ವಿಷಯದ ವಿವರಗಳಿಗೆ ದಾಟಿರಿ

Posts tagged ‘ವ್ಯಥೆ’

6
ನವೆಂ

ವೇಶ್ಯಾವೃತ್ತಿ: ಮಹಿಳೆಯರ ರಕ್ಷಣೆಗೆ ಮಹಿಳೆಯರ ಅತ್ಯಾಚಾರವೇ?

– ತುರುವೇಕೆರೆ ಪ್ರಸಾದ್

ಮಹಿಳಾ ದೌರ್ಜನ್ಯವೇಶ್ಯಾವೃತ್ತಿಯನ್ನು ಕಾನೂನು ಬದ್ಧಗೊಳಿಸಬೇಕು. ಇದರಿಂದ ಸ್ವಲ್ಪ ಮಟ್ಟಿಗೆ ಸ್ತ್ರೀಯರ ಮೇಲಿನ ದೌರ್ಜನ್ಯಗಳು ಹಾಗೂ ಅತ್ಯಾಚಾರಗಳು ನಿಯಂತ್ರಣಕ್ಕೆ ಬರುತ್ತವೆ ಎಂದು ಹಲವರು ಅಭಿಪ್ರಾಯಪಡುತ್ತಾರೆ. ಪ್ರಪಂಚದ ಹಲವು ಕಡೆ ನಡೆಸಿದ ಸಮೀಕ್ಷೆ ಹಾಗೂ ಅಧ್ಯಯನಗಳಲ್ಲಿ ಇದಕ್ಕೆ ಪೂರಕವಾದ ಅಂಕಿ ಅಂಶಗಳು ಸಿಕ್ಕಿವೆ. ಅವುಗಳಲ್ಲಿ ಕೆಲವನ್ನು ಉದಾಹರಿಸುವುದಾದರೆ ಎನ್‍ಬಿಇಎಲ್ ಅಧ್ಯಯನದ ಪ್ರಕಾರ ರೋಡ್ ದ್ವೀಪದಲ್ಲಿ 2003-2009ರ ಅವಧಿಯಲ್ಲಿ ವೇಶ್ಯಾ ವೃತ್ತಿಯನ್ನು ಕಾನೂನುಬದ್ಧಗೊಳಿಸಿದಾಗ ಶೇ.39 ರಷ್ಟು ಅತ್ಯಾಚಾರ ಪ್ರಕರಣಗಳು ಕಡಿಮೆಯಾಗಿದ್ದವು. ಗೊನೇರಿಯಾ ಕಾಯಿಲೆಯ ಹರಡುವಿಕೆ ಪ್ರಮಾಣ    ಶೇ.45ರಷ್ಟು ಕಡಿಮೆಯಾಗಿತ್ತು. ಬೈಲಾರ್ ವಿಶ್ವವಿದ್ಯಾಲಯದ ಸಂಪನ್ಮೂಲ ವ್ಯಕ್ತಿಗಳಾದ ಸ್ಕಾಟ್ ಕನ್ನಿಂಗ್ ಹ್ಯಾಮ್ ಮತ್ತು ಮಾನಿಷಾ ಶಾ ವೇಶ್ಯೆಯರ ಮೇಲಿನ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂದೆ ತೆಗೆದ ಪರಿಣಾಮ ಹೆಂಗಸರ ಮೇಲಿನ ಅಪರಾಧ ಹಾಗೂ ದೌರ್ಜನ್ಯಗಳ ಸಂಖ್ಯೆ ಇಳಿಮುಖವಾಗಿತ್ತು ಎಂಬುದನ್ನು ಗುರುತಿಸಿದ್ದಾರೆ. ನಾರ್ತ್ ಈಸ್ರ್ಟನ್ ಸ್ಟೇಟ್ ಯೂನಿವಸಿಟಿಯ ಕಿರ್ಬಿ ಆರ್. ಕಂಡೀಫ್ ಅಮೇರಿಕಾದಲ್ಲಿ ವೇಶ್ಯಾವೃತ್ತಿಯನ್ನು ಕಾನೂನುಬದ್ಧಗೊಳಿಸಿದರೆ       ಶೇ.25ರಷ್ಟು ಅಂದರೆ 25ಸಾವಿರ ಅತ್ಯಾಚಾರ ಪ್ರಕರಣಗಳು ಕಡಿಮೆಯಾಗಬಹುದೆಂದು ಬಹಳ ಹಿಂದೆಯೇ ಸಲಹೆ ನೀಡಿದ್ದರು. ಕ್ವೀನ್ಸ್‍ಲ್ಯಾಡ್‍ನಲ್ಲಿ ಕಾನೂನುಬದ್ಧವಾಗಿ ನಡೆಸುತ್ತಿದ್ದ ವೇಶ್ಯಾಗೃಹಗಳನ್ನು ಮುಚ್ಚಿದಾಗ ಅಲ್ಲಿನ ಅತ್ಯಾಚಾರ ಪ್ರಕರಣಗಳ ಪ್ರಮಾಣ ಶೇ.149ಕ್ಕೆ ಏರಿತು ಎಂದು ಲಿಂಡಾ ರಿಚ್‍ಮ್ಯಾನ್ ಅಭಿಪ್ರಾಯ ಪಡುತ್ತಾರೆ. 2004ರಲ್ಲಿ ಜರ್ಮನಿಯಲ್ಲಿ ವೇಶ್ಯಾವೃತ್ತಿಯನ್ನು ಕಾನೂನುಬದ್ಧಗೊಳಿಸಿ ನೊಂದಾಯಿಸಿದ ವೇಶ್ಯೆಯರಿಗೆ ಆರೋಗ್ಯವಿಮೆ, ನಿವೃತ್ತಿ ವೇತನ ಇತರೆ ಸೌಲಭ್ಯಗಳನ್ನು ನೀಡುವುದಾಗಿ ಘೋಷಿಸಲಾಗಿತ್ತು. ಇದರಿಂದ ಪ್ರವಾಸೋದ್ಯಮ ಬೃಹತ್ತಾಗಿ ಬೆಳೆಯಿತು. ಹೆಂಗಸರಿನ ಮೇಲಿನ ಅಪರಾಧ ಪ್ರಕರಣಗಳು ಗಣನೀಯ ಸಂಖ್ಯೆಯಲ್ಲಿ ಕಡಿಮೆಯಾದವು. ಅದರೆ ಕೇವಲ 44 ಮಂದಿ ವೃತ್ತಿನಿರತ ಮಹಿಳೆಯರು ಮಾತ್ರವೇ ಸರ್ಕಾರದ ಸವಲತ್ತು ಪಡೆದರು. ಇದೇ ಅವಧಿಯಲ್ಲಿ ಜರ್ಮನ್ ಧೋರಣೆಗೆ ವಿರುದ್ಧವಾಗಿ ಸ್ವೀಡನ್ ವೇಶ್ಯಾವೃತ್ತಿಯನ್ನು ಸಂಪೂರ್ಣ ನಿಯಂತ್ರಿಸುವ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿತು. ಇದರ ಪರಿಣಾಮ ಸ್ವೀಡನ್‍ನಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಸಂಖ್ಯೆ ಏರುಪ್ರಮಾಣ ದಾಖಲಿಸಿತು. ವೇಶ್ಯಾವೃತ್ತಿಯಲ್ಲಿ ತೊಡಗುವವರು ವಯಸ್ಕರಾಗಿರಬೇಕು ಮತ್ತು ಯಾವುದೇ ಒತ್ತಡಕ್ಕೆ ಬಲಿಯಾಗದಂತೆ ಈ ವೃತ್ತಿಯನ್ನು ಕಾನೂನು ಬದ್ಧಗೊಳಿಸಬಹುದು. ಇದರಿಂದ ಭಾರತದಲ್ಲಿ ಸಹ ಅತ್ಯಾಚಾರ ಪ್ರಕರಣಗಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತವೆ ಎಂದು ಖ್ಯಾತ ಪತ್ರಕರ್ತ ದಿ. ಕುಶ್ವಂತ್‍ಸಿಂಗ್ ಸಹ ಅಭಿಪ್ರಾಯಪಟ್ಟಿದ್ದರು.

