Skip to content

Posts from the ‘ವಿಜ್ಞಾನ’ Category

28
May

ವೈಜ್ಞಾನಿಕ ಮನೋಧರ್ಮ ಉಳ್ಳ ಶ್ರೀಸಾಮಾನ್ಯ

-ಎ.ವಿ.ಜಿ ರಾವ್

ಶಾಲೆಗೇ ಹೊಗದಿರುವ ಶ್ರೀಸಾಮಾನ್ಯನೂ ವಿಜ್ಞಾನ ಪದವೀಧರನಿಗಿಂತ ಹೆಚ್ಚು ವೈಜ್ಞಾನಿಕ ಮನೋಧರ್ಮ ಉಳ್ಳವನಾಗಿರುವುದು ಸಾಧ್ಯ. ವೈಜ್ಞಾನಿಕ ಮನೋಧರ್ಮ ಅಂದರೇನು ಅನ್ನುವುದರ ಕುರಿತು ಪಾಂಡಿತ್ಯಪೂರ್ಣ ಪ್ರವಚನ ನೀಡಬಲ್ಲವರು, ವೈಜ್ಞಾನಿಕ ಸಂಶೋಧನೆ ಮಾಡುವುದನ್ನೇ ತಮ್ಮ ಕಾಯಕವನ್ನಾಗಿಸಿಕೊಂಡಿರುವ ‘ವೃತ್ತಿಪರ’ ವಿಜ್ಞಾನಿಗಳು ತಮ್ಮ ವೈಯಕ್ತಿಕ ಬದುಕಿನಲ್ಲಿ ವೈಜ್ಞಾನಿಕ ಮನೋಧರ್ಮ ಪ್ರದರ್ಶಿಸದಿರುವ ಅಸಂಖ್ಯ ನಿದರ್ಶನಗಳು ಲಭಿಸುತ್ತವೆ. ವೈಜ್ಞಾನಿಕ ಮನೋಧರ್ಮ ಅಂದರೇನು ಎಂಬುದನ್ನು ತಿಳಿಯದೆಯೂ (ನೋಡಿ:ವಿಜ್ಞಾನ ವಿಧಾನ, ವೈಜ್ಞಾನಿಕ ಮನೋಧರ್ಮ, ವೈಜ್ಞಾನಿಕ ಪ್ರವೃತ್ತಿ, ಮೂಢನಂಬಿಕೆಗಳು) ವಿಜ್ಞಾನದ ಗಂಧಗಾಳಿ ಇಲ್ಲದೆಯೂ ನಿತ್ಯಜೀವನದಲ್ಲಿ ವೈಜ್ಞಾನಿಕ ಮನೋಧರ್ಮ ಉಳ್ಳವರಾಗಿರುವುದು ಸಾಧ್ಯ.

ಈ ಮುಂದೆ ವಿವರಿಸಿರುವ ಲಕ್ಷಣಗಳು ನಿಮ್ಮಲ್ಲಿ ಇದ್ದರೆ ನೀವೂ ವೈಜ್ಞಾನಿಕ ಮನೋಧರ್ಮ ಉಳ್ಳವರು. ಇಲ್ಲದೇ ಇದ್ದರೆ ಅವನ್ನು ಪ್ರಜ್ಞಾಪೂರ್ವಕವಾಗಿ ನಿಮ್ಮದಾಗಿಸಿಕೊಳ್ಳಲು ಪ್ರಯತ್ನಿಸಿ, ಮುಂದೊಂದು ದಿನ ನಿಮಗರಿವಿಲ್ಲದೆಯೇ ವೈಜ್ಞಾನಿಕ ಮನೋಧರ್ಮ ಉಳ್ಳವರು ನೀವಾಗಿರುತ್ತೀರಿ.

ಈ ಮುಂದಿನ ಕಾಲ್ಪನಿಕ ವಿದ್ಯಮಾನದ ನಿದರ್ಶನದಲ್ಲಿ ವರ್ಣಿಸಿದ ವ್ಯಕ್ತಿ ನೀವಾಗಿರಬಹುದೇ—–

Read more »

21
May

ವಿಜ್ಞಾನ ವಿಧಾನ, ವೈಜ್ಞಾನಿಕ ಮನೋಧರ್ಮ, ವೈಜ್ಞಾನಿಕ ಪ್ರವೃತ್ತಿ, ಮೂಢನಂಬಿಕೆಗಳು

- ಎ.ವಿ.ಜಿ ರಾವ್

ವಿಜ್ಞಾನ ವಿಧಾನದಲ್ಲಿ (ಸೈಂಟಿಫಿಕ್ ಮೆತಡ್) ತರಬೇತಿ ನೀಡುವುದು, ವೈಜ್ಞಾನಿಕ ಮನೋಧರ್ಮ (ಸೈಂಟಿಫಿಕ್ ಆಟಿಟ್ಯೂಡ್) ಬೆಳೆಸುವುದು, ವೈಜ್ಞಾನಿಕ ಪ್ರವೃತ್ತಿ (ಸೈಂಟಿಫಿಸಿಟಿ) ಬೆಳೆಸುವುದು, ಮೂಢನಂಬಿಕೆಗಳನ್ನು ತೊಡೆದು ಹಾಕುವುದು – ಇವೆಲ್ಲ ಪದಪುಂಜಗಳ ಬಳಕೆ ಇಂದು ಫ್ಯಾಷನ್ ಆಗಿದ್ದರೂ ಅವುಗಳ ಅರ್ಥ ಅನೇಕರಿಗೆ ಮನೋಗತವಾಗಿಲ್ಲ ಎಂಬುದು ನನ್ನ ಅನಿಸಿಕೆ. ವೈಜ್ಞಾನಿಕ ಮನೋಧರ್ಮವನ್ನು ಜನಸಾಮಾನ್ಯರಲ್ಲಿ ಬೆಳೆಸುವ ಕಾಯಕದಲ್ಲಿ ಪ್ರಾಮಾಣಿ ‘ವೈಜ್ನಾನಿಕ’, ‘ಅವೈಜ್ಞಾನಿಕ’ – ಈ ಪದಗಳನ್ನು ಅನುಕ್ರಮವಾಗಿ ಹೊಗಳಿಕೆಯ ಮತ್ತು ತೆಗಳಿಕೆಯ ಪದಗಳಾಗಿ ಬಳಸುತ್ತಿರುವವರಿಗಂತೂ ಖಂಡಿತ ಆಗಿಲ್ಲ.   ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಧರ್ಮ ಬೆಳೆಸಲು ಶ್ರಮಿಸುತ್ತಿರುವ ಸ್ವಯಂಸೇವಾ ಸಂಘಟನೆಗಳಿಗೂ ಶಿಕ್ಷಕರಿಗೂ ಇವುಗಳ ಸ್ಪಷ್ಟ ಪರಿಕಲ್ಪನೆ ಇದ್ದರೆ ವಸ್ತುಸ್ಥಿತಿಯಲ್ಲಿ ಕೊಂಚ ಸುಧಾರಣೆ ಆದೀತು.

