ವಿಷಯದ ವಿವರಗಳಿಗೆ ದಾಟಿರಿ

Archive for

24
ಆಕ್ಟೋ

ವಿಜ್ಞಾನಿ ಅಜಯ್ ಶರ್ಮ ಅವರಿಂದ ವಿನೂತನ ಆವಿಷ್ಕಾರ

ಕರುಣಾಕರ ಬಳ್ಕೂರು

ದ್ರವ್ಯ ರಾಶಿ ಶಕ್ತಿ ಸಮಾನತೆಯ  E=mc2ಇದನ್ನು ನೀವು ಬಾಲ್ಯದಿಂದ ವಿಜ್ಞಾನ ಓದಿದ್ದರೆ ನೋಡಿದ ತಕ್ಷಣ ನೆನಪಿಗೆ ಬಂದೇ ಬರುತ್ತೆ. ಈ ಸೂತ್ರದ ಹರಿಕಾರ ಶ್ರೇಷ್ಠ ವಿಜ್ಞಾನಿ ಐನ್‌ಸ್ಟೀನ್. ಈತ ವಿಜ್ಞಾನ ಕ್ಷೇತ್ರಕ್ಕೆ ತನ್ನದೇ ಆದ ಬಹಳಷ್ಟು ಕೊಡುಗೆಗಳನ್ನು ನೀಡಿದ್ದಾನೆ. ಭೌತಶಾಸ್ತ್ರ ಕ್ಷೇತ್ರದಲ್ಲಿ ಆಗಿರುವ ವಿಸ್ಮಯಗಳು ಐನ್‌ಸ್ಟೀನ್‌ನ ಆವಿಷ್ಕಾರಗಳನ್ನು ವಿಜ್ಞಾನ ಕ್ಷೇತ್ರ ಒಪ್ಪಿಕೊಂಡಿದೆ. ಆದರೆ ಹಲವು ದಿನಗಳಿಂದ ‘ದ್ರವ್ಯ ರಾಶಿ ಶಕ್ತಿ ಸಮಾನತೆಯ  E=mc2ಸೂತ್ರದ’ ಬಗ್ಗೆ ಇತರ ವಿಜ್ಞಾನಿಗಳು ತಕರಾರು ಎvರುವ ಪ್ರಶ್ನೆಗಳು ಗೊತ್ತಿರಬಹುದು. ಹಲವು ವರ್ಷಗಳಿಂದ ವಿಜ್ಞಾನಿಗಳಿಗೆ ಈ ಸೂತ್ರವು ಅಷ್ಟೊಂದು ಸಮರ್ಪಕವಾಗಿಲ್ಲ ಎಂದು ಕೆಲವೊಂದು ವಿಜ್ಞಾನಿಗಳ ತಂಡ ಬಹಿರಂಗಪಡಿಸಿದೆ. ಭೌತಶಾಸ್ತ್ರದಲ್ಲಿ ಈ ಸೂತ್ರ ಅಷ್ಟೊಂದು ಸಮರ್ಪಕವಾಗಿಲ್ಲ ಎನ್ನುವ ಬಗ್ಗೆ ಹಲವಾರು ವಿಜ್ಞಾನಿಗಳಿಂದ ಆಕ್ಷೇಪಗಳು ಹಿಂದಿನಿಂದಲು ಕೇಳಿಬರುತ್ತಿತು. ಮತ್ತೆ ಇದು ಹುರುಳಿಲ್ಲದ ಸೂತ್ರ ಎನ್ನುವ ಬಗ್ಗೆಯೂ ವಿಮರ್ಶಕರು ಕರೆದ್ದುಂಟು. ಆದರೆ ಇದೀಗ ಎಲ್ಲರ ಊಹಾಪೋಹಗಳಿಗೆ ತೆರೆಬಿದ್ದಿದೆ. ಈ ಸೂತ್ರದ ಬಗ್ಗೆ ಆಳವಾಗಿ ಅದ್ಯಾಯನ ಮಾಡಿ, ಸೂತ್ರಕ್ಕೆ ಮೋಕ್ಷವನ್ನು ಕೊಡುವಲಿ ಕಾರಣಿಕರ್ತರಾದವರು ಪ್ರಖ್ಯಾತ ವಿಜ್ಞಾನಿ ಅಜಯ್ ಶರ್ಮ. ವಿನೂತನ ಆವಿಷ್ಕಾರದ ಮೂಲಕ ಯಶಸ್ವಿಯಾಗಿದ್ದಾರೆ.
ಬನ್ನಿ ಅಜಯ್ ಶರ್ಮ ಅವರ ಹೊಸ ಸೂತ್ರದ ವಿವರಣೆಯನ್ನು ತಿಳಿದುಬರೋಣ. ಐನ್‌ಸ್ಟೀನಿನ ದ್ರವ್ಯ ರಾಶಿ ಶಕ್ತಿ ಸಮಾನತೆಯ E=mc2 ಸೂತ್ರಕ್ಕೆ ಹೊಸ ರೂಪವಾಗಿ DE= DAmc2 ಅನ್ನು ಸಿದ್ಧಪಡಿಸಿ ಮಂಡಿಸಿದ್ದಾರೆ.  ಆ ಮುಖೇನ ಹೊಸ ಕ್ರಾಂತಿಯನ್ನೆ ಮಾಡಿದ್ದಾರೆ. ಅಜಯ್ ಶರ್ಮರವರು ಆಕ್ಸ್‌ಫರ್ಡ್ ಮತ್ತು ಹಾವರ್ಡ್ ವಿಶ್ವವಿದ್ಯಾನಿಲಯಗಳಿಂದ ಗುರುತಿಸಲ್ಪಟ್ಟು ಅಂತರಾಷ್ಟ್ರೀಯ ಪ್ರಖ್ಯಾತಿ ಪಡೆದ ವಿಜ್ಞಾನಿ. ಮೂಲತಃ ಹಿಮಾಚಲ ಪ್ರದೇಶದವರು.
ಅಜಯ್ ಶರ್ಮರವರು ಸುಮಾರು ೨೮ ವರ್ಷಗಳ ಕಾಲ ಈ ಸಮೀಕರಣದ ಮೇಲೆ ಪ್ರಯೋಗಾತ್ಮಕವಾಗಿ ಅಧ್ಯಾಯನ ಮಾಡಿದರು. ಸತತ ಪ್ರಯೋಗದ ಮೂಲಕ ಕೊನೆಗೂ ಯಶಸ್ಸನ್ನು ಈ ಸಮೀಕರಣದಲ್ಲಿ ಕಂಡುಕೊಂಡಿದ್ದಾರೆ. ಈ ವಿಷಯದ ಕುರಿತಂತೆ ಇಂಗ್ಲೇಂಡ್, ಯು.ಎಸ್.ಎ, ಕೆನಡಾ, ಮಾಸ್ಕೋ, ಪೊಲಾಂಡ್, ಮುಂತಾದ ಹಲವಾರು ದೇಶಗಳಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಈ ಸೂತ್ರದ ಬಗ್ಗೆ ಮಂಡಿಸಿ ಸಮರ್ಥಿಸಿದ್ದಾರೆ. ಈ ವಿಷಯಕ್ಕೆ ಸಂಬದಿಸಿದಂತೆ ಸುಮಾರು ೧೮ ಲೇಖನಗಳನ್ನು ವಿವಿಧ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ. ೨೦೦೯-೧೦ರಲ್ಲಿ ಯು.ಎಸ್.ಎ ಮತ್ತು ಜರ್ಮನಿಯಲ್ಲಿ ಎರಡು ಪುಸ್ತಕಗಳನ್ನು ಪ್ರಕಟಗೊಳಿಸಿದ್ದಾರೆ. ಮತ್ತಷ್ಟು ಓದು »

