Skip to content

Posts from the ‘ಧರ್ಮ’ Category

30
Apr

ಬೌದ್ಧ, ಬ್ರಾಹ್ಮಣ ಮತ್ತು ಗೋಭಕ್ಷಣೆ

- ಸಾತ್ವಿಕ್ ಎನ್ ವಿ

ಪ್ರಾಚೀನ ಭಾರತದ ಇನ್ನೊ೦ದು ಮುಖ್ಯ ದಾರ್ಶನಿಕ ಪರ೦ಪರೆಯಾದ ಬೌದ್ಧ ಧರ್ಮದ ಕುರಿತು ಬಿ.ವಿ. ವೀರಭದ್ರಪ್ಪ ಅವರು ವೇದಾ೦ತ ರೆಜಿಮೆ೦ಟ್ ಮತ್ತು ಇತರ ಲೇಖನಗಳು ಎ೦ಬ ಕೃತಿಯ ಸುಮಾರು ೧೪ ಅ೦ಕಣಬರಹಗಳಲ್ಲಿ ಸವಿಸ್ತಾರವಾಗಿ ಚರ್ಚಿಸಿದ್ದಾರೆ. ಭಾರತದ ಇತಿಹಾಸದಲ್ಲಿ ಬೌದ್ಧ ಮತ್ತು ವೈದಿಕರ ನಡುವಿನ ಹೋರಾಟವು ಮಹತ್ವದ್ದಾಗಿದೆ. ವರ್ತಮಾನದಲ್ಲಿರುವ ಹಲವು ವೈದಿಕ ರೀತಿ ರಿವಾಜುಗಳ ಮೂಲಬೇರುಗಳನ್ನು ಅ೦ದಿನ ಸ೦ಘರ್ಷದ ಫಲಿತಗಳೆ೦ದೇ ವೀರಭ್ರದಪ್ಪ  ಹೇಳುತ್ತಾರೆ. ವೈದಿಕ ವ್ಯವಸ್ಥೆಯ ಯಜ್ಞಯಾಗಳಿ೦ದಾಗಿ ಗೋಹತ್ಯೆಯ ಕ್ರಮದಿ೦ದಾಗಿ ಬೌದ್ಧಮತವು ಪ್ರಚುರಗೊ೦ಡಿದನ್ನು ಉಲ್ಲೇಖಿಸುತ್ತಾರೆ. ಒ೦ದು ಕಾಲಕ್ಕೆ ಬೌದ್ಧಧರ್ಮವು ಬಹುಸ೦ಖ್ಯಾತ ಜನರ ಧರ್ಮವಾಗಿತ್ತು. ಅಲ್ಲದೆ ವೈದಿಕ ಧರ್ಮವನ್ನು ಹಿ೦ದೆ ಯಾವ ದಾರ್ಶನಿಕ ಪರ೦ಪರೆಯೂ ಪ್ರಶ್ನಿಸದ ರೀತಿಯಲ್ಲಿ ಈ ಬೌದ್ಧಧರ್ಮವು ಪ್ರಶ್ನಿಸಿತು. ಇದರಿ೦ದಾಗಿ ವೈದಿಕವಾದವು ತನ್ನ ಪ್ರಭಾವವನ್ನು ಕಳೆದುಕೊಳ್ಳುತ್ತಿತ್ತು. ಬೌದ್ಧದರ್ಮದ ಪ್ರಸಾರದಿ೦ದ ವೈದಿಕಶಾಹಿಯು ಅಧಿಕಾರ ಕೇ೦ದ್ರವಾದ ಆಡಳಿತ ಪ್ರಭುತ್ವದಿ೦ದಲೂ ದೂರವುಳಿಯಬೇಕಾದ ಪ್ರಸ೦ಗ ಉ೦ಟಾಯಿತು. ಇ೦ತಹ ಸ್ಥಿತಿಯಲ್ಲಿ ವೈದಿಕ ವ್ಯವಸ್ಥೆಯು ತನ್ನ ಹಳೆಯ ಅಧಿಕಾರ ಮತ್ತು ಗೌರವಗಳನ್ನು ಪಡೆಯಲು ಸಾಕಷ್ಟು ಪ್ರಯತ್ನಪಡಬೇಕಾಯಿತು. ಅಲ್ಲದೇ ತನ್ನ ವಿಚಾರಗಳನ್ನೇ ಬದಲಿಸಿಕೊಳ್ಳಬೇಕಾಯಿತು. ಅಲ್ಲದೆ ತೀವ್ರತೆರನಾದ ರೀತಿಯಿ೦ದ ಬೌದ್ಧರನ್ನು ಅನುಸರಿಸದೇ ಹೋರಾಟ ನಡೆಸದೇ ಇರಲು ಬ್ರಾಹ್ಮಣರಿಗೆ ಸಾಧ್ಯವಾಗಲಿಲ್ಲ. ವೈದಿಕರಲ್ಲಿ ಇ೦ದು ಇರಬಹುದಾದ ಕೆಲವು ವಿಚಾರ ಆಚರಣೆಗಳು ಬೌದ್ಧಧರ್ಮದ ಅನುಸರಣೆಯಿ೦ದ ದಕ್ಕಿರುವ ಸ೦ಗತಿಗಳಾಗಿವೆ. ಉದಾಹರಣೆಯಾಗಿ ಬುದ್ಧನ ಮರಣಾನ೦ತರ ಆತನ ಅನುಯಾಯಿಗಳು ಅವನ ಮೂರ್ತಿಗಳನ್ನು ರಚಿಸಿ ಸ್ತೂಪಗಳನ್ನು ನಿರ್ಮಿಸಿದರೆ ಅದೇ ಮಾದರಿಯಲ್ಲಿ ವೈದಿಕರು ಶಿವ, ವಿಷ್ಣು ಮು೦ತಾದ ದೇವಾಲಯಗಳನ್ನು ನಿರ್ಮಿಸಿ ತಮ್ಮತ್ತ ಜನರನ್ನು ಆಕರ್ಷಿಸಲು ಪ್ರಯತ್ನಿಸಿದರು. Read more »

