ಈ ಹೋರಾಟ ಗೆಲ್ಲಲೇಬೇಕು…!
– ಬನವಾಸಿ ಬಳಗ
ಕಿಸನ್ ಬಾಬುರಾವ್ ಹಜಾರೆ ಎಂಬ ಹೆಸರಿನ ಆ ಹಿರಿಯರು ಇವತ್ತಿನಿಂದ ಭ್ರಷ್ಟಾಚಾರದ ವಿರುದ್ಧದ ಒಂದು ದೊಡ್ಡ ಹೋರಾಟಕ್ಕೆ ಮುನ್ನುಡಿ ಹಾಡಿದ್ದಾರೆ. ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ರೆಲೆಗನ್ ಸಿದ್ಧಿ ಎಂಬ ಹಳ್ಳಿಯನ್ನು ಮಾದರಿ ಹಳ್ಳಿಯಾಗಿ ರೂಪಿಸಿ, ತನ್ನಿಡೀ ಬದುಕನ್ನೇ ಸಮಾಜಕ್ಕಾಗಿ ಮೀಸಲಿಟ್ಟ ಈ ಹಿರಿಯರು ದೆಹಲಿಯ ಜಂತರ್ ಮಂತರ್ ಬಳಿ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ.
ರಾಜು ಪ್ರಿಯಾಂಕಳಾಗಿ ಬದಲಾದ ರೀತಿ…!
-ನಾಗರಾಜ್, ಬೆಂಗಳೂರು
ನಮಸ್ಕಾರ ಕೇಳುಗರೇ ನೀವು ಕೇಳ್ತಾ ಇದ್ದೀರಾ ೯೦.೪ ಕಂಪನಾಂಕಗಳಲ್ಲಿ ರೇಡಿಯೊ ಆಕ್ಟೀವ್. ಇದೇನಪ್ಪ ನ್ಯೂಸ್ ಲೆಟರ್ನಲ್ಲಿ ರೇಡಿಯೋ ಸ್ಟೈಲ್ ಅಂತಾ ಇದ್ದೀರಾ ಇಲ್ಲ ರೀ ಇದು ನಮ್ಮ ನಿಮ್ಮೆಲ್ಲರ ನೆಚ್ಚಿನ ಹುಡುಗಿ ರೇಡಿಯೋ ಜಾಕಿ ಪ್ರಿಯಾಂಕ ಸ್ಟೈಲ್. ಇದ್ಯಾರು ಪ್ರಿಯಾಂಕ ಅಂತ ಯೋಚಿಸ್ತಾ ಇದ್ದಿರಾ ? ಅವರೇ ರೀ ನೆನ್ನೆ ಮೊನ್ನೆ ತನಕ ಲೈಂಕಿಕ ವೃತ್ತಿಯನ್ನು ಮಾಡುತ್ತಿದ್ದ ಟ್ರಾನ್ಸ್ ಜೆಂಡರ್ ಪ್ರಿಯಾಂಕ.
