ವಿಷಯದ ವಿವರಗಳಿಗೆ ದಾಟಿರಿ

Archive for

13
ಡಿಸೆ

ರಾಷ್ಟ್ರಭಾಷೆಯಿಲ್ಲದ ರಾಷ್ಟ್ರದಲ್ಲಿ…

ರಾಕೇಶ್ ಶೆಟ್ಟಿ
 
ಅದು ೧೯೩೭ ರ ಸಮಯ ಇಡಿ ದೇಶ ಸ್ವಾತಂತ್ರ್ಯ ಹೋರಾಟದಲ್ಲಿ ಮುಳುಗಿತ್ತು.ಆದರೆ ಇತ್ತ ತಮಿಳು ನಾಡಿನಲ್ಲಿ ಬೇರೆಯದೇ ಹೋರಾಟ ಶುರುವಾಗಿತ್ತು! ಒಂದು ಕಡೆ ನೋಡಿದರೆ ವಿದೇಶಿಗಳ ವಿರುದ್ಧ ಹೋರಾಟ ಇನ್ನೊಂದು ಕಡೆ ಇದೆ ದೇಶದ ಮತ್ತೊಂದು ಭಾಷೆಯ ಹೇರಿಕೆಯ ಮೇಲೆ ಹೋರಾಟ! ಅದು ‘ಹಿಂದಿ ಹೇರಿಕೆಯ ವಿರುದ್ಧ’!
ಮೇಲ್ನೋಟಕ್ಕೆ ಸ್ವಾತಂತ್ರ್ಯ ಹೋರಾಟದಂತಹ ಸಮಯದಲ್ಲಿ ದಂಗೆಯೆದ್ದ ತಮಿಳರ ಮೇಲೆ ಕೋಪ ಉಕ್ಕಿ ಬರುವುದು ಸಹಜವೇ.ಆದರೆ ಅವರೇನು ಸುಮ್ ಸುಮ್ನೆ ಬಾಯಿ ಬಡ್ಕೊತಿದ್ರಾ? ಅವರು ಹಾಗೆ ತಿರುಗಿ ಬೀಳುವಂತೆ ಮಾಡಿದ್ದಾದರು ಏನು? ಮಾಡಿದ್ದಾದರೂ ಯಾರು? ಅವ್ರ ಹೆಸರು ಸಿ.ರಾಜಗೋಪಾಲಚಾರಿ.

ಮದ್ರಾಸ್ ಪ್ರೆಸಿಡೆನ್ಸಿಯಲ್ಲಿ ೧೯೩೭ರಲ್ಲಿ ನಡೆದ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ ನ್ಯಾಷನಲ್ ಕಾಂಗ್ರೆಸ್ಸಿನ ರಾಜಗೋಪಾಲಚಾರಿಯವರು, ಶಿಕ್ಷಣದಲ್ಲಿ ‘ಹಿಂದಿ’ ಕಲಿಕೆಯನ್ನ ಕಡ್ಡಾಯ ಮಾಡಿಬಿಟ್ಟರು.ಅಷ್ಟು ಸಾಕಾಯ್ತು ಪೆರಿಯಾರ್ ನೇತೃತ್ವದಲ್ಲಿ ಶುರುವಾದ ಹೋರಾಟ ಮೂರು ವರ್ಷಗಳಷ್ಟು ಕಾಲ ನಡೆದು ಕಡೆಗೆ ೧೯೪೦ರಲ್ಲಿ ಬ್ರಿಟಿಷರು ಆ ನಿರ್ಧಾರವನ್ನ ವಾಪಸ್ ಪಡೆದ ಮೇಲಷ್ಟೇ ತಮಿಳುನಾಡು ಶಾಂತವಾಗಿದ್ದು.ಹಿಂದಿಯನ್ನ ರಾಷ್ಟ್ರ ಭಾಷೆ ಮಾಡುವ ನಾಯಕರ ಆಸೆಗೆ ಈ ಹೋರಾಟ ಭಂಗ ತರುವಲ್ಲಿ ತಮಿಳರ ಹೋರಾಟ ಯಶಸ್ವಿಯಾಗಿತ್ತು. ಮತ್ತಷ್ಟು ಓದು »