ಮನದ ಮಾತು
– ಗೀತಾ ಹೆಗ್ಡೆ
ಹಲವು ಮಜಲುಗಳನ್ನೊಳಗೊಂಡ ಕೆಲವರ ಬರಹ ಓದುವಾಗ ನಮಗರಿವಿಲ್ಲದಂತೆ ಇದ್ದಕ್ಕಿದ್ದಂತೆ ನಾನೂ ಏನಾದರೂ ಬರೆಯಬೇಕು ಅನ್ನುವ ತುಡಿತ ಗರಿಗೆದರುವುದು. ಇದು ನನಗೊಬ್ಬಳಿಗೇ ಹೀಗೆ ಅನಿಸುತ್ತಾ? ಅಥವಾ ಎಲ್ಲರ ಕಥೆ ಹೀಗೆಯೇ ಇರಬಹುದಾ? ಅನ್ನುವ ಜಿಜ್ಞಾಸೆ ನನ್ನಲ್ಲಿ. ಸದಾ ಕಾಡುವ ಪ್ರಶ್ನೆ. ಆಗೆಲ್ಲ ನನಗೆ ಈ ಬಗ್ಗೆ ಬೇರೆಯವರನ್ನೂ ಕೇಳಬೇಕೆನ್ನುವ ಹಂಬಲ ಹುಟ್ಟಿಕೊಂಡರೂ, ಛೆ! ನನ್ನ ಮಾತು ಕೇಳಿ ನಕ್ಕಾರು. ಇವಳಿಗೇನು ಸ್ವಂತ ಬುದ್ಧಿ ಇಲ್ವಾ? ಏನಾದರೂ ಬರಿಬೇಕೆಂದರೆ ಇನ್ನೊಬ್ಬರ ಬರಹ ಓದಿನೇ ಹುಮ್ಮಸ್ಸು ಹುಟ್ಟಬೇಕಾ? ಬರಹ ಅನ್ನೋದು ಯಾರಿಂದಲೂ ಹೇಳಿಸಿಕೊಂಡು ಬರುವುದಲ್ಲಾ. ಸ್ವತಃ ಅವರಲ್ಲಿ ಹುಟ್ಟಬೇಕು. ಜನ್ಮಜಾತವಾಗಿ ದೇವರು ಕೊಟ್ಟ ವರ ಎಂದು ನಂಬಿರುವ ನನಗೆ ಇದೊಂದು ಬಿಡಿಸಲಾಗದ ಒಗಟು. ಮತ್ತಷ್ಟು ಓದು
ಅನುಭವ, ಅನುಭಾವ, ಅನುಭೂತಿ ಇತ್ಯಾದಿ…
– ನಾಗೇಶ ಮೈಸೂರು
ಬದುಕಿನ ಎಷ್ಟೊ ಒಡನಾಟಗಳಲ್ಲಿ ಕೆಲವಷ್ಟೆ ಆಳಕ್ಕಿಳಿದು ಬೇರೂರಿ ನಿಲ್ಲುವಂತಹವು. ಮಿಕ್ಕವೆಲ್ಲಿ ಕೆಲವು ಹಾಗೆ ಬಂದು ಹೀಗೆ ಹೋಗುವ ಗುಂಪಿನದಾದರೆ ಬಾಕಿಯೆಲ್ಲ ತಾವರೆಯೆಲೆಯ ಮೇಲಿನ ಅಂಟಿಯೂ ಅಂಟದ ನಿರ್ಲಿಪ್ತ ಕೊಂಡಿಗಳು. ಹಿಂದೆಲ್ಲ ಈ ತರಹೆವಾರಿ ಬಂಧಗಳೆಲ್ಲವನ್ನು ಅದರದರ ಸ್ಥಾಯಿ / ಚಲನ ಶಕ್ತಿಗನುಗುಣವಾಗಿ ಒಗ್ಗೂಡಿಸಿಡಲು ಮುಂಜಿ, ನಾಮಕರಣ, ಮದುವೆಗಳಂತಹ ಖಾಸಗಿ ಸಮಾರಂಭಗಳಿಂದ ಹಿಡಿದು ಸಾರ್ವಜನಿಕ ಸಭೆ, ಕಾರ್ಯಕ್ರಮ, ಚಟುವಟಿಕೆಗಳು ನೆರವಾಗುತ್ತಿದ್ದವು. ಒಂದಲ್ಲ ಒಂದು ಕಡೆ ಭೇಟಿಯಾಗುವ, ಕೊಂಡಿಯ ಸಂಪರ್ಕವನ್ನುಳಿಸಿಕೊಳ್ಳುವ ಸಾಧ್ಯತೆಯಿರುತ್ತಿತ್ತು.
ಆದರೀಗ ಅಷ್ಟೊಂದು ಹೆಣಗುವ ಅವಶ್ಯಕತೆಯಿಲ್ಲದೆಯೆ ಫೇಸ್ಬುಕ್, ಟ್ವಿಟ್ಟರ್, ವಾಟ್ಸಪ್ ಗಳಂತಹ ತಂತ್ರಜ್ಞಾನ ಪ್ರೇರಿತ ಸಾಮಾಜಿಕ ಸಾಧನ ಸಲಕರಣೆಗಳನ್ನು ಬಳಸಿ ಸಂಪರ್ಕ ಕೊಂಡಿಯನ್ನು ನಿತ್ಯವೂ ಜೀವಂತವಿರಿಸಿಕೊಳ್ಳುವ ಸಾಧ್ಯತೆ. ಕಾಲೇಜಿನ ದಿನಗಳ ಒಡನಾಟದ ನಂತರ ಎಲ್ಲಿ, ಹೇಗಿರುವರೆಂದೆ ಗೊತ್ತಿರದೆ ಇದ್ದ ಅನೇಕ ಮಿತ್ರರು ಈ ಮೂಲಕ ಮತ್ತೆ ನಂಟಿಗೆ ಅಂಟಿಕೊಳ್ಳಲು ಸಾಧ್ಯವಾಗಿಸುತ್ತಿರುವುದೂ ಈ ತಂತಜ್ಞಾನ ಪರಿಕರಗಳೆ. ಹೀಗಾಗಿ ಖಾಸಗಿಯಾಗಲಿ, ಸಾರ್ವತ್ರಿಕವಾಗಲಿ ‘ಕಮ್ಯೂನಿಕೇಷನ್’ ಗೆ ಮೊದಲಿಗಿಂತ ಹೆಚ್ಚು ಸುಲಭ, ಸರಳ ಮಾರ್ಗೋಪಾಯಗಳು ಈಗ ಸದಾ ಬೆರಳ ತುದಿಯಲ್ಲಿ ಸಿದ್ದ. ಅದರಲ್ಲು ಮೊಬೈಲು ಜಗದಲ್ಲೆ ಎಲ್ಲಾ ನಿಭಾಯಿಸುವ ಸಾಧ್ಯತೆಯಿರುವುದರಿಂದ ನೆಟ್ವರ್ಕ್ / ಅಂತರ್ಜಾಲಕ್ಕೆ ಸಂಪರ್ಕವೊಂದಿದ್ದರೆ ಸಾಕು ಎಲ್ಲೆಂದರಲ್ಲಿ ಪರಿಸ್ಥಿತಿಗೆ ಸ್ಪಂದಿಸಬಹುದು ಕನಿಷ್ಠ ಪದಗಳಲ್ಲಾದರು.