ರಾಜು ಪ್ರಿಯಾಂಕಳಾಗಿ ಬದಲಾದ ರೀತಿ
ಪ್ರಿಯಾಂಕಳ ಮೊದಲ ಹೆಸರು ರಾಜು ಓದಿದ್ದು ೯ನೇ ತರಗತಿ ಮಾತ್ರ ತಾನು ೯ನೇ ತರಗತಿಯಲ್ಲಿ ವಿದ್ಯಾಬ್ಯಾಸ ಮಾಡ್ತಾ ಇರುವಾಗ ಎಲ್ಲರಂತೆ ತನ್ನಲ್ಲಿ ಅನೇಕ ಬದಲಾವಣೆಗಳು ಆಗತೊಡಗಿದವು ತನಗೆ ಹುಡುಗಿಯ ಆವಭಾವ ಉಂಟಾಗುತ್ತಿತ್ತು. ಬೆರಳುಗಳಿಗೆ ನೈಲ್ ಪಾಲೀಷ್ ಹಾಕಿಕೊಳ್ಳುವುದು ಲಿಪ್ಸ್ಟೀಕ್ ಹಚ್ಚಿಕೊಳ್ಳಬೇಕು ಹೀಗೆ ಅನೇಕ ರೀತಿಯಾಗಿ ಹುಡುಗಿಯರ ಥರಾ ಮೇಕಪ್ ಮಾಡಿಕೊಳ್ಳತೊಡಗಿದ ಜೊತೆಗೆ ತನ್ನ ಕೈಲಿ ಹುಡುಗರು ಮಾಡುವ ಸಾಮಾನ್ಯ ಕೆಲಸಗಳನ್ನು ಮಾಡುವುದು ಕಷ್ಟವೆನಿಸಿತು. ಅದೇ ರಂಗೋಲಿ ಹಾಕು, ಪಾತ್ರೆ ತೊಳಿ, ಮನೆ ಒರೆಸು, ಬಟ್ಟೆ ಒಗಿ ಅಂದ್ರೆ ಎಲ್ಲಿಲ್ಲದ ಸಂತೋಷ. ಹೀಗೆ ರಾಜುವಿನಲ್ಲಿನ ಬದಲಾವಣೆಗಳನ್ನು ಕಂಡ ಸ್ನೇಹಿತರು ಹಿಯಾಳಿಸತೊಡಗಿದರು, ಶಿಕ್ಷಕರು ಸಹ ಕೀಳಾಗಿ ಕಂಡರು ಅಂತೂ ಇಂತು ೯ನೇ ತರಗತಿಯಲ್ಲಿ ಓದುತ್ತಿದ್ದ ರಾಜು ತನ್ನ ಪೋಷಕರ ಬಳಿ ತನ್ನಲ್ಲಾಗುತ್ತಿರುವ ಬದಲಾವಣೆಗಳು, ಆಸೆಗಳು ಎಲ್ಲವನ್ನೂ ಎಲೆ ಎಲೆಯಾಗಿ ಬಿಚ್ಚಿಟ್ಟ ಆದ್ರೆ ಇದಕ್ಕೆ ಪೋಷಕರ ಬೆಂಬಲ ಸಿಗಲಿಲ್ಲ. ಇದನ್ನು ಅರಿತ ೧೪ ವರ್ಷದ ರಾಜು ೯ನೇ ತರಗತಿಗೆ ಮದ್ಯದಲ್ಲೇ ತಿಲಾಂಜಲಿ ಆಡಿ ಮನೆ ಬಿಟ್ಟು ತನ್ನದೇ ಪ್ರಪಂಚಕ್ಕೆ ಓಡಿ ಹೋದ ಮತ್ತಷ್ಟು ಓದು 
ಅಫ್ರಿದಿಯ ಬೊಗಳುವಿಕೆ ಹಾಗೂ ನಮ್ಮ ತಿಕ್ಕಲುತನಗಳು..
– ಉಮೇಶ್ ದೇಸಾಯಿ
“ಸಮಾ” ಎನ್ನುವ ನ್ಯೂಸ್ ಚಾನೆಲ್ ನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸುತ್ತ ಅಫ್ರಿದಿ ಅಂದ
—
“”In my opinion, if I have to tell the truth, they (Indians) will never have hearts like Muslims and Pakistanis. I don’t think they have the large and clean hearts that Allah has given us,”
ಅವನ ಮಾತುಗಳಲ್ಲಿ ಸತ್ಯಇದೆಯೋ ಇಲ್ಲವೋ ಇಲ್ಲಿರುವ ಮುಸ್ಲಿಮ್ ರು ಹೇಳಬೇಕು. ಇದು ಸೋತವನ ಹತಾಶ ನುಡಿಯೋ ಅಥವಾ ಮನದಲ್ಲಿ ಮಥಿಸಿ ಮಥಿಸಿ ಕಾರಿದ ವಿಷವೋ ಗೊತ್ತಿಲ್ಲ. ಒಂದೇ ಮಾತಿನಲ್ಲಿ ಭಾರತವನ್ನು ಇಬ್ಭಾಗ ಮಾಡಿದ್ದಾನೆ. ಅಲ್ಲಾಹು ಕೊಟ್ಟ ದೇಣಿಗೆ ಹೃದಯ ಅದು ಭಾರತೀಯರಲ್ಲಿಲ್ಲ ಇದು ಅವನ ಅಂಬೋಣ.
