ಅವರ ಕನಸುಗಳ ಬೆನ್ನುಹತ್ತಿ
ಆತ ಪೋಟೋ ಕ್ಲಿಕ್ ಮಾಡಲು ಬಿಡಲಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಈ ಇಬ್ಬರು ಹೀರೋಗಳು ತೆರೆಯ ಮರೆಯ ಕಾಯಿಗಳಂತೆ ಈಗಲೂ ಇದ್ದಾರೆ. ದಕ್ಷಿಣ ಕನ್ನಡದ ಜಿಲ್ಲೆಯ ಆದಿವಾಸಿ ಜನರಾದ ಕೊರಗರ ಅಭಿವೃದ್ಧಿಗಾಗಿ ದುಡಿಯುತ್ತಿರುವ ಶೀನ ಶೆಟ್ಟಿ, ಕೃಷ್ಣಮೂಲ್ಯ ಅವರೆ ಈ ತೆರೆಯಮರೆಯ ಹೀರೋಗಳು. ಮಂಗಳೂರಿನಲ್ಲಿ ಇವರ ಸಖ್ಯ ನನ್ನೊಂದಿಗೆ ಬೆಳೆಯಿತು. ಇವರೊಂದಿಗೆ ನಾನು ಕೂಡ ದಕ್ಷಿಣ ಕನ್ನಡ ಜಿಲ್ಲೆಯನ್ನು ಪೂರಾ ಸುತ್ತು ಹೊಡೆದಂದ್ದಾಯಿತು, ಏನಿವರ ಕನಸುಗಳು ಅಂತಾ ಕೆದಕುತ್ತಾ ಹೋದಂತೆ ಜನರಿಗೆ ತಮ್ಮ ಜೀವನವನ್ನೆ ಸಮರ್ಪಣೆ ಮಾಡಿಕೊಂಡ ಕಥನ ಬಿಚ್ಚಿಕೊಳ್ಳುತ್ತದೆ.
ಶೀನಶೆಟ್ಟಿ, ಕೃಷ್ಣಮೂಲ್ಯರು ನಕುಲ,ಸಹದೇವ, ಲವ-ಕುಶ ಇದ್ದಂತೆ, ಅವರಿಬ್ಬರು ಒಬ್ಬರಿಗೊಬ್ಬರು ಬಿಟ್ಟಿರುವುದಿಲ್ಲ. ಸಮಾಜಕಾರ್ಯದಲ್ಲಿ ಆಗಿನ ಕಾಲಕ್ಕೆ ಸ್ನಾತಕೋತ್ತರ ಪದವಿ ಪಡೆದರೂ ಅವರು ಎಂದೆಂದಿಗೂ ಕೆಲಸ ಆಸೆಯ ಗುರಿ ಹೊತ್ತವರೆ ಅಲ್ಲ. ಬ್ಯಾಂಕುಗಳಲ್ಲಿ ಉದ್ಯೋಗ ಅರಸಿ ಬಂದರೂ ಅದನ್ನು ಒಲ್ಲೆ ಎಂದವರು, ತಮ್ಮ ಸಣ್ಣ ವಯಸ್ಸಿನಲ್ಲೆ ಸಮಾಜ ಸೇವೆಯ ತುಡಿತ ಬೆಳೆಸಿಕೊಂಡ ಇವರಿಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಅಣ್ಣಾ ಹಜಾರೆ ಇದ್ದಂತೆ. ನವ ಸಾಕ್ಷರರ ಆಂದೋಲನದ ಮೂಲಕ ಜಿಲ್ಲೆಯ ಮೂಲೆ ಮೂಲೆಗಳನ್ನು ಎಡ ತಾಕಿರುವ ಇವರು ಅದರಲ್ಲಿ ಸಾಧಿಸಿರುವ ಪ್ರಗತಿ ಅಸಾಧಾರಣ.
