ವಿಷಯದ ವಿವರಗಳಿಗೆ ದಾಟಿರಿ

Archive for

16
ಏಪ್ರಿಲ್

ಕನ್ನಡಕ್ಕೆ ಚಪ್ಪಲಿ ತೋರಿಸಿದವರು ಮಣ್ಣು ಮುಕ್ಕಲಿ…!

– ಜಯತೀರ್ಥ ನಾಡಗೌಡ, ವಿಜಾಪುರ

ಕನ್ನಡಕ್ಕೆ ಚಪ್ಪಲಿ ತೋರಿಸಿ ಕರ್ನಾಟಕದಲ್ಲೇ ಮೇಯರ್ ಆಗಲು ಸಾಧ್ಯವೇ! ಹೌದು ಇಂಥ ಘನಘೋರ ಕೃತ್ಯಗಳು ನಮ್ಮ ರಾಜ್ಯದಲ್ಲಿ ಮಾತ್ರ ಕಾಣ ಸಿಗುತ್ತವೆ. ಇತ್ತೀಚಿಗೆ ಬೆಳಗಾವಿಯಲ್ಲಿ ನಡೆದ ವಿಶ್ವಕನ್ನಡ ಸಮ್ಮೇಳನ, ನಡೆಸಕೂಡದು ಎಂದು ಅಡ್ಡಿಪಡಿಸಿ ಚಪ್ಪಲಿ ತೋರಿಸಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನ ನಿರ್ಲಜ್ಜ ಮಹಿಳೆ ಮಂದಾ ಬಾಳೆಕುಂದ್ರಿ ಬೆಳಗಾವಿಯ ಮೇಯರ್ ಆಗಿರುವುದು, ಎಲ್ಲ ಕನ್ನಡಿಗರು ತಮ್ಮ ಎಕ್ಕಡದಿಂದ ತಾವೇ ಹೊಡೆದುಕೊಂಡಂತೆ.

ಎಲ್ಲ ವರದಿ, ತೀರ್ಪುಗಳು ಬಂದು ಬೆಳಗಾವಿ ಕನ್ನಡದ ಅವಿಭಾಜ್ಯ ಅಂಗ ಅಂತ ಸಾಬೀತಾದರೂ, ಹಾಳು .ಈ.ಎಸ್ ನ ಕಾರ್ಯಕರ್ತರು ಪುಂಡಾಟಿಕೆ ಮಾಡುತ್ತಿರುವುದು ನಮ್ಮ ಆಳಿದ/ಆಳುವ ಘನಂದಾರಿ ಪಕ್ಷಗಳ ಕಾಣಿಕೆಯೇ ಸರಿ. ಕ.ರ.ವೇ ಸತತ ಪರಿಶ್ರಮದಿಂದ ಜಾಗ ಖಾಲಿ ಮಾಡಿದ್ದ ಶಿವಸೇನೆ, ಎಂಇಎಸ್ ನವರನ್ನು ಮತ್ತೆ ಬೆಳೆಯಲು ಬಿಟ್ಟು ಇಂಥ ರಾಜದ್ರೋಹಿಗಳೊಂದಿಗೆ ಚುನಾವಣ ಹೊಂದಾಣಿಕೆ ಮಾಡಲು ಕೂಡ ನಮ್ಮ ಕೆಲ ಧುರೀಣರು ಮನಸ್ಸು ಮಾಡಿದ್ದು ಎಲ್ಲರಿಗೂ ಗೊತ್ತಿದ್ದ ಸತ್ಯ.

ಮತ್ತಷ್ಟು ಓದು »

15
ಏಪ್ರಿಲ್

ಬೃಹತ್ ಬ್ರಹ್ಮಾಂಡದ ವಿರುದ್ಧ ಆಂದೋಲನದ ನೀಲನಕ್ಷೆ…

(ಪ್ರಳಯಾಂತಕ (ಪ್ರಳಯ’ಹಂತಕ’) ಟಿವಿ ಜ್ಯೋತಿಷಿಗಳ ವಿರುದ್ಧ ಸಂಪಾದಕೀಯ ತಂಡ ಹೊರಟು ನಿಂತಿದೆ.ಸಾಮಾಜಿಕ ಕಾಳಜಿಯುಳ್ಳ ಕೆಲಸಗಳಿಗೆ ಹೆಗಲು ಕೊಡಬೇಕಾದದ್ದು ನಮ್ಮ ಕರ್ತವ್ಯ.ಸಂಪಾದಕೀಯದ ಈ ಹೋರಾಟ ಹೆಚ್ಚು ಜನರಿಗೆ ತಲುಪಲಿ ಅನ್ನುವ ಉದ್ದೇಶದಿಂದ ಈ ಲೇಖನವನ್ನ ಇಲ್ಲಿ ಪ್ರಕಟಿಸುತಿದ್ದೇವೆ – ನಿಲುಮೆ)   
 
