ಮದಿರೆ ಬಿಟ್ಟು ಬದುಕ ಕಟ್ಟಿಕೊಂಡವರ ಕಥೆ
– ಪವನ್ ಯಂ.ಟಿ
ಕೊಟ್ಟಾರೆ ಕೊಡು ಶಿವನೆ ಕುಡುಕನಲ್ಲದ ಗಂಡನ …!
ಎಂದು ಎಷ್ಟೋ ಹೆಣ್ಣು ಮಕ್ಕಳು ದೇವರಲ್ಲಿ ಮೊರೆಯಿಡುತ್ತಿದ್ದ ಬಗ್ಗೆ ಜನಪದ ಹಾಡನ್ನು ಕೇಳಿದ ನೆನಪಾಗುತ್ತಿದೆ. ಒಂದು ಹೆಣ್ನು ಮಗಳು ತನ್ನ ಗಂಡ ಕುಡುಕನಾಗುವುದನ್ನು ಕನಸಲ್ಲಿಯೂ ನೆನೆಯುದಿಲ್ಲ. ಅದೇ ರೀತಿ ತಮ್ಮ ಮಗ ಮಕ್ಕಳು ಕುಡುಕರಾಗಬೇಕೆಂದು ಯಾವ ತಂದೆ ತಾಯಿಯು ಇಷ್ಟ ಪಡುವುದಿಲ್ಲ. ಆದರೆ ಏನು ಮಾಡುವುದು ಕೆಲವು ಹೆಣ್ಣು ಮಕ್ಕಳ ಮತ್ತು ತಂದೆ ತಾಯಿಯಂದಿಯರ ಆಸೆ ಕೈಗೂಡಬೇಕಲ್ಲ. ನಮ್ಮಲ್ಲಿ ಹೆಚ್ಚು ಜನರು ಕುಡಿತದ ಬಲೆಗೆ ಬಿದ್ದಾಗಿದೆ. ನಮ್ಮ ದೇಶದಲ್ಲಿ ಶೇಕಡ ೭೦ ರಷ್ಟು ಜನರು ಈಗಾಗಲೇ ಕುಡಿತಕ್ಕೆ ಬಲಿ ಬಿದ್ದಿರ ಬಹುದು.
ಯಾವತ್ತೋ ಒಂದು ದಿನ ಜಾಲಿಗೆಂದು ಬಿಯರ್ ಕುಡಿದ ಒಬ್ಬ ವ್ಯಕ್ತಿ ನಂತರ ಕ್ವಾಟರ್, ಆಫ್, ಪುಲ್, ಬಾಟಲ್ ಕುಡಿಯುವವನಾಗಿ ಪರಿವರ್ತನೆಯಾಗುತ್ತಾನೆ, ನಂತರ ಅವನು ಸಂಪ್ರಾಯಿಕ ಕುಡುಕ. ನಮ್ಮಲ್ಲಿ ೫೦ ವರ್ಷಕ್ಕೆ ಮೇಲ್ ಪಟ್ಟ ಮಧ್ಯ ವಯಸ್ಕರು ಹೆಚ್ಚಾಗಿ ಕುಡಿತಕ್ಕೆ ಒಳಗಾಗಿರುವುದನ್ನು ಗಮನಿಸ ಬಹುದು. ಆದರೆ ಈಗಿನ ಸ್ಥಿತಿ ಯಾವ ರೀತಿಯಾಗಿದೆ ಯೆಂದರೆ ಹೆಚ್ಚಾಗಿ ಯುವಕರೇ ಜಾಲಿ, ಗಮ್ಮತಿನ ಹೆಸರಿನಲ್ಲಿ ಕುಡಿತಕ್ಕೆ ಬಲಿ ಬೀಳುತ್ತಿದ್ದಾರೆ. ಮತ್ತಷ್ಟು ಓದು 