24
ಆಕ್ಟೋ

ಅಮ್ಮ

ಎಚ್. ಆನಂದರಾಮ ಶಾಸ್ತ್ರೀ

 

ಅಮ್ಮಾ, ನಿನ್ನ ಅನುರಾಗದ ಕಂದ ನಾನು
ಬೇಕೆಂದುದ ಕೊಡುವ ನೀನು ಕಾಮಧೇನು

ನಾ ಮುಟ್ಟುವ ಗುರಿಯ ಮಾರ್ಗದರ್ಶಿ ನೀನು
ತಿಳಿಯದೆನಗೆ ಪಯಣಗತಿಯ ಕಷ್ಟವೇನೂ

ನನಗಾಗಿಯೆ ಮಿಡಿದೆ ಬಹಳ ಕಂಬನಿಯನ್ನು
ನನ್ನೆದುರಿನ ಜೀವಂತ ದೇವಿ ನೀನು

ಕೊಡುವೆ ನನ್ನ ಮಧುರ ನೆನಪುಗಳಲಿ ಪಾಲನು
ಕೊಡಲಾರೆನು ನಿನಗೆ ನಾನು ಇನ್ನೇನನ್ನೂ

ಅಮ್ಮಾ, ನಿನ್ನ ಅನುರಾಗದ ಕಂದ ನಾನು
ನಾನು ನೆರಳು, ಭವ್ಯ ಮೂಲಮೂರ್ತಿ ನೀನು