17
Apr

ದನ ತಿಂದ್ರೆ ತಪ್ಪು ಜನಾನ್ ಬೇಕಾದ್ರೆ ತಿವ್ಕೊಳ್ಳಿ! …

-ಅಶೋಕ್ ಕೆ.ಆರ್

ಹೈದರಾಬಾದಿನ ಉಸ್ಮಾನಿಯ ವಿಶ್ವವಿದ್ಯಾನಿಲಯದಲ್ಲಿ ಅದೇನೋ ಬೀಫ್ ಫೆಸ್ಟಿವಲ್ ಅಂತ ಮಾಡ್ತಾರಂತೆ. ದನದ ಮಾಂಸ ಮಾಡಿ ಹಬ್ಬವನ್ನಾಚರಿಸುತ್ತಾರಂತೆ. ‘ಊಟ ನಮ್ಮಿಷ್ಟದಂತಿರಬೇಕು’ ಎಂಬುದ್ದಿಶ್ಯದಿಂದ ಆರಂಭವಾದ ಹಬ್ಬವಂತೆ. ಈ ಸಂದರ್ಭದಲ್ಲಿ ಹಬ್ಬದ ಪರವಾಗಿದ್ದ ವಿದ್ಯಾರ್ಥಿಯೊಬ್ಬನಿಗೆ ಚೂರಿ ಇರಿತವಾಗಿರುವ ಸುದ್ದಿ ಬಂದಿದೆ. ದನದ ರಕ್ಷಕರು ಜನರನ್ನು ಭಕ್ಷಿಸುತ್ತಿರುವ ಕಥೆಯಿದು!
          ಭಾರತದಲ್ಲಿ ಗೋಮಾಂಸ ಸೇವನೆಯ ಬಗ್ಗೆ ಇರುವ ಇತಿಹಾಸ ಆಸಕ್ತಿಕರವಾಗಿದೆ. ಧರ್ಮದ ಇತಿಹಾಸಕಾರರ ಲೇಖನಗಳ ಪ್ರಕಾರ ಸನಾತನ ಹಿಂದೂ ಧರ್ಮದಲ್ಲಿ ಬ್ರಾಹ್ಮಣರಲ್ಲೂ ಮಾಂಸ ಸೇವನೆ ಸಾಮಾನ್ಯವಾಗಿತ್ತು. ಗೋಮಾಂಸವೂ ಅದಕ್ಕೆ ಹೊರತಾಗಿರಲಿಲ್ಲ (ಇತ್ತೀಚೆಗೆ ಬಲಪಂಥೀಯತೆಯ ಪಟ್ಟ ಹೊತ್ತಿರುವ ಎಸ್.ಎಲ್. ಭೈರಪ್ಪನವರ ಉತ್ತಮ ಕೃತಿಗಳಲ್ಲೊಂದಾದ ‘ಪರ್ವ’ದಲ್ಲೂ ಗೋಮಾಂಸ ಸೇವಿಸುವ ಹಿಂದೂಗಳಿದ್ದಾರೆ). ಹಿಂದೂ ಧರ್ಮದಲ್ಲಿ ಗೋಮಾಂಸ ಸೇವನೆಗೆ ವಿರೋಧ ವ್ಯಕ್ತವಾಗಿ ನಿಷೇಧಕ್ಕೊಳಗಾಗಿದ್ದು ಬುದ್ಧ ಧರ್ಮದಿಂದ! ಅಹಿಂಸಾ ತತ್ವವನ್ನು ಭೋದಿಸುವ ಬುದ್ಧ ಧರ್ಮ ಹೆಚ್ಚೆಚ್ಚು ಪ್ರಚಲಿತಗೊಳ್ಳುತ್ತಿದ್ದಂತೆ ಗಾಬರಿಗೊಳಗಾದ ಹಿಂದೂ ಪಂಡಿತರು ಮಾಂಸ ಸೇವನೆ ನಿಷೇಧಿಸುವ ತೀರ್ಮಾನ ಕೈಗೊಳ್ಳುತ್ತಾರೆ. ಮಾಂಸದ ಸವಿಯಾದ ರುಚಿಯನ್ನುಂಡವರು ಅಷ್ಟು ಸುಲಭವಾಗಿ ಬಿಟ್ಟಾರೆಯೇ?! ಬ್ರಾಹ್ಮಣರು ಎಲ್ಲ ಮಾಂಸ ತೊರೆದು ಉಳಿದ ಕೆಲವರು ಗೋಮಾಂಸ ತೊರೆಯುತ್ತಾರೆ. ಹಿಂದೂ ಧರ್ಮದಿಂದ ಶೋಷಣೆಯನ್ನಷ್ಟೇ ಪಡೆದುಕೊಂಡಿದ್ದ ಬಹಳಷ್ಟು ಸಮುದಾಯಗಳು ಯಾವ ಮಾಂಸ ಸೇವನೆಯನ್ನೂ ತೊರೆಯುವುದಿಲ್ಲ. Read more »
2
Apr