– ಸಂಪಾದಕೀಯ
 
ಎಲ್ಲ ಟಿವಿ ಚಾನಲ್‌ಗಳಲ್ಲೂ ಜ್ಯೋತಿಷಿಗಳ ಆರ್ಭಟ ನಿರಂತರವಾಗಿ ಸಾಗಿದೆ. ಪರಸ್ಪರ ಫೈಟಿಂಗಿಗೆ ಬಿದ್ದ ಹಾಗೆ ಜ್ಯೋತಿಷ್ಯ ಸಂಬಂಧಿ ಕಾರ್ಯಕ್ರಮಗಳನ್ನು ಟಿವಿ ವಾಹಿನಿಗಳು ಎಗ್ಗಿಲ್ಲದೆ ಪ್ರಸಾರ ಮಾಡುತ್ತಿವೆ. ಜೀ ಟಿವಿಯಲ್ಲಿ ಬರುವ ನರೇಂದ್ರ ಶರ್ಮರ ಅವಾಂತರಗಳ ಕುರಿತು ಈ ಹಿಂದೆ ಬರೆದಿದ್ದೆವು. ನೀವೂ ಸಹ ಪ್ರತಿಕ್ರಿಯಿಸಿದ್ದಿರಿ. ಈ ವರ್ಷ ಇಡೀ ಪ್ರಪಂಚ ಮುಳುಗಿ ಹೋಗುತ್ತದೆ ಎಂದು ಹೇಳಿದ ಈ ಮಹಾನುಭಾವ, ಯುಗಾದಿಯ ದಿನ ಇಡೀ ವರ್ಷದ ಭವಿಷ್ಯ ಯಾರಿಗೆ ಹೇಗೆ ಇದೆ ಎಂದು ಹೇಳುತ್ತಾರೆ. ಎರಡನ್ನೂ ನಾಚಿಕೆಯಿಲ್ಲದಂತೆ ಚಾನಲ್ ಪ್ರಸಾರ ಮಾಡುತ್ತದೆ. ಜಗತ್ತೇ ನಾಶವಾದ ಮೇಲೆ ವರ್ಷ ಭವಿಷ್ಯ ಯಾಕೆ ಒದರುತ್ತ ಕೂತಿದ್ದೀರಿ ಎಂದು ಚಾನಲ್ ನವರು ಪ್ರಶ್ನಿಸಲಿಲ್ಲ. ನೋಡುವ ವೀಕ್ಷಕರಿಗೂ ಅದು ಹೊಳೆಯಲಿಲ್ಲ.

ಮತ್ತಷ್ಟು ಓದು »

15
ಏಪ್ರಿಲ್

ದಯವಿಟ್ಟು ಗುದ್ದಲಿಪೂಜೆಗೆ ಬನ್ನಿ…

– ಕಿರಣ ಬಾಟ್ನಿ

’ನಿಲುಮೆ’ಯಲ್ಲಿ ಪ್ರಕಟವಾಗಿದ್ದ ಶ್ರೀ ಅಜಕ್ಕಳ ಗಿರೀಶಬಟ್ಟಕನ್ನಡಕ್ಕಿಂತ ತಮಿಳು ಯಾವುದರಲ್ಲಿ ಮುಂದಿದೆ? ಎಂಬ ಬರಹಕ್ಕೆ ಉತ್ತರವಾಗಿ ನಾನು ಬರೆದಿದ್ದ ಇಗೋ, ಇದರಲ್ಲಿ ಮುಂದಿದೆ ಎಂಬ ಬರಹಕ್ಕೆ ಹಲವರು ತಮ್ಮ ಅನಿಸಿಕೆಯನ್ನು ತಿಳಿಸಿ, ಅದರ ಬಗ್ಗೆ ’ನಿಲುಮೆ’ಯಲ್ಲಿ ಚರ್ಚೆಯಾಗಿರುವುದು ಮನಸ್ಸಿಗೆ ಮುದ ತಂದಿದೆ. ಕನ್ನಡದ ಸೊಲ್ಲರಿಮೆ ಮತ್ತು ನುಡಿಯರಿಮೆಗಳ ವಿಶಯ ಬಹಳ ಮುಕ್ಯವಾದುದು. ಹಾಗೆಯೇ, ಕನ್ನಡ-ಕನ್ನಡಿಗ-ಕರ್ನಾಟಕಗಳ ಬಗ್ಗೆ ಕಾಳಜಿಯುಳ್ಳವರು ಇದನ್ನು ಕುರಿತು ನೆಮ್ಮದಿಯ ಮನಸ್ಸಿನಿಂದ ಚಿಂತಿಸುವುದು ಕೂಡ ಬಹಳ ಮುಕ್ಯವಾದುದು. ಆದುದರಿಂದ ನನ್ನ ಬರಹಕ್ಕೆ ಬಂದ ಅನಿಸಿಕೆಗಳನ್ನು ನಿದಾನವಾಗಿ ಕುಳಿತು ಯೋಚಿಸಿ ಉತ್ತರಿಸಲು ಸಮಯವನ್ನು ಕೊಟ್ಟ ’ಒಡ-ಕಾಳಜಿಗ’ರಿಗೆ ದನ್ಯವಾದಗಳು. ಇಲ್ಲಿ ನಾನು ಮಂಡಿಸಿದ ವಿಶಯಕ್ಕೆ ಸಂಬಂದಿಸಿದ ಅನಿಸಿಕೆಗಳಿಗೆ ನನ್ನ ಟಿಪ್ಪಣಿಗಳನ್ನು ಬರೆಯಲು ಪ್ರಯತ್ನಿಸುತ್ತೇನೆ.

