ವಿಷಯದ ವಿವರಗಳಿಗೆ ದಾಟಿರಿ

Archive for

6
ಏಪ್ರಿಲ್

ಬನ್ನಿ,ಅಣ್ಣನ ಜೊತೆ ನಿಲ್ಲೋಣ…

6
ಏಪ್ರಿಲ್

ಇಗೋ,ಇದರಲ್ಲಿ ಮುಂದಿದೆ…

– ಕಿರಣ ಬಾಟ್ನಿ, ಬನವಾಸಿ ಬಳಗ

’ನಿಲುಮೆ’ಯಲ್ಲಿ ಕನ್ನಡದ ಸೊಲ್ಲರಿಮೆಯ ಬಗ್ಗೆ ಚರ್ಚೆಯಾಗುತ್ತಿರುವುದು ಒಳ್ಳೆಯ ಸಂಗತಿ. ಅಕ್ಟೋಬರ್ ೨೦೦೮ರಲ್ಲಿ ನಾನು ಬರೆದ ಒಂದು ಬರಹವನ್ನು ಬನವಾಸಿ ಬಳಗದ ಗೆಳೆಯರಾದ ಶ್ರೀ ಆನಂದ್ ಜೋಶಿಯವರು ಈ ಚರ್ಚೆಗೆ ಸರಿಹೊಂದುತ್ತದೆ ಎಂದು ಪ್ರಕಟಣೆಗೆ ಕಳುಹಿಸಿ ಅದು ಪ್ರಕಟಿಸಲಾಗಿ, ಆ ಬರಹದಲ್ಲಿ ಬಂದ ಕೆಲವು ವಿಶಯಗಳ ಬಗ್ಗೆ, ಮತ್ತು ಬನವಾಸಿ ಬಳಗದ ನಿಲುವುಗಳ ಬಗ್ಗೆ ತಮ್ಮ ೪/೪/೨೦೧೧ರ ಬರಹದಲ್ಲಿ ಶ್ರೀ. ಅಜಕ್ಕಳ ಗಿರೀಶ ಬಟ್ಟರು ಪ್ರತಿಕ್ರಿಯೆ ನೀಡಿರುವುದರಿಂದ ಈ ಬರಹವನ್ನು ಬರೆಯುತ್ತಿದ್ದೇನೆ.

ಆ ಬರಹದಲ್ಲಿ ಗಿರೀಶಬಟ್ಟರನ್ನು ಕುರಿತು ನಾನು ಯಾವ ಮಾತನ್ನೂ ಆಡಿಲ್ಲ; ಅದನ್ನು ಬರೆದಾಗ ಅವರು ತಮ್ಮ ಹೊತ್ತಗೆಯನ್ನು ಪ್ರಕಟಿಸಿದ್ದರ ನೆನಪಿಲ್ಲ, ಅವರ ಹೆಸರೂ ನನಗಾಗ ಗೊತ್ತಿರಲಿಲ್ಲ. ಆದುದರಿಂದ ಆ ಬರಹದಲ್ಲಿ ಶಂಕರಬಟ್ಟರಿಗೆ ಗಿರೀಶಬಟ್ಟರು ಕೊಟ್ಟಿರುವ ಉತ್ತರಗಳ ವೈಗ್ನಾನಿಕತೆ-ಅವೈಗ್ನಾನಿಕತೆಗಳ ಬಗ್ಗೆ ನಾನು ಮಾತನಾಡಿರಲು ಸಾದ್ಯವೇ ಇರಲಿಲ್ಲ. ಆದರೆ ಶ್ರೀ. ಕೆ. ವಿ. ತಿರುಮಲೇಶರ ಒಂದು ಬರಹವನ್ನು ಕುರಿತು ಆ ಮಾತುಗಳನ್ನು ಆಡಿದ್ದು ನಿಜ, ಅವರು ಪ್ರತಿನಿದಿಸುವ ’ಹಳೆ-ಶಾಲೆ’ಯವರೆಲ್ಲರನ್ನೂ ಕುರಿತು ಆ ಮಾತುಗಳನ್ನು ಆಡಿದ್ದು ನಿಜ. ಈಗ ಗಿರೀಶಬಟ್ಟರಿಗೆ ಆ ಮಾತುಗಳು ತಮ್ಮನ್ನು ಕುರಿತೇ ಆಡಿದ್ದು ಎಂದು ಅನಿಸಿರುವುದರಲ್ಲಿ ಹಳೆಯ ಬರಹವನ್ನು ಹೊಸ ಚರ್ಚೆಯೊಂದರಲ್ಲಿ ಪ್ರಕಟಿಸಿದ್ದು ಒಂದು ಕಾರಣವಾದರೆ, ಮತ್ತೊಂದು ಕಾರಣ ನಿಜಕ್ಕೂ ಗಿರೀಶಬಟ್ಟರು ಆ ’ಹಳೆ-ಶಾಲೆ’ಗೇ ಸೇರುತ್ತಾರೆ ಎನ್ನುವುದು. ಮೊದಲನೆಯ ಕಾರಣಕ್ಕೆ ಬನವಾಸಿ ಬಳಗದ ಪರವಾಗಿ ನಾನು ಗಿರೀಶಬಟ್ಟರಲ್ಲಿ ಕ್ಶಮೆ ಕೇಳಿಕೊಳ್ಳುತ್ತ, ಎರಡನೆಯ ಕಾರಣದಿಂದ ಪ್ರೇರಿತರಾಗಿ ಅವರು ತಮ್ಮ ೪/೪/೨೦೧೧ರ ಬರಹದಲ್ಲಿ ಅದೇ ಹಳೆಯ ವಾದವನ್ನು ಮಂಡಿಸಿರುವುದರಿಂದ ಅದಕ್ಕೆ ಇಲ್ಲಿ ಮರುವುತ್ತರ.

ಮತ್ತಷ್ಟು ಓದು »