ವಿಷಯದ ವಿವರಗಳಿಗೆ ದಾಟಿರಿ

Archive for

18
ಫೆಬ್ರ

ದುರಂತ ನಾಯಕ

ರೂಪಾ

ಸ್ಮಶಾನಕ್ಕೆ ಕಾಲಿಟ್ಟಂತಹ ಅನುಭವ.ಒಬ್ಬಂಟಿಯಾಗಿ ನಡೆಯುತ್ತಿದ್ದೆ.

ಎಲ್ಲಿ ನೋಡಿದರೂ ಮುರಿದ ರಥಗಳು, ರಕ್ತದ ಮಡುವು, ಕರುಳು ಆಚೆ ಕಿತ್ತು ಬಂದಿರುವ ಸೈನಿಕರು. ನಿಟ್ಟುಸಿರು ತಂತಾನೆ ಹೊರಹೊಮ್ಮಿತು .

ದೀರ್ಘವಾಗಿ ಉಸಿರೆಳೆದೆ. ನನ್ನ ಸ್ವಾರ್ಥಕ್ಕೆ, ಹಣದಾಹಕ್ಕೆ, ಭೂಮಿಯಾಸೆಗೆ, ಅಭಿಮಾನಕ್ಕೆ ಬಲಿಯಾದ ಮುಗ್ಧರು. ತಾವು ಏತಕ್ಕಾಗಿ ಯಾರಿಗಾಗಿ ಯುದ್ದ್ದ ಮಾಡುತ್ತಿದ್ದೆವೆಂಬ ಅರಿವೂ ಇಲ್ಲದವರು.

 

ಅದೂ ನನ್ನದೇ ಅಪ್ಪಣೆಯಾಗಿತ್ತಲ್ಲವೇ. ಪ್ರತಿಯೊಂದು ಗಂಡಸೂ ಯುದ್ದರಂಗದಲ್ಲಿ ಹೋರಾಡಬೇಕೆಂಬ ನಿಯಮ ತಂದು ಮನೆ ಮನೆಗೆ ನುಗ್ಗಿ ೧೪ ರಿಂದ ೭೦ ರವರೆಗಿನ ಪುರುಷರನ್ನು ಎಳೆತಂದು ಯುದ್ದ ತರಬೇತಿ ಕೊಟ್ಟು……….

ಆಗ ತಾನೆ ಮದುವೆಯಾಗಿತ್ತಲ್ಲವೇ ಲಕ್ಷ್ಮಣನಿಗೆ. ಹಾ ಕಂದ ಲಕ್ಷ್ಮಣನನ್ನು ನೆನೆದು ಕರುಳು ಹರಿದಂತಾಯಿತು. ತನ್ನ ಮುಂದೆಯೇ ಕೊಂದನಲ್ಲಾ ಆ ಎನ್ನ ಅರಿ ಅರ್ಜುನನ ಮಗ ಅಭಿಮನ್ಯು. ತಾನೇನೂ ಮಾಡಲಾಗಲಿಲ್ಲವಲ್ಲಾ . ಇಲ್ಲ ಇಲ್ಲ ಅವನನ್ನೂಕೊಂದು ಬಿಟ್ಟೆವಲ್ಲ್ಲಾ ಅವನೂ ಹೊಸದಾಗಿ ಮದುವೆಯಾದವನೇ ತಾನೆ. ದ್ವೇಷಕ್ಕೆ ದ್ವೇಷ . ಸೇಡಿಗೆ ಸೇಡು . ಅವನನ್ನು ಕೊಂದ ತಪ್ಪಿಗೆ ಸೈಂಧವನ ಬಲಿ. ಪ್ರೀತಿಯ ಸಹೋದರಿ ವಿಧವೆಯಾದಳು. ಮತ್ತಷ್ಟು ಓದು »