Skip to content

Posts from the ‘ಪರಿಸರ’ Category

20
Mar

ಪಕ್ಷಿಗಳಿಗೆ ಒಂದು ಬೊಗಸೆ ನೀರು ಕೊಡಿ.ಪ್ಲೀಸ್…!

26
Nov

ಅಪರೂಪದ ಪರಿಸರವಾದಿ ಕಲಾವಿದೆ ಕೆನಡಾ ದೇಶದ ಪ್ರಾಂಕೆ ಜೇಮ್ಸ್

- ಗೋವಿಂದಭಟ್,ನೆಲ್ಯಾರು
ಇತ್ತೀಚಿನ  ದಿನಗಳಲ್ಲಿ ನನ್ನ ಮೇಲೆ ಬಹಳ  ಪ್ರಬಾವ  ಬಿದ್ದಿರುವ   ವ್ಯಕ್ತಿಯೊಬ್ಬರು    ಎಂದರೆ   ಕಲಾವಿದೆ ಹಾಗೂ  ಪರಿಸರ ಹೋರಾಟಗಾರ್ತಿ  ಕೆನಡಾ ದೇಶದ ಫ್ರಾಂಕೆ  ಜೇಮ್ಸ್.    ಅವರ ಚಿತ್ರ  ಪ್ರಬಂದಗಳು  ಪರಿಸರಾಂದೋಲನಗಳು  ಅಧ್ಬುತ ಎನ್ನಬೇಕು.     ಸುಮಾರು  ಎರಡು ವರ್ಷಗಳಿಂದ  ಇವರ  ಚಟುವಟಿಕೆ  ಮೇಲೆ  ಗಮನವಿಟ್ಟಿರುವ  ನಾನು ಈಗ  ಅನಿಸಿಕೆ  ಹಂಚಿಕೊಳ್ಳುತ್ತಿದ್ದೇನೆ.

ಕಾರು ಹೊಂದಿದ  ಕುಟುಂಬದಿಂದ  ಬದಲಾವಣೆಯಾಗುವಾಗ   ಏನೆಲ್ಲ  ಎದುರಿಸಬೇಕು  ಅನ್ನುವುದನ್ನು ಅವರ ಮಾತುಗಳಲ್ಲಿಯೇ  ಕೇಳಬೇಕು, ಅಲ್ಲ ಚಿತ್ರಕಥೆ  ಓದಬೇಕು. ದೊಡ್ಡ  ಹಡಗಿನಂತಹ  ಕಾರು  ಅವರಲ್ಲಿತ್ತು. ಡೆವಿಡ್  ಸುಜುಕಿ  ಎಂಬ  ಪರಿಸರವಾದಿಯ  ಬಾಷಣ  ಕೇಳಿ ಮಾರಿಯೇ ಬಿಟ್ಟರು. ಹತ್ತಿರದಲ್ಲಿ  ದಿನಸಿ ಅಂಗಡಿ ಇತ್ತು. ನಡೆಯುವ  ಆಸಕ್ತಿ ಇತ್ತು.  ಒಬ್ಬೊಬ್ಬ  ಸಂಬಂದಿಕರ  ಪ್ರತಿಕ್ರಿಯೆಯೂ  ಬಿನ್ನವಾಗಿತ್ತು.  ಕಾರು ಇಲ್ಲವಾದ  ನಂತರ  ಮನೆ ಎದುರು ಕಾರು – ದಾರಿ  ಬೇಕಾ ?  ಬೇಡ.    ಆದರೆ  ಪಟ್ಟಣದ  ಕಾನೂನು ಪ್ರಕಾರ ಒಂದು ನಿವೇಶನದಲ್ಲಿ    ಒಂದು ಮರ ನೆಡಲು  ಮಾತ್ರ ಅವಕಾಶ.     ಹಲವು ಸಮಸ್ಯೆಗಳ  ಎದುರಿಸಿ   ಕೊನೆಗೂ   ಅಲ್ಲಿ ಹೂಗಿಡಗಳನ್ನು    ನೆಟ್ಟರು. ಕಾಂಕ್ರೀಟು  ಅಗೆದು ಹಾಕಿ  ನೀರು ಇಂಗುವಂತೆ  ಮಾಡಿದರು.   ಅವರ, ಅಂದರೆ   ಆ ದೇಶದವರ   ಕಾರು ಸಹಿತ ಜೀವನ  ನಮಗೆ  ಆಕರ್ಷಕವಾಗಿ ಕಂಡರೆ   ಕಾರು ರಹಿತ  ಜೀವನವೂ  ಮಾರ್ಗದರ್ಶಕ ಏಕಾಗಬಾರದು ?
ಯಾವ  ವಿಚಾರವನ್ನೇ  ಆಗಲಿ  ತಮ್ಮ  ಕಲೆಯ  ಮೂಲಕ   ಪ್ರಚಾರಾಂದೋಲನ  ನಡೆಸುವ ಫ್ರಾಂಕೆ  ಕೆನಡಾ ದೇಶಕ್ಕೆ  ಅಪಾರ  ತಲೆನೋವು ತರಿಸುವ  ವ್ಯಕ್ತಿಯಾಗಿ  ಹೊರಹೊಮ್ಮಿದ್ದಾರೆ. ಹೌದಾ  ಪ್ರದಾನ ಮಂತ್ರಿಗಳೇ, ಮಲೀನತೆ  ತೇರಿಗೆ ನಿಜಕ್ಕೂ  ದೇಶಕ್ಕೆ  ಹಾನಿಮಾಡುವುದೇ   ಎಂದು ಮುಗ್ದವಾಗಿ  ಪ್ರಶ್ನಿಸುತ್ತಾರೆ.  ನೀವು ಮಾತಾಡುತ್ತಿರುವ  ವಿಚಾರ  ಪರಿಣಾಮ ನಿಮಗೆ ಚೆನ್ನಾಗಿ  ಗೊತ್ತಾ? ಮುಂದೆ  ಹಿಮ ಕರಡಿ ಕಾಣೋದು  ಎರಡು ಡಾಲರ್ ನಾಣ್ಯದಲ್ಲಿ  ಮಾತ್ರವಾದರೆ   ನಮ್ಮ  ನಿಮ್ಮ  ಮಕ್ಕಳು  ಮೊಮ್ಮಕ್ಕಳು  ಏನು ಹೇಳಬಹುದು.  ಎಂದೂ  ಕೇಳುತ್ತಾರೆ. ಈ  ಹಾರ್ಪರ್ ಮಹರಾಯ ಬೆಂಗಳೂರಿಗೆ ಬಂದಾಗ  ಇದನ್ನು  ಹಂಚಿಕೊಳ್ಳುವ  ಆಲೋಚನೆ ಬಂದರೂ  ತಕ್ಷಣ ಇವೆಲ್ಲ ಬರೆಯಲು  ಸಾದ್ಯವಾಗಲಿಲ್ಲ.
25
Oct

