗಾಜನೂರು
“ದೇವನೂರರ ಕುರಿತು ಅಪಾರ ಗೌರವ ಇಟ್ಟುಕೊಂಡೆ ಈ ಮಾತು ಹೇಳುತ್ತಿದ್ದೇನೆ ಅವರ ಲೇಖನದಲ್ಲಿ ಲಾಜಿಕ್ಕೆ ಇಲ್ಲ ಇನ್ನು ತಪ್ಪುಗಳನ್ನು ಹೇಗೆ ಗುರುತಿಸುವುದು ಈಗ ಒಬ್ಬರೂ ಒಂದು ಸಂಶೋಧನೆಯ ಮೂಲಕ ನಿಮಗೆ ಒಂದು ಪ್ರಶ್ನೆ/ವಾದ ಕೇಳುತ್ತಾರೆ ಎಂದು ಇಟ್ಟುಕೊಳ್ಳಿ ಅದಕ್ಕೆ ನೀವು ಬೌದ್ಧಿಕವಾಗಿ ಅಂಧರೆ ಆ ವ್ಯಕ್ತಿ ಯಾವ ಸಂಶೋಧಾನ ವಿಧಾನ ಬಳಸಿ ಯಾವ ಮಾಹಿತಿಯ ಆಧಾರದ ಮೇಲೆ ತನ್ನ ವಾದ ಮಂಡಿಸುತ್ತಿದ್ದಾನೆ ಅದರಲ್ಲಿರುವ ದೂಷಗಳೇನು ಅವನು ಬಳಸಿದ ವಿಧಾನ ಮತ್ತು ಪಡೆದ ಮಾಹಿತಿ ಹೇಗೆ ಆ ವಸ್ಥುವಿನ ಸರಿಯಾಗಿ ವಿವರಿಸುವಲ್ಲಿ ಎಡವಿದೆ ಎಂಬುದನ್ನು ಲಾಜಿಕಲಿ ಸಾಧಿಸಬೇಕಾಗುತ್ತದೆ. ಆದರೆ ದೆವನೂರರ ಬರಹದಲ್ಲಿ ಈ ಅಂಶವೇ ಇಲ್ಲ ಅವರೂ ಇದುವರೆಗೂ ನಂಬಿಕೊಂಡು ಬಂದ ಐಡಿಯಾಲಜಿಯನ್ನು ವಿವರಿಸಿದ್ದಾರೆ ಅಷ್ಟೆ ಈ ರೀತಿಯಾದರೆ ಯಾರೂ ಬೇಕಾದರೂ ಮಾತನಾಡಬಹುದು ಆದರೆ ಅದರಿಂದ ಎನೂ ಪ್ರಯೋಜನ? ಅದೂ ಅಲ್ಲದೆ ದೆವನೂರು ಮತ್ತು ಅವರ ಹಿಂಬಾಲಕರು ನಂಬಿದ ವಿಷಯಗಳೇ ಅಂತಿಮ ಅವರ ವಿವರಣೆಗೆ ವಿರುಧ್ಧದ ಸಂಶೋಧನೆ ಯಾರೂ ಮಾಡಬಾರದು ಮಾಡಿದರೆ ಅವರ ಮೇಲೆ ಕಣ್ಣಿಡಿ ವಿಚಾರಣೇ ಮಾಡಿ ಎಂಬಿತ್ಯಾದಿ ಮಾತನಾಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವ ವಿಷಯವು ಅಲ್ಲ ಒಂದೂ ಕಾಲದಲ್ಲಿ ಆರ್.ಎಸ್.ಎಸ್ ನವರನ್ನು ಯಾವ ಯಾವ ಕಾರಣಕ್ಕೆ ಇವರುಗಳು ವಿರೋಧಿಸಿದ್ದರೂ ಇವತ್ತು ಅವೇ ಲಕ್ಷಣಗಳನ್ನು ಇವರು ಅವಾಹಿಸಿಕೊಂಡು ಮಾತನಾಡುತ್ತಿದ್ದಾರೆ ಇತರರ ಸಂಶೋಧನೆ ಟೀಕಿಸುತ್ತಿದ್ದರೆ. ಅಂದರೆ ಯಾರೂ ಸಂಶೋಧನೆಯನ್ನೆ ಮಾಡಬಾರದು ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದೂ ಎಚ್ಚರಿಸುತ್ತಿದ್ದಾರೆ ಇನ್ನು ಮುಂದೆ ಹೋಗಿ ಜಿನ್ನಾ ನೀಡಿದಂತೆ ಡೈರೆಕ್ಟ್ ಆಕ್ಷನ್ ಗೆ ಕರೆನೀಡುತ್ತಿದ್ದಾರೆ ನನಗೆ ಆಶ್ಚರ್ಯವಾಗುವುದೇ ಇದಕ್ಕೆ ಯಾರೂ ಎನೇ ಸಂಶೋಧನೆ ಮಾಡಲಿ ನಾವು ಅವರೂ ಎತ್ತುವ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ ಆ ಮಟ್ಟದ ಸೈಂಧಾಂತಿಕ ಪಕ್ವತೆ ನಾವು ನಂಬಿದ ಸಿಂಧಾಂತಕ್ಕೆ ಇದೆ ಎಂದು ಆತ್ಮವಿಶ್ವಾಸದಿಂದ ನುಡಿಯುಬೇಕಾದ ಈ ಚಿಂತಕರೂ ಹೀಗೆ ವರ್ತಿಸುತ್ತಿರುವುದು ನಮ್ಮ ಸಂಶೋಧನಾ ಮಾದರಿಯ ವೈಪಲ್ಯ ತೋರಿಸುತ್ತದೆ” ಪೇಸ್ ಬುಕ್ ನಲ್ಲಿ ನಾನೂ ಪ್ರಕಟಿಸಿದ ಈ ಬರಹಕ್ಕೆ ಹಲವರು ಅನೇಕ ರೀತಿಯ ಪ್ರಶ್ನೆಗಳನ್ನು/ಟೀಕೆಗಳನ್ನು ಮಾಡಿದ್ದಾರೆ ಅವೆಲ್ಲವುಗಳನ್ನು ಒಂದೂ ಚರ್ಚೆಯ ಮಾದರಿಯಲ್ಲಿ ಕೆಳಗೆ ಬರೆದಿದ್ದೇನೆ ನೋಡಿ. . . .
ನಮ್ಮ ಸಮಾಜದಲ್ಲಿ ನಡೆಯುತ್ತಿರುವ ಮತ್ತು ನಡೆದಿರುವ ಶೋಷಣೆಗಳ ಕುರಿತು ಅವುಗಳ ನಿವಾರಣೆಯಗಳ ಕುರಿತು ಇಲ್ಲಿರುವ ಎಲ್ಲರ ಪ್ರಯತ್ನ ಮತ್ತು ಭಾವನೆ ಎಲ್ಲವೂ ತುಂಬಾ ಗೌರವಿಸುವ ವಿಚಾರಗಳೆ ಅಂದರೆ ನಮ್ಮೇಲ್ಲರ ಹಾನೆಸ್ಟ್ ಗುರಿ ಒಂದೇ ಅದು ನಮ್ಮ ಸಮಕಾಲಿನ ಸಮಾಜದ ಶೋಷಣೆಗಳನ್ನು ಹೊಗಲಾಡಿಸಬೇಕು.
‘ಕುಮಾರ’ ಮುಖ್ಯಮಂತ್ರಿ ಗಾದಿಗೆ! ‘ಮೋದಿ’ ಪ್ರಧಾನಿ ಹುದ್ದೆಗೆ!
- ಗೋಪಾಲಕೃಷ್ಣ
ಅಭಿವೃದ್ಧಿಯೇ ಮಾತನಾಡುವುದಾದರೆ; ‘ಕುಮಾರಣ್ಣ’ ಮುಖ್ಯಮಂತ್ರಿ ಗಾದಿಗೆ! ‘ಮೋದಿಜಿ’ ಪ್ರಧಾನಿ ಹುದ್ದೆಗೆ!
ಅರವತ್ತಾರು ವಸಂತಗಳ ಬಂಧಮುಕ್ತ ಬದುಕು.ಈ ನಡುವೆ ದೇಶ ಕಂಡದ್ದು 13 ಮಂದಿ ಪ್ರಧಾನಮಂತ್ರಿಗಳನ್ನು. ರಾಜ್ಯವನ್ನಾಳಿದ್ದು 21 ಮುಖ್ಯಮಂತ್ರಿಗಳು. ಇವರೆಲ್ಲರಲ್ಲಿಯೂ; ದೇಶದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ, ಪಿ.ವಿ.ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿಯವರನ್ನು ಮತ್ತೆ ಮತ್ತೆ ನೆನದರೆ, ರಾಜ್ಯದಲ್ಲಿ ದೇವರಾಜ ಅರಸು ಅವರ ಸಾಮಾಜಿಕ ಪರಿಕಲ್ಪನೆ, ರಾಮಕೃಷ್ಣ ಹೆಗಡೆ ಅವಧಿಯ ಜನಪರ ಕಾರ್ಯಕ್ರಮಗಳು, ಎಸ್.ಎಂ.ಕೃಷ್ಣ ಅವರ ಲಯ ತಪ್ಪದ ಆಡಳಿತ, ಹೆಚ್.ಡಿ.ಕುಮಾರಸ್ವಾಮಿಯವರ ಇಪ್ಪತ್ತೇ ತಿಂಗಳ ಆಡಳಿತವನ್ನು ಮಾತ್ರ ಇಂದಿಗೂ ಮೆಲುಕು ಹಾಕುವಂತಾಗಿದೆ.
