‘ಈಗ ಮದುವೆ ಆಗಿದೆ, ಆದರೆ ಕೆಲವು ಗಂಡಸರಿಗೆ ತಾಳಿಯೂ ಕಾಣೋದಿಲ್ಲ
-ರೂಪಾರಾವ್
ಒಂದು ಹುಡುಗಿ ಹೆಣ್ಣಾಗುವ ಘಳಿಗೆ ಅತಿ ಸಂಭ್ರಮದ ಘಳಿಗೆ. ಆದರೆ ಅ ಘಳಿಗೆ ಸುಮಾರು ಎಲ್ಲಾರ ಅಮ್ಮಂದಿರು ಅಳುತ್ತಾರೆ. ಮಗಳು ಹೆಣ್ಣಾದಳಲ್ಲ ಎಂಬ ಕಾರಣಕ್ಕಲ್ಲ. ತಾನು ಅನುಭವಿಸಿದ ನೋವು ನರಕಗಳನ್ನು ಮಗಳೂ ಅನುಭವಿಸಬೇಕಾಗುತ್ತಲ್ಲ ಎಂದು.
ಅಂತಹ ಘಳಿಗೆ ಬರುವುದಕ್ಕೂ ಮುಂಚೆಯೇ ಆ ಭಯ ನನಗೆ ಕಾಡಿತ್ತು. ಆಗಿನ್ನೂ ಒಂಬತ್ತನೇ ತರಗತಿಗೆ ಕಾಲಿಟ್ಟಿದ್ದೆ. ಯಾವುದೋ ಅಂಗಡಿಗೆ ಹೋಗುವ ಕಾರಣಕ್ಕಾಗಿ ಹೋದಾಗ , ಯಾವುದೋ ಗಂಡಸು ಏನೇನೋ ಅಸಭ್ಯವಾಗಿ ಹೇಳುತ್ತಾ ನನ್ನ ಹಿಂದೆಯೇ ಬರತೊಡಗಿದ.ಎಂಥ ವಿಷಮ ಘಳಿಗೆ ಎಂದರೆ ಅವನ್ಯಾಕೆ ಹಾಗೆಲ್ಲಾ ಹೇಳ್ತಿದಾನೆ ಅಂತಲೂ ನನಗೆ ಅರ್ಥ ಆಗಿರಲಿಲ್ಲ. ಮನೆಗೆ ಬಂದು ಯಾರಿಗೂ ಹೇಳದೆ ಅತ್ತಿದ್ದೆ.
ಅಲ್ಲಿಂದ ಮುಂದೆ ನಾನು ಹೇಗಿರಬೇಕೆಂಬ ಪಾಠ ಅಮ್ಮನಿಂದ ಬಂತು. ಆಗ ಹೆಣ್ಣಾಗಿದ್ದೆ…. ಒಳ್ಳೆಯ ಸ್ಪರ್ಷ ಕೆಟ್ಟ ಸ್ಪರ್ಷ ನೋಟಗಳ ವ್ಯತ್ಯಾಸ ತಿಳಿಯುತ್ತಿತ್ತು. ಆದರೂ ಬಸ್ ನಲ್ಲಿ ಸ್ಕೂಲಿಗೆ ಹೋಗುವಾಗ ಬೇಕಾಗಿಯೇ ಕೈ ಹಾಕಿ ನೂಕುವ ಕಂಡಕ್ಟರ್, ನನ್ನ ಹಿಂದೆ ಬಂದು ನಿಲ್ಲು ಎನ್ನುತ್ತಿದ್ದ ಡ್ರೈವರ್ ಇವರುಗಳನ್ನು ಎದುರಿಸಲಾಗಿರಲಿಲ್ಲ. ಸುಮ್ಮನೆ ಇವರುಗಳ ಸ್ಪರ್ಷ ತೀಟೆಗೆ ಮೂಕ ಪಶುಗಳಾಗುತ್ತಿದ್ದೆವು(ಅಕಸ್ಮಾತ್ ತಿರುಗಿಸಿ ಕೇಳಿದರೆ ಆ ಬಸ್ ನಮ್ಮ ಸ್ಟಾಪಿನಲ್ಲಿ ನಿಲ್ಲುತ್ತಿರಲಿಲ್ಲ. ನಿಂತರೂ ಒಂದಷ್ಟು ದೂರ ನಿಲ್ಲುತ್ತಿದ್ದೆವೆ. ನಾವುಗಳು ಓಡಿ ಹೋಗಿ ಹತ್ತಬೇಕಿತ್ತು.)
ಸ್ವಾಭಿಮಾನದ ಬದುಕು ಕಟ್ಟಿಕೊಟ್ಟ “ಸರ್ಕಾರ್ “
-ಅಜಿತ್ ಎಸ್ ಶೆಟ್ಟಿ
ಕೇಸರಿ ಅಂಗಿ, ಕೇಸರಿ ಶಾಲು, ಕೇಸರಿ ಟೋಪಿ , ಕೇಸರಿ ಶೂಗಳು , ಕೇಸರಿ ಬಣ್ಣದ ಸೈಕಲ್ , ಅದಕ್ಕೆ ಕೇಸರಿ ಬಣ್ಣದ ಚಕ್ರಗಳು ,ಕೇಸರಿ ಪೆನ್ ಯಿಂದ ಹಿಡಿದು ಕೇಸರಿ ಬಣ್ಣದ ಮೊಬೈಲ್ ತನಕ ಎಲ್ಲವೂ ಕೆಸರಿನೇ. ಹಿಂದುತ್ವವಾದಿ ಯಾದರೂ ಮನೆಯಲ್ಲಿ ಯಾವದೇ ದೇವರ ಫೋಟೋ ಇಲ್ಲ. ಇರುವದು ಎರಡೇ ಎರಡು ಫೋಟೋಗಳು ಅವರುಗಳೇ ಇವನ ಪಾಲಿಗೆ ದೇವರು. ಆ ಫೋಟೋ ಗಳು ಬೇರೆ ಯಾರದ್ದು ಅಲ್ಲಾ ಮರಾಠ ಸೇನಾಧಿಪತಿ , ಹಿಂದೂ ಹೃದಯ ಸಾಮ್ರಾಟ್ , ಹುಲಿ, ಬಾಳಾ ಸಾಹೇಬ್ ಠಾಕ್ರೆ ಮತ್ತು ಅವರ ಪತ್ನಿ ಮೀನಾ ಅವರದ್ದು . ಅವರನ್ನು ಅರಾಧಿಸುತಿರುವವರು 52 ರ ಹರೆಯದ ಪೂನಾ ಜಿಲ್ಲೆಯ ನಂಗೋನ್ ಎಂಬಲ್ಲಿನ ಮಹಾದೇವ್ ಯಾದವ್. ನಾವು ಇಂಥ ಸಾವಿರಾರು ಠಾಕ್ರೆ ಅಭಿಮಾನಿಗಳನ್ನು ಮಹಾರಾಷ್ಟ್ರದಲ್ಲಿ ನೋಡಬಹುದು .