‘ಕೋಮುವಾದ ಮತ್ತು ಮಹಿಳೆ’ ಎಂಬ ಲೇಖನಕ್ಕೊಂದು ಪ್ರತಿಕ್ರಿಯೆ

- ಡಾ.ಜಿ. ಭಾಸ್ಕರ ಮಯ್ಯ

ಸಬಿಹಾರವರ ಮಹಿಳೆ ಮತ್ತು ಕೋಮುವಾದ ಇಂದು ವಿವಾದಕ್ಕೆ ಒಳಗಾಗಿರುವುದು ಜನರ ಕೋಮುವಾದೀಕರಣದ ಪ್ರಕ್ರಿಯೆ ಎಷ್ಟೊಂದು ಉಲ್ಬಣಿಸಿದೆ ಎನ್ನುವುದಕ್ಕೆ ಸಾಕ್ಷಿ. ಸಬಿಹಾರವರ ಲೇಖನದ ಯಾವ ಒಂದು ವಾಕ್ಯವೂ ಅಸತ್ಯದಿಂದ ಕೂಡಿಲ್ಲ. ಪೂರ್ವಾಗ್ರಹಪೀಡಿತವಾಗಿಲ್ಲ. ಅದು ವಾಸ್ತವಕ್ಕೆ ಹಿಡಿದ ಕನ್ನಡಿಯಂತಿದೆ. ಹಾಗೆ ನೋಡಿದರೆ, ಗುಜರಾತಿನ ಬಗ್ಗೆ ಲೇಖಕಿ ಹೇಳಿರುವುದು ಕಡಿಮೆಯೆ. ಅಲ್ಲಿಯ ನರಮೇಧ ಮತ್ತು ಮಹಿಳೆಯರ ಮೇಲಿನ ಭಯಾನಕ ಅತ್ಯಾಚಾರ ಮಧ್ಯಯುಗದ ಯಾವುದೇ ಧರ್ಮಯುದ್ಧ, ಕ್ರುಸೇಡ್ ಮತ್ತು ಜಿಹಾದ್‌ಗೆ ಕಡಿಮೆಯಿಲ್ಲ. ಮನುಷ್ಯತ್ವದಲ್ಲಿ ನಂಬಿಕೆ ಇರುವವರಿಗೆ ಆಕ್ರೋಶ ಉಂಟಾಗುವಂತಹ ಸನ್ನಿವೇಶದ ಚಿತ್ರಣವನ್ನು ಲೇಖಕಿ ಅತ್ಯಂತ ಸಹನೆಯಿಂದ ಉಲ್ಲೇಖಿಸುತ್ತಾರೆ. ಕೋಮುವಾದದ ವಿವಿಧ ಮುಖಗಳನ್ನು ಮತ್ತು ಆಯಾಮಗಳನ್ನು ಚರ್ಚಿಸುತ್ತಾರೆ. ಆದರೆ, ಲೇಖನದ ಆರಂಭದಲ್ಲಿ ಫಣಿರಾಜರವರು ಕೋಮುವಾದದ ಕುರಿತು ಹೇಳಿದ ಮಾತಿನ ಒಂದು ಉಲ್ಲೇಖವಿದೆ. ಅದು …ಬಹುಸಂಖ್ಯಾತರ ಸಂಸ್ಕೃತಿಗೆ ಅಲ್ಪಸಂಖ್ಯಾತರು ಹೊರಗಿನವರು ಎಂದು ವಾದಿಸಿ ದ್ವೇಷ ತಿರಸ್ಕಾರಗಳನ್ನು ಬೆಳೆಸುವುದೇ ಕೋಮುವಾದ – ಕೋಮೂವಾದಕ್ಕೆ ಇಂತಹ ಸರಳ ವ್ಯಾಖ್ಯೆ ಸರಿಯಲ್ಲ. ಫಣಿರಾಜ್ ಮತ್ತು ಜಿ. ರಾಜಶೇಖರ್ ಕೋಮುವಾದವನ್ನು ವಿರೋಧಿಸುವಲ್ಲಿ ನಿಷ್ಪಕ್ಷಪಾತಿಗಳಾಗಿರದೆ, ಒಂದು ಕೋಮಿನ ಕೋಮುವಾದದ ಕುರಿತು ಮೌನವಹಿಸುವುದು ಅಥವಾ ಅಂತಹ ಸಂಸ್ಥೆಗಳೊಂದಿಗೆ ಸಂಬಂಧವನ್ನಿರಿಸಿಕೊಳ್ಳುವುದು ನಿಜಕ್ಕೂ ಆಕ್ಷೇಪಾರ್ಹ. ಆದರೆ ಸಬಿಹಾರವರ ಬರವಣಿಗೆ ಈ ನಿಟ್ಟಿನಲ್ಲಿ ದೋಷಮುಕ್ತವಾಗಿದೆ. ಅವರು ಪಾಕಿಸ್ತಾನ, ಬಾಂಗ್ಲಾ ಮತ್ತು ತಸ್ಲೀಮಾ ನಜರೀನ್ ಅವರನ್ನು ಉಲ್ಲೇಖಿಸುತ್ತಾ ನೆರೆಯ ದೇಶಗಳಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲಿನ ದೌರ್ಜನ್ಯದ ಕುರಿತೂ ಹೇಳುತ್ತಾರೆ. ಸಬಿಹಾರವರ ಲೇಖನ ಈ ನಿಟ್ಟಿನಲ್ಲಿ ವಾಸ್ತವವಾದೀ, ಮಾನವತಾವಾದೀ ಬರವಣಿಗೆಯೆಂಬುದು ನಿಸ್ಸಂಶಯ.

Read more »

2
Apr

ವಿವೇಕಾನಂದರ ವಾರಸುದಾರರು ಕೋಮುವಾದಿಗಳಲ್ಲ – ಪ್ರಗತಿಪರರು

- ಡಾ.ಭಾಸ್ಕರ್ ಮಯ್ಯ

ಆಧುನಿಕ ತತ್ವಶಾಸ್ತ್ರದ ಇತಿಹಾಸದಲ್ಲಿ ಸ್ವಾಮಿ ವಿವೇಕಾನಂದರಿಗೆ ಪ್ರಮುಖವಾದ ಸ್ಥಾನವಿದೆ. ವೇದಾಂತ ದರ್ಶನಕ್ಕೆ ನೂರಾರು ವ್ಯಾಖ್ಯಾನಗಳಿವೆ. ಆದರೆ ಅವುಗಳಲ್ಲಿ ಪ್ರಮುಖ ಸ್ಥಾನವಿರುವುದು `ಶಾಂಕರ ವೇದಾಂತ’ಕ್ಕೆ. ಆದರೆ, ಶಂಕರರು ವೇದಾಂತ ದರ್ಶನಕ್ಕೆ ವ್ಯಾಖ್ಯಾನ ಬರೆದಿರುವುದು ಭಾವವಾದೀ ದೃಷ್ಟಿಯಿಂದ ಶಂಕರರು ಭಾವವಾದದ ಮೇರು ಶಿಖರ ಎಂಬಲ್ಲಿ ಎರಡು ಮಾತಿಲ್ಲ. ಅವರಿಗೆ ಸರಿಗಟ್ಟುವ ಭಾವವಾಣಿ ದಾರ್ಶನಿಕರುಪಾಶ್ಚಾತ್ಯ ದರ್ಶನ ಶಾಸ್ತ್ರದಲ್ಲಿ ದೊರಕುವುದಿಲ್ಲ. ಆದರೆ, ವಿವೇಕಾನಂದರು ವೇದಾಂತಕ್ಕೆ ವ್ಯವಹಾರಿಕ ರೂಪವನ್ನು ಕೊಟ್ಟರು. ಈ ಬಗೆಯ ವ್ಯಾಖ್ಯಾನ ಕೂಡಾ ತತ್ವಶಾಸ್ತ್ರಕ್ಕೆ ನವನವೀನ.

ಅಗಾಧ ಪ್ರತಿಭೆ
1863ನೆಯ ಇಸವಿ ಜನವರಿ 12 ರಂದು ಕಲ್ಕತ್ತಾದ ಒಂದು ಕ್ಷತ್ರಿಯ ಕುಟುಂಬದಲ್ಲಿ ಜನಿಸಿದ ವಿವೇಕಾನಂದರು ಅಗಾಧ ಪ್ರತಿಭೆಯ ವ್ಯಕ್ತಿ. ಆ ಕಾಲದಲ್ಲಿಯೇ ಬಿ.ಎ. ಶಿಕ್ಷಣ ಮುಗಿಸಿದ ವಿವೇಕಾನಂದರು ( ಮೂಲ ಹೆಸರು ನರೇಂದ್ರನಾಥ) ವಿದ್ಯಾರ್ಥಿ ಜೀವನದಲ್ಲಿ ನಾಸ್ತಿಕರಾಗಿದ್ದರು. ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ಅವರ ಚಿಂತನಾ ಕ್ರಮವೇ ಬದಲಾಯಿತು.ರಾಮಕೃಷ್ಣರು ಮಹಾನ್ ಸಂತರಾಗಿದ್ದರೂ ಅನಕ್ಷರಸ್ತರು. ವಿವೇಕಾನಂದರು ಇಂಗ್ಲಿಷ್ ಮತ್ತು ಸಂಸ್ಕೃತ ಭಾಷೆಯ ಪ್ರಖಾಂಡ ಪಂಡಿತರು. ರಾಮಕೃಷ್ಣ ಪರಮಹಂಸರು ಮತ್ತು ವಿವೇಕಾನಂದರು ಒಂದೇ ಜೀವನದ ಎರಡು ಮುಖಗಳು ಅಥವಾ ಒಂದೇ ಸತ್ಯದ ಎರಡು ರೂಪಗಳು. ಇನ್ನೊಂದು ಬಗೆಯಲ್ಲಿ ಹೇಳುವುದಾದರೆ ರಾಮಕೃಷ್ಣರು ಅನುಭೂತಿ  ಆದರೆ ವಿವೇಕಾನಂದರು ಅವರ ವ್ಯಾಖ್ಯಾನ ಅಭಿವ್ಯಕ್ತಿ.

