Skip to content

Archive for November 23rd, 2011

23
Nov

‘ಮಾಡಿದ್ದುಣ್ಣೋ ಮಹಾರಾಯ’- ಒಂದು ವಿಶ್ಲೇಷಣೆ

- ಗೋವಿಂದ ರಾವ್ ವಿ ಅಡಮನೆ

‘ಮಾಡಿದ್ದುಣ್ಣೋ ಮಹಾರಾಯ’, ‘ಬಿತ್ತಿದಂತೆ ಬೆಳೆ’ ಈ ಜಾಣ್ನುಡಿಗಳು ಪುನರ್ಜನ್ಮದ ಪರಿಕಲ್ಪನೆಯ ಹುಟ್ಟಿಗೆ ಕಾರಣವಾದ ಕರ್ಮಸಿದ್ಧಾಂತದ ತಿರುಳನ್ನು ಬಿಂಬಿಸುತ್ತವೆ. ಪಟ್ಟಭದ್ರ ಹಿತಾಸಕ್ತಿಗಳು ಈ ಉಕ್ತಿಗಳನ್ನು ತಮ್ಮ ಹಿತಾಸಕ್ತಿಗಳನ್ನು ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಅರ್ಥೈಸಿ ಮೂಢನಂಬಿಕೆಗಳನ್ನೂ ಕರುಡು ಸಂಪ್ರದಾಯಗಳನ್ನೂ ಹುಟ್ಟುಹಾಕಲು ಬಳಸಿಕೊಂಡಿವೆ, ಯಶಸ್ವಿಯೂ ಆಗಿವೆ.