ಇಂದು ಬಾಳಾ ಸಾಹೇಬ್ ಯನ್ನು “ತಮಿಳು ವಿರೋಧಿ” “ಕನ್ನಡಿಗರ ಪಾಲಿನ ಶತ್ರು ” ಉತ್ತರ ಭಾರತೀಯರು ಮತ್ತು ಗುಜರಾತಿಗಳ ಪಾಲಿಗೆ ಕಂಟಕರಾಗಿದ್ದವರೆಂದು ಬೆರಳೆಣಿಕೆ ಎಷ್ಟು ಇರುವ ಅವರ ವಿರೋಧಿಗಳು ಕರೆಯಬಹುದು . ಆದರೆ ಅದು ಬಾಳಾ ಸಾಹೇಬ್ ಠಾಕ್ರೆ ಯವರ ವ್ಯಕ್ತಿತ್ವದ ಮುಂದೆ ಗೌಣವಾಗುತದೆ . ಠಾಕ್ರೆ ವ್ಯಕ್ತಿತ್ವ ಅಂತಹುದು ತನ್ನ ನಿಲುವನ್ನು ಸ್ಪಷ್ಟವಾಗಿ ಹೇಳುತಿದ್ದ . ಎಲ್ಲಿಯೂ ಎಡಬಿಡಂಗಿ ತರ ವರ್ತಿಸುತಿರಲಿಲ್ಲ. ಉದಾಹರಣೆ ಸಮೇತ ಸಮರ್ಥಿಸಿಕೊಳ್ಳುತಿದ್ದರು. ಅದು ಇಂದಿರೆ ಹೇರಿದ ತುರ್ತು ಪರಿಸ್ಥಿತಿಯಿಂದ ಹಿಡಿದು ಹಿಟ್ಲರ್ ಬಗೆಗಿನ ಠಾಕ್ರೆ ಅಭಿಮಾನದವರೆಗೆ. ದೇಶಕ್ಕೆ ಕಳಂಕದಂತಿದ್ದ , ಗುಲಾಮತೆಯ ಪ್ರತೀಕದಂತೆ ಭಾಸವಾಗುತಿದ್ದ ಬಾಬ್ರಿ ಮಸೀದಿ ದ್ವಂಸದಿಂದ, ಭಾರತ-ಪಾಕ್ ಕ್ರಿಕೆಟ್ ಪಂದ್ಯದ ತನಕ. ಎಲ್ಲಿಯೂ ರಾಜಿ ಇರಲಿಲ್ಲ. ಬಾಳಾ ಸಾಹೇಬ್ ಠಾಕ್ರೆ ಒಬ್ಬ ಭಾಷಾಪ್ರೇಮಿಯಾಗಿದ್ದರು ಅಪ್ರತಿಮ ದೇಶಭಕ್ತ, ಒಬ್ಬ ಹುಟ್ಟು ಹೋರಾಟಗಾರ, ಅಂಜದೇ ಅಳುಕದೇ ಯಾರಿಗೂ ತಲೆಬಾಗದೆ ತಾನು ನಂಬಿಕೊಂಡು ಬಂದಿರುವ ತತ್ವ ಸಿದ್ದಾಂತವನ್ನು ಪ್ರತಿಪಾದಿಸುವವ. ತಮ್ಮವರ ಹಕ್ಕಿಗಾಗಿ ಹೋರಾಡಿದ ಧೀಮಂತ ನಾಯಕ. ತನ್ನ ಶಕ್ತಿಯ ಮೇಲೆ, ತನ್ನ ಜನರ ನಂಬಿಕೆ ಮೇಲೆ ಅಪಾರ ಭರವಸೆ ಇಟ್ಟುಕೊಂಡಿದ್ದ ಅದ್ಬುತ ಮಾತುಗಾರ. ತನ್ನ ನಂಬಿರುವ ತನ್ನ ಜನರ ಭರವಸೆ ಎಂದು ಹುಸಿಗೊಳಿಸದ, ಅವರಿಗೆ ಸ್ವಾವಲಂಬಿ ಬದುಕು ಕಟ್ಟಿಸಿಕೊಟ್ಟ “ಸರ್ಕಾರ್” . ಉಳಿದವರಿಗೆ ಸ್ಪೂರ್ತಿಯ ಚಿಲುಮೆ . ಒಬ್ಬ ವ್ಯಂಗ್ಯ ಚಿತ್ರಗಾರ ನಾಗಿ ಬದುಕು ಪ್ರಾರಂಭಿಸಿದ ಬಾಳಾ ಸಾಹೇಬ್ ಠಾಕ್ರೆ ಬೆಳೆದು ಬಂದ ಅವನ ವಿರೋಧಿಗಳು ಮೆಚ್ಚುವಂಥಹುದು . ಅದಕ್ಕೊಂದು ಸಲಾಂ ಹೇಳಲೇ ಬೇಕು. ವಿವಾದಾತ್ಮಕ ವಾಗಿದ್ದರೂ ವರ್ಣರಂಜಿತ ಬದುಕು.
