ತುಕ್ರ ಬೆಂಗಳೂರಿಗೆ ಹೋದದ್ದು..
ಕಿಟಕಿಯ ಕಡೆಯಿಂದ ಬೀಸುವ ಚಳಿಗಾಳಿಗೆ ಕಬ್ಬಿಣವೂ ಮಂಜುಗಡ್ಡೆಯಾಗಿತ್ತು. `ಏನು ಚಳಿ ದೇವ್ರೆ’ ಅಂತ ಗೊಣಗುತ್ತ ತಣ್ಣಗಿನ ರೈಲಿನ ಕಬ್ಬಿಣದ ಸೀಟ್ ಮೇಲೆ ಮಲಗಲಾರದೇ ತುಕ್ರ ಎದ್ದು ಕುಳಿತುಕೊಂಡ. ಕಿಸೆಯಿಂದ ಬೆಲ್ಟ್ ತುಂಡಾಗಿರುವ ಟೈಟಾನ್ ಕಂಪನಿಯ ವಾಚ್ ತೆರೆದು ಗಂಟೆ ನೋಡಿಕೊಂಡ. ಇನ್ನೂ ಆರೂವರೆಯಷ್ಟೇ. ಏಳುವರೆಗೆ ಮೆಜೆಸ್ಟಿಕ್ಗೆ ತಲುಪುವುದಾಗಿ ಆತನಿಗೆ ಗೊತ್ತಿತ್ತು. ಈ ಚಳಿಯಲ್ಲಿ ಜನ ಹೇಗೆ ಬದುಕುತ್ತಾರಪ್ಪ ಅಂದುಕೊಳ್ಳುತ್ತ ರೈಲಿನ ಬಾಗಿಲ ಬಳಿ ಕುಳಿತುಕೊಂಡು ಒಂದು ಬೀಡಿಗೆ ಬೆಂಕಿ ಹಚ್ಚಿದ. ಒಳಗೆ ಹೊಗೆ ಪ್ರವೇಶಿಸಿದಾಗ ಮೈ ಒಂದಿಷ್ಟು ಬಿಸಿಯಾಗಿ ಹಾಯೆನಿಸಿತ್ತು. `ಸಾಬ್ ಬೀಡಿ’ ಅಂತ ಮುದುಕನೊಬ್ಬ ಇವನ ಪಕ್ಕ ಕುಳಿತುಕೊಂಡಾಗ ಅವನಿಗೂ ಒಂದು ತೆಗೆದುಕೊಟ್ಟ. ಆತ ಸಹ ಬಾಗಿಲ ಪಕ್ಕದಲ್ಲಿ ಇವನಿಗೆ ಒರಗಿ ಕುಳಿತ. ಸ್ವಲ್ಪ ಸಮಯವಾದಗ ಒಂದಿಷ್ಟು ತೂಕಡಿಕೆ ಬಂದಂತಾಗಿ ಅಲ್ಲಿಂದ ಎದ್ದು ಬಂದ ತುಕ್ರ ಸೀಟ್ನಲ್ಲಿ ಕುಳಿತುಕೊಂಡ.
****
ದಿನಾ ಕುಡಿದು ಬರುವುದನ್ನು ತುಕ್ರಾನ ಹೆಂಡತಿ ಕಮಲ ಆಕ್ಷೇಪಿಸುತ್ತಿದ್ದಳು. ಇದೇ ಕಾರಣಕ್ಕೆ ದಿನನಿತ್ಯ ಸಣ್ಣಪುಟ್ಟ ಜಗಳವೂ ಆಗುತ್ತಿತ್ತು. ನಿನ್ನೆ ರಾತ್ರಿ ಹೆಂಡತಿ ಏನೋ ಹೇಳಿದ್ದು ಇವನ ಪಿತ್ತವನ್ನು ನೆತ್ತಿಗೇರಿಸಿತ್ತು. ನೀನು ಒಬ್ಬಳೇ ಇಲ್ಲಿರು. ನಾನು ಮಗನಲ್ಲಿಗೆ ಹೋಗ್ತಿನಿ ಅಂದಾಗ ಕಮಲ ಮೊದಲು ಕುಡಿದ ಅಮಲಿಗೆ ಹೇಳುತ್ತಿದ್ದಾನೆ ಅಂದುಕೊಂಡಳು. ಕ್ವಿಂಟಾಲ್ ಅಕ್ಕಿ ತರಲೆಂದು ಕಪಾಟ್ನಲ್ಲಿಟ್ಟಿದ್ದ ಒಂದು ಸಾವಿರ ರೂಪಾಯಿಯನ್ನು ಕಿಸೆಗೆ ಹಾಕಿಕೊಂಡು ಅಂಗಿ ಹಾಕಿದಾಗ ಕಮಲ ಕಳವಳಗೊಂಡು ಕ್ಷಮೆ ಕೇಳಿದರೂ ತುಕ್ರ ಹಠ ಬಿಡಲಿಲ್ಲ. ಯಾಕೋ ಎಂದು ನೋಡಿರದ ಬೆಂಗಳೂರು ಕುಡಿದ ಅಮಲಿನಲ್ಲಿ ತುಕ್ರನಿಗೆ ಸುಂದರವಾಗಿ ಕಾಣಿಸಿತ್ತು. ಮತ್ತೆ ಒಂದಿಷ್ಟು ಜಗಳ ಮಾಡಿ ಸೀದಾ ಪುತ್ತೂರು ರೈಲ್ವೆ ಸ್ಟೇಷನ್ಗೆ ಬಂದಿದ್ದ. ಸ್ಟೇಷನ್ವರೆಗೆ ಹೂವಿನ ಅಂಗಡಿಯ ಗಡಂಗ್ ಗೆಳೆಯ ನಾರಾಯಣನನ್ನು ಕರೆದುಕೊಂಡು ಹೋಗಿದ್ದ.
**** ಮತ್ತಷ್ಟು ಓದು 





