ಸುದ್ದಿ ಮಾತಿನ ಭಟ್ಟರು ಸುದ್ದಿಯದಾಗ…
ಸಾತ್ವಿಕ್ ಎನ್ ವಿ
‘ಸರ್, ಆಗಸತ್ತರಕ್ಕೆ ನೀವು ಬೆಳೆಸಿದ ಪತ್ರಿಕೆ ಇ೦ದೆ ಸದ್ದಿಲ್ಲದೆ ಹೊರಬರಲು ಕಾರಣವೇನು ? ಹೊಸ ಚಿ೦ತನೆಗಳು, ಮೊನಚಾದ ಬರಹಗಳು, ಅ೦ಕಣಗಳು ಒ೦ದೇ ಎರಡೇ..ಲವಲವಕೆ ಯ೦ತಹ ಹೊಸ ರೂಪವನ್ನು ಪತ್ರಿಕೆಗೆ ಪರಿಚಯಿಸಿದಿರಿ, ರಾಜಕಾರಣಿ ಗಳ ಮಾನ ಹರಾಜು ಹಾಕಿ ಪತ್ರಿಕೊಧ್ಯಮದ ಘನತೆ ಹೆಚ್ಚಿಸಿದಿರಿ…..ನೀವಿಲ್ಲದ ಪತ್ರಿಕೆ ಇನ್ನುಮು೦ದೆ ನೀರಸ…ನಿಮ್ಮೂದಿಗೆ ನಾವಿದ್ದೇವೆ..’
ಇಂಥ ಒಂದು ಕಾಮೆಂಟ್ ವಿಶ್ವೇಶ್ವರ ಭಟ್ಟರ ಫೇಸ್ ಬುಕ್ ನಲ್ಲಿ ಇದೆ ಅಂದ್ರೆ ಅವರ ಬರಹಗಳನ್ನು ಆರಾಧಿಸುವ ಜನ ಎಷ್ಟಿರಬಹುದೆಂದು ಯೋಚಿಸಿ. ಪತ್ರಿಕೆಯ ಸಂಪಾದಕನಾದವನಿಗೆ ಇದಕ್ಕಿಂತ ಹೆಮ್ಮೆ ಬೇಕೆ? ಒಂದು ಕಾಲವಿತ್ತು. ಪತ್ರಿಕೆಯ ಸಂಪಾದಕರ ಹೆಸರುಗಳನ್ನು ಪತ್ರಿಕೆಯ ಕಡೆಯ ಸಾಲುಗಳಲ್ಲಿ ಹುಡುಕಬೇಕಾಗಿತ್ತು. ಈ ಸಂಸ್ಕೃತಿಯನ್ನು ತಪ್ಪಿಸಿ ದಿನವೂ ಬರೆಯುವ ಯಾರಾದರೂ ಸಂಪಾದಕರಿದ್ದರೆ ಅದು ವಿಶ್ವೇಶ್ವರ ಭಟ್ಟರು ಮಾತ್ರ ಎಂಬಂತಾಗಿತ್ತು.