ಈ ಮಾತಿಗೆ ಆಗಲೇ ಅಲ್ಲಿಯ ಬೋರ್ಡು ಪ್ರತಿಕ್ರಿಯಿಸಿದೆ.ಅದು ಅವನ ವ್ಯಕ್ತಿಗತ ಪ್ರತಿಕ್ರಿಯೆ ಎಂದು ತಿಪ್ಪೆ ಸಾರಿಸಿದೆ.ಇಲ್ಲಿಯ ಮುಸ್ಲಿಂ ಬೋರ್ಡು ಅದನ್ನು ಖಂಡಿಸಿದೆ. ಅದು ತಿಕ್ಕಲುತನ ಎಂದಿದೆ.
ಇಗೋ,ಇದರಲ್ಲಿ ಮುಂದಿದೆ…
– ಕಿರಣ ಬಾಟ್ನಿ, ಬನವಾಸಿ ಬಳಗ
’ನಿಲುಮೆ’ಯಲ್ಲಿ ಕನ್ನಡದ ಸೊಲ್ಲರಿಮೆಯ ಬಗ್ಗೆ ಚರ್ಚೆಯಾಗುತ್ತಿರುವುದು ಒಳ್ಳೆಯ ಸಂಗತಿ. ಅಕ್ಟೋಬರ್ ೨೦೦೮ರಲ್ಲಿ ನಾನು ಬರೆದ ಒಂದು ಬರಹವನ್ನು ಬನವಾಸಿ ಬಳಗದ ಗೆಳೆಯರಾದ ಶ್ರೀ
ಆನಂದ್ ಜೋಶಿಯವರು ಈ ಚರ್ಚೆಗೆ ಸರಿಹೊಂದುತ್ತದೆ ಎಂದು ಪ್ರಕಟಣೆಗೆ ಕಳುಹಿಸಿ ಅದು ಪ್ರಕಟಿಸಲಾಗಿ, ಆ ಬರಹದಲ್ಲಿ ಬಂದ ಕೆಲವು ವಿಶಯಗಳ ಬಗ್ಗೆ, ಮತ್ತು ಬನವಾಸಿ ಬಳಗದ ನಿಲುವುಗಳ ಬಗ್ಗೆ ತಮ್ಮ ೪/೪/೨೦೧೧ರ ಬರಹದಲ್ಲಿ ಶ್ರೀ. ಅಜಕ್ಕಳ ಗಿರೀಶ ಬಟ್ಟರು ಪ್ರತಿಕ್ರಿಯೆ ನೀಡಿರುವುದರಿಂದ ಈ ಬರಹವನ್ನು ಬರೆಯುತ್ತಿದ್ದೇನೆ.
