ವಿಷಯದ ವಿವರಗಳಿಗೆ ದಾಟಿರಿ

parupattedara ರವರಿಂದ ಪ್ರಕಟಿತ

10
ಆಕ್ಟೋ

ಅಭಿವೃದ್ಧಿಯ ಸೋಗಿನಲ್ಲಿ ನಶಿಸುತ್ತಿರುವ ನನ್ನೂರು !!

ಅಶೋಕ್ ಕುಮಾರ್ ವಳದೂರು (ಅಕುವ)

ಉಡುಪಿ ಜಿಲ್ಲೆಯ ಕಾಪು ವ್ಯಾಪ್ತಿಯಲ್ಲಿ ಬರುವ ಪಾದೂರು ಈಗ ಜನಜನಿತ. ಪಾದೂರು ಮಜೂರು ರಸ್ತೆಯಲ್ಲಿ ಇಂದು ಜನರಿಗಿಂತ  ಟಿಪ್ಪರ್ ಗಳ ಓಡಾಟವೇ ಜಾಸ್ತಿಯಾಗಿದೆ. ಅಭಿವೃದ್ಧಿಯ  ಹೆಸರಿನಲ್ಲಿ  ಧೂಳೆಬ್ಬಿಸಿ, ಕೆಸರು ರಟ್ಟಿಸಿ ಓಡುವ ಟಿಪ್ಪರ್ ಗಳ ರೋಷದೆದುರು ನಾಗರಿಕರ ಜೀವನದ ಗತಿ ಕ್ಷಿಣಿಸಿದೆ.ಪಾದೂರು ಸುತ್ತಮುತ್ತಲ ಊರವರಿಗೆ ತಾವು ಎನೋ ಕಳೆದುಕೊಂಡ ಕಳವಳ.ಪಾದೂರಿನ ಗುಡ್ಡೆಯಲ್ಲಿ ಕುಪ್ಪಳಿಸಿದ ಆ ದಿನಗಳು ಇನ್ನು ಕೇವಲ ನೆನಪು ಮಾತ್ರ. ಆ ಅಡ್ಡ ಪಾದೆಯ ಜಾರು ಬಂಡಿಯು ಇನ್ನು ಇತಿಹಾಸ. “ಪೆಚ್ಚು ಗಟ್ಟಿಸುವ ಹುಲಿ ಗುಹೆ ” ಮಾಯವಾಗಿದೆ. ಆಶಾಡ (ಆಟಿ ತಿಂಗಳು)ದಲ್ಲಿ ಆ ಬಿರುಸು ಮಳೆಗೆ ಹಸಿರು ಸೊಪ್ಪಿಗಾಗಿ ಜಾತ್ರೆಯಂತೆ ಪಾದೂರಿನ ಗುಡ್ದೆಯಲ್ಲಿ ಸೇರುತ್ತಿದ್ದ ಜನಜಾತ್ರೆ ಯಾವತ್ತೊ ಮಾಯವಾಗಿದೆ.ದನ,ಕೋಣ,ಜಾನುವಾರುಗಳ ಮೇವು  ಹುಲ್ಲಿನ ಆಗಾಧ ಪಾದೂರು ಗುಡ್ದೆ ಅಭಿವೃದ್ಧಿಯ ಕರಡಾತನದಲ್ಲಿ ಬರಡಾಗುತ್ತಿದೆ. ಚಿಕ್ಕಂದಿನಿಂದ ಗುಡ್ಡೆಯ ಸಂದು ಬಿಡದೆ ಓಡಾಡಿದ, ನಲಿದಾಡಿದ,ಕೇಕೆ ಹಾಕಿ ಕುಣಿದ ನಮಗೆ ನಮ್ಮ ಮೌಂಟ್ ಎವರೆಸ್ಟ್ ಆಗಿದ್ದ “ಉಕ್ಕುಡ” ಅತಿ ಎತ್ತರದ ಬಂಡೆಯಾಗಿತ್ತು.ಈ ಉಕ್ಕುಡ ಬಂಡೆಯ ನೆತ್ತಿ ಏರುವುದು ಸಾಹಸದ ಕೆಲಸವೇ ಆಗಿತ್ತು. ಅದರ ತುತ್ತ ತುದಿಯಿಂದ ಪಶ್ಚಿಮಕ್ಕೆ ಕಾಪು ದೀಪ ಸ್ಥಂಬ, ಉತ್ತರಕ್ಕೆ ಶ್ರೀಕ್ಷೇತ್ರ ಕುಂಜಾರು ಗಿರಿಯ ದರ್ಶನವಾಗುತಿತ್ತು.ಮಳೆಯ ನೀರು ರಭಸದಿಂದ ಹರಿದು ನರ್ಸಿಕೆರೆಯೇ ಮಹಾಸಾಗರವಾಗುತಿತ್ತು. ಈಗ ಎಲ್ಲಾ ಮಾಯವಾಗಿದೆ. ನರ್ಸಿಕೆರೆ ಮಣ್ಣು ತುಂಬಿ ಹೇಳಹೆಸರಿಲ್ಲದಂತಾಗಿದೆ. ಕೃಷಿಕಾರ್ಯದಲ್ಲಿ ಸದಾ ಮಗ್ನವಾಗುತ್ತಾ ನೆಮ್ಮದಿಯಿಂದ ಉತ್ತದ್ದನ್ನು ಸಂತೋಷವಾಗಿ ಸಂಭ್ರಮಿಸುತ್ತಿದ್ದ ನನ್ನ ಊರಿನ(ವಳದೂರಿನ) ಜನರಿಗೆ ಪ್ರಾಣಸಂಕಟವಾಗಿ ಮಾರಕವಾಗಿದೆ ಪಾದೂರಿನಲ್ಲಿ ಸ್ಥಾಪನೆಯಾಗುತ್ತಿರುವ ತೈಲ ಸಂಗ್ರಹಣ ಘಟಕ.

