ಎಂಥ ಫೋಟೊ ತೆಗೆಯೋಕೆ ನನಗಿಷ್ಟ-ಪೋಟೊಗ್ರಫಿ ಲೇಖನ-3
-ಶಿವು.ಕೆ
ಎಂಥ ಫೋಟೊ ತೆಗೆಯೋಕೆ ನನಗಿಷ್ಟ? ಇಂಥದೊಂದು ಪ್ರಶ್ನೆ ಮನದಲ್ಲಿ ಮೂಡಿದಾಗ ನಮ್ಮ ಕಣ್ಣೆದುರಿಗೆ ಫೋಟೊಗ್ರಫಿ ಲೋಕದ ಸಾಗರವೇ ಕಂಡಂತೆ ಭಾಶವಾಗುತ್ತದೆ. ಏಕೆಂದರೆ ಇದರಲ್ಲಿ ನೂರಾರು ವಿಧಗಳಿವೆ. ಅವುಗಳನ್ನೆಲ್ಲಾ ವಿಸ್ತಾರವಾಗಿ ವಿವರಿಸಲು ಪ್ರಯತ್ನಿಸಿದರೆ ಅದೇ ನೂರಾರು ಪುಟಗಳಾಗಬಹುದು. ಬದಲಿಗೆ ಅವುಗಳಲ್ಲಿ ಕೆಲವನ್ನು ಮಾತ್ರ ಆರಿಸಿಕೊಂಡು ತಿಳಿದುಕೊಳ್ಳುವ ಪ್ರಯತ್ನ ಮಾಡೋಣ.
ವನ್ಯ ಜೀವಿ ಛಾಯಾಗ್ರಾಹಣ: ಇದು ಸುಲಭವಾಗಿ ಪ್ರತಿಯೊಬ್ಬ ಛಾಯಾಗ್ರಾಹಕನನ್ನು ತಕ್ಷಣಕ್ಕೆ ಸೆಳೆಯುವ ವಿಭಾಗ. ಪ್ರಾರಂಭದಲ್ಲಿ ಕಾಡಿನ ಫೋಟೊಗಳನ್ನು ತೆಗೆಯುವುದಕ್ಕೆ ವನ್ಯಜೀವಿ ಛಾಯಾಗ್ರಾಹಣವೆಂದುಕೊಂಡಿದ್ದೆ. ಆದ್ರೆ ಇದರಲ್ಲಿ ಹತ್ತಾರು ವಿಭಾಗಗಳಿವೆ. ಕಾಡುಪ್ರಾಣಿಗಳ ನೈಜ ಚಿತ್ರಗಳನ್ನು ಕ್ಲಿಕ್ಕಿಸುವುದೊಂದೇ ಅಲ್ಲ, ಪಕ್ಷಿಗಳ ಛಾಯಾಗ್ರಾಹಣ, ಕೀಟಪ್ರಪಂಚ, ಲ್ಯಾಂಡ್ ಸ್ಕೇಪ್, ಕಾಡುಹೂಗಳು, ಕಾಡುಹಣಬೆಗಳು, ಗಿಡಮರಗಳು., ಹೀಗೆ ಸಾಗುತ್ತದೆ.
ಮತ್ತಷ್ಟು ಓದು 
ಗೌಡಪ್ಪನ ದುಬೈ ಪ್ರವಾಸ : ಜನಾರ್ಧನ ಹೋಟೆಲ್ ಜಾಮೂನು – ಮಸಾಲೆ ದೋಸೆ!
ಮಂಜುನಾಥ್ ಹೊಳೆನರಸೀಪುರ
ರಾಜಭವನದ ಮು೦ದೆ ಕಿತ್ತೋಗಿದ್ ರೋಡ್ನಾಗೆ ಫುಲ್ ಟ್ರಾಫಿಕ್ನಾಗೆ ಕಾರ್ ಓಡುಸ್ಕೊ೦ಡು ತಮ್ಮ ಚಡ್ಡಿ ದೋಸ್ತ್ ಇನಾಯತ್ ಜೊತೆ ಬರ್ತಿದ್ದ ಮ೦ಜಣ್ಣನ ಮೊಬೈಲು ಒ೦ದೇ ಸಮನೆ ಹೊಡ್ಕೊಳ್ಳೋಕ್ಕೆ ಶುರುವಾತು! ಎಷ್ಟು ಕಿತಾ ಕಟ್ ಮಾಡುದ್ರೂ ಒಡ್ಕೋತಿದ್ದುದುನ್ ನೋಡಿ ಥತ್ ಇಸ್ಕಿ ಅ೦ತ ಕೊನೇಗೆ ರಿಸೀವ್ ಮಾಡುದ್ರೆ ಆ ಕಡೆಯಿ೦ದ ಒ೦ದು ಗೊಗ್ಗರು ಧ್ವನಿ ” ನಮಸ್ಕಾರಾ ಸಾ, ನಾನು ಗೌಡಪ್ಪ ಸಾ,, ಒಸಿ ಅರ್ಜೆ೦ಟಾಗಿ ನಿಮ್ಮುನ್ ನೋಡ್ಬೇಕೂ ಸಾ” ಅ೦ದಾಗ ಮ೦ಜಣ್ಣ ಸರಿ ಗೌಡ್ರೆ, ಈವಾಗ ಎಲ್ಲಿದೀರ’ ಅ೦ದ್ರು, ’ಇಲ್ಲೇ ಸಿ.ಎ೦. ಮನೆ ಹತ್ರ ಇದೀವಿ ಸಾ, ಇ೦ಗೇ ಬನ್ನಿ ಸಾ…’ ಅ೦ದ ಗೌಡಪ್ಪ. ರೇಸ್ ಕೋರ್ಸ್ ರಸ್ತೇನಾಗೆ ಬ೦ದು ಎಡಿಕ್ ತಿರುಕ್ಕೊ೦ಡು ಸಿ.ಎ೦.ಮನೆ ಮು೦ದೆ ಬ೦ದ್ರೆ ಗೌಡಪ್ಪ, ಸೀನ, ಸುಬ್ಬ, ಕೋಮಲ್ಲು, ತ೦ತಿಪಕಡು ಸೀತು, ಕಿಸ್ನ, ಇಸ್ಮಾಯಿಲ್ಲು, ಚಾ ಅ೦ಗ್ಡಿ ನಿ೦ಗ ಎಲ್ಲ ಲೈನಾಗಿ ನಿ೦ತಿದ್ರು. ಗೌಡಪ್ಪನ ಕೈನಾಗೆ ದೊಡ್ಡದೊ೦ದು ಬ್ಯಾಗು!
