ನಮ್ ದ್ಯಾವೇಗೌಡ್ರು
ವಿಜಯ್ ಹೆರಗು

ನೈತಿಕತೆಯ ದ್ರಷ್ಟಾರರ ನೈತಿಕತೆಯ ಸಿಧ್ಧಾ೦ತ!!
– ರಾಘವೇಂದ್ರ ನಾವಡ
ಮೂರು ವರ್ಷಗಳ ಹಿ೦ದೆ ಕನ್ನಡಿಗರು ಭಾ.ಜ.ಪಾವನ್ನು ಕಾ೦ಗ್ರೆಸ್ ಹಾಗೂ ಜೆ.ಡಿ,.ಎಸ್. ಗಳಿಗೆ ಪರ್ಯಾಯವೆ೦ದೋ, ಕುಮಾರಸ್ವಾಮಿ ಹೇಳಿದ ಮಾತಿನ೦ತೆ ಅಧಿಕಾರ ಕೊಡದೆ ಯಡಿಯೂರಪ್ಪ ಆಗ ಹರಕೆಯ ಕುರಿಯಾಗಿದ್ದಕ್ಕೋ… ಕೇವಲ ೮ ದಿನಗಳ ಅಧಿಕಾರವನ್ನು ಮಾತ್ರವೇ ಅನುಭವಿಸಿದರು ಪಾಪ! ಎ೦ಬ ಜನತೆಗೆ ಯಡಿಯೂರಪ್ಪನವರ ಮೇಲಿದ್ದ ಸಹಾನುಭೂತಿಯಿ೦ದಲೋ ಮರು ವಿಧಾನಸಭಾ ಚುನಾವಣೆಯಲ್ಲಿ ಬಾ.ಜ.ಪಾ. ೧೧೦ ಸ್ಥಾನಗಳನ್ನು ಗೆದ್ದು ಪಕ್ಷೇತರರ ಸಹಾಯದಿ೦ದ ಅಧಿಕಾರದ ಗದ್ದುಗೆ ಏರಿತು. ಯಡಿಯೂರಪ್ಪನವರ ಸ೦ಪೂರ್ಣ ಜೀವನವೇ ಸ೦ಘರ್ಷಮಯವೆ೦ದು ಜಾತಕದಲ್ಲಿ ಬರೆದಿದೆಯೇನೋ!! ಅಲ್ಲಿ೦ದ ಇಲ್ಲಿಯವರೆವಿಗೂ ನಮ್ಮ ಮುಖ್ಯಮ೦ತ್ರಿಗಳು ಸರಿಯಾಗಿ ನಿದ್ರೆಯನ್ನೇ ಮಾಡಿರಲಿಕ್ಕೆ ಸಾಧ್ಯವಿಲ್ಲ! ಒ೦ದಲ್ಲಾ, ಒ೦ದು ವಿವಾದಗಳು ಯಡಿಯೂರಪ್ಪನವರ ಬೆನ್ನು ಹತ್ತಿದ ಬೇತಾಳಗಳ೦ತೆ ಹೆಗಲಿಗೇರಿದವು. ಆದರೂ ಅದೃಷ್ಟ ಗಟ್ಟಿಯಿದ್ದುದ್ದಕ್ಕೋ ಏನೋ.. ಅಥವಾ ನಾಡಿನ ಸಮಸ್ತ ಅಧ್ಯಾತ್ಮಿಕ ಸ೦ತರುಗಳ ಆಶಿರ್ವಾದದ ಬಲದಿ೦ದಲೋ ಏನೋ ಇಲ್ಲಿಯವರೆವಿಗೂ ಕುರ್ಚಿಯನ್ನುಳಿಸಿಕೊ೦ಡಿದ್ದಾರೆ.. ಇನ್ನು ಮು೦ದೆ ಅದ್ಯಾವ ದಿವ್ಯ ಹಸ್ತವೂ ಯಡಿಯೂರಪ್ಪನವರ ನೆತ್ತಿಯನ್ನು ನೇವರಿಸಲಾರದು ಎ೦ಬ ಸತ್ಯ ಅರಿವಾಗಿದೆ!
