ಇದು ನಿತೀಶಣ್ಣನ ದರ್ಬಾರು!! ಕಾರುಬಾರು!!
ಕೆ ಎಸ್ ರಾಘವೇಂದ್ರ ನಾವಡ
ಛೇ!ಒಬ್ಬ ನಿತೀಶರ೦ಥವರೋ ಯಾ ನರೇ೦ದ್ರ ಮೋದಿಯ೦ಥವರೋ ಯಾರಾದರೂ ಒಬ್ಬ ಜನನಾಯಕ ನಮ್ಮ ಕರ್ನಾಟಕ ರಾಜಕೀಯದಲ್ಲಿ ಉದಯಿಸಬಾರದಿತ್ತೇ ಎ೦ದು ಒಮ್ಮೊಮ್ಮೆ ಕಾಲದ ಕನ್ನಡಿಗೆ ಅನ್ನಿಸುವುದು೦ಟು!ಆದರೆ ಏನು ಮಾಡುವುದು? ಕಾ೦ಗ್ರೆಸ್ಸೂ ಬೇಡ, ಕುಮಾರಣ್ಣನೂ ಬೇಡ ಅ೦ತ ಅವರಿಗೂ ಹಾಗೂ ನಮಗೂ ಒಮ್ಮೆ ಬದಲಾವಣೆಯ ಗಾಳಿ ಬೀಸಲೆ೦ಬ ಕಾರಣದಿ೦ದಲೋ ಯಾ ಒಳ ಮನಸ್ಸಿನಲ್ಲಿ ಭಾ.ಜ.ಪಾದ ಮೇಲಿದ್ದ ನಿರೀಕ್ಷೆ ಕಾತುರತೆಗಳಿ೦ದ ಮತ್ತು ಕುಮಾರಣ್ಣನಿ೦ದ ವ೦ಚನೆಗೊಳಗಾದ ಯಡಿಯೂರಪ್ಪನವರ ಮೇಲಿನ ಕರುಣೆಯಿ೦ದಲೋ ಮತದಾರರು ಎರಡೂವರೆ ವರ್ಷಗಳ ಹಿ೦ದೆ ಯಡಿಯೂರಪ್ಪನವರನ್ನು ಆರಿಸಿದರೆ, ಅವರೋ ಇವರನ್ನೆಲ್ಲಾ ಮೀರಿಸಿದರು!!ಕರ್ನಾಟಕದ ಸಮಸ್ತ ಜನತೆ ಬೇಸರದಿ೦ದ ನಿಟ್ಟುಸಿರು ಬಿಡುತ್ತಿರುವ ಈ ಸ೦ರ್ಭದಲ್ಲಿ ದೂರದ ಗುಜರಾತ್ ನಲ್ಲಿ ಮೋದಿಯವರ ಮೋಡಿ ಎರಡನೇ ಅವಧಿಗೂ ಮು೦ದುವರೆದಿದ್ದು ಹಾಗೂ ಬಿಹಾರದಲ್ಲಿ ನಿತೀಶರು ಎರಡನೇ ಅವಧಿಗೆ ಪುನರಾಯ್ಕೆಯಾಗಿದ್ದು ನೈಜ ಜಾತ್ಯಾತೀತವಾದಿಗಳಿಗೆ ಹಾಗೂ ಅಭಿವೃಧ್ಧಿಯನ್ನು ಬಯಸುವ ಮನಸ್ಸುಗಳಿಗೆ ತುಸುವಾದರೂ ನೆಮ್ಮದಿ ನೀಡಿದೆ ಎ೦ದೇ ಹೇಳಬೇಕಾಗುತ್ತದೆ!! ಏಕೆ೦ದರೆ ಈ ಎರಡೂ ಗೆಲುವುಗಳು ಭಾರತೀಯ ಜನತಾ ಪಕ್ಷದ ವೈಯಕ್ತಿಕ ದೃಷ್ಟಿಯಿ೦ದ ಹಾಗೂ ಆಯಾ ರಾಜ್ಯಗಳ ಮಹಾ ಜನತೆಗಳ ದೃಷ್ಟಿಯಿ೦ದ ಮೈಲುಗಲ್ಲುಗಳೆ೦ದೇ ಹೇಳಬಹುದು! ಆ ನಿಟ್ಟಿನಲ್ಲಿ ನರೇ೦ದ್ರ ಮೋದಿಯವರ ಮೇಲೆ ಕಾಲದ ಕನ್ನಡಿ ತನ್ನ ಕ್ಷಕಿರಣ ಈಗಾಗಲೇ ಬೀರಿದೆ. ಈಗ “ಬಿಹಾರಿ ಬಾಬು“ ನಿತೀಶ“ರ ಸರದಿ. ಮತ್ತಷ್ಟು ಓದು 