ಮತ್ತಷ್ಟು ಓದು »

9
ಆಕ್ಟೋ

ಟೆಕ್ಕಿಗಳಿಂದ ಕನ್ನಡ ಹಾಸ್ಯ ನಾಟಕೋತ್ಸವ

ಪವನ್ ಪಾರುಪತ್ತೇದಾರ

ಪ್ರತಿದಿನ C++, Java,.net ಸರ್ವರ್ರುಗಳ ಮಧ್ಯೆ ಇರುವ ಸಾಫ್ಟ್ವೇರ್ ಇಂಜಿನಿಯರುಗಳ ತಂಡವೇ ರಂಗತಂತ್ರ. 2008ರಲ್ಲಿ ಸ್ಥಾಪಿತವಾದ ಈ ತಂಡ, ಹವ್ಯಾಸಿ ನಾಟಕಕಾರರನ್ನು ಹೊಂದಿದ್ದು, ಇಲ್ಲಿಯವರೆಗೂ 8 ಪ್ರದರ್ಶನಗಳನ್ನು ನೀಡಿದೆ. ಈ ಹವ್ಯಾಸಿ ಟೆಕ್ಕಿ ಕಲಾವಿದರು ತಮ್ಮ ಕಚೇರಿಯ ಬಿಡುವಿಲ್ಲದ ಸಮಯದ ಮಧ್ಯೆ, ತಮ್ಮ ವೀಕೆಂಡುಗಳನ್ನೆಲ್ಲ ಬದಿಗಿಟ್ಟು, ಬಹಳಷ್ಟು ಕಷ್ಟ ಪಟ್ಟು ಅಭ್ಯಾಸ ಮಾಡಿ, ಅಕ್ಟೋಬರ್ ತಿಂಗಳಲ್ಲಿ ನಿಮ್ಮ ಮುಂದೆ ಹಾಸ್ಯ ನಾಟಕೋತ್ಸವ ನಡೆಸಲು ಸಜ್ಜಾಗಿದ್ದಾರೆ.

ತಂಡದ ಮೇಷ್ಟ್ರು ಮಹದೇವ್ ಪ್ರಸಾದ್ ಯುವಪಡೆಯೊಂದನ್ನು ಸಜ್ಜು ಮಾಡಿಕೊಂಡಿದ್ದು, ನಾಟಕ ಪ್ರಿಯರಿಗೆ ನಗೆಯ ಹಬ್ಬದೂಟ ಬಡಿಸಲು ತಯಾರಿ ನಡೆಸುತಿದ್ದಾರೆ. ಲಾಕ್ ಔಟ್ ಅಲ್ಲ ನಾಕೌಟ್, ಶ್ರೀ ಕೃಷ್ಣ ಸಂಧಾನ ಮತ್ತು ಬಂಡ್ವಾಳವಿಲ್ಲದ ಬಡಾಯಿಯಂತಹ ಪ್ರಸಿದ್ಧ ಹಾಸ್ಯ ನಾಟಕಗಳನ್ನು ನಿಮ್ಮ ಮುಂದಿಡಲು ಕಾತುರದಿಂದ ಕಾಯುತಿದ್ದಾರೆ. ನಾಟಕ ಪ್ರಿಯರೆಲ್ಲ ಬಂದು ಸಾಫ್ಟ್ ವೇರ್ ಟೆಕ್ಕಿಗಳ ಪ್ರಯತ್ನವನ್ನು ಪ್ರೋತ್ಸಾಹಿಸಿ ಹರಸಬೇಕಾಗಿ ವಿನಂತಿ.

ನಾಟಕ ಪ್ರದರ್ಶನ ನಡೆಯುವ ದಿನಾಂಕಗಳು ಕೆಳಗಿನಂತಿವೆ.

ಅಕ್ಟೋಬರ್ 12 – ಶ್ರೀ ಕೃಷ್ಣ ಸಂಧಾನ

ಅಕ್ಟೋಬರ್ 13 – ಬಂಡ್ವಾಳವಿಲ್ಲದ ಬಡಾಯಿ

ಶ್ರೀ ಕೃಷ್ಣ ಸಂಧಾನ : ರಚನೆ : ವಿ ಎನ್ ಅಶ್ವಥ್

ವಿದ್ಯೆ ಇಲ್ಲದ ಹಳ್ಳಿ ಜನ ನಾಟಕ ಮಾಡಲು ಹೊರಟಾಗ ಎದುರಾಗುವ ಛಾಲೆಂಜುಗಳೇನು, ಅ ಹಳ್ಳಿ ಜನಕ್ಕೆ ನಾಟಕ ಹೇಳಿಕೊಡಲು ಬರುವ ಮೇಷ್ಟ್ರಿಗೆ ಅದರ ಅರಿವಿರೋದಿಲ್ಲ. ಬಂದು ಇವ್ರಿಗೆ ನಾಟಕ ಹೇಳಿಕೊಡಕ್ಕೆ ಶುರು ಮಾಡಿ ಗೆಜ್ಜೆಗ್ ಪೂಜೆ ಮಾಡ್ಸೋ ಅಷ್ಟ್ರಲ್ಲಿ ಮೇಷ್ಟ್ರು ಗೋಳು ಕೇಳಕ್ಕಾಗಲ್ಲ. ಅಂತಹ ಮೇಷ್ಟ್ರು ಮತ್ತೆ ಶಿಶ್ಯಂದಿರ ನಡುವೆ ನಡೆವ ನಗೆ ನಾಟಕ ಕೃಷ್ಣ ಸಂಧಾನ. ಈ ನಾಟಕ ಈಗಾಗ್ಲೆ ಕನ್ನಡದ ನಾಟಕ ಪ್ರಿಯರಿಗೆಲ್ಲ ಚಿರಪರಿಚಿತ. ಆದಕ್ಕೆ ಕಾರಣ ನಾಟಕದ ಪ್ರತಿಯೊಂದು ಸಾಲಿನಲ್ಲು ಇರುವ ನಗೆಮಿಠಾಯಿ ಅಂದ್ರೆ ತಪ್ಪಾಲ್ಲ ಬಿಡಿ. ನಾಟಕದ ಪ್ರತಿಯೊಂದು ಲೈನ್ ಸಹ ಪಂಚ್ ಲೈನ್. ನೀವೆಷ್ಟು ಬಾರಿ ನೋಡಿದರೂ ಬೇಜಾರಾಗದ ನಾಟಕ ಇದು. ಇಂತಹ ನಗೆಯ ರಸಾಯನ ಸಹ ರಂಗತಂತ್ರದ ಹಾಸ್ಯೋತ್ಸವದ ಕೊಡುಗೆ. 

