ಆಧುನಿಕತೆಯಲ್ಲಿ ಮರೆಯಾಯ್ತೆ ಮಾನವೀಯತೆ ?

ರಂಗಭೂಮಿಯ ಹಿರಿಯಣ್ಣ ಕುಸ್ತಿಯ ಕಲಿ ಗುಡಿಗೇರಿ ಬಸವರಾಜರಿಗೊಂದು ನಮನ
ಮದರ್ ತೆರೇಸಾ ಸೋಗುಗಾತಿ ಎಂದವನು ಓಶೋ!!!
ದೂರದ ಅಲ್ಬೇನಿಯಾದಲ್ಲಿ ಹುಟ್ಟಿದ ಅಗ್ನೆಜ್ ಗಾಂಡ್ಜೆ ಬೊಜಾಕ್ಜಿಯು ಎಂಬ ಬಾಲಕಿ ಭಾರತದ ಕೊಳಚೆ ಪ್ರದೇಶಗಳ ರಾಜಧಾನಿ ಎಂದು ಹೆಸರುವಾಸಿಯಾಗಿದ್ದ ಕೊಲ್ಕತ್ತಾಗೆ ಕ್ರೈಸ್ತ ನನ್ ಆಗಿ ಆಗಮಿಸಿ ಕುಷ್ಠರೋಗಿಗಳ, ಅನಾಥ ಮಕ್ಕಳ ಪಾಲಿಗಷ್ಟೇ ಅಲ್ಲದೆ ಇಡೀ ಜಗತ್ತಿಗೆ ಮದರ್ ತೆರೆಸಾ ಎಂದು ಪರಿಚಿತಳಾದಳು. ಭಾರತದ ಕೊಳಚೆ ಪ್ರದೇಶಗಳ ವಾಸಿಗಳ ಏಳ್ಗೆಗಾಗಿ ಶ್ರಮಿಸಿದ್ದಕ್ಕಾಗಿ ನೊಬೆಲ್ ಬಹುಮಾನವನ್ನೂ ಪಡೆದಳು – ಇದಿಷ್ಟು ನಾವು ಆಕೆಯ ಬಗ್ಗೆ ತಿಳಿದ ವಿಚಾರಗಳು. ಆದರೆ ಗಾಂಧಿ ಇಂದ ಬುದ್ದನವರೆಗೂ, ಆಧ್ಯಾತ್ಮದಿಂದ ಲೈಂಗಿಕತೆಯವರೆವಿಗೂ ಎಲ್ಲವನ್ನೂ, ಎಲ್ಲವನ್ನೂ ತನ್ನ ಮಾತುಗಳಲ್ಲಿ ಹಿಡಿದು ಹೊಸ ಅರ್ಥ ಕೊಡುವ ಓಶೋ ರಜನೀಶ್ ಮದರ್ ತೆರೆಸಾ ಬಗ್ಗೆ ಬೇರೆಯದೇ ರೀತಿಯಾದ ಅಭಿಪ್ರಾಯ ವ್ಯಕ್ತಪಡಿಸುತ್ತಾನೆ. ನೊಬೆಲ್ ಪ್ರಶಸ್ತಿಯಿಂದ ಪ್ರಖ್ಯಾತಿಯನ್ನು ಪಡೆದ ತೆರೆಸಾರನ್ನು, ಸೋಗುಗಾರ್ತಿ, ಕಪಟಿ ಹಾಗೂ ಹಿಪೋಕ್ರಿಟ್ ಎಂದು ಕರೆಯುತ್ತಾನೆ. ತನ್ನ ಅಭಿಪ್ರಾಯಗಳು ವಿಪರೀತವಾಗಿರುವಂತೆ ನೋಡಿಕೊಳ್ಳುತ್ತಿದ್ದ ರಜನೀಶನ ಅಭಿಪ್ರಾಯವನ್ನು ಅಕ್ಷರಶಃ ಒಪ್ಪುವುದು ಯಾರಿಗೂ ಸಾಧ್ಯವಿಲ್ಲವಾದರೂ ಆತನ ದೃಷ್ಟಿಕೋನದ ಬೆಳಕಿನಲ್ಲಿ ನಮ್ಮ ತಿಳುವಳಿಕೆಯನ್ನು, ಅಭಿಪ್ರಾಯಗಳನ್ನು ಪುನರ್ವಿಮರ್ಶಿಸಿಕೊಳ್ಳುವುದು ನಮಗೆ ಉಪಯುಕ್ತವಾಗಬಹುದು. ತನ್ನ ಪ್ರವಚನವೊಂದರಲ್ಲಿ ರಜನೀಶ್ ತೆರೆಸಾರನ್ನು ಅವಲೋಕಿಸಿದ ಪರಿ ಇಂತಿದೆ:
ಮತ್ತಷ್ಟು ಓದು 