ಮತ್ತಷ್ಟು ಓದು »

13
ಆಕ್ಟೋ

ಕೈಲಾಶ್ ಸತ್ಯಾರ್ಥಿ : ಮಾನವತೆಯ ಕೈಲಾಸ ಪರ್ವತ

– ರಾಘವೇಂದ್ರ ಅಡಿಗ

ಕೈಲಾಶ್ ಸತ್ಯಾರ್ಥಿಭಾರತದ ಮಧ್ಯ ಪ್ರದೇಶದ ವಿದಿಶಾ ನಗರದಲ್ಲಿ ಹುಟ್ಟಿ “ಬಚಪನ್ ಬಚಾವೋ” ಆಂದೋಳನದ ಮೂಲಕ ಸಾವಿರಾರು ಮಕ್ಕಳನ್ನು ಜೀತ ವಿಮುಕ್ತಿಗೊಳಿಸಿದ ವ್ಯಕ್ತಿ 60 ರ ಪ್ರಾಯದ ಕೈಲಾಶ್ ಸತ್ಯಾರ್ಥಿಯವರ ಕುರಿತಾಗಿ ಮೊನ್ನೆ ನೋಬೆಲ್ ಶಾಂತಿ ಪಾರಿತೋಶಕ ಘೋಷಣೆ ಆಗುವವರೆಗೂ ನಮಗೆ ಯಾರೊಬ್ಬರಿಗೂ ಅವರ ಬಗೆಗೆ ತಿಳಿದಿರಲಿಲ್ಲ ಎನ್ನುವುದು ನಮ್ಮ ದೇಶದ ಸಾಧಕನೋರ್ವನ ಬಗೆಗೆ ನಮಗಿರುವ ಉದಾಸೀನತೆಗೆ ಸಾಕ್ಷಿಯಲ್ಲವೆ? ಭಾರತದ ಸಾಮಾನ್ಯ ಜನರಿಗಾಗಲೀ, ಭಾರತದ ಘನ ಸರ್ಕಾರಗಳಿಗಾಗಲೀ, ಸಾವಿರಾರು ಸಂಖ್ಯೆಯಲ್ಲಿರುವ ಸಂಘ ಸಂಸ್ಥೆಗಳಲ್ಲಿ ಯಾರೊಬ್ಬರಿಗೂ ಇವರ ಬಗೆಗೆ, ಇವರ ಸಾಮಾಜಿಕ ಕಳಕಳಿಯ ಕಾರ್ಯಗಳ ಬಗೆಗೆ ಯಾವೊಂದು ವಿಚಾರವೂ ತಿಳಿದಿರಲಿಲ್ಲ! “ಡರ್ಟಿ ಪಿಕ್ಚರ್” ನಂತಹಾ ಚಲನಚಿತ್ರಗಳಲ್ಲಿ ನಟಿಸಿದ ನಟಿಮಣಿಯರಿಗೆಲ್ಲ ಭಾರತದ ಉನ್ನತ ನಾಗರಿಕ ಗೌರವ “ಪದ್ಮಶ್ರೀ” ಪ್ಯ್ರಸ್ಕಾರವು ಸಂದಿರುವಾಗ ನಮ್ಮ ನಡುವೆಯೇ ಇದ್ದು ಸಾವಿರಾರು ಬಡ ಮಕ್ಕಳ ಉದ್ದಾರಕ್ಕಾಗಿ ಟೊಂಕಕಟ್ಟಿದ ಕೈಲಾಶ್ ರಂತಹವರನ್ನು ನಮ್ಮ ಸರ್ಕಾರಗಳು ಗುರುತಿಸದೇ ಹೋದುದು ತೀರಾ ಖೇದಕರ ಸಂಗತಿಯಲ್ಲವೆ? ಇನ್ನಾದರೂ ನಮ್ಮ ದೇಶದ ಸರ್ಕಾರಗಳು, ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸಬೇಕಿದೆ. ಹಾಗಾದಾಗ ಮಾತ್ರವೇ ನಮ್ಮ ಸಮಾಜಕ್ಕೂ, ಜನತೆಗೂ ಮಾನವತೆಯ ಮೌಲ್ಯಗಳ ಅರಿವಿದೆ ಎಂದು ಇತರರಿಗೆ ತಿಳಿಸಿದಂತಾಗುತ್ತದೆ.

ಆ ಹುಡುಗನು ತಾನು ನಿತ್ಯವೂ ಶಾಲೆಗೆ ನಡೆದು ಹೋಗುತ್ತಿದ್ದಾಗ ತನ್ನದೇ ಓರಗೆಯ ಹುಡುಗನೋರ್ವನು ತನ್ನ ತಂದೆಯೊಡನೆ ಕುಳಿತು ಬೂಟು ರಿಪೇರಿ ಮಡುತ್ತಿದ್ದುದನ್ನು ಕಾಣುತ್ತಿದ್ದನು. ಅದಾಗೆಲ್ಲಾ ಈ ಹುಡುಗನ ಮನಸ್ಸಿನಲ್ಲಿ ‘ನಾನು ಉತ್ಸಾಹದಿಂದಲೂ ಸಂತೋಷದಿಂದಲೂ ಶಾಲೆಗೆ ಹೋಗುತ್ತಿದ್ದರೆ ಆ ಹುಡುಗ ಮಾತ್ರ ತನ್ನ ತಂದೆಯೊಂದಿಗೆ ಕುಳಿತು ಬೂಟು ಹೊಲಿಯುತ್ತಿದ್ದಾನೆ, ಅದೇಕೆ ಹೀಗೆ?’ಎನ್ನುವ ಆಲೋಚನೆ ಹುಟ್ಟುತ್ತಿತ್ತು.

ಅದೊಮ್ಮೆ ಅದೇ ಪ್ರಶ್ನೆಯನ್ನು ತನ್ನ ಶಾಲಾ ಉಪಾದ್ಯಾಯರ ಬಳಿ ಕೇಳಲಾಗಿ “ ಅವರ ಬಳಿ ಹಣವಿಲ್ಲ, ಅವರು ಬಡವರು. ವಿದ್ಯಾಭ್ಯಾಸ ಪಡೆದುಕೊಳ್ಳಲಿಕ್ಕೆ ಸಾಕಷ್ಟು ಧನಬಲವಿಲ್ಲದವರು.” ಎನ್ನುವ ಉತ್ತರ ದೊರಕಿತು.