ಮತ್ತಷ್ಟು ಓದು »

16
ಸೆಪ್ಟೆಂ

ಕಾಯಕ ಯೋಗಿಗೊಂದು ನಮನ

ಮಧುಚಂದ್ರ ಭದ್ರಾವತಿ

ಭರತ ಖಂಡದ ಅಸಂಖ್ಯ ಭೂ ಪ್ರದೇಶಕ್ಕೆ ನೀರು ಹರಿಸಿದ  ಇವರನ್ನು  ಭಗೀರಥನೆನ್ನ ಬೇಕೆ?.  ಪ್ರತಿಯೊಬ್ಬ ಪ್ರಜೆಗೆ ಮೂಲಭೂತ ಹಕ್ಕಾದ ಶಿಕ್ಷಣವನ್ನು ನೀಡಲು ಶ್ರಮಿಸಿದ ಸರಸ್ವತಿ ಪುತ್ರನೆನ್ನ  ಬೇಕೆ ?  ಭರತ ಖಂಡವೇ ಆಂಗ್ಲರ ವಿರುದ್ದ ಹೋರಾಟ ಮಾಡುತ್ತಿದ್ದಾಗ ಅದೇ ಅಂಗ್ಲರನ್ನು ಉಪಯೋಗಿಸಿಕೊಂಡು ದೇಶದ ಅಭಿರುದ್ದಿಗೆ ಶ್ರಮಿಸಿದ ಚಾಣಾಕ್ಯನೆನ್ನ ಬೇಕೆ? ಅತ್ತ ಕಡೆ ಪರಕೀಯರು, ಇತ್ತ ಕಡೆ ದೂರ ದೃಷ್ಟಿಯಿಲ್ಲದ ಸ್ವದೇಶಿಯರು, ಸಾಲದೇ ಪ್ರಾಮಾಣಿಕತೆಯಿಲ್ಲದ  ಅಧಿಕಾರಿಗಳ ವರ್ಗ ಅವರೆಲ್ಲರನ್ನು ಮೀರಿ ಕಾರ್ಯ ಸಾಧನೆ ಮಾಡಿದ ಭೀಷ್ಮನೆ ?. ಆಂಗ್ಲರು ತಮ್ಮ ಸಚಿವ ಮಂಡಳಿಯಲ್ಲಿ ನೀಡಿದ ಸಚಿವ ಸ್ಥಾನವನ್ನು ನಯವಾಗಿ ನಿರಾಕರಿಸಿ ದೇಶಪ್ರೇಮ ಮೆರದ ದೇಶಭಕ್ತನೆ?.ಕೇವಲ ಭರತ  ಖಂಡಕ್ಕೆ ಅಲ್ಲದೆ ಇಡಿ ವಿಶ್ವದ ಮನುಕುಲದ ಉದ್ದಾರಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡ ವಿಶ್ವಮಾನವನೆನ್ನ ಬೇಕೆ ?.. 
 
ನಾ ಅರಿಯೇ.

ಮತ್ತಷ್ಟು ಓದು »

13
ಸೆಪ್ಟೆಂ

ಕೈ ಹಿಡಿದವಳು…..!!

ಸೂರ್ಯ ಅವಿ

ಅವಳಿಗಾಗಿ ನಾನು ಕಾದು ಕುಳಿತಿದ್ದೆ. ಅದು ಮಳೆಗಾಲದ ದಿನಗಳು. ಅವಳು, ಇಂದು ಭೇಟಿ ಆಗುತ್ತೇನೆ ಎಂದು ಕರೆ ಮಾಡಿ ಹೇಳಿದಳು. ಸೂರ್ಯ ತನ್ನ ದಿನ ನಿತ್ಯದ ಕೆಲಸ ಮುಗಿಸಿ ಉಷೆಗೆ ಕೆಂಪು powder ಹಚ್ಚಿ ಬೆಳಕಿನ ರಂಗಿನಾಟ ಮುಗಿಸಿ ಮೆಲ್ಲಮೆಲ್ಲಗೆ ದೂರ ದಿಗಂತದಿ ಜಾರಿಕೊಂಡ. ಬಹು ದೂರದಲ್ಲಿ ಕಪ್ಪು ಮೋಡಗಳು ಮಳೆ ಹನಿಗಳ ತುಂಬಿಕೊಂಡು, ಗರ್ಭಿಣಿಯಂತೆ ಹೆಜ್ಜೆ ಇಡುತ್ತ, ಮುಗಿಲ ಸರೋವರದಿ ಒಮ್ಮೆಗೆ ಧಾವಿಸಿದವು. ಬೀಸುತಿದ್ದ ಗಾಳಿಯ ರಭಸಕ್ಕೆ ಅಲ್ಲೊಂದು ಇಲ್ಲೊಂದು ಪುಟ್ಟ ಹಕ್ಕಿಗಳು ತಮ್ಮ ಗೂಡು ಸೇರಿಕೊಳ್ಳಲಾರಂಭಿಸಿದವು .ದಿಟ್ಟ ಕಾಗೆಯೊಂದು ಗಾಳಿಯ ರಭಸದೆಡೆಗೆ ಸೂತ್ರ ಮುರಿದ ಗಾಳಿಪಟದ ಹಾಗೆ ಅತ್ತಿತ್ತ ತೇಲುತ್ತ ಮುಂದೆ ಹಾರಿತು…

ಎಷ್ಟು ಸಮಯವಾದರೂ ಅವಳ ಸುಳಿವು ಇರಲಿಲ್ಲ, ಬೀದಿಯ ಕಡೆ ನೋಡಿದರೂ ಅವಳು ಬರುವ ಮುನ್ಸೂಚನೆ ಇರಲಿಲ್ಲ. ತಕ್ಷಣಕ್ಕೆ ಗುಡುಗಿನ ಶಬ್ದ ಕೇಳಿ ಬಂತು. ತಲೆಯೆತ್ತಿ ಮೇಲೆ ನೋಡಿದೆ. ಮೋಡಗಳ ಗರ್ಭದಿಂದ ಭಾವದ್ಗೊನನವಾದ ಮೊದಲ ಮಳೆ ಹನಿ ನನ್ನ ಕಣ್ಣ ರೆಪ್ಪೆ ಮೇಲೆ ಬಂದು ತಾಕಿತು. ಪುಟ್ಟ ಮಗುವಿನ ಹಾಗೆ ಕಣ್ಣ ಉಜ್ಜಿಕೊಂಡು ತಲೆ ಎತ್ತಿದೆ, ಇದಕ್ಕಿದ್ದ ಹಾಗೆ ಅಸಂಖ್ಯಾತ , ಕೋಟಿ ಕೋಟಿ ಮಳೆ ಹನಿಗಳ ರಾಶಿ ಒಮ್ಮೆಗೆ ಭೂಮಿಯೆಡೆಗೆ ಧಾವಿಸಿದವು, ಚಿಟರ್ ಪಟರ್ ಎಂದು ಸದ್ದು ಮಾಡುತ್ತ ವಾತಾವರಣದಿ ತುಂಬಿದ ಮೌನವ ಮುರಿದವು.