೮೦ರ ಪ್ರಾಯದ ಚೀಂಕ್ರ ಮೂಲ್ಯ ಜೀವನ ಸಾಧನೆ ಕೃಷ್ಣ, ಶೀನ ಶಟ್ಟಿ ಅವರ ಆಸಧಾರಣ ಸಮಾಜ ಸೇವೆಗೆ ಒಂದು ಉದಾಹರಣೆ. ಕುಡಿತ, ಹೆಣ್ಣು ಮಕ್ಕಳ ಕೀಟಲೆ, ಹೆಂಡತಿಯೊಂದಿಗೆ ಜಗಳ ಬಡಿದಾಟದಲ್ಲೇ ಜೀವನ ಕಂಡಿದ್ದ ಚೀಂಕ್ರ ಪೂಜಾರಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಅಲ್ಲದೇ ರಾಜ್ಯದ ಇತರೆ ಜಿಲ್ಲೆಗಳಲ್ಲಿ ನಡೆದ ಸಾಕ್ಷರತಾ ಶಿಬಿರಗಳಲ್ಲಿ ಸಂಪನ್ಮೂಲ ಮತ್ತು ಕಲಿಯುವವರ ಪ್ರೇರಕ ಶಕ್ತಿಯಾದ ಹಿಂದೆ ಈ ಅಣ್ಣ ಹಜಾರೆ (ಮೂಲ್ಯ, ಶೆಟ್ಟಿ) ಇದ್ದಾರೆ. ಕೊರಗ ಸಮುದಾಯದ ಕಮಲ ಗ್ರಾಮ ಪಂಚಾಯತ್ ಸದಸ್ಯೆಯಾಗಿ ಆಯ್ಕೆ ಯಾದುದ್ದರ ಹಿಂದೆ ಇವರ ಶ್ರಮವಿದೆ. ಮಾಧ್ಯಮದಿಂದ ದೂರವೇ ಉಳಿಯುವ ಈ ಇಬ್ಬರು ದುಡಿವ, ನೆಲದ ನಾಯಕರು, ಸಾಮೂಹಿಕ ಶ್ರಮದಾನದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಚ್ಛತಾ ಆಂದೋಲನದ ಹೊಸ ಮಾದರಿಗಳನ್ನೆ ಹುಟ್ಟಿಹಾಕಿದರು, ಗೋಳ್ತಮಜಲು ಮಾದರಿ, ಇರಾ ಮಾದರಿಗಳು ಇಡೀ ರಾಜ್ಯ, ರಾಷ್ಟ್ರ, ವಿದೇಶಗಳ ಗಮನ ಸೆಳೆದವು. ರಾಜ್ಯದಲ್ಲಿ ಶಿವಮೊಗ್ಗ ಹೊರತುಪಡಿಸಿ ಯಾವುದೇ ಜಿಲ್ಲೆಗಳಲ್ಲಿ ಸಾಧಿಸಲಾರದಂತ ಸಾಧನೆ ಈ ಜಿಲ್ಲೆಯಲ್ಲಿ ಸ್ವಚ್ಚತಾ ಆಂದೋಲನದಲ್ಲಿ ನಡೆಯಿತು, ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿಸಲು ಇವರು ಕೈಗೊಂಡ ಶ್ರಮದಾನ, ಗ್ರಾಮ, ಗ್ರಾಮಗಳ ನಡುವಿನ ಸ್ಪರ್ಧೆ ದೇಶದ ಎಲ್ಲ ಕಾಣದಂತ ಹೊಸ ಪರಿಕಲ್ಪನೆಗಳು.ಜನಪ್ರತಿನಿಧಿಗಳು, ಸರ್ಕಾರಗಳು ಮಾಡದಂಥ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತುಳಿತಕ್ಕೆ ಒಳಗಾದ ಜನತೆಗೆ ಬದುಕಿನ ಭರವಸೆಯ ಆಶಾಕಿರಣಗಳನ್ನು ಮೂಡಿಸಿರುವ ಧೀಮಂತ ಮಣ್ಣಿನ ಮಕ್ಕಳಿವರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವಾಗಲೂ ನೆನೆಯುವ ಧರ್ಮಸ್ಥಳದ ಗ್ರಾಮಾಭಿವೃದ್ದಿ ಯೋಜನೆ, ಮೋಹನ ಆಳ್ವರ ಸಾಂಸ್ಕೃತಿಕ ಹಿರಿತನಗಳ ಜೊತೆಗೆ ಕನಸಿನ ಊರಿನ ಕದತಟ್ಟಿದವರಲ್ಲಿ ಕೃಷ್ಣಮೂಲ್ಯರು, ಶೀನ ಶೆಟ್ಟಿಯೂ ಸೇರಿದಂತೆ, ವಿಪರ್ಯಾಸ ವೆಂದರೆ ಉಳಿದ ಇಬ್ಬರ ಬಳಿ ಶಿಕ್ಷಣ ಸಂಸ್ಥೆಗಳಿವೆ, ಧಾರ್ಮಿಕ ಶಕ್ತಿ ಕೇಂದ್ರವಿದೆ, ಹಣವಿದೆ ಹಾಗೂ ರಾಜಕೀಯ ಶಕ್ತಿ ಇದೆ, ಆದರೆ ಇದ್ಯಾದುವುದು ಇಲ್ಲದೇ ಸಾವಿರಾರು ಜನರ ಬದುಕನ್ನು ರೂಪಿಸಿರುವ ಈ ಇಬ್ಬರು ನಾಯಕರನ್ನು ಸರ್ಕಾರ ಇದೂವರೆಗೂ ಸರಿಯಾಗಿ ಗುರುತಿಸುವ ಕೆಲಸ ಮಾಡಿಲ್ಲ. ಈ ಇಬ್ಬರನ್ನು ಸರ್ಕಾರ ಗುರುತಿಸುವಂಥಾದರೆ ಅದು ನಾಡಿನ ಹೊಸ ಭಾಗ್ಯ ಮಾತ್ರವಲ್ಲ ಅಭಿವೃದ್ಧಿಯ ಪರಿಕಲ್ಪನೆಗಳು ಬದಲಾದಾವು, ಹಳ್ಳಿ, ಹಳ್ಳಿಗಳು ಅನಭಿವೃದ್ಧಿ, ಅಜ್ಞಾನದ ಮೂಸೆಯಿಂದ ಹೊರಬರಲು ಹೊಸ ಆಶಾಕಿರಣಗಳಾಗಲಿವೆ.