Read more 
ಡಾ ಅಂಬೇಡ್ಕರ್, ಸಾಮರಸ್ಯ ಮತ್ತು ಆರೆಸ್ಸೆಸ್
-ರಾಜೇಶ್ ಪದ್ಮಾರ
ಮಲೆನಾಡಿನ ಪೂರ್ಣಚಂದ್ರ ತೇಜಸ್ವಿ ಇರಲಿ ಕರಾವಳಿಯ ಪ್ರೊ|| ಅಮೃತ ಸೋಮೇಶ್ವರ ಇರಲಿ ಅಥವಾ ಕೋಲಾರದ ಗುಡಿಬಂಡೆಯ ಡಾ|| ಎಂ.ಟಿ.ಕಾಂಬೈ ಇರಲಿ ‘ಸಾಮರಸ್ಯ’ ನನಗದು ಅತ್ಯಂತ ಪ್ರಿಯವಾದ ಶಬ್ದ ಎನ್ನುವುದುಂಟು. ಅದು ಮನೆಯಲಿರಲಿ, ವ್ಯಾಪಾರವಿರಲಿ ಕೊನೆಗೆ ರಾಜಕಾರಣವೇ ಇರಲಿ ಸಾಮರಸ್ಯಬೇಕು.
ಈ ಸಾಮರಸ್ಯ ಮನುಷ್ಯನಲ್ಲೇ ಇದೆ. ಕಾಲಿರಲಿ, ಕೈಯಿರಲಿ, ತಲೆಯಿರಲಿ ಒಂದಕ್ಕೊಂದು ಪೂರಕವೇ. ಕಾಲಿಗೆ ಮುಳ್ಳು ಚುಚ್ಚಿದಾಗ ಕೈ ‘ತನಗೇನೂ ಆಗಿಲ್ವಲ್ಲ’ ಎಂದು ಸುಮ್ಮನಿರುವುದಿಲ್ಲ. ಹೀಗೆ ಒಂದಕ್ಕೊಂದು, ಒಬ್ಬರಿಗೊಬ್ಬರು ಪೂರಕವಾಗಿ ಯೋಚಿಸುವುದು, ನೆರವಿಗೆ ಮುಂದಾಗುವುದೇ ಸಾಮರಸ್ಯ. ಶರೀರದಲ್ಲಿರುವ ಈ ಸಮರಸತೆ, ಸಮಾಜದಲ್ಲೂ ಬರಬೇಕಷ್ಟೆ.
ಹಾಗೇ ಸಮಾಜ ಸಾಮರಸ್ಯದಿಂದಿರಲು ತೊಡಕುಗಳೂ ಇವೆ. ವಿದ್ಯೆ, ಆಸ್ತಿ, ಅಂತಸ್ತು, ಜಾತಿ, ಭಾಷೆ ತೊಡಕು ತಂದುಹಾಕುತ್ತೇವೆ. ವಿದ್ಯೆ, ಸಿರಿವಂತಿಕೆ ಇದೆಯಲ್ಲ ಅದು ಅವರವರು ಗಳಿಸಿದ್ದು, ಆದರೆ ಜಾತಿ- ಅದು ಗಳಿಸಿದ್ದಲ್ಲ. ಅದು ಹುಟ್ಟಿದಾಗ ಅಂಟಿಕೊಂಡಿದ್ದು.
‘ಮಂಡಲ್ ವರದಿ’ ಖ್ಯಾತಿಯ ಆ ಬಿಂದೇಶ್ವರ ಪ್ರಸಾದ್ ಮಂಡಲ್ ಪ್ರಕಾರ ಭಾರತದಲ್ಲಿ 5600 ಜಾತಿಗಳು. ಜಾತಿ ಇರೋದೆ ತಪ್ಪಾ? ಹಾಗೆ ಹೇಳೋರು ಇದಾರೆ. ಅವರೊಂದಿಗೆ ಹೊಸ ಜಾತಿನೇ ಆಗಿದ್ದಾರೆ. ಯಾವುದರಲ್ಲಿ ಜಾತಿ ಇಲ್ಲ? ಭತ್ತದಲ್ಲಿ ಅದೆಷ್ಟು ನಮೂನೆ? ಮಾವಿನಹಣ್ಣಿನಲ್ಲಿ ಅದೆಷ್ಟು ಥರಾ? ಬದನೆಕಾಯಿಯಲ್ಲೂ ಅದೆಷ್ಟು ರೀತಿ? ಹೋಗಲಿ ನಮ್ಮ ದೇಶದ ಮಣ್ಣಿದೆಯಲ್ಲ ಅದೆಷ್ಟು ಬಗೆ? ಈ ನಮೂನೆ, ಥರ, ಬಗೆ, ರೀತಿಗಳೇ ಜಾತಿಗಳಾಗೋದು. ಬಣ್ಣವೋ, ರುಚಿಯೋ, ಗುಣ ಸ್ವಭಾವವೋ ಜಾತಿ ಆಗಿಬಿಡುತ್ತದೆ ಸರಿ. ಆದರೆ ‘ನಾನೇ ಮೇಲು’ ಎಂಬ ಈ ‘ಶ್ರೇಷ್ಠತೆಯ ವ್ಯಸನ’ ಇದೆಯಲ್ಲ ಇದು; ವಿವೇಕ’ ಇರೋ ಮನುಷ್ಯ ಸಂಕುಲದಲ್ಲಿ ಮಾತ್ರ. ಅದು ಯಾವುದೇ, ಯಾರದೇ ಭಾಷಣವಿರಲಿ ಸಾಮಾನ್ಯವಾಗಿ ಶುರುವಾಗುವುದು ‘ಅಣ್ಣತಮ್ಮಂದಿರೇ’ ಎಂದಲ್ಲವೇ? ಆಸ್ತಿ ಹಂಚಿಕೊಳ್ಳುವುದು ಬೇಡ ಸ್ವಾಮಿ, ಒಟ್ಟಿಗೆ ಕೂತು ಒಂದೇ ಸಾಲಿನಲ್ಲಿ ಊಟ ಮಾಡಲೇನು ಅಡ್ಡಿ? ಹೆಗಲ ಮೇಲೆ ಕೈಹಾಕಿ ಪ್ರೀತಿಯಿಂದ ಮಾತನಾಡಿಸಲೇನು ಸಂಕಟ? ನಮ್ಮೂರ ದೇವಸ್ಥಾನಕ್ಕೆ ಇದೇ ಅಣ್ಣತಮ್ಮಂದಿರೆಲ್ಲ ಬಂದರೇಕೆ ಕಿರಿಕಿರಿ?