ಬಸವ ಚಳುವಳಿಯನ್ನು ಕಾಡುತ್ತಿರುವ ಸಾಹಿತ್ಯ ಲೋಕದ ಬು(ಲ)ದ್ಧಿ ಜೀವಿಗಳು !
– ವಿಶ್ವಾರಾಧ್ಯ ಸತ್ಯಂಪೇಟೆ, ಶಹಾಪುರ
ಇಷ್ಟು ದಿನಗಳವರೆಗೆ ಧಾರ್ಮಿಕ ಲೋಕದ ಗುಂಗಾಡುಗಳು ಬಸವಣ್ಣನರನ್ನು ಕಾಡುತ್ತಿದ್ದವು. ಅವರು ರಚಿಸಿದ ವಚನಗಳಿಗೆ ತದ್ವಿರುದ್ಧವಾಗಿ ತಾವು ಬದುಕಿದ್ದಲ್ಲದೆ ತಮ್ಮ ಭಕ್ತರ ಹಿಂಡನ್ನು ತಮ್ಮ ಹಿಂದೆ ಕಟ್ಟಿಕೊಂಡು ಬಸವಾದಿ ಶರಣರಿಗೆ ಸಾಕಷ್ಟು ಅಪಚಾರ ಮಾಡಿದ್ದರು. ಇದೀಗ ಸಾಹಿತ್ಯ ಲೋಕದ ಗುಂಗಾಡುಗಳೂ ತಾವೇನು ಕಡಿಮೆ ಇಲ್ಲ ಎಂದು ಬಸವಣ್ಣನವರನ್ನು ಹಾಗೂ ಅವರು ಬರೆದ ವಚನ ಸಾಹಿತ್ಯವನ್ನು ಪರಾಮರ್ಶಿಸುವ ಎಗ್ಗತನ ತೋರುತ್ತ, ಇಲ್ಲ ಸಲ್ಲದ ಕುಯುಕ್ತಿಗಳನ್ನು ನಡೆಸಿದ್ದಾರೆ. ಹಲವಾರು ವರ್ಷಗಳಿಂದ ಬಸವಣ್ಣನವರ ಕುರಿತು ಪರಾಮರ್ಶಿಸುವ ಬುದ್ದಿವಂತಿಕೆಯನ್ನು ತೋರುತ್ತಿರುವ ಬುದ್ಧಿಜೀವಿ ವೇಷದಾರಿ ಬರಹಗಾರರು ಸಮಯ ಸಿಕ್ಕಾಗಲೆಲ್ಲ ಬಸವಣ್ಣನವರ ಮೇಲೆ ಕೆಸರನ್ನು ಎರಚುತ್ತ ತಾವು ದೊಡ್ಡವರಾಗಬೇಕೆಂಬ ಹುನ್ನಾರ ನಡೆಸಿದ್ದು ಎಲ್ಲರಿಗೂ ಗೊತ್ತಿರುವಸಂಗತಿಯೆ ಆಗಿದೆ.
ಹಿಂದೊಮ್ಮೆ ಗುಲ್ಬರ್ಗಾದ ಕಪಟರಾಳ ಕೃಷ್ಣರಾವ್ ಎಂಬ ಸಂಶೋಧಕನೋರ್ವ ಅನುಭವ ಮಂಟಪವೇ ಇಲ್ಲ ಎಂದು ಸಂಶೋಧಿಸಿ ಹೇಳಿದ್ದ. ಆಗ ಲಿಂಗಾಯತ ಧರ್ಮದವರೆಂದು ಸೋಗುಹಾಕಿರುವ ಸೋಗಲಾಡಿ ಗುರು- ಜಗದ್ಗುರುಗಳೆಲ್ಲ ತಮ್ಮ ತುಟಿಗಳನ್ನು ಹೊಲಿದುಕೊಂಡು ತೆಪ್ಪಗಿದ್ದರು. ಅರೆಬರೆ ಜ್ಞಾನದ ಲಿಂಗವಂತ ಸಮಾಜದ ಜನಗಳು ‘ನಮಗೂ ಬಸವಣ್ಣನವರಿಗೂ ಯಾವ ಬಾದರಾಯಣ ಸಂಬಂಧ ?’ ಎಂದುಕೊಂಡು ಕಪಟರಾಳರ ಕಪಟತನವನ್ನು ಪ್ರಶ್ನಿಸಲು ಹೋಗಲಿಲ್ಲ. ಈಗೀಗ ಬುದ್ದಿಜೀವಿಗಳೆಂದು ತಮ್ಮಷ್ಟಕ್ಕೆ ತಾವೇ ಕರೆದುಕೊಂಡಿರುವ ಕೆಲವು ಸೋಕಾಲ್ಡ ಜನಗಳು ಬಸವಣ್ಣನವರ ಘನ ವ್ಯಕ್ತಿತ್ವವನ್ನು ಸಂಶೋಧಿಸುತ್ತಿದ್ದೇವೆ ಎಂಬ ನೆವದಲ್ಲಿ ಸಾಕಷ್ಟು ಘಾಸಿಯನ್ನುಂಟುಮಾಡಿದ್ದಾರೆ. ‘ಮಹಾಚೈತ್ರ’ ಕೃತಿಯ ಮೂಲಕ ಎಚ್.ಎಸ್. ಶಿವಪ್ರಕಾಶ, ‘ಆನುದೇವ ಹೊರಗಣದವನು’ ಪುಸ್ತಕದ ಮೂಲಕ ಬಂಜಗೇರಿ ಜಯಪ್ರಕಾಶ, ‘ಧರ್ಮಕಾರಣ’ದ ಮೂಲಕ ಪಿ.ವಿ.ನಾರಾಯಣ ಮುಂತಾದವರು ತಮ್ಮ ಮೂಗಿನ ನೇರಕ್ಕೆ ವಿಚಾರಗಳನ್ನು ಪ್ರಸ್ತಾಪಿಸುವ ಮೂಲಕ ಈಗಾಗಲೇ ಮೂತಿಗೆ ಇಕ್ಕಿಸಿಕೊಂಡಿದ್ದಾರೆ.