ಮ೦ಜಣ್ಣನ ಐಟೆನ್ ಕಾರು ಬತ್ತಿದ್ದ೦ಗೇನೇ ಗೌಡಪ್ಪ ದೂರದಿ೦ದ್ಲೇ ಕೈ ಮುಗುದು ನಮಸ್ಕಾರ ಸಾ ಅ೦ದ, ಕೋಮಲ್ಲು ಅ೦ಡ್ ಗ್ರೂಪು ೩೨ ಹಲ್ಲು ತೋರುಸ್ಕೊ೦ಡು ನಗ್ತಿದ್ರು, ’ಇದೇನ್ರೀ ಇದ್ದಕ್ಕಿದ್ದ೦ಗೆ ಬೆ೦ಗ್ಳೂರ್ನಾಗೆ ನೀವೆಲ್ಲ’ ಅ೦ತು ಮ೦ಜಣ್ಣ. ”ಇ೦ಗೇ ಸಿ.ಎ೦.ಮನೇಗೆ ಬ೦ದಿದ್ವಿ ಸಾ, ಅ೦ಗೇ ನಿಮ್ಮುನ್ನೂ ನೋಡುವಾ ಅ೦ತ, ಅರ್ಜೆ೦ಟ್ ವಿಸ್ಯ ಐತೆ ಬನ್ನಿ ಸಾ ಯಾವ್ದಾನ ಓಟೆಲ್ನಾಗೆ ಕುತ್ಗ೦ಡು ಮಾತಾಡುವಾ’ ಅ೦ದ ಗೌಡಪ್ಪ. ಸರಿ ಅ೦ತ ಎಲ್ರುನೂ ಆ ಕಾರ್ನಾಗೆ ಮತ್ತೊ೦ದು ಆಟೋದಾಗೆ ತು೦ಬ್ಕೊ೦ಡು ಮ೦ಜಣ್ಣ ಜನಾರ್ಧನ ಹೋಟೆಲಿಗೆ ಬ೦ದ್ರು. ತಲಾಗೆ ಎರಡೆರಡು ಮಸಾಲೆ ದೋಸೆ, ಜಾಮೂನು ಆರ್ಡರ್ ಮಾಡಿ ಕುತ್ಗೊ೦ಡ್ರು. ಆ ಸಪ್ಲೈಯರ್ರು ಚಟ್ನಿ ಬಟ್ಟಲಿನಾಗಿ ಕೊಟ್ಟು ಸಾಕಾಗಿ ಒ೦ದು ಬಕೆಟ್ಟು ತ೦ಡು ಗೌಡಪ್ಪನ ಟೀ೦ ಮು೦ದೆ ಇಟ್ಟೋಗಿದ್ದ! ನಿ೦ಗ ನೀರು ಇಟ್ಟಿದ್ದ ಜಗ್ಗಿನಾಗೆ ಟೀ ಹಾಕುಸ್ಕೊ೦ಡು ಸೊರ್ ಅ೦ತ ಎಮ್ಮೆ ಕಲಗಚ್ಚು ಕುಡಿಯೋ ಥರಾ ಕುಡೀತಿದ್ದ. ಮತ್ತಷ್ಟು ಓದು 
ಅಲ್ಲಿ ಆಲ್ಫಾ ಅಂತಿದೆ ನೋಡಿ, ಮೊದಲ ಪ್ರಯತ್ನಕ್ಕೆ ಸಹಕಾರ ನೀಡಿ
– ಕಾಲಂ 9
ಗೂಗಲ್ ಸಂಸ್ಥೆಯು ಇತ್ತೀಚಿಗೆ ತನ್ನ ಭಾಶಾಂತರ ಸೇವೆಯ ಕನ್ನಡ ಅವತರಣಿಕೆಯ ಆಲ್ಫಾ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಇಂಗ್ಲಿಷ್ ಭಾಷೆಯಿಂದ ಕನ್ನಡಕ್ಕೆ ಯಾಂತ್ರೀಕೃತ ಭಾಶಾಂತರಕ್ಕೆ ಇದು ಮೊದಲ ಪ್ರಯತ್ನ. ಆದರೆ ಇದು ಕನ್ನಡದ ಕೊಲೆ ಎಂದು ಉದಯವಾಣಿಯು ‘ವಾಷಿಂಗ್ಟನ್ನಿಂದ’ ವರದಿ ಮಾಡಿದ್ದಾರೆ.
