Skip to content

Posts from the ‘ಮಾಹಿತಿ ಹಕ್ಕು’ Category

15
Mar

ನಮ್ಮ ಮೇಟ್ರೋದಲ್ಲಿ ಇನ್ನೂ ಸಿಗದ ಕನ್ನಡ

-ರವಿ ಸಾವ್ಕರ್

ವಿಶ್ವ ಗ್ರಾಹಕದ ದಿನದ ವಿಶೇಷ ಲೇಖನ [15ನೇ ಮಾರ್ಚ್]

ಕೆಲ ತಿಂಗಳ ಹಿಂದೆ “ನಮ್ಮ ಮೆಟ್ರೋ” ವಿನ ಅಧಿಕಾರಿಗಳು ದೈನಂದಿನ ಎಲ್ಲ ವ್ಯವಹಾರಗಳಲ್ಲಿ ಕನ್ನಡವನ್ನು ಬಳಕೆ ಮಾಡುವುದಾಗಿ ಹೇಳಿದ್ದರು. ಹಾಗೆಯೇ ಹೊರಗುತ್ತಿಗೆ ಕೊಟ್ಟಿರುವ ಸೆಕ್ಯೂರಿಟಿ ಗಾರ್ಡ್ ಎಜೆನ್ಸಿ ನವರಿಗೆ ಕನ್ನಡ ಓದಲು ಬರೆಯಲು ಬರುವವರನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ನಿಯಮ ಹಾಕಿದೀವಿ ಅಂತ ಸಹ ಹೇಳಿದ್ದರು. ಮೆಟ್ರೋ ಅಧಿಕಾರಿಗಳ ಹೇಳಿಕೆಗಳ ತುಣುಕು ಹೀಗಿದೆ. ಇವರು ಎಷ್ಟರ ಮಟ್ಟಿಗೆ ತಮ್ಮ ನಿಯಮಗಳನ್ನು ತಾವೇ ಪಾಲಿಸುತ್ತಾ ಇದಾರೆ ಅಂತ ನೋಡೋಣ.

ನೆನ್ನೆ ಮೇಟ್ರೋದಲ್ಲಿ ಒಮ್ಮೆ ಹೋಗಿ ಬರೋಣವೆಂದು ಮನೆ ಮಂದಿಯೆಲ್ಲ ಹೋಗಿದ್ದೆವು. ಮೆಟ್ರೋ ದಲ್ಲಿ ಈಗಲಾದರೂ ಕನ್ನಡ ಬಾರದ ಸೆಕ್ಯೂರಿಟಿ ಗಾರ್ಡ್ ಗಳಿಂದ ಮುಕ್ತಿ ಸಿಕ್ಕಿರಬಹುದೇನೋ ಅಂದುಕೊಂಡಿದ್ದೆ. ಆದರೆ ಬಯ್ಯಪ್ಪನಹಳ್ಳಿಯಲ್ಲಿ ಸಿಕ್ಕ ಮೊದಲ ಸೆಕ್ಯೂರಿಟಿ ಗಾರ್ಡ್ ಹಿಂದಿಯಲ್ಲಿ ಮಾತಾಡಿಸಲು ಶುರು ಮಾಡಿದ. ಕನ್ನಡದಲ್ಲಿ ಮಾತಾಡಿಸಿದಾಗ ಕನ್ನಡ ತನಗೆ ಗೊತ್ತಿಲ್ಲವೆಂದು ಉತ್ತರ ಕೊಟ್ಟ. ಕೆಲ ದಿನಗಳ ಹಿಂದೆ ಇದೆ ರೀತಿಯ ಧೋರಣೆಯ ಉತ್ತರವನ್ನು ಮೆಟ್ರೋ ಸೆಕ್ಯೂರಿಟಿ ಗಾರ್ಡ್ ಗಳು ಖಾಸಗಿ ಕನ್ನಡ ವಾಹಿನಿಗಳಿಗೆ ಕೊಟ್ಟಿದ್ದನ್ನು ಇಲ್ಲಿ ನೆನೆಯಬಹುದು.
ಇದನ್ನು ನೋಡಿದರೆ ಗಾರ್ಡ್ ವೆಲ್ ಸೆಕ್ಯೂರಿಟಿ ಎಜೆನ್ಸಿ ಗೆ ಕನ್ನಡ ಬರುವವರನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳಬೇಕು ಅಂತ ಶರತ್ತನ್ನು ನಿಜವಾಗಲೂ ವಿಧಿಸಿದ್ದಾರ ಅಂತ ಅನುಮಾನ ಬರುತ್ತದೆ.ದಿನಕ್ಕೆ ಸಾವಿರಾರು ಜನರನ್ನು ತಪಾಸಣೆ ಮಾಡುವ ಇವರಿಗೆ ಕನ್ನಡವೇ ಗೊತ್ತಿರದಿದ್ದರೆ ಹೇಗೆ? ಬೆಂಗಳೂರಿನ ಮೆಟ್ರೋ ಸ್ಟೇಷನ್ ಒಳಗೆ ಹಿಂದಿ ಕಲಿತೆ ಕಾಲಿಡಬೇಕು ಎಂದರೆ ಹೇಗೆ?
3
Feb