ಮತ್ತಷ್ಟು ಓದು »

10
ಸೆಪ್ಟೆಂ

ರಾಂಬೋ ಮೇನಿಯಾ.. ಶರಣ್ ದೇ ದುನಿಯಾ

ಫಿಲ್ಮಿ ಪವನ್

ಈ ನಡುವೆ ಯಾಕೋ ಲೇಖನ ಅಂದ್ರೆ ಸ್ವಲ್ಪ ಸೋಂಬೇರಿಯಾಗಿಬಿಡುತಿದ್ದೆ, ಸುಲಭವಾಗಿ ಕವನ ಬರೆದುಬಿಡೋಣ, ಯಾರು ಅಷ್ಟುದ್ದ ಟೈಪ್ ಮಾಡೋರು ಅನ್ನೋ ಆಲಸಿತನ. ಆದ್ರು ಈ ಸಿನಿಮಾ ನಂಗೆ ಬಹಳಾ ಹತ್ತಿರವಾಗಿದ್ದು ಮತ್ತೆ ತುಂಬಾ ಚೆನ್ನಾಗಿರೋದ್ರಿಂದ ಸುಮಾರು ದಿನಗಳ ಮೇಲೆ ಸಿನಿಮಾ ಲೇಖನ ಬರೀತಿದ್ದೀನಿ.

 ಶರಣು ಶರಣಾರ್ಥಿ ಅಂತ ತೆರೆಮೇಲೆ ಒಂದು ಪತ್ರ ಕಡೆಯಲ್ಲಿ ಶರಣ್ ಹಸ್ತಾಕ್ಷರ ಹಿಂದೆ ಶರಣ್ ಕಂಠ ಸಿನಿಮಾ ಪ್ರಾರಂಭಕ್ಕೆ ಬಂದು ಶರಣ್ ಬಗ್ಗೆ ಒಂದಷ್ಟು ವಿಷಯಗಳು ತಿಳಿಯುತ್ತದೆ, ೯೯ ಸಿನಿಮಾಗಳು ಸಹಾಯಕ ನಟನಾಗಿ ದುಡಿದ ಶರಣ್, ನಾಯಕನಾಗಲು ಇಷ್ಟು ದಿನ ಯಾಕೆ ತೊಗೊಂಡ್ರು ಅಂತ ಒಮ್ಮೆ ಅನಿಸಿದ್ರೆ ಅದ್ರಲ್ಲಿ ತಪ್ಪೇನು ಇಲ್ಲ, ಶರಣ್ ನೂರನೆ ಚಿತ್ರ ಅವರದೇ ಬ್ಯಾನರ್ ನಲ್ಲಿ ಬಂದಿರೋದು ನಿಜಕ್ಕು ಅವರಿಗೇ ಹೆಮ್ಮೆ, ಲಡ್ಡು ಪ್ರೊಡಕ್ಷನ್ಸ್ ಅಂತ ಹೆಸರಿಟ್ಟಾಗಲೆ ಇವರ ಸಿನಿಮಾ ಹಿಟ್ ಆಗಿತ್ತು ಅನ್ಸುತ್ತೆ, ಯಾಕಂದ್ರೆ ಆ ಪ್ರೊಡಕ್ಷನ್ ಹೆಸರು ನೋಡಿದೊಡನೆ ಚಿತ್ರಮಂದಿರದಲ್ಲಿ ಒಮ್ಮೆ ನೆಗೆಯ ಬುಗ್ಗೆ ಒಡೆದಿತ್ತು.

ಮತ್ತಷ್ಟು ಓದು »

10
ಸೆಪ್ಟೆಂ

ಬೊಜ್ಜೋ…( ಕೊಂಕಣಿ ಕವನ )

ಪರೇಶ್ ಸರಾಫ್

ಹಾತ್ತಿ ಹಾತ್ತಿ ಫುಲ್ಲಾಚೆ ಹಾರು
ತೊಂಡಾoತು ತುಳ್ಸಿ ಉದಾ
ಪೆಟೆಲೇ ತಾಕ್ಕ ಮೆರವಣಿಗೇರಿ
ಪೂತ್ ಆನಿ ಸೂನ್ ರಡ್ತಾ ಅಸಾಚಿ
ಕಷ್ಟ ಪಾವ್ನ್ ದೋಳೆ ಉದಾ ಹಾಡೋನ್
ಬಾಯ್ಲ್ ರಡ್ತಾ ಅಸ್ಸ ಪಾಪ-
ಬಾಮ್ಮುಣ್ ನಾ ಆಶಿಲ್ ಘರಾಂತ್
ಹಾವ ಆಸುನ್ ಭೀ ನಾ ಅಷಿಲ್ ತಷಿ ಮೋಣು
 

ಮತ್ತಷ್ಟು ಓದು »

11
ಆಗಸ್ಟ್

ಆಳುವವರ ತಲೆ ಕೆಟ್ಟರೆ ಹಾಳು ನಿರ್ಧಾರಗಳನ್ನೇ ತೆಗೆದುಕೊಳ್ಳೋದು

ರಾಘವೇಂದ್ರ ನಾವಡ
ಮೊಹಮ್ಮದ್ ಬಿನ್ ತುಘಲಕ್ ಒಬ್ಬ ವಿದ್ವಾ೦ಸ ಆದರೆ ಹುಚ್ಚ!! ಅವನ ಆಡಳಿತದಲ್ಲಿ ತೆಗೆದುಕೊ೦ಡ ರಾಜಧಾನಿ ಬದಲಾವಣೆ ಮತ್ತಿತರ ನಿರ್ಧಾರಗಳಿ೦ದ ರಾಜ್ಯ ಜನತೆಗೆ ಹಾಗೂ ಬೊಕ್ಕಸಕ್ಕೆ ಆದ ಹಾನಿ ಅಪಾರ ಅ೦ತೆಯೇಅವನನ್ನು “ ವಿರೋಧಾಭಾಸಗಳ ಮಿಶ್ರಣ“ ವೇ೦ದೇ ಇತಿಹಾಸದಲ್ಲಿ ಗುರುತಿಸಲಾಗುತ್ತದೆ!