ಅತಿ ಸಂಕ್ಷಿಪ್ತವಾಗಿ ಇವನ್ನು ಇಂತು ವ್ಯಾಖ್ಯಾನಿಸ ಬಹುದು – ವಸ್ತುಪ್ರಪಂಚದ ಆಗುಹೋಗುಗಳ ನಿರ್ಧಾರಕ ನಿಯಮಗಳನ್ನು ಆವಿಷ್ಕರಿಸುವುದು ಪ್ರಧಾನ ಗುರಿಯಾಗಿರುವ ನಿಸರ್ಗವಿಜ್ಞಾನಗಳಲ್ಲಿ ಜ್ಞಾನ್ವೇಷಣೆಗೆ ಅನುಸರಿಸುವ ವಿಶಿಷ್ಟ ವಿಧಾನವೇ ವಿಜ್ಞಾನ ವಿಧಾನ (ಇದನ್ನು ವಿಜ್ಞಾನ ಮಾರ್ಗ, ವೈಜ್ಞಾನಿಕ ವಿಧಾನ ಎಂದು ಉಲ್ಲೇಖಿಸುವುದೂ ಉಂಟು). ಈ ವಿಧಾನವನ್ನು ಸಮರ್ಪಕವಾಗಿ ಅನುಸರಿಸಲು ತಳೆದಿರಲೇಬೇಕಾದ ಮನೋಭಾವವೇ ವೈಜ್ಞಾನಿಕ ಮನೋಧರ್ಮ. ವಿಜ್ಞಾನ ವಿಧಾನವೇ ಸಮಸ್ಯೆಗಳನ್ನು ಪರಿಹರಿಸಲು ಇರುವ ಅತ್ಯುತ್ತಮ ವಿಧಾನ ಎಂಬ ಅಚಲ ವಿಶ್ವಾಸದಿಂದ ಎಂಥ ಅಡ್ಡಿಆತಂಕಗಳು ಎದುರಾದರೂ ವೈಜ್ಞಾನಿಕ ಮನೋಧರ್ಮವನ್ನು ಕೈಬಿಡದೆಯೇ ಮುಂದುವರಿಯುವ ಪ್ರವೃತ್ತಿಯೇ ವೈಜ್ಞಾನಿಕ ಪ್ರವೃತ್ತಿ.

Read more »

9
May

ಗಣಿತ, ವಿಜ್ಞಾನ ಮತ್ತು ಸ್ವತಂತ್ರ ಅಸ್ತಿತ್ವ

-ಬಾಲಚಂದ್ರ ಭಟ್

ಗಣಿತ ಎಂದರೆ ಏನು?ಅಂಕೆ, ಸಂಖ್ಯೆಗಳು ಎಲ್ಲಿಂದ ಬಂತು?ಇವು ನಿಜವೇ? ಗಣಿತದ ಉಗಮ ಮನುಷ್ಯನ ಬುದ್ಧಿ ಸಾಮರ್ಥ್ಯದ ಮುಖಾಂತರ ರೂಪುಗೊಂಡದ್ದೋ ಅಥವಾ ಮನುಷ್ಯನಿಂದ ಹೊರತಾದ ಸ್ವತಂತ್ರ ಅಸ್ತಿತ್ವವನ್ನು ಹೊಂದಿದೆಯೋ?

ಬಹುಷಃ ಈ ಪ್ರಶ್ನೆಗಳನ್ನು ಉತ್ತರಿಸುವದು ಸ್ವತಃ ಗಣಿತದಲ್ಲಿ ಅಗಾಧ ಪ್ರತಿಭೆಯನ್ನು ಹೊಂದಿದವರಿಗೂ ಕಷ್ಟ. ಆದರೂ ಹಿಂದಿನ ಕಾಲದ ಅಂದರೆ  ಗ್ರೀಕರ ಕಾಲದ ಪೈಥಾಗೊರಸ್ ನಿಂದ ಹಿಡಿದು ೧೯ ನೆಯ ಶತಮಾನದ ಲಿಯೋಪೋಲ್ಡ್ ಕ್ರೋನೆಕರ್ (Leopold Kronecker) ವರೆಗಿನ ಬಹುತೇಕ ಗಣಿತದ ತಜ್ಞರು ಗಣಿತವು ಸ್ವತಂತ್ರ ಅಸ್ತಿತ್ವವನ್ನು ಹೊಂದಿದೆಯೆಂದೂ, ಅಂಕೆ, ಸಂಖ್ಯೆಗಳು ಮಾನವ ನಿರ್ಮಿತವಾಗಿರದೆ ಅವುಗಳು ಸರ್ವಸ್ವತಂತ್ರ ಸತ್ಯ, ನಿತ್ಯಸ್ಥಾಯಿ, ಹಾಗೂ ಮೌಲ್ಯವನ್ನು ಸೂಚಿಸುವ ಆದರ್ಶ ಮಾನ ಎಂದೂ ನಂಬಿದ್ದರು. ಆದರೆ ಅದಕ್ಕಿಂತಲೂ ಮುಖ್ಯವಾಗಿ ಇಂತಹ ಪ್ರಶ್ನೆಗಳು ಗಣಿತಶಾಸ್ತ್ರದ ಪ್ರಕಾರ ಬಹುಷಃ ಅಸಂಬದ್ಧ. ಆದ್ದರಿಂದಲೇ ಇದನ್ನು ಚರ್ಚಿಸುವ ಗೋಜಿಗೆ ಯಾರೂ ಹೋಗಲಿಲ್ಲ. ಆದರೆ ಮನೋವಿಜ್ಞಾನಿಗಳಿಗೆ, ಗಣಿತ ಹಾಗೂ ಅದರ ನಿಯಮಗಳಿಗಿಂತಲೂ ಈ ಮೇಲಿನ ಪ್ರಶ್ನೆಗಳು ಬಹಳ ಮುಖ್ಯ.

