ಸೀಟ್ ಬೇಕು ಆದ್ರೆ ರಾಜ್ಯ ಬೇಡಾ….
– ಚೇತನ್ ಜೀರಾಳ್
ಡಾ. ಬಿ. ಆರ್. ಅಂಬೇಡ್ಕರ್ ಅವರ ಜನುಮ ದಿನದಂದು ಒಂದು ಸೋಜಿಗದ ವಿಷಯ ಹೊರಬಿದ್ದಿದೆ. ಪತ್ರಿಕೆಗಳಲ್ಲಿ ಇದರ ಬಗ್ಗೆ ವರದಿಯಾದರು ಸಹ, ಇದನ್ನ ಪತ್ರಿಕೆಗಳು ಗಂಭೀರವಾಗಿ ಪರಿಗಣಿಸಿದಂತೆ ಕಾಣಲಿಲ್ಲ. ವಿಷಯ ಏನಪ್ಪ ಅಂದರೆ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ ಸಿಂಗ್ ಅವರು, ಸದ್ಯಕ್ಕೆ ಅಸ್ಸಾಂ ರಾಜ್ಯದಲ್ಲಿ ನೆಲೆಸುತ್ತಿದ್ದಾರೆ ಅನ್ನೋದನ್ನ ದಾಖಲೆಗಳು ಹೇಳುತ್ತಿವೆ. ಮನಮೋಹನ್ ಸಿಂಗ್ ಹಾಗೂ ಅವರ ಪತ್ನಿ ದಿಸ್ಪುರ್ ಕ್ಷೇತ್ರದ ಮತದಾರರಾಗಿದ್ದು, ಈ ಸಾರಿಯ ಚುನಾವಣೆಯಲ್ಲಿ ಮತದಾನ ಮಾಡಿಲ್ಲ ಅಂತ ಪತ್ರಿಕೆಗಳಲ್ಲಿ ವರದಿಯಾಗಿದೆ ಹಾಗೂ ಇದನ್ನ ಆ ಕ್ಷೇತ್ರದ ಉಸ್ತುವಾರಿ ವಹಿಸಿದ್ದ ಚುನಾವಣಾ ಅಧಿಕಾರಿ ಸಹ ನಿಜವೆಂದು ಹೇಳಿದ್ದಾರೆ.
ಮುಖ್ಯವಾದ ವಿಷ್ಯ ಏನಪ್ಪಾ ಅಂದ್ರೆ ಡಾ. ಮನಮೋಹನ್ ಸಿಂಗ್, ಅಸ್ಸಾಂನಿಂದ ರಾಜ್ಯ ಸಭೆಗೆ ಆಯ್ಕೆಯಾಗಿ ಬಂದಿದ್ದಾರೆ ಹಾಗೂ ಹಿಂದೆಯೂ ಆಯ್ಕೆಯಾಗಿದ್ದರು. ಮತದಾನ ಪ್ರತಿಯೊಬ್ಬ ನಾಗರೀಕನ ಮೂಲ ಕರ್ತವ್ಯ ಎಂದು ನಮ್ಮ ಸಂವಿಧಾನದಲ್ಲಿ ಹೇಳಲಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಒಂದು ಜನಪ್ರಿಯ ಸರ್ಕಾರವನ್ನು ಆರಿಸಲು ಪ್ರತಿಯೊಬ್ಬ ಪ್ರಜೆಗೂ ನೀಡಲಾಗಿರುವ ಪವಿತ್ರ ಹಕ್ಕು ಅನ್ನೋದನ್ನ ನಮ್ಮ ದೇಶದ ಪ್ರಧಾನ ಮಂತ್ರಿಗಳು ಮರೆತು ಬಿಟ್ಟಿದ್ದಾರೆಯೇ?? ಪ್ರಜ್ಞಾವಂತ ಜನರು ಚುನಾವಣೆಯಿಂದ ವಿಮುಖರಾಗುತ್ತಿದ್ದಾರೆ ಎಂದು ಹೇಳುತ್ತಿರವ ಈ ಸಮಯದಲ್ಲಿ ಒಬ್ಬ ರಾಜಕಾರಣಿ ಹಾಗೂ ಜವಾಬ್ದಾರಿಯುತ ಸ್ಥಾನದಲ್ಲಿರುವ ಮನಮೋಹನ್ ಸಿಂಗ್ ಅವರಿಂದ ಇಂತಹ ನಡೆ ಸರಿಯಾದುದಲ್ಲ.