ಈ ವರ್ಷ ಕರ್ನಾಟಕದ ಸುಮಾರು ೧೦೦ ಕ್ಕೂ ಹೆಚ್ಚು ಹಳ್ಳಿಗಳು ಬರದಲ್ಲಿ ಮುಳುಗಿವೆ. ರೈತ ತಲೆಯ ಮೇಲೆ ಕೈ ಹೊತ್ತು ಕುಳಿತ್ತಿದ್ದಾನೆ. ಕೆಲವು ಕಡೆ ಸಿಕ್ಕಾಪಟ್ಟೆ ಮಳೆ.. ಇನ್ನು ಕೆಲವು ಕಡೆ ಮಳೆನೇ ಇಲ್ಲಾ.  ಸುಮಾರು ಮೂರ್ನಾಲ್ಕು ದಿನಗಳಿ೦ದ ದಿನ ಪತ್ರಿಕೆಗಳು- ದೃಶ್ಯ ಮಾಧ್ಯಮಗಳೆಲ್ಲವೂ ಕೆಲವೊ೦ದು ಕಡೆ ಸಿಕ್ಕಾಪಟ್ತೆ ಮಳೆ ಆಗುತ್ತಿರುವ, ಭದ್ರಾ, ಕಬಿನಿ, ಹಾರ೦ಗಿ , ಆಲಮಟ್ತಿ ಜಲಾಶಯಗಳೆಲ್ಲಾ ಭರ್ತಿಯಾಉತ್ತಿರುವ ವಿಚಾರಗಳನ್ನು ಬಿತ್ತರಿಸುತ್ತಿವೆ. ಆದರೆ ಈ ವರ್ಷ ವಾಡಿಕೆಗಿ೦ತಲೂ ಅರ್ಧದಷ್ಟು ಮಳೆ ಕಡಿಮೆಯಾಗಿದೆ. ನಮ್ಮಲ್ಲಿಯೇ ಇಷ್ಟೊತ್ತಿಗೆ ಸುಮಾರು ೧೦೦ ಇ೦ಚು ಮಳೆಯಾಗಿ ಬಿಡಬೇಕಿತ್ತು.. ನಮ್ಮಲ್ಲಿನ್ನೂ ಅದು ೫-೬೦ ಇ೦ಚುಗಳಲ್ಲೇ ತೆವಳಾಡುತ್ತಿದೆ! ಇನ್ನೊ೦ದು ಮಾತೇನೆ೦ದರೆ ಈ ವರ್ಷ ಮಳೆಯಾಗುವ ಸಮಯದಲ್ಲಿ ಮಳೆಯಾಗಲಿಲ್ಲ. ಮಾನ್ ಸೂನ್ ಆಗಮನ ಬಹಳ ತಡವಾಯಿತು! ಬಹಳ ತಡವಾಗಿ ಮಳೆ ತನ್ನ ಲಯ ಕ೦ಡುಕೊ೦ಡಿದೆ!

ಮತ್ತಷ್ಟು ಓದು »

15
ಮೇ

ಉದ್ಯೋಗಾವಕಾಶ : ೨ ರಿಂದ ೫ ವರ್ಷ ಅನುಭವವಿರುವವರಿಗೆ ಕನ್ನಡಿಗರಿಗೆ

ಗೆಳೆಯರೆ, ಸೀಮೆನ್ಸ್ ಟೆಕ್ನಾಲಾಜಿಕಲ್ ಸೆರ್ವೀಸೆಸ್ ನಲ್ಲಿ ಡಿ.ಬಿ.ಎ/ಎಸ್. ಕ್ಯೂ. ಎಲ್ ಅಥವಾ ಡಾಟಾ ವೇರ್ ಹೌಸಿಂಗ್ ನಲ್ಲಿ ಎರಡರಿಂದ ಐದು ವರ್ಷ ಅನುಭವ ಇರುವ ಇಂಜಿನಿಯರ್ ಗಳಿಗೆ ಅವಕಾಶವಿದೆ. ಕನ್ನಡಿಗರಿಗೆ ಮಾತ್ರ ಈ ಅವಕಾಶ ಸೀಮಿತವಾಗಲಿ. ನಿಮ್ಮ ಪರಿಚಯಪತ್ರವನ್ನು ದಿನಾಂಕ ೨೧-೦೫-೨೦೧೨ ರ ಒಳಗೆ pavanDotan86ATgmaildotcom ಗೆ ಕಳುಹಿಸಿ. ದಯವಿಟ್ಟು ಕನ್ನಡಿಗರಲ್ಲದವರ ಪರಿಚಯ ಪತ್ರ ಬೇಡ.