ಆದರೆ, ನಿಜಕ್ಕೂಗಣಿತವು ಮಾನವನ ಬುದ್ಧಿಶಕ್ತಿ ಹಾಗೂ ಗ್ರಾಹ್ಯಶಕ್ತಿ(perception) ಯಿಂದ ಹೊರತಾದ ‘ಸ್ವತಂತ್ರ’ ಅಸ್ತಿತ್ವವನ್ನು ಹೊಂದಿಲ್ಲ.  ಅಂಕೆಗಳು, ಸಂಖ್ಯೆಗಳು ಹಾಗೂ ಗಣಿತದ ನಿಯಮಗಳು ಬರೇ ಮಾನವನ ಗ್ರಾಹ್ಯ ಶಕ್ತಿಯಿಂದ ನಿರ್ಮಿತವಾದವು ಮತ್ತು ಮಾನವನ ಗ್ರಾಹ್ಯಶಕ್ತಿಗೆ ಹಾಗೂ ಬುದ್ಧಿ ಶಕ್ತಿಗೆ ತಕ್ಕಂತೆ ಅವು ‘ಸತ್ಯ’ ಅಷ್ಟೆ. ಅಲ್ಬರ್ಟ್ ಐನ್ ಸ್ಟೀನ್ ತಮ್ಮ ಸೊಗಸಾದ ವೈಜ್ಞಾನಿಕ ಭಾಷೆಯಲ್ಲಿ ಹೀಗೆ ಹೇಳುತ್ತಾರೆ ”the series of integers is obviously an invention of the human mind, a self-created tool which simplifies the ordering of certain sensory experiences (ನಿಜವಾಗಿಯೂ ಕ್ರಮಾನುಗತ ಸಂಖ್ಯೆಗಳೆಲ್ಲವೂ ಮಾನವನ ಬುದ್ಧಿಯಿಂದ ರಚಿತವಾದವುಗಳು ಮತ್ತು ಅವುಗಳು ಮನುಷ್ಯನ ಇಂದ್ರಿಯಾನುಭವಗಳ ಅನುಕ್ರಮವನ್ನು ಸುಲಭಗೊಳಿಸಲು ಮಾನವನಿಂದ ಸ್ವ-ನಿರ್ಮಿತವಾದವು)”. ಮನಶ್ಯಾಸ್ತ್ರಜ್ಞರೇ ಹೇಳಿದಂತೆ ಎಷ್ಟು ಸ್ಪುಟವಾಗಿದೆ!

Read more »

24
Apr

ಒಳಸಂಚಿಗೆ ಬೇಕಿದೆ ಆತ್ಮವಿಶ್ವಾಸದ ಅಗ್ನಿಸ್ಪರ್ಷ

- ಚಕ್ರವರ್ತಿ ಸೂಲಿಬೆಲೆ
   ಅಗ್ನಿ ೫ ಬಂದನಂತರ ರಣಾಂಗಣದಲ್ಲಿ ನಮ್ಮನ್ನು ಸೋಲಿಸಲು ಚೀನಾಕ್ಕೆ ಸಾಧ್ಯವಾಗಲಾರದು ನಿಜ. ಆದರೆ ಸಂಸತ್ತಿನ ಮೇಜಿನ ಮೇಲೆಯೇ ನಮ್ಮ ಸೋಲಿಗೆ ಷರಾ ಬರೆದರೆ ಯಾರು ಏನು ಮಾಡಿಯಾರು ಹೇಳಿ!?

ನಾಲ್ಕು ವರ್ಷಗಳ ತಪಸ್ಸು ಪೂರ್ಣಗೊಂಡಿದೆ. ೭೦೦ ಕಿ.ಮೀ.ದೂರದವರೆಗೂ ಹೋಗಿ ಶತ್ರು ಠಾಣ್ಯ ನಾಶ ಮಾಡಿಬರಬಲ್ಲ. ಅಗ್ನಿ ೧ನ್ನು ನಭಕ್ಕೆ ಹಾರಿಬಿಟ್ಟಾಗಿನಿಂದಲೂ ೫,೦೦೦ ಕಿ.ಮೀ. ದೂರಕ್ಕೆ ಹೋಗಬಲ್ಲ ಅಗ್ನಿಯ ಕನಸು ಕಾಣುತ್ತಲೇ ಇದ್ದವರು ನಾವು. ಮೊನ್ನೆ ಅಗ್ನಿ ೫ ಯಶಸ್ವಿಯಾಗಿ ಉಡಾವಣೆಗೊಂಡು ಸೈನ್ಯದ ಶಕ್ತಿಯನ್ನು ನೂರ್ಮಡಿಗೊಳಿಸಿದಾಗ ಆ ಕನಸು ನನಸಾಯಿತು. ಕನಸು ನನಸುಗಳ ಕತೆ ಏನೇ ಇರಲಿ. ಸೈನ್ಯದ ಸಾಮರ್ಥ್ಯದ ಕುರಿತಂತೆ ನಡೆಯುತ್ತಿದ್ದ ವಾದ ವಿವಾದಗಳಿಂದ ಈ ಪರೀಕ್ಷೆ ಕೇಂದ್ರ ಸರ್ಕಾರವನ್ನಂತೂ ಪಾರುಮಾಡಿತು. ಅಗ್ನಿಯೂ ತಂಪೆರೆಯಬಲ್ಲದೆಂದರೆ ಹೀಗೇ ನೋಡಿ!

