ವಿಷಯದ ವಿವರಗಳಿಗೆ ದಾಟಿರಿ

Archive for

1
ಫೆಬ್ರ

ಪೇಜಾವರ ಶ್ರೀಗಳಿಗೆ ದಲಿತರ ಮನೆ(ನ) ಇನ್ನೂ ಹತ್ತಿರವಿಲ್ಲವೇ?

ಸಾತ್ವಿಕ್ ಎನ್.ವಿ

ಉಡುಪಿಯಲ್ಲೊಂದು ಪ್ರಸಿದ್ಧ ಕಾಲೇಜು. ಪ್ರತಿವರ್ಷವೂ ಹೊಸದಾಗಿ ಬರುವ ವಿದ್ಯಾರ್ಥಿಗಳ ಜೊತೆ ಆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಸ್ವಾಮೀಜಿಯವರೊಂದಿಗೆ ಸಂವಾದ ಕಾರ್ಯಕ್ರಮ. ಒಂದು ವರ್ಷವೂ ತಪ್ಪದೇ ಯತಿಗಳಿಗೆ ವಿದ್ಯಾರ್ಥಿಗಳು ಕೇಳುವ ಪ್ರಶ್ನೆ ‘ಸ್ವಾಮೀಜಿ ಕೃಷ್ಣಮಠದಲ್ಲಿ ಸಹಪಂಕ್ತಿ ಭೋಜನ ಯಾಕಿಲ್ಲ’ ಅಂತ. ‘ಅದು ನಮ್ಮ ಮಠದ ಸಂಪ್ರದಾಯ ಕ್ರಮ. ಅಲ್ಲದೇ ಯಾವುದೇ ಬ್ರಾಹ್ಮಣರು ‘ಅನ್ಯ’ರೊಂದಿಗಿನ ಸಹಪಂಕ್ತಿ ಭೋಜನ ಅಷ್ಟಾಗಿ ಇಷ್ಟಪಡುವುದಿಲ್ಲ’ ಎಂಬ ರೆಡಿಮೇಡ್ ಉತ್ತರ ಸ್ವಾಮೀಜಿಗಳಿಂದ. ಮರುಪ್ರಶ್ನೆ ಕೇಳಲು ಹೊರಟ ವಿದ್ಯಾರ್ಥಿಗೆ ಪಕ್ಕದಲ್ಲಿರುವ ಮೇಷ್ಟ್ರುಗಳ ಬಿರುಸುನೋಟ ರೆಡ್ ಸಿಗ್ನಲ್ ಆಗಿರುತ್ತದೆ. ಅಲ್ಲಿಗೆ ಸಂವಾದ ಕಾರ್ಯಕ್ರಮ ಮುಗಿಯುತ್ತದೆ.
ಈ ಪ್ರಸಂಗ ನೆನಪಾದದ್ದು ಪೇಜಾವರ ಶ್ರೀಗಳ ದಲಿತ ಕಾಲೋನಿಗಳ ಭೇಟಿಯನ್ನು ಪತ್ರಿಕೆಯಲ್ಲಿ ನೋಡಿದ ಸಂದರ್ಭದಲ್ಲಿ. ಸ್ವಾಮೀಜಿಯವರು ಅಲ್ಲಿನ ದಲಿತರಿಗೆ ವೈಷ್ಣವ ದೀಕ್ಷೆಯನ್ನು ನೀಡುವ ಮೂಲಕ ಜನರನ್ನು ಉತ್ತಮ ವ್ಯಕ್ತಿಗಳಾಗಿ ಪರಿವರ್ತಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಆದರೆ ಈ ಪ್ರಕ್ರಿಯೆ ನಮ್ಮಲ್ಲಿ ಸಾಮಾನ್ಯವಾದ ಕೆಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಅವು- ಈವರಗೆ ದಲಿತರು ಉತ್ತಮ ವ್ಯಕ್ತಿಗಳಾಗಿರಲಿಲ್ಲವೇ? ಸಹಪಂಕ್ತಿ ಭೋಜನಕ್ಕೆ ಒಪ್ಪದ ಮನಸ್ಸುಗಳು ಮುಂದೆ  ದಲಿತರನ್ನು ಅಥವಾ ಇತರೆ ವೈಷ್ಣವ ದೀಕ್ಷೆ ಪಡೆದ ವ್ಯಕ್ತಿಗಳನ್ನು ತಮ್ಮವರೆಂದು ಒಪ್ಪಿಕೊಳ್ಳುತ್ತಾರೆಯೇ?

