Skip to content

Posts tagged ‘ರೈತ’

2
Apr

ಬೆಳೆ ಬೆಳೆಸಿದರಷ್ಟೆ ನೆಲದ ಒಡೆತನ

-  ಟಿ.ಎಂ.ಕೃಷ್ಣ

ಆಹಾರ ಧಾನ್ಯಗಳ ಬೆಲೆ ಒಂದೇ ಸಮನೆ ಗಗನಕ್ಕೇರುತ್ತಲೇ ಇದೆ. ಜನಸಾಮಾನ್ಯರೇನು- ಅಷ್ಟೋ ಇಷ್ಟೋ ಸ್ಥಿತಿವಂತರೇ ಜೀವನ ನಿರ್ವಹಿಸಲು ಸಾಧ್ಯವಾಗದಂತಾಗಿದೆ. ಕೆಳ, ಮದ್ಯಮ ವರ್ಗದವರು ತರಗೆಲೆಗಳಂತೆ ತತ್ತರಿಸತೊಡಗಿದ್ದಾರೆ. ಮುಂದುವರಿದ(?) ಮನುಷ್ಯನ ಅಗತ್ಯಗಳು ಅಗಣಿತವಾಗಿರಬಹುದಾದರೂ, ಮೂಲಭೂತ ಅಗತ್ಯವಾದ ಅನ್ನಾಹಾರಗಳ ಲಭ್ಯತೆ ಕಠಿಣವಾದರೆ ಏನಿದ್ದರೂ, ಯಾವುದೇ ತಂತ್ರಜ್ಞಾನವಿದ್ದರೂ ಅವೆಲ್ಲಾ ಅಪ್ರಸ್ತುತವಾಗಿಬಿಡುತ್ತವೆ. (ಚಿನ್ನದ ಕತ್ತಿ ಇದೆಯೆಂದು ಕುತ್ತಿಗೆ ಕೊಯ್ದುಕೊಳ್ಳಲಾದೀತೆ?)

ಅಗತ್ಯವಸ್ತುಗಳು ಕೈಗೆಟುಕದಂತಾಗಿರುವ ಈ ಸಂದರ್ಭದಲ್ಲಿ ಸರ್ಕಾರದ ಕಡೆ ಕೈ ತೋರಿಸುವುದು ಅನಿವಾರ್ಯವಾದರೂ, ಆಯಕಟ್ಟಿನ ಜಾಗಕ್ಕೆ ಕೈತೋರಿಸದಿರುವುದು ನಮ್ಮಲ್ಲಿನ ಪ್ರಜ್ಞಾವಂತರ ಪ್ರಜ್ಞೆಯ ಅವನತಿಯನ್ನು ಸೂಚಿಸುತ್ತದೆ. ಕುರಿಗಳು ಹಳ್ಳಕ್ಕೆ ಬಿದ್ದಂತೆ ಪ್ರತಿಯೊಬ್ಬರೂ ಪ್ರಸ್ತಾಪಿಸುತ್ತಿರುವುದು ಮಳೆ ಅಭಾವ, ಬೆಳೆನಷ್ಟ, ವ್ಯಾಪಾರಿಗಳು ಸೃಷ್ಟಿಸುತ್ತಿರುವ ಕೃತಕ ಅಭಾವ, ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ, ಜನಸಂಖ್ಯೆಯ ಹೆಚ್ಚಳ ಇತ್ಯಾದಿ…ಈ ಎಲ್ಲ ಕಾರಣಗಳಿಗೆ ನಿದರ್ಶನಗಳಿದ್ದರೂ, ಅವೆಲ್ಲಾ ತಾತ್ಕಾಲಿಕ ಅವ್ಯವಸ್ಥೆಗಳೇ ಹೊರತು ಮೂಲಭೂತ ಸತ್ಯಗಳಲ್ಲವೇ ಅಲ್ಲ.