ದೆಹಲಿಗೂ ಹರಿಯಲಿ ಕಾವೇರಿ; ಇಲ್ಲದೇ ಹೋದರೆ ಸೋಲುವಿರಿ

-ರಾಕೇಶ್ ಎನ್ ಎಸ್ 

ಗಂಗಾ, ಯಮುನಾ ನದಿಗಳ ಹೆಸರು ಕೇಳಿದರೆ ನಿಮಗೆ ಯಾವುದಾದರೂ ರಾಜ್ಯದ ನೆನಪು ಆಗುತ್ತದೆಯೇ ಎಂದು ಹಿರಿಯ ಪತ್ರಕರ್ತರೊಬ್ಬರು ಕೇಳಿದರು. ನಾನು ಅವಾಕ್ಕಾದೆ. ಗಂಗಾ ನದಿಯೂ ಉತ್ತರಾ ಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಗಳಲ್ಲಿ ಜೀವ ನದಿಯಾಗಿ ಹರಿಯುತ್ತದೆ. ಉತ್ತರಾ ಖಂಡ, ಉತ್ತರ ಪ್ರದೇಶ, ಹರಿಯಾಣ, ದೆಹಲಿಗಳಿಗೆ ಯಮುನೆಯ ಜೀವದಾಯಿ. ಮಾತು ಮುಂದುವರಿಸಿದ ಅವರು ನನಗೆ ಕಾವೇರಿ ಅಂದರೆ ತಮಿಳುನಾಡಿನ ನೆನಪಾಗುತ್ತದೆ ಎಂದರು. ಹೌದು, ಕಾವೇರಿ ನದಿ ಸಂಪೂರ್ಣವಾಗಿ ತಮಿಳುನಾಡಿಗೆ ಸೇರಿದಾಗಿದ್ದು, ಕರ್ನಾಟಕ ಸುಮ್ಮನೆ ಕಿರಿಕ್ ಮಾಡುತ್ತಿದೆ ಎಂಬ ಭಾವನೆ ಕರ್ನಾಟಕದ ಹೊರಗೆ ಮಡುಗಟ್ಟಿದೆ ಎಂಬುದನ್ನು ಅವರು ನನಗೆ ಸೂಚ್ಯವಾಗಿ ಮನದಟ್ಟು ಮಾಡಿಕೊಟ್ಟಿದ್ದರು.