ಸಮಸ್ಯೆ ಇರುವುದೇ ಈ ನಡೆನುಡಿಯ ನಡುವಿನ ಅಂತರದಲ್ಲಿ. ಅಸಲಿಗೆ ನಮ್ಮ ವೇದಗಳು, ಉಪನಿಷತ್ತುಗಳು ಜಗತ್ತಿನ ಹಿತವನ್ನೇ ಮಾತನಾಡುತ್ತವೆ. ಆದರೆ ವೇದದ ವಕ್ತಾರಿಕೆ ಹಿಡಿದೋರು ಜಗತ್ತಿನಲ್ಲಿ ಪಕ್ಕದ ಕೇರಿಯವನನ್ನೂ ಹತ್ತಿರ ಸೇರಿಸುವುದಿಲ್ಲ, ಶರಣರನ್ನು, ವಚನಕಾರರನ್ನು ಕಂಠಪಾಠ ಮಾಡಿರೋರು ಇದಾರೆ, ಅರ್ಥ ತಿಳಿದು ಆಚರಿಸುವವರನ್ನು ಹುಡುಕಬೇಕಷ್ಟೆ. ಕೋಲಾರ ಜಿಲ್ಲೆಯಲ್ಲಿ ಬಸ್ಸಿನಲ್ಲೊಮ್ಮೆ ಪ್ರಯಾಣಸಾಗಿತ್ತು. ಹಳ್ಳಿಯೊಂದರಲ್ಲಿ ಬಸ್ಸು ನಿಂತಾಗ ಕೆಲವು ಕಾಲೇಜು ಹುಡುಗರು ಹತ್ತಿದರು. ಹಾಗೆ ಬಂದು ಪಕ್ಕದಲ್ಲಿ ಕೂತವನ ಹತ್ತಿರ ಮಾತಿಗಿಳಿದಿದ್ದೆ. ಹೆಸರು, ಊರು, ಕಾಲೇಜು, ಕೋರ್ಸು, ಕಾಂಬಿನೇಶನ್ ಕೇಳುತ್ತಲೇ ‘ನಿಮ್ಮ ಊರಲ್ಲೊಂದು ಚರ್ಚ್ ಆಗಿದೆಯಂತಲ್ಲ, ಹೌದಾ?’ ಎಂದೆ. Read more 
ಮೊಬೈಲಿನಲ್ಲಿ ಕನ್ನಡ ಒಂದು ಸರ್ವೇ
-ರವಿ ಸಾವ್ಕರ್
ಸರ್ವೆಯಲ್ಲಿ 564 ಜನರು ಭಾಗವಹಿಸಿದ್ದರು . 31% ಜನರ ಮೊಬೈಲುಗಳಲ್ಲಿ ಕನ್ನಡ SMS ಅನ್ನು ಓದಬಹುದು ಎಂದು ತಿಳಿಸಿದ್ದಾರೆ .
“ ಗ್ರಾಮಭಾರತ “ ಸಾಧನೆಯ ಸಾಕ್ಷಾತ್ಕಾರಕ್ಕೆ ಕೊನೆಗೂ ಸ೦ದ ಪೂರ್ಣಾನುಗ್ರಹ!
-ರಾಘವೇಂದ್ರ ನಾವಡ
ಏನೂ ಮಾಡದೇ ಇರುವುದಕ್ಕಿ೦ತ ಏನನ್ನಾದರೂ ಮಾಡುವುದು ಸಾವಿರ ಪಾಲು ಉತ್ತಮವೆ೦ಬ ನಾವಡ ಉವಾಚವಿದೆ.. ಏನನ್ನಾದರೂ ಮಾಡುತ್ತಲೇ ಇರುವುದು ವ್ಯಕ್ತಿಯೋರ್ವನ ಸತತ ಕ್ರಿಯಾಶೀಲತೆಯನ್ನು ಅಭಿವ್ಯಕ್ತಿಸುತ್ತದೆ. ಏನನ್ನು ಮಾಡಬೇಕು ಮತ್ತು ಮಾಡಬಾರದು ಎನ್ನುವ ಆಯ್ಕೆ ಮಾತ್ರ ನಮ್ಮದು! ಕೆಲವರು ತಾವು ಬೆಳೆದುಬ೦ದದ್ದನ್ನು ಮರೆಯದೇ ಬೆಳೆದ ನ೦ತರ ಊರವರಿಗೆ ತನ್ನ ಗ್ರಾಮಕ್ಕೆ ಏನನ್ನಾದರೂ ಕೊಡುಗೆಯನ್ನು ನೀಡಬೇಕೆ೦ದು ಬಯಸಿದರೆ, ಏನನ್ನೂ ಮಾಡದಿದ್ದವರು ಇರುವವರಿ೦ದಲೇ ಎಲ್ಲವನ್ನೂ ಕಿತ್ತುಕೊ೦ಡು ತಮ್ಮ ಬೇಳೆ ಬೇಯಿಸಿಕೊಳುತ್ತಾರೆ!