ಉದಯವಾಣಿಯ ವಾಷಿಂಗ್ಟನ್ ವರದಿಗಾರರಲ್ಲಿ ನನ್ನ ಮನವಿ: ನೀವು ಪುಕ್ಕಟೆ ಪ್ರಯತ್ನಕ್ಕೆ ಸಿಟ್ಟಾಗುವ ಮೊದಲು ಸಾಧ್ಯವಾದರೆ ಮೌಂಟೆನ್ ವ್ಯೂ ನಲ್ಲಿರುವ ಗೂಗಲ್ ಕಛೇರಿಗೆ ಒಮ್ಮೆ ಹೋಗಿ ಭಾಷಾಂತರ ಪ್ರಾಜೆಕ್ಟ್ ಬಗ್ಗೆ ಸ್ವಲ್ಪ ಕೇಳಿ. ಅಥವಾ translate.google.com ಪುಟದ ಕೊನೆಗಿರುವ About Google Transate ಕೊಂಡಿಯನ್ನೊಮ್ಮೆ ಬಳಸಿ ಅದರ ಬಗ್ಗೆ ಸ್ವಲ್ಪ ಓದಿ. ಮೊದಲನೆಯದಾಗಿ ಇದೂ ಇನ್ನೂ ಆಲ್ಫಾ ಆವೃತ್ತಿ. ಇನ್ನೂ ಬೀಟ ಆವೃತ್ತಿಯ ನಂತರ ಸೇವೆಯು ಸಾಧಾರಣ ಬಳಕೆಗೆ ಲಭ್ಯವಾಗುತ್ತದೆ. ಆಲ್ಫಾ ಆವೃತ್ತಿಯ ಬಗ್ಗೆ ಗೂಗಲಿಸಿದರೆ ನಿಮಗೆ ಹಾಗೆಂದರೇನೆಂಬುದು ತಿಳಿಯುತ್ತದೆ. ಮತ್ತಷ್ಟು ಓದು 
ಪ್ರೀತು, ಪ್ರೀತಿ ಮತ್ತು ಅವನು..
– ಅಬ್ದುಲ್ ಸತ್ತಾರ್
ಆಧುನಿಕ ಬೇತಾಳನೂ ವಿಕ್ರಮಾದಿತ್ಯನೂ ಮತ್ತು ಕಾಲೇಜು ಹುಡುಗರು…
ಸಾತ್ವಿಕ್ ಎನ್ ವಿ
ಯಥಾ ಪ್ರಕಾರ ಹಠಬಿಡದೇ ಸೆಪ್ಟೆಂಬರ್ ಮಾರ್ಚ್ ಸೆಪ್ಟೆಂಬರ್ ಎಕ್ಸಮ್ ಬರೆಯೋ ರಿಪಿಟರ್ ವಿದ್ಯಾರ್ಥಿ ಥರಾ ವಿಕ್ರಮ ರಾಜನು ಮರದಲ್ಲಿದ್ದ ಬೇತಾಳವನ್ನು ಪ್ರೈಮರಿ ಶಾಲೆಯ ಮಕ್ಕಳ ಮಣ ಭಾರದ ಪುಸ್ತಕದ ಚೀಲದಂತೆ ಹೆಗಲಿಗೇರಿಸಿ ನಡೆಯುತ್ತಿದ್ದನು. ವಶೀಲಿ ಗೊತ್ತಿಲ್ಲದ ಸರ್ಕಾರಿ ನೌಕರನಂತೆ ದುಡಿಯುವುದನ್ನು ನೋಡಿ ಬೇತಾಳನಿಗೆ ಅಯ್ಯೋ ಪಾಪ ಎನಿಸಿ ‘ ವಿಕ್ರಮ ಮಹಾರಾಜ ನಿನ್ನ ಕರ್ತವ್ಯ ಪ್ರಜ್ಞೆ ಮೆಚ್ಚಿದ್ದೇನೆ. ದಾರಿಸಾಗಲು ಕಥೆಯೊಂದನ್ನು ಹೇಳುತ್ತೇನೆ. ಮೊಬೈಲ್ ಅಲ್ಲಿ ಮಾತಾಡುತ್ತಾ ಸಾಗೋ ಪ್ರೇಮಿಯ ಹಾಗೆ ನಿನಗೆ ದಾರಿ ಸಾಗಿದ್ದೇ ಗೊತ್ತಾಗುವುದಿಲ್ಲ’ ಎಂದಿತು. ವ್ರತ ನಿಷ್ಠನಾದ ವಿಕ್ರಮ ಮಾತಾಡದೇ ಇದ್ದರೂ ಹುಡುಗಿಯರ ಮೌನವನ್ನೇ ಒಪ್ಪಿಗೆ ಎಂದು ಭಾವಿಸುವ ಪ್ರಿಯಕರನಂತೆ ತನ್ನ ಪಾಡಿಗೆ ತಾನು ಕಥೆ ಹೇಳಲು ಪ್ರಾರಂಭಿಸಿತು.