ಕನ್ನಡದಾ ಮಕ್ಕಳೆಲ್ಲ ಒಂದಾಗಿಮಕ್ಕಳಲ್ಲ!

ಮೊದಲನೆಯದಾಗಿ, ಶ್ರೀ ನರೇಂದ್ರಕುಮಾರ್ ಎಸ್. ಎಸ್. ಅವರು ನಾನು ಪ್ರಶ್ನೆಗಳನ್ನು ಸ್ವಾಗತಿಸುವೆನೆಂದೂ, ಪ್ರಶ್ನಿಸಿದವರ ಮೇಲೆ ಹಾರಾಡುವುದಿಲ್ಲವೆಂದೂ, ತರ್ಕಬದ್ದವಾದುದನ್ನು ಒಪ್ಪುವೆನೆಂದೂ ಎಣಿಸಿ ಕೆಲ ಪ್ರಶ್ನೆಗಳನ್ನು ನನ್ನ ಮುಂದಿಟ್ಟಿದ್ದಾರೆ. ಅವರ ಈ ಪೀಟಿಕೆ ಬಹಳ ಸಂತಸ ತಂದಿತು, ಏಕೆಂದರೆ ಈ ನಂಬುಗೆಯು ಯಾವರೀರ್ವರ ನಡುವೆ ಇರುವುದಿಲ್ಲವೋ, ಅವರ ನಡುವೆ ಚರ್ಚೆಗೆ ಅರ್ತವಿಲ್ಲ. ಆ ನಂಬುಗೆಯನ್ನು ನಾನು ಈ ನನ್ನ ಟಿಪ್ಪಣಿಯಲ್ಲಿ ಉಳಿಸಿಕೊಳ್ಳುತ್ತೇನೆ ಎಂದು ನಂಬಿದ್ದೇನೆ.

ಮತ್ತಷ್ಟು ಓದು »

14
ಏಪ್ರಿಲ್

ಅಗೋಚರ….!

– ಜಿ.ವಿ ಜಯಶ್ರೀ

ಹೆಚ್ಚಾಗಿ ಪವಾಡಗಳು… ಪುರುಷರು… ಮಾಯಾ-ಮಂತ್ರ, ಭವಿಷ್ಯ ಮನುಷ್ಯರಿಗೆ ಇಷ್ಟ. ಯಾವ ಭಾಷೆಯಲ್ಲಿ ನೋಡಿದರು ಇಂತಹ ವಿಷಯಗಳಿಗೆ ಸಂಬಂಧಿಸಿದ ಕಥೆಗಳು , ಧಾರಾವಾಹಿಗಳು ಇದ್ದೆ ಇರುತ್ತದೆ. ಅದೊಂತರ ಸೀರಿಯಸ್ ವಿಷಯದ ಚರ್ಚೆ ಮಧ್ಯೆ ಸಣ್ಣ ಜಾಹಿರಾತು ಇದ್ದಂತೆ. ಬೇಕಾದವರು ನೋಡಬಹುದು ಬೇಡದೆ ಇದ್ದವರು ಬಿಸಾಡ ಬಹುದು.

ಹೆಚ್ಚು ಜನಪ್ರಿಯ ವ್ಯಕ್ತಿಗಳಲ್ಲಿ ಸಾಧು ಸಂತರು, ಬಾಬಗಳು ಸೇರುತ್ತಾರೆ. ಕಳೆದವಾರ ಅಣ್ಣ ಹಜಾರೆ ಅವರ ವಿಷಯದ ಜೊತೆಗೆ ಹೆಚ್ಚು ಚಾಲ್ತಿಯಲ್ಲಿ ಕಂಡ ಸಂಗತಿ ಪುಟ್ಟಪರ್ತಿ ಸಾಯಿ ಬಾಬ. ಅತ್ಯಂತ ಜನಪ್ರಿಯ ಬಾಬ ಅವರು, ಜೊತೆಗೆ ಅತ್ಯಂತ ವಿವಾದಿತ ಬಾಬ.