ಭಾರತದ ಜನಸಂಖ್ಯೆ 121 ಕೋಟಿಯನ್ನು ದಾಟಿರಬಹುದು. ನಾವು ಆಯ್ಕೆ ಮಾಡುವ ಜನಪ್ರತಿನಿಧಿಗಳು ಸುಮಾರು 5400 ಮಂದಿಯಷ್ಟೇ. ಆದರೆ, ಇಷ್ಟು ಜನ ಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನರ ಆಶಯಗಳಿಗೆ ತಕ್ಕಂತೆ ನಡೆಯುವುದು ಅಪರೂಪ. ಅವರುಗಳ ನಿಷ್ಠೆಯೇನಿದ್ದರೂ ದೇಶವಾದರೆ ಪ್ರಧಾನಿಗೆ! ರಾಜ್ಯವಾದರೆ ಮುಖ್ಯಮಂತ್ರಿಗೆ ಮೀಸಲು ಎಂಬಂತಿರುತ್ತದೆ. ಸಂವಿಧಾನದ ಪ್ರಕಾರ ಮುಖ್ಯಮಂತ್ರಿ ಅಥವಾ ಪ್ರಧಾನಮಂತ್ರಿಯನ್ನು ಶಾಸಕರು, ಲೋಕಸಭಾ ಸದಸ್ಯರು ಆಯ್ಕೆ ಮಾಡಬೇಕು. ಆ ಪರಿಪಾಠ ಮುರಿದು ಬಿದ್ದು ಎಷ್ಟೋ ವರ್ಷಗಳು ಆಗಿವೆ. ಈಗೇನಿದ್ದರೂ ಚುನಾವಣಾ ಪೂರ್ವದಲ್ಲಿಯೇ ನಾಯಕನ ಆಯ್ಕೆ ಇಲ್ಲವೇ ಹೈಕಮಾಂಡ್ ಹೇಳಿದವರು ಅತ್ಯುನ್ನತ ಹುದ್ದೆಯಲ್ಲಿ ಕೂರುತ್ತಾರೆ.
ಸಂಶೋಧನೆ ಅಂದರೇನು? – ಒಂದು ಚರ್ಚೆ
“ವಚನ ಸಾಹಿತ್ಯ ಮತ್ತು ಜಾತಿ ವ್ಯವಸ್ಥೆ”ಯ ಚರ್ಚೆ ಶುರುವಾದಾಗ ಒಂದು ’ಅಕಾಡೆಮಿಕ್ ಚರ್ಚೆ’ಯ ನಿರೀಕ್ಷೆ ನಾಡಿನ ಸಂಶೋಧನಾ ವಿದ್ಯಾರ್ಥಿವಲಯದಲ್ಲಿತ್ತು.ಆದರೆ ಈ ಚರ್ಚೆ ಅಕಾಡೆಮಿಕ್ ಆಗುವುದಕ್ಕಿಂತಲೂ ಹೆಚ್ಚಾಗಿ ಪೊಲಿಟಿಕಲ್ ಚರ್ಚೆಯಾಗಿ ಮಾರ್ಪಟ್ಟಿದೆ.೨೧ ಸಾವಿರಕ್ಕೂ ಹೆಚ್ಚು ವಚನಗಳನ್ನು ಅಧ್ಯಯನ ಮಾಡಿದವರ ಜೊತೆ ೨೧ ವಚನಗಳನ್ನೂ ಸರಿಯಾಗಿ ಓದಿಕೊಳ್ಳದವರು ವಾದಕ್ಕಿಳಿಯುತಿದ್ದಾರೆ. ಗೂಗಲ್ ನಲ್ಲಿ ಸರ್ಚ್ ಮಾಡುವುದನ್ನೆ ’ರಿಸರ್ಚ್’ ಅಂದುಕೊಂಡಿರುವಂತಿದೆ ಕೆಲವರು. “ಸಂಶೋಧನೆ” ಅಂದರೇನು ಅನ್ನುವ ಕುತೂಅಲವನ್ನಿಟ್ಟುಕೊಂಡು ನಾನು ಸಿ.ಎಸ್.ಎಲ್.ಸಿ ತಂಡದವರ ಜೊತೆ ನಡೆಸಿದ ಮಾತುಕತೆಯಿದೆ ಇಲ್ಲಿದೆ ನೋಡಿ
ಸಾತ್ವಿಕ್ : ಸಂತೋಷ್ ಶೆಟ್ಟಿ, ಸಂಶೋಧನೆಗೆ ಹೈಪೋಥಿಸಿಸ್ ರಚಿಸಿಕೊಳ್ಳುವಾಗ ಜನರಿಗೆ ಬೇಕಾದ (ಜನಪ್ರಿಯ) ವಾದಗಳನ್ನು ಆರಿಸಿಕೊಳ್ಳಬೇಕೋ ಇಲ್ಲವೇ ಕಠಿಣವಾದರೂ ಸತ್ಯದ ಕಡೆ ಹೆಜ್ಜೆ ಹಾಕಬೇಕೋ? ಅಥವಾ ಇಂದಿನ ಸಂಶೋಧನೆಗಳು ಯಾವ ದಿಕ್ಕಿನಲ್ಲಿವೇ?