ಈ ಹಿಂದೆ ಕಾವೇರಿ ವಿವಾದ ೨೦೦೨-೦೩ರಲ್ಲಿ ಉಚ್ಚ್ರಾಯ ಹಂತದಲ್ಲಿದ್ದಾಗ ದೆಹಲಿಯ ಪ್ರಗತಿ ಮೈದಾನದಲ್ಲಿ ತಮಿಳುನಾಡು ಸರ್ಕಾರ ಕಾವೇರಿ ನದಿ ಬಗ್ಗೆ ಒಂದು ಪ್ರದರ್ಶನ ಕಾರ್ಯಕ್ರಮ ಇಟ್ಟುಕೊಂಡಿತ್ತಂತೆ. ಅದರಲ್ಲಿ ಕಾವೇರಿ ನದಿ ತಮಿಳುನಾಡಿನ ಸಂಸ್ಕೃತಿ, ಪರಂಪರೆಯ ಮೇಲೆ ಬೀರಿದ ಪರಿಣಾಮಗಳ ಬಗ್ಗೆ, ತಮಿಳು ಜೀವನದಲ್ಲಿ ಕಾವೇರಿಯ ಪಾತ್ರದ ಬಗ್ಗೆ, ತಮಿಳಿನ ಕಾವ್ಯ, ಕೃತಿಗಳಲ್ಲಿ ಕಾವೇರಿಯ ಬಣ್ಣನೆ ಸೇರಿದಂತೆ, ಕಾವೇರಿ ಸೀಮೆಯ ಕೃಷಿ ಚಟುವಟಿಕೆಗಳ ಬಗ್ಗೆ ಛಾಯಾಚಿತ್ರ ಸಹಿತ ವಿವರಣೆಗಳಿದ್ದವು. ಕಾವೇರಿ ನದಿ ಪೂಂಪ್‌ಹಾರ್‌ನಲ್ಲಿ ಬಂಗಾಳ ಕೊಲ್ಲಿಯಲ್ಲಿ ಲೀನವಾಗುವ ಮೊದಲು ಅದು ಹೇಗೆ ಅಲ್ಲಿನ ಜನಜೀವನದ ಮೇಲೆ ಪರಿಣಾಮ ಉಂಟು ಮಾಡಿದೆ ಎಂಬುದನ್ನು ದೇಶದ ಜನರಿಗೆ ತಿಳಿಯಪಡಿಸಲು ಅಲ್ಲಿನ ಸರ್ಕಾರ ಕೈಗೊಂಡ ಕ್ರಮವಾದು.ಆದರೆ ನಾವು ಕಾವೇರಿ ನಮ್ಮ ತಾಯಿ ಎಂದು ಭಾವನಾತ್ಮಕವಾಗಿ ಬೊಬ್ಬಿರಿಯುತ್ತೇವೆ, ಆ ತಾಯಿಯನ್ನು ಬಳಸಿಕೊಂಡು ಅದೇಷ್ಟು ರಾಜಕೀಯ ಲಾಭ ಪಡೆಯಬಹುದೋ ಅಷ್ಟನ್ನೂ ಬಾಚಿಕೊಳ್ಳಲು ಬಯಸುತ್ತೇವೆ. ಕಾವೇರಿ ಹೆಸರಲ್ಲಿ ಅದೇಷ್ಟು ಸಾಧ್ಯವೋ ಅಷ್ಟು ಸಂಘಟನೆಗಳನ್ನು ಕಟ್ಟಿ ದೊಣ್ಣೆ ನಾಯಕರಾಗಲು ಹೊರಡುತ್ತೇವೆ. ಆದರೆ ಕಾವೇರಿ ನಮ್ಮ ರಾಜ್ಯಕ್ಕೆ ನೀಡಿದ ಸಾಂಸ್ಕೃತಿಕ, ಸಾಹಿತ್ಯಿಕ, ಚಾರಿತ್ರಿಕ, ಆರ್ಥಿಕ ಕೊಡುಗೆಗಳನ್ನು ರಾಷ್ಟ್ರ ಮಟ್ಟದಲ್ಲಿ ಬಿಂಬಿಸುವ ಪ್ರಯತ್ನವನ್ನು ಮಾಡುವುದೇ ಇಲ್ಲ. ಅದ್ದರಿಂದ ಕಾವೇರಿ ವಿವಾದ ಭುಗಿಲೆದ್ದ ಸಂದರ್ಭಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ರಾಜ್ಯಕ್ಕೆ ಸಿಗಬೇಕಾದ ನೈತಿಕ ಬೆಂಬಲ ಸಿಗದೇ ಅದು ತಮಿಳುನಾಡಿನ ಪಾಲಾಗುತ್ತಿದೆ. Read more »
20
Sep

!!! ನಿಲುಮೆ ಸ್ನೇಹ ಮಿಲನ !!!

21
Aug

ಟಾಯ್ಲೆಟ್ ವಾಸು ಅಂದ್ರೆ ಯಾರು ಗೊತ್ತಾ?

-ಚಕ್ರವರ್ತಿ ಸೂಲಿಬೆಲೆ

”ಪ್ರಚಾರದ ಹೆಸರಲ್ಲಿ ಹೊಸಹೊಸ ಮಾರ್ಗಗಳನ್ನು ಹುಡಕಲಾಯ್ತು. ನಾಟಕಗಳು, ಕಥೆಗಳು, ಎಲ್ಲವೂ ಶೌಚಾಲಯದ ಕುರಿತಂತೆಯೇ. ಕುಂತರೂ ನಿಂತರೂ ಶೌಚಾಲಯಗಳೇ. ಕೊನೆಗೆ ಕನಸಿನಲ್ಲೂ ವಾಸು ದೇಶ್‌ಪಾಂಡೆ ಶೌಚಾಲಯವನ್ನೆ ಕಂಡಿದ್ದರೆ ಅಚ್ಚರಿಯಿಲ್ಲ! ಈ ಕಾರಣದಿಂದಲೇ ಸ್ಥಳೀಯ ಆರು ಜಿಲ್ಲೆಗಳಲ್ಲಿ ವಾಸು ದೇಶ್‌ಪಾಂಡೆ `ಟಾಯ್ಲೆಟ್ ವಾಸು’ವಾಗಿಯೇ ಜನಪ್ರಿಯರಾದರು”

ವಾಸು ದೇಶ್‌ಪಾಂಡೆ ಅಲಿಯಾಸ್ ಟಾಯ್ಲೆಟ್ ವಾಸು! ಗುಲ್ಬರ್ಗಾದ ಸೇಡಮ್ಮಿನ ಹುಡುಗ. ಬಡತನದಲ್ಲಿ ಬೆಳೆದ, ಕಷ್ಟಪಟ್ಟು ಓದಿದ. ಕೊನೆಗೆ ಇಂಜಿನಿಯರ್ರೂ ಆದ. ಇನ್ಫೋಸಿಸ್‌ನಲ್ಲಿ ಕೆಲಸಕ್ಕೆ ಸೇರಿಕೊಂಡು ಚೆನ್ನಾಗಿ ದುಡಿದ. ಇಷ್ಟೇ ಆಗಿದ್ದರೆ ಇದೊಂದು ಕನ್ನಡ ಫಿಲಮ್ಮಿನ ಕಥೆಯಂತಾಗಿ ಮುಗಿದುಹೋಗುತ್ತಿತ್ತು. ಹಾಗಾಗಲಿಲ್ಲ. ಊರಿನ ಕೆಲಸ ವಾಸುವನ್ನು ಬಿಡಲಿಲ್ಲ. ಬೆಂಗಳೂರು ಎಲ್ಲರನ್ನು ಕಾಡಿದಂತೆ ಮೋಹವಾಗಿ ಕಾಡಲಿಲ್ಲ.

