“ಡೋಂಟ್ ಕೇರ್” ಕಾಲದಲ್ಲಿ “ವೀ ಕೇರ್”ಎಂಬ ವಿಸ್ಮಯ
– ವಿಜಯ್ ಹೆರಗು
ಈವತ್ತಿನ ದಿನಮಾನದಲ್ಲಿ ಸಾಮಾನ್ಯವಾಗಿ ಜನರು ತಮ್ಮದೇ ಆದ ಸಮಸ್ಯೆಗಳಲ್ಲಿ ನೊಂದು-ಬೆಂದು ಇತರರೆಡೆಗೆ ದಿವ್ಯ ಔದಾಸೀನ್ಯವನ್ನು ತಳೆಯುವುದು ಎಲ್ಲರೂ ಬಲ್ಲ ವಿಷಯವೇ ಸರಿ. ನಾವು ಕಛೇರಿಗೆ ಅಥವಾ ಬೇರೆಲ್ಲಾದರೂ ಹೋಗುವಾಗ ಯಾರಾದರೂ ಅಪರಿಚಿತರು ತೊಂದರೆಯಲ್ಲಿ ಸಿಲುಕಿದ್ದಾಗ ಅವರಿಗೆ ಸಹಾಯಹಸ್ತ ಚಾಚುವ ಬದಲು “ನಮಗೇಕೆ ಬೇಕು ಅವರಿವರ ಉಸಾಬರಿ” ಎಂದು ಕಂಡೂ ಕಾಣದ ಹಾಗೆ ಹೊರಡುತ್ತೇವೆ. ತೊಂದರೆಯಲ್ಲಿದ್ದಂತೆ ನಟಿಸಿ ಜನರನ್ನು ದೋಚುವ ಪುಂಡರ, ದುಷ್ಕರ್ಮಿಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿರುವುದೂ ಈ ಬೆಳವಣಿಗೆಗೆ ಕಾರಣೀಭೂತವಾಗಿದೆ ಎಂಬುದು ಅತಿಶಯೋಕ್ತಿಯೇನಲ್ಲ.
ಆದರೆ ಇಂದಿಗೂ ಮಾನವೀಯ ಮುಖವನ್ನು ಹೊಂದಿ ಸಮಾಜಸೇವೆಯನ್ನೇ ಧ್ಯೇಯವನ್ನಾಗಿಸಿಕೊಂಡ ಹಲವಾರು N G O ಗಳನ್ನು ನಾವು ಕಾಣಬಹುದು.
ಅಂತಹದ್ದೇ ಒಂದು ತಾಜಾ ಉದಾಹರಣೆ “ವೀ ಕೇರ್ ಚಾರಿಟೀಸ್ (ರಿ)”.
ಮತ್ತಷ್ಟು ಓದು
ಭಾರತದಲ್ಲಿ ಕನ್ನಡನೂ ಇದೆ ಹಿಂದಿ ಮಾತ್ರ ಅಲ್ಲ
ಸಂಪಾದಕೀಯ ಅನ್ನೋ ಮೊಟ್ಟೆಯ ಮೇಲೆ ಒಂದು ಪ್ರೀತಿಯ ಕುಟುಕು…
– ಮಹೇಶ್ ಪ್ರಸಾದ್ ನೀರ್ಕಜೆ
ಸಂಪಾದಕೀಯದಲ್ಲಿ ಪ್ರಕಟವಾದ ಬ್ಲಾಗ್ ಬರಹಕ್ಕೆ ಪ್ರತಿಯಾಗಿ ನನ್ನ ಅನಿಸಿಕೆ ಇದು.