ಆದರೂ ಇತ್ತೀಚೆಗೆ ಬಾಲಗಂಗಾಧರ ಮತ್ತು ಡಂಕಿನ್ ಝಳಕಿ ಎಂಬ ಮಹಾಶಯರುಗಳು ವಚನಕಾರರು ಜಾತಿ ವಿರೋಧಿಗಳಾಗಿದ್ದರು ಎಂಬ ಅಭಿಪ್ರಾಯವು ಆಧುನಿಕ ಸಂದರ್ಭದಲ್ಲಿ ವೀರಶೈವರು ವಸಾಹತುಶಾಹಿ ಪಾಶ್ಚಾತ್ಯ ಚಿಂತಕರ ಪ್ರಭಾವದಿಂದ ಕಟ್ಟಿಕೊಂಡ ಪ್ರಮೇಯವಾಗಿದೆ ಎಂದು ವಾದಿಸುತ್ತಾರೆ. ಜೊತೆಗೆ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡುವುದು ವಚನಕಾರರ ಮೂಲಭೂತ ಗುರಿಯಾಗಿತ್ತು ಎನ್ನುವುದು ಅಸಂಬದ್ಧ ತರ್ಕವಾಗಿದೆ ಎಂದೂ ಜೊತೆಗೆ ಅದು ಬ್ರಾಹ್ಮಣ ವಿರೋಧಿ ಚಳುವಳಿಯ ಅಭಿವ್ಯಕ್ತಿಗಳೆಂದು ಹೇಳಲು ವಚನಗಳಲ್ಲಿಯೇ ಆಧಾರವಿಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ಕೆಲವು ಜನ ಸೋಕಾಲ್ಡ ಬು(ಲ)ದ್ದಿ ಜೀವಿಗಳು ವಚನಗಳ ಬಗ್ಗೆ ಹೊಸ ಚಿಂತನೆ ಮತ್ತು ಚರ್ಚೆಗಳಿಗೆ ಅನುವುಮಾಡಿಕೊಟ್ಟದ್ದಕ್ಕೆ ಧನ್ಯವಾದಗಳನ್ನೂ ಅರ್ಪಿಸಿದ್ದು ಅವರ ಎಬಡತನಕ್ಕೆ ಸಾಕ್ಷಿಯಾಗಿದೆಯೆಂದರೂ ತಪ್ಪಾಗುವುದಿಲ್ಲ.
ದೇಹಾಂತರದ ಪಯಣ
– ರಾಜ್ ಕುಮಾರ್
ನನ್ನ ಬಾಲ್ಯದ ಒಂದು ಘಟನೆ. ನಮ್ಮ ಊರಿನ ದೊಡ್ಡ ಮನೆಯಲ್ಲಿ ಬಾವಿಯೊಂದನ್ನು ತೊಡುವ ಬಗ್ಗೆ ಹಿರಿಯರು ನಿರ್ಧರಿಸಿಬಿಟ್ಟರು. ಇನ್ನೇನು ನೀರು ತೋರಿಸುವುದಕ್ಕೊಸ್ಕರ ಒಬ್ಬರು ಬಂದೇ ಬಿಟ್ಟು ಕೈಯಲ್ಲಿ ಬೆತ್ತವೊಂದನ್ನು ಹಿಡಿದುಕೊಂಡು ಕೈ ಅತ್ತಿತ್ತ ತಿರುಗಿಸುತ್ತಾ ಗುಡ್ಡೆ ಎಲ್ಲ ತಿರುಗಿ ತಿರುಗಿ ಪಾದೆ ಕಲ್ಲಿನ ಮೇಲೆ ನಿಂತು ಅಲ್ಲೇ ಗುರುತು ಮಾಡಿಬಿಡುವಂತೆ ಹೇಳಿದರು. ಕರ್ರಗಿನ ಪಾದೆ ಆ ಬೇಸಿಗೆ ಕಾಲದ ಬಿಸಿಲಿಗೆ ಕಾದು ಬರಿ ಕಾಲಲ್ಲಿ ನಿಲ್ಲುವ ಹಾಗಿರಲಿಲ್ಲ. ಸುಡುತ್ತಿತ್ತು. ನಮಗೆಲ್ಲ ಅಶ್ಚರ್ಯ. ಇಲ್ಲಿ ಈ ಕಲ್ಲಿನಲ್ಲಿ ನೀರು ಸಿಗುವುದೇ? ಮಣ್ಣಿನ ಅಂಶ ಲವಲೇಶವೂ ಇಲ್ಲದ ಈ ಬರಡು ಜಾಗದಲ್ಲಿ ನೀರು ಸಿಗಬಹುದೇ? ಆಶ್ಚರ್ಯ. ನಮಗೆಲ್ಲಿ ಅರಿವಿತ್ತು. ಪ್ರಕೃತಿ ಇಂತಹ ಹಲವು ವಿಸ್ಮಯ ನಿಗೂಢತೆಗಳನ್ನು ಬಸಿರಲ್ಲಿರಿಸಿದೆ ಎಂದು.
ಬಾವಿ ತೋಡುವ ಕೆಲಸ ಆರಂಭವಾಯಿತು. ಅಲ್ಲಿ ನೆಲವನ್ನು ಸಾಕಷ್ಟು ಸಜ್ಜುಗೊಳಿಸಿ ವೃತ್ತಾಕಾರದಲ್ಲಿ ಆಕಾರವನ್ನು ಒಂದೆರಡು ಆಳುಗಳು ಅಗೆಯುವುದಕ್ಕೆ ಆರಂಭಿಸಿದರು.ನಾಲ್ಕು ಸಲ ಗುದ್ದಲಿ ಎತ್ತಿ ಅಗೆದಾಗ ಸಣ್ಣ ಚಿಪ್ಪು ಹಾರಿ ಬರುತ್ತಿತ್ತು. ಇಂತಹ ಕಠಿಣ ಸ್ಥಳದಲ್ಲಿ ನೀರು ಸಿಗಬಹುದೇ ನಮಗೆಲ್ಲ ಆಶ್ಚರ್ಯವಾಗುತ್ತಿತ್ತು. ಪ್ರಕೃತಿಯ ವಿಸ್ಮಯಕ್ಕೆ ಕುತೂಹಲವಾಗುತ್ತಿತ್ತು. ದಿನವಿಡೀ ಅಗೆದರೂ ಅರ್ಧ ಅಡಿಗಿಂತ ಹೆಚ್ಚು ಅಗೆಯಲು ಸಾಧ್ಯವಾಗದ ಸ್ಥಳದಲ್ಲಿ ನೀರಿದೆ ! ಎಂತಹ ವಿಸ್ಮಯ. ದಿನ ಕಳೆದಂತೆ ಕಲ್ಲಿನಂಶ ಕಡಿಮೆಯಾಗಿ ಕಲ್ಲು ಮೆತ್ತಗಾಗುವ ಭಾಸವಾಗುತ್ತಿತ್ತು.. ಕಲ್ಲು ಕರಗಿ ಮಣ್ಣಾದಂತೆ ನಿಧಾನವಾಗಿ ಭೂಗರ್ಭದೊಳಗೆ ನೀರಿನ ಗಮ್ಯದೆಡೆಗಿನ ಪಯಣ ಸಾಗುವಂತಿತ್ತು. ಆರಂಭದಲ್ಲಿ ಇರದಿದ್ದ ವಿಶ್ವಾಸ, ವಿಸ್ಮಯ ವಾಸ್ತವದಲ್ಲಿ ಸತ್ಯವಾಗುವ ಭಾವನೆಯನ್ನು ಮೂಡಿಸಿತು. ಕಲ್ಲು ಕರಗಿ ಮಣ್ಣಾಗಿ ಮುಂದೊಂದು ದಿನ ಅಂತರಂಗ ಗಂಗೆಯ ದರ್ಶನವಾದಾಗ ಸಂತಸಕ್ಕೆ ಪಾರವಿರಲಿಲ್ಲ
ಕಿತ್ತಳೆ ಹಣ್ಣಿನ ಋಣ!?