ಈ ನಾಲ್ಕು ವರ್ಷಗಳ ಪ್ರಯತ್ನ ಅಂತ್ಯ ಕಾಣಲು ಇನ್ನೂ ಸ್ವಲ್ಪ ಕಾಲಾವಕಾಶ ಬೇಕಿತ್ತು. ಆದರೆ ರಕ್ಷಣಾ ಸಚಿವ ಆಂಟನಿ ವಿಜ್ಞಾನಿಗಳಿಗೆ ದುಂಬಾಲು ಬಿದ್ದು ಈ ಪ್ರಯೋಗವನ್ನು ಸಾಧ್ಯವಾಗಿಸಿ ಯಶಸ್ಸು ಗಳಿಸಿಕೊಂಡರು. ಈ ನಿಟ್ಟಿನಲ್ಲಿ ಡಿಆರ್‌ಡಿಓಗೆ ಸಹಕಾರಿಯಾಗಿ ಹಲವು ವೈಜ್ಞಾನಿಕ ಸಂಸ್ಥೆಗಳು ದುಡಿದಿವೆ. ಯಶಸ್ಸಿನ ಈ ಹೊತ್ತಿನಲ್ಲಿ ಆ ವಿಜ್ಞಾನಿಗಳಿಗೆಲ್ಲ ಒಂದು ಪ್ರೀತಿಯ ಸಲಾಮು.

Read more »

19
Apr

ನಮ್ಮ ಕ್ಷೀರಪಥದಲ್ಲಿ ಹಲವು ಶತಕೋಟಿ ವಾಸಯೋಗ್ಯ ಗ್ರಹಗಳಿವೆಯಂತೆ!

 - ವಿಷ್ಣುಪ್ರಿಯ

ನಮ್ಮ ಕ್ಷೀರಪಥದಲ್ಲಿ ಕನಿಷ್ಠವೆಂದರೂ ೧೬೦ ಶತಕೋಟಿ ಕೆಂಪು ಕುಬ್ಜ ನಕ್ಷತ್ರಗಳಿವೆ. ಈ ನಕ್ಷತ್ರಗಳ ಸುತ್ತ ಕನಿಷ್ಠ ಒಂದು ಸೂಪರ್ ಅರ್ಥ್ ಪರಿಭ್ರಮಿಸುತ್ತಿದ್ದರೂ ೧೬೦ ಶತಕೋಟಿ ಸೂಪರ್‌ಅರ್ಥ್‌ಗಳು ನಮ್ಮ ಕ್ಷೀರಪಥದಲ್ಲಿರಬೇಕು. ಅಥವಾ ಶೇ.೪೦ರಷ್ಟೇ ಕೆಂಪು ಕುಬ್ಜ ಸೂರ್ಯರು ಸೂಪರ್ ಅರ್ಥ್ ಹೊಂದಿರುವುದು ಎಂಬ ವಾದವನ್ನು ಪರಿಗಣಿಸಿದರೂ ೬೪ ಶತಕೋಟಿ ಸೂಪರ್ ಅರ್ಥ್‌ಗಳು ನಮ್ಮ ಕ್ಷೀರಪಥದಲ್ಲಿರಬೇಕು.

ಭೂಮಿಯನ್ನೊಳಗೊಂಡ ನಮ್ಮ ಸೌರಮಂಡಲ ಇರುವಂಥ ಕ್ಷೀರಪಥ ಗೆಲಾಕ್ಸಿಯಲ್ಲಿ ವಾಸಯೋಗ್ಯವಾಗಿರುವ ಗ್ರಹಗಳಿರಬಹುದೇ? ಬಾಹ್ಯಾಕಾಶದಾಚೆಗೆ ಸಾವಿರಾರು ಕೋಟಿ ಮೈಲಿಗಳ ದೂರದವರೆಗೆ ಎಲ್ಲಿಯಾದರೂ ಜೀವಾಸ್ತಿತ್ವಕ್ಕೆ ಅನುಕೂಲವಾಗುವಂಥ ಪ್ರದೇಶವಿದೆಯೇ ಎಂಬ ಹುಡುಕಾಟ ತಾರಕಸ್ಥಾಯಿ ತಲುಪಿರುವ ಈ ಹೊತ್ತಿನಲ್ಲಿ ಇಂಥದ್ದೊಂದು ಪ್ರಶ್ನೆ ಅಚ್ಚರಿ ಎನ್ನಿಸುವುದಿಲ್ಲ. ಕ್ಷೀರಪಥದೊಳಗೇ ವಾಸಯೋಗ್ಯ ಗ್ರಹಗಳು ಖಂಡಿತವಾಗಿಯೂ ಇರಬಹುದು ಎಂಬ ಉತ್ತರವೇ ಸಿಗುತ್ತದೆ. ಆದರೆ ಈ ಪ್ರಶ್ನೆಯ ಬೆನ್ನಿಗೇ ಎಷ್ಟು ಗ್ರಹಗಳು, ಆಕಾಶಕಾಯಗಳು ವಾಸಯೋಗ್ಯ ಪ್ರದೇಶಗಳನ್ನು ಹೊಂದಿರಬಹುದು? ಎಂಬ ಇನ್ನೊಂದು ಪ್ರಶ್ನೆ ಎಸೆದರೆ ಬಹುಶಃ ಅದಕ್ಕೆ ನಿಖರವಾದ ಉತ್ತರವನ್ನು ಕೊಡುವುದಕ್ಕೆ ಪರಿಣತ ವಿಜ್ಞಾನಿಗಳಿಂದಲೂ ಸಾಧ್ಯವಾಗದು.