ಪುಣ್ಯ ಭರತ ಭೂಮಿಯಲ್ಲಿ ಕನ್ನಡನಾಡು ಎಂಬ ರಾಜ್ಯ. ಅಂತಿಪ್ಪ ರಾಜ್ಯದಲ್ಲಿ ತಂಗಳೂರು ವಿಶ್ವವಿದ್ಯಾನಿಲಯವೆಂಬ ವಿದ್ಯಾದೇಗುಲವಿತ್ತು. ಅಲ್ಲಿ ಉತ್ತಮ ದರ್ಜೆಯ ವಿದ್ಯಾಭ್ಯಾಸ ಸಿಗುತ್ತಿದ್ದ ಕಾರ್ಅಣ ಇಡೀ ದೇಶದಲ್ಲಿಯೇ ಪ್ರಸಿದ್ಧವಾಗಿತ್ತು. ಅಂಥ ವಿ ವಿ ಗೆ ಸುಭಗನೆಂಬ ವಿದ್ಯಾರ್ಥಿ ಕಲಿಯಲು ಸೇರಿದನು. ಕ್ರೀಡೆ, ಸಾಹಿತ್ಯ, ವಿಷಯಗಳಲ್ಲಿ ಒಳ್ಳೆಯ ಆಸಕ್ತಿ ಇತ್ತು. ಉತ್ತಮ ವಿದ್ಯಾರ್ಥಿಯಾದ ಈತನು ಬೇರೆ ವಿದ್ಯಾರ್ಥಿಗಳಿಗೆ ಅಸೂಯೆ ಮೂಡಿಸುವಷ್ಟು ಮಟ್ಟಿಗೆ ಬೆಳೆದನು. ವಿಭಾಗದಲ್ಲಿಯೂ ತೀವ್ರ ಚಟುವಟಿಕೆಯಿಂದ ಕೂಡಿದ್ದ ಇತನಿಗೆ ತನ್ನ ಸಮಾಜದ ಕೊಳಕುತನಗಳನ್ನು ಕಿತ್ತುಹಾಕಬೇಕೆಂಬ ತುಡಿತ. ಎಳೆ ವಯಸ್ಸು ಹುರಿಗಟ್ಟಿದ ದೇಹ, ಕನಸು ಬಿತ್ತುವ ಉಪನ್ಯಾಸಕರು ಇನ್ನೇನೂ ಬೇಕು ಸ್ವರ್ಗಕ್ಕೆ ಕಿಚ್ಚು ಹಚ್ಚಲು. ಮತ್ತಷ್ಟು ಓದು 
ಜೀವನ ಬಂಡೆ ಕಲ್ಲಾ?
ಸುಬ್ರಹ್ಮಣ್ಯ ಬಿ ಎಸ್
ಇಂತಹದ್ದೊಂದು ಪ್ರಶ್ನೆ ಇಷ್ಟೊಂದು ಚಿಕ್ಕ ವಯಸ್ಸಿಗೆ ( ಹೌದ !!) ಉದ್ಭವಿಸಿದ್ದು ನನ್ನ ಮೊಬೈಲ್ ಗೆ ಸಂದೇಶವೊಂದು ಬಂದಾಗ…
ತಟ್ಟನೆ ಚುಟುಕಾಗಿ ಉತ್ತರಿಸಬೇಕಾದ ಪ್ರಶ್ನಾ ಸರಣಿ ಹೊತ್ತ ಸಂದೇಶ ನನ್ನ ಮೊಬೈಲ್ ಫೋನ್ಗೆ ಬಂತು. ನಿಯಮ ಇಷ್ಟೇ , ಪ್ರಶ್ನೆ ( ಸರಿಯಾಗಿ ಹೇಳಬೇಕೆಂದರೆ ಪದ ) ಓದಿದಾಗ ಮೊದಲಬಾರಿಗೆ ಅದೇನು ಹೊಳೆಯುತ್ತದೋ ಹೇಳಿ ಬಿಡಬೇಕಿತ್ತು.
ಮೊದಲನೆಯದು “ಪ್ರೀತಿ “- ಮನಸ್ಸಿನಲ್ಲಿ ಪಟ ಪಟ ಸದ್ದು ಮಾಡ್ತಾ ಜೋಡಿ ಹಕ್ಕಿಗಳು ಕಣ್ಮುಂದೆ ಬಂದ್ಬಿಡೋದೇ…? ಹೌದು ಇನ್ನೇನು , ಅಪ್ಪ ಅಮ್ಮಂದಿರ , ಸಂಸಾರ ,ಬಂಧುಬಳಗದ ವಿರೋಧ ಇಲ್ದಿದ್ರೆ ಪ್ರೀತಿ ಜೋಡಿ ಹಕ್ಕಿನೇ ತಾನೇ? ಸ್ವಚ್ಚಂದ ಆಗಸದಲ್ಲಿ ಪಟ ಪಟ ರೆಕ್ಕೆ ಬಿಚ್ಚಿ ಹಾರಿ ಇಬ್ಬರೇ ಕಾಲ ಕಳೀಬಹುದಲ್ವಾ?