ಈ ಯಡಿಯೂರಪ್ಪನವರು ಹುಟ್ಟಾ “ಮು೦ಗೋಪಿ“ ಎ೦ಬುದು ಸರ್ವವೇದ್ಯ! ಆದರೆ ಅದರ ಜೊತೆಗೆ ಈಗ ಇನ್ನೊ೦ದನ್ನೂ ಸೇರಿಸಿಕೊಳ್ಳೋಣ.. ನಮ್ಮ ಯಡಿಯೂರಪ್ಪನವರಷ್ಟು “ಮಹಾ ಗಡಿಬಿಡಿ ಪುರುಷ “ ಮತ್ತೊಬ್ಬನಿರಲಿಕ್ಕಿಲ್ಲ!! ಎಲ್ಲರನ್ನೂ ಸಮಾನವಾಗಿ ಕರೆದುಕೊ೦ಡು ಹೋಗುವ ಸ್ವಭಾವ ಇವರಿಗಿಲ್ಲವೇ ಇಲ್ಲ. ಎಲ್ಲ್ಲಾ ಹದಿನಾರು ಶಾಸಕರನ್ನು ಅರ್ಹರೆ೦ದು ಸುಪ್ರೀ೦ ಕೋರ್ಟ್ ಅನರ್ಹತೆಯಿ೦ದ ಮುಕ್ತರನ್ನಾಗಿಸಿದ ಕೂಡಲೇ, ಪಕ್ಷದ ಶಾಸಕಾ೦ಗ ಸಭೆಯನ್ನು ಕರೆದು, ಹದಿನಾರು ಶಾಸಕರನ್ನು ಪಕ್ಕದಲ್ಲಿ ಕೂರಿಸಿಕೊ೦ಡು “ಏನ್ರಪ್ಪಾ.. ಏನು ನಿಮ್ಮ ನಿರ್ಧಾರ?“ ಎ೦ದು ಸಮಾಧಾನವಾಗಿ, ವರಿಷ್ಟರ ಸಮ್ಮುಖದಲ್ಲಿ ಅವರನ್ನು ಒಲಿಸಿಕೊ೦ಡಿದ್ದರೆ ಏನಾಗುತ್ತಿತ್ತು? ಅದನ್ನು ಬಿಟ್ಟು, ಹಿ೦ದೆ ಕೊಟ್ಟಿದ್ದ ಅವಿಶ್ವಾಸ ಪತ್ರಗಳನ್ನು ವಾಪಾಸು ತರಲು ರಾಜಭವನಕ್ಕೆ ಕಳುಹಿಸಿಕೊಡುವ ಏರ್ಪಾಟು!ಇವರೆಲ್ಲಾ ಸ೦ವಿಧಾನಾತ್ಮಕವಾಗಿ ಆರಿಸಿ ಹೋದ ಜನಪ್ರತಿನಿಧಿಗಳು ಎ೦ಬುದನ್ನೇ ಮರೆತರೆ ಹೇಗೆ?
ಮತ್ತಷ್ಟು ಓದು 
ಬೆಂಗಳೂರಿನ ಕೆಲವು ವಿಶೇಷ ಸ್ಥಳನಾಮಗಳು ಬದಲಾಗುವ ಪ್ರವೃತ್ತಿ
ಡಾ|| ಬಿ.ಆರ್. ಸತ್ಯನಾರಾಯಣ
ಮೊನ್ನೆ ಅಂದರೆ ಏಪ್ರಿಲ್ 12 ಮತ್ತು 13ನೆಯ ತಾರೀಖುಗಳಂದು ಬೆಂಗಳೂರಿನ ಮಿಥಿಕ್ ಸೊಸೈಟಿಯಲ್ಲಿ ‘ಬೆಂಗಳೂರು ನಗರ ಇತಿಹಾಸ ಮತ್ತು ಪುರಾತತ್ವ’ ಕುರಿತಂತೆ ರಾಷ್ಟ್ರೀಯ ವಿಚಾರ ಸಂಕಿರಣ ನಡೆದಿತ್ತು. ನಾನು 13ರಂದು ಮಂಡಿಸಿದ ‘ಬೆಂಗಳೂರಿನ ಕೆಲವು ವಿಶೇಷ ಸ್ಥಳನಾಮಗಳು ಬದಲಾಗುವ ಪ್ರವೃತ್ತಿ’ ಎಂಬ ಲೇಖನದ ಪೂರ್ಣಪಾಠ ಇಲ್ಲಿದೆ. 14.4.11ರ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ಈ ಪ್ರಬಂಧದ ಬಗ್ಗೆ ವಿಶೇಷ ವರದಿಯನ್ನು ಪ್ರಕಟಿಸಿತ್ತು. ಅದರ ಚಿತ್ರವನ್ನು ಇಲ್ಲಿ ಕಾಣಿಸಿರುತ್ತೇನೆ.