ಪೂರ್ವಾವಲೋಕನ : ಒಂದು ಸಂವಾದ
– CSLC
ಕನ್ನಡದ ವಿದ್ವಾಂಸ ಜಗತ್ತಿಲ್ಲಿ ನಮ್ಮ ಸಮಾಜದ ಮತ್ತು ಸಮಾಜವಿಜ್ಞಾನದ ಕುರಿತು ವೈಜ್ಞಾನಿಕವಾಗಿ ಹೆಚ್ಚು ಚರ್ಚೆಯಾಗಬೇಕೆಂಬ ಉದ್ದೇಶದಿಂದ ಬಾಲಗಂಗಾಧರರ ಹಲವಾರು ಆಂಗ್ಲ ಭಾಷೆಯ ಲೇಖನಗಳನ್ನು ಕನ್ನಡಕ್ಕೆ ಅನುವಾದಿಸಿಲಾದ ’ಪೂರ್ವಾವಲೋಕನ’ ಕೃತಿಯನ್ನು (ಅಭಿನವ ಪ್ರಕಾಶನ) ಇತ್ತೀಚೆಗೆ ಪ್ರಕಟಿಸಲಾಗಿದೆ. ಈ ಪುಸ್ತಕದಲ್ಲಿರುವ ಕೆಲವಾರು ಲೇಖನಗಳ ಆಧಾರದ ಮೇಲೆ “ಪೂರ್ವಾವಲೋಕನ : ಒಂದು ಸಂವಾದ” ಒಂದು ದಿನ ಕಾರ್ಯಾಗಾರವನ್ನು ಇದೇ ತಿಂಗಳ ೨೪ ರಂದು ಸರ್ಕಾರಿ ಕಲಾ ಕಾಲೇಜು, ಕೆ.ಆರ್. ಸರ್ಕಲ್ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.
ಡಬ್ಬಿಂಗ್ ಬೇಕು/ಬೇಡ ಅನ್ನೋದನ್ನ ಪ್ರೇಕ್ಷಕ ನಿರ್ಧಾರ ಮಾಡ್ಲಿ
ಮನೋರಂಜನೆ ಎನ್ನೋದು ಎಲ್ಲರ ಹಕ್ಕು, ಒಬ್ಬ ವ್ಯಕ್ತಿ ಮನೊರಂಜನೆಯನ್ನು ತನ್ನ ಭಾಷೆಯಲ್ಲೆ ಪಡೆಯುವುದು ಕೂಡ ಆ ವ್ಯಕ್ತಿಯ ಹಕ್ಕೂ ಕೂಡ. ಇದನ್ನ ತಡೆಯಲು ಯಾವುದೇ ಕಾನೂನು ಮುಂದೆಬರುವುದಿಲ್ಲ. ಇದಕ್ಕಾಗಿಯೇ ಇರಬೇಕು ಇಂದಿಗೂ ಕನ್ನಡಕ್ಕೆ ಡಬ್ ಮಾಡಬಾರದು ಅನ್ನೋ ಕಾನೂನು ಇಲ್ಲ.
ಚನ್ನೆಮಣೆ..
– ಕಾಂತಿ ಹೆಗ್ಡೆ
ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು. ಮತ್ತೆ ಖಾಲಿ ಮನೆ, ಒಂದು, ಎರಡು, ಮೂರು, ನಾಲ್ಕು… ಹೀಗೆ ಸಾಗುತ್ತದೆ ಚನ್ನೆಮನೆ ಆಟ. ಎರಡು ಆಟಗಾರರು, ಪ್ರತಿಯೊಬ್ಬರಿಗೂ ೭ ಮನೆಗಳು. ಪ್ರತೀ ಮನೆಗಳಲ್ಲೂ ೪ ಕಾಳುಗಳು. ಮೊದಲು ಆಟ ಶುರುಮಾಡಿದವ ತನ್ನ ೭ ಮನೆಗಳಲ್ಲಿ ಯಾವುದಾದರೊಂದು ಮನೆಯನ್ನು ಆಯ್ದುಕೊಂಡು ಅದರಲ್ಲಿರುವ ೪ ಕಾಳುಗಳನ್ನು ತನ್ನ ಹಾಗೂ ತನ್ನ ಸಹ ಆಟಗಾರನ ಮನೆಗಳಿಗೆ ಹಂಚುತ್ತಾ ಹೋಗಬೇಕು.