ಮತ್ತಷ್ಟು ಓದು »

25
ನವೆಂ

ಧರ್ಮವನ್ನು ಅಫೀಮು ಎಂದವರಿಂದ ಮತ್ತೇನು ನಿರೀಕ್ಷಿಸಲಾದೀತು?

– ನರೇಂದ್ರ ಕುಮಾರ ಎಸ್.ಎಸ್

Tarun Tejpalತೆಹಲ್ಕಾ’ದ ತರುಣ್ ತೇಜಪಾಲ್ ಅವರು ನಡೆಸಿರುವರೆನ್ನಲಾದ ಲೈಂಗಿಕ ಹಲ್ಲೆ ಪ್ರಕರಣ, ಮಾಧ್ಯಮದ ಮುಖವಾಡವನ್ನು ಕಿತ್ತೆಸೆದಿದೆ. ಇದೇ ’ತೆಹಲ್ಕಾ’ವು, ಆಗಾಗ “ಕುಟುಕು ಕಾರ್ಯಾಚರಣೆ”ಯ ಮೂಲಕ ರಾಜಕಾರಣಿಗಳನ್ನು ಸಿಕ್ಕಿಹಾಕಿಸುತ್ತಿತ್ತು. ಒಂದು ಗುಪ್ತ ಕ್ಯಾಮೆರಾ ಜೊತೆಗೆ ತೆರಳುವ ಈ “ಕುಟುಕು ಕಾರ್ಯಾಚರಣೆ ಪಡೆ”, ರಾಜಕಾರಣಿಗಳಿಗೆ ತಿಳಿಯದಂತೆ ಬಲೆ ಬೀಸುತ್ತಿತ್ತು. ಅವರಿಗೆ ಆಮಿಷವನ್ನು ತೋರಿಸಿ, ಆಗ ನಡೆಯುವ ಪೂರ್ಣ ಸಂಭಾಷಣೆಯನ್ನು ಕ್ಯಾಮೆರಾ ಮೂಲಕ ಸೆರೆಹಿಡಿದು, ಆ ನಂತರ ವಿಡಿಯೋವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿತ್ತು. ಆ ವಿಡಿಯೋ ನೋಡಿದ ಜನ, ಅದರಲ್ಲಿರುವ ರಾಜಕಾರಣಿ ಭ್ರಷ್ಟಾಚಾರಿಯೇ ಎಂದು ನಿರ್ಧಾರಕ್ಕೆ ಬರುವ ರೀತಿಯಲ್ಲಿ ಅದನ್ನು ಪ್ರಸ್ತುತ ಪಡಿಸಲಾಗುತ್ತಿತ್ತು. ನ್ಯಾಯಾಂಗ ವಿಚಾರಣೆಯ ಬದಲು ಮಾಧ್ಯಮಗಳೇ ವಿಚಾರಣೆ ನಡೆಸಿ, ರಾಜಕಾರಣಿಯನ್ನು ತಪ್ಪಿತಸ್ಥ ಎಂದು ಘೋಷಿಸಲಾಗಿಬಿಡುತ್ತಿತ್ತು.

ವ್ಯಕ್ತಿಯೊಬ್ಬ ಭ್ರಷ್ಟಾಚಾರಿ ಅಲ್ಲದಿದ್ದರೂ, ಆಮಿಷಕ್ಕೊಳಗಾಗಿ ಕೆಲವು ತಪ್ಪುಗಳನ್ನು ಮಾಡುವನು. ಉದಾಹರಣೆಗೆ, ಮನೆಗೆಲಸಕ್ಕೆ ಬರುವ ಹುಡುಗ/ಹುಡುಗಿ ಕಳ್ಳರಾಗಿರುವುದಿಲ್ಲ. ಅವರು ಕಷ್ಟಪಟ್ಟು ಕೆಲಸ ಮಾಡಿ ಸಂಪಾದಿಸುವ ಉದ್ದೇಶ ಹೊಂದಿಯೇ ಕೆಲಸಕ್ಕೆ ಬಂದಿರುತ್ತಾರೆ. ಆದರೆ, ಅವರು ಕೆಲಸ ಮಾಡುವ ಮನೆಯಲ್ಲಿ, ಈ ಹುಡುಗ/ಹುಡುಗಿಯ ಕಣ್ಣಿಗೆ ಕಾಣಿಸುವಂತೆ ಹಣವನ್ನೋ ಇಲ್ಲವೇ ಆಭರಣಗಳನ್ನೋ ಇಟ್ಟಿದ್ದರೆ, ಅವರು ಆಮಿಷಕ್ಕೆ ಒಳಗಾಗಿಬಿಡುತ್ತಾರೆ. ಅಲ್ಲಿ ಇಟ್ಟಿರುವ ಹಣ/ಆಭರಣವನ್ನು ಯಾರೂ ಗಮನಿಸುತ್ತಿಲ್ಲವೆಂದು ತಿಳಿದಾಗ, ಅದನ್ನು ತೆಗೆದುಕೊಳ್ಳೋಣ ಎಂದೆನ್ನಿಸಿಬಿಡಬಹುದು. ಆಮಿಷದಿಂದ ಉಂಟಾದ ಆಸೆಯಿಂದ ತಪ್ಪಿಸಿಕೊಳ್ಳಲಾಗದೆ “ಕಳ್ಳತನ” ನಡೆದುಬಿಡುತ್ತದೆ. ಇಲ್ಲಿ ಕಳ್ಳತನ ಮಾಡಿದ ಹುಡುಗ/ಹುಡುಗಿಯದು ಎಷ್ಟು ತಪ್ಪೋ, ಅಷ್ಟೇ ತಪ್ಪು ಆ ಹಣ/ಆಭರಣಗಳನ್ನು ಇವರ ಕಣ್ಣಿಗೆ ಕಾಣುವಂತೆ ಇಟ್ಟು ಆಮಿಷ ಕೊಟ್ಟವರದೂ ಆಗಿರುತ್ತದೆ, ಅಲ್ಲವೆ?

ಮತ್ತಷ್ಟು ಓದು »

14
ಆಕ್ಟೋ

ಸೌಜನ್ಯ ಹಂತಕರು ನೇಣಿಗೇರುವುದೆಂತು?

