ಕನ್ನಡ ಪ್ರೇಕ್ಷಕರಿಗೆ ತಿಳುವಳಿಕೆ ಇಲ್ವ?
– ಅರುಣ್ ಜಾವಗಲ್
ಡಬ್ಬಿಂಗ್ ಬೇಡ ಎಂದು ಹೇಳುತ್ತಿರುವ ಬಿ ಸುರೇಶ ರವರು ಫೇಸ್ ಬುಕ್ ನಲ್ಲಿ ಕೆಲವು ಡಬ್ಬಿಂಗ್ ಪರವಾದ ಮಾತುಗಳನ್ನು ಪಟ್ಟಿ ಮಾಡಿ ಅದಕ್ಕೆ ಉತ್ತರಿಸಲು ಪ್ರಯತ್ಸಿಸಿದ್ದಾರೆ. ಡಬ್ಬಿಂಗ್ ಪರವಾದ ಹೆಚ್ಚು ಕಡಿಮೆ ಎಲ್ಲಾ ಮಾತುಗಳನ್ನ ಪಟ್ಟಿಮಾಡಿದ್ದಕ್ಕಾಗಿ ಮತ್ತು ಅದಕ್ಕೆ ಅರೋಗ್ಯಕರ ರೀತಿಯಲ್ಲಿ ಉತ್ತರಿಸಲು ಪ್ರಯತ್ಸಿಸಿದ್ದಕ್ಕೆ ನಾನು ಅಬಿನಂದಿಸುತ್ತೇನೆ.

ಅಂಥ ಕಳ್ಳರು ಸಂತೆಲೀ ಜೊತೆಯಾದರು…
– ವಿಜಯ್ ಹೆರಗು
ಭಾರತ ದೇಶದ ಪ್ರಜಾಪ್ರಭುತ್ವ ಸಂಕಷ್ಟದಲ್ಲಿದೆ. ಇಲ್ಲಿ ವಾಹನ ಚಲಾಯಿಸಲು ಪರವಾನಗಿ ಇಲ್ಲದಿದ್ದರೂ ಪರವಾಗಿಲ್ಲ, ಪೋಲಿಸಪ್ಪನ ಕೈಗೆ ನೂರರ ನೋಟು ತುರುಕಿ ಬಚಾವಾಗಬಹುದು. ಆದರೆ ಉಪವಾಸ ಸತ್ಯಾಗ್ರಹ ಮಾಡಲು ಅನುಮತಿ ಬೇಕು. ಇಲ್ಲದಿದ್ದರೆ ಹೆಂಗಸರು, ಮಕ್ಕಳೆಂಬ ಭೇದ ತೋರದೆ ಸದೆಬಡಿಯುತ್ತಾರೆ. ಸಾಮಾನ್ಯ ಜನರು ಏನೂ ಮಾಡಲಾಗದ ಹಂತ ತಲುಪಿದ್ದಾರೆ. ತಾವೇ ಆರಿಸಿಕಳಿಸಿದ ಮಂದಿ ತಮ್ಮ ಮೇಲೆ ದಬ್ಬಾಳಿಕೆ ಮಾಡುವುದನ್ನು ನೋಡುವ ಅಸಹಾಯಕ ಸ್ಥಿತಿ ಯಾವುದೇ ದೇಶದ ಜನರಿಗೂ ಬರಬಾರದು.