– ನಿತ್ಯಾನಂದ.ಎಸ್.ಬಿ
ಆಗಲೇ ನಾಲ್ಕು ಘಂಟೆ ಆಗಿಬಿಟ್ಟಿತ್ತು. ಇನ್ನು ಐದು-ಹತ್ತು ನಿಮಿಷದಲ್ಲಿ ರೈಲು, ನಿಲ್ದಾಣಕ್ಕೆ ಬರುವುದರಲ್ಲಿತ್ತು. ಕಾಲೇಜಿನಲ್ಲಿ ಕಬಡ್ಡಿ ತಂಡಕ್ಕೆ ಸೇರಿದ್ದ ಭರತ ಅಭ್ಯಾಸ ಮುಗಿಸಿ ಬರುವುದು ತಡವಾಗಿಬಿಟ್ಟಿತ್ತು. ರೈಲು ಸಿಗದಿದ್ದರೆ ಬಸ್ಸಿನಲ್ಲಿ ಹೋಗಬೇಕು. ಜೇಬಿನಲ್ಲಿ ನಯಾಪೈಸೆ ದುಡ್ಡಿಲ್ಲ. “ದೇವ್ರೇ ರೈಲು ಮಿಸ್ಸು ಮಾಡಿಸಬೇಡಪ್ಪಾ” ಅಂತ ಮನಸ್ಸಿನಲ್ಲಿಯೇ ಪ್ರಾರ್ಥಿಸುತ್ತಾ, ಒಂದೇ ಉಸಿರಿಗೆ ರೈಲು ನಿಲ್ದಾಣದ ಕಡೆಗೆ ಓಡುತ್ತಿದ್ದ. ಮದ್ಯಾಹ್ನ ಊಟ ಮಾಡದಿದ್ದುದರಿಂದ ಹೊಟ್ಟೆ ಬೇರೆ ಚುರುಗುಡುತ್ತಿತ್ತು. ರೈಲು ಸಿಕ್ಕಿಬಿಟ್ಟರೆ ಸಾಕೆಂದು ಶರವೇಗದಲ್ಲಿ ನಿಲ್ದಾಣದೆಡೆಗೆ ಧಾವಿಸುತ್ತಿದ್ದ.
ಭರತ ಹಳ್ಳಿಯ ಹುಡುಗ. ತೀರಾ ಬಡವನಲ್ಲದಿದ್ದರೂ ಮನೆಯ ಆರ್ಥಿಕ ಪರಿಸ್ಥಿತಿ ಅಂಥಾ ಉತ್ತಮವಾಗೇನೂ ಇರಲಿಲ್ಲ. ಮಗಳ ಮದುವೆಗಾಗಿ ಮಾಡಿದ್ದ ಸಾಲ ತೀರಿಸಲು ತಂದೆ ಹಗಲು ರಾತ್ರಿ ದುಡಿಯುತ್ತಿದ್ದರೆ, ಅಮ್ಮ ಮನೆಯ ಖರ್ಚನ್ನು ಸರಿಹೊಂದಿಸಲು ಬಟ್ಟೆ ಹೊಲಿಯುತ್ತಿದ್ದಳು. ತಂದೆ ತಾಯಿಯ ಕಷ್ಟವನ್ನು ಕಣ್ಣಾರೆ ಕಂಡಿದ್ದ ಭರತ, ಹೈಸ್ಕೂಲು ಮುಗಿದ ನಂತರ ಸ್ವಂತ ಖರ್ಚಿನಲ್ಲೇ ಓದಲು ತೀರ್ಮಾನಿಸಿದ್ದ. ಅದಕ್ಕಾಗಿಯೇ ರಜೆಯಲ್ಲಿ ಪಟ್ಟಣಕ್ಕೆ ಹೋಗಿ ಪೇಪರ್ ಹಾಕಿ, ಹಾಲು ಮಾರಿ, ಗಂಧದಕಡ್ಡಿ ಫ್ಯಾಕ್ಟರಿಗೆ ಹೋಗಿ ಒಂದಷ್ಟು ಹಣವನ್ನು ಸಂಪಾದಿಸಿದ್ದ. ಅದೇ ಹಣದಲ್ಲಿ ಕಾಲೇಜಿನ ಫೀಜು ಕಟ್ಟಿ, ಪುಸ್ತಕ, ಪೆನ್ನು, ಬ್ಯಾಗನ್ನು ಕೊಂಡುಕೊಂಡಿದ್ದ. ಒಂದು ರೈಲು ಪಾಸನ್ನೂ ಮಾಡಿಸಿಕೊಂಡಿದ್ದ. ಹೀಗಾಗಿ ಸದ್ಯ ಭರತನ ಹತ್ತಿರ ಒಂದು ಬಿಡಿಗಾಸೂ ಉಳಿದಿರಲಿಲ್ಲ. ಬೆಳಿಗ್ಗೆ ಊಟವನ್ನು ಡಬ್ಬಿಗೆ ಹಾಕಿಸಿಕೊಳ್ಳುವುದಕ್ಕೆ ತಡವಾಗುತ್ತದೆಂದು ಹಾಗೆಯೇ ಬಂದಿದ್ದರಿಂದ ಮದ್ಯಾಹ್ನದ ಊಟ ಖೋತಾ ಆಗಿತ್ತು.