– ರಾಕೇಶ್ ಶೆಟ್ಟಿ

Justice for Kumari Soujanya“ಬಹುಷಃ ಆಗಿನ ಕಾಲವೇ ಚೆನ್ನಾಗಿತ್ತೆನೋ.ಆಗಲಾದರೂ ಕುರು ಸಭೆಯಲ್ಲಿ ದ್ರೌಪದಿಯ ವಸ್ತ್ರಾಪಹರಣವಾಗುವಾಗ ಅವಳ ಸಹಾಯಕ್ಕೆ ಕರೆದೊಡನೆಯೇ ಶ್ರೀ ಕೃಷ್ಣ ಪರಮಾತ್ಮ ಬಂದಿದ್ದ.ಪಾಪ! ಈ ಕಾಲದ ಹೆಣ್ಣು ಮಕ್ಕಳ ಕೂಗು ಆ ಕಾಣದ ದೇವರಿಗೂ,ಕಾನೂನು ಪಾಲಕರಾದ ಮನುಷ್ಯ(?)ರಿಗೂ ಕೇಳುತ್ತಿಲ್ಲ.ಕುರುಕ್ಷೇತ್ರದ ಯುದ್ಧದ ಮುಗಿದರೂ ಕೌರವರು ಇನ್ನೂ ಸತ್ತಿಲ್ಲ.ದ್ರೌಪದಿಯರ ಗೋಳು ಮುಗಿಯೋಲ್ಲ…” ಅಂತ ’ನಿರ್ಭಯ’ ಅತ್ಯಾಚಾರದ ಪ್ರಕರಣದ ಸಮಯದಲ್ಲಿ ಬರೆದಿದ್ದೆ. ಮತ್ತೆ ಅದೇ ಸಾಲುಗಳನ್ನು ನಮ್ಮ ಧರ್ಮಸ್ಥಳದ ’ಸೌಜನ್ಯ’ ಅನ್ನುವ ಹೆಣ್ಣುಮಗಳ ಬಗ್ಗೆ ಬರೆಯುವಾಗಲೂ ಬಳಸಬೇಕಾಗಿ ಬಂದಿದೆ.ಆಗ ಕೃಷ್ಣನೇನೋ ಕರೆದಾಗ ಬಂದಿದ್ದ.ಆದರೆ ಇಲ್ಲಿ ಧರ್ಮಸ್ಥಳದ ಮಂಜುನಾಥ ಸ್ವಾಮಿ ಯಾಕೋ ವರುಷ ಕಳೆದರೂ ಇನ್ನು ಕರುಣೆ ತೋರಲಿಲ್ಲ …! ನನಗೆ ಈ ದೇವರುಗಳ ಮೇಲೆ ಒಮ್ಮೊಮ್ಮೆ ಕೋಪಬರುವುದು ಇದೇ ಕಾರಣಕ್ಕಾಗಿ, ಏನೆಲ್ಲಾ ಪಾಪಗಳನ್ನು ಮಾಡಿ ಒಂದು ನೇಮ,ಒಂದು ಹರಕೆ,ಒಂದು ಹೋಮ,ಒಂದು ಹವನ,ತಪ್ಪು ಕಾಣಿಕೆ ಸಲ್ಲಿಸಿ ಸುಮ್ಮನಾಗಿಬಿಡಬಹುದೇ? ಹಾಗಿದ್ದರೆ ’ಧರ್ಮ’ವೆಲ್ಲಿದೆ?

ದಿಲ್ಲಿಯಲ್ಲಿ ಕಳೆದ ಡಿಸೆಂಬರಿನಲ್ಲಿ ನಡೆದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ’ನಿರ್ಭಯ’ ಅತ್ಯಾಚಾರ ಪ್ರಕರಣದಲ್ಲಿ ಹೋರಾಟದ ಕಿಡಿಯನ್ನು ದೆಹಲಿಯ ವಿದ್ಯಾರ್ಥಿ ಮಿತ್ರರು ಹಚ್ಚಿದ್ದರು.ಅದು ದೇಶವ್ಯಾಪಿಯೂ ಹಬ್ಬಿತ್ತು. ಖುದ್ದು ಕೇಂದ್ರ ಸರ್ಕಾರವನ್ನೇ ಮಂಡಿಯೂರುವಂತೆ ಮಾಡಿದ್ದು ಯುವಶಕ್ತಿಗೆ ಸಂದ ಜಯವಾಗಿತ್ತು.ಈಗ ನಿರ್ಭಯ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಿದೆ.ಆದರೆ ನಮ್ಮ ಸೌಜನ್ಯ ಪ್ರಕರಣದ ಆರೋಪಿಗಳೇ ಇನ್ನೂ ಸಿಕ್ಕಿಲ್ಲ…! ಅತ್ಯಾಚಾರದ ಆರೋಪಿಗಳನ್ನು ವರ್ಷವಾದರೂ ಬಂಧಿಸಲಾಗದಷ್ಟು ನಿಷ್ಕ್ರಿಯರಾಗಿದ್ದಾರೆಯೇ ನಮ್ಮ ಕರ್ನಾಟಕ ಪೋಲಿಸರು? ಅಥವಾ ಪೋಲಿಸರನ್ನು ನಿಷ್ಕ್ರಿಯಗೊಳಿಸುವಲ್ಲಿ ಕಾಣದ ’ಕೈ’ ಗಳು ಕೆಲಸ ಮಾಡುತ್ತಿವೆಯೇ? ಪ್ರಕರಣ ನಡೆದಾಗ ಇದ್ದಿದ್ದು ಬಿಜೆಪಿ ಸರ್ಕಾರ.ಈಗ ಇರುವುದು ಕಾಂಗ್ರೆಸ್ಸ್ ಸರ್ಕಾರ.ಹಾಗಿದ್ದರೆ ಆ ಕಾಣದ ಕೈಗಳು ಸರ್ಕಾರದ ಕೈಗಳನ್ನೇ ಕಟ್ಟಿಹಾಕಬಲ್ಲಷ್ಟು ಬಲಿಷ್ಟವಾಗಿವೆಯೇ?

ಮತ್ತಷ್ಟು ಓದು »

24
ಡಿಸೆ

ಕೌರವರ ನಾಶಕ್ಕೆ ಶ್ರೀಕಾರ ಹಾಕಿದ್ದು ದ್ರೌಪದಿಯೇ ತಾನೇ?

– ರಾಕೇಶ್ ಶೆಟ್ಟಿ

Dehli1ಬಹುಷಃ ಆಗಿನ ಕಾಲವೇ ಚೆನ್ನಾಗಿತ್ತೆನೋ.ಆಗಲಾದರು ಕುರು ಸಭೆಯಲ್ಲಿ ದ್ರೌಪದಿಯ ವಸ್ತ್ರಾಪಹರಣವಾಗುವಾಗ ಅವಳ ಸಹಾಯಕ್ಕೆ ಕರೆದೊಡನೆಯೇ ಶ್ರೀ ಕೃಷ್ಣ ಪರಮಾತ್ಮ ಬಂದಿದ್ದ.ಪಾಪ! ಈ ಕಾಲದ ಹೆಣ್ಣು ಮಕ್ಕಳ ಕೂಗು ಆ ಕಾಣದ ದೇವರಿಗೂ,ಕಾನೂನು ಪಾಲಕರಾದ ಮನುಷ್ಯ(?)ರಿಗೂ ಕೇಳುತ್ತಿಲ್ಲ.ಕುರುಕ್ಷೇತ್ರದ ಯುದ್ಧದ ಮುಗಿದರೂ ಕೌರವರು ಇನ್ನೂ ಸತ್ತಿಲ್ಲ.ದ್ರೌಪದಿಯರ ಗೋಳು ಮುಗಿಯೋಲ್ಲ…