ಬಹುಸಂಖ್ಯಾತ ಉತ್ತರ ಭಾರತೀಯರು ಅವರ ಮನೆಯಲ್ಲಿ  ಇರುವ ಒಂದು ಚಂಬು ಪಕ್ಕದ ಮನೆಗೆ ಕೊಡಬೇಕಾದ್ರೂ ಸಾಯಿ ಬಾಬ ಅನುಮತಿ ಕೇಳ್ತಾರೆ ,ತಮಾಷೆ ಅಲ್ಲ ಕಣ್ರೀ ಅಷ್ಟೊಂದು ನಂಬಿಕೆ .ಏನೇ ಸಂಗತಿಗಳು ಇರಲಿ ಅವರು ಅತ್ಯಂತ ಹೆಚ್ಚು ಗಮನ ಸೆಳೆಯುವುದು ಸಮಾಜಮುಖಿ ಕೆಲಸಗಳಿಂದ.ಭಜನ್ ಮಾಡುವಾಗ ಸದಾ ಶಾಂತ ಸ್ಥಿತಿಯಲ್ಲಿರುವ ವದನ, ಆ ಮೌನ ಎಲ್ಲವೂ ಹೆಚ್ಚು ಆಕರ್ಷಣೆಯ  ಅಂಶ. ಅವರ ಭಜನ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿದವರು ಸಂತೋಷದಿಂದ ಹೊರ ಬರುತ್ತಾರೆ.

ಮತ್ತಷ್ಟು ಓದು »

14
ಏಪ್ರಿಲ್

ಮೊದಲ ಬಾನಯಾನ : ಚಳಿಯಲ್ಲೂ ಬೆವೆತಿತ್ತು ಮನಸ್ಸು..!

– ಪ್ರಶಾಂತ್ ಯಳವಾರಮಠ

ನನ್ನ ಮುಂದಿನ ಪುಟ್ಟ ಸ್ಕ್ರೀನ್ ಮೇಲೆ ಚಲಿಸ್ತಾ ಇರೋ ವೇಗ ೭೫೦ ಮೈಲ್ಸ್/ಗಂಟೆಗೆ ಅಂತ ಮತ್ತು ಹೊರಗಡೆಯ ತಾಪಮಾನ -೬೩’ಸೆ ಅಂತ ತೋರಿಸ್ತಾ ಇದೆ !!! ನನ್ನ ಹೆಂಡತಿ ಹೇಳಿದಹಾಗೆ ಟೇಕ್ ಆಫ್ ಆಗುವಾಗ ಕಣ್ಣು ಮುಚ್ಚಿಕೊಂಡು ಕುಳಿತಿದ್ದ ನಾನು ಕಣ್ಬಿಟ್ಟಾಗ ಕಂಡ ಮಾಹಿತಿ ಇದು! ಏರ್ ಫ್ರಾನ್ಸ್ ವಿಮಾನದಲ್ಲಿ ಅದೂ ಮೊಟ್ಟಮೊದಲಬಾರಿಗೆ ವಿಮಾನದಲ್ಲಿ ಪ್ರಯಾಣಿಸುತ್ತಾ ಇರೋ ನನ್ನ ಹುಚ್ಚು ಮನಸ್ಸಿನಲ್ಲಿ ಸಾವಿರಾರು ಕೆಟ್ಟ ಯೋಚನೆಗಳು ಬಂದು ಮನಸ್ಸು ತನ್ನಷ್ಟಕ್ಕೆ ತಾನೆ ಭಯಬೀತಗೊಂಡಿತ್ತು. ಇದರಿಂದ ಅತ್ತಿಂದಿತ್ತ ನೋಡುತ್ತಾ ಪಕ್ಕದಲ್ಲಿ ಯಾವುದೇ ಫೀಲಿಂಗ್ಸ್ ಗಳು ಇರದೇ ಕುಳಿತುಕೊಂಡಿರುವ ಅಜ್ಜಿಯೊಬ್ಬಳನ್ನು ನೋಡಿ ಧೈರ್ಯತಂದುಕೊಳ್ಳಲು ಪ್ರಯತ್ನಿಸಿದೆ, ನಾನು ಮೊದಲ ಬಾರಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದೇನೆ ಅದಕ್ಕೆ ಹೀಗೆಲ್ಲ ಅನಿಸುತ್ತಾ ಇದೆ ಅಂಥ ನನ್ನಷ್ಟಕ್ಕೆ ನಾನೆ ಗೊಂದಲಗಳಿಂದ ಕೂಡಿದ ಮನಸ್ಸಿಗೆ ಸಮಾಧಾನ ಹೇಳುತ್ತಾ ಇದ್ದೆ.

ಇವುಗಳ ಮದ್ದೆ ತಮ್ಮ ನಾಜೂಕಾದ ನಡಿಗೆಗಳಿಂದ ಮುಖದಲ್ಲಿ ತುಂಬು ಮುಗುಳ್ನಗೆಗಳನ್ನು ತುಂಬಿಕೊಂಡ ಗಗನಸಖಿಯರು ಅತ್ತಿಂದಿತ್ತ ಓಡಾಡ್ತಾ ಇದ್ದಾರೆ ಎಷ್ಟೋ ಜನ ಕೆಂಪು ಮುಖಗಳ ವಿದೇಶಿಯರು ತಮ್ಮ ಮಾತೃಭಾಷೆ ಫ್ರೆಂಚ್ ನಲ್ಲಿ ಮಾತಾಡುತ್ತ, ನಗುತ್ತಾ ನಿರ್ಭೀತರಾಗಿ ಹರಟುತ್ತಿದ್ದಾರೆ. ವಿಮಾನದಲ್ಲಿ ಆಗ್ತಾ ಇರೋ ಈ ಎಲ್ಲ ಆಗುಹೋಗುಗಳಿಂದ ನನಗು ಸ್ವಲ್ಪ ಸಮಾಧಾನವಾಗಿ ಮನಸ್ಸು ಹಗುರವಾಯಿತು.