ಎರಡನೆಯದು “ಜೀವನ” -ಅದ್ಯಾಕೋ ದೊಡ್ಡ ಬಂಡೆ ಕಲ್ಲುಗಳು ಕಣ್ಮುಂದೆ ಬರಬೇಕೆ? ಯಾಕೆ ಬಂತು? ನಾನೇನು ಬಂಡೆಕಲ್ಲುಗಳ ಕೆಲಸ ಮಾಡೋನಲ್ಲ.. ಚಿಕ್ಕ ಕಲ್ಲೆತ್ತಿ ಹೊಡೆದಿದ್ದೂ ಕಮ್ಮಿನೇ , ಮತ್ಯಾಕೆ? ಬಸ್ಸಿನೊಳಗೆ ಕುಳಿತ ನನಗೆ ಆ ರಾತ್ರಿಯ ಕತ್ತಲಲ್ಲಿ ಸುತ್ತ ಮುತ್ತ ಬಂಡೆಗಳೇನು ಕಾಣಿಸೋ ಹಾಗಿರಲಿಲ್ಲ..ಹಾಗಂತ ಜೀವನದಲ್ಲಿ ತುಂಬಾ ಕಷ್ಟ ಅನುಭವಿಸಿ ,ಜೀವಿಸಲು ಶ್ರಮಪಟ್ಟು ಜೀವನವೆಂದರೆ ಕಠಿಣ ಅನ್ನೋವಷ್ಟು ವಯಸ್ಸಾಗಲಿ ,ಸಾಧನೆಯಾಗಲಿ ಮಾಡಿಲ್ಲ. ಜುಜುಬಿ ಇಪ್ಪತ್ನಾಲ್ಕಕ್ಕೆ ಜೀವನ ಅಂದಾಗ ಬಂಡೆ ಕಲ್ಲು ಕಣ್ಣೆದುರಿಗೆ ಬಂದ್ರೆ ಸ್ವಲ್ಪ ಯೋಚನೆ ಮಾಡದಿದ್ದರೆ ಹೇಗೆ ? ಮತ್ತಷ್ಟು ಓದು 
ಸರದಾರ್ ಅಂಕಲ್ …!

ಸರದಾರ್ ಅಂಕಲ್ ರವರ ಮನೆ ನಮ್ಮ ಬಿಲ್ಡಿಂಗ್ನ ಬದಿಯಲ್ಲಿ ಇತ್ತು, ಅವರ ಮನೆ ಹಾಗು ನಮ್ಮ ಬಿಲ್ಡಿಂಗ್ ಒಟ್ಟು ಸೇರಿ ಇತ್ತು. ಅವರು ಹಾಗು ಅವರ ಕುಟುಂಬಸ್ತಿಯರು ನಮ್ಮ ಬಿಲ್ಡಿಂಗ್ ನ ಗ್ರೌಂಡ್ ಫ್ಲೋರ್ನಲ್ಲಿ ಇದ್ದ ಕಾಮಾನ್ ಬಾತ್ ರೂಮ್/ಟೊಯಿಲ್ಟ್ ಉಪಯೋಗಿಸುತ್ತಿದ್ದರು. ಸರದಾರ್ ಅಂಕಲ್ ಐವತ್ತು ವರುಷ ದಾಟಿದ ಹರೆಯದ ಗಟ್ಟಿ ಮುಟ್ಟಾದ ಹಾಗು ತುಂಬಾ ಶಾರ್ಟ್ ಟೆಂಪೆರ್(ಕೋಪಿಷ್ಠ ) ಮನುಷ್ಯ. ಕೋಪ ಅವರ ಮೂಗಿನಲ್ಲಿ ೨೪ ಗಂಟೆ ಇರುತಿತ್ತು. ಅವರ ಕೋಪದ ಸ್ವಭಾವದಿಂದಾಗಿ ನಮ್ಮ ಬಿಲ್ಡಿಂಗ್ನವರು ಅವರತ್ರ ಮಾತಾಡಲಿಕ್ಕೆ ಸಹ ಹೆದರುತ್ತಿದ್ದರು. ಸರದಾರ್ ಅಂಕಲ್ ಹಾಗು ನಮ್ಮ ಬಿಲ್ಡಿಂಗ್ನಲ್ಲಿರುವ ಜನರ ಮಧ್ಯೆ ಯಾವಾಗಲು ನೀರಿಗಾಗಿ ಹಾಗು ಬಾತ್ ರೂಮ್ / ಟೊಯಿಲ್ಟ್ಗಾಗಿ ಜಗಳ ಆಗುತಿತ್ತು. ಆ ದಿನಗಳಲ್ಲಿ ನಮ್ಮ ಬಿಲ್ಡಿಂಗ್ನಲ್ಲಿ ನೀರಿನ ತುಂಬಾ ಕೊರತೆ ಇತ್ತ. ಮುನಿಸಿಪಾಲಿಟಿಯವರು ನೀರು ಬಿಟ್ಟು ಬಿಟ್ಟು ಬಿಡುತ್ತಿದ್ದರು. ಆ ನೀರು ಒಂದನೇ ,ಎರಡನೆ ಹಾಗು ಮೂರನೇ ಮಹಡಿಯವರಿಗೆ ಬರುತ್ತಿರಲಿಲ್ಲ. ನೀರು ಖಾಲಿ ಗ್ರೌಂಡ್ ಫ್ಲೋರಿನ ಬಾತ್ ರೂಮ್ನಲ್ಲಿ ಬರುತ್ತಿತ್ತು. ಒಂದನೇ, ಎರಡನೆ ಹಾಗು ಮೂರನೇ ಮಹಡಿಯವರು ತನ್ನ ತನ್ನ ಬಕೆಟ್ಗಳು ಹಿಡಿದು ಕೆಳಗೆ ಗ್ರೌಂಡ್ ಫ್ಲೋರಿನ ಬಾತ್ ರೂಮ್ಗೆ ನೀರಿಗಾಗಿ ಬರುತ್ತಿದ್ದರು. ಇಲ್ಲಿ ಸಮಸ್ಯೆ ಏನೆಂದರೆ ಆ ದಿನದಲ್ಲಿ ನೀರು ಎಂಟು ಗಂಟೆಯಿಂದ ಹತ್ತು ಗಂಟೆಯವರಗೆ ಬರುತ್ತಿತ್ತು. ಆದರೆ ಸರದಾರ್ ಅಂಕಲ್ ಎಂಟು ಮುಕ್ಕಾಲು (8 .45 ) ತನಕ ಯಾರನ್ನು ಬಾತ್ರೂಮ್ನ ಒಳಗೆ ಬರಲು ಬಿಡುತಿರಲಿಲ್ಲ. ಸರದಾರ್ ಅಂಕಲ್ನವರು ತನ್ನ ಮೆಚ್ಚಿನ ಸೋಪ್ “ಲೈಫ್ ಬೌಯ್”ನಿಂದ ಸ್ನಾನ ಮಾಡಿ, ತನ್ನ ಬಟ್ಟೆ ತೊಳೆದು ಹಾಗು ತನ್ನ ಮನೆಗೆ ಪೈಪ್ನಿಂದ ನೀರು ತುಂಬಿಸಿದ ನಂತರವೇ ಬೇರೆಯವರಿಗೆ ನೀರಿನ ಗತಿ. ಇದರಿಂದ ಒಂದನೇ , ಎರಡನೆ ಹಾಗು ಮೂರನೇ ಮಹಡಿಯವರಿಗೆ ತುಂಬಾ ಕಷ್ಟವಾಗುತಿತ್ತು. ಸರದಾರ್ ಅಂಕಲ್ ಯಾರನ್ನೂ, ಅವರ ಬಾತ್ರೂಮ್ನಲ್ಲಿದಾಗ ಒಳಗೆ ಬಿಡುತಿರಲಿಲ್ಲ. ಇದರಿಂದ ದಿನಾಲೂ ಏನಾದರೂ ಜಗಳ ಆಗುತಿತ್ತು.
ಮತ್ತಷ್ಟು ಓದು

ರಾಜಕಾರಣದಲ್ಲಿ ಆಣೆ ಮತ್ತು ಆಣೆಯ ರಾಜಕಾರಣ
ಸಂತೋಷ್ ಕುಮಾರ್ ಪಿ.ಕೆ
ಇತ್ತೀಚಿನ ರಾಜಕಾರಣದ ಬೆಳವಣಿಗೆಯಲ್ಲಿ ಹೆಚ್.ಡಿ.ಕುಮಾರ ಸ್ವಾಮಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡ್ಯೂರಪ್ಪ ಇವರ ನಡುವೆ ಸಂಧಾನವೇರ್ಪಟ್ಟಿಲ್ಲ ಎಂಬುದನ್ನು ಸಾಬೀತುಪಡಿಸಲು ಧರ್ಮಸ್ಥಳದ ಮಂಜುನಾಥ ಕ್ಷೇತ್ರದಲ್ಲಿ ಆಣೆ ಮಾಡಲು ಸನ್ನದ್ದರಾಗಿರುವುದು ಬಹುಟೀಕೆಗೆ ಒಳಗಾಗಿದೆ. ಇದು ಮೇಲ್ನೋಟಕ್ಕೆ ಕೇವಲ ಆಣೆ ಪ್ರಮಾಣದ ಸಮಸ್ಯೆಯಂತೆ ಕಂಡರೂ ಸಹ ಆ ಸಮಸ್ಯೆಯ ಆಳ ಅಗಲ ನಾವು ಊಹಿಸಲು ಸಾಧ್ಯವಿರದ ಮಟ್ಟಿಗೆ ಇದೆ. ಬಹುತೇಕ ಚಿಂತಕರು, ಲೇಖಕರು ಹಾಗೂ ವಿದ್ವಾಂಸರನ್ನೊಳಗೊಂಡು ಆ ಆಣೆ ಮಾಡುವ ಪ್ರವೃತ್ತಿಯನ್ನು ಕಟುವಾಗಿ ಟೀಕಿಸುತ್ತಿದ್ದಾರೆ, ಇಲ್ಲಿ ಕೇವಲ ಆಣೆ ಪ್ರಮಾಣದ ವಿಚಾರವನ್ನುವಿವಮರ್ಶಿಸಿದರೆ ಒಂದೊ, ರಾಜಕಾರಣಿಗಳ ಮೇಲೆ ಕೋಪ ಮಾಡಿಕೊಳ್ಳಬೇಕಾಗುತ್ತದೆ, ಇಲ್ಲವೆ ಅಂತಹ ಪ್ರೃತ್ತಿಯೇ ಕೆಟ್ಟದೆಒಳ್ಳೆಯದೋ ಎಂಬ ನಿರಪಯುಕ್ತ ಚರ್ಚೆಯನ್ನು ಮಾಡಬೇಕಾಗುತ್ತದೆ. ಆದ್ದರಿಂದ ಆಣೆ ಮಾಡುವ ಪ್ರವೃತ್ತಿಯನ್ನು ಪ್ರಶ್ನೆಮಾಡುವ ನೆಪದಲ್ಲಿ ನಮ್ಮ ರಾಜ್ಯಾಂಗದ ಅಥವಾ ಸೆಕ್ಯುಲರಿಸಂ ಸಮಸ್ಯೆಯನ್ನು ಇಲ್ಲಿ ಚರ್ಚಿಸಲು ಪ್ರಯತ್ನಿಸುತ್ತೇನೆ. ಹಾಗಾಗಿ ಆಣೆ ಮಾಡುವುದರಲ್ಲಿ ತಪ್ಪೇನಿದೆ ಎಂಬುದನ್ನು ನೋಡುವಾ ಅಥವಾ ಆಣೆ ಮಾಡುವುದು ನಮಗೇಕೆ ತಪ್ಪಾಗಿ ಗೋಚರಿಸುತ್ತಿದೆ ಎಂಬುದನ್ನು ಅವಲೋಕಿಸುವ. ಮತ್ತಷ್ಟು ಓದು 
ಅಮೇರಿಕದಲ್ಲೀಗ ನಾಯಿ ಬೆಕ್ಕುಗಳಿಗೂ ಸಕ್ಕರೆ ಖಾಯಿಲೆ
ಗೋವಿಂದ ಭಟ್
ಮನುಷ್ಯನನ್ನು ದೇವರು ಸದಾ ಚಟುವಟಿಕೆಯಲ್ಲಿರುವಂತೆ ರೂಪಿಸಿದ್ದಾನೆ. ಜೀವನದ ಎರಡು ತುದಿಗಳಲ್ಲಿ ಅಂದರೆ ಹುಟ್ಟು ಸಾವಿನ ಆಸುಪಾಸು ಹೊರತು ಪಡಿಸಿದರೆ ಉಳಿದ ಸಮಯದಲ್ಲಿ ಸದಾ ತನ್ನ ಕಾಲಿನ ಮೇಲೆ ನಿಲ್ಲುವಂತೆ ಚಲಿಸುವಂತೆ ನಮ್ಮನ್ನು ವಿನ್ಯಾಸಗೊಳಿಸಲಾಗಿದೆ. ಆದರೆ ನಮಗೆ ಹೊರಿಸಿಕೊಳ್ಳುವುದೆಂದರೆ ಇಷ್ಟ. ನಡೆಯುವುದು ಕಷ್ಟ. ನಾಲ್ಕು ಹೆಜ್ಜೆ ಹೋಗಲೂ ವಾಹನವನ್ನೇ ಅವಲಂಬಿಸಲು ಇಷ್ಟ ಪಡುತ್ತೇವೆ. ಕಾಸಿಲ್ಲದವ ಮಾತ್ರ ನಡೆಯುವುದು ಎಂದು ನಮ್ಮವರ ಖಚಿತ ನಿಲುವು. ನಮಗೆ ಎಲ್ಲಕ್ಕೂ ಮಾದರಿಯಾದ ಅಮೇರಿಕದವರು ಶೌಚಾಲಯಕ್ಕೂ ಕಾರಲ್ಲಿ ಹೋಗುವರೋ ಅನ್ನುವ ಗುಮಾನಿ.
ಅಮೇರಿಕದಲ್ಲಿ ಚಲನಾತೀತ ಮನುಷ್ಯರಿಗೆ ಮಾತ್ರವಲ್ಲ ಅವರ ನಾಯಿ ಬೆಕ್ಕುಗಳಿಗೂ ಈಗ ಸಕ್ಕರೆ ಖಾಯಿಲೆ ಹಬ್ಬಲು ಪ್ರಾರಂಭಿಸಿದೆ. ಈ ಸಕ್ಕರೆ ಖಾಯಿಲೆ ಬಗೆಗೆ ಯೋಚಿಸಿದಾಗ ನನಗೆ ನೆನಪಿಗೆ ಬರುವುದು ತೇಜಸ್ವಿ ಕಥೆಯೊಂದರ ಪಾತ್ರಧಾರಿ. ಅವರು ತನಗೆ ಪರಂಗಿಯವರ ಸೀಕು ಉಂಟೆಂದು ಡಾಕ್ಟ್ರು ಹೇಳಿದರೆಂದು ಹೆಂಡತಿಯೊಂದಿಗೆ ಬಹಳ ಹೆಮ್ಮೆ ಪಟ್ಟುಕೊಳ್ಳುತ್ತಾರೆ. ಸಕ್ಕರೆ ಖಾಯಿಲೆ ಸಾಕುನಾಯಿಗಳಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಶೇಕಡಾ ಮೂವತ್ತಮೂರರಷ್ಟು ಏರಿದರೆ ಬೆಕ್ಕುಗಳಲ್ಲಿ ಶೇಕಡಾ ಹದಿನಾರು. ಹೋಲಿಕೆಯಲ್ಲಿ ಆ ದೇಶದಲ್ಲಿ ಮನುಷ್ಯರಲ್ಲಿ ಬರೇ ಶೇಕಡಾ ಹತ್ತು ಹೆಚ್ಚುವರಿಯಾಗಿ ಈ ಸೀಕು ಗುರುತಿಸಲ್ಪಟ್ಟಿದೆ. ಮತ್ತಷ್ಟು ಓದು 
ಮಂಜುನಾಥನ ದಯೆ ಇರಲಿ!!!