ವಿವೇಕಾನಂದರು ಹಾರ್ಬರ್ತ್ ಸ್ಪೆನ್ಸರ್ ಹಾಗೂ ಜಾನ್ ಸ್ಟುವರ್ಟ್ರಮಿಲ್ ಅವರ ಪ್ರೇಮಿಯಾಗಿದ್ದರು. ಶೆಲಿ, ವರ್ಡ್ಸ್ವರ್ತ್ರ ದಾರ್ಶನಿಕತೆ, ಹೆಗಲ್ನ ವಸ್ತುನಿಷ್ಠ ಆದರ್ಶವಾದ ಹಾಗೂ ಫ್ರಾನ್ಸಿನ ರಾಜ್ಯಕ್ರಾಂತಿ ವಿವೇಕಾನಂದರನ್ನು ತೀವ್ರವಾಗಿ ಪ್ರಭಾವಿಸಿತ್ತು.
ವಿವೇಕಾನಂದರು ಕೇವಲ 39 ವರ್ಷಗಳ ಕಾಲ ಜೀವಿಸಿದ್ದರೂ ಅವರ ಸಂದೇಶ ಇವತ್ತಿನ ಕೋಮುವಾದಿ ರಾಜಕೀಯಕ್ಕೆ ಅತ್ಯಂತ ಪ್ರಬಲವಾದ ಶಸ್ತ್ರ. ರಾಮಮೋಹನ್ ರಾಯ್, ಕೇಶವ ಚಂದ್ರ ಸೇನ್, ದಯಾನಂದ ಸರಸ್ವತಿ, ರಾನಡೆ, ಅನಿಬೆಸೆಂಟ್ ಮತ್ತು ರಾಮಕೃಷ್ಣರು ಹದಮಾಡಿದ ನೆಲದಲ್ಲಿ ವಿವೇಕಾನಂದರು ಅಶ್ವತ್ಥದಂತೆ ಬೆಳೆದು ನಿಂತರು. ಇಂದು ಕೋಮುವಾದಿಗಳು ಆ ಅಶ್ವತ್ಥದ ರೆಂಬೆಕೊಂಬೆಗಳನ್ನು ಕಡಿದು ಯೂಪಸ್ಥಂಭ (ಬಲಿಸ್ಥಂಭ)ವನ್ನಾಗಿ ರೂಪಿಸುತ್ತಿದ್ದಾರೆ.

Read more »

22
Mar

ಬೆಟ್ಟದಾ ಬುಡದಲ್ಲಿ ಹುಟ್ಟಿರುವ ವೃಕ್ಷಕ್ಕೆ…

ಸೋಮಾಲಿಯಾದ ಕಳ್ಳರು ಸೆರೆಹಿಡಿದು ಆತನನ್ನೂ ಆತನ ಜೊತೆಗಾರರನ್ನೂ ಹಡಗಿನಲ್ಲೇ ಬಂಧಿಸಿದ್ದರು. ಅನ್ನ-ನೀರು ಸರಿಯಾಗಿ ಇಲ್ಲದೇ ಮೂರುಹಗಲು ಮೂರು ರಾತ್ರಿ ಕಳೆದುಹೋಗಿತ್ತು. ಶರೀರ ನಿತ್ರಾಣವಾಗಿತ್ತು. ಸಿರಿವಂತ ವ್ಯಾಪಾರಿಯ ಉದ್ಯೋಗಿಯಾಗಿ ಯಾಕಾದರೂ ಸೇರಿಕೊಂಡೆನೋ ಎನ್ನಿಸಿಬಿಟ್ಟಿತ್ತು. ಆತ ಮಲಗೇ ಇದ್ದ. ಜೊತೆಗಾರರನ್ನೂ ಅದೇ ಹಡಗಿನಲ್ಲಿ ಎಲ್ಲೆಲ್ಲೋ ಬಂಧಿಸಲಾಗಿತ್ತು. ನಾಳೆ ಬೆಳಗಾದರೆ ತಮ್ಮೆಲ್ಲರನ್ನೂ ಕೊಲ್ಲುವುದಾಗಿ ಹೇಳಿದ್ದನ್ನು ಆತ ಕೇಳಿದ್ದ. ಭಾರತ ಸರಕಾರದ ಸಂಬಂಧಪಟ್ಟ ಅಧಿಕಾರಿಗಳಿಗೆ ತಮ್ಮನ್ನು ಕಳ್ಳರು ಹೈಜಾಕ್ ಮಾಡಿ ಬಂಧಿಸಿದ ವರದಿ ತಲ್ಪಿದೆಯೋ ಇಲ್ಲವೋ ತಿಳಿದಿರಲಿಲ್ಲ. ಭಾರತೀಯ ನೌಕಾಪಡೆಯ ತುಕಡಿಗಳನ್ನಾದರೂ ಕಳಿಸಿ ತಮ್ಮನ್ನೆಲ್ಲಾ ರಕ್ಷಿಸಿ ಕರೆದೊಯ್ಯಬಹುದಿತ್ತಲ್ಲ ಎಂದು ಆತ ಯೋಚಿಸುತ್ತಿದ್ದ.