Read more »

18
Apr

ಶಾರ್ಟ್ ವೇವ್ ರೇಡಿಯೋ ಪ್ರಸಾರದಲ್ಲಿ ಕನ್ನಡದ ದನಿಯಿಲ್ಲ

-ಸಾತ್ವಿಕ್ ಎನ್ ವಿ

ಕನ್ನಡಿಗನೊಬ್ಬ ತನ್ನ ಕೆಲಸದ ನಿಮಿತ್ತ ಕರ್ನಾಟಕದ ಹೊರಗೆ ಬದುಕಬೇಕಾಗಿ ಬಂದರೆ ಆತನಿಗೆ ಕನ್ನಡ ಆಕಾಶವಾಣಿ ಕೇಳಲು ಸಾಧ್ಯವಿಲ್ಲ. ಕಾರಣ, ಕಿರುತರಂಗಾಂತರ ಅಂದರೆ ಶಾರ್ಟ್‌ವೇವನಲ್ಲಿ ಕನ್ನಡದ ಯಾವುದೇ ಆಕಾಶವಾಣಿ ಕೇಂದ್ರ ಪ್ರಸಾರ ಮಾಡುತ್ತಿಲ್ಲ. ಆದರೆ ಇಂಥ ಪರಿಸ್ಥಿತಿ ಇತರೆ ಭಾಷಿಕರಿಗೆ ಇದೆಯೇ? ಇಲ್ಲ. ಕನ್ನಡವನ್ನು ಬಿಟ್ಟು ಮಿಕ್ಕೆಲ್ಲ ದಕ್ಷಿಣಭಾರತದ ಭಾಷೆಗಳಿಗೂ ಈ ಸೌಲಭ್ಯವಿದೆ.

ಏನಿದು ಕಿರುತರಂಗಾತರದಲ್ಲಿ ರೇಡಿಯೋ ಪ್ರಸಾರ?
ಬಾನುಲಿ ಪ್ರಸಾರದಲ್ಲಿ ಶಾರ್ಟ್ ವೇವ್(SW), ಮೀಡಿಯಂ ವೇವ್(MW) ಮತ್ತು ಫ್ರಿಕ್ವೇನ್ಸಿ ಮೊಡೊಲೇಷನ್ (FM) ಎಂಬ ಮೂರು ರೀತಿಯ ತರಂಗಾತರಗಳನ್ನು ಬಳಸಲಾಗುತ್ತದೆ. ಈಗ ಕರ್ನಾಟಕದ ಆಕಾಶವಾಣಿ ಕೇಂದ್ರಗಳು ಕೇವಲ ಎಂ.ಡಬ್ಲ್ಯೂ ಮತ್ತು ಎಫ್.ಎಂ ಗಳಲ್ಲಿ ಮಾತ್ರ ತಮ್ಮ ಕಾರ್ಯಕ್ರಮಗಳನ್ನು ಪ್ರಸರಿಸುತ್ತಿವೆ. ಆದರೆ ಎಂ.ಡಬ್ಲ್ಯೂ ಮತ್ತು ಎಫ್.ಎಂ ತರಂಗಗಳ ದೊಡ್ಡ ಕೊರತೆ ಎಂದರೆ ಈ ಅಲೆಗಳು ಬಹಳ ದೂರ ಚಲಿಸಲಾರವು. ಆದರೆ ಶಾರ್ಟ್ ವೇವ್ ಹಾಗಲ್ಲ. ಅದರ ಚಲನೆಯ ಶಕ್ತಿ ಖಂಡಾಂತರ ವ್ಯಾಪ್ತಿಯದ್ದು. ಇಂದು ನಾವು ಕೇಳುತ್ತಿರುವ ಬಿಬಿಸಿ, ವಾಯ್ಸ್ ಆಫ್ ಅಮೆರಿಕಾ, ರೇಡಿಯೋ ಸಿಲೋನ್, ಚೈನಾ ರೇಡಿಯೋ ಇಂಟರ್ ನ್ಯಾಷನಲ್ ಇತ್ಯಾದಿಗಳು ಇದೇ ತರಂಗಗಳನ್ನು ಬಳಸಿಕೊಳ್ಳುತ್ತವೆ. ಈ ತರಂಗಗಳನ್ನು ಬಳಸಿ ಪ್ರಪಂಚದ ಯಾವುದೇ ನಿರ್ದಿಷ್ಟ ಭಾಗಕ್ಕೆ ಪ್ರಸಾರವನ್ನು ತಲುಪಿಸಲು ಸಾಧ್ಯ. ಇದನ್ನು ಬೀಮಿಂಗ್ ಎಂದು ಕರೆಯಲಾಗುತ್ತದೆ. Read more »

5
Apr

ಮಂಗನಿಂದ ಮಾನವನಾದ ಎನ್ನುವುದು ಬರೇ ಅಪವಾದ !

ಇಷ್ಟಕ್ಕೂ ನಾವು ಓದಿದ ಜೀವಶಾಸ್ತ್ರದಲ್ಲಿ ಅಥವಾ ಸಮಾಜಶಾಸ್ತ್ರಲ್ಲಿ ಮಾನವನ  ಹುಟ್ಟಿನ ಬಗೆಗೆ ನಾವು ತಿಳಿದುಕೊಂಡ ಸತ್ಯ ಎಂಬುದು ಸುಳ್ಳು. ಅದೊಂದು ಹೋಲಿಕೆಯ ಕಥೆ ಅಷ್ಟೇ! ಯಾಕೆ ಎಂದು ಯಾರೂ ಚಿಂತಿಸಿದವರಿಲ್ಲ. ಹರಪ್ಪ ಮತ್ತು ಮೊಹೆಂಜೊದಾರೋ ಸ್ಥಳ ಮಂಗನಿಂದ ಮಾನವನಾದ ಎನ್ನುವುದು ಬರೇ ಅಪವಾದ !ಸಂಶೋಧನೆಗಳಲ್ಲಿ ಸಿಕ್ಕಿದವು ಎನ್ನಲಾದ ಕಲ್ಲಿನ ಆಯುಧಗಳು, ಉಪಯೋಗಿಸಿರಬಹುದಾದ ಮಣ್ಣಿನ ಮಡಕೆ-ಕುಡಿಕೆಗಳು, ಗುಹೆಗಳಲ್ಲಿನ ಗೋಡೆ ಚಿತ್ರಗಳು ಕೇವಲ ಇವುಗಳನ್ನೇ ಅವಲಂಬಿಸಿ ಕಟ್ಟಿದ ಅಂದಾಜು ಕಥೆಯೇ ಮಂಗನಿಂದ ಮಾನವ ಎಂಬುದಾಗಿದೆ!ಇದಕ್ಕೆ ಇದಮಿತ್ಥಂ ಎಂದು ಸಾಕ್ಷೀಕರಿಸುವ ಯಾವುದೇ ಪುರಾವೆಗಳು ಇರುವುದಿಲ್ಲ. ಆದಿ ಮಾನವ ಕಾಡೊಳಗೇ ವಾಸವಾಗಿದ್ದನೆಂದೂ ಮೊದಲು ಹಸಿ ಮಾಂಸವನ್ನಷ್ಟೇ ತಿಂದು ಬದುಕಿದ್ದನೆಂದೂ ನಂತರ ಬೆಂಕಿಯನ್ನು ಕಂಡುಹಿಡಿದನೆಂದೂ ಹಲವಾರು ಮೈನವಿರೇಳಿಸುವ ರೋಚಕ ಕಥೆಗಳನ್ನು ಕೇಳುತ್ತೇವೆ. ಕಲ್ಲಿನ ಚೂಪಾದ ಆಯುಧಗಳಿಂದ ಪ್ರಾಣಿಗಳನ್ನು ವಧಿಸುತ್ತಿದ್ದ ಮಾನವ ಕ್ರಮೇಣ ಲೋಹವನ್ನೂ ಕಂಡುಕೊಂಡು ಚಿಕ್ಕಪುಟ್ಟ ಲೋಹದ ಆಯುಧಗಳನ್ನು ತಯಾರಿಸಿಕೊಂಡ ಎಂದು ನಮಗೆ ಹೇಳಿದ ಕಥೆಗಳು ಸಾರುತ್ತವೆ. ನನಗನಿಸುತ್ತಿದೆ ಅವೆಲ್ಲಾ ಬರೇ ಕಟ್ಟುಕಥೆಗಳಾಗಿವೆ; ಅವುಗಳಲ್ಲಿ ಯಾವುದೇ ಹುರುಳಿಲ್ಲ.