ಉತ್ತರ ಕರ್ನಾಟಕಕ್ಕೆ ನೆರೆ ಹಾವಳಿ ಅಪ್ಪಳಿಸಿದಾಗ ಇನ್ಫೋಸಿಸ್ ಗುಲ್ಬರ್ಗಾದ ನೆರೆ ಪೀಡಿತ ಪ್ರದೇಶಗಳಲ್ಲಿ ಯೋಜನೆಗಳನ್ನು ಕೈಗೆತ್ತಿಕೊಂಡಿತು. ಮನೆ ಕಟ್ಟಿಕೊಡುವ ಸಾಮಾಜಿಕ ಜವಾಬ್ದಾರಿ ನಿರ್ವಹಿಸಲು ಮುಂದೆ ಬಂತು. ಸ್ಥಳೀಯವಾಗಿ ಸಾಥ್ ಕೊಡಲು ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯಂತಹ ಪ್ರಾಮಾಣಿಕ ಸಂಸ್ಥೆಯೇನೋ ಸಿಕ್ಕಿತು. ಆದರೆ ಈ ಕೆಲಸವನ್ನು ತನ್ನದೆಂದುಕೊಂಡು ಸಮರ್ಥವಾಗಿ ಮಾಡುವವರು ಯಾರಾದರೊಬ್ಬರು ಬೇಕಲ್ಲ? ಆಗ ಇನ್ಫೋಸಿಸ್‌ಗೆ ಕಂಡ ಬೆರಗುಗಣ್ಣಿನ ಇಂಜಿನಿಯರ್ ವಾಸು ದೇಶ್‌ಪಾಂಡೆ. ಅಮೆರಿಕಾದಲ್ಲೆಲ್ಲ ಇದ್ದು ಬಂದ ಹುಡುಗ; ಮತ್ತೆ ಮರಳಿ ಹೊರಡಲು ಸಜ್ಜಾಗಿದ್ದ. ಆದರೆ ಈಗ ಹೊಸತೊಂದು ಆಸಕ್ತಿಕರ ಯೋಜನೆ ಕೈಬೀಸಿ ಕರೆಯಿತು. ಹುಟ್ಟೂರಿನ, ಜಿಲ್ಲೆಯ, ಕೊನೆಗೆ ಹಿಂದುಳಿದ ಎಂಬ ಹಣೆಪಟ್ಟಿ ಹೊತ್ತ ತನ್ನ ಭಾಗದ ಸೇವೆ ಮಾಡುವ ಅವಕಾಶ ಬಯಸಿಬಂದಾಗ ಆಗುವುದಿಲ್ಲ ಎನ್ನುವುದು ಹೇಗೆ?

Read more »

29
Mar

ಕುಲಾಂತರಿ ಚರ್ಚೆ: ಇನ್ನೊಂದು ಮುಖ

- ಪ್ರಸನ್ನ ಆಡುವಳ್ಳಿ,ಧಾರವಾಡ

ಕುಲಾಂತರಿಗಳ ಬಗ್ಗೆ  “ಕನ್ನಡಪ್ರಭ”  ಪತ್ರಿಕೆಯಲ್ಲಿ ಶಾಂತು ಶಾಂತಾರಾಮ್ ಹಾಗೂ ಎಮ್ ಮಹದೇವಪ್ಪ ಅವರು ಬರೆದ ಬರಹ ಓದುಗರನ್ನು ದಾರಿತಪ್ಪಿಸುವಂತಿದೆಯೇ ವಿನಹಾ ಅವುಗಳ ಕುರಿತು ಸರಿಯಾದ ಮಾಹಿತಿಯನ್ನು ನೀಡುವಲ್ಲಿ ವಿಫಲವಾಗಿದೆ. ಕುಲಾಂತರಿಗಳನ್ನು ಅಭಿವೃದ್ದಿಯ ಹೆಸರಲ್ಲಿ, ಅಧಿಕ ಅಹಾರ ಉತ್ಪಾದನೆಯ ನೆಪದಲ್ಲಿ ರೈತರ ಹಾಗೂ ಗ್ರಾಹಕರ ಮೇಲೆ ಹೇರುವ ಪ್ರಯತ್ನದ ಒಂದು ಭಾಗವಾಗಿ ಈ ಬರಹಗಳು ಮೂಡಿಬಂದಿವೆಯಷ್ಟೇ.