ನನ್ಮಾತು…………
ಎಚ್.ಎನ್.ಈಶ ಕುಮಾರ್
A man in Mumbai sees a dog attacking a lady.
He kicks the dog and it dies.
News paper report: “Local hero saves lady from dog”
Man says i am not Indian.
Report is changed; “Foregin hero saves lady from dog”.
Man says actually I am Pakistani
next day Headlines:
“TERRORIST KILLS INNOCENT DOG”.

ಸ್ನೇಹಿತ ಕಳಿಸಿದ ಇಂತದೊಂದು ಸಂದೇಶ ಮೊಬೈಲಿನಲ್ಲಿ ಓದಿದ ತಕ್ಷಣವೇ ಅನಿಸಿದ್ದು ಎಂಥ ‘ವಿಲಕ್ಷಣ ಸತ್ಯ’ವಿದು. ಅಮೆರಿಕ ಬ್ರಾಂಡ್ ನ ಜೀನ್ಸ್ ಹಾಕಿ, ಜರ್ಮನ್ ಬ್ರಾಂಡ್ ನ ಶರ್ಟ್ ಧರಿಸಿ,Black Berry ಮೊಬೈಲ್ ಫೋನ್ ಗೆ bluetooth ಸಿಕ್ಕಿಸಿಕೊಂಡು ಹರಟುವ ಗ್ಲೋಬಲ್ village ಕಾನ್ಸೆಪ್ಟ್ ನ ತದ್ರೂಪಿನಂತೆ ದೊಡ್ಡ ದೊಡ್ಡ ನಗರಗಳಲ್ಲಿ ಚಿತ್ರ-ವಿಚಿತ್ರವಾಗಿ ಅಲೆದಾಡುವ ೨೧ ಶತಮಾನದ ಅರೆಬೆಂದ ಮನಸುಗಳಲಿ ವಿರಾಜಮಾನವಾಗಿರುವ ‘ಸಂಕುಚಿತತೆಯ’ ಭಾವವಿದು. ವೈಜ್ಞಾನಿಕವಾಗಿ,ತಾಂತ್ರಿಕವಾಗಿ ಜಗಕ್ಕೆ ಮಾದರಿ ಎನುವಂತೆ ನಾವಿದ್ದರು ನಮ್ಮ ನಮ್ಮ ನಡುವಿರುವ ‘ಗೋಡೆಗಳನು’ ಮೀರುವ ಪ್ರಯತ್ನ ನಮ್ಮಿಂದ ಆಗಿಯೇ ಇಲ್ಲವೇನೋ ಎನಿಸುವುದು. ನಾವೇ ಹಾಕಿಕೊಂಡ ‘ಲಕ್ಷ್ಮಣ ರೇಖೆ’ಗಳನು, ನಾವೇ ನಿರ್ಮಿಸಿಕೊಂಡ ಕಂದಕಗಳನು ಮೀರುವುದು ಎಷ್ಟು ಕಷ್ಟ. ನಮ್ಮ ಸಂವೇದನೆಗಳನು ನಿಯಂತ್ರಿಸುತ, ಗಡಿದಾಟದ ಹಾಗೇ ಲಗಾಮು ಹಾಕಿವೆ ಈ ಅಮೂರ್ತ ಕಂದಕಗಳು.