ಕಳೆದ ಶನಿವಾರದ ಬೆಳಗ್ಗಿನಿಂದ ಇಂಡಿಯಾ ಗೇಟ್,ರಾಷ್ಟ್ರಪತಿ ಭವನದ ಮುಂದೆ ನಿಂತು ನ್ಯಾಯ ಕೇಳಿದ ಯುವಕ-ಯುವತಿಯರ ಮೇಲೆಯೇ ಲಾಠಿ ಚಾರ್ಜ್,ಜಲಫಿರಂಗಿ,ಅಶ್ರು ವಾಯು ಪ್ರಯೋಗ ನಡೆಯುತ್ತಿದ್ದರೂ.ಪ್ರಧಾನಿ ಮೌನ ಮೋಹನ್ ಸಿಂಗ್ ತಮ್ಮ ಮೌನ ಮುರಿದಿದ್ದು ಸೋಮವಾರ ಬೆಳಿಗ್ಗೆ.ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ!,ಅದೂ ಸಹ ತಮ್ಮ ಭಾಷಣದ ಕೊನೆಯಲ್ಲಿ “ಟೀಕ್  ಹೈ” ಅಂದರಂತೆ! ಕ್ಯಾಮೆರಾ ಹಿಂದೆ ನಿಂತಿದ್ದ ನಿರ್ದೇಶಕ(ಕಿ) ಯಾರಿದ್ದಿರಬಹುದು? So Called ಯುವನಾಯಕ ರಾಹುಲ್ ಗಾಂಧಿಗೂ ಯುವಕ-ಯುವತಿಯರ ಮೇಲೆ ಪೋಲಿಸ್ ದೌರ್ಜನ್ಯ ಕಾಣಿಸಿಲ್ಲ.ರಷ್ಯಾದಿಂದ ಪುಟಿನ್ ಬರುತಿದ್ದಾರೆ ಅವರೆದುರು ನೀವು ಗಲಾಟೆ ಮಾಡಿದರೆ ಭಾರತದ ಬಗ್ಗೆ ಅವರೇನು ತಿಳಿದುಕೊಂಡಾರು ಅಂತ ಬುದ್ದಿ ಹೇಳುವ ಗೃಹ ಮಂತ್ರಿ ಶಿಂಧೆಗೇ,ವೃದ್ಧರು ,ಮಹಿಳೆಯರು,ಮಕ್ಕಳ ಮೇಲೆ ದೌರ್ಜನ್ಯವೆಸಗಿದ ಪೋಲಿಸರನ್ನು ಮನೆಗೆ ಕಳಿಸಲಾಗದಿದ್ದ ಮೇಲೆ ತಾನು ಕುಳಿತಿರುವ ಕುರ್ಚಿಯಿಂದ ಎದ್ದೋಗಬೇಕು ಅನ್ನುವ ನೈತಿಕತೆ  ಕೂಡ ಉಳಿದಿಲ್ಲವೇ? ಎದ್ದೋಗುವುದನ್ನು ಪಕ್ಕಕ್ಕಿಡಿ,ತನ್ನ  ಪೋಲಿಸ್ ಪಡೆ ಮಾಡಿದ ಘನಂದಾರಿ ಕೆಲಸಕ್ಕಾಗಿ ದೇಶದ ಜನರ ಕ್ಷಮೆ ಕೇಳಲು ಸಹ ಆತ ಸಿದ್ಧನಿಲ್ಲ. ಹಾಳು ಬಿದ್ದು ಹೋಗಲಿ ಕ್ಷಮೆಯೂ ಬೇಡ.ನ್ಯಾಯ ಕೇಳಲು ನಿಂತ ವಿದ್ಯಾರ್ಥಿಗಳನ್ನು ಭೇಟಿಯಾಗುವ ಕುರಿತು ಪ್ರಶ್ನೆ ಕೇಳಿದರೆ, “ಇವತ್ತು ವಿದ್ಯಾರ್ಥಿಗಳು ಪ್ರತಿಭಟಿಸುತ್ತಾರೆ.ನಾಳೆ ಮಾವೋವಾದಿಗಳು ಪ್ರತಿಭಟಿಸುತ್ತಾರೆ.ಹಾಗಂತ ಮಾವೋವಾದಿಗಳು ಭೇಟಿಯಾಗಲು ಸಾಧ್ಯವೇ?” ಅನ್ನುತ್ತಾನಲ್ಲ ಇದೆಂತ ಉಡಾಫೆ ತನದ ಮಾತು? ಎಲ್ಲಿಗೆ ಬಂದು ನಿಂತಿದೆ ನಮ್ಮ ವ್ಯವಸ್ಥೆ?

ಮತ್ತಷ್ಟು ಓದು »

2
ಜುಲೈ

ಕನ್ನಡ/ಇಂಗ್ಲೀಷ್ ಮಾಧ್ಯಮದ ಜೊತೆಗೆ ಏಕರೂಪ ಶಿಕ್ಷಣದ ಬಗ್ಗೆಯೂ ಚರ್ಚೆ ಆಗಬೇಕಲ್ಲವೇ?

– ರಾಕೇಶ್ ಶೆಟ್ಟಿ

ಕಡೆಗೂ ‘ಸರ್ಕಾರ ಏಕರೂಪ ಶಿಕ್ಷಣ ನೀತಿ ಜಾರಿಗೆ ತರುವ ನಿಟ್ಟಿನಲ್ಲಿ ಚಿಂತಿಸಬೇಕು’ ಅನ್ನುವ ಮಾತುಗಳನ್ನು ಕಸಪಾ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದ್ದಾರೆ.ಕಳೆದ ಹಲವು ದಿನಗಳಿಂದ ಇಂಗ್ಲೀಷ್ ಮಾಧ್ಯಮದ ಸುತ್ತ ನಡೆಯುತ್ತಲಿರುವ ಚರ್ಚೆಯಲ್ಲಿ ನಾನು ನಿರೀಕ್ಷಿಸುತಿದ್ದ ಮಾತು “ಏಕರೂಪ ಶಿಕ್ಷಣ”ದ ಬಗ್ಗೆ.ಪೇಟೆಯ/ಉಳ್ಳವರ ಮಕ್ಕಳಿಗೊಂದು ಶಿಕ್ಷಣ,ಹಳ್ಳಿಯ/ಬಡವರ ಮಕ್ಕಳಿಗೊಂದು ಶಿಕ್ಷಣ ಕೊಟ್ಟು ಕಡೆಗೆ ಸಮಾನತೆ,ಸಾಮಾಜಿಕ ನ್ಯಾಯ,ಭಾಷೆ,ನಾಡು-ನುಡಿಯ ಅಳಿವು ಉಳಿವು ಅಂತ ಮಾತನಾಡುವುದೆಷ್ಟು ಸರಿ?

೧೦ನೆ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲೇ ಓದಿದ ನನಗೆ ಮಾತೃ ಭಾಷೆಯಲ್ಲಿ ಕಲಿಯುವುದೆಷ್ಟು ಸುಲಭ,ಆನಂದದ ವಿಷಯ ಅನ್ನುವುದರ ಅರಿವಿದೆ ಹಾಗೆಯೇ ೧೦ರ ನಂತರ ಇಂಗ್ಲೀಷ್ ಮಾದ್ಯಮಕ್ಕೆ (ಪಿಯುಸಿಯಲ್ಲಿ ಆಯ್ದುಕೊಂಡಿದ್ದು ವಿಜ್ಞಾನ ವಿಷಯ) ಕಾಲಿಟ್ಟಾಗ ಅನುಭವಿಸಿದ ಕಷ್ಟ,ಕೀಳರಿಮೆಯ ಅನುಭವಗಳು ಇವೆ.ಹಾಗಾಗಿ ಈ ಚರ್ಚೆಯಲ್ಲಿ ಮತ್ತು ಈಗಿನ ನಮ್ಮ ಶೈಕ್ಷಣಿಕ ಪರಿಸ್ಥಿತಿಯಲ್ಲಿ ನಾನು ಇಂಗ್ಲೀಷ್ ಮೀಡಿಯಂ ಬೇಕು ಅನ್ನುವುದರ ಪರವೇ ನಿಲ್ಲುತ್ತೇನೆ.