ಮತ್ತಷ್ಟು ಓದು »

13
ಏಪ್ರಿಲ್

ಜಲಿಯನ್ ವಾಲಾಬಾಗ್ ಒಂದು ಘೋರ ನೆನೆಪು

– ಜಯಂತ್ ರಾಮಾಚಾರ್

ಏಪ್ರಿಲ್ ೧೩, ಇಂದಿಗೆ ಸರಿಯಾಗಿ ೯೨ ವರ್ಷಗಳು ಸಂದಿವೆ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ನಡೆದು. ೧೯೧೯, ಏಪ್ರಿಲ್ ೧೩ ರಂದು ಸುಮಾರು ೨ ಸಾವಿರ ಮಂದಿ ಹಿಂದೂ, ಮುಸ್ಲಿಂ, ಸಿಖ್ ಬಾಂಧವರ ಮಾರಣ ಹೋಮಕ್ಕೆ ಸಾಕ್ಷಿಯಾಯಿತು ಈ ಜಲಿಯನ್ ವಾಲಾಬಾಗ್. ಜಲಿಯನ್ ವಾಲಾಬಾಗ್ ಒಂದು ಚಚ್ಚೌಕವಾದ ಪ್ರದೇಶ, ಇದಕ್ಕೆ ಹೋಗಿಬರಲು ಇದ್ದ ದಾರಿಗಳು ವಿರಳ. ಎತ್ತರೆತ್ತರದ ಗೋಡೆಗಳು, ಮಧ್ಯದಲ್ಲಿ ಬಾವಿ, ಮನೆ ಕಟ್ಟಲು ಬಳಸುತ್ತಿದ್ದ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟಿದ್ದ ಜಾಗ.

ಏಪ್ರಿಲ್ ೧೩, ೧೯೧೯ ಅಂದು ವೈಶಾಖಿಯ ಸಂಭ್ರಮ. ವೈಶಾಖಿಯ ಸಂಭ್ರಮವೆಂದರೆ ಕಣಜ ತುಂಬಿಸುವ, ಸುಗ್ಗಿಯ ಸಂಭ್ರಮ. ಆದರೆ ಪ್ರತಿ ವೈಶಾಖಿಗೂ ೧೯೧೯ರ ವೈಶಾಖಿಗೂ ವ್ಯತ್ಯಾಸವಿತ್ತು. ಏಕೆಂದರೆ ಅದೇ ಸಮಯದಲ್ಲಿ ಗಾಂಧಿಜಿ ಅವರನ್ನು ಬ್ರಿಟಿಶ್ ಸರ್ಕಾರ ಬಂಧಿಸಿತ್ತು. ಅದರ ಪ್ರತೀಕಾರ ತೀರಿಸಿಕೊಳ್ಳಲು ಜನ ಹಾತೊರೆಯುತ್ತಿದ್ದರು. ಎಂದಿನಂತೆ ಹೊರವಲಯದಲ್ಲಿ ಸೇರದ ಜನ ಅಂದು ಜಲಿಯನ್ ವಾಲಾಬಾಗ್ ನಲ್ಲಿ ಸುಮಾರು ೨೦ ಸಾವಿರ ಮಂದಿ ನೆರೆದಿದ್ದರು. ಸುತ್ತಲೂ ಜನ ಮಧ್ಯದಲ್ಲಿ ವೇದಿಕೆಯಿದ್ದು ಅದರ ಮೇಲೆ ಹಂಸರಾಜ್ ಎಂಬುವವರು ಭಾಷಣ ಶುರು ಮಾಡಿದ್ದರು. ಭಾಷಣ ಶುರುವಾಗಿ ಹೆಚ್ಚು ಸಮಯವೇನು ಆಗಿರಲಿಲ್ಲ. ಅಷ್ಟರಲ್ಲಿ ಅಲ್ಲಿಗೆ ತನ್ನ ಸೈನ್ಯದೊಂದಿಗೆ ಆಗಮಿಸಿದ ಜನರಲ್ ಡಯರ್ ನೇರವಾಗಿ ಗುಂಡಿನ ಸುರಿಮಳೆಗೈಯ್ಯಲು ಆದೇಶವಿತ್ತ. ಸಂಜೆ ಐದೂವರೆಗೆ ಶುರುವಾದ ಈ ಹತ್ಯಾಕಾಂಡ ಕೆಲವೇ ಕೆಲವು ನಿಮಿಷಗಳಲ್ಲಿ ಸುಮಾರು ಎರಡು ಸಾವಿರ ಮಂದಿಯ ಪ್ರಾಣ ತೆಗೆದು ಹಾಕಿತ್ತು.