ಹೀಗೆ ಹಂಚುತ್ತಾ ಹೋಗುವಾಗ ಮತ್ತೆ ೪ ಕಾಳುಗಳು ಒಟ್ಟುಗೂಡಿದರೆ ಮನೆಯಲ್ಲಿ ಕರು ಹಾಕಿತೆಂದೂ, ಆ ಕರು ಮನೆಯ ಯಜಮಾನನ (ಆ ೭ ಮನೆಯ ಆಟಗಾರ ಮನೆ ಒಡೆಯ) ಸ್ವತ್ತೆಂದೂ, ಅವನು ಅದನ್ನು ತೆಗೆದಿರಿಸಿಕೊಳ್ಳುತ್ತಾನೆ. ಒಬ್ಬನ ಆಟ ಮುಗಿಯುವುದು ಆತನ ಕೈಯಲ್ಲಿರುವ ಕಾಳುಗಳು ಖಾಲಿಯಾಗಿ, ಮುಂದೆ ಕಾಳಿರದ ಬರಿಯ ಖಾಲಿ ಮನೆಗಳು ಸಿಕ್ಕಾಗ….
ಹೀಗೆ ಚದುರಿಸಿ ಹಂಚುವ, ಕೂಡಿಸುವ ಆಟದಲ್ಲಿ ಯಾರಾದರೊಬ್ಬರು ಗೆಲ್ಲುತಾರೆ(ಹೆಚ್ಹು ಕಾಳನ್ನು ಕೂಡಿ ಹಾಕಿದವನು).
ಬದಲಾಗುತ್ತಿರುವ ಕಾಲಘಟ್ಟದಲ್ಲಿ ಬಹುಷಃ ಈ ರೀತಿಯ ಆಟಗಳು ಕಣ್ಮರೆಯಾಗುತ್ತಿವೆ. ಮೊದಲೆಲ್ಲ ಬೇಸಿಗೆ ಬಂತೆಂದರೆ ಅಮ್ಮ “ಬಿಸ್ಲಲ್ಲಿ ಆಡಕ್ಕೆ ಹೋಗಡ, ಮನೆ ಒಳಗೆ ಕೂತ್ಗಂಡು ಎಂತಾರು ಆಡು” ಎಂದು ನನ್ನ ಆಡುವ ಬಯಕೆಗೆ ಕಡಿವಾಣ ಹಾಕುತ್ತಿದ್ದರು.
ಕನ್ನಡ ಆಡಳಿತ ಭಾಷೆ ಯಾಕಾಗಿಲ್ಲ ಗೊತ್ತೆ!?