ಸಾಯಿ ಬಾಬಾರ ಸುತ್ತ ಇರುವ ಪವಾಡಗಳ ಬಗೆಗಿನ ವಿವಾದಗಳ ಬಗ್ಗೆ ಸಂಪಾದಕೀಯ ಈ ಹಿಂದೆ ಒಂದೆರಡು ಲೇಖನಗಳಲ್ಲಿ ಬರೆದಿತ್ತು (ಅದರಲ್ಲಿ ಒಂದು ಸನ್ಮಾರ್ಗ ಎನ್ನುವ ಪತ್ರಿಕೆಯಲ್ಲಿ ಪ್ರಕಟವಾದ ಸಂಪಾದಕೀಯ ಬರಹ). ಅವುಗಳಲ್ಲೊಂದು ಲೇಖನಕ್ಕೆ ಬಂದ ಪ್ರತಿಕ್ರಿಯೆಯೊಂದಕ್ಕೆ ಪ್ರತಿಯಾಗಿ ಸಂಪಾದಕೀಯ ಬರೆದ ಸ್ಪಷ್ಟೀಕರಣ ರೂಪದ ಬರಹವೇ ನಾನು ಮೇಲೆ ನೀಡಿದ ಬ್ಲಾಗ್ ಬರಹ. ಈ ಬ್ಲಾಗ್ ಬರಹದ ಸಾರಾಂಶ ಏನೆಂದರೆ ಸಾಯಿ ಬಾಬಾ ಮಾಡಿದ ಸಮಾಜ ಮುಖೀ ಕೆಲಸಗಳ ಬಗ್ಗೆ ಮೆಚ್ಚುಗೆಯಿದ್ದರೂ ಮೂಲತಹ ಬಾಬಾ ನಡೆದ ದಾರಿ ಪವಾಡಗಳನ್ನೊಳಗೊಂಡ ದಾರಿಯಾಗಿದ್ದು ಅದು ಜನರನ್ನು ದಿಕ್ಕುತಪ್ಪಿಸುವ, ಮೌಢ್ಯತೆಗೆ ನೂಕುವ ಮೋಸದ, ಸುಳ್ಳಿನ ದಾರಿಯಾಗಿದೆ, ಆದ್ದರಿಂದ ನಮಗೆ ಅಂತಹ ಸುಳ್ಳಿನ ದಾರಿ ಬೇಕೋ ಅಥವಾ ಬುಧ್ಧ ಹಾಕಿಕೊಟ್ಟ ಸತ್ಯದ ದಾರಿ ಬೇಕೋ ಎಂಬ ಜಿಜ್ಞಾಸೆ. ಕೊನೆಯಲ್ಲಿ ಸಂಪಾದಕೀಯ ಹೀಗೆ ಹೇಳುತ್ತದೆ – “ಬುದ್ಧನ ಸತ್ಯ ಮಾರ್ಗವೇ ನಿಜವಾದ ಬದುಕಿನ ತಳಪಾಯ. ಅದರ ಮೇಲೇ ನಮ್ಮ ಬದುಕು ಕಟ್ಟಿಕೊಳ್ಳುವಂತಾಗಬೇಕು” ಮತ್ತು “ನಾವು ಸತ್ಯದ ಮಾರ್ಗದಲ್ಲಿ ಊರ್ಧ್ವಮುಖಿಗಳಾಗಬೇಕೇ ಹೊರತು ಸುಳ್ಳಿನ ಮಾರ್ಗದಲ್ಲಿ ಅಧೋಮುಖಿಗಳಾಗಬಾರದು ಅಲ್ಲವೇ?”. ಇದರ ಬಗ್ಗೆ ಒಂದು ಚಿಂತನೆ ನಡೆಸುವ ಉದ್ದೇಶ ಈ ಲೇಖನದ್ದು.
ನನ್ನ Some ಶೋಧನೆ!!
-ಸವಿತ ಎಸ್.ಆರ್
ಆಗಷ್ಟೇ ಕನ್ನಡ ಮಾಧ್ಯಮದಲ್ಲಿ 10ನೇ ತರಗತಿ ಮುಗಿಸಿ, ಪ್ರಥಮ ಪಿ.ಯು.ಸಿ ಕಾಲೇಜಿಗೆ ಸೇರಿದ ದಿನಗಳು. ಹೊಸ ಕಾಲೇಜು, ಹೊಸ ಗೆಳತಿಯರು, ವಿಜ್ಞಾನದ ವಿಷಯಗಳು, ಭೌತ,ಸಸ್ಯ,ಜೀವ,ರಾಸಾಯನಿಕ ಶಾಸ್ತ್ರದ ಪ್ರಯೋಗಗಳು, ಗಣಿತ ಸಮೀಕರಣಗಳು….ಅದೂ ಎಲ್ಲಾ ಇಂಗ್ಲೀಷ್ ಮಾಧ್ಯಮದಲ್ಲಿ…..ಎಲ್ಲವೂ ಒಂಥರಾ ಹೊಸತೇ 🙂