ಎಲ್ಲವುದಕ್ಕಿ೦ತಲೂ ಮುಖ್ಯವಾಗಿ ಒಬ್ಬ ವ್ಯಕ್ತಿ ಸಮಾಜದಲ್ಲಿ ಒ೦ದು ಹ೦ತದಕ್ಕೆ ಮುಟ್ಟಿದನೆ೦ದರೆ ಜನತೆ ಅವರಿ೦ದ ನಿರೀಕ್ಷಿಸುವುದು ಬಹಳಷ್ಟಿರುತ್ತದೆ! ಕೆಲವರು ಆ ನಿರೀಕ್ಷೆಯ ಸಾಫಲ್ಯತೆಗಾಗಿ ಸ್ವಲ್ಪವಾದರೂ ಪ್ರಯತ್ನ ಪಟ್ಟರೆ.. ಇನ್ನು ಕೆಲವರು ನಿರೀಕ್ಷೆಗಳ ಹಿ೦ದೆ ಓಡುತ್ತಾ ತಮ್ಮ ಬದುಕನ್ನು ಗೋಜಲಿನೊಳಗೆ ಸಿಲುಕಿಸಿಕೊಳ್ಳಲು ಇಷ್ಟಪಡುವುದಿಲ್ಲ.. ದೇವರಿಟ್ಟ ಹಾಗೆ ಇರಲಿ! ಎನ್ನುವ೦ತೆ…
ಅದಕ್ಕೆ೦ದೇ ಮಾನವ ಕನಸನ್ನು ಕಾಣಬೇಕು ಎನ್ನುವುದು!.. ಕನಸು ಮು೦ದಿನ ಸಾಧನೆಯ ಹ೦ತಕ್ಕೆ ನಮ್ಮನ್ನು ಕೊ೦ಡೊಯ್ಯುವ ದಾರಿ ದೀಪ. ಕೆಲವರು ಕ೦ಡ ಕನಸಿನ ಬೆನ್ನನ್ನು ಹತ್ತುತ್ತಾರೆ.. ಇನ್ನು ಕೆಲವರು ರಾತ್ರಿ ಕ೦ಡ ಕನಸನ್ನು ಮತ್ತೊಬ್ಬರೊ೦ದಿಗೆ ಚರ್ಚಿಸುತ್ತಾ ಸುಮ್ಮನಿದ್ದು ಬಿಡುತ್ತಾರೆ!
ಯಾವಾಗ ಪಂದ್ಯ ಮುಗಿಯುತ್ತದೆ ಅನ್ನುವುದನ್ನು ವಿಧಿಯೇ ನಿರ್ಧರಿಸಲಿ ಅನ್ನುವುದು ನನ್ನ ಆಸೆ, ನಿನ್ನದು?
- ರಾಕೇಶ್ ಎನ್ ಎಸ್
ಇಷ್ಟೇ ಬರೆದು ಪತ್ರ ವ್ಯವಹಾರ ಶುರು ಮಾಡುವುದು ಪತ್ರ ಸಂಪ್ರದಾಯದ ಉಲ್ಲಂಘನೆ ಅನ್ನುವುದೇನೋ ನಿಜ. ಆದರೆ ನಾನು ಏನುಮಾಡಲಿ? ಯಾವ ಪ್ರಿಫಿಕ್ಸ್,ಸಫಿಕ್ಸ್ ಬಳಸೋದು ಅಂತ ಗೊತ್ತೇ ಆಗುತ್ತಿಲ್ಲ ಮಾರಾಯ್ತಿ. ಕಲ್ಲನ್ನು ಕಲ್ಲು ಎಂದು ಕರೆಯುವುದನ್ನು ಬಿಟ್ಟುಅದಕ್ಕೆ ಯಾವುದೇ ಪ್ರಿಫಿಕ್ಸ್ ಆಥವಾ ಸಫಿಕ್ಸ್ ಸೇರಿಸಿದರೂ ಅದು ತನ್ನ ಗುಣ, ಗುಣಮಟ್ಟ, ಆಕಾರ, ಆಕೃತಿ, ದೃವ್ಯರಾಶಿಗಳಲ್ಲಿ ಕಿಂಚಿತ್ತುಬದಲಾವಣೆ ತಂದು ಕೊಳ್ಳಲಾರದು ಎಂಬುದು ಕಲ್ಲು ಹೃದಯದವಳಾದ (ನೀನೇ ಕರೆದುಕೊಂಡಂತೆ) ನಿನಗೆ ಚೆನ್ನಾಗಿಯೇ ಗೊತ್ತಿದೆ.ನಾನು ನಿನ್ನನ್ನು ಏಕೆ ಗೌರವಿಸುತ್ತಿದ್ದೆ ಎಂದು ಕಾರಣ ಕೊಟ್ಟು ಹೇಳಬಹುದಾದ ಕೆಲವೇ ಕೆಲವು ಕಾರಣಗಳಲ್ಲಿ ಒಂದು ನೀನು stone hearted ಆಗಿದ್ದರೂ ಅದಕ್ಕಿಂತ ಹೆಚ್ಚು strong hearted ಆಗಿದ್ದದ್ದು. ಈ ಕಲ್ಲು ಹೃದಯಕ್ಕು ಗಟ್ಟಿ ಹೃದಯಕ್ಕೂ ಅಂಗ್ಲ ಭಾಷೆಯಲ್ಲಿಎರಡೇ ಎರಡು ಸ್ಪೆಲ್ಲಿಂಗ್ನ ವ್ಯತ್ಯಾಸವಷ್ಟೇ ಇದ್ದರೂ ಕೂಡ ಆ ಎರಡು ಸ್ಪೆಲ್ಲಿಂಗ್ಗಳು ನಮ್ಮ ವ್ಯಕ್ತಿತ್ವ, ವ್ಯವಹಾರ, ನಡೆ ನುಡಿಗಳಲ್ಲಿತರುವ ವ್ಯತ್ಯಯ ಅಪಾರವಾದದ್ದು. ಈ ಸ್ಪೆಲ್ಲಿಂಗ್ ವಿಷಯ ಬಿಟ್ಟು ಬಿಡೋಣ. ಏಕೆಂದರೆ ಈ ಎರಡು ಭಾಷೆಗಳಲ್ಲೂ ’ಅಪಾರ ಪಾಂಡಿತ್ಯ’ಸಂಪಾದಿಸಿರುವ ನಿನಗೆ ನಾನಂತೂ ಏನೂ ಹೇಳಲಾಗದು. “ನನ್ನದು ಏನೇ ಇದ್ದರೂ ಹೇಳಿ ಕೇಳಿ ಮೊದಲೇ ಚೂರು… ಪಾಪಿ ನಾನು”…