ವಿಜ್ನಾನವು ಸತ್ಯ ಶೋಧನೆಯಿಂದ ರೂಪಗೊಳ್ಳುವುದೇ ವಿನಹ ಸಂಖ್ಯಾ ಬಲದಿಂದಲ್ಲ ಎಂಬ ಮಹದೇವಪ್ಪನವರ ಮಾತುಗಳು ಒಪ್ಪತಕ್ಕದ್ದೇ . ಆದರೆ ಬಿ.ಟಿ. ಬದನೆ ಕುರಿತ ಚರ್ಚೆ ಯಲ್ಲಿ ವಿಜ್ನಾನಿಗಳಿಗೆ ಸೂಕ್ತ ಕಾಲಾವಕಾಶ ಸಿಗಲಿಲ್ಲ ಎಂಬ ಮಾತು ಸತ್ಯಕ್ಕೆ ದೂರ. ತಾತ್ಕಾಲಿಕ ನಿಷೇಧ ಹೇರುವ ಮುನ್ನ ದೇಶದ ಹಲವೆಡೆಗಳಲ್ಲಿ ಪರ-ವಿರೋಧಗಳ ಬಗ್ಗೆ ಪರಿಸರ ಸಚಿವಾಲಯ ವಿಸ್ತೃತ ಚರ್ಚೆ ನಡೆಸಿತ್ತು. ಇಷ್ಟಲ್ಲದೇ  ದೇಶದ ಪ್ರತಿಷ್ಟಿತ ಆರು ವಿಜ್ನಾನ ಅಕಾಡೆಮಿಗಳಿಂದ ಅಭಿಪ್ರಾಯ ಕೇಳಿತ್ತು. ಆದರೆ ಅಲ್ಲಿನ ವಿಜ್ನಾನಿಗಳು ಕೊಟ್ಟ ಬೇಜಾವಾಬ್ದಾರಿಯುತ ವರದಿ ಎಲ್ಲರಿಂದ ಟೀಕೆಗೆ ಒಳಗಾಗಿದ್ದು ನೆನಪಿರಬಹುದು. ಎಲ್ಲದಕ್ಕೂ ವೈಜ್ನಾನಿಕ ಆಧಾರ ಕೇಳುವವರು ತಮ್ಮ ವರದಿಯ ಬಗ್ಗೆ ಏಕೆ ಚಕಾರ ಎತ್ತುವುದಿಲ್ಲ? ಅಲ್ಲೇಕೆ ಯಾವುದೇ ವೈಜ್ನಾನಿಕ ಆಧಾರ ನೀಡದೇ ತೀರ ಕಳಪೆ ಗುಣಮಟ್ಟದ ವರದಿ ಕೊಟ್ಟರು?

ಬಿ.ಟಿ. ಹತ್ತಿ ಬಂದ ಮೇಲೆ ಹತ್ತಿಯನ್ನು ಆಮದು ಮಾಡಿಕೊಳ್ಳುತ್ತಿದ್ದ ಭಾರತ ಹತ್ತಿ ರಫ್ತು ಮಾಡುವ ದೇಶವಾಯ್ತೆಂದು ಹೆಮ್ಮೆಯಿಂದ ಹೇಳುವವರು ಇತ್ತೀಚೆಗೆ ಹತ್ತಿಯ ಒಟ್ಟಾರೆ ಉತ್ಪಾದನೆ ಕಡಿಮೆಯಾಗಿದೆಯೆಂದು ಕೇಂದ್ರ ರಫ್ತು ನಿಷೇಧ ಮಾಡಲು ಹೊರಟಿದ್ದನ್ನೇಕೆ ಪ್ರಜ್ನಾಪೂರ್ವಕವಾಗಿ ಮರೆಮಾಚುತ್ತಾರೆ? ದೇಶದ ಶೇಕಡಾ 93ರಷ್ಟು ಭಾಗದಲ್ಲಿ ಬಿ.ಟಿ.ಹತ್ತಿಯನ್ನೇ ಬೆಳೆಯುತ್ತಿದ್ದರೂ ಹೀಗಾಗಿದ್ದೇಕೆ?!

Read more »

18
Feb

ಆವೇಶಕ್ಕೆ ಬಲಿಯಾದ ಕಂದ

-ಸತೀಶ್ ರಾಮನಗರ

ಆಕೆ ತನ್ನ ಮಗನನ್ನೇ ಕೊಂದಿದ್ದಾಳೆ ಎಂಬುದನ್ನು ಕೇಳಿ ಒಂದು ಕ್ಷಣ ಆಶ್ಚರ್ಯಚಕಿತನಾದೆ. ಆಕೆ ತನ್ನ ಮಗನನ್ನು ಕೊಂದಿದ್ದಾಳೆ ಎಂದು ಆರೋಪಿಸಿ ಪೊಲೀಸ ಠಾಣೆಯಲ್ಲಿ ದೂರು ನೀಡಿರುವುದು ಆಕೆಯ ಪತಿಯೇ. ಈಗ ಆರೋಪಿತಳನ್ನು ಬೇರೆಯವರ ಮೂಲಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಲು ಪ್ರಯತ್ನಿಸುತ್ತಿರುವುದು ಕೂಡ ಆಕೆಯ ಪತಿಯೇ.

ಮಾದಣ್ಣ ಹಾಗು ಗೌರಮ್ಮನವರದು ಇಬ್ಬರು ಮಕ್ಕಳೊಂದಿಗಿನ ಮಧ್ಯಮ ವರ್ಗದ ಸಂತೃಪ್ತಿ ಸಂಸಾರ. ಮಗ ರಮೇಶನಿಗೆ 5 ವರ್ಷ. ಮಗಳು ಲಕ್ಷ್ಮಿಗೆ 7 ವರ್ಷ. ಇಬ್ಬರ ಮುಖ್ಯ ಕಸುಬು ವ್ಯವಸಾಯ.