– ವಸಂತ್ ಶೆಟ್ಟಿ
ಕನ್ನಡ ನಾಡು ಏಕೀಕರಣಗೊಂಡು ದಶಕಗಳೇ ಕಳೆದರೂ ಕನ್ನಡ ಎಲ್ಲ ಹಂತದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಂಡಿಲ್ಲ ಅನ್ನುವ ಕೂಗು ನಾವೆಲ್ಲರೂ ಕೇಳಿಯೇ ಇರುತ್ತೇವೆ. ಇದಕ್ಕೆ ಸರ್ಕಾರದ ಇಚ್ಛಾಶಕ್ತಿಯ ಕೊರತೆಯೇ ಕಾರಣ ಎಂದೂ ಕೇಳಿರುತ್ತೇವೆ. ಭಾಷಾ ವಿಜ್ಞಾನಿ ಕೆ.ವಿ.ನಾರಾಯಣ ಅವರ ಕನ್ನಡ ಜಗತ್ತು: ಅರ್ಧ ಶತಮಾನ ಅನ್ನುವ ಹೊತ್ತಗೆ ಓದುತ್ತಾ ಇದ್ದೆ. ಅಲ್ಲಿ ಈ ಬಗ್ಗೆ ಅವರು ಕೊಡುವ ವಿವರಣೆ ಒಂದು ರೀತಿಯಲ್ಲಿ ಬೇರೆಯಾಗಿದೆ ಅನ್ನಬಹುದು. ಸರ್ಕಾರದ ಹೆಚ್ಚಿನ ಪ್ರಯತ್ನ (ಬಾಯಿ ಮಾತಲ್ಲಿ ಅಂತ ಬೇಕಾದ್ರೂ ಅಂದುಕೊಳ್ಳೊಣ 🙂 )ದ ನಂತರವೂ ಆಡಳಿತದಲ್ಲಿ ಕನ್ನಡ ಬಳಕೆ ಒಂದು ರೀತಿಯಲ್ಲಿ ಪಿರಮಿಡ್ ನಂತೆ ನಮಗೆ ಗೋಚರಿಸುತ್ತೆ. ಕೆಳ ಹಂತದಲ್ಲಿ ಕನ್ನಡ ವ್ಯಾಪಕವಾಗಿ ಬಳಕೆಯಾದರೆ, ಮೇಲೆ ಮೇಲೆ ಹೋದಂತೆ ಅದರ ಪ್ರಮಾಣ ಕಡಿಮೆಯಾಗುತ್ತ ಹೋಗುತ್ತದೆ. ಹಾಗಿದ್ದರೆ ಆಡಳಿತದಲ್ಲಿ ಕನ್ನಡದ ಬಳಕೆ ಅಂದುಕೊಂಡ ಮಟ್ಟದಲ್ಲಿ ಗೆಲುವು ಪಡೆಯದಿರಲು ಕಾರಣವೇನು ಎಂದು ಅವರು ಕೊಟ್ಟ ವಿವರಣೆಯನ್ನು ಈ ಕೆಳಗೆ ಕೊಟ್ಟಿರುವೆ.
ಈ ಅಪಯಶಸ್ಸನ್ನು ಎರಡು ದಿಕ್ಕಿನಿಂದ ವಿಶ್ಲೇಷಿಸಬೇಕಾದ ಅಗತ್ಯವಿದೆ. ಕಾರ್ಯಕ್ರಮ ಯಶಸ್ಸು ಪಡೆಯದಿರಲು ಅದರ ಹಿಂದಿನ ಯೋಜನಾ ತಂತ್ರಗಳಲ್ಲಿ ಕೊರತೆ ಇರುತ್ತದೆ. ಅಥವಾ ಅನುಷ್ಠಾನದ ಹಂತದಲ್ಲಿ ಹಲವು ಎಡರು ತೊಡರುಗಳಿರಬೇಕು. ಈ ದಿಕ್ಕಿನಿಂದ ನೋಡಿದಾಗ ಕನ್ನಡ ಅನುಷ್ಠಾನಕ್ಕೆ ಬೇಕಾದ ಭಾಷಾನೀತಿ ಮತ್ತು ಯೋಜನೆಗಳು ರಾಜ್ಯ ಸರ್ಕಾರಕ್ಕೆ ಇಲ್ಲವೆಂಬ ನಿರ್ಣಯಕ್ಕೆ ಬರುವುದು ಸಾಧ್ಯ. ಆದರೆ ಇದನ್ನು ಇನ್ನೊಂದು ದಿಕ್ಕಿನಲ್ಲಿ ನೋಡಿದಾಗ ಬೇರೆಯ ಸಾಧ್ಯತೆ ಗೋಚರಿಸುತ್ತದೆ.
ಹಸಿರುಕಾನನದ ಮಗಳೀಕೆ ಗೌರಾದೇವಿ…..