ಮಾನವ- ಮಾನವನ ಸಹಿಸಲಾಗದ ಸ್ಥಿತಿಯಲಿ ನಾವಿದ್ದೇವೆ. ಅಸಹನೆಗೆ ಕಾರಣ ಧರ್ಮ-ಅಧರ್ಮಗಳ ನಡುವಿನ ಯುದ್ದವೇನು ಅಲ್ಲ, ಕೆಡುಕರನು, ಸಮಾಜ ವಿದ್ರೋಹಿಗಳನು ದೂರವಿಡುವ ಹೋರಾಟದ ಭಾವವೇನು ಅಲ್ಲ. ಪಾಕಿಸ್ತಾನ ಭಯೋತ್ಪಾದಕರನ್ನು ಉತ್ತೇಜಿಸಿ ಭಾರತ ಮತ್ತು ಭಾರತೀಯರ ಮೇಲೆ ನಡೆಸುತ್ತಿರುವ ಅವರ ಹೇಯ ಕೃತ್ಯಗಳನ್ನುಹಾಗೂ ಮೃಗೀಯ ವರ್ತನೆಯನ್ನು ಖಂಡಿಸುವ ರೀತಿ ಎಂಬಂತೆ ನಾವು ನಮ್ಮ ಮನೆಯ ಪಕ್ಕದ “ಮುಸ್ಲಿಮರನ್ನು ಪಾಕಿಸ್ತಾನದ ಭಯೋತ್ಪಾದಕನಂತೆ”ನೋಡುವ ವಿಚಿತ್ರ ಧೋರಣೆ ನಮ್ಮಲ್ಲಿ ಬೆಳೆಯುತ್ತಿದೆ. ಎಲ್ಲವನ್ನು ಒಂದೇ ರೀತಿಯಾಗಿ ನೋಡುವ ಮನೋಭಾವ. ರಾಜಕೀಯ ಪ್ರತಿಷ್ಠೆಗಾಗಿ ದೇವೇಗೌಡ, ಸಿದ್ದರಾಮಯ್ಯರು ಒಬ್ಬರನೊಬ್ಬರು ವಿರೋದಿಸಿದರೆ ಒಕ್ಕಲಿಗರೆಲ್ಲ ಕುರುಬರನ್ನು, ಕುರುಬರೆಲ್ಲ ಒಕ್ಕಲಿಗರನ್ನು ವೈರಿಗಳಂತೆ, ಅಸ್ಪೃಶ್ಯ ರಂತೆ ಕಾಣುವ ಮನೋಭಾವ ಬೆಳೆಸಿಕೊಳ್ಳುವ ನಮ್ಮ ವರ್ತನೆ ಎಂಥ ವಿಚಿತ್ರ. ಮತ್ತಷ್ಟು ಓದು 
ನಾವಾಗಿದ್ರೆ……?
ಸಾತ್ವಿಕ್ ಎನ್ ವಿ
ನಮ್ಮ ಗೆಳೆಯನೊಬ್ಬನ ಬಗ್ಗೆ ನಮಗೆ ವಿಪರೀತ ಅಸಡ್ಡೆ. ಸದಾ ತಿಂಡಿಯದ್ದೇ ಜ್ಞಾನ. ಕಲಿಯುವುದರಲ್ಲಿ ಆರಕ್ಕೆರಲ್ಲ, ಮೂರಕ್ಕಿಳಿಯಲ್ಲ. ಅಪ್ಪನ ದುಡ್ಡಿನಿಂದ ಎಂಜಿನಿಯರಿಂಗ್ ಸೀಟ್ ಸಿಕ್ಕಿತು. ಇನ್ನೇನು ಸ್ವರ್ಗಕ್ಕೆ ಮೂರೇ ಗೇಣು. ಯಾವಾಗಲು ಬೈಕ್ ಬಿಟ್ಟು ಇಳಿಯಲಾರ. ನಿಂತಲ್ಲಿ ನಿಲ್ಲಲಾರ. (ಅವನು ಹಾಗೆ ನಿಲ್ಲದೇ ಇರೋದಕ್ಕೆ ಪಾಪ ಬೇರೆಯದೇ ಕಾರಣ ಇದೆ. ಕನಕಾಂಗಿ ಕೈಗೆ ಸಿಕ್ಕವರು ಕೋಲೆಬಸವನಾಗದೇ ವಿಧಿಯುಂಟೇ?)