“ಅಬ್ಭಾ.. ರೈಲು ಇನ್ನೂ ಬಂದಿಲ್ಲ”. ಎಂದು ನಿಟ್ಟುಸಿರು ಬಿಟ್ಟ ಭರತ, ದೂರದಿಂದಲೇ ಕಂಡ ಸ್ನೇಹಿತರ ಬಣ್ಣಬಣ್ಣದ ಬ್ಯಾಗುಗಳನ್ನು ನೋಡಿ ರೈಲು ಇನ್ನೂ ಬಂದಿಲ್ಲವೆಂಬುದನ್ನು ಖಚಿತಪಡಿಸಿಕೊಂಡ. ಬಹಳ ಆಯಾಸವಾಗಿದ್ದುದರಿಂದ ಓಡುವುದನ್ನು ನಿಲ್ಲಿಸಿ ನಡೆಯಲು ಪ್ರಾರಂಭಿಸಿದ.ಭರತ ಒಳ್ಳೆಯ ಕಬಡ್ಡಿ ಆಟಗಾರ. ಮುಂದಿನ ವಾರ ಚಿತ್ರದುರ್ಗದಲ್ಲಿ ನಡೆಯಲಿದ್ದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾಗಿದ್ದ. ಅದಕ್ಕಾಗಿಯೇ ದಿನನಿತ್ಯ ಕಠಿಣ ತಯಾರಿ ನಡೆದಿತ್ತು. ಜೊತೆಗೆ ಚಿತ್ರದುರ್ಗಕ್ಕೆ ಹೋಗಿಬರಲು ಬೇಕಾದ 340 ರೂಪಾಯಿಗಳನ್ನು ಒಟ್ಟು ಮಾಡಬೇಕಾಗಿತ್ತು. ಹೇಗೋ ಹೊಂದಿಸಿದರಾಯ್ತು ಎಂದುಕೊಂಡೇ ನಿಲ್ದಾಣ ಸೇರಿದ.
ಭರತನ ಬರುವಿಕೆಯನ್ನೇ ಕಾಯುತ್ತಾ ನಿಂತಿದ್ದ ಪ್ರಿಯಮಿತ್ರ ರಾಜೇಶ, ಭರತ ಹತ್ತಿರವಾಗುತ್ತಿದ್ದಂತೆ ಕೇಳಿದ. “ಏನೋ ಭರತ. ಇಷ್ಟು ಹೊತ್ತು ಮಾಡಿಬಿಟ್ಟೆ. ಕಬಡ್ಡಿ ಪ್ರಾಕ್ಟೀಸ್ ಮಾಡ್ತಿದ್ದಾ..?
ಭರತ ಹೂಂ ಎಂಬಂತೆ ತಲೆ ಆಡಿಸಿದ.
ಮತ್ತಷ್ಟು ಓದು
ಅಂದು ರಾತ್ರಿ
– ಕಾಮನಬಿಲ್ಲು
ಅಂದು ಸಿಕ್ಕ ಪಟ್ಟೆ ಕೆಲಸ ಏನೋ ಒಂದು ಸ್ವಲ್ಪ ಅಂದ್ರೆ ಒಂದು ೧೫ ನಿಮಿಷ ಅಷ್ಟೇ ರೀ ತಡ ಆಯಿತು ನಾನು ಎಂದಿನಂತೆ ಎಂಟಕ್ಕೆ ಹೊರಡುವಾವಳು ಅಂದು ಸಿಕ್ಕೆ ಸಿಕ್ಕುತ್ತೆ ಬಸ್ ಅಂದು ಕೊಂಡವಳೇ ಹೊರಟೆ ..ಆಫೀಸ್ ನಿಂದ ಬಸ್ ಸ್ಟಾಪ್ ಸುಮಾರು ೫ ೧೦ನಿಮಿಷ ನಡೆದರೆ ಸಾಕು ಅಂದು ತಡ ಆಗಿರೋದರಿಂದ ಸ್ವಲ್ಪ ಬೇಗ ಬಂದೆ ..ಬಂದವಳೇ ಆ ಕಡೆ ಈ ಕಡೆ ನೋಡಿದೆ ಬಸ್ ಕಾಣಲಿಲ್ಲ ಸರಿ ಎಲ್ಲಿ ಹೋಗುತ್ತೆ ಇನ್ನು ಸಾಕಷ್ಟು ಟೈಮ್ ಇದೆಯಲ್ಲ ..ಬರುತ್ತೆ ಅಂತ ಅಲ್ಲೇ ಕುಳಿತೆ..
ನೋಡ್ತೀನಿ ಗಡಿಯಾರದ ಮುಳ್ಳುಗಳು ಎಂಟು ಗಂಟೆ ನಲವತ್ತು ನಿಮಿಷ ತೋರುಸ್ತ ಇದೆ …ನಾನು ತಕ್ಷಣ ಎದ್ದು ನಿಂತು ಮತ್ತೆ ಯಾವುದಾದರು ಬಸ್ ಬರುತ್ತಾ ಅಂತ ನೋಡ್ತಾ ನಿಂತೇ ..ಆಗ ಭಯ ಅನ್ನೋದು ಕೊಂಚ ಹತ್ತಿರ ಬಂತು ನಿಂತ ಜಾಗದಲ್ಲೇ ಹೊರಡಲು ಶುರು ಮಾಡಿದೆ ಮನಸ್ಸಲ್ಲಿ ಅಯ್ಯೋ ಇನ್ನೊಂದು ಬಸ್ ಅತ್ತಾ ಬೇಕಲ್ಲ ಇಲ್ಲಿ ತಡ ವಾದರೆ ಅಲ್ಲಿ ಬಸ್ ಸಿಕ್ಕುತ್ತಾ ಅನ್ನೋ ಚಿಂತೆ ಕಾಡಿತ್ತು ..ಮನಸ್ಸಿನಲ್ಲೇ ಎಲ್ಲ ದೇವರನ್ನು ಕರೆಯುತ್ತಾ ಇದ್ದೆ…
ಅಷ್ಟರಲ್ಲಿ ಬಂತು ಅಲ್ಲಿಗೆ ಬಸ್ ಒಂದು ಸ್ವಲ್ಪ ಸಮಾದಾನ ಸರಿ ಬೇಗ ಹೊರಟರೆ ಸಾಕು ಎಂದು ಬಸ್ ಏರಿದೆ ..ಆಗ ನನ್ನ ಗಡಿಯಾರದಲ್ಲಿ ಸಮಯ ಒಂಬತ್ತು ಗಂಟೆ ನಾನು ನವರಂಗ್ ಹೋಗೋ ಅಷ್ಟರಲ್ಲಿ ಸರಿಯಾಗಿ ಒಂಬತ್ತು ಇಪ್ಪತ್ತು ಕೊನೆಗೂ ನವರಂಗ್ ಗೆ ಬಂದೆ.. ಕೊಂಚ ಭಯ ನನ್ನಿಂದ ದೂರ ಸರಿದಿತ್ತು ಆದರೆ ಅಲ್ಲೇ ಅದರ ಹತ್ತು ಪಟ್ಟು ಭಯ ನನ್ನಲ್ಲಿ ಕಾಡೋಕೆ ಶುರು ಮಾಡಿತ್ತು ಏಕೆ ಅಂದ್ರೆ ಆ ಬಸ್ ಸ್ಟಾಪ್ ನಲ್ಲಿ ವಿಜಯನಗರಕ್ಕೆ ಹೋಗೋ ಬಸ್ ಬಂದೆ ಇರಲಿಲ್ಲ.. ಬಂದೆ ಬರುತ್ತೆ ಎಂಬ ನಂಬಿಕೆ ಧೈರ್ಯ ನನ್ನ ಅಲ್ಲಿ ಇದ್ದಿದ್ದು ಸತ್ಯ ಅದೇನೋ ಅಂತಾರಲ್ಲ ತುಂಬಾ ಆದರೆ ಅಮೃತನು ವಿಷ ಆಗುತ್ತೆ ಅಂತ ಅದೇ ನನಗು ಆಗಿದ್ದು ..