ಕಳ್ಳರು ಸಾಮಾನ್ಯ ಕ್ರೂರಿಗಳಾಗಿರಲಿಲ್ಲ; ಹಿಡಿದ ಜನರನ್ನು ಏನೂ ಮಾಡಲು ಹೇಸದ ಜನ ಅವರಾಗಿದ್ದರು. ಮನುಷ್ಯರನ್ನೇ ಕೊಂದು ತಿಂದು ಬದುಕಬಹುದಾದ ಮಾನವರೇ ಅಲ್ಲದ ರಕ್ಕಸರು ಅವರು. ಒಬ್ಬೊಬ್ಬರೂ ಯಮದೂತರಂತೇ ಕಾಣುತ್ತಿದ್ದರು. ಅವರ ಕೆಂಗಣ್ಣುಗಳನ್ನು ನೆಟ್ಟಗೆ ನೋಡಲು ಹೆದರಿಕೆಯಾಗುತ್ತಿತ್ತು. ಉದ್ದುದ್ದ ಬೆಳೆದ ಉಗುರುಗಳು ಬಾಕುಗಳಂತೇ ಕೆಲಸಮಾಡುತ್ತಿದ್ದವು. ಮೊಂಡುತಲೆಯ ಕುರುಚಲು ಕೂದಲು, ಚಿತ್ರವಿಚಿತ್ರ ಗತಿಯ ಗಡ್ಡ-ಮೀಸೆಗಳು, ನಾರುವ ಜೀನ್ಸು ದಿರಿಸುಗಳು ಇವುಗಳನ್ನೆಲ್ಲಾ ನೋಡಿದಾಗ ಬಹಳ ಅಸಹ್ಯವಾಗುತ್ತಿತ್ತು. ಬದುಕಿನ ಕೊನೆಗಳಿಗೆ ಬಂದೇಬಿಡುತ್ತದೆಂದು ಕನಸಲ್ಲೂ ಎಣಿಸದ ಆತ ಪಶ್ಚಾತ್ತಾಪ ಪಡುತ್ತಿದ್ದ. ತಾನು ಸತ್ತರೆ ಹೆಂಡತಿ-ಮಕ್ಕಳ ಗತಿ ಮುಂದೇನು ಎಂಬ ಚಿಂತೆಯಲ್ಲಿ ಹೊಟ್ಟೆಯ ಹಸಿವೂ ಅಡಗಿಹೋಗಿತ್ತು! ನಿರ್ದಯಿಗಳ ಕೂಗು-ಘರ್ಜನೆ ಸದಾ ನಡೆದೇ ಇತ್ತು. ಆಗಾಗ ಪಿಸ್ತೂಲಿನಿಂದ ಸಿಡಿಯುವ ಗುಂಡುಗಳ ಸದ್ದು ಕೇಳಿಸುತ್ತಿತ್ತು. ಅದು ಯಾರು ಯಾರಿಗೆ ಹಾರಿಸಿದ್ದು ಎಂಬುದು ಮಾತ್ರ ಗೊತ್ತಾಗುತ್ತಿರಲಿಲ್ಲ.

Read more »

19
Mar

ಭಕ್ತಿ ಆಂದೋಲನದ ಪರಿಪ್ರೇಕ್ಷ್ಯದಲ್ಲಿ ‘ನಳಚರಿತ್ರೆ’

-ಡಾ| ಜಿ. ಭಾಸ್ಕರ ಮಯ್ಯ

ಭಾಗ – 1

ಭಕ್ತಿ ಆಂದೋಲನವು ಶ್ರೀನಗರದಿಂದ ಕನ್ಯಾಕುಮಾರಿಯ ತನಕ ಹಾಗೂ ಗುಜರಾತಿನಿಂದ ಬಂಗಾಲದ ತನಕ ವ್ಯಾಪಿಸಿತ್ತು. ಇದು ಈ ದೇಶದ ಮಧ್ಯಯುಗದ ಅತೀ ದೊಡ್ಡ ಜನಾಂದೋಲನ.

ಸಂತರೆಂದರೆ ಯಾರು? ಕೆಲವರು ನಿರ್ಗುಣ ಪಂಥದ ಸಾಧುಗಳನ್ನು ಸಂತರೆನ್ನುತ್ತಾರೆ.ಸಂಸಾರ ತ್ಯಾಗ ಮಾಡಿದವರಿಗೆ ಮಾತ್ರ ಸಂತರೆನ್ನುವುದು ತಪ್ಪು ಕಲ್ಪನೆ. ಏಕೆಂದರೆ, ಎಷ್ಟೋ ಜನ ಸಂತರು ಗೃಹಸ್ಥರಿದ್ದರು. ಅಂತೆಯೇ ಸಂತರಲ್ಲಿ ಹಿಂದೂ-ಮುಸ್ಲಿಂ ಭೇದ ಕೂಡಾ ತಪ್ಪು. ಏಕೆಂದರೆ ಇಸ್ಲಾಂ ಮತದ ರೂಢಿವಾದದ ವಿರುದ್ಧ ಸಿಡಿದೆದ್ದ ಸಾವಿರಾರು ಮುಸ್ಲಿಂ ಸಂತರಿದ್ದರು. ಸಂತರೆಂದರೆ ಕೇವಲ ಗಂಡಸರೆಂದರೆ ಅದೂ ತಪ್ಪು. ಏಕೆಂದರೆ, ಮೀರಾ, ಅಕ್ಕಮಹಾದೇವಿ, ತಾಜ್, ಸಂಕವಿ ಯಂತವರು ಗಣನೀಯವಾಗಿ ಸಿಗುತ್ತಾರೆ.

ಅಂದರೆ ಸಂತರಲ್ಲಿ ಸನ್ಯಾಸಿ ಗೃಹಸ್ಥ, ಹಿಂದೂ, ಮುಸ್ಲಿಂ, ಗಂಡು-ಹೆಣ್ಣು, ನಿರ್ಗುಣವಾದಿ, ಸಗುಣವಾದಿ ಎಲ್ಲರೂ ಸೇರುತ್ತಾರೆ.

ಇವರು ಲೋಕಧರ್ಮ ಸಂಸ್ಥಾಪಕರು. ಪುರೋಹಿತರು ಮತ್ತು ಮೌಲ್ವಿಗಳ ಭಾಷೆ, ಸಂಸ್ಕೃತ ಮತ್ತು ಅರಬಿಯಾಗಿತ್ತು. ಆದರೆ, ಸಂತರು ಜನಭಾಷೆಯಲ್ಲಿ ಬರೆದರು.

ಇವರ ಸಾಮಾಜಿಕ ಆಧಾರ ಯಾವುದು?
ಅವರು ನೇಕಾರರು, ಬಡಗಿಗಳು, ಕೃಷಿಕರು, ಕೂಲಿಗಾರರು, ವ್ಯಾಪಾರಿಗಳು ಇತ್ಯಾದಿ ನಾನಾ ಶ್ರಮ ಆಧಾರಿತ ವೃತ್ತಿಯಲ್ಲಿರುವವರು.