– ಚಿತ್ರ ಸಂತೋಷ್
ಉತ್ತರ ಖಾಂಡದ ರೇನಿ ಗ್ರಾಮದಲ್ಲಿ ಮರಗಳನ್ನು ಕಡಿಯಲು ಬಂದ ಅಧಿಕಾರಿಗಳ ವಿರುದ್ಧ ಬಂಡೆದ್ದವಳು ಗೌರಾದೇವಿ. ಬುಡಕಟ್ಟು ಜನರಿಗೆ ದಟ್ಟಾರಣ್ಯಗಳೇ ತವರು. ಕಾಡಿಗೂ-ನಮಗೂ ಇರುವುದು ಅಮ್ಮ-ಮಕ್ಕಳ ಸಂಬಂಧ.ಬದುಕಿದರೆ ನಮಗೆ ಆಸರೆ ನೀಡಿದ ಈ ಹಸಿರು ಕಾಡುಗಳಿಗಾಗಿ ಬದುಕಿ …ಎಂದು ಹಳ್ಳಿ ಮನೆಗಳ ಜಗುಲಿಯಲ್ಲಿ ಕುಳಿತು ಜಾಗೃತಿಯ ಕಹಳೆ ವೊಳಗಿಸಿದವಳು ಇವಳೇ ಗೌರಾದೇವಿ. ದೇಶದ್ಯಾಂತ ಪರಿಸರ ಕ್ರಾಂತಿ ಮಾಡಿದ ಚಿಪ್ಕೋ ಚಳವಳಿನ್ನು ಹುಟ್ಟು ಹಾಕಿದ್ದೇ ಇವಳು. ಇಂಥ ಗೌರಾದೇವಿಯನ್ನು ಗೌರವದಿಂದ ನೆನೆಯುವ ಕೆಲಸವನ್ನು ನಾವು ಮಾಡಬೇಕಿದೆ.
“ಸಹೋದರರೇ ಈ ಅರಣ್ಯ ಪ್ರದೇಶ ನಮ್ಮ ಜೀವಮೂಲ. ನಮ್ಮ ಹುಟ್ಟಿನಿಂದ ಸಾವಿನ ತನಕದ ಜೀವನ ಬಂಡಿಗೆ ಸಾಥ್ ನೀಡುವುದು ಇದೇ ಹಸಿರು ಕಾನನ. ಈ ‘ರಮೆಯೇ ನಮ್ಮಮ್ಮ. ನೀವು ನಿಮ್ಮ ಹರಿತವಾದ ಗರಗಸವನ್ನು ನಮ್ಮಮ್ಮನ ಕರುಳಿಗೆ ಇಡುವ ವೊದಲು ನನ್ನ ಎದೆಗೆ ಹಿಡಿ”
ಬಹುಶಃ ಚಿಪ್ಕೋ ಚಳವಳಿ ಹುಟ್ಟುವ ವೊದಲು ಓರ್ವ ಬುಡಕಟ್ಟು ಮಹಿಳೆ ಉತ್ತರ ಖಾಂಡದ ಆ ಬೃಹತ್ ಅರಣ್ಯದಲ್ಲಿ ಈ ರೀತಿ ಮರಗಳನ್ನು ತಬ್ಬಿಕೊಂಡು ಸರ್ಕಾರದ ಅಕಾರಿಗಳ ಎದುರು ಈ ರೀತಿ ಅಳಲು ತೋಡಿಕೊಂಡಿದ್ದು ಬಹಳಷ್ಟು ಜನರಿಗೆ ನೆನಪು ಇರಲಿಕ್ಕಿಲ್ಲ. ಚಿಪ್ಕೋ ಚಳವಳಿ ಕುರಿತು ಮಾತೆತ್ತಿದ್ದರೆ ತಕ್ಷಣಕ್ಕೆ ನೆನಪಿಗೆ ಬರುವುದು ಸುಂದರ್ ಲಾಲ್ ಬಹುಗುಣ ಎಂಬ ಮಹಾನ್ ವ್ಯಕ್ತಿ. ಆದರೆ, ಇವರಿಗಿಂತಲೂ ವೊದಲು ಅಲ್ಲಿ ಮಹಿಳೆಯೊಬ್ಬಳ ದನಿಯಿತ್ತು, ದೇಶದಾದ್ಯಂತ ಬೃಹತ್ ಪರಿಸರ ಕ್ರಾಂತಿಗೆ ಮುನ್ನುಡಿಯಾದ ಆ ಚಳವಳಿಯ ಹಿಂದೆ ಅನಕ್ಷರಸ್ಥೆ ಮಹಿಳೆಯ ಶ್ರಮ ಇತ್ತು, ಕಣ್ಣೀರಿತ್ತು, ಜಾಗೃತಿಯ ಕಹಳೆಯಿತ್ತು.