ಉದ್ಯೋಗದ ಸ್ಥಳ : ಬೆಂಗಳೂರು

7
ಮೇ

ಅವಿವೇಕಿ ಮಿತ್ರನಿಗಿಂತ ವಿವೇಕಿ ಶತ್ರು ಮೇಲು

ಪವನ್ ಪಾರುಪತ್ತೇದಾರ

ಪ್ರವೀಣ ಓದೋ ವಿಷಯದಲ್ಲಿ ಯಾವಾಗ್ಲೂ ಸೋಂಬೇರಿ,ಅಪ್ಪ ಅಮ್ಮ ಎಷ್ಟು ಬೈದರೂ ತನ್ನ ಲೋಕದಲ್ಲೇ ಮಗ್ನ, ಸ್ನೇಹಿತರ ಜೊತೆ ಯಾವಾಗ್ಲೂ ತಿರುಗಾಡೋದು, ಅಪ್ಪ ಅಮ್ಮನ ಹತ್ರ ಹಣ ತೆಗೆದುಕೊಂಡು ಸಿನಿಮಾ ನೋಡೋದು, ಭಾನುವಾರ ಬಂದ್ರೆ ಸಾಕು ಬೆಳಿಗ್ಗೆ ಇಂದ ಸಂಜೆಯವರೆಗೂ ಬೆಟ್ಟಿಂಗ್ನಲ್ಲಿ ಕ್ರಿಕೆಟ್ ಆಡೋದು ಇದೇ ಕೆಲಸ, ಅಪ್ಪ ಅಮ್ಮನಿಗೂ ಬುದ್ಧಿ ಹೇಳಿ ಹೇಳಿ ಸುಸ್ತಾಗಿತ್ತು. ಹುಡುಗ್ರ ಸಹವಾಸ ಬರೀ ಆಡುವುದಕ್ಕೆ ಸೀಮಿತವಾಗದೆ ದುಶ್ಚಟಗಳ ಕಡೆಯೂ ಸಹ ವಾಲಿತ್ತು. ಮನೆಗೆ ಬಂದಾಗ ಒಮ್ಮೆ ಧೂಮಪಾನದ ಘಮಲು ಅಮ್ಮನ ಮೂಗು ಬಡಿದಿತ್ತು. ಆಗಾಗ ಅಪ್ಪನ ಜೇಬಿನಿಂದ ನೋಟುಗಳು ಸಹ ಕಾಣೆಯಾಗುತಿದ್ದವು. ಅಪ್ಪ ಅಮ್ಮ ಇಬ್ಬರು ಚರ್ಚಿಸಿ ಏನು ಮಾಡುವುದು ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದರು.

ಮರುದಿನ ಭಾನುವಾರ ಪ್ರವೀಣ ಎಂದಿನಂತೆ ಹೇಳದೆ ಕೇಳದೆ ಕ್ರಿಕೆಟ್ ಆಡಲು ಹೊರಟು ಬಿಟ್ಟ, ಅಪ್ಪ ಅಮ್ಮ ಸೀದ ಅವರಪ್ಪನ ಮನೆಗೆ ಹೋಗಿ ಪ್ರವೀಣನ ತಾತನನ್ನು ಕರೆ ತಂದರು. ತಾತನಿಗೆ ವಯಸ್ಸು ಸುಮಾರು ೭೦ ಆಗಿದ್ದರು ಬಹಳ ಚುರುಕು, ಕಾಲ ಕಾಲಕ್ಕೆ ತಾನು ಸಹ ಬದಲಾಗಿದ್ದಂತಹ ಘಾಟಿ ಮುದುಕ. ಕಂಪ್ಯೂಟರ್, ಕ್ರಿಕೆಟ್, ಸಿನಿಮಾ ಎಲ್ಲಾದ್ರಲ್ಲು ಎತ್ತಿದ ಕೈ. ಕ್ರಿಕೆಟ್ ಆಡಲು ಹೋಗಿದ್ದ ಪ್ರವೀಣ ಎಂದಿನಂತೆ ಮನೆಗೆ ಬಂದ, ಬಂದೊಡನೆ ತಾತನನ್ನು ನೋಡಿ ಆಶ್ಚರ್ಯ ಚಕಿತನಾದ, ತಾತನ ಕಾಲಿಗೆ ನಮಸ್ಕಾರ ಮಾಡೋ ಅಂತ ಅಪ್ಪ ಹೇಳೋ ತನಕ ಇವ್ನಿಗೆ ತೋಚಲಿಲ್ಲ, ಮಾಡ್ತೀನಿ ಕೈ ಕಾಲು ತೊಳ್ಕೊಂದು ಬಂದೆ ಅಂತ ಸ್ನಾನದ ಮನೆಗೆ ಹೋಗಿ ಟೂತ್ ಪೇಸ್ಟ್ ನ ಒಂದಷ್ಟು ಬಾಯಿಗೆ ಹಾಕಿಕೊಂಡು ಮುಕ್ಕಳಿಸಿ ಬಂದ, ಬಂದೊಡನೆ ನಮಸ್ಕಾರ ಮಾಡಿದಾಗ ತಾತನಿಗೆ ಧೂಮಪಾನದ ಘಮಲು ತಿಳಿದು ಬಿಡ್ತು. ಅದೂ ಅಲ್ದೆ ಮೊದಲೇ ಪ್ರವೀಣನ ಅಪ್ಪ ಅಮ್ಮ ತಮ್ಮ ಮಗ ದಾರಿ ತಪ್ತಾ ಇದ್ದಾನೆ ಅನ್ನೋ ವಿಷಯ ಬೇರೆ ಮೊದಲೇ ಹೇಳಿದ್ರು. ವಿಷಯ ಗೊತ್ತಾದ್ರು ತಾತ ಮುಗುಮ್ಮನೆ ಇದ್ದರು.