ಮತ್ತಷ್ಟು ಓದು »

1
ಫೆಬ್ರ

ಹೀಗೆಲ್ಲಾ ಉಂಟು!

ವಾಣಿ ಶೆಟ್ಟಿ, ಬೆಂಗಳೂರು

ಬೃಹತ್ ಬೆಂಗಳೂರಿನ ಕೆಲವು ಅನುಭವಗಳನ್ನು ನಾನೀಗ ಹೇಳ ಹೊರಟಿರುವೆ .ನೆನಪಾದರೆ ನಗು, ಅಳು ಎರಡೂ ಬರುವ ಘಟನೆಗಳವು. ಅದೊಂದು ಶನಿವಾರ ರಜೆಯಿದ್ದ ಕಾರಣ ಸ್ನೇಹಿತೆಯ ರೂಮಿಗೆ ಹೊರಟಿದ್ದೆ. ನಾನಿದ್ದ BTM ನಿಂದ ಅಷ್ಟು ದೂರದ ಕೋರಮಂಗಲಕ್ಕೆ ಆಟೋದಲ್ಲೇ ಹೊರಟಿದ್ದೆ. .(ನನ್ನಂತಹ ಇನ್ನೊಂದು ೪ ಜನರಿದ್ದರೆ ಆಟೋದವರ ಹೊಟ್ಟೆಪಾಡು ಬಹು ಸುಲಭ !)ಕೋರಮಂಗಲ (ಮೊನ್ನೆ ಮೊನ್ನೆ ಗೊತ್ತಾಗಿದ್ದು ಹೆಸರು )ದಲ್ಲೊಂದು ಸಿಗ್ನಲ್ ಬಿತ್ತು.ಇಳಿಯಲಿರುವ ಸ್ಟಾಪ್ ಮುಂದಿತ್ತು.ನಾನು ವಾಹನದಲ್ಲಿ ಕೂತ ಪಯಣಿಗರ ಯೋಗಕ್ಷೇಮ ವಿಚಾರಿಸಲು ಬರುತ್ತಿದ್ದ ಭಿಕ್ಷುಕರು ,ಮಾರಾಟಗಾರರನ್ನು ನೋಡುತ್ತಿದ್ದೆ .ಆಗ ನನ್ನ ದೃಷ್ಟಿ ಬಿತ್ತು ನೋಡಿ, ಸಿಗ್ನಲ್ ಕೆಳಗೆ ನಿಂತ ಬೈಕ್ ಸವಾರನ ಜೊತೆ ಜಗಳ ಆಡುತ್ತಿದ್ದ ಒಬ್ಬ ಹಿಜಡಾ ಮೇಲೆ. ನಮ್ಮ ಉಡುಪಿ ,ಕುಂದಾಪುರದ ಕಡೆ ಇವರು ಬೆರಳೆಣಿಕೆಯಷ್ಟು ಇರಬಹುದು ..ಆದ್ರೆ ನಾನಂತೂ ನೋಡಿದ್ದೇ ಇಲ್ಲ, t .v ಲೆಲ್ಲಾ ನೋಡಿದ್ದಾಗ ಭಯಮಿಶ್ರಿತ ಕುತೂಹಲ ಇದ್ದೆ ಇತ್ತು .ನಾ ಕಣ್ಣು ಬಾಯಿ ಬಿಟ್ಟುಕೊಂಡು ಅವಳನ್ನೇ ನೋಡುತ್ತಿದ್ದುದು ಅವಳಿಗೆ ಅದು ಹ್ಯಾಗೆ ಗೊತ್ತಾಯ್ತೋ, ಸ್ಮೈಲ್ ಕೊಡುತ್ತಲೇ ಬಂದುಬಿಟ್ಟಳಲ್ಲ ನಮ್ಮ ಆಟೋದ ಕಡೆ !