ಮತ್ತಷ್ಟು ಓದು »

13
ಏಪ್ರಿಲ್

ರಾಷ್ಟ್ರೀಯ ಪಕ್ಷಗಳ ಒಡೆದು ಆಳುವ ನೀತಿ…!

– ಚೇತನ್ ಜೀರಾಳ್

ಕಳೆದ ಎರಡು ವಾರಗಳಲ್ಲಿ ನಡೆದಿರುವ ಸುದ್ದಿಗಳ ಬಗ್ಗೆ ನಿಮ್ಮ ಗಮನ ಹರಿಸಲು ಇಷ್ಟಪಡುತ್ತೇನೆ. ಪತ್ರಿಕೆಗಳಲ್ಲಿ ಕೇವಲ ಸುದ್ದಿ ಎನ್ನುವಂತೆ ಇವುಗಳನ್ನು ಬಿತ್ತರಿಸಲಾಯಿತು, ಆದರೆ ಇವುಗಳ ಬಗ್ಗೆ ಎಲ್ಲೂ ಚರ್ಚೆಯಾಗಿಲ್ಲ.

ಮರುಚುನಾವಣೆ ಹಾಗೂ ತೆಲುಗಿನಲ್ಲಿ ಭಾಷಣ:
ಮೊನ್ನೆ ನಡೆದ ಮರುಚುನಾವಣೆಯ ಪ್ರಚಾರಕ್ಕಾಗಿ ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷಗಳು ಭರ್ಜರಿ ಪ್ರಚಾರ ಕೈಗೊಂಡವು, ಅದಕ್ಕಾಗಿಯೇ ಹೊರರಾಜ್ಯದ ಚಲನಚಿತ್ರ ನಟ/ನಟಿಯರನ್ನು ಕರೆಸಿದ್ದವು. ಮತದಾರನನ್ನು ಓಲೈಸುವ ಭರದಲ್ಲಿ ನಮ್ಮ ರಾಜಕೀಯ ಪಕ್ಷಗಳು ಮಾಡುತ್ತಿರುವ ತಪ್ಪುಗಳು ಮಾತ್ರ ಬಹಳ ದೊಡ್ಡದಾಗಿವೆ. ಬಂಗಾರ ಪೇಟೆಯಲ್ಲಿ ನಡೆದ ಉಪಚುನಾವಣೆಗಾಗಿ ನಡೆಸಿದ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷ ತೆಲಗು ಚಿತ್ರನಟ ಚಿರಂಜೀವಿಯನ್ನು ಬಳಸಿಕೊಂಡಿತ್ತು. ಅವರು ಸಹ ಭರ್ಜರಿಯಾಗಿ ತೆಲುಗಿನಲ್ಲಿ ಭಾಷಣ ಮಾಡಿ ಹೊರಟು ಹೋದರು. ಇದರಲ್ಲಿ ತಪ್ಪೇನು ಅಂತೀರಾ? ಮತದಾರನನ್ನು ಓಲೈಸುವ ಭರದಲ್ಲಿ ಕರ್ನಾಟಕದ ವಿವಿಧ ಭಾಷಿಕರಲ್ಲಿ ಒಡಕುಂಟು ಮಾಡಲಾಗುತ್ತಿದೆ. ಮೊನ್ನೆ ನಡೆದಿದ್ದು ಸಹ ಅದೇ, ಹಲವು ಶತಮಾನ ಅಥವಾ ಹಲವು ದಶಕಗಳಿಂದ ಇಲ್ಲಿ ನೆಲೆಸಿರುವ ತೆಲುಗು ಭಾಷಿಕರು ಕನ್ನಡದವರೇ ಆಗಿಹೋಗಿದ್ದಾರೆ. ಆದರೆ ನೀವು ತೆಲುಗರು ನೀವು ಕನ್ನಡಿಗರಲ್ಲಾ ಅಂತಾ ತೋರಿಸೋ ಪ್ರಯತ್ನಗಳೇ ಚಿರಂಜೀವಿ ಯಂತಹ ತೆಲುಗು ನಟರನ್ನು ಕರೆದುಕೊಂಡು ಬಂದು ಕರ್ನಾಟಕದಲ್ಲಿ ಭಾಷಣ ಮಾಡಿಸುವುದು. ಕರ್ನಾಟಕದ ಜನರನ್ನ ಓಲೈಸಲು ಆಂಧ್ರಪ್ರದೇಶದ ಕರಾವಳಿ ತೀರದ ಒಬ್ಬ ನಟ ಬಂದು ನೀವು ಕನ್ನಡಿಗರಲ್ಲಾ ಎಂದು ಸಂದೇಶ ನೀಡಿಸುವ ಕೆಲಸ ಮಾಡುತ್ತಿರುವ ಪಕ್ಷಗಳು ಮಾಡುತ್ತಿರುವುದಾದರು ಏನು ಅನ್ನೋದನ್ನ ತಾವೇ ಪ್ರಶ್ನಿಸಿಕೊಳ್ಳಲಿ.