ಸಂಸ್ಕೃತಿ ಸಂಕಥನ – ೩
– ರಮಾನಂದ ಐನಕೈ
ವಿದ್ಯಾವಂತರೆನಿಸಿಕೊಂಡ ನಮಗೆಲ್ಲ ಒಂದು ತೊಂದರೆ ಇದೆ. ಅದೇನೆಂದರೆ ನಮ್ಮ ಜೀವನಶೈಲಿಯೊಂದಿಗೆ ಅನಿವಾರ್ಯವಾಗಿ ಪಾಲಿಸಲೇಬೇಕಾದ ಸಂಪ್ರದಾಯಗಳು. ಇದನ್ನು ಪಾಲಿಸದಿದ್ದರೆ ನಾವು ಸಮುದಾಯದಿಂದ ಹೊರಗುಳಿಯತ್ತೇವೆ. ಕೆಲವೊಮ್ಮೆ ಮಾನಸಿಕವಾಗಿ ನಮ್ಮೊಳಗೇ ಅಭದ್ರತೆಗೊಳಗಾಗುತ್ತೇವೆ. ಹಾಗಂತ ಸಂಪ್ರದಾಯವನ್ನು ಪಾಲಿಸಲು ನಮ್ಮ ವೈಚಾರಿಕತೆ ಅನುವು ಮಾಡಿಕೊಡುವುದಿಲ್ಲ. ನಾವು ಭೌತಿಕವಾಗಿ ಬದುಕುತ್ತಿರುವುದು ಸಂಪ್ರದಾಯದ ಸಮಾಜದಲ್ಲಿ. ಮಾನಸಿಕವಾಗಿ ಬದುಕುತ್ತಿರುಉವದು ವೈಚಾರಿಕತೆಯೆಂಬ ಭ್ರಮೆಯಲ್ಲಿ. ಯಾಕೆ ಹೀಗಾಗುತ್ತಿದೆ? ನಮ್ಮ ಸಂಪ್ರದಾಯಗಳಲ್ಲಿ ನಮಗೇಕೆ ಅರ್ಥ ಕಾಣುತ್ತಿಲ್ಲ? ಅಥವಾ ಅರ್ಥ ಹುಡುಕುವ ಹಠವಾದರೂ ಏಕೆ? ಇವುಗಳಿಗೆಲ್ಲ ಅರ್ಥ ಇರಲೇಬೇಕೆಂದಿದೆಯೇ? ಸ್ವತಂತ್ರ ಭಾರತದ 60 ವರ್ಷ ಕಳೆದರೂ ಇಂಥ ಗೊಂದಲಗಳಿಂದ ಮುಕ್ತರಾಗದೇ ಇದ್ದದ್ದು ನಿಜಕ್ಕೂ ಗಂಭೀರವಾಸ್ತವ.
ಸಂಪ್ರದಾಯ ಅಂದರೆ ತಲೆತಲಾಂತರದಿಂದ ನಡೆಸಿಕೊಂಡು ಬಂದ ಆಚರಣೆಗಳು. ನಮ್ಮ ಹಿರಿಯರು ಅವರ ಹಿರಿಯರನ್ನು ಅನುಕರಿಸಿದರು. ಅವರ ಹಿರಿಯರು ಅವರ ಹಿರಿಯರನ್ನು… ಹೀಗೆ ಯಾಕೆ ಆಚರಿಸಬೇಕೆಂದು ಯಾರೂ ಯಾರನ್ನೂ ಪ್ರಸ್ನಿಸಲಿಲ್ಲ. ಪ್ರಶ್ನಿಸುವ ಜಿಜ್ಞಾಸ ಹುಟ್ಟಲೇ ಇಲ್ಲ. ಏಕೆಂದರೆ ಎಲ್ಲರೂ ಅದು ತಮ್ಮದು ಎಂದು