ನಮ್ಮ ರಾಷ್ಟ್ರಧ್ವಜ ಅಲ್ಲಿ ಹಾರಬಾರದಾ?
ರಾಕೇಶ್ ಶೆಟ್ಟಿ
ವಿಶ್ವಸಂಸ್ಥೆಯಲ್ಲಿ ಭಾರತೀಯ ರಾಯಭಾರಿ ಭಾಷಣ ಶುರು ಮಾಡುತ್ತಾ,
“ನಾನು ಕಾಶ್ಮೀರ ಸಮಸ್ಯೆಯ ಬಗ್ಗೆ ಮಾತನಾಡುವುದಕ್ಕಿಂತ ಮೊದಲು ‘ಋಷಿ ಕಶ್ಯಪ’ರ ಬಗ್ಗೆ ಹೇಳಲಿಚ್ಛಿಸುತ್ತೇನೆ. ಅವರಿಂದಾಗಿಯೇ ಕಣಿವೆಗೆ ‘ಕಾಶ್ಮೀರ’ ಎಂಬ ಹೆಸರು ಬಂತು. ಒಮ್ಮೆ ಅವರು ಹೀಗೆ ಕಾಶ್ಮೀರ ಕಣಿವೆಯಲ್ಲಿ ಸಾಗುವಾಗ ‘ಕಲ್ಲು ಬಂಡೆ’ಗಳ ನಡುವೆ ಹರಿಯುತಿದ್ದ ಜಲಧಾರೆಯನ್ನು ನೋಡಿ, ಸ್ನಾನ ಮಾಡುವ ಮನಸ್ಸಾಯಿತು. ಬಟ್ಟೆಯನ್ನು ಕಳಚಿ ಬಂಡೆಗಳ ಮೇಲಿಟ್ಟು ‘ಕಶ್ಯಪ’ರು ಸ್ನಾನ ಮುಗಿಸಿ ನೋಡಿದರೆ, ಅವರು ಬಂಡೆಯ ಮೇಲಿಟ್ಟಿದ್ದ ‘ಬಟ್ಟೆ’ಯನ್ನು ‘ಪಾಕಿಸ್ತಾನಿ’ಯೊಬ್ಬ ಕದ್ದೊಯ್ದಿದ್ದ!”
ಅವರು ಇಷ್ಟು ಹೇಳಿ ಮುಗಿಸುವಷ್ಟರಲ್ಲಿ ‘ಪಾಕಿಸ್ತಾನಿ ರಾಯಭಾರಿ’ ಕುಳಿತಲ್ಲಿಂದ ಚಂಗನೆ ಜಿಗಿದೆದ್ದು,
“ನೀವ್ ಏನ್ ಮಾತಾಡ್ತಾ ಇದ್ದೀರಾ? ಆ ಕಾಲದಲ್ಲಿ ‘ಪಾಕಿಸ್ತಾನಿ’ಗಳು ‘ಕಾಶ್ಮೀರ’ದಲ್ಲಿ ಇರಲೇ ಇಲ್ಲ!! ”
ನಸು ನಕ್ಕ ಭಾರತೀಯ ರಾಯಭಾರಿ, “ಕಾಶ್ಮೀರ ಯಾರಿಗೆ ಸೇರಿದ್ದು ಅನ್ನೋ ವಿಷಯವನ್ನ ಸ್ಪಷ್ಟಪಡಿಸಿರುವುದರಿಂದ ನಾನು ನನ್ನ ಮಾತನ್ನು ಮುಂದುವರೆಸುತ್ತೇನೆ” 🙂
(‘ಕಾಶ್ಮೀರ’ಕ್ಕೆ ಸಂಬಂಧಿಸಿದಂತೆ ‘ವಿಶ್ವ ಸಂಸ್ಥೆ’ಯಲ್ಲಿ ನಡೆದ ಘಟನೆಯಿದು ಅನ್ನೋ ಮಿಂಚೆಯಲ್ಲಿ ಬಂದ ಜೋಕ್ ಇದು)
Jokes Apart…