ಮತ್ತಷ್ಟು ಓದು »

12
ಏಪ್ರಿಲ್

ಅವರೆತ್ತರಕ್ಕೆ ಏರಲಾಗದಿದ್ದರೆ ತೆಪ್ಪಗಿರಿ…!

– ರಾಕೇಶ್ ಶೆಟ್ಟಿ

“ಇಂದಿನ ಪರಿಸ್ಥಿತಿಯಲ್ಲಿ ಮಹಾತ್ಮ ಗಾಂಧೀಜಿ ಅವರು ಇದ್ದಿದ್ದರೆ, ಅವರು ಕೂಡಾ ಭ್ರಷ್ಟರಾಗುತ್ತಿದ್ದರು. ರಾಜಕೀಯದಲ್ಲಿ ಉಳಿಯಬೇಕಾದರೆ ಭ್ರಷ್ಟರಾಗದೆ ಇರಲು ಸಾಧ್ಯವೇ ಇಲ್ಲ” ಇಂತ ಹೇಳಿಕೆ ಕೊಟ್ಟೊವ್ರು ಯಾರು ಅನ್ನೋದು ಎಲ್ರಿಗು ಗೊತ್ತಿದೆಯಲ್ವಾ? ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವ್ರು.ಒಂದ್ ಕಡೆ ದೇವೆಗೌಡ್ರು ಫೋಟೊ,ಇನ್ನೊಂದ್ ಕಡೆ ಇದೇ ಮಹಾತ್ಮನ ಫೋಟೊ ಹಾಕೊಂಡಿರೋ ಪಕ್ಷದ ರಾಜ್ಯಾಧ್ಯಕ್ಷರ ಬಾಯಿಯಲ್ಲಿ ಬಂದ ಮುತ್ತಿನಂತ ಮಾತುಗಳಿವು.

ಮುತ್ತುಗಳು ಬಿದ್ದಾಗ ಆರಿಸಿ ಮನೆಗ್ ತಗೊಂಡು ಹೋಗೊದು ರೂಢಿ,ಆದ್ರೆ ಕುಮಾರ ಸ್ವಾಮಿ ಅವ್ರ ಮುತ್ತನ್ನ ಹಿಡಿದು ಅವರಿಗೆ ಪೈಡ್ ಪೈಡ್ ಅಂತ ಎಲ್ಲ ಕಡೆಯಿಂದ ಬಾರಿಸುತಿದ್ದಾರೆ.ಬಾರಿಸದೆ ಬಿಡ್ಬೇಕಾ? ಒಂದು ಕಡೆ ಮಹಾತ್ಮರ ಹೋರಾಟದಿಂದ ಸ್ಪೂರ್ತಿ ಪಡೆದ ೭೬ ವರ್ಷದ ಅಣ್ಣಾ ಹಜಾರೆಯಂತವರು ಸತ್ತತಿಂಹರನ್ನ ಬಡಿದೆಬ್ಬಿಸಲು ಉಪವಾಸ ಕೂತರೆ,ಇನ್ನೊಂದು ಕಡೆ ಈ ಕುಮಾರಸ್ವಾಮಿ ಮಹಾತ್ಮರ ಬಗ್ಗೆ ಇಂತ ಮಾತನಾಡಲು ಹೊರಟಿದ್ದಾರೆ!

ಮತ್ತಷ್ಟು ಓದು »

12
ಏಪ್ರಿಲ್

ಇನ್ನೊಂದು ಸಮರಕ್ಕೆ ಸಿದ್ಧರಾಗಿ…

-ಸಂಪತ್ ಕುಮಾರ್

ಅಣ್ಣ ಹಜಾರೆಯವರ  ಉಪವಾಸವೇನೋ ಮುಗಿಯಿತು. ರಂಗೋಲೆಯ ಕೆಳಗೆ ನುಸುಳುವ ಬುದ್ಧಿ ಉಳ್ಳ ರಾಜಕಾರಣಿಗಳು ಎಂತಹ ಕಾನೂನು ತಯಾರಿಸುತ್ತರೋ ಕಾದುನೋಡಬೇಕು. ಈಗಾಗಲೇ ಅಸ್ತಿತ್ವದಲ್ಲಿರುವ ಲೋಕಾಯುಕ್ತದಂತಹ ಸಂಸ್ಥೆಯಿಂದ ಆಗುತ್ತಿರುವ ಭ್ರಷ್ಟಾಚಾರಿಗಳ ಬೇಟೆ ಅವರಿಗೆ ಶಿಕ್ಷೆ ಕೊಡಿಸುವಲ್ಲಿ ವಿಫಲವಾಗಿರುವುದು ಸರ್ವವೇದ್ಯ. ಅಲ್ಲದೆ ಇಂತಹ ವಿಧೇಯಕ ಸಂಸತ್ತಿನಲ್ಲಿ ಅಂಗೀಕಾರಗೊಳ್ಳುವುದೂ ಅನುಮಾನ.ಇಂತಹ ಪರಿಸ್ತಿತಿಯಲ್ಲಿ ಇನ್ನೊದು ಹೋರಾಟದ ಅಗತ್ಯ ಇದೆ.