ನಂಬಿದ್ದರು. ಪ್ರೀತಿಸುತ್ತಿದ್ದರು. ಸ್ವಾತಂತ್ರ್ಯಾನಂತರ ನಮಗೆ ಸಂಪ್ರದಾಯಗಳ ಕುರಿತು ಹೆಚ್ಚು ಪ್ರಶ್ನೆಗಳು ಏಳಲು ಶುರುವಾಗಿವೆ. ಅದಕ್ಕೆ ಕಾರಣ ನಾವು ಪ್ರಭಾವಿಸಿಕೊಂಡ ಎರವಲು ವೈಚಾರಿಕತೆ ಅಥವಾ ವಿಚಾರವಾದ. ಅದು ನಮ್ಮ ಶಿಕ್ಷಣ ಹಾಗೂ ಓದುತ್ತಿರುವ ಸಮಾಜವಿಜ್ಞಾನಗಳಿಂದ ಸೃಷ್ಟಿಯಾದದ್ದು. ಪರೋಕ್ಷವಾಗಿ ಹೇಳಬಹುದಾದರೆ ಪಾಶ್ಚಾತ್ಯರು ಹೇಳಿಕೊಟ್ಟ ಕಂಠಪಾಠ. ಅವರ ಪ್ರಕಾರ ವೈಚಾರಿಕತೆಯತ್ತ ಸಾಗುವುದೇ ಪ್ರಗತಿ ಅಥವಾ ನಾಗರಿಕತೆಯ ಲಕ್ಷಣ. ಭಾರತೀಯ ಸಂಪ್ರದಾಯಗಳು (ಹಿಂದೂ ರಿಲಿಜನ್) ಅವೈಚಾರಿಕವಾದ್ದರಿಂದ ಭಾರತ ಹಿಂದುಳಿದ ದೇಶ. ಇಲ್ಲಿಯ ಜನ ಮೂಢರು ಮತ್ತು ದಡ್ಡರು. ಅರ್ಥವಿಲ್ಲದ ಆಚರಣೆಗಳನ್ನು ಮಾಡುವವರು ಎಂಬಿತ್ಯಾದಿ. ಇದೇ ನಿಜ ಎಂದು ನಾವೆಲ್ಲ ನಂಬಿಕೊಂಡಿದ್ದರಿಂದ ನಮ್ಮ ಸಂಪ್ರದಾಯಗಳು ನಮಗೆ ಅರ್ಥಹೀನ ಅನಿಸುತ್ತದೆ.
ಹೈಕಮಾಂಡ್!!! ಹೈಕಮಾಂಡ್!!!
– ಚೇತನ್ ಜೀರಾಳ್
ಕರ್ನಾಟದಲ್ಲಿ ಕಳೆದೆರೆಡು ವಾರಗಳಿಂದ ನಡೆಯುತ್ತಿರುವ ಈ ರಾಜಕೀಯ ದೊಂಬರಾಟ ದೇಶದ ಗಮನವನ್ನ ತನ್ನತ ಸೆಳೆದಿದೆ. ಅಕ್ರಮ ಗಣಿಗಾರಿಕೆಯ ಬಗ್ಗೆ ಲೋಕಾಯುಕ್ತರು ನೀಡಿರುವ ವರದಿ ರಾಜಕೀಯ ಪಕ್ಷಗಳು ಹಾಗೂ ಅವರ ನಾಯಕರುಗಳಲ್ಲಿ ಆತಂಕ ಹುಟ್ಟಿಸಿದೆ. ಮುಂದೆ ಈ ರಾಜಕೀಯ ದೊಂಬರಾಟ ಹೇಗೆ ತಿರುವುಗಳನ್ನು ಪಡೆಯುತ್ತದೋ ಕಾದು ನೋಡೋಣ.