ಪುನರ್ಜನ್ಮಪರ ವಾದಿಗಳು ಒದಗಿಸಿರುವ ಉದಾಹರಣೆಗಳನ್ನು ಆಧರಿಸಿ ಈ ಉಕ್ತಿಗಳ ಇಂಗಿತಾರ್ಥವನ್ನು ನಾನು ವಿವರಿಸುವ ಪರಿ ಇಂತಿದೆ: ಭೌತಪ್ರಪಂಚದ ಆಗುಹೋಗುಗಳನ್ನು ನಿಯಂತ್ರಿಸಲು ಕಾರಕ-ಪರಿಣಾಮ ಆಧಾರಿತ ನೈಸರ್ಗಿಕ ನಿಯಮಗಳು ಇರುವಂತೆಯೇ ಮಾನವನ ಜೀವನವನ್ನು ನಿಯಂತ್ರಿಸಲೂ ಕಾರಕ-ಪರಿಣಾಮ ಆಧಾರಿತ ನೈಸರ್ಗಿಕ ನಿಯಮಗಳು ಇವೆ. ಈ ನಿಯಮಗಳನ್ನೇ ನಾವು ನೈತಿಕ ನಿಯಮಗಳು ಎಂದು ಉಲ್ಲೇಖಿಸುತ್ತೇವೆ. ಇವು ಸಾರ್ವಕಾಲಿಕ, ಸಾರ್ವದೇಶಿಕ ಮತ್ತು ಸಾರ್ವತ್ರಿಕ. ಭೌತಪ್ರಪಂಚದ ನೈಸರ್ಗಿಕ ನಿಯಮಗಳು ಹೇಗೆ ಅನುಲ್ಲಂಘನೀಯವೋ ಅಂತೆಯೇ ಇವೂ ಕೂಡ. ಎಲ್ಲ ನೈಸರ್ಗಿಕ ನಿಯಮಗಳೂ ಅನಾದಿ ಹಾಗೂ ಅನಂತ್ಯ, ಯಾರೋ ಮಾಡಿದ ನಿಯಮಗಳು ಇವಲ್ಲವಾದ್ದರಿಂದ. ಭೌತಪ್ರಪಂಚದಲ್ಲಿ ಲಾಗೂ ಆಗುವ ನಿಯಮಗಳೇ ಆಧುನಿಕ ವಿಜ್ಞಾನಗಳ ಅಧ್ಯಯನ ವಸ್ತು. ನೈಸರ್ಗಿಕ ನೈತಿಕ ನಿಯಮಗಳನ್ನು ಅಧ್ಯಯಿಸಲು ಆಧುನಿಕ ವಿಜ್ಞಾನಗಳಿಗೆ ಸಾಧ್ಯವಾಗಿಲ್ಲ. ವಿವಿಧ ಮತಗಳ ಆಧಾರ ಗ್ರಂಥಗಳಲ್ಲಿ ಈ ನೈತಿಕ ನಿಯಮಗಳನ್ನು ಪಟ್ಟಿ ಮಾಡುವ ಪ್ರಯತ್ನಗಳು ಆಗಿವೆಯಾದರೂ ಸರ್ವಮಾನ್ಯವಾದ ಪಟ್ಟಿಮಾಡಲು ಸಾಧ್ಯವಾಗಿಲ್ಲದಿರುವುದು,  ಪಟ್ಟಿ ಮಾಡಿರುವ ನಿಯಮಗಳ ಅನುಸರಣೆ ಅಥವ ಉಲ್ಲಂಘನೆಯ ಪರಿಣಾಮಗಳ ಕುರಿತಾಗಿ ಇರುವ ಭಿನ್ನಾಭಿಪ್ರಾಯಗಳು ಅನೇಕ ಹಿಂಸಾಕೃತ್ಯಗಳ ಹುಟ್ಟಿಗೆ ಕಾರಣವಾಯಿತು.  ಭೌತನಿಯಮಗಳಂತೆಯೇ ಇವೂ ಅನುಲ್ಲಂಘನೀಯವಾದವುಗಳು ಆಗಿದ್ದರೂ ನಿಯಮೋಲ್ಲಂಘನೆಯ ಪರಿಣಾಮಗಳಿಂದ ತಪ್ಪಿಸಿಕೊಳ್ಳಲು ಸಾಧ್ಯ ಎಂದು ಸಾರಿದ ‘ಪುರೋಹಿತ ವರ್ಗ’ (ಇವರು ಬೇರೆ ಬೇರೆ ಹೆಸರುಗಳಲ್ಲಿ ಎಲ್ಲ ಮತಗಳಲ್ಲಿಯೂ ಇದ್ದಾರೆ) ಅದಕ್ಕಾಗಿ ಅನೇಕ ಕಂದಾಚಾರಗಳನ್ನೂ ಮೂಢನಂಬಿಕೆಗಳನ್ನೂ ಹುಟ್ಟುಹಾಕಿತು, ಬೆಳೆಯಿಸಿತು, ಪೋಷಿಸಿತು. ಮುಖಸ್ತುತಿಗೆ ಮರುಳಾಗಿ ಅಥವ ಮಾಡಿದ ಅನೈತಿಕ ಕೃತ್ಯಕ್ಕೆ ಅನುಗುಣವಾಗಿ ಸಂಕೀರ್ಣತೆ ಮತ್ತು ವೆಚ್ಚ ಹೆಚ್ಚುವ ‘ಪೂಜೆ, ಹೋಮ, ಹರಕೆ, ನೈವೇದ್ಯ, ದಾನ’ ಇವೇ ಮೊದಲಾದ ‘ಪ್ರಾಯಶ್ಚಿತ್ತ’ಗಳನ್ನು ಮಾಡಿದರೆ  ಎಲ್ಲ ರೀತಿಯ ಅನೈತಿಕತೆಯನ್ನು ಮನ್ನಿಸುವ ‘ದೇವರ’ ಪರಿಕಲ್ಪನೆಯನ್ನು ಸ್ವಲಾಭಕ್ಕಾಗಿ ಸೃಷ್ಟಿಸಿ ಪೋಷಿಸಿದ್ದೂ ಇದೇ ವರ್ಗ. ಪುನರ್ಜನ್ಮ ಇರುವುದೇ ನಿಜವಾದರೆ, ಇಂಥ ‘ದೇವರ’ ಪರಿಕಲ್ಪನೆಯನ್ನು ಒಪ್ಪಿಕೊಳ್ಳುವುದಕ್ಕೆ ಬದಲಾಗಿ ಕರ್ಮಸಿದ್ಧಾಂತ ಸೂಚಿಸುವ ನೈಸರ್ಗಿಕ ನೈತಿಕ ನಿಯಮಾನುಸಾರ ಬಾಳ್ವೆ ನಡೆಸುವುದು ಉತ್ತಮ.

ಪುನರ್ಜನ್ಮಪರ ವಾದಿಗಳ ಒದಗಿಸುವ ಸಾಕ್ಷ್ಯಾಧಾರ ಎಂದು ನೀಡುತ್ತಿರುವ ಉದಾಹರಣೆಗಳನ್ನು ಕರ್ಮಸಿದ್ಧಾಂತದ ನೆಲೆಗಟ್ಟಿನಲ್ಲಿ ವಿಶ್ಲೇಷಿಸಿದರೆ ಮತಾತೀತವೂ ಕುಲಾತೀತವೂ ಲಿಂಗಾತೀತವೂ ಆದ ಕೆಲವು ನಿಯಮಗಳನ್ನು ಅನುಮಾನಿಸಬಹುದು (ಇನ್ ಫರ್). ಈ ರೀತಿ ಅನುಮಾನಿಸಿದ ಪ್ರಧಾನ ನಿಯಮಗಳು ಇಂತಿವೆ:

Read more »

Follow

Get every new post delivered to your Inbox.

Join 1,257 other followers