ಭಾರತದ ರಾಜಕಾರಣಿಗಳ ಕೋಟಿ ಕೋಟಿ ಕಪ್ಪು ಹಣ ಸ್ವಿಸ್ ಬ್ಯಾಂಕಿನಲ್ಲಿ ಕೊಳೆಯುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಹಣವನ್ನು ರಾಷ್ಟ್ರೀಯ ಸಂಪತ್ತೆಂದು ಘೋಷಿಸಿದರೆ ಭಾರತ ತನ್ನೆಲ್ಲ ಸಾಲದಿಂದ ಮುಕ್ತವಾಗಿ, ಹಣ ದುಬ್ಬರ, ಬಡತನ, ಮುಂತಾದ ತನ್ನೆಲ್ಲ ಕಷ್ಟ ಕೋಟಲೆಗಳಿಂದ ಹೊರಬರಲು ಸಾಧ್ಯ. ಇದಕ್ಕಾಗಿ ಅಣ್ಣ ಹಜಾರೆ ಅವರನ್ನು ಈ ಉದ್ದೇಶಕ್ಕಾಗಿ ಪುನಃ ಉಪವಾಸ ಕೂರಲು ಹೇಳುವುದು ಸ್ವಾರ್ಥ ಎನಿಸಬಹುದು. ಈ ವಿಚಾರವನ್ನೇ ತನ್ನ ಚುನಾವಣ ಪ್ರಾಣಾಳಿಕೆ ಮಾಡಿಕೊಂಡಿರುವ ಭಾ.ಜ.ಪ. ದಿಂದ ಇದನ್ನು ರಾಜಕೀಯಗೊಳಿಸಬಾರದು.
ಮತ್ತಷ್ಟು ಓದು »

11
ಏಪ್ರಿಲ್

“ತಾಯ್ನುಡಿಯಲ್ಲಿ ಕಲಿಕೆ” ಯಾಕೆ ಮಹತ್ವದ್ದು?

– ಪ್ರಿಯಾಂಕ್

ತಾಯ್ನುಡಿಯಲ್ಲಿ ಕಲಿಕೆ ಮಾಡಿ ಉಪಯೋಗ ಏನು? ಚಿಕ್ಕ ಮಕ್ಕಳು ಯಾವ ಭಾಷೆ ಬೇಕಿದ್ರೂ ಬೇಗ ಕಲಿತಾರಲ್ಲ, ಹಾಗಾಗಿ ಚಿಕ್ಕಂದಿಂದಲೇ ಇಂಗ್ಲೀಷಿನಲ್ಲಿ ಕಲಿಸಿಬಿಟ್ರೆ ಎಲ್ರಿಗೂ ಒಳ್ಳೇದಲ್ವ? ಇಂತಹ ಪ್ರಶ್ನೆಗಳು ಬಹಳಷ್ಟು ಜನರಲ್ಲಿ ಇರೋದನ್ನ ಕಾಣಬಹುದು.

ಸ್ವಾಮಿನಾಮಿಕ್ಸ್ ಹೆಸರಿನಡಿ ಅಂಕಣ ಬರೆಯುವ “ಸ್ವಾಮಿನಾಥನ್ ಐಯ್ಯರ್” ಅವರು, ತಮ್ಮ ಈ ಅಂಕಣದಲ್ಲಿ, ಮಕ್ಕಳಿಗೆ ಮೊದಲು ತಾಯ್ನುಡಿಯಲ್ಲಿ ಕಲಿಕೆಯಾಗಬೇಕಾದ್ದು ಯಾಕೆ ಮುಖ್ಯ ಎಂಬುದನ್ನು ಅಧ್ಯಯನದ ಉದಾಹರಣೆಗಳ ಜೊತೆಗೆ ತೋರಿಸಿದ್ದಾರೆ. ಅವರ ಅಂಕಣದ ಆಯ್ದ ಕೆಲವು ಅಂಶಗಳನ್ನು ಇಲ್ಲಿ (ಕನ್ನಡದಲ್ಲಿ) ಹಾಕಲಾಗಿದೆ.

* ಎರಡನೇ ತರಗತಿಯಲ್ಲಿರುವ ಮಕ್ಕಳು ಸರಾಗವಾಗಿ ಓದಲು ಕಲಿಯದಿದ್ದರೆ, ಅವರು ಬಹುಶ ಮುಂದೆಂದೂ ಚೆನ್ನಾಗಿ ಓದಲಾರರು. ಅವರು ಓದಿನಲ್ಲಿ ಹಿಂದೆ ಉಳಿಯುವ ಸಾಧ್ಯತೆಯೇ ಹೆಚ್ಚು.

ಮತ್ತಷ್ಟು ಓದು »