ನಾಳೆಯ ಲಕ್ಷ್ಮಿ ಪೂಜೆಗೆ ಮನೆಯಲ್ಲವನ್ನು ಶುಚಿಗೊಳಿಸಿ, ಗೌರಮ್ಮ ಗಂಡನ ದಾರಿ ಕಾಯುತಿದ್ದಳು. ಮಾದಣ್ಣ ಮನೆಗೆ ಬಂದ ತಕ್ಷಣವೇ, ನಾಳೆ ಹಬ್ಬಕ್ಕೆ ನನಗೆ ಸೀರೆ, ಮಕ್ಕಳಿಗೆ ಹೊಸ ಬಟ್ಟೆ ಜೊತೆಗೆ ಗಿರವಿ ಅಂಗಡಿಯಲ್ಲಿಟ್ಟಿರುವ, ನನ್ನ ಓಲೆ ಜುಮುಕಿ, ಮಾಂಗಲ್ಯ ಸರವನ್ನು ನಾಳೆ ಬೆಳಿಗ್ಗೆ ಬಿಡಿಸಿಕೊಂಡು ತರಲೇ ಬೇಕು ಎಂದು ತಾಕೀತು ಮಾಡಿದಳು. ಮಾದಣ್ಣ ಸರಿ ಎಂದು ತಲೆಯಲ್ಲಾಡಿಸಿ ಊಟ ಮಾಡಿ ಮಲಗಿದ.

ಮಾದಣ್ಣ, ಬೆಳಿಗ್ಗೆ ತನ್ನ ಬಳಿಯಲ್ಲಿದ್ದ ಚೂರು ಪಾರು ಹಣವನ್ನೆಲ್ಲ ಒಟ್ಟುಗೂಡಿಸಿ, ಆ ಹಣದಲ್ಲಿ ಮಕ್ಕಳಿಗೆ ಬಟ್ಟೆ ಹಾಗು ಹೆಂಡತಿಗೆ ಸೀರೆಯನ್ನು ತರಲಷ್ಟೇ ಸಾಧ್ಯವಾಯಿತು. ತನ್ನ ಗಂಡ ವಡವೆಗಳನ್ನು ಬಿಡಿಸಿಕೊಂಡು ತರುತ್ತಾನೆ ಎಂಬ ನಿರೀಕ್ಷೆಯಲ್ಲಿದ್ದ ಗೌರಮ್ಮ ನಿಗೆ ಬಟ್ಟೆಗಳನ್ನಷ್ಟೇ ನೋಡಿ ನಿರಾಶೆಯಾಯಿತು. ವಡವೆಗಳಿಲ್ಲದೆ ಲಕ್ಷ್ಮಿ ಪೂಜೆ ಹೇಗೆ ಮಾಡುವುದೆಂಬ ಚಿಂತಯಿಂದ ಮೌನವಾದಳು. ಅಕ್ಕ ಪಕ್ಕದ ಮನೆಯ ಹೆಂಗಸರನ್ನು ಸಂಜೆ ಮನೆಗೆ ಲಕ್ಷ್ಮಿ ಪೂಜೆಗೆ ಬರಲೇಬೇಕೆಂದು ಅದಾಗಲೇ ಹೇಳಿ ಬಂದಿದ್ದಳು. ಸಂಜೆ ಅವರುಗಳು ಮನೆಗೆ ಬಂದರೆ, ಯಾವ ಮುಖವನ್ನು ಹೊತ್ತುಕೊಂಡು ಪೂಜೆ ಮಾಡುತ್ತಿಲ್ಲ ಎಂದು ಹೇಳುವುದು ಎಂಬ ಪ್ರಶ್ನೆ ಅವಳನ್ನು ಕಾಡತೊಡಗಿತು. Read more »

13
Feb

ಸಂಸ್ಕೃತಿ ಸಂಕಥನ – 22 – ಭಾರತೀಯ ಸಂಸ್ಕೃತಿಗೆ ಗ್ರಹಣ ಹಿಡಿಸಿದ ವಸಾಹತು ಪ್ರಜ್ಞೆ

-ರಮಾನಂದ ಐನಕೈ

ಸುಮಾರು 35 ವರ್ಷಗಳ ಹಿಂದಿನ ನೆನಪು. ನಾವು ಹೈಸ್ಕೂಲಿಗೆ ಹೋಗುತ್ತಿರುವ ದಿನಗಳು. ಒಂದು ರೀತಿಯ ವಿಚಿತ್ರ ಸಭ್ಯತೆಯನ್ನು ಬೆನ್ನಟ್ಟಿ ಹೊರಟಿರುವ ಕಾಲ. ಮೇಸ್ಟ್ರಗಳು ಕ್ಲಾಸಿಗೆ ಬಂದರೆ ಜೀವನದ ‘ಗುರಿ’ಯ ಕುರಿತಾಗೆ ಮೊದಲ ಪ್ರಶ್ನೆ ಕೇಳುತ್ತಿದ್ದರು. ಯಾರು ಅತ್ಯುತ್ತಮ ಗುರಿಯನ್ನು ಹೇಳಿದರೋ ಅವರಿಗೆ ‘ವ್ಹೆರಿ ಗುಡ್’ ಅನ್ನುತ್ತಿದ್ದರು. ಮುಂದೆ ಜೀವನದಲ್ಲಿ ಮನುಷ್ಯ ಮಾಡಬಹು ದಾಂತಹುದು ಇಂತಿಂಥದಿದ್ದೆ ಎಂದು ನಮಗೆ ಗೊತ್ತಾಗಿದ್ದೇ ಈ ಪ್ರಶೆಗಳಿಗೆ ಉತ್ತರ ಹುಡುಕುವ ಮೂಲಕ. ನಾವು ಮಾಡುವ ಕಾರ್ಯಗಳಿಗೆ ಉದ್ದೇಶ ಇದ್ದರೆ ಮಾತ್ರ ಅದು ಗುರಿ ತಲುಪುತ್ತದೆ. ಕ್ರಿಯೆಗೂ ಉದ್ದೇಶಕ್ಕೂ ಸಂಬಂಧ ಇರಬೇಕು. ಆದ್ದರಿಂದ ಗುರಿ ಅಂದರೆ  ಉದ್ದೇಶ. ಗುರಿಯ ದಾರಿ ಯಲ್ಲಿ ಹೋದರೆ ಗುರಿ ಸಿಗುತ್ತದೆ. ಈ ರೀತಿಯ ಚಿಂತನೆ ಇದ್ದ ಕಾಲ ಅದು.