ನೂರು ಸಲ ಹೇಳಿದ ಕೆಲಸ ನೂರಾವೊಂದನೆ ಸಲ ಮಾಡ್ತಾನೆ. ಇಂಥವನಿಗೊಂದು ಹುಟ್ಟುಹಬ್ಬ. ಇದಕ್ಕೆ ಖಗಪಕ್ಷಿಗಳ ಹಾಗೆ ಕಾದ ಸ್ನೇಹಿತರು ಒಂದು ವಾರದ ಮುಂಚಿನಿಂದಲೇ ತಯಾರಿ. ಯಾವುದಕ್ಕೆ ಎಲ್ಲಿ ಪಾರ್ಟಿ ಮಾಡೋದು ಅಂಥಾ. ಆದರೆ ಈ ಬಕಾಸುರ ನಗುತ್ತಾನೆಯೇ ಹೊರತು ಪ್ಲೇಸ್ ಬಾಯಿ ಬಿಡೊಲ್ಲ. ಇವನು ಸಿಕ್ರೇಟ್ ಗಿಷ್ಟು ಮೊದಲು ಎಲ್ಲಿ ಎಂದು ಹೇಳಬಾರದೇ ಎಂದುಕೊಂಡವರು ತುಂಬಾ ಜನ. ಆ ದಿನದ ಅತಿಥ್ಯಕ್ಕೆ ವಾರ ಉಪವಾಸ ಮಾಡ್ತೀನಿ ಗುರು ಅಂದೋರು ಇದ್ದರು. ಏನೇ ಹೇಳಲಿ ಇವನು ಬಾಯಿ ಬಿಡೋಲ್ಲ.
ಕೊನೆಗೆ ಈ ಮಹಾನುಭಾವನ ಹುಟ್ಟಿದ ದಿನವೂ ಬಂತು. ಸಂಜೆಯಲ್ವಾ ಪಾರ್ಟಿ ಅಂತಾ ಎಲ್ಲರೂ ಕಾಯ್ತಾ ಇದ್ದರು. ಸಂಜೆಯಾದ್ರು ಈ ಮಹಾನುಭಾವನ ಕಾಲ್ ಇಲ್ಲ. ಇನ್ನು ಫ್ರೆಂಡ್ಸ್ ಸುಮ್ನೆ ಇರ್ತಾರಾ? ಅವರೇ ಫೋನ್ ಮಾಡಿದ್ರು. ಅವನ ಉತ್ತರ ಕೇಳಿ ಅವರಿಗೆಲ್ಲ ತಲೆ ತಿರುಗೊದೊಂದೆ ಬಾಕಿ. ಪಾರ್ಟಿ ಮಧ್ಯಾಹ್ನನೇ ಮುಗಿತು ಎಂದು ನಿರುಮ್ಮಳನಾಗಿ ಫೋನ್ ಇಟ್ಟನಂತೆ. ಇವರು ನನಗೆ ಫೋನ್ ಮಾಡಿ ಅವನ ಗುಣಗಾನ ಆರಂಭ ಮಾಡಿದ್ರು. ಮೊದಲೇ ಅವನ ಬಗ್ಗೆ ನಮಗೆ ಅಸಡ್ಡೆ. ಹೀಗೆ ಮಾಡಿದ್ರೆ ಕೇಳಬೇಕೆ? ಆದ್ರೂ ನನಗೆ ಇದರಲ್ಲಿ ಎನೋ ವಿಶೇಷ ಇದೆ ಅನ್ನಿಸ್ತು. ಯಾಕಂದ್ರೆ ದುಡ್ಡು ಮಜಾ ಮಾಡೋಕೆ ಅನ್ನೋನು ಪಾರ್ಟಿ ತಪ್ಪಿಸಿ ಹಣ ಉಳಿಸಲು ಹೋಗಲ್ಲ. ಸಮಯ ಬಂದಾಗ ಕೇಳಿದರಾಯ್ತು ಅಂತ ಸುಮ್ಮನಾದೆ.