ಭಾರತೀಯ ಆಯುರ್ವೇದಕ್ಕೆ ೩೦೦೦ ವರ್ಷಗಳ ದಾಖಲೆಯಿದೆ. ಎಷ್ಟೋಕಡೆ ೫೦೦೦ ವರ್ಷಗಳಷ್ಟು ಹಳೆಯ ದಾಖಲೆಗಳೂ ಸಿಗುತ್ತಿವೆ. ಒಂದೊಮ್ಮೆ ಹಾಗೆ ಮಂಗನಿಂದ ಮಾನವ ಎಂದಾದರೆ ನಮ್ಮ ಪೂರ್ವಜರು ಅಷ್ಟೊಂದು ಹಿಂದೆಯೇ ಬರೆದಿದ್ದ ಗ್ರಂಥಗಳು, ಪುರಾಣೇತಿಹಾಸಗಳು, ಮಹಾಕಾವ್ಯಗಳು, ವೇದ-ವೇದಾಂತಗಳೆಲ್ಲಾ ಸುಳ್ಳೇ?

Read more »

29
Mar

ಕುಲಾಂತರಿ ಚರ್ಚೆ: ಇನ್ನೊಂದು ಮುಖ

- ಪ್ರಸನ್ನ ಆಡುವಳ್ಳಿ,ಧಾರವಾಡ

ಕುಲಾಂತರಿಗಳ ಬಗ್ಗೆ  “ಕನ್ನಡಪ್ರಭ”  ಪತ್ರಿಕೆಯಲ್ಲಿ ಶಾಂತು ಶಾಂತಾರಾಮ್ ಹಾಗೂ ಎಮ್ ಮಹದೇವಪ್ಪ ಅವರು ಬರೆದ ಬರಹ ಓದುಗರನ್ನು ದಾರಿತಪ್ಪಿಸುವಂತಿದೆಯೇ ವಿನಹಾ ಅವುಗಳ ಕುರಿತು ಸರಿಯಾದ ಮಾಹಿತಿಯನ್ನು ನೀಡುವಲ್ಲಿ ವಿಫಲವಾಗಿದೆ. ಕುಲಾಂತರಿಗಳನ್ನು ಅಭಿವೃದ್ದಿಯ ಹೆಸರಲ್ಲಿ, ಅಧಿಕ ಅಹಾರ ಉತ್ಪಾದನೆಯ ನೆಪದಲ್ಲಿ ರೈತರ ಹಾಗೂ ಗ್ರಾಹಕರ ಮೇಲೆ ಹೇರುವ ಪ್ರಯತ್ನದ ಒಂದು ಭಾಗವಾಗಿ ಈ ಬರಹಗಳು ಮೂಡಿಬಂದಿವೆಯಷ್ಟೇ.

ವಿಜ್ನಾನವು ಸತ್ಯ ಶೋಧನೆಯಿಂದ ರೂಪಗೊಳ್ಳುವುದೇ ವಿನಹ ಸಂಖ್ಯಾ ಬಲದಿಂದಲ್ಲ ಎಂಬ ಮಹದೇವಪ್ಪನವರ ಮಾತುಗಳು ಒಪ್ಪತಕ್ಕದ್ದೇ . ಆದರೆ ಬಿ.ಟಿ. ಬದನೆ ಕುರಿತ ಚರ್ಚೆ ಯಲ್ಲಿ ವಿಜ್ನಾನಿಗಳಿಗೆ ಸೂಕ್ತ ಕಾಲಾವಕಾಶ ಸಿಗಲಿಲ್ಲ ಎಂಬ ಮಾತು ಸತ್ಯಕ್ಕೆ ದೂರ. ತಾತ್ಕಾಲಿಕ ನಿಷೇಧ ಹೇರುವ ಮುನ್ನ ದೇಶದ ಹಲವೆಡೆಗಳಲ್ಲಿ ಪರ-ವಿರೋಧಗಳ ಬಗ್ಗೆ ಪರಿಸರ ಸಚಿವಾಲಯ ವಿಸ್ತೃತ ಚರ್ಚೆ ನಡೆಸಿತ್ತು. ಇಷ್ಟಲ್ಲದೇ  ದೇಶದ ಪ್ರತಿಷ್ಟಿತ ಆರು ವಿಜ್ನಾನ ಅಕಾಡೆಮಿಗಳಿಂದ ಅಭಿಪ್ರಾಯ ಕೇಳಿತ್ತು. ಆದರೆ ಅಲ್ಲಿನ ವಿಜ್ನಾನಿಗಳು ಕೊಟ್ಟ ಬೇಜಾವಾಬ್ದಾರಿಯುತ ವರದಿ ಎಲ್ಲರಿಂದ ಟೀಕೆಗೆ ಒಳಗಾಗಿದ್ದು ನೆನಪಿರಬಹುದು. ಎಲ್ಲದಕ್ಕೂ ವೈಜ್ನಾನಿಕ ಆಧಾರ ಕೇಳುವವರು ತಮ್ಮ ವರದಿಯ ಬಗ್ಗೆ ಏಕೆ ಚಕಾರ ಎತ್ತುವುದಿಲ್ಲ? ಅಲ್ಲೇಕೆ ಯಾವುದೇ ವೈಜ್ನಾನಿಕ ಆಧಾರ ನೀಡದೇ ತೀರ ಕಳಪೆ ಗುಣಮಟ್ಟದ ವರದಿ ಕೊಟ್ಟರು?