Read more »

29
Mar

ಕುಲಾಂತರಿ ಚರ್ಚೆ: ಇನ್ನೊಂದು ಮುಖ

- ಪ್ರಸನ್ನ ಆಡುವಳ್ಳಿ,ಧಾರವಾಡ

ಕುಲಾಂತರಿಗಳ ಬಗ್ಗೆ  “ಕನ್ನಡಪ್ರಭ”  ಪತ್ರಿಕೆಯಲ್ಲಿ ಶಾಂತು ಶಾಂತಾರಾಮ್ ಹಾಗೂ ಎಮ್ ಮಹದೇವಪ್ಪ ಅವರು ಬರೆದ ಬರಹ ಓದುಗರನ್ನು ದಾರಿತಪ್ಪಿಸುವಂತಿದೆಯೇ ವಿನಹಾ ಅವುಗಳ ಕುರಿತು ಸರಿಯಾದ ಮಾಹಿತಿಯನ್ನು ನೀಡುವಲ್ಲಿ ವಿಫಲವಾಗಿದೆ. ಕುಲಾಂತರಿಗಳನ್ನು ಅಭಿವೃದ್ದಿಯ ಹೆಸರಲ್ಲಿ, ಅಧಿಕ ಅಹಾರ ಉತ್ಪಾದನೆಯ ನೆಪದಲ್ಲಿ ರೈತರ ಹಾಗೂ ಗ್ರಾಹಕರ ಮೇಲೆ ಹೇರುವ ಪ್ರಯತ್ನದ ಒಂದು ಭಾಗವಾಗಿ ಈ ಬರಹಗಳು ಮೂಡಿಬಂದಿವೆಯಷ್ಟೇ.

ವಿಜ್ನಾನವು ಸತ್ಯ ಶೋಧನೆಯಿಂದ ರೂಪಗೊಳ್ಳುವುದೇ ವಿನಹ ಸಂಖ್ಯಾ ಬಲದಿಂದಲ್ಲ ಎಂಬ ಮಹದೇವಪ್ಪನವರ ಮಾತುಗಳು ಒಪ್ಪತಕ್ಕದ್ದೇ . ಆದರೆ ಬಿ.ಟಿ. ಬದನೆ ಕುರಿತ ಚರ್ಚೆ ಯಲ್ಲಿ ವಿಜ್ನಾನಿಗಳಿಗೆ ಸೂಕ್ತ ಕಾಲಾವಕಾಶ ಸಿಗಲಿಲ್ಲ ಎಂಬ ಮಾತು ಸತ್ಯಕ್ಕೆ ದೂರ. ತಾತ್ಕಾಲಿಕ ನಿಷೇಧ ಹೇರುವ ಮುನ್ನ ದೇಶದ ಹಲವೆಡೆಗಳಲ್ಲಿ ಪರ-ವಿರೋಧಗಳ ಬಗ್ಗೆ ಪರಿಸರ ಸಚಿವಾಲಯ ವಿಸ್ತೃತ ಚರ್ಚೆ ನಡೆಸಿತ್ತು. ಇಷ್ಟಲ್ಲದೇ  ದೇಶದ ಪ್ರತಿಷ್ಟಿತ ಆರು ವಿಜ್ನಾನ ಅಕಾಡೆಮಿಗಳಿಂದ ಅಭಿಪ್ರಾಯ ಕೇಳಿತ್ತು. ಆದರೆ ಅಲ್ಲಿನ ವಿಜ್ನಾನಿಗಳು ಕೊಟ್ಟ ಬೇಜಾವಾಬ್ದಾರಿಯುತ ವರದಿ ಎಲ್ಲರಿಂದ ಟೀಕೆಗೆ ಒಳಗಾಗಿದ್ದು ನೆನಪಿರಬಹುದು. ಎಲ್ಲದಕ್ಕೂ ವೈಜ್ನಾನಿಕ ಆಧಾರ ಕೇಳುವವರು ತಮ್ಮ ವರದಿಯ ಬಗ್ಗೆ ಏಕೆ ಚಕಾರ ಎತ್ತುವುದಿಲ್ಲ? ಅಲ್ಲೇಕೆ ಯಾವುದೇ ವೈಜ್ನಾನಿಕ ಆಧಾರ ನೀಡದೇ ತೀರ ಕಳಪೆ ಗುಣಮಟ್ಟದ ವರದಿ ಕೊಟ್ಟರು?