ಒಂದು ದಿನ ಅವನೇ ಯಾವುದೋ ವಿಷಯ ಕೇಳೊಕೆ ಬಂದ. ಆಗ ನಾನು ಪಾರ್ಟಿ ವಿಷಯ ಕೇಳಿದೆ. ಅದಕ್ಕೆ ಅವನು ಒಂದು ಕ್ಷಣ ಸುಮ್ಮನಿದ್ದು, ‘ನೋಡು ನಾನು ಆ ದಿನ ಖರ್ಚು ಮಾಡಬೇಕಿದ್ದ ಹಣನೆಲ್ಲಾ ಲೆಕ್ಕ ಹಾಕಿದೆ. ಇದಕ್ಕಿದ್ದ ಹಾಗೆ ನನ್ನ ಗೆಳೆಯರು ಹಣಕಾಸಿನಲ್ಲಿ ಕಷ್ಟದಲ್ಲಿರೋದು ನೆನಪಾಯ್ತು. ಅವರಿಗೆ ನೇರ ಹಣ ಕೊಟ್ಟರೆ ತಗೋಳಲ್ಲ. ದೇವರು ಬಡತನದ ಜೊತೆಗೆ ಸ್ವಾಭಿಮಾನನೂ ಕೊಟ್ಟಿರುತ್ತಾನೆ. ಅದಕ್ಕೆ ನಾನು ಹುಟ್ಟು ಹಬ್ಬದ ನೆವ ಮಾಡಿಕೊಂಡು ಅವರಿಗೆಲ್ಲ ಗಿಫ್ಟ್ ಕೊಡೊ ನೆಪದಲ್ಲಿ ನಮಗೆ ಆ ವರ್ಷ ಬೇಕಾದ ಟೆಕ್ಟ್ ಬುಕ್ ಗಳನ್ನು ತಂದು ಅವರಿಗೆ ಕೊಟ್ಟೆ. ಅಮ್ಮನೇ ಮಾಡಿದ ವಿಶೇಷ ಅಡುಗೆಯನ್ನು ಬಡಿಸಿದೆ. ಅವರ ಖುಷಿಯಲ್ಲಿ ನನಗೆ ಅದೇನೊ ಆನಂದ ಕಣೊ. ನನಗೆ ದೇವರು ಇಷ್ಟೊಂದು ಕೊಟ್ಟಿರುವಾಗ ನಾನು ಕೊನೆಪಕ್ಷ ನನ್ನ ಗೆಳೆಯರ ನೆರವಿಗೆ ಬರಲಿಲ್ಲ ಅಂದ್ರೆ ಏನು ಪ್ರಯೋಜನ ಅನ್ನಿಸ್ತು. ಅದಕ್ಕೆ ಹಾಗೆ ಮಾಡಿದೆ. ನಾನು ಪಾರ್ಟಿ ಕೊಡದೇ ಇರೊ ಬಗ್ಗೆ ನನಗೇನು ವಿಷಾದ ಇಲ್ಲ ಅಂತ ಏನೇನೊ ಹೇಳ್ತಾ ಇದ್ದ…. ನನಗೆ ಮಾತಾಡಲು ಬಾಯಿ ಬರಲ್ಲಿಲ್ಲ. ನನ್ನ ಕಣ್ಣುಗಳೆ ಮಾತಾಡುತ್ತಿದ್ದವು…
ರಂಗೋಲಿ……. ಚಿತ್ತ-ಚಿತ್ತಾರಗಳ ನಡುವೆ
ತುಂಬಾ ದಿನಗಳಿಂದ ಬರೀಬೇಕು, ಬರೀಬೇಕು ಅಂತಾ ಕುಳಿತು ಪೆನ್ನು ಹಿಡಿದ್ರೆ ಹಾಳಾದ್ದು ಏನೇನೋ ಆಲೋಚನೆ ಕಣ್ ಮುಂದೆ ಬರೋದು, ಇವತ್ತು ಬರೀಲೇಬೇಕು, ಅಂತ ಬೆಳ್ಳಂಬೆಳ್ಳಗ್ಗೆ ಎದ್ದು, ಮೊದಲು ಪೋನ್ಗಳು ಸ್ವಿಚ್ ಆಫ್ ಮಾಡಿ ಕೂತೆ, ಮನೆ ಹೊರಗಡೆ ರಂಗೋಲಿ ರಂಗೋಲಿ………… ಅಂತ ಕೂಗ್ತಾಯಿರೋ ಸದ್ದು, ಚಿಕ್ಕಂದಿನಿಂದಲೂ ಈ ಸದ್ದು ಕೇಳಿದ್ದು ಮತ್ತೊಮ್ಮೆ, ನನ್ನ ಬಾಲ್ಯವನ್ನು ನೆನಪಿಸಿದ ಹಾಗೆ ಓಡೋಡಿ ಹೊರಗೆ ಬಂದೆ, ಮನೆಯ ಸುತ್ತಮುತ್ತಲಿನ ಕೆಲವರು ರಂಗೋಲಿ ವ್ಯಾಪಾರ ಮಾಡ್ತಿದ್ರು, ಸೇರಿಗೆ ೧೫ರೂಪಾಯಿ ಅಂತ ಆಕೆ, ಈ ಹೆಂಗಸರು ೧೦ರೂಪಾಯಿಗೆ ಒಂದು ಸೇರು ಕೊಡು ಅಂತ ವಾಗ್ವಾದ.
