ಇದರ ಕತೆ ಇಷ್ಟೇ ಕಣಪ್ಪೋ….
ಉಮೇಶ್ ದೇಸಾಯಿ
ಹೌದು ಆ ಕತೆಬರೆದವ ಸಹ ಈ ತಿರುವು ಊಹಿಸಿರಲಿಕ್ಕಿಲ್ಲ. ನಾವು ಆರಿಸಿ ಕಳಿಸಿದ ಪಕ್ಷ ಅದರ ಮುಖಂಡ ಇಂದು ಆಣೆ ಪ್ರಮಾಣ ಮಾಡುತ್ತಾರಂತೆ ಅವರ ಹಿಂದಿನ ಸಿಎಮ್ಮು..

ನಮ್ಮದು ರಾಮಜನ್ಮಭೂಮಿಯೂ ಹೌದು,ಪುರಾತನ ನಾಗರೀಕತೆಯೂ ಹೌದು…!
– ಕೆ.ಎಸ್ ರಾಘವೇಂದ್ರ ನಾವಡ
ಇದು ಬಹಳ ಆಸಕ್ತಿದಾಯಕವಾದ ಸಾಧಾರಸಹಿತವಾದ ಬರಹ. ನಾವುಗಳು ಇದನ್ನು ಓದುತ್ತಾ ಹೋದ೦ತೆ “ಶ್ರೀ ರಾಮ“ ಮತ್ತು “ವಾಲ್ಮೀಕಿ ಮಹರ್ಷಿ ವಿರಚಿತ ರಾಮಾಯಣ ಕಟ್ಟುಕಥೆಯಲ್ಲ” ಹಾಗೂ ನಮ್ಮ ನಾಗರೀಕತೆಯೇ ಪುರಾತನ ನಾಗರೀಕತೆ ಎ೦ಬುದು ನಮಗರಿವಾಗುತ್ತದೆ.ಈ ಲೇಖನದಲ್ಲಿ ವೈಜ್ಞಾನಿಕವಾಗಿ ಅದನ್ನು ಸಾದರ ಪಡಿಸಲು ಪ್ರಯತ್ನಿಸಿದ್ದೇನೆ. ನಾಸಾದವರು ತಿಳಿಸಿದ೦ತೆ, ಶ್ರೀ ರಾಮ ಜನಿಸಿದ್ದನೇ? ಶ್ರೀ ರಾಮಾಯಣ ನಡೆದಿತ್ತೇ ಎನ್ನುವ ಪ್ರಶ್ನೆಗಳಿಗೆ ಈ ಲೇಖನ ಅತ್ಯುತ್ತಮ ಹಾಗೂ ನ೦ಬಲರ್ಹವಾದ ದಾಖಲೆ.
ಮಹರ್ಷಿ ವಾಲ್ಮೀಕಿಗಳು ಶ್ರೀರಾಮನು ಅಯೋಧ್ಯೆಯ ರಾಜನಾಗಿ ಪಟ್ಟಾಭಿಷೇಕದ ನ೦ತರ ಮೊದಲ ಬಾರಿಗೆ ಶ್ರೀರಾಮಾಯಣವನ್ನು ಬರೆದರೆ೦ಬುದು ನಮಗೆ ತಿಳಿದ ವಿಷಯ.ಆದ್ದರಿ೦ದ ಇದೇ ಮೂಲ ರಾಮಾಯಣ.ಮಹರ್ಷಿ ವಾಲ್ಮೀಕಿಗಳು ಮಹಾ ಜ್ಯೋತಿಷಿಗಳಾಗಿದ್ದರು. ಅವರು ರಾಮಾಯಣದ ಮಹತ್ತರ ದಿನಗಳ ಬಗ್ಗೆ ಆ ದಿನಗಳಲ್ಲಿ ಗ್ರಹ ಹಾಗೂ ನಕ್ಷತ್ರಗಳು ಯಾವ ಯಾವ ಮನೆಗಳಲ್ಲಿದ್ದವು ಎ೦ಬುದರ ಸಮೇತ ವಿವರಿಸುತ್ತಾರೆ. ಪ್ರತಿ ದಿನವೂ ಗ್ರಹಗತಿಗಳು ಬದಲಾಗುತ್ತಿರುತ್ತವೆ ಎ೦ಬುದು ನಮಗೆ ವೇದ್ಯವಿರುವ ವಿಚಾರ.“ಪ್ಲಾನೆಟರಿಯಮ್“ ಎನ್ನುವ ಸಾಫ್ಟ್ ವೇರ್ ನಲ್ಲಿ ಮಹರ್ಷಿ ವಾಲ್ಮೀಕಿ ಹೆಸರಿಸಿರುವ ಗ್ರಹಗತಿಗಳನ್ನು ಬರೆಯುವುದರ ಮೂಲಕ ಅದಕ್ಕೆ ಸರಿಯಾದ ಆ೦ಗ್ಲ ವಾರ್ಷಿಕ ದಿನಗಳನ್ನು ಪಡೆಯಬಹುದು. ಇದನ್ನು ನಾಸಾದವರು ಸಿಧ್ಢಪಡಿಸಿದ್ದಾರೆ.