ಬಿ.ಟಿ. ಹತ್ತಿ ಬಂದ ಮೇಲೆ ಹತ್ತಿಯನ್ನು ಆಮದು ಮಾಡಿಕೊಳ್ಳುತ್ತಿದ್ದ ಭಾರತ ಹತ್ತಿ ರಫ್ತು ಮಾಡುವ ದೇಶವಾಯ್ತೆಂದು ಹೆಮ್ಮೆಯಿಂದ ಹೇಳುವವರು ಇತ್ತೀಚೆಗೆ ಹತ್ತಿಯ ಒಟ್ಟಾರೆ ಉತ್ಪಾದನೆ ಕಡಿಮೆಯಾಗಿದೆಯೆಂದು ಕೇಂದ್ರ ರಫ್ತು ನಿಷೇಧ ಮಾಡಲು ಹೊರಟಿದ್ದನ್ನೇಕೆ ಪ್ರಜ್ನಾಪೂರ್ವಕವಾಗಿ ಮರೆಮಾಚುತ್ತಾರೆ? ದೇಶದ ಶೇಕಡಾ 93ರಷ್ಟು ಭಾಗದಲ್ಲಿ ಬಿ.ಟಿ.ಹತ್ತಿಯನ್ನೇ ಬೆಳೆಯುತ್ತಿದ್ದರೂ ಹೀಗಾಗಿದ್ದೇಕೆ?!

Read more »

21
Feb

ಎಷ್ಟು ಶುದ್ಧ ಮಾಡಿದರೂ ಕೊಚ್ಚೆ ಕೊಚ್ಚೆಯೇ

-ವಿಷ್ಣುಪ್ರಿಯ

ತಾನು ಎಲ್ಲವನ್ನೂ ನಿಯಂತ್ರಿಸಬಲ್ಲೆ ಎಂಬ ಮಾನವಭ್ರಮೆಗೆ ಪ್ರತಿ ಬಾರಿಯೂ ತಡೆ ಬೀಳುತ್ತಿದೆ ಎಂಬುದು ದಿಟವಾಯಿತು. ಪ್ರಕೃತಿಯ ನಿರ್ಧಾರಗಳ ಮೇಲೆ ಮಾನವ ತನ್ನ ಪ್ರಭಾವ ಬೀರುವ ಪ್ರಯತ್ನ ಮಾಡಿದರೆ ಪ್ರಕೃತಿ ಮಾನವನಿಗಿಂತಲೂ ಎತ್ತರಕ್ಕೆ ಬೆಳೆಯುತ್ತದೆ ಎಂಬುದು ಕೂಡಾ ಸ್ಪಷ್ಟವಾಯಿತು.

ಈ ಚರಂಡಿಗಳಲ್ಲಿ ಹರಿಯುವ ನೀರನ್ನು ನೊಡಿದರೆ ಮೈಯೆಲ್ಲಾ ಜಿರಳೆ ಹರಿದಂತಾಗುತ್ತದೆ! ಬೆಂಗಳೂರಿಗರಿಗಂತೂ ಮಳೆ ಬಂದು ಚರಂಡಿಯಲ್ಲಿ ನೀರುಕ್ಕಿ ಹರಿದರೆ ಜೀವನವೇ ಬೇಡ ಎನ್ನುವಷ್ಟರ ಮಟ್ಟಿಗೆ ಜಿಗುಪ್ಸೆ ಬಂದೀತು! ಬೆಂಗಳೂರಿನಲ್ಲಿ ಚರಂಡಿಗಳ ನೀರು ಅದ್ಯಾವ ಕೆರೆ ಸೇರುತ್ತದೆ ಎಂದು ನೋಡುವುದಕ್ಕೆ ಹೊರಟರೆ ಆ ಕೆರೆಯಿಂದಲೇ ನಮಗೆ ವಿತರಣೆಯಾಗುವಂಥ ನೀರನ್ನು ಕುಡಿಯುವುದಕ್ಕೆ ಸಾಧ್ಯವಿಲ್ಲ. ನಿರನ್ನು ಶುದ್ಧೀಕರಿಸಿಯೇ ಕೆರೆಗೆ ಬಿಡಲಾಗುತ್ತದೆ, ಕೆರೆಯ ನಿರನ್ನು ಶುದ್ಧೀಕರಿಸಿಯೇ ಕುಡಿಯುವುದಕ್ಕೆ ನೀಡಲಾಗುತ್ತದೆ. ಹೀಗಾಗಿ ಆ ನೀರಿನಿಂದ ಏನೂ ಸಮಸ್ಯೆ ಆಗದು ಎಂದು ಆಧಿಕಾರಿಗಳು ಹೇಳಿದರು ಎಂದಾದರೆ ಅವರ ಮಾತನ್ನು ನಂಬಬೇಡಿ. ಯಾಕೆಂದರೆ ಕೊಚ್ಚೆ ನೀರನ್ನು ಅದೆಷ್ಟೇ ಶುದ್ಧೀಕರಿಸಿದರೂ ಸಹ, ಅದ್ಯಾವ ಅತ್ಯಾಧುನಿಕ ತಂತ್ರಜ್ಞಾನದಿಂದ ಶುದ್ಧೀಕರಿಸಿದರೂ ಸಹ ಅದರಲ್ಲಿರುವ ವೈರಾಣುಗಳು ಸಂಪೂರ್ಣವಾಗಿ ನಾಶವಾಗುವುದಿಲ್ಲ ಎಂದು ವಿಜ್ಞಾನಿಗಳ ತಂಡವೊಂದರ ಸಂಶೋಧನೆ ಹೇಳುತ್ತಿದೆ.