ಒಂದು ವೇಳೆ ಸಾಹಿತಿಗಳು ಒತ್ತಾಯಿಸುತ್ತಿರುವಂತೆ ಪ್ರಾಥಮಿಕ ಶಿಕ್ಷಣ ಮಾತೃ ಭಾಷೆಯಲ್ಲೇ ಆಗಬೇಕು ಅನ್ನುವುದಾದರೆ ಅದು ಈ ರಾಜ್ಯದಲ್ಲಿರುವ ಸರ್ಕಾರಿ/ಅನುದಾನಿತ/ಕೇಂದ್ರೀಯ/ಖಾಸಗಿ ಶಾಲೆಗಳಿಗೂ ಏಕರೂಪವಾಗಿ ಅನ್ವಯವಾಗಲಿ. ಅದನ್ನು ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಕನ್ನಡ ಕಡ್ಡಾಯವಾಗಲಿ ಆ ಮೂಲಕ ಬಡವರ ಮಕ್ಕಳು ಮಾತ್ರ ಕನ್ನಡದಲ್ಲಿ ಕಲಿತು ಮುಂದೆ ಇಂಗ್ಲೀಷ್ ಲೋಕಕ್ಕೆ ಕಾಲಿಟ್ಟು ಅರ್ಧಕರ್ಧ ಜನ ಕೀಳರಿಮೆ,ಹೆದರಿಕೆಯಿಂದಾಗಿ ಹಿಂದೆ ಬೀಳಲಿ ಅನ್ನುವುದು ಇಬ್ಬಗೆಯ ನೀತಿಯಾಗುತ್ತದೆ.

ಏಕರೂಪ ಶಿಕ್ಷಣ ಅನ್ನುವಾಗ ಇನ್ನೊಂದು ಅಂಶವನ್ನ ನಾವು ಗಮನಕ್ಕೆ ತೆಗೆದುಕೊಳ್ಳಬೇಕು.ಮಕ್ಕಳನ್ನು ಶಾಲೆಗೇ ಸೇರಿಸುವಾಗ ಅದು ಇಂಗ್ಲೀಷ್ ಮೀಡಿಯಂ ಶಾಲೆಯೇ ಅಂತ ಮಾತ್ರ ಈಗಿನ ಪೋಷಕರು ನೋಡುತ್ತಿಲ್ಲ,ಅದರ ಜೊತೆಗೆ ಅವರು ಅಲ್ಲಿರುವುದು ಸೆಂಟ್ರಲ್ ಸಿಲ್ಲಬಸ್ಸೋ,ಐ.ಸಿ.ಎಸ್.ಈ ಸಿಲ್ಲಬಸ್ಸೋ (ಅಥವಾ ಇನ್ಯಾವುದೋ) ಅನ್ನುವುದನ್ನು ನೋಡುತಿದ್ದಾರೆ.ನಮ್ಮ ಮಕ್ಕಳು ಇಂತ ಸಿಲಬಸ್ಸ್ ಇರೋ ಶಾಲೆಯಲ್ಲಿ ಓದುತಿದ್ದಾರೆ ಅಂತ ಹೇಳಿಕೊಳ್ಳುವುದು ಈಗಿನ ಪೋಷಕರಿಗೆ ಗರ್ವದ ವಿಷಯವಾಗಿದೆ. ಅಸಲಿಗೆ ಈ ರೀತಿ ಬೇರೆ,ಬೇರೆ ಸಿಲ್ಲಬಸ್ಸಿನ ಅಗತ್ಯ ಶಾಲಾ ಮಟ್ಟದಲ್ಲಿ ಏನು ಅನ್ನುವುದು ಸಹ ಚರ್ಚೆಯಾಗಬೇಕಲ್ಲವೇ?

ಮತ್ತಷ್ಟು ಓದು »

18
ಜನ

ಅವನು ಕುತ್ತಿಗೆಗೆ ಚಾಕು ಇಟ್ಟ, ದೇಹ ಹೆಣವಾಗಿತ್ತು :ಆಫ್ರೀಕಾದ ಕ್ಯಾಮರೂನ್ ಲೂಟಿ ಪ್ರಸಂಗ !

-ರವಿ ಮೂರ್ನಾಡು

 ಅಲ್ಲೆಲ್ಲೋ ಕೊಲೆಯಾದ ವ್ಯಕ್ತಿಯ ಬಂಧುಗಳು ನ್ಯಾಯಕ್ಕಾಗಿ ಗೋಗರೆಯುತ್ತಿದ್ದರು. ಪತ್ರಿಕಾ ಕಚೇರಿಯಲ್ಲಿ ಕುಳಿತು ಅದು ಅರಿವಿಗೆ ಬಂದಿರಲಿಲ್ಲ. ಪುಸ್ತಕವೊಂದಕ್ಕೆ ಆಸ್ಪತ್ರೆಯ ಶವಾಗಾರದಲ್ಲಿ ಮಲಗಿದ ಹೆಣದ ಟಿಪ್ಪಣಿ ಮಾಡುವಾಗಲೂ ಅದು ಗೊತ್ತಿರಲಿಲ್ಲ. ನನ್ನ ಕುತ್ತಿಗೆಗೆ ಚಾಕು ಇಟ್ಟಾಗ ನಾನೇ ಹೆಣವಾಗಿದ್ದೆ. ಆಫ್ರೀಕಾದ ಕ್ಯಾಮರೂನಿನಲ್ಲಿ ಲೂಟಿಗಾರರು ಸುತ್ತುವರಿದು ವಾಚು-ಮೊಬೈಲು-ಹಣಕ್ಕಾಗಿ ತಡಕಾಡಿ ಮುಗಿಸುವವರೆಗೂ ಜೀವ ಅವರ ಕೈಯಲ್ಲೇ ಇತ್ತು. ಸತ್ತ ದೇಹ  ನನ್ನಲ್ಲಿತ್ತು.  ಕತ್ತಿನಿಂದ ಚಾಕು ತೆಗೆದದ್ದೇ ತಡ, ಸತ್ತವನು ಎದ್ದು ಕುಳಿತಿದ್ದೆ. ..!