ಅಪಘಾತ ಎಂಬ ಬಹಿರಂಗ ಹತ್ಯೆ

- ಚಾಮರಾಜ ಸವಡಿ

ಪುಣೆಯಲ್ಲಿ ಬುಧವಾರ ಸಂಭವಿಸಿದ ಘಟನೆ ನಿರ್ಲಕ್ಷ್ಯದ ಚಾಲನೆ ಅಥವಾ ರೋಷಾವೇಶದ ಚಾಲನೆ ಕುರಿತ ಪ್ರಶ್ನೆಗಳನ್ನು ಮತ್ತೆ ಎತ್ತಿದೆ. ತಲೆ ಕೆಟ್ಟ ಚಾಲಕನೊಬ್ಬ ಸರ್ಕಾರಿ ಬಸ್ಸನ್ನು ಮನಸೋಇಚ್ಛೆ ಚಾಲನೆ ಮಾಡಿ ೧೦ ಜನ ಅಮಾಯಕರ ಸಾವಿಗೆ ಹಾಗೂ ೩೫ಕ್ಕೂ ಹೆಚ್ಚು ಜನ ಗಾಯಗೊಳ್ಳಲು ಕಾರಣನಾಗಿದ್ದಾನೆ.

ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವ ಘಟನೆಗಳು ಇತ್ತೀಚೆಗೆ ಹೆಚ್ಚುತ್ತಿರುವುದೇಕೆ?

ನಿಜ, ಎಲ್ಲರಿಗೂ ಅವರದೇ ಆದ ವೈಯಕ್ತಿಕ ಸಮಸ್ಯೆಗಳಿದ್ದೇ ಇರುತ್ತವೆ. ಆದರೆ, ಭಾವಾವೇಶಕ್ಕೆ ಒಳಗಾಗಿ ರಸ್ತೆಗಿಳಿಯುವ ಮನಃಸ್ಥಿತಿ ಎಂಥದು? ಅದರಲ್ಲೂ ಪಕ್ಕದಲ್ಲಿ ಹಾಗೂ ಎದುರು ಇರುವ ವಾಹನಗಳನ್ನು ಹಿಂದಿಕ್ಕಿ ಹೋಗಬೇಕೆನ್ನುವ ಚಪಲ ಏಕೆ ಉಂಟಾಗುತ್ತದೆ? ರಸ್ತೆ ಸೂಚನೆಗಳನ್ನು ಉಲ್ಲಂಘಿಸುವ, ಇತರರ ಸರಾಗ ಚಲನೆಗೆ ಅಡ್ಡಿಪಡಿಸುವ ಮನಃಸ್ಥಿತಿ ಏಕೆ ಮೂಡುತ್ತದೆ?

ಹೆಚ್ಚುತ್ತಿರುವ ಒತ್ತಡ

ಇತ್ತೀಚಿನ ದಿನಗಳಲ್ಲಿ ಒತ್ತಡ ಪ್ರಮಾಣ ಹೆಚ್ಚುತ್ತಿದೆ. ಕೆಲಸದ ಸ್ಥಳಗಳ ಒತ್ತಡ ಬಹಳಷ್ಟು ಸಾರಿ ಇಂಥ ತಲೆಕೆಟ್ಟ ನಡತೆಗಳಿಗೆ ಕಾರಣವಾಗಿದ್ದೂ ಉಂಟು. ಮೇಲಧಿಕಾರಿಗಳ ಒತ್ತಡ, ಹಿಂಸೆ, ಸಹೋದ್ಯೋಗಿಗಳ ಕಿರಿಕಿರಿ, ಕೆಲಸದ ಸ್ಥಳದಲ್ಲಿ ಮೂಲಸೌಕರ್ಯಗಳ ಕೊರತೆ, ಅಸ್ತವ್ಯಸ್ತ ಕೆಲಸದ ಅವಧಿ, ರಜೆ ಕೊಡದಿರುವುದು, ಸರಿಯಾದ ವೇತನ/ಸೌಲಭ್ಯ ನೀಡದಿರುವುದು- ಹೀಗೆ ಹಲವಾರು ಕಾರಣಗಳಿಂದ ಒತ್ತಡ ಉಂಟಾಗುತ್ತದೆ. ಇದಕ್ಕೆ ವೈಯಕ್ತಿಕ ಸಮಸ್ಯೆಗಳ ಒತ್ತಡವೂ ಸೇರುತ್ತದೆ. Read more »

Follow

Get every new post delivered to your Inbox.

Join 265 other followers