ಯೂನಿವರ್ಸಿಟಿ ಆಫ್ ಮಿನೆಸೋಟಾದ ವಿಜ್ಞಾನಿಗಳು ನಡೆಸಿದ ಸಂಶೋಧನೆಯ ಪ್ರಕಾರ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಶುದ್ಧೀಕರಿಸಿದ ನೀರಿನಲ್ಲಿಯೂ ಸಹ ಬಹಳಷ್ಟು ಹಾನಿಕಾರಕ ಬ್ಯಾಕ್ಟೀರಿಯಾಗಳು ಮತ್ತು ಇತರ ವೈರಾಣುಗಳು ಇರುತ್ತವೆ. ಈ ವೈರಾಣುಗಳು ಸೋಂಕು ನಿರೋಧಕಗಳು ಅಥವಾ ಆಂಟಿಬಯಾಟಿಕ್ ಗಳಿಂದ ರಕ್ಷಿಸಿಕೊಳ್ಳುವ ಸಾಮರ್ಥ್ಯವನ್ನೂ ಹೊಂದಿರುತ್ತವೆ. ಇವುಗಳ ಕಾರಣದಿಂದಾಗಿಯೇ ಹಲವು ರೋಗಗಳು ಹರಡುತ್ತವೆ ಎಂಬ ವಾಸ್ತವಾಂಶ ತಿಳಿದುಬಂದಿದೆ.

Read more »

10
Feb

ಅಳಿದ ಬಳಿಕ ಚಿಂತಿಸಿ ಫಲವೇನು?

-ವಿಷ್ಣುಪ್ರಿಯ

ಉಲ್ಕಾಪಾತದಂಥ ಘಟನೆ ಸಂಭವಿಸಿದರೆ ಅದನ್ನು ತಡೆಯುವುದಕ್ಕೆ ನಮ್ಮಿಂದಾಗದು. ಭೂಮಿಯಾಳದಿಂದ ನುಗ್ಗಿ ಬರುವ ಜ್ವಾಲಾಮುಖಿಯನ್ನು ತಡೆಯಲು ಹೊರಟರೆ ಬೆಂಕಿ ಕೆಂಡವನ್ನು ರಟ್ಟಿನ ಪೆಟ್ಟಿಗೆಯೊಳಗೆ ಅಡಗಿಸಿಡುವ ಸಾಹಸ ಮಾಡಿದಂತಾದೀತು. ಹಾಗಂತ ಮಾನವ ಸೃಷ್ಟಿಸಿರುವ, ಸೃಷ್ಟಿಸುತ್ತಿರುವ ಪ್ರತಿಕೂಲ ವಿಚಾರಗಳಿಂದಾಗಿ ಜೀವಿಗಳು ಅವಸಾನಗೊಳ್ಳುವುದನ್ನು ತಡೆಯುವ ಪ್ರಯತ್ನ ಮಾಡಬಹುದಲ್ಲವೇ?

ಇದ್ದಾಗ ಗೊತ್ತಾಗದ ಮೌಲ್ಯ ಸತ್ತ ಮೇಲೆ ಗೊತ್ತಾಗುತ್ತದೆಯಂತೆ! ಇದು ಸಾರ್ವತ್ರಿಕವಾಗಿ ಅನ್ವಯವಾಗುವಂಥ ಮಾತು. ಅದು ಮನುಷ್ಯರೇ ಇರಲಿ, ಪ್ರಾಣಿಗಳೇ ಇರಲಿ ಯಾವ ಜೀವಿಯೇ ಆದರೂ ಆದು ಇಲ್ಲದಿದ್ದಾಗಲೇ ಅದರ ಬಗ್ಗೆ ಕುತೂಹಲ ಹೆಚ್ಚುತ್ತದೆ. ಈ ಮಾತು ಡೈನೋಸಾರ್ ಗಳ ವಿಚಾರದಲ್ಲಿ ಸಮರ್ಪಕವಾಗಿ ಅನ್ವಯವಾಗುತ್ತದೆ. ಹಲವು ಸಾವಿರ ವರ್ಷಗಳ ಹಿಂದೆ ಭೂಮಿಯ ಮೇಲೆ ಇದ್ದವು ಎಂದು ಹೇಳಲಾಗುವಂಥ ಡೈನೋಸಾರ್ ಗಳು ಹೇಗಿದ್ದವು? ಅವುಗಳ ಶಾರೀರಿಕ ರಚನೆ ಹೇಗಿತ್ತು? ಅವುಗಳು ನಾವಂದುಕೊಂಡಿರುವಂತೆಯೇ ಕ್ರೂರ ಮೃಗಗಳಾಗಿದ್ದವೇ? ಡೈನೋಸಾರ್ ಗ ಳ ಬಗೆಗೆ ಪ್ರಶ್ನೆಗಳು ಹುಟ್ಟಿಕೊಳ್ಳುವುದಕ್ಕೆ ಶುರುವಾಗಿ ದಶಕಗಳೇ ಕಳೆದವು. ಸಮರ್ಪಕವಾದ ಉತ್ತರಗಳಿಗೆ ಮಾತ್ರ ಇನ್ನೂ ಹುಡುಕಲಾಗುತ್ತಿದೆ. ಡೈನೋಸಾರ್ ಗಳ ಪಳೆಯುಳಿಕೆಗಳನ್ನು ವಿಜ್ಞಾನಿಗಳು ಸಂಶೋಧನೆಗೆ ಒಳಪಡಿಸುತ್ತಿದ್ದಾರೆ.

Read more »

Follow

Get every new post delivered to your Inbox.

Join 265 other followers