ಇದು ಭಾರತೀಯ ಪರಿಪ್ರೇಕ್ಷ್ಯದ ಕೇವಲ ಒಂದು ಆಕಸ್ಮಿಕ ಘಟನೆ ಅಲ್ಲ, ಬದಲಿಗೆ ದೇಶದ ಆರ್ಥಿಕ,ಸಾಮಾಜಿಕ ಪರಿಸ್ಥಿತಿಗಳ ಅನಿವಾರ್ಯ ಉತ್ಪನ್ನ. ಆದ್ದರಿಂದಲೇ ಇದು ಒಂದು ಭಾಷೆಗಾಗಲೀ, ಒಂದು ಪ್ರದೇಶಕ್ಕಾಗಲೀ ಸೀಮಿತವಾಗಿರಲಿಲ್ಲ. ಅಂತೆಯೇ ಸಂತ ಸಾಹಿತ್ಯದ ಉಗಮವನ್ನು ಭಾರತೀಯ ಜೀವನದ ತನ್ನದೇ ಪರಿಸ್ಥಿತಿಗಳಲ್ಲಿ ಆರ್ಥಿಕ,ಸಾಮಾಜಿಕ ಪರಿಸ್ಥಿತಿಗಳಲ್ಲಿ ಹುಡುಕಬೇಕೇ ಹೊರತು ಬೌದ್ಧ ಅಥವಾ ಇಸ್ಲಾಂ ಮತಗಳ ಹಿನ್ನೆಲೆಯಲ್ಲಿ ಅಲ್ಲ.

Read more »

12
Mar

ಸಂಸ್ಕೃತಿ ಸಂಕಥನ – 26 – ಭಾರತೀಯರ ನೈತಿಕ ಸ್ವರೂಪ

-ರಮಾನಂದ ಐನಕೈ

ನೈತಿಕತೆ ಅಂದರೆ ಏನು? ಜಗತ್ತಿನ ಎಲ್ಲಾ ಸಂಸ್ಕೃತಿಗಳ ನೈತಿಕ ಪ್ರಜ್ಞೆ ಒಂದೇ ತೆರನಾಗಿದೆಯೇ? ಪ್ರಸ್ತುತ ಭಾರತೀಯ ಸಂದರ್ಭದಲ್ಲಿ ಇಂತಹ ಸೂಕ್ಷ್ಮ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಇದು ಸ್ಪಷ್ಟವಾಗದಿದ್ದರೆ ನಾವು ನಮ್ಮ ಸಂಸ್ಕೃತಿಯನ್ನು ಅರಿತುಕೊಳ್ಳಲು ತೊಡಕಾಗುತ್ತದೆ.

ಯುರೋಪಿಯನ್ನರ ನೈತಿಕ ಪ್ರಜ್ಞೆಗೂ ಭಾರತೀಯರ ನೈತಿಕಪ್ರಜ್ಞೆಗೂ ಅಜಗಜಾಂತರ ವ್ಯತ್ಯಾಸವಿದೆ. ಪಾಶ್ಚಾತ್ಯರು ನೈತಿಕತೆಯನ್ನು ಗ್ರಹಿಸುವ ರೀತಿಯೇ ಬೇರೆ, ನಾವು ನಿರ್ಣಯಿಸುವ ರೀತಿಯೇ ಬೇರೆ. ಭಾರತೀಯ ಪುರಾಣಗಳು ನೈತಿಕತೆಯ ಬುನಾದಿ ಅನ್ನುತ್ತೇವೆ. ನಮ್ಮ ಸಂಸ್ಕೃತಿಯಲ್ಲಿರುವಷ್ಟು ನೀತಿ ಬೇರೆಲ್ಲೂ ಇಲ್ಲ ಅನ್ನುತ್ತೇವೆ. ರಾಮ, ಕೃಷ್ಣ, ಬುದ್ಧ, ಬಸವ, ಸೀತಾ, ತಾರಾ, ಮಂಡೋದರಿ ಮುಂತಾಗಿ ನೈತಿಕ ಆದರ್ಶದ ಮಾಡೆಲ್ಗಳೇ ನಮ್ಮ ಇತಿಹಾಸ ಹಾಗೂ ಪುರಾಣಗಳಲ್ಲಿ ಸಿಗುತ್ತವೆ. ಇಷ್ಟಾಗಿಯೂ ಐರೋಪ್ಯರು ಭಾರತೀಯರನ್ನೇಕೆ ಅನೈತಿಕರು ಅಂದರು?

ಯುರೋಪಿಯನ್ನರು ಭಾರತಕ್ಕೆ ಬಂದಾಗ ಅವರಿಗೆ ಇಲ್ಲಿನ ಸಂಸ್ಕೃತಿ ಅರ್ಥವಾಗಲಿಲ್ಲ. ಇಡೀ ಭಾರತೀಯ ಸಂಸ್ಕೃತಿಗೆ ನೈತಿಕ ತಳಪಾಯವೇ ಇಲ್ಲ ಎಂದು ನಿರ್ಣಯಿಸಿದರು. ಭಾರತೀಯರಿಗೆ ಮೊರಲ್ ಹಾಗೂ ಎಥಿಕ್ಸ್ನ ಕಲ್ಪನೆಯೇ ಇಲ್ಲ. ನಾಗರಿಕತೆಯಿಂದ ಬಹಳ ಹಿಂದುಳಿದಿದ್ದಾರೆ. ಇದೊಂದು ಪತನಗೊಂಡ ಸಂಸ್ಕೃತಿ. ಇಲ್ಲಿನ ಮೂತರ್ಿಪೂಜೆ, ಜಾತಿಪದ್ಧತಿ, ಸಾಮಾಜಿಕ ಆಚರಣೆಗಳೆಲ್ಲವೂ ಅವರಿಗೆ ಅನೈತಿಕ ಆಚರಣೆಗಳಂತೆ ಕಂಡವು. ಭಾರತೀಯರು ಅಪ್ರಾಮಾಣಿಕರು, ಸುಳ್ಳು ಹೇಳುವವರು ಹಾಗೂ ಮೋಸಗಾರರು ಎಂಬುದಾಗಿ ವಣರ್ಿಸಿದರು. ಭಾರತೀಯ ಸಂಸ್ಕೃತಿ ಭ್ರಷ್ಟಗೊಂಡಿದೆ ಎಂದು ವ್ಯಾಖ್ಯಾ ನಿಸಿದರು. ಆದ್ದರಿಂದ ಭಾರತದ ಪುನರುದ್ಧಾರಕ್ಕೆ ಕೈಹಾಕಿದರು. ಈ ಕಾರಣಕ್ಕಾಗೇ ಹಲವು ಕಾನೂನು ಗಳನ್ನು ಮಾಡಿದರು. ಭಾರತದ ಜಾತಿ ವ್ಯವಸ್ಥೆಯನ್ನಂತೂ ಎಥಿಕಲ್ ಭ್ರಷ್ಟಾಚಾರದ ಮೂರ್ತರೂಪ ಎಂದರು. ಭಾರತೀಯರ ಎಥಿಕ್ಸೇ ಅನೈತಿಕವೆಂದು ಜರಿದ ಬಗ್ಗೆ ಸಹಸ್ರ ಉದಾಹರಣೆಗಳಿವೆ.