ಸಂತೋಷ್ ಶೆಟ್ಟಿ : ಸಾತ್ವಿಕ್ , ಜನರಿಗೆ ಬೇಕಾದ ಜನಪ್ರಿಯ ವಾದಗಳನ್ನು ಆಯ್ಕೆ ಮಾಡಿಕೊಂಡು ಸಂಶೋಧನೆ ಮಾಡಲು ಏನಿದೆ? ಈಗಾಗಲೆ ಪ್ರಚಲಿತದಲ್ಲಿರುವ ವಾದವನ್ನು ಪುಷ್ಠೀಗೊಳಿಸಬೇಕೆಂಬ ಐಡಿಯಾಲಜಿಯ ಬೆನ್ನು ಹತ್ತಿದರೆ ಅಂತಹ ವಿಷಯಗಳನ್ನು ಆಯ್ಕೆ ಮಾಡಬಹುದು, ಹಾಗೆ ಮಾಡುವ ಮೂಲಕ ಚಲಾವಣೆಯಲ್ಲಿರುವ ವಾದವೇ ಸತ್ಯವೆಂದು ಕೆಲವಾರು ಫ್ಯಾಕ್ಡ್ ನ್ನು ಸೇರಿಸಬಹುದು. ಹೀಗೆ ಮಾಡುವುದರಿಂದ ಯಾವ ಸಂಶೋಧನೆಯೂ ಆಗುವುದಿಲ್ಲ, ಏಕೆಂದರೆ ಮೊದಲೇ ಹೇಳಿದಂತೆ ಸಂಶೋಧನೆ ಮಾಡಿ ಕಂಡುಕೊಳ್ಳುವಂತದ್ದು ಅಲ್ಲಿ ಏನೂ ಇರುವುದಿಲ್ಲ.ಇನ್ನೊಂದು ಮಾರ್ಗವೆಂದರೆ ಅಧ್ಯಯನ ಮಾಡಲು ಮೊದಲು ಅಧ್ಯಯನದ ವಿಷಯಕ್ಕೆ ಸಂಬಂಧಿಸಿದ ಸಾಹಿತ್ಯವನ್ನು ಪರಿಶೀಲಿಸಿ ಅಲ್ಲಿಂದ ಸಮಸ್ಯೆಯನ್ನು ಎತ್ತಿಕೊಳ್ಳಬೇಕಾಗುತ್ತದೆ. ಜನರು ಏನನ್ನು ಒಪ್ಪುತ್ತಾರೆ ಏನನ್ನು ತಿರಸ್ಕರಿಸುತ್ತಾರೆ ಎಂಬುದಕ್ಕಿಂತ ಆ ವಿಷಯದ ಕುರಿತು ಏನೇನು ಅಧ್ಯಯನಗಾಳಗಿವೆ ಎಂಬುದನ್ನು ಗಮನಿಸಿ ಅದಕ್ಕಿಂತ ಮುಂದೆ ಹೋಗುವ ಕಾರ್ಯವನ್ನು ಸಂಶೋಧನೆ ಮಾಡಬೇಕಾಗುತ್ತದೆ. ಇನ್ನು ಈಗಿರುವ ಸಂಶೋಧನೆಯ ಕುರಿತು ನಾನು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ, ಆದರೆ ಸಂಶೋಧನೆ ಮಾಡದೆ ಮತ್ತು ಸಂಶೋಧನೆಯನ್ನು ಅರ್ಥವೂ ಮಾಡಿಕೊಳ್ಳದೆ ಹಾಗೂ ಚರ್ಚೆಯನ್ನೂ ಮಾಡದೆ ಪ್ರತಿಕ್ರಿಯಿಸುವವರು ಮಾತ್ರ ಹೆಚ್ಚಾಗಿದ್ದಾರೆ. ಅವರ ಬಹುತೇಕ ಪ್ರಶ್ನೆಗಳು ನಿಜವಾಗಿಯೂ ತಿಳಿದುಕೊಳ್ಳಲು ಇರುವ ಹಂಬಲವನ್ನು ಸೂಚಿಸದೆ ಅವರ ಅಸಮಾಧಾನವನ್ನು ಹೊರಹಾಕುವುದನ್ನು ಸೂಚಿಸುತ್ತದೆ…




