ಓಶೋ ಕಂಡಂತೆ ಗಾಂಧಿ!
ಓಶೋ ರಜನೀಶ್ ಜಗತ್ತು ಕಂಡ ಅತ್ಯಂತ ವಿವಾದಾಸ್ಪದ ವ್ಯಕ್ತಿ. ಮಧ್ಯಪ್ರದೇಶದ ಜೈನ ಕುಟುಂಬವೊಂದರಲ್ಲಿ ಹುಟ್ಟಿದ ರಜನೀಶ್ ಬಾಲ್ಯದಿಂದಲೇ ಸ್ವತಂತ್ರ ಚಿಂತನೆಯೆಡೆಗೆ ಒಲವು ಹೊಂದಿದ್ದ. ತನ್ನ ಇಪ್ಪತ್ಮೂರನೆಯ ವಯಸ್ಸಿನಲ್ಲಿ ತನಗೆ ಜ್ಞಾನೋದಯವಾಯಿತು ಎಂದು ಹೇಳಿಕೊಳ್ಳುವ ಈತ ಜಗತ್ತಿನ ಎಲ್ಲಾ ಧರ್ಮಗಳ ಬಗ್ಗೆ ಅತ್ಯಂತ ವಸ್ತುನಿಷ್ಠವಾದ, ಹಿಂದೆ ಯಾರೂ ಹೇಳಿರದಿದ್ದ ಸಂಗತಿಗಳನ್ನು ಹೇಳಿದ. ನಂಬಿಕೆಗಳನ್ನು ಬಿತ್ತುವ, ಆ ಮೂಲಕ ಸ್ವತಂತ್ರ ಚಿಂತನೆಯನ್ನು ನಾಶ ಮಾಡುವ ಎಲ್ಲಾ ವ್ಯವಸ್ಥೆಗಳನ್ನೂ ಖಂಡಿಸಿದ. ಮನುಷ್ಯ ತತ್ಕ್ಷಣಕ್ಕೆ ಮಾತ್ರ ಸ್ಪಂದಿಸಬೇಕು. ಯಾವ ಪೂರ್ವಾಗ್ರಹವಿಲ್ಲದೆ, ಭವಿಷ್ಯತ್ತಿನ ಬಗ್ಗೆ ಯೋಜನೆಯಿಲ್ಲದೆ ಈ ಕ್ಷಣದಲ್ಲಿ ಬದುಕಬೇಕು ಎಂದು ಹೇಳಿದ. ಜಗತ್ತಿನ ಯಾವ ವ್ಯಕ್ತಿಯನ್ನೂ, ನಂಬಿಕೆಗಳನ್ನೂ ಬಿಡದೆ ಜಾಲಾಡಿದವ ಈತ. ೧೯೯೦ರಂದು ಹೃದಯಾಘಾತದಿಂದ ನಿಧನನಾದ.
ಇಡೀ ಜಗತ್ತೇ ಮಹಾತ್ಮಾ ಗಾಂಧಿಯನ್ನು ಅಹಿಂಸಾ ಮಾರ್ಗದ ಅನ್ವೇಷಕ ಎಂದು ಕೊಂಡಾಡಿದರೆ ಈತ ಗಾಂಧಿಯನ್ನು ಕುಟಿಲ ರಾಜಕಾರಣಿ ಎಂದು ಕರೆದ. ಗಾಂಧೀಜಿ ಪ್ರತಿಪಾದಿಸಿದ ಅಹಿಂಸೆ, ಸತ್ಯಾಗ್ರಹವೆಲ್ಲವೂ ಕೇವಲ ರಾಜಕೀಯ ತಂತ್ರಗಳು ಎಂದು ವಾದಿಸಿದ. ಗಾಂಧೀಜಿಯ ಸರಳತೆ ಢೋಂಗಿಯದು ಎಂದು ಜರೆದ. ಅವರ ಆಧ್ಯಾತ್ಮ, ಶಿಸ್ತು, ಬ್ರಹ್ಮಚರ್ಯ, ದೇವರ ಕಲ್ಪನೆ ಎಲ್ಲವನ್ನೂ ಲೇವಡಿ ಮಾಡಿದ.