ನನ್ನ ಫ್ರೆಂಡ್ ಹೇಳಿದ್ದು ನೆನಪಾಯ್ತು ,ಅವರು ಹುಡುಗೀರ ಹತ್ತಿರ ಏನೂ ಕೇಳಲ್ಲ ಅಂತ. !ಸುಳ್ಳೇ ಸುಳ್ಳು ಕ್ಯಾರೆ ಅನ್ನದೆ ಆಟೋ ಹತ್ತಿ ನನ್ನ ಪಕ್ಕ ಕುಳಿತು ಕೈ ಚಾಚಿದಳು.. ಅಬ್ಬಾಎಂದೂ ನಂಬದ ದೇವರು ಕೂಡ ನೆನಪಿಗೆ ಬಂದುಬಿಟ್ಟ ! ಆಟೋದವರಿಗೆ ಕೊಡಲು ಕೈಯಲ್ಲೇ ಇದ್ದ ನೂರರ ನೋಟನ್ನೇ ನಡುಗುವ ಕೈಯಿಂದ ಕೊಟ್ಟುಬಿಟ್ಟೆ.ಅವಳು ಅದನ್ನು ತೆಗೆದುಕೊಂಡು ತನ್ನಲ್ಲಿದ್ದ ಐವತ್ತರ ನೋಟನ್ನು ಅದು ಹೇಗೋ ತಲೆಗೆ ಸುತ್ತು ಹಾಕಿ (ನಾ ನೋಡಲಿಲ್ಲ) ಕೊಟ್ಟು ಬಿಟ್ಟಳಪ್ಪ.ನಾ ತೊದಲುತ್ತ ಬೇಡ ಬೇಡ ಅಂದಿರಬೇಕುಸ್ವರ ಹೊರಗೆ ಬಂದಿದ್ದು ಅನುಮಾನ !ಅವಳು ಬೇಡ ಅನ್ನೋಲ್ಲ, ಒಳ್ಳೆದಾಗುತ್ತೆ ಅಂತ ನನ್ನ ತಲೆ ಮುಟ್ಟಿ ಕೆಳಗಿಳಿದು ಹೋಗಿಬಿಟ್ಟಳು .ಅಲ್ಲಿ ತನಕ ನಾ ಉಸಿರಾಡಿದ್ದರೆ ಕೇಳಿ !……..ಆಗ ಬಾಯಿ ತೆರೆದ ಆಟೋದವನು, “ಮ್ಯಾಡಂ ಅವರನ್ನು ಹಾಗೆಲ್ಲ ನೋಡಬಾರದು ಅಂತ..ನಮಸ್ಕಾರ !ಮೊದಲೇ ಹೇಳಿದ್ದರೆ ಏನಾಗ್ತಿತ್ತೋ !?! ..ಈಗ ಹೋಗೋವಾಗ ಎಲ್ಲಾದರೂ ಅವರನ್ನು ನೋಡಿದರೆ ಕೈಯ್ಯಲ್ಲಿದ್ದ ಮೊಬೈಲ್ ಸ್ವಿಚ್ ಆಫ್ ಆಗಿದ್ದರೂ ಕೂಡ ಅಲ್ಲಾಡದೆ ಅದನ್ನೇ ನೋಡುತ್ತಿರುತ್ತೇನೆ!