ಅವಳ ಹೆಸರು ಗೌರಾದೇವಿ.
ವೋಟ್ ಬ್ಯಾಂಕ್ ಭಾಷೆಯಾಗಲಿ ಕನ್ನಡ
– ರಾಕೇಶ್ ಶೆಟ್ಟಿ
ಪತ್ರಿಕೆಗಳಲ್ಲಿ ಆಗೀಗ ‘ಅನ್ನ ಕೊಡುವ ಭಾಷೆಯಾಗಲಿ ಕನ್ನಡ’ ಅನ್ನೋ ಕಳಕಳಿಯ ಲೇಖನಗಳು ಬರುತ್ತಲೇ ಇರುತ್ತವೆ.ಒಂದೆಡೆ ‘ಸರ್ವಂ ಇಂಗ್ಲೀಶ್ ಮಯಂ’ ಮತ್ತೊಂದೆಡೆ ‘ಏಕಮ್ ಭಾರತಂ ಹಿಂದಿಮಯಂ’ (ಈ ಮಂತ್ರ ಸರಿ ಇಲ್ಲ ಅಂತೆಲ್ಲ ಹೇಳ್ಬೆಡಿ 😉 ) ಅನ್ನೋ ಕೇಂದ್ರದ ನೀತಿಯ ನಡುವೆ ಕನ್ನಡ ‘ಅನ್ನ’ ಕೊಡುವ ಭಾಷೆಯಾಗುವುದು ಹೇಗೆ? ನನಗನ್ನಿಸುವ ಹಾಗೆ, ಈಗಿನ ಪರಿಸ್ಥಿತಿಯಲ್ಲಿ ಅನ್ನ ಕೊಡುವ ಭಾಷೆಯಾಗುವ ಶಕ್ತಿ ಬರಬೇಕೆಂದರೆ ಮೊದಲು ‘ವೋಟ್ ಕೊಡುವ ಭಾಷೆಯಾಗಬೇಕು ಕನ್ನಡ’.ಎಲ್ಲ ಪಕ್ಷಗಳು ಕುಣಿಯುವುದು ವೋಟಿಗಾಗಿ,ಪುಡಿ ವೋಟಿಗಾಗಿ ಅನ್ನೋ ಕಾಲವಿದು.ವೋಟಿಗಿರುವಷ್ಟು ಶಕ್ತಿ ಸದ್ಯಕ್ಕೆ ಯಾವುದಕ್ಕಿದೆ ನೀವೇ ಹೇಳಿ?
ಕೆಲವರು ನನ್ನ ಮಾತನ್ನು ಒಪ್ಪಬಹುದು ಇನ್ನ ಕೆಲವರು ಇದನ್ನ ನಿರಾಕರಿಸಬಹುದು. ನಿರಾಕರಿಸುವವರು ಭಾರತದ ರಾಜಕೀಯ ಇತಿಹಾಸವನ್ನೊಮ್ಮೆ ನೋಡುತ್ತಾ ಬನ್ನಿ.ಗಾಂಧೀಜಿ ಕಾಲದಿಂದ ಇಂದಿನವರೆಗೂ ನಮ್ಮಲ್ಲಿ ನಡೆಯುತ್ತಿರುವುದೇ ಓಲೈಕೆಯ ವೋಟ್ ಬ್ಯಾಂಕ್ ರಾಜಕಾರಣ ಅಲ್ವಾ?
ಸರ್ವಸಂಭವಾಂ
– ಜಯಂತ್ ರಾಮಚಾರ್
ನಾಹಂ ಕರ್ತಾ ಹರಿಃ ಕರ್ತಾ, ತತ್ ಪೂಜಾ ಕರ್ಮಚಾಖಿಲಂ I
ತಥಾಪಿ ಮತ್ ಕೃತಾ ಪೂಜಾ, ತತ್ ಪ್ರಸಾದೇನನಾನ್ಯಥಾ II
ತಾತ್ಪರ್ಯ: ನಾ ಮಾಡುಗನಲ್ಲ, ಹರಿಯೇ ಮಾಡುಗ, ನಾ ಮಾಡುವ ಎಲ್ಲವೂ ಅವನ ಪೂಜೆಯೇ I
ಇಷ್ಟಾಗಿಯೂ ನಾ ಮಾಡುವ ಪೂಜೆಯೆಲ್ಲವೂ ಕೂಡಾ ಅವನ ಪ್ರಸಾದವಲ್ಲದೆ ಮತ್ತೊಂದಲ್ಲ II
ಈ ಸಾಲುಗಳು “ಸರ್ವಸಂಭಾವಾಂ” ಎಂಬ ಪುಸ್ತಕದಿಂದ ಆರಿಸಿಕೊಂಡದ್ದು. ಈ ಪುಸ್ತಕ ತೆಲುಗಿನಲ್ಲಿದ್ದು ಇದರ ಲೇಖಕರು ಶ್ರೀ ಪತ್ರಿ ವೆಂಕಟ ರಾಮಕೃಷ್ಣ ಪ್ರಸಾದ್ (ಪಿ.ವಿ.ಆರ್.ಕೆ.ಪ್ರಸಾದ್). ಆಂಧ್ರಪ್ರದೇಶದ ಗುಂಟೂರಿನ ಸಂಪ್ರದಾಯಸ್ಥ ಮಧ್ವ ಕುಟುಂಬದಲ್ಲಿ ಜನಿಸಿದ ಇವರು ಐ.ಎ.ಎಸ ಪದವಿಧರರು. ಆಂಧ್ರಪ್ರದೇಶದ ವಿವಿಧ ವಿಭಾಗಗಳಲ್ಲಿ ಕೆಲಸ ನಿರ್ವಹಿಸಿ ೧೯೭೮ ರಲ್ಲಿ ತಿರುಮಲ ತಿರುಪತಿ ದೇವಸ್ಥಾನದ E O (Executive Officer ) ಆಗಿ ಅಧಿಕಾರ ಕೈಗೆತ್ತಿಕೊಂಡರು. ೧೯೭೮ ರಿಂದ ೧೯೮೨ ರವರೆಗೆ ಇವರು ಅಧಿಕಾರದಲ್ಲಿದ್ದಾಗ ನಡೆದ ಅನುಭವಗಳ ಸಂಗ್ರಹವೇ ಈ “ಸರ್ವಸಂಭಾವಾಂ” ಪುಸ್ತಕ.
ಆ ನಾಲ್ಕು ವರ್ಷಗಳ ಅವಧಿಯಲ್ಲಿ ಇವರು ತಿರುಮಲ ತಿರುಪತಿ ದೇವಸ್ಥಾನದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಯಾವುದೇ ಒಳ್ಳೆಯ ಕೆಲಸ ನಡೆಯುವಾಗಲೂ ಏನಾದರೂ ಒಂದು ಅಡ್ಡಿ ಆತಂಕ ಇದ್ದೆ ಇರುತ್ತದೆ. ಆ ಅಡ್ಡಿ ಆತಂಕಗಳು ಹೇಗೆ ಶ್ರೀನಿವಾಸನ ದಯೆಯಿಂದ ದೂರವಾದವು ಎಂಬುದನ್ನು ವಿಸ್ತೃತವಾಗಿ ಉಲ್ಲೇಖಿಸಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ಅವರು ಮಾಡಿದ ಕೆಲಸಗಳೆಂದರೆ ಮೊದಲಿದ್ದ ಇರುಕುಮುರುಕು ಕ್ಯೂ ಪದ್ದತಿಯನ್ನು ಈಗಿರುವ Q Complex ಆಗಿ ಪರಿವರ್ತಿಸಿರುವುದು. ಸನ್ನಿಧಿ ಬೀದಿಯನ್ನು ವಿಶಾಲವಾಗಿ ಮಾಡಿದ್ದು, ಕಲ್ಯಾಣ ಕಟ್ಟೆ. ಸಾಮೂಹಿಕ ಅನ್ನದಾನ ಶಾಲೆ, ವಸತಿಗೃಹಗಳು, ಪದ್ಮಾವತಿ ವಸತಿಗೃಹ, ಪಾಪನಾಶಿನಿ ಆಣೆಕಟ್ಟು, ಇಷ್ಟೇ ಅಲ್ಲದೆ ದೇವರ ಸೇವೆಗಳಲ್ಲಿ, ದರ್ಶನದಲ್ಲಿ ಹಿಂದೆಂದು ಕಾಣದ ಮಾರ್ಪಾಡುಗಳನ್ನು ಅಭಿವೃದ್ಧಿಗಳನ್ನು ಯಶಸ್ವಿಯಾಗಿ ಮಾಡಿದ್ದು. ಆದರೆ ಇವಿಷ್ಟು ಕೆಲಸಗಳು ಅಂದುಕೊಂಡ ಮಾತ್ರದಲ್ಲಿ ಸಾಧಿಸಲಾಗಲಿಲ್ಲ.
