ಕನ್ನಡ ಆಡಳಿತ ಭಾಷೆ ಯಾಕಾಗಿಲ್ಲ ಗೊತ್ತೆ!?
– ವಸಂತ್ ಶೆಟ್ಟಿ
ಕನ್ನಡ ನಾಡು ಏಕೀಕರಣಗೊಂಡು ದಶಕಗಳೇ ಕಳೆದರೂ ಕನ್ನಡ ಎಲ್ಲ ಹಂತದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಂಡಿಲ್ಲ ಅನ್ನುವ ಕೂಗು ನಾವೆಲ್ಲರೂ ಕೇಳಿಯೇ ಇರುತ್ತೇವೆ. ಇದಕ್ಕೆ ಸರ್ಕಾರದ ಇಚ್ಛಾಶಕ್ತಿಯ ಕೊರತೆಯೇ ಕಾರಣ ಎಂದೂ ಕೇಳಿರುತ್ತೇವೆ. ಭಾಷಾ ವಿಜ್ಞಾನಿ ಕೆ.ವಿ.ನಾರಾಯಣ ಅವರ ಕನ್ನಡ ಜಗತ್ತು: ಅರ್ಧ ಶತಮಾನ ಅನ್ನುವ ಹೊತ್ತಗೆ ಓದುತ್ತಾ ಇದ್ದೆ. ಅಲ್ಲಿ ಈ ಬಗ್ಗೆ ಅವರು ಕೊಡುವ ವಿವರಣೆ ಒಂದು ರೀತಿಯಲ್ಲಿ ಬೇರೆಯಾಗಿದೆ ಅನ್ನಬಹುದು. ಸರ್ಕಾರದ ಹೆಚ್ಚಿನ ಪ್ರಯತ್ನ (ಬಾಯಿ ಮಾತಲ್ಲಿ ಅಂತ ಬೇಕಾದ್ರೂ ಅಂದುಕೊಳ್ಳೊಣ 🙂 )ದ ನಂತರವೂ ಆಡಳಿತದಲ್ಲಿ ಕನ್ನಡ ಬಳಕೆ ಒಂದು ರೀತಿಯಲ್ಲಿ ಪಿರಮಿಡ್ ನಂತೆ ನಮಗೆ ಗೋಚರಿಸುತ್ತೆ. ಕೆಳ ಹಂತದಲ್ಲಿ ಕನ್ನಡ ವ್ಯಾಪಕವಾಗಿ ಬಳಕೆಯಾದರೆ, ಮೇಲೆ ಮೇಲೆ ಹೋದಂತೆ ಅದರ ಪ್ರಮಾಣ ಕಡಿಮೆಯಾಗುತ್ತ ಹೋಗುತ್ತದೆ. ಹಾಗಿದ್ದರೆ ಆಡಳಿತದಲ್ಲಿ ಕನ್ನಡದ ಬಳಕೆ ಅಂದುಕೊಂಡ ಮಟ್ಟದಲ್ಲಿ ಗೆಲುವು ಪಡೆಯದಿರಲು ಕಾರಣವೇನು ಎಂದು ಅವರು ಕೊಟ್ಟ ವಿವರಣೆಯನ್ನು ಈ ಕೆಳಗೆ ಕೊಟ್ಟಿರುವೆ.
ಈ ಅಪಯಶಸ್ಸನ್ನು ಎರಡು ದಿಕ್ಕಿನಿಂದ ವಿಶ್ಲೇಷಿಸಬೇಕಾದ ಅಗತ್ಯವಿದೆ. ಕಾರ್ಯಕ್ರಮ ಯಶಸ್ಸು ಪಡೆಯದಿರಲು ಅದರ ಹಿಂದಿನ ಯೋಜನಾ ತಂತ್ರಗಳಲ್ಲಿ ಕೊರತೆ ಇರುತ್ತದೆ. ಅಥವಾ ಅನುಷ್ಠಾನದ ಹಂತದಲ್ಲಿ ಹಲವು ಎಡರು ತೊಡರುಗಳಿರಬೇಕು. ಈ ದಿಕ್ಕಿನಿಂದ ನೋಡಿದಾಗ ಕನ್ನಡ ಅನುಷ್ಠಾನಕ್ಕೆ ಬೇಕಾದ ಭಾಷಾನೀತಿ ಮತ್ತು ಯೋಜನೆಗಳು ರಾಜ್ಯ ಸರ್ಕಾರಕ್ಕೆ ಇಲ್ಲವೆಂಬ ನಿರ್ಣಯಕ್ಕೆ ಬರುವುದು ಸಾಧ್ಯ. ಆದರೆ ಇದನ್ನು ಇನ್ನೊಂದು ದಿಕ್ಕಿನಲ್ಲಿ ನೋಡಿದಾಗ ಬೇರೆಯ ಸಾಧ್ಯತೆ ಗೋಚರಿಸುತ್ತದೆ.