ಒಂದಿನ ಮಧ್ಯಾಹ್ನ ನಾನು ಕಾಲೇಜಿನಿಂದ ಮನೆಗೆ ವಾಪಾಸ್ಸಾಗಿ…ಊಟ ಮಾಡಿ ಟಿ.ವಿ. ಮುಂದೆ ಹಾಜರ್ರು. ನನ್ನ ತಮ್ಮ ಕೂಡ ಆವಾಗಲೇ ಬಂದ. ಅದ್ಯಾರೋ ಸ್ನೇಹಿತರು ಕೊಟ್ರು ಅಂತ ಒಂದು ಚಿಕ್ಕ ಸೀಸೆಯಲ್ಲಿ ಪಾದರಸವನ್ನ ತಂದಿದ್ದ. ಅಮ್ಮನಿಗೆ ಕಾಣದ ಹಾಗೆ ನನ್ನ ಬಳಿ ತಂದು ಒಮ್ಮೆ ಆ ಸೀಸೆಯನ್ನ ಜೋರಾಗಿ ಅಲುಗಾಡಿಸಿ ತೋರಿಸಿದ. ಒಂದು ದೊಡ್ಡ ಹನಿಯಂತಿದ್ದ ಪಾದರಸ ಒಡೆದು ಅನೇಕ ಚಿಕ್ಕ ಚಿಕ್ಕ ಹನಿಗಳಾದವು. ಮತ್ತೊಮ್ಮೆ ನಿಧಾನವಾಗಿ ಸೀಸೆಯನ್ನ ತಿರುಗಿಸಿದರೆ ಮತ್ತೆ ಮೊದಲಿನ ದೊಡ್ಡ ಹನಿಯಾಯ್ತು. ಇಷ್ಟಕ್ಕೆ ನಿಲ್ಲದ ಅವನು ಪೇಪರಿನ ಮೇಲೆ ನಿಧಾನವಾಗಿ ಸುರುವಿ…ಈಗ ಅದು ಹೇಗೆ ಹರಿದಾಡತ್ತೆ ಅಂತ ತೋರಿಸಿದ್ದು ನನ್ನ ಕುತೂಹಲ ಕೆರಳಿಸಿತು. ಮತ್ತೆ ಪೇಪರಿನ ಮೂಲೆಯಲ್ಲೊಂದು ಚಿಕ್ಕ ಮಡಿಕೆ ಮಾಡಿ ಅದರಿಂದ ಪುನಃ ಪಾದರಸವನ್ನ ಸೀಸೆಯೊಳಗೆ ಹಾಕಿ….ಇದು ನನ್ನದು….ತೆಗೆದರೆ ನೋಡು ಅಂತ ಕಟ್ಟಾಜ್ಞೆಯೊಂದಿಗೆ ಟೇಬಲ್ ಮೇಲೆ ಸೀಸೆಯನ್ನಿಟ್ಟ. ನಾನು ಟೀವಿ ನೋಡುತ್ತಲೇ ಇದ್ದೆ.
ಊಟ ಮುಗಿಸಿ ತಮ್ಮ ಸ್ಕೂಲಿಗೆ ಹೊರಟುಹೋದ. ಅಲ್ಲಿಯವರೆಗೂ ಕುತೂಹಲ ತಡೆದಿಟ್ಟುಕೊಂಡಿದ್ದ ನನಗೊಂದು ಛಾನ್ಸ್….!! 🙂 ನಿಧಾನವಾಗಿ ಸೀಸೆಯ ಮುಚ್ಚಳ ತೆಗೆದೆ (ರಾಸಾಯನಿಕ ವಸ್ತುವನ್ನ ಬರಿಗೈಯಲ್ಲಿ ಮುಟ್ಟಬಾರದು ಅಂತ ತಿಳಿದಿದ್ರೂ, ಏನೂ ಆಗೋಲ್ಲ ಅನ್ನೋ ಧೈರ್ಯದ ಮೇಲೆ) ಪಾದರಸವನ್ನ ಬರಿಗೈಯಲ್ಲಿ ಸ್ವಲ್ಪ ಒತ್ತಡದಲ್ಲಿ ಮುಟ್ಟಿದೆ. ಅದು ಚಿಕ್ಕ ಚಿಕ್ಕ ತುಣುಕುಗಳಾದವು..ಮತ್ತೆ ಬೆರಳಿಗೇನಾದ್ರು ಆಯ್ತಾ ಅಂತ ಒಮ್ಮೆ ನೋಡಿದೆ ಏನೂ ಆಗಿರಲಿಲ್ಲ. ಅದೇ ಧೈರ್ಯದ ಮೇಲೆ ಪಾದರಸವನ್ನ ಬಲಗೈ ಅಂಗಳದಲ್ಲಿ ಸುರುವಿಕೊಂಡು..ಬಲಗೈಯಿಂದ ಎಡಗೈಗೆ…ಮತ್ತೆ ಎಡಗೈಯಿಂದ ಬಲಗೈಗೆ ಸುರಿದಾಡೋದು ಮಜಾ ಅನ್ನಿಸ್ತು.. 🙂