ಆದರೂ ನನಗೆ ನನ್ನ ಭಾವ ಮತ್ತು ಜ್ಞಾನ ಪರಿಧಿಯಲ್ಲಿ ಹೊಳೆದ ಒಂದು ಅಂಶವನ್ನು ನಿನ್ನ ಮುಂದೆ ಇಡುತ್ತೇನೆ. ಒಪ್ಪಿಕೊ ಎಂದುಒತ್ತಾಯಿಸಲಾರೆ… ಒಪ್ಪದಿದ್ದರೂ ನಾನೇನು ಕಳೆದುಕೊಳ್ಳಲಾರೆ. ನನ್ನ ಪ್ರಕಾರ ಕಲ್ಲು ಹೃದಯ ಎಂದರೆ ಪಲಾಯನವಾದ. ಯಾವುದೇಸ್ಥಿತಿ, ಪರಿಸ್ಥಿತಿ ಎದುರಾದಗಲೂ ಅದಕ್ಕೆ ಬೆನ್ನು ಹಾಕಿ ಓಡುವುದು. ಉದಾಹರಣೆಗೆ ನಾನು ನಿನಗೆ ಬೈದದ್ದೆ ಆದರೆ ಆಮೇಲೆ ಫೋನ್ರಿಸೀವ್ ಮಾಡದಿರುವುದು, ಮೆಸೆಜ್ಗೆ ರಿಪ್ಲೈ ಮಾಡದಿರುವುದು ಇತ್ಯಾದಿ. ಅದೇ ಗಟ್ಟಿ ಹೃದಯ ಎಂದರೆ ನಾನು ನಿನ್ನಲ್ಲಿ ಅದೇಷ್ಟೆ ಪರಿಪರಿಯಾಗಿ ಪಪ್ಪಿ ಕೇಳಿದ್ದರೂ ಕೂಡ ಅದನ್ನು ಕೊಡದೆ ಆದರೆ ನನ್ನನ್ನು ಕಳೆದುಕೊಳ್ಳದೆ ವ್ಯವಹರಿಸುತ್ತಿದ್ದಿ ಅಲ್ವಾ ಅದು. ಇದರಿಂದ ನಿನ್ನಬಗ್ಗೆ ನನಗಿದ್ದ ಪ್ರೀತಿ ಹೆಚ್ಚೇನು ಆಗಿಲ್ಲ. ಅದು ಆಗಲೂ, ಈಗಲೂ, ಆ ಕ್ಷಣವೂ, ಈ ಕ್ಷಣವೂ ಹಾಗೇ ಇದೆ ಸಾಗರದಂತೆ. ಅದರಸಾಂದ್ರತೆ, ತೀವೃತೆಯಲ್ಲಿ ಹೆಚ್ಚು ಕಡಿಮೆಯಾಗಿಲ್ಲ. ಅದ್ದರಿಂದ ನಾನು ನಿನ್ನಿಂದ ಏನು ನಿರೀಕ್ಷಿಸುತ್ತಿದ್ದೇನೆ ಎಂಬುದನ್ನು ನೀನು ಅರ್ಥಮಾಡಿಕೊಳ್ಳುವಲ್ಲೆ ಸಂಪೂರ್ಣ ಎಡವಿದ್ದಿ ಎಂದು ನನಗನಿಸುತ್ತೆ. ಅದ್ದರಿಂದಲೇ ಈ ಎಲ್ಲ ಸಮಸ್ಯೆ.
ದೆಹಲಿಗೂ ಹರಿಯಲಿ ಕಾವೇರಿ; ಇಲ್ಲದೇ ಹೋದರೆ ಸೋಲುವಿರಿ
-ರಾಕೇಶ್ ಎನ್ ಎಸ್
ಗಂಗಾ, ಯಮುನಾ ನದಿಗಳ ಹೆಸರು ಕೇಳಿದರೆ ನಿಮಗೆ ಯಾವುದಾದರೂ ರಾಜ್ಯದ ನೆನಪು ಆಗುತ್ತದೆಯೇ ಎಂದು ಹಿರಿಯ ಪತ್ರಕರ್ತರೊಬ್ಬರು ಕೇಳಿದರು. ನಾನು ಅವಾಕ್ಕಾದೆ. ಗಂಗಾ ನದಿಯೂ ಉತ್ತರಾ ಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಗಳಲ್ಲಿ ಜೀವ ನದಿಯಾಗಿ ಹರಿಯುತ್ತದೆ. ಉತ್ತರಾ ಖಂಡ, ಉತ್ತರ ಪ್ರದೇಶ, ಹರಿಯಾಣ, ದೆಹಲಿಗಳಿಗೆ ಯಮುನೆಯ ಜೀವದಾಯಿ. ಮಾತು ಮುಂದುವರಿಸಿದ ಅವರು ನನಗೆ ಕಾವೇರಿ ಅಂದರೆ ತಮಿಳುನಾಡಿನ ನೆನಪಾಗುತ್ತದೆ ಎಂದರು. ಹೌದು, ಕಾವೇರಿ ನದಿ ಸಂಪೂರ್ಣವಾಗಿ ತಮಿಳುನಾಡಿಗೆ ಸೇರಿದಾಗಿದ್ದು, ಕರ್ನಾಟಕ ಸುಮ್ಮನೆ ಕಿರಿಕ್ ಮಾಡುತ್ತಿದೆ ಎಂಬ ಭಾವನೆ ಕರ್ನಾಟಕದ ಹೊರಗೆ ಮಡುಗಟ್ಟಿದೆ ಎಂಬುದನ್ನು ಅವರು ನನಗೆ ಸೂಚ್ಯವಾಗಿ ಮನದಟ್ಟು ಮಾಡಿಕೊಟ್ಟಿದ್ದರು.