ಆದರೆ ಈ ಪ್ರಕರಣ ಹೊರಬಿದ್ದಾಗಿನಿಂದ ಹೈಕಮಾಂಡಿನ ಹೆಸರು ಎಂದಿಗಿಂತ ಹೆಚ್ಚು ಪದೇ ಪದೇ ಕಿವಿಯ ಮೇಲೆ ಬೀಳುತ್ತಲೇ ಇದೆ. ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷಗಳ ನಾಯಕರು ಎದ್ದರೂ ಹೈಕಮಾಂಡ್, ಬಿದ್ದರೂ ಹೈಕಮಾಂಡ್, ಕನಸಿನಲ್ಲೂ ಹೈಕಮಾಂಡ್ ಎಂದು ಕನವರಿಸುತ್ತಾ ಇರುತ್ತಾರೆ. ಕಾಂಗ್ರೆಸ್, ಬಿಜೆಪಿ ಎಂದು ಪಕ್ಷ ಭೇದ ಮರೆತು ನಮ್ಮ ರಾಜ್ಯದ ನಾಯಕರುಗಳು ಹೈಕಮಾಂಡಿನ ದಾಸ್ಯಕ್ಕೆ ಒಗ್ಗಿಹೋಗಿದ್ದಾರೆ ಎಂದೆನಿಸುತ್ತದೆ. ಹೈಕಮಾಂಡಿನ ಕರೆ ಬಂದ ಕೂಡಲೇ ಉಟ್ಟ ಬಟ್ಟೆಯಲ್ಲಿ ದೆಹಲಿಗೆ ಓಡಿ ಹೋಗುವ ಚಾಳಿ ನಮ್ಮ ರಾಜ್ಯದ ನಾಯಕರುಗಳಿಗೆ ಅಭ್ಯಾಸ ಆಗಿ ಹೋಗಿದೆ. ನಮ್ಮ ರಾಜ್ಯದ ಯಾವುದೇ ಪ್ರಮುಖ ವಿಷಯಗಳಲ್ಲಿ ತೀರ್ಮಾನವಾಗಬೇಕಾದರೂ ದೆಹಲಿಯಲ್ಲಿ ಗಂಟೆಗಟ್ಟಲೆ ಕೈಕಟ್ಟಿಕೊಂಡು ನಿಲ್ಲಬೇಕಾದ ಪರಿಸ್ಥಿತಿ ನಮ್ಮ ಜನಪ್ರತಿನಿಧಿಗಳದು. ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರನ್ನು ಭೇಟಿ ಮಾಡಲು ಹಲವಾರೂ ದಿನಗಳು ಕಳೆದರೂ ಭೇಟಿ ಮಾಡಲು ಸಾಧ್ಯವಾಗದೆ ವಾಪಸ್ ಬಂದಿರುವ ಅನೇಕ ಸುದ್ದಿಗಳನ್ನು ಪತ್ರಿಕೆಗಳಲ್ಲಿ ನೋಡಿರುತ್ತೇವೆ…
ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು?

ಯಡ್ಯೂರಪ್ಪಂಗೆ ನೊಬೇಲ್ ಅವಾರ್ಡು…!
– ವಿಜಯ್ ಹೆರಗು
ಎಂದಿನಂತೆ ನಮ್-ವಿಜಯ್ ಹೆರಗುಮ ಕೆಂಚ, ಸೀನ, ಸಿದ್ದ, ನಾಣಿ ಎಲ್ಲಾರೂ ಬಂದು ಅವರ ಮಾಮೂಲಿ ‘ಅಡ್ಡಾ’ ರಾಮಣ್ಣನ ಟೀ ಅಂಗಡಿ ಮುಂದೆ ಕೂತ್ಕೊಂಡು ಹರಟೆ ಹೊಡೀತಾ ಇದ್ರು. ನಮ್ ಸಿದ್ದ ಅಲ್ಲಿ ಇದ್ದ ಅಂದ್ಮೇಲೆ ರಾಜಕೀಯದ ಮಾತು ಬರ್ಲೇಬೇಕು.
ಸಿದ್ದ : ಲೇ ಕೆಂಚ ಇವತ್ತು ಪೇಪರ್ ನೋಡ್ದೆನ್ಲಾ ?