ಗುಲ್ಬರ್ಗ ಜಿಲ್ಲೆ ಯಾವುದೇ ಕಲೆ/ಕಲಾವಿದರೂ ಇಲ್ಲದಂತಹಾ ಮರುಭೂಮಿಯೇ?
– ಅರುಣ್ ಜಾವಗಲ್
ಕಳೆದ ಕೆಲವು ದಿನಗಳಿಂದ ಕರ್ನಾಟಕ ಸರಕಾರ ಹಲವಾರು ಜಿಲ್ಲೆಗಳಲ್ಲಿ ಉತ್ಸವಗಳನ್ನ ನಡೆಸುತ್ತಿದೆ.ಈ ಕಾರ್ಯಕ್ರಮಗಳು ಕರ್ನಾಟಕದ ಜನರ ತೆರಿಗೆ ಹಣದಲ್ಲಿ ನಡೆಯುತ್ತವೆ. ಈ ಕಾರ್ಯಕ್ರಮಗಳಲ್ಲಿ ಮುಖ್ಯವಾಗಿ ಆಯಾ ಜಿಲ್ಲೆಯ ಮತ್ತು ನಮ್ಮ ನಾಡಿನ ಕಲಾವಿದರ ಕಾರ್ಯಕ್ರಮಗಳಿಗೆ ಅವಕಾಶವಿರಬೇಕು.ಆದರೆ ಆ ಪ್ರದೇಶದ ಮತ್ತು ನಮ್ಮ ನಾಡಿನ ಇತರೇ ಕಲಾವಿದರನ್ನ ಮರೆತಿರುವ ಸರಕಾರ ಹೊರ ರಾಜ್ಯದಿಂದ ಕಲಾವಿದರನ್ನ ಕರೆಸಿ ಉತ್ಸವಗಳನ್ನ ನಡೆಸುತ್ತಿದೆ.
ಕೆಲವು ದಿನಗಳ ಹಿಂದೆ ನಡೆದ ಬೀದರ್ ಉತ್ಸವದಲ್ಲಿ ಶೇಕಡಾ 90% ರಷ್ಟು ಕಾರ್ಯಕ್ರಮ ನಡೆಸಿಕೊಟ್ಟವರು ಬೀದರ್ ಜಿಲ್ಲೆಗಾಗಲೀ ಅಥವಾ ನಮ್ಮ ನಾಡಿಗೆ ಯಾವುದೇ ಸಂಭಂದವಿಲ್ಲದವರು.ಇದೀಗ ಇದೇ ತಿಂಗಳ 15 ರಿಂದ 17 ರ ವರೆಗೆ ಕರ್ನಾಟಕ ಸರಕಾರ ಗುಲ್ಬರ್ಗ ಉತ್ಸವವನ್ನ ಆಯೋಜಿಸಿದೆ.ಯಾವುದೇ ಅನುಮಾನವಿಲ್ಲದಂತೆ ಈ ಕಾರ್ಯಕ್ರಮಕ್ಕೂ ಸಹ ಪರಭಾಷಿಕರಿಗೆ ಬಹುಪರಾಕ್ ಹೇಳಲಾಗಿದೆ.





