Skip to content

Archive for October 12th, 2011

12
Oct

ಬೆಂಗಳೂರು ಮಳೆಯಲ್ಲಿ…

- ರಾಕೇಶ್ ಶೆಟ್ಟಿ

(ನಿನ್ನೆ ಸಂಜೆಯಿಂದ ಎಡಬಿಡದೆ ಸುರಿದ ಮಳೆಯಲ್ಲಿ ನೆನೆಯುತ್ತ ಮತ್ತೆ ನೆನಪಾಗಿದ್ದು ’ಬೆಂಗಳೂರು ಮಳೆಯಲ್ಲಿ’ ಲೇಖನ.ನಿಲುಮೆಯ ಓದುಗರಿಗಾಗಿ ಈ ಲೇಖನ)

ಎಂದಿನಂತೆ ಊಟಕ್ಕೆ ಅಂತ ಮೆಸ್ ಕಡೆ ಹೋದ್ರೆ ಅವ್ರು ಬಾಗಿಲು ಹಾಕಿದ್ರು.ಸಮಯ 10 ಆಗಿತ್ತು.ಅಲ್ಲೇ ಹತ್ತಿರದಲ್ಲೇ ಇರೋ ಇನ್ನೊಂದು ಹೋಟೆಲ್ ಕಡೆ ಹೋಗೋಣ ಬಾರೋ ಅಂದೇ ಶ್ರೀಕಾಂತಂಗೆ.ಹೇಯ್ ಅಲ್ ಬೇಡ್ವೋ ರಾಮಯ್ಯ ಕಾಲೇಜ್ ಹತ್ರ ಇರೋ ಪಂಜಾಬಿ ಮೆಸ್ಗೆ ಹೋಗೋಣ ಅಂದ.ಸರಿ ಅಂತ ಹೊರಟ್ವು.ಬಹುಶ ಅರ್ಧ ದಾರಿ ಹೋಗಿದ್ವು.ಹೊಟ್ಟೆ ಚುರು ಚುರು ಅನ್ನೋಕೆ ಶುರು ಆಗಿತ್ತು.ಶುರುವಾಯ್ತು ಭರ್ಜರಿ ಗಾಳಿ,ಮಳೆ.ಅಲ್ಲೇ ಒಂದು ಕಡೆ ಹೋಗಿ ನಿಂತು ಮಳೆ ಯಾವಾಗ ನಿಲ್ಲುತ್ತೋ ಅಂತ ಕಾಯ್ತಾ ಇದ್ವಿ.೧ ಗಂಟೆ ಕಳೆದರು ಮಳೆ ನಿಲ್ಲೋ ಹಾಗೆ ಕಾಣಲಿಲ್ಲ. ‘ಲೇ,ಇಲ್ಲೇ ನಿಂತ್ರೆ ಊಟ ಸಿಗೋಲ್ಲ,ಬಾ ಮಳೆಲಿ ಹೋಗಿ ಊಟ ಇದ್ರೆ ಪಾರ್ಸೆಲ್ ತಗೊಂಡು ಹೋಗೋಣ’ ಅಂದೇ.ಸರಿ ಅಂತೇಳಿ ನಾವ್ ಅಲ್ಲಿ ಹೋಗೋ ಅಷ್ಟೊತ್ತಿಗೆ ಅವ್ರು ಬಾಗಿಲು ಹಾಕಿದ್ರು. ಆಗಲೇ ೧೧.೨೦ ಆಗಿತ್ತು ಎಲ್ಲರು ಬಾಗಿಲು ಹಾಕಿಯಾಗಿತ್ತು.ಊಟ ಸಿಗ್ಲಿಲ್ಲ,ಸರಿ ವಾಪಸ್ ರೂಮ್ಗೆ ಹೋಗೋಣ ಅಂತ ಹೊರಟ್ರೆ,ರಸ್ತೆ ಅನ್ನೋದು ನದಿಯ ರೂಪ ಪಡೆದಿತ್ತು.’ಬೆಂಗಳೂರಿನ ರಸ್ತೆಗಳಲ್ಲಿ ಅದೆಲೆಲ್ಲಿ ಓಪನ್ ಮ್ಯಾನ್ ಹೋಲ್ಗಳಿವೆಯೋ ಮೊದ್ಲೇ ಗೊತ್ತಾಗೊಲ್ಲ.ಈಗ ಮಳೆ ನೀರಿಗೆ ರಸ್ತೇನೆ ಕಾಣ್ತಾ ಇಲ್ಲ,ಹುಶಾರೋ ಲೋ, ಎಲ್ಲಾದರು ಗುಂಡಿಗೆ ಬಿದ್ಬಿಟ್ಟಿಯಾ,ಕಡಿಮೆ ಅಂದ್ರು ೭೦ ಕೆ.ಜಿ ಇದ್ದೀಯ ನಾನ್ ಅಂತು ಹೋದ್ರೆ ಹೋದೆ ಅಂತ ಬಿಟ್ಬಿಡ್ತೀನಿ’ ಅಂದೇ ಶ್ರೀಕಾಂತಂಗೆ. ನೀನ್ ಬಿದ್ರೆ ನಾನು ಹಂಗೆ ಮಾಡ್ತೀನಿ ಮಗನೆ ಅಂದ.ಕಡೆಗೆ ಈ ಟೆನ್ಶನ್ ಬೇಡ ಮಧ್ಯ ರಸ್ತೆಲೆ ನಡೆಯೋಣ ಅಂತೇಳಿ ನಿರ್ಧರಿಸಿ ಹೋಗ್ತಾ ಇದ್ರೆ ಕಿಟಕಿಯಿಂದ ಇಣುಕಿ ನೋಡೋ ಜನ ಇಂತ ಕೆಟ್ಟ ಮಳೆಯಲ್ಲಿ ಅದು ಅಂತ ರಸ್ತೆಯಲ್ಲಿ ಹೋಗೋ ನಮ್ಮನ್ನ ಮೆಂಟಲ್ಗಳು ಅನ್ಕೊಂಡಿದ್ರೋ ಏನೋ :)

Read more »

Follow

Get every new post delivered to your Inbox.

Join 1,256 other followers