ಇಲ್ಲಿನ ಡ್ವಾಲಾ  ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2007 ರಲ್ಲಿ ಕಾಲಿಟ್ಟು ಪಾಸ್‍ಪೋರ್ಟಿಗೆ ಮುದ್ರೆಯೊತ್ತಿ ಲಗ್ಗೇಜು ವಿಲೇವಾರಿಗೆ ಬರುವಾಗಲೇ ಈರ್ವರು ಹಿಂದೆಯೇ ಬಂದರು. “ ನಾನು ಕಸ್ಟಂ ಅಧಿಕಾರಿ, ನಿಮ್ಮ ಬ್ಯಾಗ್ ಚೆಕ್‍ ಮಾಡಬೇಕು, ಸ್ವಲ್ಪ ಈ ಕಡೆ ಬನ್ನಿ” ಅಂದರು. ಅರೆ..! ಅಧಿಕಾರಿಯಾಗಿದ್ದರೆ ಮರೆಗೆ ಕರೆಯುವ ಆಲೋಚನೆ ಏನು ಅಂತ ಯೋಚಿಸಿದ್ದೆ. ಇಲ್ಲಿನ ಐದು ಸಾವಿರ ಕ್ಯಾಮರೂನ್ ಫ್ರಾಂಕ್ ಕೊಟ್ಟರೆ ತಕರಾರಿಲ್ಲ ಅಂದರು. ಅಲ್ಲಿಯೇ ನಮ್ಮ ಕಂಪೆನಿಯ ವಾರೀಸುದಾರರು ಮಧ್ಯೆ ಬಂದಿದ್ದರಿಂದ ಆ ಪೀಡನೆಯಿಂದ ಪಾರಾದೆ. ಅಮಾನುಷ ಕೃತ್ಯಗಳ ಹೆಣಗಳ ವಾಸನೆ ನನ್ನ ಮೂಗಿಗೆ ಆಗಲೇ ಬಡಿದಿದೆ. ಹಣ ಕೊಟ್ಟರೆ ಕಾನೂನುಗಳು ಇಲ್ಲಿ ನಮ್ಮ ಕೈಗೆ ಬರುತ್ತವೆ.  ಹಾಗಂತ ಹಣಕ್ಕೆ ಬಾಯ್ಬಿಟ್ಟ ನಡೆದಾಡುವ ಹೆಣಗಳೇ ಇಲ್ಲಿನ ಮನುಷ್ಯರು. ಭಾರತದಲ್ಲಿ ಇಂತಹದ್ದು ಬೇಕಾದಷ್ಟು ನಡೆಯುತ್ತವೆ. ಅದನ್ನು ಪ್ರಶ್ನಿಸುವ ಜನರಿದ್ದಾರೆ ಅನ್ನುವ ಸಮಾಧಾನ. ಇಲ್ಲಿ ಕೇಳುವವರು, ಕೊಡುವವರು ಎಲ್ಲರೂ  ಕಳ್ಳರೇ ಅಂದಾಗ ಸತ್ಯಕ್ಕೂ ಹಲ್ಲು ಕಿರಿಯಲು ನಾಚಿಕೆ…!

ಮತ್ತಷ್ಟು ಓದು »

12
ಡಿಸೆ

ಮಡೆಸ್ನಾನ ನಿಲ್ಲಬೇಕಾಗಿರುವುದು ಮಾನವೀಯತೆಗಾಗಿ,ಜಾತಿಗಾಗಿಯಲ್ಲ

– ರಾಕೇಶ್ ಶೆಟ್ಟಿ

ಇದನ್ನ ಈ ದೇಶದ ಕರ್ಮ ಅಂತಲೇ ಅನ್ನಬೇಕೇನೋ,  ಅಂದುಕೊಂಡಂತೆ ‘ಮಡೆ ಸ್ನಾನ’ದ ‘ಮಡೆ'(ಮಡೆ=ಎಂಜಲು) ಉರುಳದವರ ಮೇಲೆಯೂ ಬೀಳುತ್ತಿದೆ.ಇಷ್ಟು ದಿನ ಉರುಳಾಡಿದ್ದು ಮನುಷ್ಯರಾದರೆ ಈಗ ಸಮಸ್ತ ಜಾತಿಗಳು ಬಿದ್ದು ಉರುಳಾಡುತ್ತಿವೆ.ಮಡೆ ಸ್ನಾನವನ್ನು ವಿರೋಧಿಸಿ ನಾನು ಈ ಹಿಂದೆ ಬರೆದ ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಲ್ಲಿ ‘ಅದು ಬ್ರಾಹ್ಮಣರ ಎಂಜಲೆಲೆ’ ಅನ್ನುವ ಕಾರಣಕ್ಕೆ ವಿರೋಧಿಸುತಿದ್ದಿರ ಅನ್ನುವಂತಹ ಪ್ರತಿಕ್ರಿಯೆಗಳು ಬ್ಲಾಗಿನಲ್ಲಿ/ಮಿಂಚೆಗಳ ಮೂಲಕ ಬಂದಿವೆ. ನನ್ನ ಲೇಖನದಲ್ಲೂ ಒಂದು ಮಾತನ್ನು ಸ್ಪಷ್ಟವಾಗಿ ಹೇಳಿದ್ದೆ, ಅದ್ಯಾವ ಜಾತಿಯವರು ತಿಂದು ಮತ್ತಿನ್ಯಾವಾ  ಜಾತಿಯವ ಅದರ ಮೇಲೆ ಉರುಳಾಡುವುದು ಅಷ್ಟೇ ಅಸಹ್ಯಕರ’  ಅಂತ.

ಅಂದರೆ,ಅದು ಕುಕ್ಕೆಯ ಮಡೆ ಸ್ನಾನವಿರಲಿ ಅಥವಾ ತುರುವೇಕೆರೆಯ ಮಡೆಸ್ನಾನವಿರಲಿ ಎರಡೂ ಅಸಹ್ಯಕರವೇ, ಎರಡೂ ಖಂಡನೀಯವೇ.ಮಡೆ ಸ್ನಾನದ ಪರ-ವಿರೋಧ ಮಾತನಾಡುವವರು ನೆನಪಿಡಬೇಕಾದದ್ದು ‘ಈ ಮಡೆಸ್ನಾನ ನಿಲ್ಲಬೇಕಾಗಿರುವುದು ಮಾನವೀಯತೆಗಾಗಿ ಹೊರತು ಜಾತಿಗಾಗಿಯಲ್ಲ’ ಅನ್ನುವುದು.

ಮತ್ತಷ್ಟು ಓದು »

12
ಸೆಪ್ಟೆಂ

ಕಮ್ಯೂನಿಸ೦ ಎ೦ದರೆ ನರಮೇಧ.. ನರಮೇಧವೆ೦ದರೆ ಕಮ್ಯೂನಿಸ೦!?

– ಕೆ.ಎಸ್ ರಾಘವೇಂದ್ರ ನಾವಡ

  “ಕಮ್ಯೂನಿಸ೦ ಎ೦ದರೆ ನರಮೇಧ.. ನರಮೇಧವೆ೦ದರೆ ಕಮ್ಯೂನಿಸ೦ “ ಎ೦ಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆಯಲ್ಲ!!

ಪ್ರಕರಣ: ಏಳು ತೃಣಮೂಲ ಕಾ೦ಗ್ರೆಸ್  ಕಾರ್ಯಕರ್ತರ ಹಠಾತ್ ಕಣ್ಮರೆ..

ಸ್ಠಳ: ಪಶ್ಚಿಮ ಮಿಡ್ನಾಪುರದ “ಪಿಸಾಯಲ“ ಹೆಸರಿನ ಪ್ರದೇಶ

ಕಾಲ : ೨೦೦೨

ಆ ನರಮೇಧದ ಹಿ೦ದಿನ ರೂವಾರಿಯ  ಹೆಸರು ಸುಶಾ೦ತ್ ಘೋಷ್!!

ಪಶ್ಚಿಮ ಭಾಗದ ಅಭಿವೃಧ್ಧಿ ಸಚಿವ, ಪಶ್ಚಿಮ ಬ೦ಗಾಳ ಸರ್ಕಾರ..

 

ಅ೦ತೂ ಕಮ್ಯೂನಿಸ್ಟರ ಬಣ್ಣ ಬಯಲಾಗತೊಡಗಿದೆ. ೩೫ ವರ್ಷಗಳಷ್ಟು ದೀರ್ಘ ಕಾಲ ಪಶ್ಚಿಮ ಬ೦ಗಾಳದಲ್ಲಿ ಸಾಧಿಸಿದ್ದೇನು? ಎ೦ಬುದಕ್ಕೆ ಈಗ ಉತ್ತರಗಳು ಸಿಗತೊಡಗಿವೆ! ಆದರೆ ಈ ರೀತಿಯ ಉತ್ತರ ಮಾತ್ರ ಯಾರೂ ನಿರೀಕ್ಷಿಸಿರಲಾರರು!   ಒಮ್ಮೆ ಮಮತಾ ದೀದಿ   ಥರಗುಟ್ಟಿ ಹೋಗಿದ್ದಾರೆ! ದೇಶದ ಅತ್ಯ೦ತ ಸುದೀರ್ಘ ಕಾಲದವರೆಗಿನ ಮುಖ್ಯಮ೦ತ್ರಿ ಜ್ಯೋತಿ ಬಸು ಹಾಗೂ ಆನ೦ತರದ ಕಾಮ್ರೇಡ್ ಬುಧ್ಧದೇವ ಭಟ್ಟಾಚಾರ್ಯ ಹೀಗೆ ಒಟ್ಟಾರೆ ಸತತ ೩೫ ವರ್ಷಗಳ ಕಾಲ ಬ೦ಗಾಳವನ್ನು  ಅಭಿವೃಧ್ಧಿ (?)ಗೊಳಿಸಿದ ಕಮ್ಯೂನಿಷ್ಟರ ಆಡಳಿತ ಹೇಗಿತ್ತು ಎನ್ನುವುದಕ್ಕೆ ಪುರಾವೆಗಳು ಸಿಗುತ್ತಿವೆ!

ಮತ್ತಷ್ಟು ಓದು »

9
ಸೆಪ್ಟೆಂ

ಯಾರು ಅಪಾಯಕಾರಿ!?

– ಸಚಿನ್

ನಮ್ಮ ನಿಮ್ಮ ಮಧ್ಯೆಯಿರುವ ಕೆಲ ಎಡಬಿಡಂಗಿ ಗಳು ನಿನ್ನೆ ದೆಹಲಿ ಹೈಕೋರ್ಟ್ ನಲ್ಲಿ ನಡೆದ ಬಾಂಬ್ ಸ್ಪೋಟದ ಕುರಿತು ಒಂದು ಹೇಳಿಕೆ ಕೊಟ್ಟರು. ” ಬಿಜೆಪಿಗೆ ಅವಮಾನ ಆಗುವ ಸಂಧರ್ಭ ಗಳಲ್ಲಿ ಬಾಂಬ್ ಸ್ಪೋಟ ನಡೆಯುತ್ತಿದೆ ಹಾಗಾಗಿ ರೆಡ್ಡಿಯ ಬಂಧನದ ಸಂಧರ್ಭ ದಲ್ಲಿ ಈ ಸ್ಪೋಟ ನಡೆದಿರುವುದು ಹಲವಾರು ಉಹಾಪೋಹಗಳಿಗೆ ಎಡೆ ಮಾಡಿಕೊಡುತ್ತಿದೆ. ಕರ್ನಲ್ ಪುರೋಹಿತ್ ಮತ್ತು ಸಾಧ್ವಿ ಪ್ರಜ್ಯಾ ಸಿಂಗ್ ನಡೆಸಿದ ಬಾಂಬ್ ಸ್ಪೋಟಗಳೇ ಇದಕ್ಕೆ ಸಾಕ್ಷಿ. ಅಣ್ಣಾ ಹಜಾರೆ ಮತ್ತು ರೆಡ್ಡಿ ಬಂಧನದ ಅಬ್ಬರ ಗಳಿಗಿಂತ ಹೆಚ್ಚಿನರೀತಿಯಲ್ಲಿ ಬಿಜೆಪಿ ದೇಶ ಭಕ್ತರು ಕಿರುಚಾಟಗಳನ್ನು ಶುರುಮಾಡ್ತಾರೆ ನೋಡ್ತಾಯಿರಿ” ಎಂದು ಎರಡು ಲೈನ್ ಬರೆದು ತಮ್ಮ ಮನಸ್ಸಿನಲ್ಲಿರುವ ಅಸಹ್ಯವನ್ನು ಹೊರಹಾಕಿದರು.

ಸ್ನೇಹಿತರೇ ನಾವು ಗಮನಿಸ ಬೇಕಾದ ಮುಖ್ಯವಾದ ಅಂಶವೆಂದರೆ ಈಗ ನಡೆಯುತ್ತಿರುವುದು ಭಯೋತ್ಪಾದಕರು ಮತ್ತು ಭಾರತ ದೇಶದ ಮಧ್ಯೆ ಯುದ್ದ, ಈ ಯುದ್ದ ದಲ್ಲಿ  ಭಯೋತ್ಪಾದಕರು ವಿಜಯಿಯಾಗುತಿದ್ದಾರೆ. ಈ ಭಯೋತ್ಪಾದನೆ ಕೃತ್ಯಗಳನ್ನ ಯಾವುದೇ ದೇಶ ಸುಮ್ಮನೆ ಸಹಿಸಿ ಕೊಳ್ಳುವುದಿಲ್ಲ. ಹಾಗು ಕೃತ್ಯ ನಡೆಸಿದವರಿಗೆ ಸರಿಯಾದ ಶಿಕ್ಷೆ ಕೊಡುವ ವ್ಯವಸ್ಥೆ ಬೇರೆ ದೇಶಗಳಲ್ಲಿದೆ. ಒಂದು ಸಣ್ಣ ಪ್ರಮಾದ ದಿಂದ ಬೆಂಗಳೂರಿನ ವೈದ್ಯ ಹನೀಫ್ ಆಸ್ಟ್ರೇಲಿಯಾದಲ್ಲಿ ಹೇಗೆ ನರಳಿದ ಎಂದು ನಮಗೆ ಗೊತ್ತಿಲ್ಲವೆ.

ಪಕ್ಷಗಳನ್ನು ಸಮರ್ಥಿಸಿಕೊಂಡು ಜಗಳವಾಡುವ ಸಮಯ ಇದಲ್ಲ. ಸುಮ್ಮನೆ ವಿತಂಡವಾದ ಮಾಡಿ ಎಲ್ಲದಕ್ಕು ಒಂದೊಂದು ಸಂಭಂದ ಕಲ್ಪಿಸಿ ನಿಮ್ಮ ಹೊಲಸನ್ನು ಕಾರಬೇಡಿ. ನಿಮ್ಮ ಭಂಡತನದ ನಿಲುವುಗಳು ಏನೆಂದು ಅಣ್ಣಾ ಹಜಾರೆ ಹೋರಾಟದ ಸಂಧರ್ಭದಲ್ಲಿ ನಮ್ಮ ಭಾರತದ ಎಲ್ಲ ಸತ್ಪ್ರಜೆಗಳಿಗೆ ಗೊತ್ತಾಗಿವೆ.

 

ಮತ್ತಷ್ಟು ಓದು »