ವೈದ್ಯೋ ನಾರಾಯಣೋ ಹರಿ
ಮಧುಚಂದ್ರ ಭದ್ರಾವತಿ
ಪ್ರತಿ ಸೇವೆಗೆ ಸೇವಾ ಶುಲ್ಕವೆಂದು ಪ್ರತಿಯೊಂದು ಕಾರ್ಮಿಕ ವರ್ಗವು ಪಡೆಯುತ್ತದೆ . ಇಂದು ಸೇವಾ ಶುಲ್ಕದಲ್ಲಿ ಸೇವೆ ಎನ್ನುವ ಪದ ತಾನಾಗೆ ಬೇರ್ಪಟ್ಟಿದೆ. ಈಗ ಶುಲ್ಕದ ಮೇಲೆ ಮತ್ತೊಂದು ರೀತಿಯ ಶುಲ್ಕವನ್ನು ಹಾಕಿ ಹಲ್ಕಿರಿಯುತ್ತ ಗ್ರಾಹಕರನ್ನು ಶೋಷಣೆ ಮಾಡುವ ವ್ಯಾಮೋಹಕ್ಕೆ ತಮ್ಮ ಸಂಸ್ಕಾರವನ್ನು ಮರೆತು ಬಿಟ್ಟು ಹಗಲು ದರೋಡೆಯಲ್ಲಿ ಹಲವು ಕಾರ್ಮಿಕ ವರ್ಗಗಳು ನಿರತವಾಗಿವೆ. ಕೆಳ ಮಟ್ಟದ ಕಾರ್ಮಿಕ ವರ್ಗದಿಂದ ಹಿಡಿದು ಅತ್ಯುತ್ತಮ ಮಟ್ಟದ ಕಾರ್ಮಿಕ ವರ್ಗದವರೆಗೂ ಈ ಸಂಸ್ಕಾರ ಅಂಟಿಕೊಂಡಿದೆ(ಎಲ್ಲರು ಈ ವರ್ಗಕ್ಕೆ ಸೇರುವುದಿಲ್ಲ ,ಕೆಲವರು ಇದಕ್ಕೆ ಅಪವಾದ ).
ಅದಕ್ಕೆ ” ವೈದ್ಯ ” ಎಂಬ ಕಾರ್ಮಿಕ ವರ್ಗವು ಸಹ ತಡವಾಗಿ ಸೇರಿದರು ಎಲ್ಲ ವರ್ಗವನ್ನು ಮಿರಿ ಅತ್ಯಂತ ವೇಗವಾಗಿ ಮುನ್ನುಗುತ್ತಿದೆ. ಬಹುಶ ನಮ್ಮ ಸುತ್ತಮುತ್ತಲಿರುವ ವೈದ್ಯರನ್ನು ಮತ್ತು ಆಸ್ಪತ್ರೆಗಳನ್ನು ನೀವಾಗಿ ನಿಮ್ಮ ಮನದಲ್ಲಿ ಪ್ರಸ್ತಾಪಿಸಿದರೆ ಅದಕ್ಕೆ ತಕ್ಕ ಮಟ್ಟಿಗೆ ಉತ್ತರ ನಿಮಗೆ ದೊರೆಯುತ್ತದೆ . ಸೇವಾ ಮನೋಭಾವ ಎಂಬುದನ್ನು ಮರೆತು, ಕೇವಲ ಹಣಕ್ಕಾಗಿ ತಮ್ಮನ್ನು ಮಾರಿಕೊಂಡು ತಮ್ಮ ಮೂಲ ವೃತ್ತಿಗೆ ದ್ರೋಹ ಬಗೆಯುತ್ತ ಜೀವನವೆಂಬ ರಥವನ್ನು ಎಳೆಯುತ್ತಾ ರೋಗಿಗಳ ರಕ್ತವನ್ನು ಕುಡಿಯುತ್ತಿರುತ್ತಾರೆ. ವಾಸ್ತವ ಹೇಗಿದೆ ಎಂದರೆ ಇಂದು ವೈದ್ಯನೆಂದರೆ ಹಣ ಕೀಳುವ ಜಿಗಣೆ ಎಂಬಂತಾಗಿದೆ.
ಟೆಕ್ಕಿಗಳಿಂದ ಕನ್ನಡ ಹಾಸ್ಯ ನಾಟಕೋತ್ಸವ
ಪವನ್ ಪಾರುಪತ್ತೇದಾರ
ಪ್ರತಿದಿನ C++, Java,.net ಸರ್ವರ್ರುಗಳ ಮಧ್ಯೆ ಇರುವ ಸಾಫ್ಟ್ವೇರ್ ಇಂಜಿನಿಯರುಗಳ ತಂಡವೇ ರಂಗತಂತ್ರ. 2008ರಲ್ಲಿ ಸ್ಥಾಪಿತವಾದ ಈ ತಂಡ, ಹವ್ಯಾಸಿ ನಾಟಕಕಾರರನ್ನು ಹೊಂದಿದ್ದು, ಇಲ್ಲಿಯವರೆಗೂ 8 ಪ್ರದರ್ಶನಗಳನ್ನು ನೀಡಿದೆ. ಈ ಹವ್ಯಾಸಿ ಟೆಕ್ಕಿ ಕಲಾವಿದರು ತಮ್ಮ ಕಚೇರಿಯ ಬಿಡುವಿಲ್ಲದ ಸಮಯದ ಮಧ್ಯೆ, ತಮ್ಮ ವೀಕೆಂಡುಗಳನ್ನೆಲ್ಲ ಬದಿಗಿಟ್ಟು, ಬಹಳಷ್ಟು ಕಷ್ಟ ಪಟ್ಟು ಅಭ್ಯಾಸ ಮಾಡಿ, ಅಕ್ಟೋಬರ್ ತಿಂಗಳಲ್ಲಿ ನಿಮ್ಮ ಮುಂದೆ ಹಾಸ್ಯ ನಾಟಕೋತ್ಸವ ನಡೆಸಲು ಸಜ್ಜಾಗಿದ್ದಾರೆ.
ತಂಡದ ಮೇಷ್ಟ್ರು ಮಹದೇವ್ ಪ್ರಸಾದ್ ಯುವಪಡೆಯೊಂದನ್ನು ಸಜ್ಜು ಮಾಡಿಕೊಂಡಿದ್ದು, ನಾಟಕ ಪ್ರಿಯರಿಗೆ ನಗೆಯ ಹಬ್ಬದೂಟ ಬಡಿಸಲು ತಯಾರಿ ನಡೆಸುತಿದ್ದಾರೆ. ಲಾಕ್ ಔಟ್ ಅಲ್ಲ ನಾಕೌಟ್, ಶ್ರೀ ಕೃಷ್ಣ ಸಂಧಾನ ಮತ್ತು ಬಂಡ್ವಾಳವಿಲ್ಲದ ಬಡಾಯಿಯಂತಹ ಪ್ರಸಿದ್ಧ ಹಾಸ್ಯ ನಾಟಕಗಳನ್ನು ನಿಮ್ಮ ಮುಂದಿಡಲು ಕಾತುರದಿಂದ ಕಾಯುತಿದ್ದಾರೆ. ನಾಟಕ ಪ್ರಿಯರೆಲ್ಲ ಬಂದು ಸಾಫ್ಟ್ ವೇರ್ ಟೆಕ್ಕಿಗಳ ಪ್ರಯತ್ನವನ್ನು ಪ್ರೋತ್ಸಾಹಿಸಿ ಹರಸಬೇಕಾಗಿ ವಿನಂತಿ.
ನಾಟಕ ಪ್ರದರ್ಶನ ನಡೆಯುವ ದಿನಾಂಕಗಳು ಕೆಳಗಿನಂತಿವೆ.
ಅಕ್ಟೋಬರ್ 12 – ಶ್ರೀ ಕೃಷ್ಣ ಸಂಧಾನ
ಅಕ್ಟೋಬರ್ 13 – ಬಂಡ್ವಾಳವಿಲ್ಲದ ಬಡಾಯಿ
ಶ್ರೀ ಕೃಷ್ಣ ಸಂಧಾನ : ರಚನೆ : ವಿ ಎನ್ ಅಶ್ವಥ್
ವಿದ್ಯೆ ಇಲ್ಲದ ಹಳ್ಳಿ ಜನ ನಾಟಕ ಮಾಡಲು ಹೊರಟಾಗ ಎದುರಾಗುವ ಛಾಲೆಂಜುಗಳೇನು, ಅ ಹಳ್ಳಿ ಜನಕ್ಕೆ ನಾಟಕ ಹೇಳಿಕೊಡಲು ಬರುವ ಮೇಷ್ಟ್ರಿಗೆ ಅದರ ಅರಿವಿರೋದಿಲ್ಲ. ಬಂದು ಇವ್ರಿಗೆ ನಾಟಕ ಹೇಳಿಕೊಡಕ್ಕೆ ಶುರು ಮಾಡಿ ಗೆಜ್ಜೆಗ್ ಪೂಜೆ ಮಾಡ್ಸೋ ಅಷ್ಟ್ರಲ್ಲಿ ಮೇಷ್ಟ್ರು ಗೋಳು ಕೇಳಕ್ಕಾಗಲ್ಲ. ಅಂತಹ ಮೇಷ್ಟ್ರು ಮತ್ತೆ ಶಿಶ್ಯಂದಿರ ನಡುವೆ ನಡೆವ ನಗೆ ನಾಟಕ ಕೃಷ್ಣ ಸಂಧಾನ. ಈ ನಾಟಕ ಈಗಾಗ್ಲೆ ಕನ್ನಡದ ನಾಟಕ ಪ್ರಿಯರಿಗೆಲ್ಲ ಚಿರಪರಿಚಿತ. ಆದಕ್ಕೆ ಕಾರಣ ನಾಟಕದ ಪ್ರತಿಯೊಂದು ಸಾಲಿನಲ್ಲು ಇರುವ ನಗೆಮಿಠಾಯಿ ಅಂದ್ರೆ ತಪ್ಪಾಲ್ಲ ಬಿಡಿ. ನಾಟಕದ ಪ್ರತಿಯೊಂದು ಲೈನ್ ಸಹ ಪಂಚ್ ಲೈನ್. ನೀವೆಷ್ಟು ಬಾರಿ ನೋಡಿದರೂ ಬೇಜಾರಾಗದ ನಾಟಕ ಇದು. ಇಂತಹ ನಗೆಯ ರಸಾಯನ ಸಹ ರಂಗತಂತ್ರದ ಹಾಸ್ಯೋತ್ಸವದ ಕೊಡುಗೆ.
ಆಯಸ್ಕಾಂತ
-ಪ್ರಜ್ವಲ್ ಕುಮಾರ್
ಈ ಮೊಬೈಲ್ ಅಲ್ಲಿ ಬ್ಯಾಟರಿನೆ ಇರಲ್ಲ ಗೇಮ್ ಆಡೋಣ ಅಂದ್ರೆ”,
“ಲೋ! ಬ್ಯಾಟಲ್ ಫೀಲ್ಡ್ ಗೇಮ್ ಸಿ.ಡಿ. ಇದ್ರೆ ಕೊಡೋ ಆ ಗೇಮ್ ಆಡಿಲ್ಲ ನಾನು”,
“ಒಂಥರಾ ಬೋರ್ ಹೊಡೀತಾ ಇದೆ ಕಣೆ! ಯಾವ್ದಾದ್ರು ಮೂವಿ ನೋಡೋಣ? ಟಿ.ವಿ. ಆನ್ ಮಾಡು, ಹೇಯ್! ಹ್ಯಾರಿ ಪಾಟರ್ ಬರ್ತಾ ಇದೆ ಕಣೆ. ಇರ್ಲಿ ಬಿಡು”
ಪೇಟೆಯಲ್ಲಿಯೇ ಹುಟ್ಟಿ, ಬೆಳೆದ ಅದೆಷ್ಟೋ ಸಣ್ಣ ಮಕ್ಕಳು ಇಷ್ಟು ಹೊತ್ತಿನ ತನಕ ಹೇಳಿದ ರೀತಿಲೇ ಮಾತಾಡ್ತಾ ಇರೋದನ್ನ ಕೇಳ್ತಾ ಇರ್ತೀವಿ. ಅದ್ಯಾಕೋ ಗೊತ್ತಿಲ್ಲ, ಕೆಲವು ಜನ ತಮ್ಮ ಮಕ್ಕಳಿಗೆ Read more 