ಒಂದು ರುಪಾಯಿ ಚಿಲ್ರೆ ತಗೋಬೇಕ???
– ಸೂರ್ಯ ಅವಿ
“ನನಗು ನಿನಗು ಕಣ್ಣಲ್ಲೆ ಪರಿಚಯ, ಸನಿಹ ಸುಳಿವ ಮನದಾಸೆ ಅತಿಶಯ, ಏನೋ ಆಗಿದೆ ನನಗಂತು ಸಂಶಯ” ಅರಮನೆ ಚಿತ್ರದ ಈ song ಅಲ್ಲಿ ಹೀರೋ ಜಾಗದಲಿ ನಾನಿದೆ, ಇನ್ ಏನು ನಟಿ ರೋಮ ಅವರಿಗೆ ಐ ಲವ್ ಯು ಚಿನ್ನ ಎಂದು ಹೇಳಬೇಕು!! ಅದೇ ಸಮಯಕ್ಕೆ ಸರಿಯಾಗಿ ಅಲಾರಾಂ ಕಿರುಚತೊಡಗಿತು. ಸಮಯ ಆಗಲೇ ಮುಂಜಾನೆ 4.30 !! ಮೈಸೂರಿಗೆ ಯಾವುದೊ ಕೆಲಸದ ವಿಚಾರವಾಗಿ ಬೇಗ ಹೊರಡಬೇಕಿತ್ತು, ಛೆ.. ಎರಡು ನಿಮಿಷ ಇದಿದ್ರೆ ಚೆನಾಗಿತ್ತು ಅನ್ಕೊತ, ನಿದ್ದೆ ಮಂಪರಲಿ ದಿನನಿತ್ಯದ ಕ್ರಿಯೆ ಮುಗಿಸಿ ,ಗಡಿಬಿಡಿಯಲಿ ಯಾವುದೊ ಎರಡು ಪುಸ್ತಕ, ಕ್ಯಾಮೆರಾ ಮತ್ತು ಕ್ಯಾಮೆರಾ ಸ್ಟ್ಯಾಂಡ್ ಹೆಗಲಿಗೆ ಸಿಗಿಸಿಕೊಂಡು ಹೊರಡುವುದಕ್ಕೆ ಸಿದ್ದನಾದೆ.
ತಕ್ಷಣಕ್ಕೆ ಹೊರಡುವುದು ಹೇಗೆ ಎಂಬ ದೊಡ್ಡ ಪ್ರಶ್ನೆ ನನ್ನ ಮುಂದೆ? ಒಂದು ಕ್ಷಣ ಗಾಬರಿಗೊಂಡೆ ಸಮಯ ಇನ್ನು ಮುಂಜಾನೆ 5.೦೦ ಗಂಟೆ, ಈ ಸಮಯಕ್ಕೆ ಯಾವ BMTC ಬಸ್ ಸಿಗುವುದಿಲ್ಲ, ಗಾಡಿಯಲ್ಲಿ ಹೋದರೆ ಅದನ್ನು ಎಲ್ಲಿ ನಿಲಿಸುವುದು? ಸರಿ ಅಪ್ಪನನು ನಿದ್ರೆಯಿಂದ ಎಚ್ಹರಿಸಿ nayandalli ಗೆ ಡ್ರಾಪ್ ಮಾಡಿಸಿಕೊಂಡೆ. ಮಗನಿಗೆ ‘ಕ್ಷೇಮವಾಗಿ ಹೋಗಿ ಬಾ’ ಎಂದು ಹೇಳದೆ ಗಾಡಿ ವಾಪಾಸ್ ತಿರುಗಿಸಿ ಗುರ್ರ್…. ಎಂದು ಮನೆ ಕಡೆ ಹೊರಟರು. ಆ ಸಮಯದಲ್ಲೂ ಸುಮಾರು ಜನ ಬಸ್ ಗಾಗಿ ಕಾಯುತ್ತ ಕುಳಿತಿದರು,ಒಬ್ಬೊಬ್ರು ಒಂದೊಂದು ಬಂಗಿಯಲ್ಲಿ ನಿಂತಿದರು, ಒಬ್ಬ ಆಕಾಶ ನೋಡುತ ಬೀಡಿ ಸೇದುತ್ತಿದ, ಚಿಕ್ಕ ಮಗುವೊಂದು ತನ್ನ ಅಪ್ಪನ ಕಾಲನು ತಬ್ಬಿ ನಿಂತು, ಆ ಮುಗ್ದ ಕಣ್ಣುಗಳಿಂದ ಆಗೊಂದು ಹೀಗೊಂದು ಬರುವ ಗಾಡಿಯನು ದಿಟ್ಟಿಸಿ ನೋಡುತ್ತಿತ್ತು. ಇದನೆಲ್ಲ ಗಮನಿಸುತ್ತಿದ್ದ ಹಾಗೆ ಬಸ್ ಬಂತ್ತು ನೋಡಿ!
ಅವನು ಕುತ್ತಿಗೆಗೆ ಚಾಕು ಇಟ್ಟ, ದೇಹ ಹೆಣವಾಗಿತ್ತು :ಆಫ್ರೀಕಾದ ಕ್ಯಾಮರೂನ್ ಲೂಟಿ ಪ್ರಸಂಗ !
-ರವಿ ಮೂರ್ನಾಡು
ಅಲ್ಲೆಲ್ಲೋ ಕೊಲೆಯಾದ ವ್ಯಕ್ತಿಯ ಬಂಧುಗಳು ನ್ಯಾಯಕ್ಕಾಗಿ ಗೋಗರೆಯುತ್ತಿದ್ದರು. ಪತ್ರಿಕಾ ಕಚೇರಿಯಲ್ಲಿ ಕುಳಿತು ಅದು ಅರಿವಿಗೆ ಬಂದಿರಲಿಲ್ಲ. ಪುಸ್ತಕವೊಂದಕ್ಕೆ ಆಸ್ಪತ್ರೆಯ ಶವಾಗಾರದಲ್ಲಿ ಮಲಗಿದ ಹೆಣದ ಟಿಪ್ಪಣಿ ಮಾಡುವಾಗಲೂ ಅದು ಗೊತ್ತಿರಲಿಲ್ಲ. ನನ್ನ ಕುತ್ತಿಗೆಗೆ ಚಾಕು ಇಟ್ಟಾಗ ನಾನೇ ಹೆಣವಾಗಿದ್ದೆ. ಆಫ್ರೀಕಾದ ಕ್ಯಾಮರೂನಿನಲ್ಲಿ ಲೂಟಿಗಾರರು ಸುತ್ತುವರಿದು ವಾಚು-ಮೊಬೈಲು-ಹಣಕ್ಕಾಗಿ ತಡಕಾಡಿ ಮುಗಿಸುವವರೆಗೂ ಜೀವ ಅವರ ಕೈಯಲ್ಲೇ ಇತ್ತು. ಸತ್ತ ದೇಹ ನನ್ನಲ್ಲಿತ್ತು. ಕತ್ತಿನಿಂದ ಚಾಕು ತೆಗೆದದ್ದೇ ತಡ, ಸತ್ತವನು ಎದ್ದು ಕುಳಿತಿದ್ದೆ. ..!