ಭಾರತೀಯ ಕ೦ದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಪುಷ್ಕರ್ ಭಟ್ನಾಗರ್ ಈ ಸಾಫ್ಟ್ ವೇರ್ ಅನ್ನು ಯು.ಎಸ್. ನಿ೦ದ ಪಡೆದುಕೊ೦ಡರು. ಇದನ್ನು ಸೂರ್ಯಗ್ರಹಣ, ಚ೦ದ್ರಗ್ರಹಣ ಹಾಗೂ ಭೂಮಿಯಿ೦ದ ಇತರೆ ಗ್ರಹಗಳಿರುವ ದೂರವನ್ನು ಲೆಕ್ಕ ಹಾಕಲು ಬಳಸುತ್ತಿದ್ದರು.ಭಟ್ನಾಗರ್ ಅವರು ಅದರಲ್ಲಿ ಮಹರ್ಷಿ ವಾಲ್ಮೀಕಿ ಬರೆದಿರುವ ಎಲ್ಲಾ ಗ್ರಹಗಳ ಮಾಹಿತಿಗಳನ್ನು ಆಯಾ ದಿನಗಳಿಗೆ ಸ೦ಬ೦ಧಿಸಿದ೦ತೆ ನೀಡಲಾಗಿ, ಅದರಿ೦ದ ಮಹತ್ತರವಾದ ಹಾಗೂ ಉತ್ತಮ ಫಲಿತಾ೦ಶವನ್ನು ಪಡೆದರು. ಬಹುತೇಕವಾಗಿ ಶ್ರೀ ರಾಮನ ಜನನದಿ೦ದ ಹಾಗೂ ಅವನು ವನವಾಸವನ್ನು ಪೂರೈಸಿ ಅಯೋಧ್ಯೆಗೆ ಮರಳಿ ಬರುವವರೆಗಿನ ಎಲ್ಲಾ ಮಾಹಿತಿಗಳನ್ನು ಆ೦ಗ್ಲ ವಾರ್ಷಿಕ ದಿನಾ೦ಕದ೦ತೆ ಪಡೆದರು.
ಮತ್ತಷ್ಟು ಓದು 
‘ಅನ್ಯಾಯ’ದ ಮನೆಯೊಳಗಿನ ಆಶಾಕಿರಣ.
– ಚಿತ್ರಾ ಸಂತೋಷ್
ದೆಹಲಿಯ ಜಿ.ಬಿ. ರಸ್ತೆಯಲ್ಲಿ ನನ್ನ ಪುಟ್ಟ ವಯಸ್ಸು, ಬದುಕು ಮೂರಾಬಟ್ಟೆಯಾಯಿತು ಅನಿಸಿತ್ತು. ನನ್ನ ವಿರುದ್ಧ ನಡೆಯುತ್ತಿರುವ ಅನ್ಯಾಯಗಳಿಗೆ ನನಗೆ ದನಿಯೆತ್ತಲೂ ನನ್ನ ಜೊತೆ ಯಾರಿರಲಿಲ್ಲ. ಆ ‘ಅನ್ಯಾಯ’ದ ಮನೆಯೊಳಗೆ ಪ್ರತಿ ನಿಮಿಷವೂ ನನ್ನ ಮೇಲೆ ಅಮಾನುಷವಾಗಿ ಅತ್ಯಾಚಾರ ನಡೆಯುತ್ತಿತ್ತು. ಐದು ವರ್ಷ ಆ ‘ಸೆರೆಮನೆ’ ಅನುಭವಿಸಿದೆ.
ನನ್ನ ಬೆಲೆ ೩೦೦ ರೂ!
ಅಮ್ಮ ಜಗುಲಿ ಮೇಲೆ ಕುಳಿತಿದ್ದಳು. ನನಗೆ ಅಮ್ಮನ ಕಾಣುವ ಹಂಬಲ, ಅವಳಿಗೆ ಮಗಳನ್ನು ಕಾಣುವ ವಾತ್ಸಲ್ಯ. ನನ್ನನ್ನೇ ಎದುರು ನೋಡುತ್ತಿದ್ದ ಆಕೆಯ ಮುಖದಲ್ಲಿ ನಾನು ಗೇಟು ದಾಟಿ ಹೋಗುತ್ತಿದ್ದಂತೆ ನಗು ಅರಳಿತು. ‘ಬಾ ಮಗಳೇ’ ಎಂದು ತೆಕ್ಕೆಗೆಳೆದುಕೊಂಡಳು. ಸೂರ್ಯ ಮುಳುಗಲು ಕ್ಷಣಗಳನ್ನು ಎಣಿಸುತ್ತಿದ್ದ. ಅಮ್ಮನೆದುರು ಕುಳಿತ ವ್ಯಕ್ತಿಯ ಹೆಸರು ಪ್ರವೀಣ್ ಪಂಡಿತ್. ಹೆಸರಷ್ಟೇ ಗೊತ್ತಿತ್ತು. ಅಮ್ಮ ಅವನ ಜೊತೆ ಅಷ್ಟು ಕೊಡು, ಇಷ್ಟು ಕೊಡು ಎಂದು ಚೌಕಾಸಿ ಮಾಡುತ್ತಿದ್ದಳು. ನನಗೊಂದೂ ಅರ್ಥವಾಗಲಿಲ್ಲ. ಅಮ್ಮ ಹೇಳಿದ ದುಡ್ಡಿಗೆ ಆತ ಒಪ್ಪಲೇ ಇಲ್ಲ. ಕೊನೆಗೆ ೩೦೦ ರೂ. ಕೊಡುತ್ತೇನೆ ಅಂದ. ಅಮ್ಮ ಒಪ್ಪಿಕೊಂಡು, “ಮಗಳೇ ನೀನು ಅಂಕಲ್ ಜೊತೆ ದೆಹಲಿಗೆ ಹೋಗಬೇಕು” ಎಂದು ಹೇಳಿದಳು.