ಅರೆಹೊಳೆ ಸದಾಶಿವ ರಾವ್
ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ,
ನಿನಗೊಂದು ಪತ್ರ ಬರೆಯಬೇಕಾದ ಅನಿವಾರ್ಯತೆ ಬಂದೀತು ಎಂದು ನಾವು ಅಂದುಕೊಂಡಿರಲಿಲ್ಲ. ಒಂದು ನಂಬುಗೆ ಇದೆ. ಅದೆಂದರೆ, ನಿನ್ನ ಬಳಿ ಯಾವುದೇ ಭಕ್ತ ಬಂದು, ತನ್ಮಯತೆಂದ ಏನಾದರೂ ಕೇಳಿಕೊಂಡರೆ, ಕಷ್ಟ ಪರಿಹಾರವಾಗಿ, ಕೋರಿಕೆ ನೆರವೇರುತ್ತದೆ ಎಂದು. ಆದರೆ ತಪ್ಪು ಮಾಡಿದವರನ್ನು ನೀನೇ ನೋಡಿಕೊಳ್ಳುತ್ತಿ ಎಂದು ಒಮ್ಮೆ ಬಾಮಾತಿನಲ್ಲಿ ಹೇಳಿದರೂ, ಮತ್ತೆ ಅದನ್ನು ಹಿಂಪಡೆಯಲು ನಿನ್ನ ಬಳಿಯೇ ಬರಬೇಕಾಗುತ್ತದೆ. ವಿಷಯವನ್ನು ನಿನ್ನ ಮಡಿಲಿಗೆ ಹಾಕಿ ಬಿಟ್ಟರೆ, ಫಲಾಫಲ ನಿನ್ನ ಇಚ್ಛೆಯಂತೆ ನಡೆಯುತ್ತದೆ ಮತ್ತು ಇದು ಇಡೀ ಕುಟುಂಬಕ್ಕೇ ಅನ್ವುಸುತ್ತದೆ.
ನಮ್ಮದು ಪ್ರಜಾಪ್ರಭುತ್ವ ವ್ಯವಸ್ಥೆ. ಇಡೀ ರಾಜ್ಯ ಅಥವಾ ದೇಶದ ಕುಟುಂಬವೇ ಒಂದಾಗಿ ಒಬ್ಬ ಯಜಮಾನನನ್ನಾಗಿ ಆಯ್ಕೆ ಮಾಡಿ ಕಳುಹಿಸುತ್ತೇವೆ. ನಮ್ಮ ದುರಾದ್ರಷ್ಟವೆಂದರೆ ಅದಾದ ಮೇಲೆ ನಮಗೆ ಅಂತಹ ಯಜಮಾನನ ಮೇಲೆ ಯಾವುದೇ ನಿಯಂತ್ರಣ ಇರುವುದಿಲ್ಲ. ಆಗೆಲ್ಲಾ ನಾವು ನಮ್ಮನ್ನು ದೇವರೇ ಕಾಪಾಡಬೇಕು ಎಂದುಕೊಂಡು ನಿನ್ನ ತಲೆಯ ಮೇಲೆ ಭಾರ ಹಾಕಿ ಸುಮ್ಮನುಳಿಯುತ್ತೇವೆ.
ಗೌಡರ ವಂಶ ಇರಬಹುದು, ಯಡ್ಯೂರಪ್ಪನವರ ವಂಶವಿರಬಹುದು, ಎಲ್ಲರ ಮೇಲೂ ನಾವು ವಿಶ್ವಾಸ ಇಟ್ಟು, ದೇಶದ ಪರಮಾಧಿಕಾರಗಳ ವಿವಿಧ ಹಂತಗಳನ್ನು ನೀಡಿದವರು. ಆದರೆ ಅವರೆಲ್ಲಾ ಅಧಿಕಾರ ಸಿಕ್ಕ ನಂತರ, ಈ ಎಲ್ಲದೂ ತಮಗೆ ಕಟ್ಟಿಟ್ಟದ್ದು ಎಂಬಂತೆ ವರ್ತಿಸಿದ್ದು ಮಾತ್ರ ನಿಜ. ಎಲ್ಲರೂ ಅವರವರ ಮಟ್ಟಿಗೆ ರಾಜ್ಯದ ಬೊಕ್ಕಸದಿಂದ ಸಾಧ್ಯವಾದಷ್ಟೂ ಎತ್ತಿದವರೇ ಎಂದು ಇಬ್ಬರೂ ಆರೋಪಿಸಿಕೊಳ್ಳುತ್ತಿದ್ದಾರೆ. ಸತ್ಯ ಏನು ಎನ್ನುವುದು ರಾಜ್ಯದ ಎಲ್ಲರಿಗೂ ಗೊತ್ತಿದೆ. ಯಡ್ಯೂರಪ್ಪ ಮತ್ತು ಕುಮಾರ ಸ್ವಾಮಿ-ಇಬ್ಬರೂ ಎಲ್ಲೆಲ್ಲಾ ಸಾಧ್ಯವೋ ಅಲ್ಲೆಲ್ಲಾ ಮೆಂದವರೇ ಎಂಬುದೇ ಈ ಸತ್ಯ!(ನಿನಗೆ ಗೊತ್ತಿಲ್ಲದ್ದೇನಲ್ಲ ಬಿಡು) ಮತ್ತಷ್ಟು ಓದು 