ಇಲ್ಲಿನ ಡ್ವಾಲಾ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2007 ರಲ್ಲಿ ಕಾಲಿಟ್ಟು ಪಾಸ್ಪೋರ್ಟಿಗೆ ಮುದ್ರೆಯೊತ್ತಿ ಲಗ್ಗೇಜು ವಿಲೇವಾರಿಗೆ ಬರುವಾಗಲೇ ಈರ್ವರು ಹಿಂದೆಯೇ ಬಂದರು. “ ನಾನು ಕಸ್ಟಂ ಅಧಿಕಾರಿ, ನಿಮ್ಮ ಬ್ಯಾಗ್ ಚೆಕ್ ಮಾಡಬೇಕು, ಸ್ವಲ್ಪ ಈ ಕಡೆ ಬನ್ನಿ” ಅಂದರು. ಅರೆ..! ಅಧಿಕಾರಿಯಾಗಿದ್ದರೆ ಮರೆಗೆ ಕರೆಯುವ ಆಲೋಚನೆ ಏನು ಅಂತ ಯೋಚಿಸಿದ್ದೆ. ಇಲ್ಲಿನ ಐದು ಸಾವಿರ ಕ್ಯಾಮರೂನ್ ಫ್ರಾಂಕ್ ಕೊಟ್ಟರೆ ತಕರಾರಿಲ್ಲ ಅಂದರು. ಅಲ್ಲಿಯೇ ನಮ್ಮ ಕಂಪೆನಿಯ ವಾರೀಸುದಾರರು ಮಧ್ಯೆ ಬಂದಿದ್ದರಿಂದ ಆ ಪೀಡನೆಯಿಂದ ಪಾರಾದೆ. ಅಮಾನುಷ ಕೃತ್ಯಗಳ ಹೆಣಗಳ ವಾಸನೆ ನನ್ನ ಮೂಗಿಗೆ ಆಗಲೇ ಬಡಿದಿದೆ. ಹಣ ಕೊಟ್ಟರೆ ಕಾನೂನುಗಳು ಇಲ್ಲಿ ನಮ್ಮ ಕೈಗೆ ಬರುತ್ತವೆ. ಹಾಗಂತ ಹಣಕ್ಕೆ ಬಾಯ್ಬಿಟ್ಟ ನಡೆದಾಡುವ ಹೆಣಗಳೇ ಇಲ್ಲಿನ ಮನುಷ್ಯರು. ಭಾರತದಲ್ಲಿ ಇಂತಹದ್ದು ಬೇಕಾದಷ್ಟು ನಡೆಯುತ್ತವೆ. ಅದನ್ನು ಪ್ರಶ್ನಿಸುವ ಜನರಿದ್ದಾರೆ ಅನ್ನುವ ಸಮಾಧಾನ. ಇಲ್ಲಿ ಕೇಳುವವರು, ಕೊಡುವವರು ಎಲ್ಲರೂ ಕಳ್ಳರೇ ಅಂದಾಗ ಸತ್ಯಕ್ಕೂ ಹಲ್ಲು ಕಿರಿಯಲು ನಾಚಿಕೆ…!
ಅಮ್ಮ ಮಾಡಿದ ಕೇಕು
– ಅಮಿತ ರವಿಕಿರಣ
ಜಗತ್ತಿಗೆಲ್ಲ ಜನೆವರಿ ೧ ಹೊಸ ವರ್ಷದ ಆರಂಭ ಆದ್ರೆ..ನನಗೆ ಮಾತ್ರ ಜನೆವರಿ ೩ ಹೊಸ ವರ್ಷ ಅದ್ಯಾಕೆ ಅನ್ನೋ ಪ್ರಶ್ನೆ ಹುಟ್ಟೋ ಮೊದಲೇ ಉತ್ತರ ಹೇಳೋ ಕಾತರ ನನಗೆ…ಈ ದಿನವೇ ನನಗೆ ಜಗತ್ತಿನ ಅತ್ಯುನ್ನತ ಹುದ್ದೆ ಸಿಕ್ಕಿದ್ದು,ಹೊಸ ಬದುಕಿಗೆ ಹೊಸ ಜೀವನ ಶೈಲಿಗೆ ,ಹೊಸ ಪದವಿಗೆ ನನ್ನ ಪರಿಚಯ ಆದದ್ದು..ನಾ ಅಮ್ಮ ಎಂಬ ಟೈಟಲ್ ಪಡೆದಿದ್ದು…ಬದುಕಿನ ಪ್ರತಿ ಬದಲಾವಣೆಯನ್ನು ಮನಸ್ಪೂರ್ತಿ ಸ್ವಾಗತಿಸಿ ನೋವನ್ನು ಕೂಡ ಒಂದು ಖುಷಿಯಿಂದ ಅನುಭವಿಸುವ ನನಗೆ ಇದು ಅವರ್ಣನೀಯ ಅನುಭವ.ಆಸ್ಪತ್ರೆಗೆ ದಾಖಲಾಗಿ,ಹೊಟ್ಟೆನೋವ ಭರದಲ್ಲಿ ನನ್ನ ತಲೆಯಲ್ಲಿ ಅಚ್ಚಾಗಿದ್ದ ಅಷ್ಟು ಹಾಡುಗಳನ್ನು ಹಾಡಿ ಬರಿದು ಮಾಡಿ ಸಂಕಟದಲ್ಲೂ ಸಂತಸ ವನ್ನು ತುಂಬಿ ಕೊಟ್ಟ ರಾತ್ರಿಯದು…ಮುಂಜಾನೆ ಮೊದಲ ಪ್ರಹರಕ್ಕೆ ಪ್ರಥಮ್ ನನ್ನ ಪಕ್ಕ ದಲ್ಲಿ .ಹಾಯಾಗಿ ನಿದ್ರಿಸುತ್ತಿದ್ದ. ಇದೆಲ್ಲ ಮೊನ್ನೆ ಮೊನ್ನೆಯಂತಿದೆ ಅದಾಗಲೇ ಪ್ರಥಮನಿಗೆ ೫ ತುಂಬಿತು .ಕಳೆದ ನಾಲ್ಕು ವರ್ಷದ ಜನುಮದಿನದ ಆಚರಣೆಯನ್ನು ನಮಗಿಷ್ಟ ಬಂದಂತೆ ಆಚರಿಸಿದ್ದು ಆಯ್ತು. ಇಗ ಅವನು ತನ್ನ ಅನಿಸಿಕೆ ಇಚ್ಹೆ ವ್ಯಕ್ತ ಪಡಿಸಲು ಶುರು ಮಾಡಿದಾನೆ ಅದಕ್ಕೆ ಅವನನ್ನೇ ಕೇಳಿದೆ ಹೇಗೆ ಆಚರಿಸೋಣ ನಿನ್ನ ಬರ್ತ್ ಡೇ???ಯಾರನ್ನ ಕರಿಬೇಕು ??ನಿನಗೇನು ಗಿಫ್ಟ್ ಬೇಕು??