ಆ ಬರಹದಲ್ಲಿ ಗಿರೀಶಬಟ್ಟರನ್ನು ಕುರಿತು ನಾನು ಯಾವ ಮಾತನ್ನೂ ಆಡಿಲ್ಲ; ಅದನ್ನು ಬರೆದಾಗ ಅವರು ತಮ್ಮ ಹೊತ್ತಗೆಯನ್ನು ಪ್ರಕಟಿಸಿದ್ದರ ನೆನಪಿಲ್ಲ, ಅವರ ಹೆಸರೂ ನನಗಾಗ ಗೊತ್ತಿರಲಿಲ್ಲ. ಆದುದರಿಂದ ಆ ಬರಹದಲ್ಲಿ ಶಂಕರಬಟ್ಟರಿಗೆ ಗಿರೀಶಬಟ್ಟರು ಕೊಟ್ಟಿರುವ ಉತ್ತರಗಳ ವೈಗ್ನಾನಿಕತೆ-ಅವೈಗ್ನಾನಿಕತೆಗಳ ಬಗ್ಗೆ ನಾನು ಮಾತನಾಡಿರಲು ಸಾದ್ಯವೇ ಇರಲಿಲ್ಲ. ಆದರೆ ಶ್ರೀ. ಕೆ. ವಿ. ತಿರುಮಲೇಶರ ಒಂದು ಬರಹವನ್ನು ಕುರಿತು ಆ ಮಾತುಗಳನ್ನು ಆಡಿದ್ದು ನಿಜ, ಅವರು ಪ್ರತಿನಿದಿಸುವ ’ಹಳೆ-ಶಾಲೆ’ಯವರೆಲ್ಲರನ್ನೂ ಕುರಿತು ಆ ಮಾತುಗಳನ್ನು ಆಡಿದ್ದು ನಿಜ. ಈಗ ಗಿರೀಶಬಟ್ಟರಿಗೆ ಆ ಮಾತುಗಳು ತಮ್ಮನ್ನು ಕುರಿತೇ ಆಡಿದ್ದು ಎಂದು ಅನಿಸಿರುವುದರಲ್ಲಿ ಹಳೆಯ ಬರಹವನ್ನು ಹೊಸ ಚರ್ಚೆಯೊಂದರಲ್ಲಿ ಪ್ರಕಟಿಸಿದ್ದು ಒಂದು ಕಾರಣವಾದರೆ, ಮತ್ತೊಂದು ಕಾರಣ ನಿಜಕ್ಕೂ ಗಿರೀಶಬಟ್ಟರು ಆ ’ಹಳೆ-ಶಾಲೆ’ಗೇ ಸೇರುತ್ತಾರೆ ಎನ್ನುವುದು. ಮೊದಲನೆಯ ಕಾರಣಕ್ಕೆ ಬನವಾಸಿ ಬಳಗದ ಪರವಾಗಿ ನಾನು ಗಿರೀಶಬಟ್ಟರಲ್ಲಿ ಕ್ಶಮೆ ಕೇಳಿಕೊಳ್ಳುತ್ತ, ಎರಡನೆಯ ಕಾರಣದಿಂದ ಪ್ರೇರಿತರಾಗಿ ಅವರು ತಮ್ಮ ೪/೪/೨೦೧೧ರ ಬರಹದಲ್ಲಿ ಅದೇ ಹಳೆಯ ವಾದವನ್ನು ಮಂಡಿಸಿರುವುದರಿಂದ ಅದಕ್ಕೆ ಇಲ್ಲಿ ಮರುವುತ್ತರ.
ಯಾವುದು ನಿಜವಾದ ದೇಶಪ್ರೇಮ ?
ವಿಶ್ವ ಕಪ್ ಗೆದ್ದ ಭಾರತಕ್ಕೆ ಅಭಿನಂದನೆಗಳು. ಹಾಗೆಯೇ ಕೊನೆಯವರೆಗೂ ಅತ್ಯಂತ ಸ್ಪರ್ಧಾತ್ಮಕ ಕ್ರಿಕೆಟ್ ಆಡಿದ ಶ್ರೀಲಂಕೆಗೂ ಶುಭಾಶಯಗಳು. ಮೊನ್ನೆ ಮೊನ್ನೆಯ ಪಾಕಿಸ್ತಾನದ ಎದುರಿನ ಸೆಮಿ ಫೈನಲ್ ಬಗ್ಗೆ ಮಾಧ್ಯಮಗಳಲ್ಲಿ ಇದ್ದ ಕ್ರೇಜ್, ಇದೊಂದು ಯುದ್ಧ ಅನ್ನುವ ಮನಸ್ಥಿತಿ ಫೈನಲ್ ಪಂದ್ಯದಲ್ಲಿ ಅಷ್ಟಾಗಿ ಕಾಣಲಿಲ್ಲ. ಸೆಮಿ ಫೈನಲ್ ನಲ್ಲಿ ಪಾಕಿಸ್ತಾನವನ್ನು ಸೋಲಿಸಿದರೆ ಸಾಕು, ಫೈನಲ್ ಗೆಲ್ಲದಿದ್ದರೂ ಆದೀತು ಅನ್ನುವ ಅನಿಸಿಕೆಗಳನ್ನು ಅಲ್ಲಲ್ಲಿ ಕಂಡೆ. ಹಾಗೆಯೇ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರುವ ಭಾರತಕ್ಕೆ ಈ ಕಪ್ಪು ಬೇಕೇ ಬೇಕು ಅನ್ನುವ ತರಹದ ಚರ್ಚೆಗಳನ್ನು ಅಲ್ಲಲ್ಲಿ ಕಂಡೆ. ಕೊನೆಯಲ್ಲಿ, ಕಪ್ ಗೆದ್ದ ತಂಡಕ್ಕೆ ಹೆಚ್ಚಿನ ಸರ್ಕಾರಗಳು (ನಮ್ಮ ರಾಜ್ಯ ಸರ್ಕಾರವು ಸೇರಿದಂತೆ ) ಬಹುಮಾನದ ಸುರಿಮಳೆ ಗೈದು ತಮ್ಮ ಅಸಂಖ್ಯ ಪಾಪುಲಿಸ್ಟ್ ಕ್ರಮಗಳಿಗೆ ಇನ್ನೊಂದು ಸೇರ್ಪಡೆ ಮಾಡಿದ್ದನ್ನು ಕಂಡೆ. ಒಂದು ಆಟಕ್ಕೆ ಈ ಮಟ್ಟದ ಗಮನ, ಆದ್ಯತೆ ಕೊಡುವಷ್ಟರಲ್ಲಿ ಅದರ ಅರ್ಧದಷ್ಟು ಗಮನ ಈ ದೇಶದ, ಅದರ ಜನರ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹುಡುಕುವ ನಿಟ್ಟಿನಲ್ಲೂ ಕೊಟ್ಟಿದ್ದಲ್ಲಿ ನಮ್ಮೆದುರು ಇರುವ ಸಮಸ್ಯೆಗಳಲ್ಲಿ ಕೆಲವಕ್ಕಾದರು ಪರಿಹಾರ ಸಿಕ್ಕಿರುತಿತ್ತೇನೋ ಅನ್ನಿಸಿತು.
ಕನ್ನಡಕ್ಕಿಂತ ತಮಿಳು ಯಾವುದರಲ್ಲಿ ಮುಂದಿದೆ?
ಆತನಿಗೆ ಮದುವೆಯ ಮೊದಲೆ ಗೊತ್ತಿತು!?
ಯಾವುದೇ ತೊಂದರೆಯಿಲ್ಲದೆ ಸುಂದರವಾಗಿ ಜೀವನಮಾಡುತ್ತಿದ್ದ ವಿದ್ಯಾವಂತಳಾದ ಆಕೆಯ ಬಾಳಿನಲ್ಲಿ ಮದುವೆಯ ಸಂದರ್ಭವೊಂದು ಬಂದಿತು. ದೂರದ ಮುಂಬೈಯಿಂದ ಯುವಕನೊರ್ವ ಆಕೆಯನ್ನು ನೋಡಲು ಬಂದ. ಆ ವರನಿಗೆ ವಧು ಇಷ್ಟವಾದಳು. ಮುಂಬೈಯಲ್ಲಿರುವ ಹುಡುಗ, ಒಳ್ಳೆಯ ಸಂಪಾದನೆ, ಸುಂದರ, ಇದೆಲ್ಲವನ್ನು ಕಂಡ ವಧುವಿನ ಕಡೆಯವರಿಗೂ ವರ ಇಷ್ಟವಾದನು. ವರನ ಕಡೆಯವರು ಆತುರದಲ್ಲಿ ಮದುವೆಯನ್ನು ಪಿಕ್ಸ್ ಮಾಡಿದರು. ಮದುವೆಯೂ ಆಯಿತು. ಮದುವೆಯಾಗಿ ಮೊದಲ ಮಗುವಾಗುವ ಸಮಯದಲ್ಲಿ ಆಕೆಗೆ ತಿಳಿಯಿತು