ಮಾರನೆ ದಿನ ಪ್ರವೀಣ ಕಾಲೇಜಿಗೆ ಅಂತ ಹೊರಟಾಗ, ತಾತ ಸಹ ತಯಾರಾಗಿ ಮೊಮ್ಮಗನೊಂದಿಗೆ ಹೊರಡಲು ಸಿದ್ದರಾಗಿದ್ದರು, ಪ್ರವೀಣ ತಾತ ಹಾಗೆಲ್ಲ ನಿಮ್ಮನ್ನ ಕಾಲೇಜಿಗೆ ಬಿಡಲ್ಲ, ಬಹಳಾ ಶಿಸ್ತು ಅಲ್ಲಿ ಅಂತೆಲ್ಲ ಹೇಳ್ದ, ಅದಕ್ಕೆ ತಾತ ನಾ ನೋಡದೇ ಇರೋ ಕಾಲೇಜೇನೋ ಅದು, ನೀನ್ ಓದ್ತಾ ಇರೋ ಕಾಲೇಜು ನನ್ನ ಫೇಸ್ಬುಕ್ ಗೆಳೆಯ ಪ್ರಕಾಶ್ ರಾಜು ದು, ಅವರು ನಾನು ಇಲ್ಲಿಗೆ ಬಂದಿರೋ ಸ್ಟೇಟಸ್ ನೋಡಿದ್ರಂತೆ, ಫೋನ್ ಮಾಡಿದ್ರು ಅದಕ್ಕೆ ಬರ್ತಾ ಇದ್ದೀನಿ ಅಂತ ಪ್ರವೀಣಂಗೆ ಒಳ್ಳೆ ಟಾಂಗ್ ಕೊಟ್ಟ್ರು. ಪ್ರವೀಣನ ಮೊಬೈಲ್ ಗೆ ಅವನ ಗೆಳೆಯನ ಫೋನ್ ಬಂತು, ಏನ್ ಮಗಾ ಸಿನಿಮಾಗೆ ಟಿಕೆಟ್ ತೊಗೊಂಡು ಕಾಯ್ತಾ ಇದ್ದೀವಿ ಎಲ್ಲಿದ್ಯ ಇನ್ನ?? ಪ್ರವೀಣ,ತಾತನ ಜೊತೆ ಇದ್ದೀನಿ ಮಗಾ ಆಮೇಲೆ ಫೋನ್ ಮಾಡ್ತೀನಿ ಅಂದ. ಫೋನ್ ಕಟ್ ಆದ ಮೇಲೆ ತಾತ ಕೇಳಿದ್ರು ಏನು ಸಿನಿಮಾಗೆ ಹೋಗ್ಬೇಕ ಅಂತ, ಅದಕ್ಕೆ ಪ್ರವೀಣ ಹೌದು ನಿಮಗೆ ಹೇಗೆ ಗೊತ್ತಾಯ್ತು ತಾತ ಅಂದ, ಅದಕ್ಕೆ ರಾತ್ರಿ ನೀನು ನಿನ್ನ ಗೆಳೆಯನ ಜೊತೆ ಫೋನಲ್ಲಿ ಮಾತಾಡ್ತಾ ಇದ್ದಲ್ಲ ಆಗ ಕೇಳಿಸ್ತು ನಂಗೆ ಅಂದ್ರು. ಆದ್ರೆ ಕಾಲೇಜಿಗೆ ಚಕ್ಕರ್ ಹೊಡೆದು ಸಿನಿಮಾ ನೋಡೋದು ತಪ್ಪಲ್ವ ಅಂದ್ರು. ಪ್ರವೀಣನಿಗೆ ಉತ್ತರ ಕೊಡಲು ಆಗ್ಲಿಲ್ಲ, ಕಡೆಗೆ ತಾತ, ನಿನ್ ಸ್ನೇಹಿತನಿಗೆ ಫೋನ್ ಮಾಡಿ ಹೇಳು ನನಗೂ ಒಂದು ಟಿಕೆಟ್ ತೊಗೊ ಅಂತ ನಾನು ಬರ್ತೀನಿ ಅಂದ್ರು. ಪ್ರವೀಣನಿಗೆ ಒಂದು ಕಡೇ ಖುಷಿ ಆಯ್ತು ಮತ್ತೆ ಭಯ ಸಹ ಆಯ್ತು ಮನೇಲಿ ಹೇಳಿಬಿಟ್ರೆ ಅಂತ ಅಷ್ಟ್ರಲ್ಲಿ ತಾತ, ನೀನೇನು ಯೋಚಿಸ ಬೇಡ ಮನೇಲಿ ನಾ ಏನು ಈ ವಿಷಯ ತಿಳಿಸಲ್ಲ ಅಂದಾಗ ಸ್ವಲ್ಪ ಸಮಾಧಾನ ಆಯ್ತು.

ಮತ್ತಷ್ಟು ಓದು »

8
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೨೩)

ರವಿ ತಿರುಮಲೈ 

ಲೋಕಜೀವನ ಮಂಥನ

ತಿರು ತಿರುಗಿ ತೊಳಲುವುದು ತಿರಿದನ್ನವುಣ್ಣುವುದು 
ಮೆರೆದು ಮೈಮರೆಯುವುದು ಹಲ್ಲ ಕಿರಿಯುವುದು 
ಮರಳಿ ಕೊರಗಾಡುವುದು, ಕೆರಳುವುದು ನರಳುವುದು 
ಇರವಿದೇನೊಣರಗಳೇ? – ಮಂಕುತಿಮ್ಮ 
 
ತಿರು ತಿರುಗಿ ತೊಳಲುವುದು ತಿರಿದು ಅನ್ನವನ್ನು ಉಣ್ಣುವುದು ಮೆರೆದು ಮೈ ಮರೆಯುವುದು ಹಲ್ಲ ಕಿರಿಯುವುದು. 
ಮರಳಿ ಕೊರಗಾಡುವುದು ಕೆರಳುವುದು ನರಳುವುದು ಇರವು ಇದೇನು ಒಣ ರಗಳೇ? ಮಂಕು ತಿಮ್ಮ 
 
ತಿರುದು= ಬಿಕ್ಷೆಯತ್ತಿ , ಉಣ್ಣುವುದು= ತಿನ್ನುವುದು, ಕೆರಳುವುದು= ಕೋಪಗೊಳ್ಳುವುದು, ರಗಳೆ= ಪರದಾಟ.   
 