ಹ್ಮ್.. ಇದೊಂದು ಮಾಯಾನಗರೀನೆ ಹೌದು ಕಣ್ರೀ. ಇದು ಕೊಟ್ಟ ಪಾಡು , ನಾ ಪಟ್ಟ ಬವಣೆ ಎಷ್ಟೆಲ್ಲಾ ಅಂತ ಗೊತ್ತಾ..ಬರೆಯ ಹೋದರೆ ಕಾದಂಬರಿನೇ ಆದೀತು !3  ಸ್ಟಾಪ್ ಹಿಂದೆ ಹೋದರೆ ಸಿಗೋ ಸಿಲ್ಕ್ ಬೋರ್ಡ್ ಗೆ ಹೋಗಲು ಗೊತ್ತಿಲ್ಲದೇ btm ನಿಂದ ಮೆಜೆಸ್ಟಿಕ್ ಹೋಗಿ ಅಲ್ಲಿಂದ ಸಿಲ್ಕ್ ಬೋರ್ಡ್ಗೆ ಹೋದ ಪರಮ ಬುದ್ದಿವಂತೆ ನಾನು !.ಒಬ್ಬ ಆಸಾಮಿನ ಕೇಳಿದ್ದೆ,ಸಿಲ್ಕ್ ಬೋರ್ಡ್ಗೆ ಹೋಗಬೇಕಾದ್ರೆ ಹ್ಯಾಗ್ ಹೋಗ್ಬೇಕು ಅಂತ ! ಪಾಪ ,ಗೊತ್ತಿಲ್ಲ ಅನ್ನೋಕೆ ನಾಚಿಕೆ ಆಗಿರಬೇಕು !ನೆಕ್ಸ್ಟ್ ಸ್ಟಾಪ್ಗೆ ಹೋಗಿ ಯಾರ್ನಾದ್ರೂ ಕೇಳಿ ಅಂದ .ಅದಕ್ಕೆ ಅಲ್ಲಿ ತನಕ ಯಾಕೆ ಹೋಗ್ಬೇಕು ??ಮೆಜೆಸ್ಟಿಕ್ ನಲ್ಲಿ ಎಲ್ಲ ಬಸ್ಸು ಸಿಗತ್ತೆ ಅಂತ ಅಲ್ಲಿಗೆ ಹೋಗೋಕೆ ಬಸ್ ಸ್ಸ್ಟ್ಯಾಂಡ್ ನಲ್ಲಿ ನಿಂತರೆ ಬರೋ ಬಸ್ಸುಗಳ ಮೇಲಿದ್ದ ಹೆಸರು ಕೆಂ..ನಿ (!!?!!)ಆಮೇಲೆ ಬಂದ ಬಸ್ಸುಗಳ ಮೇಲೆ ಬರೆದಿತ್ತು ಕೆಂಪೇಗೌಡ ಬಸ್ ನಿಲ್ದಾಣ ಅಂತ !ಓಹೋ ಗೊತ್ತಾಯ್ತು ಗೊತ್ತಾಯ್ತು !ಅಲ್ಲಾ.ನಮ್ಮ ಕಡೆ ಕಂಡಕ್ಟರುಗಳು ಕಿರುಚುತ್ತಾರಪ್ಪ ಪ್ರಸ್ತುತ ನಿಲ್ದಾಣ ಮತ್ತೆ ಹೋಗಲಿರೋ ನಿಲ್ದಾಣದ ಹೆಸರನ್ನು ..ಇವರೆಲ್ಲ ಯಾಕೆ ಹಿಂಗೆ ?!ಛೆ ಸರಿಯಿಲ್ಲಪ್ಪ ಬೆಂಗಳೂರು !ಆಮೇಲೆ ಫ್ರೆಂಡ್ ಮೂಲಕ ಮೆಜೆಸ್ಟಿಕ್ ಮತ್ತೆ ಕೆಂ..ನಿ ಎರಡೂ ಒಂದೇ ಅಂತ ಗೊತ್ತಾದಾಗ ನಗು ಬಂತು ..ಸಂಜೆ ಸಿಲ್ಕ್ ಬೋರ್ಡ್ ಅನ್ನೋದು ನಾನಿದ್ದ ಸ್ಟಾಪಿನ ೩ ಸ್ಟಾಪ್ ಹಿಂದೇನೆ ಅಂತ ಗೊತ್ತಾದಾಗ ನಗು ,ಅಳು ಎರಡೂ ಬಂತು ! ಮತ್ತಷ್ಟು ಓದು »