ವಿಷಯದ ವಿವರಗಳಿಗೆ ದಾಟಿರಿ

Archive for

7
ಏಪ್ರಿಲ್

ರಾಜು ಪ್ರಿಯಾಂಕಳಾಗಿ ಬದಲಾದ ರೀತಿ…!

-ನಾಗರಾಜ್, ಬೆಂಗಳೂರು

ಆರ್. ಜೆ. ಪ್ರಿಯಾಂಕಳ ಸಾಧನೆ

ನಮಸ್ಕಾರ ಕೇಳುಗರೇ ನೀವು ಕೇಳ್ತಾ ಇದ್ದೀರಾ ೯೦.೪ ಕಂಪನಾಂಕಗಳಲ್ಲಿ ರೇಡಿಯೊ ಆಕ್ಟೀವ್. ಇದೇನಪ್ಪ ನ್ಯೂಸ್ ಲೆಟರ್‌ನಲ್ಲಿ ರೇಡಿಯೋ ಸ್ಟೈಲ್ ಅಂತಾ ಇದ್ದೀರಾ ಇಲ್ಲ ರೀ ಇದು ನಮ್ಮ ನಿಮ್ಮೆಲ್ಲರ ನೆಚ್ಚಿನ ಹುಡುಗಿ ರೇಡಿಯೋ ಜಾಕಿ ಪ್ರಿಯಾಂಕ ಸ್ಟೈಲ್. ಇದ್ಯಾರು ಪ್ರಿಯಾಂಕ ಅಂತ ಯೋಚಿಸ್ತಾ ಇದ್ದಿರಾ ? ಅವರೇ ರೀ ನೆನ್ನೆ ಮೊನ್ನೆ ತನಕ ಲೈಂಕಿಕ ವೃತ್ತಿಯನ್ನು ಮಾಡುತ್ತಿದ್ದ ಟ್ರಾನ್ಸ್ ಜೆಂಡರ್ ಪ್ರಿಯಾಂಕ.

ರಾಜು ಪ್ರಿಯಾಂಕಳಾಗಿ ಬದಲಾದ ರೀತಿ
ಪ್ರಿಯಾಂಕಳ ಮೊದಲ ಹೆಸರು ರಾಜು ಓದಿದ್ದು ೯ನೇ ತರಗತಿ ಮಾತ್ರ ತಾನು ೯ನೇ ತರಗತಿಯಲ್ಲಿ ವಿದ್ಯಾಬ್ಯಾಸ ಮಾಡ್ತಾ ಇರುವಾಗ ಎಲ್ಲರಂತೆ ತನ್ನಲ್ಲಿ ಅನೇಕ ಬದಲಾವಣೆಗಳು ಆಗತೊಡಗಿದವು ತನಗೆ ಹುಡುಗಿಯ ಆವಭಾವ ಉಂಟಾಗುತ್ತಿತ್ತು. ಬೆರಳುಗಳಿಗೆ ನೈಲ್ ಪಾಲೀಷ್ ಹಾಕಿಕೊಳ್ಳುವುದು ಲಿಪ್‌ಸ್ಟೀಕ್ ಹಚ್ಚಿಕೊಳ್ಳಬೇಕು ಹೀಗೆ ಅನೇಕ ರೀತಿಯಾಗಿ ಹುಡುಗಿಯರ ಥರಾ ಮೇಕಪ್ ಮಾಡಿಕೊಳ್ಳತೊಡಗಿದ ಜೊತೆಗೆ ತನ್ನ ಕೈಲಿ ಹುಡುಗರು ಮಾಡುವ ಸಾಮಾನ್ಯ ಕೆಲಸಗಳನ್ನು ಮಾಡುವುದು ಕಷ್ಟವೆನಿಸಿತು. ಅದೇ ರಂಗೋಲಿ ಹಾಕು, ಪಾತ್ರೆ ತೊಳಿ, ಮನೆ ಒರೆಸು,  ಬಟ್ಟೆ ಒಗಿ ಅಂದ್ರೆ ಎಲ್ಲಿಲ್ಲದ ಸಂತೋಷ. ಹೀಗೆ ರಾಜುವಿನಲ್ಲಿನ ಬದಲಾವಣೆಗಳನ್ನು ಕಂಡ ಸ್ನೇಹಿತರು ಹಿಯಾಳಿಸತೊಡಗಿದರು, ಶಿಕ್ಷಕರು ಸಹ ಕೀಳಾಗಿ ಕಂಡರು ಅಂತೂ ಇಂತು ೯ನೇ ತರಗತಿಯಲ್ಲಿ ಓದುತ್ತಿದ್ದ ರಾಜು ತನ್ನ ಪೋಷಕರ ಬಳಿ ತನ್ನಲ್ಲಾಗುತ್ತಿರುವ ಬದಲಾವಣೆಗಳು, ಆಸೆಗಳು ಎಲ್ಲವನ್ನೂ ಎಲೆ ಎಲೆಯಾಗಿ ಬಿಚ್ಚಿಟ್ಟ ಆದ್ರೆ ಇದಕ್ಕೆ ಪೋಷಕರ ಬೆಂಬಲ ಸಿಗಲಿಲ್ಲ. ಇದನ್ನು ಅರಿತ ೧೪ ವರ್ಷದ ರಾಜು ೯ನೇ ತರಗತಿಗೆ ಮದ್ಯದಲ್ಲೇ ತಿಲಾಂಜಲಿ ಆಡಿ ಮನೆ ಬಿಟ್ಟು ತನ್ನದೇ ಪ್ರಪಂಚಕ್ಕೆ ಓಡಿ ಹೋದ ಮತ್ತಷ್ಟು ಓದು »