ಬಿ.ಟಿ. ಹತ್ತಿ ಬಂದ ಮೇಲೆ ಹತ್ತಿಯನ್ನು ಆಮದು ಮಾಡಿಕೊಳ್ಳುತ್ತಿದ್ದ ಭಾರತ ಹತ್ತಿ ರಫ್ತು ಮಾಡುವ ದೇಶವಾಯ್ತೆಂದು ಹೆಮ್ಮೆಯಿಂದ ಹೇಳುವವರು ಇತ್ತೀಚೆಗೆ ಹತ್ತಿಯ ಒಟ್ಟಾರೆ ಉತ್ಪಾದನೆ ಕಡಿಮೆಯಾಗಿದೆಯೆಂದು ಕೇಂದ್ರ ರಫ್ತು ನಿಷೇಧ ಮಾಡಲು ಹೊರಟಿದ್ದನ್ನೇಕೆ ಪ್ರಜ್ನಾಪೂರ್ವಕವಾಗಿ ಮರೆಮಾಚುತ್ತಾರೆ? ದೇಶದ ಶೇಕಡಾ 93ರಷ್ಟು ಭಾಗದಲ್ಲಿ ಬಿ.ಟಿ.ಹತ್ತಿಯನ್ನೇ ಬೆಳೆಯುತ್ತಿದ್ದರೂ ಹೀಗಾಗಿದ್ದೇಕೆ?!

Read more »

25
Jul

ಆಹಾ ಎಷ್ಟು ಮಜವಾಗಿತ್ತು ಆ ಕಾಲ…….!!!!

- ಪವನ್ ಪರುಪತ್ತೇದಾರ್

ನಮ್ಮ ತಾತಂದಿರು ಹಳೆ ಕಾಲದ ಕಥೆಗಳನ್ನು ಹೇಳುವಾಗ ಮೊದಲು ಸ್ವಲ್ಪ ಸಮಾಧಾನದಿಂದ ಕೇಳ್ತೇವೆ ಬರು ಬರುತ್ತಾ ಅವರು ಅದೇ ಕಥೆಗಳನ್ನು ಮತ್ತೆ ಮತ್ತೆ ಹೇಳುತ್ತಾರೆ ನಮಗೂ ಬೋರ್ ಅನಿಸಿ ತಾತಾ ಎಷ್ಟು ಸಲಿ ಅದೇ ಕಥೆಗಳನ್ನ ಹೇಳ್ತಿರ ಅಂತ ಗೊಣಗಿಕೊಂಡು ಎದ್ದು ಹೋಗ್ತಿವಿ. ಇಂಥ ಅನುಭವಗಳು ಸಾಮಾನ್ಯವಾಗಿ ಎಲ್ಲರಿಗು ಆಗ್ತವೆ. ನನಗು ಹಾಗೇ ನಮ್ಮ ತಾತ ಕಥೆಗಳನ್ನ ಹೇಳ್ತಾ ಇದ್ರೂ ಅವರು ತಮ್ಮ ಬ್ರಿಟಿಶ್ ಮೇಷ್ಟ್ರಿಗೆ ಚಳ್ಳೆ ಹಣ್ಣು ತಿನ್ನಿಸಿ ಚಕ್ಕರ್ ಹಾಕಿದ್ದು, ಆಗಿನ ಕಾಲಕ್ಕೆ ಲೋಯರ್ ಸೆಕೆಂಡರಿ ಮುಗಿಸಿ ಕುಟುಂಬದಲ್ಲಿ ಹೆಸರು ಮಾಡಿದ್ದೂ, ಊರಿಗೆ ಮೊದಲನೇ ಎಲೆಕ್ಟ್ರಿಕ್ contractor ಆಗಿದ್ದು, ಊರಿನ ಪ್ರೆಸಿಡೆಂಟ್ ಆಗಿದ್ದು, ಆಗಿನ ಜನ, ಹಾಗೆ ಹೀಗೆ ಹುಹ್! ಇನ್ನು ಬಹಳಾ.