ಮತ್ತೆ ಮತ್ತೆ ಮನುಷ್ಯ ಪರದಾಡುವುದು, ನಾವು ಎಲ್ಲ ಕಡೆಯೂ ಕಾಣಬಹುದು. ಪರದಾಡಿ ಅವರಿವರನ್ನು ಕಾಡಿ ಬೇಡಿ ಹೊಟ್ಟೆ ತುಂಬಿಸಿಕೊಳ್ಳುವುದು. ಪಡೆದದ್ದು ಹೆಚ್ಚಾದರೆ ಮೆರೆದು ಅಹಂಕಾರ ತೋರಿಸುವುದು. ತಮ್ಮನ್ನು ತಾವು, ಬಹಳ ಸಾಧಿಸಿದೆವೆಂದು ಅಹಂಕಾರದಿಂದ ಮೆರೆಯುವುದು., ಪಡೆದದ್ದನ್ನು ಉಳಿಸಿಕೊಳ್ಳಲು ಅವರಿವರ ಮುಂದೆ ಹಲ್ಲು  ಕಿರಿಯುವುದು, ಗಿಂಜುವುದು, ಬೇಡುವುದು ನಾವು ಸರ್ವೇ ಸಾಮಾನ್ಯವಾಗಿ ಎಲ್ಲರಲ್ಲೂ ಕಾಣುತ್ತೇವೆ. ತಾವು ಅಂದುಕೊಂಡದ್ದು ಸಿಗದಿದ್ದ್ದರೆ ಕೋಪಗೊಳ್ಳುವುದು,ಹಾಗೂ ಸಿಗದಿದ್ದರೆ, ಕೈಲಾಗತನದಿಂದ ಸಂಕಟಪಡುವುದು ಅಥವಾ ನರಳುವುದು, ಇದನೆಲ್ಲಾ ಮಾನ್ಯ ಡಿ.ವಿ.ಜಿ.ಯವರು ಸತ್ವವಿಲ್ಲದ ಒಣ ರಗಳೆ ಅಥವಾ ಸತ್ವವಿಲ್ಲದ ಜೀವನದ ಪರಿ ಎಂದು ಈ ಕಗ್ಗದಲ್ಲಿ ಸೂಚ್ಯವಾಗಿ ಹೇಳುತ್ತಾರೆ. 
 
ಹೊಟ್ಟೆಪಾಡಿಗಾಗಿಯೇ ಮತ್ತೆ ಮತ್ತೆ ಪರದಾಡುವುದು, ನಮಗೆ ಸೂಕ್ತವೋ ಅಲ್ಲವೋ , ನಾವು ಇಷ್ಟಪಟ್ಟು ಮಾಡುವ ಕೆಲಸವೋ ಅಲ್ಲವೋ, ಆ ಕೆಲಸದಲ್ಲಿ ನಮಗೆ ತೃಪ್ತಿ ಸಿಗುತ್ತದೆಯೋ ಇಲ್ಲವೋ, ಇವೆಲ್ಲವನ್ನೂ ಪರಿಗಣಿಸದೆ ಮಾತ್ರ ಉದರ ಫೋಷಣೆಗಾಗಿಯೇ ಕೆಲಸ ಮಾಡುವುದು. ಇದು ಅವಶ್ಯಕವೇ ಹೌದು. ಆದರೆ ಹೀಗೆ ಮಾಡುವ ಕೆಲಸದಲ್ಲಿ ಒಂದು ಉತ್ಸಾಹವಿಲ್ಲದೆ, ತೃಪ್ತಿಯಿಲ್ಲದೆ, ಕೇವಲ  ಯಾಂತ್ರಿಕವಾಗಿ ನಾವು ನಮ್ಮ ಕೆಲಸಕಾರ್ಯಗಳನ್ನು ಮಾಡುತ್ತಿದ್ದೇವೆ. ನಮ್ಮ ಗುಣಕ್ಕೆ,  ನಮ್ಮ ಸ್ವಭಾವಕ್ಕೆ ಹೊಂದುವ ಕೆಲಸ ನಾವು ಮಾಡಬೇಕೆಂದರೂ, ಆಗದೆ ಕೇವಲ  ಹೊಟ್ಟೆಪಾಡಿಗಾಗಿ ಕೆಲಸಮಾಡುತ್ತ ರಸಾನುಭವವಿಲ್ಲದೆ, ನೀರಸವಾದ ಜೀವನಮಾದುತ್ತೇವೆ. ಅದನ್ನೇ ಒಣ ರಗಳೆ ಎಂದು ಗುಂಡಪ್ಪನವರು ಹೇಳುತ್ತಾರೆ. 

” ಉದರ ವೈರಾಗ್ಯವಿದು  ” ಎಂದು ಹೇಳುವ ಪುರಂಧರ ದಾಸರ ಪದದಲ್ಲಿನ ಅಂತರ್ಯವೂ ಇದೆ ಆಗಿರುತ್ತೆ. ಹೀಗೆ ಹೊಟ್ಟೆಪಾಡಿಗಾಗಿ ಕೆಲಸಮಾಡುವಾಗ , ನಮಗೆ ಬೇಸರ, ಕೋಪ, ದ್ವೇಷ ಅಸೂಯೆ ಮುಂತಾದವುಗಳೆಲ್ಲ ಮನಸ್ಸಿಗೆ ಬಂದು ಒಂದು ರಸಾನುಭಾವವಿಲ್ಲದೆ ಅತೃಪ್ತಿಯ ಭಾವನೆಯೇ ಇರುವುದು ಹಾಗಾಗಿ ಈ ಜೀವನವೆಲ್ಲ ಒಂದು  ಒಣ ರಗಳೆ ಎಂದು ಹೇಳುತ್ತಾರೆ. 

ಇದು ಹೀಗೆ ಎಲ್ಲರಿಗೂ ಇರುವುದಿಲ್ಲ. ತಮ್ಮ ಕೆಲಸವನ್ನು ಬಹಳ ಇಷ್ಟಪಟ್ಟು ಮಾಡುವವರೂ ತಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಆಸಕ್ತಿ ತನ್ಮಯತೆ ಮತ್ತು ತೃಪ್ತಿಯನ್ನು ಕಂಡುಕೊಳ್ಳುವವರೂ ಇದ್ದಾರೆ. ಆದರೆ ಅವರ ಸಂಖ್ಯೆ ಬಹಳ ಕಡಿಮೆ. ಬಹಳ ಸಂಖ್ಯೆಯ  ಜನ, ಶ್ರೀ ಗುಂಡಪ್ಪನವರು ಹೇಳುವ ಹಾಗೆ  ನೀರಸವಾದ ಜೀವನವನ್ನೇ ನಡೆಸುತ್ತಾರೆ. ನಾವೂ ಸಹ ನಮ್ಮ ನಮ್ಮ ಕಾರ್ಯಕ್ಷೇತ್ರಗಳಲ್ಲಿ ತೃಪ್ತಿಯನ್ನು ಕಂಡುಕೊಳ್ಳಬಹುದೇನೋ ಎಂದು ಆಲೋಚಿಸುತ್ತಾ…………….

ಮುಂದಿನ ಕಗ್ಗಕ್ಕೆ ಹೋಗೋಣ,

 
ಇಂದಿನ ದಿನ ಎಲ್ಲರಿಗೂ ಶುಭವಾಗಲಿ
 
***************************************************