ಬದುಕಿಗೆ ಪರಿಧಿ ಹಾಕೋಳ್ತಾ ಇದ್ದೀವಿ ಅನಿಸ್ತಾ ಇದೆ…
ಚಿತ್ರಾ ಸಂತೋಷ್
ಹಂಚಿ ಉಂಡರೆ ಹಸಿವಿಲ್ಲ…!! ಹತ್ತನೇ ತರಗತಿಯಲ್ಲಿ ನಾನು ಓದುತ್ತಿದ್ದಾಗ ಬಾಗೇವಾಡಿ ಅನ್ನೋ ಹೆಸರಿನ ಮೇಷ್ಟ್ರು ಇದ್ದರು. ತುಂಬಾ ಒಳ್ಳೆಯ ಮೇಷ್ಟ್ರು.ಮೂರು ವರ್ಷ ನಮ್ಮ ಜೊತೆಗಿದ್ದ ಆ ಮೇಷ್ಟ್ರು ಆಗಾಗ ಹೇಳುತ್ತಿದ್ದ ಮಾತು ಹಂಚಿ ಉಂಡರೆ ಹಸಿವಿಲ್ಲ. ಈಗಲೂ ಆ ಮಾತು ಆಗಾಗ ನೆನಪಾಗುತ್ತಿದೆ. ಮಾಮೂಲಿ ನಮ್ಮನೆಯಲ್ಲಿ ನಾನು-ತಮ್ಮ ಇಬ್ಬರೇ ಇರ್ತೀವಿ. ಆಗ ಒಂದು ಥರ ಬೋರ್. ನನಗೆ ರಜೆ ಇದ್ದ ದಿನ ಅವನಿಗರಲ್ಲ, ಅವನಿಗೆ ರಜೆ ಇದ್ದ ದಿನ ನಂಗೆ ರಜೆ ಇರೊಲ್ಲ. ಅದಕ್ಕೆ ಅವನಿಗೆ ರಜೆ ಇದ್ದ ನಾನು ಆಫೀಸ್ ನಿಂದ ಬೇಗ ಹೊರಡೋದು, ನಂಗೆ ರಜೆ ಇದ್ದ ದಿನ ಅವನು ಆಫೀಸ್ ನಿಂದ ಬೇಗ ಹೊರಟುಬರೋದು. ನಮಗೆ ರಜೆ ಇದ್ದ ದಿನ ಮಾವ, ಅಣ್ಣ ಬೇಗನೆ ಮನೆಮುಂದೆ ಹಾಜರಾಗೋದು. ಏನಾದ್ರೂ ಸ್ಪೆಷಲ್ ಅಡುಗೆ ಮಾಡೋದು, ದೇವಸ್ಥಾನಕ್ಕೆ ಹೋಗೋದು…ಅದೊಂದು ಥರಾ ನಮಗೆ ತುಂಬಾ ಖುಷಿಕೊಡೋದು. ನಂಗೆ ಎಲ್ಲಕ್ಕಿಂತ ಖುಷಿಕೊಡೋದು ಎಲ್ಲರೂ ಜೊತೆಗೆ ಊಟ ಮಾಡೋದು. ನಾವೇನದ್ರೂ ಮಾಡಿದ್ರೆ ಪಕ್ಕದ್ಮನೆ ಅಡುಗೆ ತಜ್ಞೆ ಆಂಟಿ ಅಲ್ಲಿ ಹಾಜರಾಗಿ..ನಾವು ಮಾಡೋ ಡಬ್ಬ ಅಡುಗೇನ ಇನ್ನಷ್ಟು ರುಚಿಯಾಗಿಸ್ತಾರೆ. ಆಮೇಲೆ ಅವರ ಮನೆ ಸಾರು ನಮ್ಮನೆಗೆ, ನಮ್ಮನೆ ಸಾರು ಅವರ ಮನೆಗೆ ಹೋಗುತ್ತೆ. ಒಟ್ಟಿನಲ್ಲಿ ಮನೆತುಂಬಾ ಜನರು ಓಡಾಡ್ತಾ ಇದ್ರೆ ಸಕತ್ ಖುಷಿ ಆಗೋದು.