ನಿಜವಾದ ಚಿನ್ನವನ್ನು ಯಾವ ಒರಗೆ ಹಚ್ಚಿದರೂ ತನ್ನ ಹೊಳಪನ್ನು ಹೆಚ್ಚಿಸಿಕೊಳ್ಳುತ್ತದೆಯೇ ಹೊರತು ಕಳೆಗುಂದುವುದಿಲ್ಲ. ಹೀಗಾಗಿ ಓಶೋ ರಜನೀಶ್ ಗಾಂಧಿಯ ಬಗ್ಗೆ ಮಾತಾಡಿರುವ ಬಗ್ಗೆ ಸ್ವಲ್ಪ ತಿಳಿಯೋಣ. ಇದರಲ್ಲಿ ನಮಗೆ ಗಾಂಧೀಜಿಯ ವ್ಯಕ್ತಿತ್ವದ ಬಗ್ಗೆ, ಘನತೆಯ ಬಗ್ಗೆ ಹೊಸತೊಂದು ಆಯಾಮ ಸಿಕ್ಕಬಹುದು. ಯಾರನ್ನೂ ಕಣ್ಣು ಮುಚ್ಚಿ ಒಪ್ಪಬಾರದು ಎಂಬ ಎಚ್ಚರಿಕೆಯಿದ್ದರೆ ನಮ್ಮ ಪ್ರಯತ್ನ ಹೆಚ್ಚು ಪ್ರಯೋಜನಕಾರಿಯಾಗಬಲ್ಲದು.
***
… ನನ್ನ ಪ್ರಕಾರ ಮಹಾತ್ಮ ಗಾಂಧಿ ಒಬ್ಬ ಕಪಟ ರಾಜಕಾರಣಿ. ಅಹಿಂಸೆಯನ್ನು ಅಳವಡಿಸಿಕೊಳ್ಳುವ ಮೂಲಕ ಆತ ಎಷ್ಟೋ ಸಂಗತಿಗಳನ್ನು ತನಗೆ ಹಿತವಾಗುವಂತೆ ನಿರ್ವಹಿಸಿದ. ಎಲ್ಲಾ ಜೈನರು ಆತನ ಅನುಯಾಯಿಗಳಾದರು. ತಾವು ನಂಬಿದ ಅಂಹಿಸೆಯ ತತ್ವವನ್ನು ಬೆಂಬಲಿಸುವ ಒಬ್ಬ ವ್ಯಕ್ತಿಯನ್ನು ಅವರು ಆತನಲ್ಲಿ ಕಂಡಿದ್ದರು. ಗಾಂಧಿ ಜೈನನಾಗಿರಲಿಲ್ಲ. ಆತ ಕೇವಲ ಶೇ ೯ರಷ್ಟು ಜೈನನಾಗಿದ್ದ. ನಾನು ಗಾಂಧಿಯನ್ನು ಹೀಗೆ ವರ್ಣಿಸಲು ಇಚ್ಚಿಸುತ್ತೇನೆ: ಆತ ಹುಟ್ಟಿನಿಂದ ಹಿಂದು ಆದರೆ ಆತ ಕೇವಲ ಶೇ ೧ರಷ್ಟು ಹಿಂದು. ಆತ ಹುಟ್ಟಿದ್ದು ಜೈನರು ಹೆಚ್ಚು ಸಂಖ್ಯೆಯಲ್ಲಿದ್ದ ಗುಜರಾತಿನಲ್ಲಿ ಹೀಗಾಗಿ ಆತ ಶೇ ೯ರಷ್ಟು ಜೈನ. ಉಳಿದ ಶೇ ೯೦ರಷ್ಟು ಆತ ಕ್ರಿಶ್ಚಿಯನ್ ಆಗಿದ್ದ. ಮೂರು ಬಾರಿ ಆತ ಕ್ರೈಸ್ತನಾಗಿ ಮತಾಂತರವಾಗುವ ಹಂತದಲ್ಲಿದ್ದ. ಮತ್ತಷ್ಟು ಓದು 