ಹಸಿರುಕಾನನದ ಮಗಳೀಕೆ ಗೌರಾದೇವಿ…..
– ಚಿತ್ರ ಸಂತೋಷ್
ಉತ್ತರ ಖಾಂಡದ ರೇನಿ ಗ್ರಾಮದಲ್ಲಿ ಮರಗಳನ್ನು ಕಡಿಯಲು ಬಂದ ಅಧಿಕಾರಿಗಳ ವಿರುದ್ಧ ಬಂಡೆದ್ದವಳು ಗೌರಾದೇವಿ. ಬುಡಕಟ್ಟು ಜನರಿಗೆ ದಟ್ಟಾರಣ್ಯಗಳೇ ತವರು. ಕಾಡಿಗೂ-ನಮಗೂ ಇರುವುದು ಅಮ್ಮ-ಮಕ್ಕಳ ಸಂಬಂಧ.ಬದುಕಿದರೆ ನಮಗೆ ಆಸರೆ ನೀಡಿದ ಈ ಹಸಿರು ಕಾಡುಗಳಿಗಾಗಿ ಬದುಕಿ …ಎಂದು ಹಳ್ಳಿ ಮನೆಗಳ ಜಗುಲಿಯಲ್ಲಿ ಕುಳಿತು ಜಾಗೃತಿಯ ಕಹಳೆ ವೊಳಗಿಸಿದವಳು ಇವಳೇ ಗೌರಾದೇವಿ. ದೇಶದ್ಯಾಂತ ಪರಿಸರ ಕ್ರಾಂತಿ ಮಾಡಿದ ಚಿಪ್ಕೋ ಚಳವಳಿನ್ನು ಹುಟ್ಟು ಹಾಕಿದ್ದೇ ಇವಳು. ಇಂಥ ಗೌರಾದೇವಿಯನ್ನು ಗೌರವದಿಂದ ನೆನೆಯುವ ಕೆಲಸವನ್ನು ನಾವು ಮಾಡಬೇಕಿದೆ.
“ಸಹೋದರರೇ ಈ ಅರಣ್ಯ ಪ್ರದೇಶ ನಮ್ಮ ಜೀವಮೂಲ. ನಮ್ಮ ಹುಟ್ಟಿನಿಂದ ಸಾವಿನ ತನಕದ ಜೀವನ ಬಂಡಿಗೆ ಸಾಥ್ ನೀಡುವುದು ಇದೇ ಹಸಿರು ಕಾನನ. ಈ ‘ರಮೆಯೇ ನಮ್ಮಮ್ಮ. ನೀವು ನಿಮ್ಮ ಹರಿತವಾದ ಗರಗಸವನ್ನು ನಮ್ಮಮ್ಮನ ಕರುಳಿಗೆ ಇಡುವ ವೊದಲು ನನ್ನ ಎದೆಗೆ ಹಿಡಿ”
ಬಹುಶಃ ಚಿಪ್ಕೋ ಚಳವಳಿ ಹುಟ್ಟುವ ವೊದಲು ಓರ್ವ ಬುಡಕಟ್ಟು ಮಹಿಳೆ ಉತ್ತರ ಖಾಂಡದ ಆ ಬೃಹತ್ ಅರಣ್ಯದಲ್ಲಿ ಈ ರೀತಿ ಮರಗಳನ್ನು ತಬ್ಬಿಕೊಂಡು ಸರ್ಕಾರದ ಅಕಾರಿಗಳ ಎದುರು ಈ ರೀತಿ ಅಳಲು ತೋಡಿಕೊಂಡಿದ್ದು ಬಹಳಷ್ಟು ಜನರಿಗೆ ನೆನಪು ಇರಲಿಕ್ಕಿಲ್ಲ. ಚಿಪ್ಕೋ ಚಳವಳಿ ಕುರಿತು ಮಾತೆತ್ತಿದ್ದರೆ ತಕ್ಷಣಕ್ಕೆ ನೆನಪಿಗೆ ಬರುವುದು ಸುಂದರ್ ಲಾಲ್ ಬಹುಗುಣ ಎಂಬ ಮಹಾನ್ ವ್ಯಕ್ತಿ. ಆದರೆ, ಇವರಿಗಿಂತಲೂ ವೊದಲು ಅಲ್ಲಿ ಮಹಿಳೆಯೊಬ್ಬಳ ದನಿಯಿತ್ತು, ದೇಶದಾದ್ಯಂತ ಬೃಹತ್ ಪರಿಸರ ಕ್ರಾಂತಿಗೆ ಮುನ್ನುಡಿಯಾದ ಆ ಚಳವಳಿಯ ಹಿಂದೆ ಅನಕ್ಷರಸ್ಥೆ ಮಹಿಳೆಯ ಶ್ರಮ ಇತ್ತು, ಕಣ್ಣೀರಿತ್ತು, ಜಾಗೃತಿಯ ಕಹಳೆಯಿತ್ತು.
ಅವಳ ಹೆಸರು ಗೌರಾದೇವಿ.