ಪಕ್ಕದ್ಮನೆ ತಾತನೂ ಚಿತ್ರಾನಿಗೆ ಸಾರು ಕೊಟ್ಟೆಯೇನು? ಅಂತ ರಾತ್ರಿ ಮಲಗೋಕೆ ಮುಂಚೆ ಮೊಮ್ಮಕ್ಕಳನ್ನು ಗದರಿಸಿ ಅವರ ಕೈಯಲ್ಲಿ ಕೊಟ್ಟು ಕಳಿಸ್ತಾರೆ. ಸ್ವಲ್ಪನೇ ಆಗಲೀ ಮತ್ತೊಬ್ಬರಿಗೆ ಕೊಟ್ಟು ತಿನ್ನೋದ್ರಲ್ಲಿ ತುಂಬಾ ಖುಷಿ ಇರುತ್ತೆ ಅಲ್ವಾ? ಊರಲ್ಲಿ ಆದ್ರೆ ಮನೆಗೆ ಯಾರಾದ್ರೂ ನೆಂಟರು ಬರ್ತಾರೆ, ಖುಷಿ-ಖುಷಿಯಾಗಿ ಸಂಭ್ರಮಿಸೋ ಅವಕಾಶಗಳಿರ್ತವೆ. ಆದರೆ, ಬೆಂಗಳೂರಿನಲ್ಲಿದ್ರೆ ನೆಂಟರಿಲ್ಲ, ತುಂಬಾ ಆಪ್ತರಿಲ್ಲ, ಆಪ್ತರಿದ್ರೂ ಅವರಿಗೆ ಅವರದೇ ಆಗ ಕೆಲಸಗಳಿರ್ತವೆ. ನಮ್ಮನೆಯಲ್ಲಿ ಬಂದು ಅವರಿಗೆ ಹರಟೆ ಹೊಡೆಯೋಕೆ ಸಮಯವೆಲ್ಲಿ ಇರುತ್ತೆ? ಮತ್ತಷ್ಟು ಓದು
ಸಂಜೆ ಏಳರ ಬಸ್ಸು…
-ಸೌಮ್ಯ ಭಾಗವತ್
ಕುಮಟಾದಿಂದ ಹತ್ತು ಕಿಲೋಮೀಟರುಗಳು ದೂರದಲ್ಲಿರುವ ನಮ್ಮೂರಿಗೆ, ದಿನಕ್ಕೆ ಹತ್ತು ಬಸ್ಸುಗಳಿವೆ. ಸುಮಾರಾಗಿ ಡಾಂಬರು ಇರುವ ರಸ್ತೆಯಲ್ಲಿ ಸುತ್ತಲಿನ ಹಸಿರು ಗದ್ದೆಗಳು, ಹಳ್ಳಗಳು, ಬೆಟ್ಟ ಗುಡ್ಡಗಳನ್ನು ನೋಡುತ್ತಾ ಬಸ್ಸಿನಲ್ಲಿ ಬರುವುದೇ ಒಂಥರದ ಖುಷಿ.
ಮಾಯಾನಗರಿ ಬೆಂಗಳೂರಿನ ಹಳೆಯ ಬಸ್ಸುಗಳೆಲ್ಲ (KA-01 registration) ನಮ್ಮಲ್ಲಿ ಹಳ್ಳಿಗಳಿಗೆ ಓಡಾಡುವ ಪುಷ್ಪಕ ವಿಮಾನಗಳು. ಹೆಚ್ಚಾಗಿ ಜನಸಾಮಾನ್ಯರ ಓಡಾಟ ಆ ಬಸ್ಸುಗಳ ಮೇಲೆ ಅವಲಂಬಿತ. ಇವಿಷ್ಟನ್ನು ನನ್ನ ಬರಹದ ವಿಷಯ ಎನ್ನಬಹುದಾದರೂ. ನನ್ನ ಜನ್ಮಸಿದ್ಧ ಹಕ್ಕನ್ನು ಚಲಾಯಿಸದೇ ಬಹಳ ದಿನಗಳೇ ಕಳೆದವು. (ತಲೆ ತಿನ್ನುವುದು ನನ್ನ ಆ ಜನ್ಮ ಸಿದ್ಧ ಹಕ್ಕು ಅದನ್ನು ನಾನು ಪಡೆದೆ ತೀರುತ್ತೇನೆ.! ಎಂದು ನಾನು ಈ ಭೂಮಿಗೆ ಬಂದಾಗಲೇ ನಿರ್ಧರಿಸಿ ಆಗಿತ್ತು). ವಿಷಯದ ರೈಲು ಅಲ್ಲಲ್ಲಿ ಹಳಿ ತಪ್ಪಿದರೂ ಸರಿಪಡಿಸಿ ಓಡಿಸಿದ್ದೇನೆ ನೀವು ಓದಿ.
ನಾನು ಬಸ್ಸಿನಲ್ಲಿ ಓಡಾಡುವುದನ್ನೇ ಇಷ್ಟ ಪಡುತ್ತೇನೆ.ಮಂಗಳೂರಿನಲ್ಲಿ ಗಾಜುಗಳಿಲ್ಲದ ಕಿಟಕಿಗಳ ಬಸ್ಸಿನಲ್ಲಿ ಕೂತು,ಒಂದುಕಾಲದಲ್ಲಿ ಬಾಬ್ ಇದ್ದ ಕೂದಲನ್ನು ಜುಟ್ಟಿಗೆ ಸಿಕ್ಕಿಸಲು ಹರಹರಿ ಸಾಹಸ ಮಾಡುತ್ತಾ.ಕೊನೆಗೆ ‘ಉಪೇಂದ್ರ’ನಿಗೆ ನೀನೇ ಸ್ಫೂರ್ತಿಯೋ ಎಂದೂ ಕೇಳಿಸಿಕೊಂಡಿದ್ದೇನೆ ಬಿಡಿ.