ಇಂಥ ಚಿಂತನೆಗಳು ಎಲ್ಲಿಂದ ಬಂದವು? ಕೇಳಿದರೆ, ದಾರ್ಶನಿಕರಿಂದ, ಪುರಾಣಗಳಿಂದ, ಪ್ರಾಚೀನ ಜನರ ಜೀವನಾನುಭವದಿಂದ ಇತ್ಯಾದಿ ಯಾಗಿ ಮನಸ್ಸಿಗೆ ಕಂಡಂತೆ ಹೇಳುತ್ತೇವೆ. ಯಾರಿಂದಲೂ ಅಲ್ಲ. ನಾವು ಕಲ್ಪಿಸುತ್ತಿರುವ ಸೀಮಿತ ಅರ್ಥದ ಗುರಿ ನಮ್ಮಲ್ಲಿ ಹುಟ್ಟಿದ್ದೇ ಪಾಶ್ಚಾತ್ಯ ಪ್ರಭಾವದಿಂದ. ವಸಾಹತುಶಾಹಿ ಪ್ರಜ್ಞೆ ಯಿಂದ. ಏಕೆಂದರೆ ಅವರ ಅಷ್ಟೂ ಚಿಂತನೆಗಳು ಅರಳುವುದು ಕಾರಣ ಮತ್ತು ಉದ್ದೇಶಗಳ ಮೇಲೆ. ಏಕೆಂದರೆ ಪಾಶ್ಚಾತ್ಯ ಪುರಾಣ ಕಟ್ಟಲ್ಪಟ್ಟಿದ್ದೇ ಈ ಪರಿಕಲ್ಪನೆಯ ಮೇಲೆ. ಅನೇಕ ಸಂದರ್ಭಗಳಲ್ಲಿ ಅದು ನಮ್ಮಲ್ಲಿ ಅರ್ಥ ಕೊಡಲಾರದು.

Read more »

1
Feb

ನೆನಪಿನ ಮೂಸೆಯಲಿ ‘ಕೋಲ್ಕಾತ್ತಾದ ಕಾಲೇಜಿನಲ್ಲಿ’

-ನಟರಾಜು 

ಒಂದು ಬಾರಿ ಗೆಳೆಯನೊಬ್ಬನ ಜೊತೆ ಕೊಲ್ಕತ್ತಾದ ವೈದ್ಯ ವಿದ್ಯಾಲಯದ ಕ್ಯಾಂಪಸ್ ಗೆ ಹೋಗಿದ್ದೆ. ಅಂದು ಪ್ರಥಮ ವರ್ಷದ ಎಂಬಿಬಿಎಸ್ ಪದವಿಯ ಪ್ರವೇಶಕ್ಕಾಗಿ ಕೌಂಸಿಲಿಂಗ್ ನಡೆಯುತ್ತಿತ್ತು. ಆ ಜಾಗದಲ್ಲಿ ರಾಜಕೀಯ ಪಕ್ಷಗಳ ವತಿಯಿಂದ ಮೂರ್ನಾಲ್ಕು ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ರಾಜಕೀಯ ಪಕ್ಷದ ಮಾಹಿತಿ ಇರುವ ದೊಡ್ಡ ದೊಡ್ಡ ಬ್ಯಾನರ್ ಗಳನ್ನು ನೋಡಿ, ಕಾಲೇಜಿನ ಆವರಣದಲ್ಲಿ ರಾಜಕೀಯ ಪಕ್ಷದವರಿಗೇನು ಕೆಲಸ ಅಂತ ನಾನು ಕುತೂಹಲದಿಂದ ಆ ಮಳಿಗೆಯ ಬಳಿ ಹೋಗಿದ್ದೆ. ಆ ಮಳಿಗೆಯ ಒಬ್ಬ ವ್ಯಕ್ತಿ ನಾನು ಹೊಸ ವಿದ್ಯಾರ್ಥಿ ಇರಬೇಕು ಅಂತ ತಮ್ಮ ಸಂಘದ ಭಿತ್ತಿ ಪತ್ರವೊಂದನು ಕೈಗಿತ್ತಿದ್ದ. ಬೆಂಗಾಳಿ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲಿದ್ದ ಭಿತ್ತಿ ಪತ್ರವನು ಓದಿ ನನ್ನ ಗೆಳೆಯನೆಡೆಗೆ ತಿರುಗಿದ್ದೆ. ಆತ ಮುಗಳ್ನಕ್ಕಿದ್ದ. ಕಾಲೇಜಿಗೆ ಪ್ರವೇಶ ಪಡೆದ ಮೊದಲ ದಿನದಿಂದಲೇ ತಮ್ಮ ತಮ್ಮ ರಾಜಕೀಯ ಪಕ್ಷದ ಒಲವನ್ನು ವಿದ್ಯಾರ್ಥಿಗಳು ತಮಗಿಷ್ಟ ಬಂದ ಪಕ್ಷದ ವಿದ್ಯಾರ್ಥಿ ಸಂಘದಲಿ ನೋಂದಾಯಿಸುವುದರ ಮೂಲಕ ವ್ಯಕ್ತಪಡಿಸಬಹುದು ಅಂತ ನನ್ನ ಗೆಳೆಯ ಹೇಳಿದ್ದ.