7
ಏಪ್ರಿಲ್

ಅಫ್ರಿದಿಯ ಬೊಗಳುವಿಕೆ ಹಾಗೂ ನಮ್ಮ ತಿಕ್ಕಲುತನಗಳು..

– ಉಮೇಶ್ ದೇಸಾಯಿ

“ಸಮಾ” ಎನ್ನುವ ನ್ಯೂಸ್ ಚಾನೆಲ್ ನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸುತ್ತ ಅಫ್ರಿದಿ ಅಂದ


“”In my opinion, if I have to tell the truth, they (Indians) will never have hearts like Muslims and Pakistanis. I don’t think they have the large and clean hearts that Allah has given us,”

ಅವನ ಮಾತುಗಳಲ್ಲಿ ಸತ್ಯಇದೆಯೋ ಇಲ್ಲವೋ ಇಲ್ಲಿರುವ ಮುಸ್ಲಿಮ್ ರು ಹೇಳಬೇಕು. ಇದು ಸೋತವನ ಹತಾಶ ನುಡಿಯೋ ಅಥವಾ   ಮನದಲ್ಲಿ ಮಥಿಸಿ ಮಥಿಸಿ ಕಾರಿದ ವಿಷವೋ ಗೊತ್ತಿಲ್ಲ. ಒಂದೇ ಮಾತಿನಲ್ಲಿ ಭಾರತವನ್ನು ಇಬ್ಭಾಗ ಮಾಡಿದ್ದಾನೆ. ಅಲ್ಲಾಹು ಕೊಟ್ಟ ದೇಣಿಗೆ ಹೃದಯ ಅದು ಭಾರತೀಯರಲ್ಲಿಲ್ಲ ಇದು ಅವನ ಅಂಬೋಣ.

ಈ ಮಾತಿಗೆ ಆಗಲೇ ಅಲ್ಲಿಯ ಬೋರ್ಡು ಪ್ರತಿಕ್ರಿಯಿಸಿದೆ.ಅದು ಅವನ ವ್ಯಕ್ತಿಗತ ಪ್ರತಿಕ್ರಿಯೆ ಎಂದು ತಿಪ್ಪೆ ಸಾರಿಸಿದೆ.ಇಲ್ಲಿಯ ಮುಸ್ಲಿಂ ಬೋರ್ಡು ಅದನ್ನು ಖಂಡಿಸಿದೆ. ಅದು ತಿಕ್ಕಲುತನ ಎಂದಿದೆ.

ಮತ್ತಷ್ಟು ಓದು »