ನೆನಪಿದ್ದಂತೆ ಸೇರಿಗೆ ೧ರೂಪಾಯಿ ೧.೫೦ರೂಪಾಯಿತ್ತು. ನಿತ್ಯ ಜೀವನದ ದರ ಸಮರ, ಆರ್ಥಿಕ ಸಮತೋಲನ ಈ ರಂಗೋಲಿ ಹುಡುಗಿಯ ಮೇಲು ಬಿದ್ದಂಗಿದೆ ಅನ್ಕೊಂಡು, ಒಳಗೆ ಬರೋವಾಗ ಅಕಸ್ಮಾತ್ ಏನೋ ನೋಡಿದ ನೆನಪಾಗಿ ರಂಗೋಲಿ ಮಾರುವ ಹುಡುಗಿಯನ್ನೇ ದಿಟ್ಟಿಸಿ ನೋಡಿದೆ, ಎಲ್ಲೋ ನೋಡಿದ ನೆನಪು, ಗೊತ್ತಾಗ್ತಾಯಿಲ್ವೆಲ್ಲ, ಅಂತ ಅವಳ ಮುಖವನ್ನೇ ದಿಟ್ಟಿಸಿ ನೋಡ್ತಿದ್ದೆ. ಆಕೆ ಅಲ್ಲಿ ಚೌಕಾಸಿ ಮಾಡಿ ವ್ಯಾಪಾರ ಮುಗಿಸುವ ಧಾವಂತದಲ್ಲಿದ್ದಳು. ಈ ಹುಡುಗಿ ನನಗೆಲ್ಲೋ ಪರಿಚಯ ಇರಬಹುದಾ !!, ಇವಳನ್ನಾ ನೋಡಿದ್ದಿನಾ ಅಂತ ನನ್ನ ಸಮಸ್ತ ಗೆಳೆಯರ ಬಳಗವನ್ನೇ ಒಮ್ಮೆ ಮೆಲುಕು ಹಾಕಿದ್ದಾಯಿತು. ನೆನಪಾಗಲಿಲ್ಲ.
ಯೋಚನೆ ಬೆಳಿಗ್ಗೆಯ ನನ್ನ ಪ್ರಾತಕರ್ಮಗಳನ್ನು ಮರೆಸುವಂತಿತ್ತು. ಆಕೆ ನಮ್ಮ ಬೀದಿಯ ಕಡೆಯವರೆಗೂ ಹೋಗಿ ಒಂದ್ಯೆದು ನಿಮಿಷಕ್ಕೆ ವಾಪಸ್ ಬಂದು, ಅವಳನ್ನ ಕೇಳೇ ಬಿಡುವ ಅಂತ ನಿರ್ಧರಿಸಿ, ರೀ ಮೇಡಂ ಅಂದೆ, ಅರೆ!!! ಅರವಿಂದ ಅಲ್ವಾ ನೀವು ಅಂತಾ ಹುಡುಗಿ ನನ್ನ ಹತ್ರ ಬರ್ತಿದ್ಳು. ಈಗಂತೂ ನನ್ನ ನೆನಪಿನ ಶಕ್ತಿ ಕುಂದಿದೆ ಅನ್ನೋದು ಗ್ಯಾರೆಂಟಿ ಆಗೋಯ್ತು, ಏನಂತ ಹೇಳೋದು ಹು……… ಅಂದೆ. ನೀವಿಗ ಇಲ್ಲಿರೋದಾ ? ನಾನು ನಿಮ್ಮನ್ನ ಗುರುತು ಹಿಡಿತಿನಿ ಅಂತ ಅನ್ಕೊಂಡೆ ಇರಲಿಲ್ಲ ? ಅಪ್ಪ–ಅಮ್ಮ ಎಲ್ಲಾ ಹೇಗಿದ್ದಾರೆ ? ಪ್ರಶ್ನೆಗಳ ಮೇಲೆ ಪ್ರಶ್ನೆಗಳು ಯಾವುದಕ್ಕೂ ಉತ್ತರಿಸಲಿ ಎಂಬ ಧಾವಂತ, ಜೊತೆಗೆ ಈಕೆ ಯಾರು ಎಂಬ ಮರೆವು ? ಎಲ್ಲಾ ಆರಾಮಾಗಿದ್ದಿವಿ, ಅಂತ ಹೇಳಿ ಜಾರಿಕೊಳ್ಳೋ ಪ್ರಯತ್ನ ಮಾಡಿದ್ರು, ಈಕೆ ಯಾರು ಎಂಬ ಸುಳಿವು ನೆನಪಾಗ್ಲಿಲ್ಲ.