ನನಗೆ ಎಚ್ಐವಿ ಬಂದಿದೆ ಎಂದು. ಇದನ್ನು ಆಕೆಯ ಗಂಡ ಉಡುಗೊರೆಯಾಗಿ ನೀಡಿದ್ದ ಆತನಿಗೆ ಮದುವೆಗೆ ಮೊದಲೇ ಈ ರೋಗವಿದ್ದರೂ ಅದನ್ನು ಎಲ್ಲರೂ ಸೇರಿ ಮುಚ್ಚಿ ಹಾಕಿ ಆಕೆಯ ಜೀವನದಲ್ಲಿ ಆಟವಾಡಿದ್ದರು. ಆದರೆ ಸಂಘಟನೆಯ ಸಹಾಯ ಪಡೆದು ಎಆರ್ಟಿ ಚಿಕಿತ್ಸೆಯನ್ನು ಪಡೆದು ಎಲ್ಲರಂತೆ ಬದುಕುತ್ತಿದ್ದಾಳೆ. ನೋಡಿ ಈ ಮಾತನ್ನು ಎಚ್ಐವಿ ಪೀಡಿತೆಯಾದ ಅಮಾಯಕ ಹೆಣ್ಣುಮಗಳೊಬ್ಬಳು ಹೇಳುತ್ತಿರುವಂತಹದ್ದು. ಈ ರೀತಿ ಮೋಸವನ್ನು ಹೋಗುವುದಕ್ಕೆ ಮೊದಲು ವಿವಾಹ ಸಂಬಂಧವನ್ನು ಮಾಡುವಾಗ ನೀವೆಲ್ಲ ಸ್ವಲ್ಪ ಯೋಚನೆಮಾಡಿ ನಿರ್ಧಾರ ತೆಗೆದುಕೊಳ್ಳಿ. ಆವಾಗ ಮುಂದೆ ಪರಿತಪಿಸುವ ಅಗತ್ಯ ಬರಲ್ಲ. ಆ ಮಾತು ಆಗಿರಲಿ ಈಗ ಎಚ್ಐವಿ ಬಂದವರು ಏನು ಮಾಡುವುದು ಎಂಬುದರ ಬಗ್ಗೆ ಸ್ವಲ್ಪ ಗಮನಹರಿಸೋಣ. ಮತ್ತಷ್ಟು ಓದು 
ಸುದ್ದಿ ‘ಮೋಹ’ದ ಪತ್ರಿಕೆಗಳ ಬಗ್ಗೆ…..
ಅರೆಹೊಳೆ ಸದಾಶಿವರಾಯರು
ಕಟೀಲು ದೇವಳಕ್ಕೆ ಶಿಲ್ಪಾ ಶೆಟ್ಟಿ ಬಂದರು!. ಇದು ನಮ್ಮ ಪತ್ರಿಕೆಗಳ ಮಟ್ಟಿಗೆ ಬಹು ಮುಖ್ಯ ಸುದ್ದಿಯಾಯಿತು! ಆಶ್ಚರ್ಯವೆಂದರೆ, ನಮ್ಮ ಪತ್ರಿಕೆಗಳು ಇದನ್ನು ಮುಖ ಪುಟದಲ್ಲಿ ಪ್ರಕಟಿಸಿ ಕೃತಾರ್ಥವಾದುವು. ಆಕೆ ತನ್ನದೇ ಹುಟ್ಟೂರಿಗೆ ಬಂದದ್ದು, ತನ್ನ ಅಜ್ಜಿಮನೆಯಲ್ಲಿ ಓಡಾಡಿದ್ದು, ಕೋಳಿ ಸುಕ್ಕಾ ತಿಂದದ್ದು…..ಎಲ್ಲವು ಸುದ್ದಿಯಾಯಿತು. ಮತ್ತೂ ಒಂದು ವಿಶೇಷ ಸುದ್ದಿ ಎಂದರೆ ಕಟೀಲು ಕ್ಷೇತ್ರವೇ ಈಕೆಯ ಭೇಟಿಯಿಂದ ಪವಿತ್ರವಾಯಿತೇನೋ ಎಂಬಷ್ಟೂ ಸುದ್ದಿಯನ್ನು ಆಕೆ ವಿಮಾನದಲ್ಲಿ ಬಂದಿಳಿದಿದ್ದರಿಂದ, ಮರಳಿ ವಿಮಾನವೇರುವ ತನಕ ಬರೆಯಲಾಯಿತು. ಎಲ್ಲಾ ಪತ್ರಿಕೆಗಳ ಒಬ್ಬೊಬ್ಬ ಪತ್ರಕರ್ತನೂ ಅಷ್ಟು ಹೊತ್ತಿನ ಮಟ್ಟಿಗೆ ಆಕೆಯ ಸಂಸಾರದ ಹಿಂದಿದ್ದ.!