‘ಸತ್ಯ ಸಾಯಿ’ ಮತ್ತು ‘ಸತ್ಯ ಸಾಯಿಸುವ’ ಮಾಧ್ಯಮಗಳು
ಅರೆಹೊಳೆ ಸದಾಶಿವರಾಯರು
ಫೇಸ್ ಬುಕ್ನಲ್ಲಿ ಒಂದು ಸಾಲು ಓದಿದೆ. ‘ಮ್ಯಾಜಿಷಿಯನ್’ ಸತ್ಯ ಸಾಯಿಬಾಬಾ ಇನ್ನಿಲ್ಲ ಎಂದು ಒಬ್ಬರು ವ್ಯಂಗ್ಯವಾಗಿ ಬರೆದುಕೊಂಡಿದ್ದರು. ಮುಂದುವರಿಯುತ್ತಾ, ಈ ಸತ್ಯಸಾಯಿಬಾಬಾ ಎಂಬ ಜಾದೂಗಾರನನ್ನು ಕೇವಲ ಮಾಧ್ಯಮಗಳು ಈ ಮಟ್ಟಿಗೆ ದೇವಮಾನವನನ್ನಾಗಿ ಮಾಡಿವೆ ಎಂದೂ ಸೇರಿಸಿಕೊಂಡಿದ್ದರು.
ಮೊದಲಾಗಿ ಮಾನವ ಎಂದರೆ ಏನು ಎಂಬತ್ತ ಗಮನ ಹರಿಸಬೇಕು. ಅದಕ್ಕೂ ಮೊದಲಾಗಿ ಒಂದು ವಿಷಯ ಸ್ಪಷ್ಟೀಕರಣದೊಂದಿಗೇ ಲೇಖನ ಆರಂಭಿಸಬೇಕು. ಅದೆಂದರೆ ನಾನು ಸಾಯಿ ಬಾಬಾ ಅವರ ಭಕ್ತನೂ ಅಲ್ಲ ಮತ್ತು ಅವರ ಪವಾಡಗಳ ಕುರಿತು ಪರ-ವಿರೋಧ ಎಂದು ಹೇಳಿಕೊಳ್ಳುವಷ್ಟು, ಜ್ಞಾನಿಯೂ ಅಲ್ಲ. ಆ ಮಟ್ಟಿಗೆ ಈ ವಿಷಯದಲ್ಲಿ ನಾನು ತಟಸ್ಥ. ಇನ್ನು ಮಾನವ ಎಂದರೆ…..!. ಜೀವಂತ ಇರುವ ಎಲ್ಲವೂ ಮಾನವನಾಗುವುದಿಲ್ಲ ಅಥವಾ ಮನುಷ್ಯಗರ್ಭದಲ್ಲಿ ಜನಿಸಿದ ಎಲ್ಲರೂ ಮಾನವನಂತೆ ಬದುಕುವುದಿಲ್ಲ. ಪರಸ್ಪರರನ್ನು ಪ್ರೀತಿಸುತ್ತಾ ಸಾಧ್ಯವಾದಷ್ಟೂ ಜನರ ಬಳಿ, ಜನರನ್ನು ಗೌರವಿಸುತ್ತಾ ಬದುಕುವುದು ಮಾನವೀಯ ಧರ್ಮ ಎನಿಸುತ್ತದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಜನಸೇವೆಯೇ ಜನಾರ್ದನ ಸೇವೆ ಎಂದುಕೊಂಡು, ಅಕ್ಷರಶ: ಅದನ್ನೇ ಪಾಲಿಸಿದರೆ ಆತ ಜನರ ಪಾಲಿಗೆ ಜನಾರ್ದನನಾಗುತ್ತಾನೆ;ದೇವತ್ವವನ್ನು ಪಡೆಯುತ್ತಾನೆ-ಸಾಯಿಬಾಬಾ ವಿಷಯದಲ್ಲಿಯೂ ಅದೇ ಆಗಿದೆ. ಮತ್ತಷ್ಟು ಓದು
ಬಂಜರಾದ ಬಾಂಜಾರು
ಪವನ್ ಎಂ. ಟಿ