Read more »

10
Mar

ಬಿಲ್ವಪತ್ರೆ- ಮರ, ಪತ್ರೆ, ಹಣ್ಣು-ಕಾಯಿ….ಹೂ

-ಸುಗುಣ ಮಹೇಶ್

ತ್ರಿದಲಂ ತ್ರಿಗುಣಕಾರಂ
ತ್ರಿನೇತ್ರಂ ಚ ತ್ರಯಾಯುಧಂ
ತ್ರಿಜನ್ಮಪಾಪ ಸಂಹಾರಮ್
ಏಕ ಬಿಲ್ವಮ್ ಶಿವಾರ್ಪಣಂ||
ಈ ಶ್ಲೋಕ ಎಲ್ಲರೂ ಕೇಳಿರಲೇ ಬೇಕಲ್ಲವೇ..
ಮೂರು ದಳದಂತಿರುವ ಈ ಪತ್ರೆಯನ್ನು ತ್ರಿನೇತ್ರನಾದವನು, ತ್ರಿಗುಣಗಳಂತಿರುವ ಮೂರು ನಯನಗಳುಳ್ಳವನೂ ಆದ ಹಾಗೂ ಅತಿ ಚೂಪಾದ ಮೂರು ಭಾಗಗಳಿರುವ ಆಯುಧವಾದ ತ್ರಿಶೂಲವನ್ನು ಕೈಯಲ್ಲಿ ಹಿಡಿದಿರುತ್ತಾನೋ ಅವನು ನನ್ನೇಲ್ಲಾ ಮೂರು ಜನ್ಮದ ಪಾಪಗಳನ್ನು ನಾಶ ಮಾಡೆಂದು ಬೇಡುತ್ತ ಈ ಬಿಲ್ವಪತ್ರೆಯನ್ನು ಸರ್ಪಿಸುತ್ತೇನೆ.. ಎಂಬುದೇ ಈ ಶ್ಲೋಕದ ಅರ್ಥ….
ಶಿವನಿಗೆ ತ್ರಿದಳ ಬಿಲ್ವವನ್ನು ಅರ್ಪಿಸುವುದರ ಹಿಂದೆ ಮನಃಶಾಸ್ತ್ರದ ಕಾರಣಗಳೂ ಇವೆಯೆಂದು ಹೇಳುತ್ತಾರೆ.. ಸತ್ತ್ವ,ರಜ ಮತ್ತು ತಮಗಳಿಂದ ಉತ್ಪತ್ತಿ, ಸ್ಥಿತಿ ಮತ್ತು ಲಯ ಉತ್ಪನ್ನವಾಗುತ್ತದೆ. ಬಾಲ್ಯಾವಸ್ಥೆ, ಯೌವನಾವಸ್ಥೆ ಮತ್ತು ವೃದ್ಧಾಪ್ಯ ಇವುಗಳ ಪ್ರತೀಕವೆಂದು ಶಂಕರನಿಗೆ ಬಿಲ್ವಪತ್ರೆಯನ್ನು ಅರ್ಪಿಸುತ್ತಾರೆ.
ಬಿಲ್ವ ಪತ್ರೆಯ ತೊಟ್ಟು ಲಿಂಗದ ಕಡೆಯೂ ಮತ್ತು ಎಲೆಗಳ ತುದಿಗಳು ನಮ್ಮೆಡೆಗೂ ಮಾಡಿ ದೇವರಿಗೆ ಬಿಲ್ವಪತ್ರೆಯನ್ನು ಅರ್ಪಿಸಬೇಕೆಂಬ ಪ್ರತೀತಿ ಇದೆ.
7
Mar

ಎಲ್ಲಿ ಎಲ್ಲಿ ರಾಗಮಾಲೆ ಇರುವನಲ್ಲಿ ಕೇಶವ ಎಲ್ಲಿ ಎಲ್ಲಿ ರಾಸಲೀಲೆ ಅಲ್ಲಿ ಒಲವಿನುತ್ಸವ

-ವಿ.ಆರ್.ಭಟ್
(ಆತ್ಮೀಯ ಓದುಗರೆ, ನಮಸ್ಕಾರ.ಸಾಹಿತ್ಯಾಸಕ್ತರಾದ ನಿಮ್ಮೆದುರಲ್ಲಿ ಪ್ರಚಲಿತವಿದ್ಯಮಾನಗಳಿಗೂ ಸ್ಪಂದಿಸುತ್ತಾ ನಾನು ಬಡಿಸುವುದು ’ಅಭಿಗಾರ’ –ಅದು ಪ್ರತೀ ಗುರುವಾರ. ಅಭಿಗಾರ ಎಂದರೆ ಹೆಚ್ಚಿನದಾಗಿ ತುಪ್ಪ ಅಥವಾ ತುಪ್ಪಹಾಕಿದ ಪಾಯಸದ ಗುಟುಕು. ಬಾಳೆಲೆಯ ಬಲಕೆಳಕೊನೆಯಲ್ಲಿ ಬಡಿಸುವ ಅಭಿಗಾರ ಊಟದ ಆರಂಭಕ್ಕೆ ಅನುಕೂಲಕಲ್ಪಿಸುವಂಥದ್ದು. ಗಾರುಬಿದ್ದ ಅನ್ನನಾಳದಲ್ಲಿ ಆಹಾರ ಸರಾಗವಾಗಿ ಇಳಿಯುವದಕ್ಕಾಗಿಯೂ, ಹೊಟ್ಟೆಯೊಳಗಿನ ವಾಯು ಶಮನಕ್ಕಾಗಿಯೂ, ಮೊದಲು ಧಾವಿಸಿ ಜಠರದಲ್ಲಿ ಆಹಾರ ಸ್ವೀಕರಿಸಲು ಬೇಕಾದ ಪೂರ್ವತಯಾರಿ ಮಾಡುವುದೇ ಈ ಅಭಿಗಾರ! ಈ ವಾರ ಮಾತ್ರ ದಿನಮೊದಲಾಗಿ ಅಂದರೆ ಇವತ್ತೇ ನನ್ನ ಆರಂಭಿಕ ಲೇಖನ ಪ್ರಕಟಮಾಡುತ್ತಿದ್ದೇನೆ-ಹೋಳೀ ಹಬ್ಬದ ನಿಮಿತ್ತ. ತಮ್ಮೆಲ್ಲರಿಗೂ ಸ್ವಾಗತವನ್ನು ಬಯಸಿ ವಂದನೆಗಳನ್ನೂ ಸಲ್ಲಿಸಿ ಅಭಿಗಾರಬಡಿಸುತ್ತಿದ್ದೇನೆ, ನಮಸ್ಕಾರಗಳು)