ಈ ಕ್ಷಣದಲ್ಲಿ ನನಗೊಂದು ವಿಷಯ ನೆನಪಿಗೆ ಬರುತ್ತದೆ. ಇತ್ತೀಚೆಗೆ ನಾವು ಒಂದು ಸಮ್ಮೇಳನವನ್ನು ಆಯೋಜಿಸಿದ್ದೆವು. ಅದರ ಉದ್ಘಾಟನಾ ಸಮಾರಂಭದ ವರದಿ ಸವಿಸ್ತಾರವಾಗಿ ಪ್ರಕಟವಾಯಿತು. ಉದ್ಘಾಟನೆ ಮುಗಿಯುತ್ತಲೇ, ಒಂದು ಮಗು ವಾಮಾಚಾರಕ್ಕೆ ಬಲಿಯಾದ ಘಟನೆ ಬಹಿರಂಗ ಗೊಂಡಿತು. ಅದೇ ಸಂಜೆ ನಮ್ಮ ಸಮ್ಮೇಳನದ ಸಮಾರೋಪವೂ ನಡೆಯುತ್ತಿತ್ತು. ಆದರೆ ಸಂಜೆ ಒಬ್ಬನೇ ಒಬ್ಬ ಪತ್ರಕರ್ತನೂ ಅಲ್ಲಿರಲಿಲ್ಲ. ಅಲ್ಲಿನ ಯಾವ ವರದಿಯೂ ದಾಖಲಾಗಲಿಲ್ಲ. ಸಮ್ಮೇಳನದಲ್ಲಿಯೇ ತಲ್ಲೀನರಾಗಿದ್ದ ನಮಗೆ ಇದೇಕೆ ಎಂದು ಆಶ್ಚರ್ಯವಾಯಿತು. ನಂತರ, ನಮಗೆ ಆ ವಾಮಾಚಾರದ ಘಟನೆಯಿಂದ ಸಂಭ್ರಮದ ಘಟನೆಯನ್ನೂ ಮರೆಯುವಷ್ಟು ಘಾಸಿಯಾಯಿತು-ಖೇದವಾಯಿತು. ಮತ್ತಷ್ಟು ಓದು 
ಸ್ನೇಹಿತ ಮೊದಲ ಬಾರಿ ಅತ್ತುಬಿಟ್ಟ…!
ಪ್ರವೀಣಚಂದ್ರ, ಪುತ್ತೂರು
ಬಸ್ ವೇಗವಾಗಿ ಸಾಗುತ್ತಿತ್ತು. ಊರಿಗೆ ಬಂದ ಸಂಭ್ರಮವನ್ನು ಕಿತ್ತುಕೊಂಡ ಆ ಕ್ಷಣದ ಕುರಿತು ಯೋಚಿಸುತ್ತಿದ್ದೆ. ಬಸ್ಸಿನ ಕಿಟಕಿ ಹಾಕಿದ್ದರೂ ಚಳಿ ಕಾಡುತ್ತಿತ್ತು. ಹೃದಯವೂ ತಣ್ಣಗಿತ್ತು. ಅಪದಮನಿ ಅಭಿದಮನಿಗಳೆರಡೂ ನೋವಿನಲ್ಲಿತ್ತು. ಆಪ್ತ ಸ್ನೇಹಿತನೊಬ್ಬನ ಮುಂದೆ ಸ್ವಾಭಿಮಾನದ ಪ್ರಶ್ನೆಯೆದ್ದು ಅಹಲ್ಯೆಯಂತೆ ಕಲ್ಲಾದ ಪರಿಣಾಮವದು. ನನ್ನ ಎದುರು ಮಾತು ಆತನಿಗೆ ಅನಿರೀಕ್ಷಿತವಾಗಿತ್ತು. ನನಗೆ ಅನಿವಾರ್ಯವಾಗಿತ್ತು.
