ಸ್ವಲ್ಪವಾದರೂ ಸಭ್ಯತೆ ಇರಲಿ………!!!
ಮಾರಿಯಮ್ಮ ದೇವರ ಕಾಣಿಕೆ ಡಬ್ಬವೂ – ಮಸಾಲೆ ದೋಸೆಯೂ..!
– ರವಿ ಮುರ್ನಾಡು
ದೇವರ ಕಾಣಿಕೆ ದುಡ್ಡು ತೆಗೆಯುವುದೆಂದರೇನು… ರಕ್ತ ಕಾರಿ ಸತ್ತಾರು…! ಪಕ್ಕದ ಮನೆಯ ಅಮ್ಮುಣ್ಣಿಯಮ್ಮ ಒಮ್ಮೆ ಹೇಳಿದ್ದರು. ಈಗೇನು ಮಾಡುವುದು.? ಕಾಣಿಕೆ ದುಡ್ಡು ತೆಗೆದದ್ದು ಆಯಿತು.. .ಅಲ್ಲೆಲ್ಲಾ ಹಾವುಗಳು ಓಡಾಡುತ್ತವೆ. ನಾನು ನೋಡಿದ್ದೆ. ಭಾರೀ ಉದ್ದದ ಹಾವುಗಳು. ರಾತ್ರಿ ಬಂದರೋ? ಅಳು ಬರುವುದೊಂದೇ ಬಾಕಿ. ಅಜ್ಜಿ- ಚಿಕ್ಕಮ್ಮ ಬೆಲ್ಲದ ಮಿಠಾಯಿಗೆ ಕೊಡುವ ಹಣವನ್ನು ಒಟ್ಟು ಸೇರಿಸಿ ವಾಪಾಸು ಹಾಕುವುದಾಗಿ ಹೇಳಿದ ಮೇಲೆ ನಿದ್ದೆ ಬಂತು.
ತೆಗೆದದ್ದು ಒಂದು ರೂಪಾಯಿ..! ಅಜ್ಜಿ ಸೀರೆ ಸೆರಗಿನ ಅಂಚಿನಲ್ಲಿ ದುಡ್ಡು ಇಟ್ಟಿರುತ್ತಾರೆ. ತೋಟದಲ್ಲಿ ಕೆಲಸ ಮಾಡುವಾಗ ” ಟೀ” ಕುಡಿಯಲು ಐವತ್ತು ಪೈಸೆ, ಇಪ್ಪತ್ತೈದು ಪೈಸೆ ಹಾಗೆ. ತೆಗೆದರೆ ಹೊಡೆತ ಬೀಳುವುದಂತು ಖಂಡಿತಾ. ದೇವರ ಕಾಣಿಕೆ ದುಡ್ಡು ವಿಷಯ ಗೊತ್ತಾದರೋ?. ಬೆಳಿಗ್ಗೆ ಕಣ್ಣು ಬಿಟ್ಟಾಗಲೂ ಇದೇ ಆಲೋಚನೆ.
ದೊಡ್ಡ ಮಾವ ವೀರಾಜಪೇಟೆಯ ಯಾವುದೋ ಹೋಟೇಲ್ಲಿನಲ್ಲಿ ಸಪ್ಲಯರ್ ಆಗಿದ್ದ. ಸಂತೆ ದಿನ ಭಾನುವಾರ ಎರಡು ತಿಂಗಳಿಗೊಮ್ಮೆ ಬರುವುದು. ಆ ಒಂದು ಸಂತೆ ದಿನ ಅಜ್ಜಿ, ಚಿಕ್ಕಮ್ಮ ಮತ್ತು ನಾನೂ ಸಂತೆಗೆ ಹೋಗಿದ್ದಾಗ, ಅವನೂ ಬಂದಿದ್ದ. ಎಲ್ಲಾ ಸಾಮಾನು ಖರೀದಿಸಿದ ಮೇಲೆ ನಾವು ಮಸಾಲೆ ದೋಸೆ ತಿಂದದ್ದು. ಸುಂಟಿಕೊಪ್ಪದ ಗಣೇಶ ಸಿನೇಮಾ ಥಿಯೇಟರ್ ಪಕ್ಕದ ಕ್ಯಾಂಟೀನಿನಲ್ಲಿ. ಭಾರೀ ಅಗಲದ ದೋಸೆ ಅದು. ತುಪ್ಪ ಹಾಕಿ ಮಾಡಿದ್ದು. ಜೊತೆಗೆ ರುಚಿರುಚಿಯಾದ ಆಲೂಗೆಡ್ಡೆ ಪಲ್ಯ ಮತ್ತು ತೆಂಗಿನಕಾಯಿ ಚಟ್ನಿಯೂ. ಈ ರುಚಿಯನ್ನು ನೆನೆದು ರಾತ್ರಿ ಊಟವೂ ಸಪ್ಪೆ..!. ಅದೇ ಮಸಾಲೆ ದೋಸೆಯ ಕನಸುಗಳು. ಮತ್ತಷ್ಟು ಓದು