ಹೋಲಿಕಾ-ಕಾಮದಹನ ಎಂದು ಕರೆಯಲ್ಪಡುವ ಹೋಳಿಹಬ್ಬ ನಾಳೆ ಭಾರತಪೂರ್ತಿ ಆಚರಿಸಲ್ಪಡುತ್ತದೆ. ಹಾಗೆ ನೋಡಿದರೆ ಅಂತಹ ವಿಶೇಷ ಪೂಜೆ-ಪುನಸ್ಕಾರಗಳಿಲ್ಲದ ಈ ಹಬ್ಬದ ಮಹತ್ವ ಎಂಥದ್ದು ಎಂಬುದನ್ನು ತಿಳಿಯದೇ ಆಚರಿಸುವವರೂ ಇದ್ದಾರೆ! ಹೋಳಿ ಎಂದರೆ ಬರೇ ರಂಗಿನಾಟವೇ? ಹಾಗಾದರೆ ಅದು ಯಾತಕ್ಕೆ?ಸಂಸ್ಕೃತದ ಪರ್ವ ಎಂಬುದು ಕನ್ನಡದಲ್ಲಿ ಹಬ್ಬ ಎಂದಾಗಿದೆ. ನಮ್ಮ ಪ್ರತಿಯೊಂದೂ ಹಬ್ಬದ ಹಿಂದೆ ಮನೋವೈಜ್ಞಾನಿಕ, ವೈಜ್ಞಾನಿಕ ಕಾರಣಗಳಿವೆ ಎಂಬುದನ್ನು ಅದೆಷ್ಟೋ ಸಂಶೋಧನೆಗಳು ಅದಾಗಲೇ ತಿಳಿಸಿವೆ. ಚಳಿಗಾಲ ಕಳಿದು ಬೇಸಿಗೆ ಕಾಲಿಡುವದರೊಳಗಿನ ಸೇತುವೆಯಂತೇ ಇರುವ ಈ ಕಾಲಘಟ್ಟವನ್ನು ಆಂಗ್ಲರು ’ಸ್ಪ್ರಿಂಗ್ ಸೀಸನ್’ ಎನುತ್ತಾರೆ.

Read more »

23
Feb

ಹೀಗೊಂದು ವೇದೋಕ್ತ ವಿವಾಹ

-ಕ.ವೆಂ.ನಾಗರಾಜ್

ಸುಮಾರು ಒಂದು ವರ್ಷದ ಹಿಂದಿನ ಘಟನೆ. ಅವನ ಹೆಸರು ಸುನಿಲ, ಓರ್ವ ಸ್ಫುರದ್ರೂಪಿ ಹಿಂದೂ ತರುಣ, ಹಾಸನ ಮೂಲದವನು. ಅವಳು ಒಲಿವಿಯ, ಮನಮೋಹಕ ಚೆಲುವಿನ ಕ್ರಿಶ್ಚಿಯನ್ ನವಯುವತಿ, ಮಂಗಳೂರಿನ ಕಡೆಯವಳು. ಇಬ್ಬರಿಗೂ ಪರಿಚಯವಾಯಿತು, ಮಾತುಕಥೆಗಳಾದವು, ಪ್ರೇಮಾಂಕುರವಾಯಿತು. ಮದುವೆಯಾಗಲು ನಿರ್ಧರಿಸಿದರು. ಜಾತಿ ಬೇರೆಯಾದ್ದರಿಂದ ಎರಡೂ ಮನೆಯವರು ಪ್ರಾರಂಭದಲ್ಲಿ ಒಪ್ಪದಿದ್ದರೂ ಅವರ ಧೃಢ ನಿರ್ಧಾರದಿಂದಾಗಿ ಒಪ್ಪಿಗೆ ಸಿಕ್ಕಿತು. ಸುನಿಲನ ಇಚ್ಛೆಯಂತೆ ಹಿಂದೂ ಸಂಪ್ರದಾಯದಂತೆ ಮದುವೆಯಾಗಲು ಒಲಿವಿಯ ಸಮ್ಮತಿಸಿದಳು.

ವೇದೋಕ್ತ ರೀತಿಯಲ್ಲಿ ಮದುವೆಯಾಗಲು ನಿರ್ಧರಿಸಿ ಬೆಂಗಳೂರಿನ ವೇದಾಧ್ಯಾಯಿ ಸುಧಾಕರ ಶರ್ಮರನ್ನು ಭೇಟಿಯಾದರು. ಅವರು ಒಲಿವಿಯಳನ್ನು ಆಕೆ ಇನ್ನುಮುಂದೆ ಸುನಿಲನಂತೆ ಸಸ್ಯಾಹಾರಿಯಾಗಿರಲು ಸಾಧ್ಯವೇ ಎಂದು ವಿಚಾರಿಸಿದರು. ಆಕೆಗೆ ತಕ್ಷಣಕ್ಕೆ ಉತ್ತರಿಸಲಾಗಲಿಲ್ಲ. ಶರ್ಮರು ಹೇಳಿದರು -”ಆಹಾರ ಪದ್ಧತಿ ಬದಲಾಯಿಸಲು ನನ್ನ ಒತ್ತಾಯವಿಲ್ಲ. ಆದರೆ ಸಸ್ಯಾಹಾರಿಯಾಗಲು ನಿರ್ಧರಿಸಿದರೆ ಮಾತ್ರ ನಾನು ಮದುವೆ ಮಾಡಿಸುವೆ. ಇಲ್ಲದಿದ್ದರೆ ಬೇರೆಯವರ ಮಾರ್ಗದರ್ಶನದಲ್ಲಿ ಮದುವೆಯಾಗಬಹುದು. ನಿರ್ಧಾರವನ್ನು ಈ ಕೂಡಲೇ ತೆಗೆದುಕೊಳ್ಳಬೇಕಿಲ್ಲ. ನಿಧಾನವಾಗಿ ಯೋಚಿಸಿದ ನಂತರದಲ್ಲಿ ತಿಳಿಸಿ”. ನಂತರ ತಿಳಿಸುವುದಾಗಿ ಹೋದ ಅವರು ಕೆಲವು ದಿನಗಳ ನಂತರ ಮತ್ತೆ ಬಂದು ಶರ್ಮರನ್ನು ಭೇಟಿ ಮಾಡಿದರು. ಒಲಿವಿಯ ಇನ್ನುಮುಂದೆ ಸಸ್ಯಾಹಾರಿಯಾಗಿರಲು ನಿರ್ಧರಿಸಿದ್ದಳು.
Read more »

Follow

Get every new post delivered to your Inbox.

Join 265 other followers