***
ಬ್ಯಾಗಿನಲ್ಲಿದ್ದ ಪತ್ರಿಕೆಯೊಂದನ್ನು ಕೈಗೆತ್ತಿಕೊಂಡೆ. ಅಲ್ಲಿ ನಾಗತಿಹಳ್ಳಿ ಸಂಬಂಧದ ಕುರಿತು ಬರೆದಿದ್ದರು. ಸಂಬಂಧವೆಂದರೆ ಬೆಂಕಿ ಮತ್ತು ಚಳಿ ಕಾಯುವವನ ನಡುವಿನ ಅಂತರದಂತೆ. ಚಳಿಯಾಗುತ್ತೆ ಎಂದು ಬೆಂಕಿಯನ್ನು ಮುಟ್ಟುವ ಹಾಗಿಲ್ಲ. ಬೆಂಕಿಗೂ ವ್ಯಕ್ತಿಗೂ ಒಂದಿಷ್ಟು ಅಂತರ ಕಾಯ್ದುಕೊಳ್ಳಬೇಕು ಅಂತ ಬರೆದಿದ್ದರು. ಸ್ನೇಹಕ್ಕೂ ಇದು ಅನ್ವಯವಾಗುತ್ತಾ? ನಾನು ಯೋಚಿಸತೊಡಗಿದೆ. ಸ್ನೇಹಕ್ಕೆ ಯಾವುದೇ ಅಂತರಗಳೇ ಇಲ್ಲವಾ ಅರ್ಥವಾಗಲಿಲ್ಲ.
***
ಇನ್ ಬಾಕ್ಸ್ ತೆರೆದು ನೋಡಿದಾಗ ಸ್ನೇಹದ ಮಹತ್ವ ಸಾರುವ ಹತ್ತಾರು ಸಂದೇಶಗಳು ಬಂದು ಕೂತ್ತಿದ್ದವು. ನಮ್ಮ ಕೋಪನೋಡಿ ಸ್ನೇಹಿತರೇ ಕಳುಹಿಸುತ್ತಿದ್ದರು. ಬೇರೆ ಸಂದರ್ಭದಲ್ಲಿಯಾದರೆ ಡಿಲಿಟ್ ಮಾಡಿ ಬಿಡುತ್ತಿದ್ದೆ. ಈಗ ಪ್ರತಿಪದಗಳು ಅರ್ಥವತ್ತಾಗಿ ಗೋಚರಿಸುತ್ತಿದ್ದವು. ನಮ್ಮೊಳಗೆ ಯಾಕೆ ಜಗಳ ಎಂದು ಸ್ನೇಹಿತರೆಲ್ಲರ ಗೋಗೆರತದಂತೆ ಕಾಡುತ್ತಿದ್ದವು.
***
ಅವನಲ್ಲಿ ಜಗಳ ಮಾಡಿದ ಮರುಕ್ಷಣವೇ ಆತನೊಂದಿಗೆ ಮನಸ್ಸು ರಾಜಿಯಾಗಿತ್ತು. ಆದರೆ ಮಾತನಾಡಲು ಮನಸ್ಸು ಇಚ್ಚಿಸಲಿಲ್ಲ. ಏನು ನಡೆಯಿತು ಎಂದು ಬರೆಯಲು ಕಷ್ಟ. ಯಾಕೆಂದರೆ ಅದರ ಯಾತನೆ ಅನುಭವವೇದ್ಯ. ಇಲ್ಲೊಂದು ಕತೆ ಓದಿ.
***
ಮತ್ತಷ್ಟು ಓದು 