ಧ್ಯೆರ್ಯಮಾಡಿ ಕೇಳೇ ಬಿಡೋಣ, ಅನ್ನಿಸಿ, ಕ್ಷಮಿಸಿ, ನಿಮ್ಮನ್ನ ನೋಡಿದ ನೆನಪು ಆದ್ರೆ ಯಾರು ಅಂತ ಗೊತ್ತಾಗ್ತಿಲ್ಲ, ಅಂದೆ ? ಒಂದು ಕ್ಷಣ ಅವಳು ಮುಗುಳು ನಗು ತಡೆಹಿಡಿದು, ನೆನಪಿಸ್ಕೊಳ್ಳೀ, ನೀವು ನನ್ನನ್ನ ಮರೆತಿರೋಲ್ಲ, ಆದ್ರೆ ನೀವು ಮರೀತಿರಾ ಅಂತ ಗೊತ್ತಿರಲಿಲ್ಲ. ಅಂದಾಗ ಬಟ್ಟೆಗೆ ಚಪ್ಪಲಿಸುತ್ತಿ ಹೊಡೆದಂತಾದ ಅನುಭವ, ಹೌದು ನಾನು ಸಾಮಾನ್ಯವಾಗಿ ಯಾರನ್ನು ಅಷ್ಟು ಮರೆತಿರೋಲ್ಲ, ಈಗ್ಯಾಕೆ ಹೀಗೆ ? ಅನ್ನಿಸಿ, ಇಲ್ಲಾರಿ ಗೊತ್ತಾಗಲಿಲ್ಲ,
ನಿಮಗೆ ಹುಳಿಸಾರು ಮಾಡಿಕೊಟ್ಟ ನಾನು ನನ್ನಮ್ಮ ಮರೆತೋಯ್ತಾ ಅಂದ್ಲು, ಹುಳಿಸಾರು ನನಗಿಷ್ಟ ಅಂತ ಈಕೆಗೆ ಹೇಗೆ ಗೊತ್ತಾಯ್ತು, ನಾನ್ಯಾವಾಗ ಈಕೆಯ ಮನೆಗೆ ಹೋಗಿದ್ದೆ ? ಇವರಮ್ಮ ನನಗೇಕೆ ಹುಳಿಸಾರು ಮಾಡಿಕೊಡಬೇಕು ? ಪ್ರಶ್ನೆಗಳಿಗೆಲ್ಲ ನನ್ನ ಮರೆವೇ ಉತ್ತರವೆಂಬಂತೇ ಪೆಚ್ಚಾಗಿ ನೋಡುತ್ತಿದ್ದೆ. ಇನ್ನು ಈ ಮರೆವು ಸುಬ್ಬನಿಗೆ ನೆನಪಿಸೋದು ಸಾಧ್ಯವಿಲ್ಲ ಅನ್ನಿಸಿ, ಆಕೆ ಅನಂತಪುರಕ್ಕೆ ನೀವು ಬಂದಿದ್ದು ನೆನಪಿಲ್ವಾ ಅಂದ್ಳು ? ತಕ್ಷಣ ನನ್ನ ಮೆದುಳಿನಲ್ಲಿ ಬಲ್ಬ್ ಹತ್ತಿ ಉರಿದಂತೆ ಹಾ…….. ಬಂದಿದ್ದೇನೆ, ನನ್ನ ಗೆಳೆಯ ಶೇಖರ್ ಆಸ್ಪತ್ರೆಗೆ ಸೇರಿಸಿದಾಗ ಪಕ್ಕದ ಬೆಡ್ನಲ್ಲಿ ಮಲಗಿದ್ದ ಇವರಪ್ಪ ನೆನಪಾಯಿತು, ಹೋ ಸುನಂದ ತಾನೆ ನೀವು ಅಂದೆ! ಹು ಸದ್ಯ ನೆನಪಾಯಿತಲ್ಲಾ, ಅಂತ ಅವಳ ಮೂದಲಿಕೆ, ಹೇಗಿದ್ದೀರಾ,ನಿಮ್ಮ ಅಪ್ಪ–ಅಮ್ಮ ಹೇಗಿದ್ದಾರೆ ? ಅಪ್ಪನ ಆರೋಗ್ಯ ಸರಿ ಹೋಯ್ತಾ ? ಅಮ್ಮ ಈಗ ಎಲ್ಲಿ ? ಎಂಬ ಒಂದಷ್ಟು ಪ್ರಶ್ನೆಗಳು ನನ್ನಿಂದ. ಆಕೆಯನ್ನು ಮನೆಗೆ ಬರ ಹೇಳಿ ಅಮ್ಮನಿಗೆ ಆಕೆಯ ಪರಿಚಯ ಮಾಡಿಕೊಟ್ಟು ನನ್ನ ಹಳೆ ಪ್ರಶ್ನೆಗಳನ್ನೇ ಮತ್ತೊಮ್ಮೆ ಕೇಳಿದೆ. ಮತ್ತಷ್ಟು ಓದು 