ಆದರೆ ನಾವು ಅವರು ಕಥೆ ಹೇಳುವಾಗ ಮುಗು ಮುರಿದು ಹೋಗುತಿದ್ದೆವಲ್ಲ, ನಮಗೆಲ್ಲಿ ಅರಿವಿತ್ತು ಆಗಿನ ಅ ಕಾಲದ ಬಗ್ಗೆ ಎಷ್ಟು ಹೇಳಿದರು ಮತ್ತೆ ಮತ್ತೆ ನಮ್ಮ ತಾತನವರಿಗೆ ಹೇಳಬೇಕು ಎನಿಸಿತ್ತು ಎಂದು. ಯಾಕಂದರೆ ಅ ಕಾಲವೇ ಹಾಗಿತ್ತು ಎಷ್ಟು ಅದರ ಬಗ್ಗೆ ಕೊಂಡಾಡಿದರು ಸಾಲದಂಥ ಕಾಲ. ನನಗೆ ಯಾಕೆ ಹೀಗನಿಸಿತ್ತು ಅಂದರೆ ನನಗೂ ಸಹ ಕಳೆದ ಹತ್ತು ವರ್ಷಕ್ಕೂ ಇಗ್ಗು ಬಹಳ ವ್ಯತ್ಯಾಸ ಕಾಣುತ್ತಿದೆ. ನನಗೆ ಇತ್ತೀಚಿಗಷ್ಟೇ ಇದರ ಅರಿವಾಯಿತು.

ರಾಗಿ ಬೆಳೆ ಬಲೆ ಚೆನ್ನಾಗೈತೆ ಸ್ವಾಮಿ, ಈ ಸಲ ಒಳ್ಳೆ ಬಂಪರ್ ಕಾಸ್ ಮಾಡ್ತ್ಯ ಅಂತ ಚಿಕ್ಕಣ್ಣ ಹೇಳಿದಾಗ ನಮ್ಮಪ್ಪನಿಗೆ ಒಂಥರಾ ಸಂತೋಷ. ಅಂತು ಟೈಮ್ ಗೆ ಸರ್ಯಾಗಿ ಉಳಿಸಿ, ಬಿತ್ತನೆ ಮಾಡಿಸಿ, ಗೊಬ್ಬರ ಚೆಲ್ಲಿ, ಕಳೆ ಒರೆದು, ಗುಂಟುವೆ ಹಾಕಿಸಿ, ಇರೋ ಮುಕ್ಕಾಲು ಎಕರೆಗೆ 10 ಸಾವಿರ ಖರ್ಚ ಮಾಡಿದ್ದಕ್ಕೆ ಇಷ್ಟ ಮಾತ್ರ ಬೆಳೆ ಆಗಿರೋದು ಚಿಕ್ಕಣ್ಣ ಅಂತ ಸ್ವಲ್ಪ ಬಿಂಕದಿಂದನೆ ಅಂದ್ರು. ಅಂಗಲ್ಲ ಸ್ವಾಮಿ ರೇಟ್ ಚೆನ್ನಾಗೈತೆ ಈಗ ಕೆಂಪು ರಾಗಿ 13 ರೂಪಾಯಿಗೆ ತೊಕೊತಾರೆ ಅಂತ ಚಿಕ್ಕಣ್ಣ ಹೇಳೋವಾಗ ಮಧ್ಯಕ್ಕೆ ಬಾಯಿ ಹಾಕಿ ನಮ್ಮಪ್ಪ ನಂದೊಂದು ೧೫ ಮೂಟೆ ಆಗ್ತದಲ್ಲ ಚಿಕ್ಕಣ್ಣ ಅಂದ್ರು ಸ್ವಲ್ಪ ಹೊತ್ತು ಯೋಚನೆ ಮಾಡಿ ಇನ್ನ ಒಂದು ಹೆಚ್ಚೇ ಆಗ್ತದೆ ಸ್ವಾಮಿ ಅಂದ ಚಿಕ್ಕಣ್ಣ. ನಮ್ಮಪ್ಪ ಸರಿ ಹಾಗಾದ್ರೆ ನಾಳೇನೇ ಕೂಲಿಯವರನ್ನ ಕರೆಸಿಬಿಡು ಕುಯ್ಯಿಸಿಬಿಡನ ಅಂದ್ರು.

Read more »

Follow

Get every new post delivered to your Inbox.

Join 1,256 other followers