ಬೆಂಗಳೂರು ಮಳೆಯಲ್ಲಿ…
– ರಾಕೇಶ್ ಶೆಟ್ಟಿ
(ನಿನ್ನೆ ಸಂಜೆಯಿಂದ ಎಡಬಿಡದೆ ಸುರಿದ ಮಳೆಯಲ್ಲಿ ನೆನೆಯುತ್ತ ಮತ್ತೆ ನೆನಪಾಗಿದ್ದು ’ಬೆಂಗಳೂರು ಮಳೆಯಲ್ಲಿ’ ಲೇಖನ.ನಿಲುಮೆಯ ಓದುಗರಿಗಾಗಿ ಈ ಲೇಖನ)
ಎಂದಿನಂತೆ ಊಟಕ್ಕೆ ಅಂತ ಮೆಸ್ ಕಡೆ ಹೋದ್ರೆ ಅವ್ರು ಬಾಗಿಲು ಹಾಕಿದ್ರು.ಸಮಯ 10 ಆಗಿತ್ತು.ಅಲ್ಲೇ ಹತ್ತಿರದಲ್ಲೇ ಇರೋ ಇನ್ನೊಂದು ಹೋಟೆಲ್ ಕಡೆ ಹೋಗೋಣ ಬಾರೋ ಅಂದೇ ಶ್ರೀಕಾಂತಂಗೆ.ಹೇಯ್ ಅಲ್ ಬೇಡ್ವೋ ರಾಮಯ್ಯ ಕಾಲೇಜ್ ಹತ್ರ ಇರೋ ಪಂಜಾಬಿ ಮೆಸ್ಗೆ ಹೋಗೋಣ ಅಂದ.ಸರಿ ಅಂತ ಹೊರಟ್ವು.ಬಹುಶ ಅರ್ಧ ದಾರಿ ಹೋಗಿದ್ವು.ಹೊಟ್ಟೆ ಚುರು ಚುರು ಅನ್ನೋಕೆ ಶುರು ಆಗಿತ್ತು.ಶುರುವಾಯ್ತು ಭರ್ಜರಿ ಗಾಳಿ,ಮಳೆ.ಅಲ್ಲೇ ಒಂದು ಕಡೆ ಹೋಗಿ ನಿಂತು ಮಳೆ ಯಾವಾಗ ನಿಲ್ಲುತ್ತೋ ಅಂತ ಕಾಯ್ತಾ ಇದ್ವಿ.೧ ಗಂಟೆ ಕಳೆದರು ಮಳೆ ನಿಲ್ಲೋ ಹಾಗೆ ಕಾಣಲಿಲ್ಲ. ‘ಲೇ,ಇಲ್ಲೇ ನಿಂತ್ರೆ ಊಟ ಸಿಗೋಲ್ಲ,ಬಾ ಮಳೆಲಿ ಹೋಗಿ ಊಟ ಇದ್ರೆ ಪಾರ್ಸೆಲ್ ತಗೊಂಡು ಹೋಗೋಣ’ ಅಂದೇ.ಸರಿ ಅಂತೇಳಿ ನಾವ್ ಅಲ್ಲಿ ಹೋಗೋ ಅಷ್ಟೊತ್ತಿಗೆ ಅವ್ರು ಬಾಗಿಲು ಹಾಕಿದ್ರು. ಆಗಲೇ ೧೧.೨೦ ಆಗಿತ್ತು ಎಲ್ಲರು ಬಾಗಿಲು ಹಾಕಿಯಾಗಿತ್ತು.ಊಟ ಸಿಗ್ಲಿಲ್ಲ,ಸರಿ ವಾಪಸ್ ರೂಮ್ಗೆ ಹೋಗೋಣ ಅಂತ ಹೊರಟ್ರೆ,ರಸ್ತೆ ಅನ್ನೋದು ನದಿಯ ರೂಪ ಪಡೆದಿತ್ತು.’ಬೆಂಗಳೂರಿನ ರಸ್ತೆಗಳಲ್ಲಿ ಅದೆಲೆಲ್ಲಿ ಓಪನ್ ಮ್ಯಾನ್ ಹೋಲ್ಗಳಿವೆಯೋ ಮೊದ್ಲೇ ಗೊತ್ತಾಗೊಲ್ಲ.ಈಗ ಮಳೆ ನೀರಿಗೆ ರಸ್ತೇನೆ ಕಾಣ್ತಾ ಇಲ್ಲ,ಹುಶಾರೋ ಲೋ, ಎಲ್ಲಾದರು ಗುಂಡಿಗೆ ಬಿದ್ಬಿಟ್ಟಿಯಾ,ಕಡಿಮೆ ಅಂದ್ರು ೭೦ ಕೆ.ಜಿ ಇದ್ದೀಯ ನಾನ್ ಅಂತು ಹೋದ್ರೆ ಹೋದೆ ಅಂತ ಬಿಟ್ಬಿಡ್ತೀನಿ’ ಅಂದೇ ಶ್ರೀಕಾಂತಂಗೆ. ನೀನ್ ಬಿದ್ರೆ ನಾನು ಹಂಗೆ ಮಾಡ್ತೀನಿ ಮಗನೆ ಅಂದ.ಕಡೆಗೆ ಈ ಟೆನ್ಶನ್ ಬೇಡ ಮಧ್ಯ ರಸ್ತೆಲೆ ನಡೆಯೋಣ ಅಂತೇಳಿ ನಿರ್ಧರಿಸಿ ಹೋಗ್ತಾ ಇದ್ರೆ ಕಿಟಕಿಯಿಂದ ಇಣುಕಿ ನೋಡೋ ಜನ ಇಂತ ಕೆಟ್ಟ ಮಳೆಯಲ್ಲಿ ಅದು ಅಂತ ರಸ್ತೆಯಲ್ಲಿ ಹೋಗೋ ನಮ್ಮನ್ನ ಮೆಂಟಲ್ಗಳು ಅನ್ಕೊಂಡಿದ್ರೋ ಏನೋ 🙂