Read more »

30
Nov

ಕಲಸೆ (ನಾಡಕಲಸಿ) ದೇವಸ್ಥಾನ

-ಪ್ರಹಸ್ತಿ ಪಿ 

ಸಾಗರ ತಾಲೂಕಿನ ಇತಿಹಾಸ ಪ್ರಸಿದ್ದ ದೇವಸ್ಥಾನಗಳಲ್ಲಿ ಕಲಸೆ, ನಾಡಕಲಸಿಯೂ ಒಂದು. ಸಾಗರದವನಾಗಿಯೂ ಅದನ್ನು ನೋಡಲಾಗಿರದ ಬಗ್ಗೆ ಸ್ವಲ್ಪ ಬೇಸರವಿತ್ತು. ಬೆಳಗ್ಗೆ ೮ಕ್ಕೆ, ಮಧ್ಯಾಹ್ನ ಒಂದಕ್ಕೆ ಮಾತ್ರ ಅಲ್ಲಿಗೆ ಬಸ್ಸಿನ ಸೌಕರ್ಯವಿದೆ ಎಂಬ ಗೆಳೆಯರ ಮಾತೂ ನೋಡದಿರುವುದಕ್ಕೊಂದು ಪಿಳ್ಳೆ ನೆವವಾಗಿತ್ತು. ಆದರೆ ಅಲ್ಲಿಗೆ ಹೋದ ಮೇಲೆಯೇ ತಿಳಿದಿದ್ದು. ಅದೆಷ್ಟು ಸುಂದರ ಎಂದು.

ಹೋಗುವ ಮಾರ್ಗ:
ಸಾಗರದಿಂದ ಸುಮಾರು ಎಂಟು ಕಿ.ಮೀ ದೂರವಷ್ಟೇ ನಾಡಕಲಸಿ ಅಥವಾ ಕಲಸಿಯ ದೇವಸ್ಥಾನ. ಸಾಗರದಿಂದ ಹೋಗುವುದಾದರೆ ಸೊರಬ ಮಾರ್ಗದಲ್ಲಿ ಸುಮಾರು ೫ ಕಿ.ಮೀ ಹೋದ ಕೂಡಲೇ ಕಲಸಿ ರಾಮೇಶ್ವರ ದೇವಸ್ಥಾನಕ್ಕೆ ದಾರಿ ಅಂತ ಬೋರ್ಡೊಂದು ಸಿಗುತ್ತದೆ. ಅಲ್ಲಿಂದ ಸುಮಾರು ಮೂರು ಕಿ.ಮೀ ಬಲಕ್ಕೆ ಹೋದರೆ ಸಿಗುವುದು ಕಲಸಿ ಊರು. ಅಲ್ಲಿಂದ ಸ್ವಲ್ಪ ಒಳಗಡೆ ಇದೆ ದೇವಸ್ಥಾನ. ಸೊರಬಕ್ಕೆ ತುಂಬಾ ಬಸ್ಸುಗಳಿವೆ. ಹಾಗಾಗಿ ಸೊರಬ ಬಸ್ಸಿನಲ್ಲಿ ಕಲಸಿ ಬೋರ್ಡಿನಲ್ಲಿ ಇಳಿದುಕೊಂಡರೆ ಮೂರು ಕಿ.ಮೀ ನಡೆದು ಕಲಸಿ ದೇವಸ್ಥಾನಕ್ಕೆ ಯಾವಾಗಲಾದರೂ ಹೋಗಬಹುದು. ಸ್ವಂತ ವಾಹನವಿದ್ದರೆ ಇನ್ನೂ ಉತ್ತಮ.

ಇತಿಹಾಸ:
ಇಲ್ಲಿ ಶ್ರೀ ಮಲ್ಲಿಕಾರ್ಜುನ ಮತ್ತು ರಾಮೇಶ್ವರ ದೇವಸ್ಥಾನಗಳಿವೆ. ಈ ಜೋಡಿ ದೇಗುಲಗಳನ್ನು ಹೊಯ್ಸಳ ರಾಜ ಬಳೆಯಣ್ಣ ಹೆಗ್ಗಡೆ ಕ್ರಿ.ಶ ೧೨೧೮ ರಲ್ಲಿ ಕಟ್ಟಿಸಿದನೆಂದು ಸಂಶೋಧನಕಾರರು ಹೇಳುತ್ತಾರೆ.

ಮೊದಲಿಗೆ ಹೋಗುತ್ತಿದ್ದಂತೆಯೇ ನಿಮ್ಮನ್ನು ಸ್ವಾಗತಿಸುವುದು ದೇಗುಲದ ಎದುರಿಗೆ ಅಥವಾ ಹೋಗುವವರ ಬಲಗಡೆಗೆ ಇರುವ ನಾಗರ ಬನ.ಅದಕ್ಕೆ ನಮಸ್ಕರಿಸಿ ಮೊದಲು ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಹೋದೆವು.

Read more »

Follow

Get every new post delivered to your Inbox.

Join 1,256 other followers