ಪ್ರಿಯ ನಿಲುಮೆಯ ಓದುಗರೆ ಕಳೆದ ಕೆಲವು ದಿನಗಳ ಹಿಂದೆ ನಿಲುಮೆಯಲ್ಲಿ ಮಲೆಕುಡಿಯರ ಪ್ರದೇಶವಾದ ಬಂಗಾರ್ ಪಲ್ಕೆಯ ಕುರಿತಂತೆ, ಅಲ್ಲಿಯ ಸಾಮಾಜಿಕ ಸಮಸ್ಯೆಗಳ ಕುರಿತಂತೆ ಲೇಖನವೊಂದು ಪ್ರಕಟವಾಗಿತ್ತು. ಇನ್ನೊಂದು ವಿಭಿನ್ನ ಪ್ರದೇಶವಾದ ಬಾಂಜಾರು ಮಲೆಯ ಮಲೆಕುಡಿಯರ ಕುರಿತಂತೆ, ಅವರ ಕಷ್ಟದ ಪರಿಪಾಟಲಿನ ಕುರಿತ ಸಣ್ಣ ಪರಿಚಯವನ್ನು ಈ ಲೇಖನದಲ್ಲಿ ನಿಮ್ಮ ಮುಂದಿಡುತ್ತಿದ್ದೇನೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಿಂದ ಚಾರ್ಮಾಡಿ ರಸ್ತೆಯಲ್ಲಿ ಸುಮಾರು ೪೦ ಕಿಲೋಮೀಟರ್ ಪ್ರಯಾಣಿಸಿದರೆ ಘಾಟ್ನ ೯ ನೇ ತಿರುವಿನಲ್ಲಿ ಬಲಬದಿಗೆ ಒಂದು ಕಿರಿದಾದ ಕಚ್ಚಾ ರಸ್ತೆ ಸಿಗುತ್ತದೆ. ಈ ಕಚ್ಚಾ ರಸ್ತೆ ಹೆಚ್ಚು ದೂರದ ವರೆಗೆ ಇಲ್ಲ. ಎಲ್ಲಿಯಾದರೂ ಸಾಮಾನ್ಯ ಜನರೀಗೆ ಇದರಿಂದ ಉಪಯೋಗವಾಗಿ ಬಿಟ್ಟರೆ ಕಷ್ಟ ನೋಡಿ ಅದಕ್ಕೆ ಈ ರಸ್ತೆ ಕೇವಲ ಅರ್ಧ ಕಿಲೋಮೀಟರ್ ದೂರದಲ್ಲಿರುವ ಖಾಸಗಿ ಎಸ್ಟೇಟ್ ನ ಅಥಿತಿ ಗೃಹದ ವರೆಗೆ ಮಾತ್ರವಿದೆ. ಇಲ್ಲಿ ಖಾಸಗಿ ಎಸ್ಟೇಟ್ ನವರು ಒಂದು ದೊಡ್ಡ ಗೇಟು ಹಾಕಿದ್ದಾರೆ ಈ ಗೇಟನ್ನು ಒಳ ಪ್ರವೇಶ ಮಾಡಿಯೇ ನಾವು ಬಾಂಜಾರು ಮಲೆಗೆ ಹೋಗಬೇಕು. ಇಲ್ಲಿ ಎಸ್ಟೇಟ್ ಮಾಲಿಕರ ಪರವಾನಿಗೆ ಇಲ್ಲದೇ ನಾವು ಒಳ ಹೋಗುವಂತಿಲ್ಲ. ಮೊದಲು ನಮಗೆ ಮಲೆಕುಡಿಯರಲ್ಲಿಗೆ ಹೋಗುವುದಕ್ಕೆ ಎಸ್ಟೇಟ್ನವರ ಒಪ್ಪಿಗೆ ಯಾಕೆ ಪಡೆಯಬೇಕು ಎಂಬ ಪ್ರಶ್ನೆ ಮೂಡಿತು . ಆದರೆ ನಮ್ಮ ಕೆಲಸ ಆಗಬೇಕಾದರೆ ನಾವು ಒಪ್ಪಿಗೆ ಪಡೆಯಲೇ ಬೇಕಲ್ಲಾ ಅದಕ್ಕೆ ಆ ಕೆಲಸವನ್ನು ಮೊದಲು ಮಾಡಿದೆವು. ಮುಂದೆ ಸಾಗಿದಂತೆ ಆ ಅಥಿತಿ ಗೃಹದಲ್ಲಿ ಕೆಲಸ ಮಾಡುವ ಮಲೆಕುಡಿಯರನ್ನು ಕಂಡೆವು. ಇದೆಲ್ಲವನ್ನು ನೋಡುವಾಗ ನನ್ನಲ್ಲಿ ಮೂಡಿದ ಪ್ರಶ್ನೆ? ಎಸ್ಟೇಟ್ ನವರು ಯಾಕೆ ಈ ರೀತಿ ಗೇಟ್ ಹಾಕಿದ್ದಾರೆ? ಮಲೆಕುಡಿಯರನ್ನು ನಿಯಂತ್ರಣದಲ್ಲಿಟ್ಟಿರ ಬಹುದೇ? ನಮ್ಮನ್ನು ಯಾಕೆ ಪರೀಕ್ಷಿಸಿಯೇ ಒಳ ಬಿಡುತ್ತಾರೆ? ಇದರ ಹಿಂದೆ ಏನಿದೆ? ಮಲೆಕುಡಿಯರು ಯಾಕೆ ಇವರಲ್ಲಿಯೇ ಕೆಲಸ ಮಾಡುತಿದ್ದಾರೆ? ಎಂದು. ನಂತರ ಬಾಂಜಾರಿನ ಮಲೆಕುಡಿಯರೇ ಹೇಳಿದರೂ ಎಸ್ಟೇಟ್ ನವರು ನಮಗೆ ೫ ಎಕರೆ ಜಾಗವನ್ನು ಪ್ರತಿಯೊಬ್ಬರಿಗೂ ನೀಡಿದ್ದಾರೆ ಅದರಲ್ಲಿ ಕೃಷಿ ಮಾಡಿಕೊಂಡು ಮತ್ತು ಎಸ್ಟೇಟ್ನ ಕೆಲಸವನ್ನು ಮಾಡಿಕೊಂಡು ನಾವು ಬದುಕುತ್ತಿದ್ದೇವೆ. ಈ ಮಾತನ್ನು ಕೇಳಿದಾಗ ನನ್ನಲ್ಲಿ ಮೂಡಿದ್ದ ಪ್ರಶ್ನೆಗಳಿಗೆ ಅಲ್ಪ ಸ್ವಲ್ಪ ಉತ್ತರ ಸಿಕ್ಕಿದಂತಾಯಿತು. ಮತ್ತಷ್ಟು ಓದು
ಎಲ್ಲಿ ಹೋದವು ಆ ವೈಶಾಖದ ದಿನಗಳು …..

ಅಜ್ಜಿ ಮನೆಯಲ್ಲಿ ಇಗ ಮರದ ತುಂಬಾ ಮಾವು ಹಲಸು,ಅಜ್ಜನ ಕಿಟಿಪಿಟಿ ಒಂದನ್ನು ಬಿಟ್ಟರೆ ….ಅಜ್ಜಿ ಮನೆ ಎಂಬುದು ಅಧ್ಭುತ ಮಾಯಾಲೋಕ…ನನ್ನ ಎಲ್ಲಾ ಅಕ್ಕ ಅಣ್ಣಂದಿರು…ಅಲ್ಲಿ ಬಂದಿರುತ್ತಿದ್ದರು…ಎಲ್ಲಾ ಸೇರಿ ಆ ಎರಡು ತಿಂಗಳು ..ಖುಷಿಯನ್ನು ಲೂಟಿ ಮಾಡುತ್ತಿದ್ದೆವು…ಅದೂ ಮೇ …..ತಿಂಗಳು ಮದುವೆ, ಮುಂಜಿ, ಚೌಲ ….ಒಂದೇ ಎರಡೇ…ಅಜ್ಜಿ ಜೊತೆಗೆ ಹೋಗಲು ನಾ ಮುಂದು ನೀ ಮುಂದು ಎಂದು ಲಡಾಯಿ..ಮಾಡುತ್ತಿದ್ದ ಆ ದಿನಗಳು…
ಅಜ್ಜನಿಗೆ ಮಕ್ಕಳೆಂದರೆ ಅಷ್ಟಕ್ಕಷ್ಟೇ…ಆತ ಯಾವತ್ತೂ ಮೊಮ್ಮೊಕ್ಕಳಿಗೆ ಸಲಿಗೆ ಕೊಟ್ಟಿರಲಿಲ್ಲ…ನಮಗೂ ಅವ ದೊಡ್ಡ ಪ್ರತಿಸ್ಪರ್ಧಿಯಂತೆ… ಭಾಸವಾಗುತ್ತಿದ್ದ …ಬೇಕಂತಲೇ ಅವನಿಗೆ ತೊಂದರೆ ಕೊಡುತ್ತಿದ್ದೆವು…ಆ ದಿನ ಬಾಯಿರಿಗಳ ಮನೆತನಕ ಶಾರ್ಟ್ ಕಟ್ನಲ್ಲಿ ಹೋಗಲು ಹೋಗಿ ಮರದ ಬೇರಿಗೆ ಎಡವಿ ಮೂತಿ ಚಚ್ಚಿ ಕೊಂಡು ಆಸ್ಪತ್ರೆ ಸೇರಿದ ಅಜ್ಜ…ಇನ್ನೆರಡು ದಿನ ಬಿಟ್ಟು ಬರಲಿ ಎಂದು ಆಶಿಸುತ್ತಿದ್ದ ಆ ದಿನಗಳು….
‘ವಾಸಾ’ ಎಂಬ ಯುದ್ಧ ನೌಕೆ ಮತ್ತು ವಿಧಿಯ ಆಯ್ಕೆ!
– ಪ್ರಶಾಂತ್ ಯಳವಾರಮಠ