ಕೆಂಚ : ಹೂ ಕನ್ಲಾ ನೋಡ್ದೆ, ಪಾಪ ನಮ್ ಯಡ್ಯೂರಪ್ನೋರಿಗೆ ಶ್ಯಾನೆ ಕಾಟ ಕೊಡ್ತಾವ್ರೆ. ಈ ಸಂತೋಷ್ ಹೆಗ್ಡೆ ಲೋಕಾಯುಕ್ತ ಆದಾಗಿಂದ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಸಂತೋಷಾನೇ ಕಾಣಾಕಿಲ್ಲ………ಸದ್ಯ ಇನ್ನೊಂದು ವಾರಕ್ಕೆ ಆವಯ್ಯ ರಿಟೈರ್ ಆಯ್ತಾರೆ ಇನ್ನಾರಾ ನಮ್ ಸಿಎಮ್ಮು ಸುಖವಾಗಿ ಇರ್ಬೌದು ಅಂದ್ಕೊಂಡ್ರೆ ಅದೇನೋ “ಗಣಿ ಬಾಂಬ್” ಹಾಕ್ಬಿಟ್ರಲ್ಲ ಅವ್ರು.
ಸೀನ : ಅಲ್ಲಲೇ ಕೆಂಚ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಯಾವಾಗ್ಲಾ ಸಂತೋಷ ನೋಡಿದ್ದೇ ನೀನು!? ಆವಯ್ಯ ಯಾವಾಗಲೂ ಮುಖ ಗಂಟ್ ಹಾಕ್ಕಂಡೆ ಇರ್ತಾರೆ…….
ಸಿದ್ದ : ನಿಜ ಕಣ್ಲಾ ಸೀನ……ಆವಯ್ಯ ನಗೋದೇ ಕಷ್ಟ ಕಣ್ಲಾ ಅದ್ಕೆ ಅವ್ರು ಸದಾನಂದ ಗೌಡ್ರುನ್ನ ಪಕ್ಕಕ್ಕೆ ಇಟ್ಕಂಡಿದ್ರು…..ಸದಾನಂದ ಗೌಡ್ರು ಯಾವಾಗ್ಲೂ ನಗ್ತಾ ಇರ್ತಾರೆ, ಆದ್ರೆ ಈಶ್ವರಪ್ಪ ಬಂದು ಸದಾನಂದ ಗೌಡ್ರುನ್ನ ಎಬ್ಬಿಸಿ ಅವ್ರ ಸೀಟ್ನಾಗೆ ಇವ್ರು ಕುಂತ್ಕಂಬುಟ್ರು.
ರಾಶಿ ಮತ್ತು ನಕ್ಷತ್ರ…
– ಗೋವಿಂದ ರಾವ್ ವಿ ಅಡಮನೆ
ಜನ್ಮರಾಶಿ ಮತ್ತು ನಕ್ಷತ್ರಗಳಿಗೆ ಜ್ಯೋತಿಷಿಗಳು ಬಲು ಪ್ರಾಧಾನ್ಯ ನೀಡುತ್ತಾರೆ. ಅವರು ನೀಡುತ್ತಿರುವ ಪ್ರಾಧಾನ್ಯ ಯುಕ್ತವಾದದ್ದೇ ಎಂಬುದನ್ನು ನೀವೇ ತೀರ್ಮಾನಿಸಲು ಅಗತ್ಯವಾದ ಕೆಲವು ಮೂಲಭೂತ ಮಾಹಿತಿ ಒದಗಿಸುವ ಉದ್ದೇಶದಿಂದ ಈ ಲೇಖನ ಬರೆಯುತ್ತಿದ್ದೇನೆ.
ರಾಶಿಗೆ ಸಂಬಂಧಿಸಿದಂತೆ ನೀವು ತಿಳಿದಿರಲೇ ಬೇಕಾದ ಅಂಶಗಳು ಇಂತಿವೆ
ರಾಶಿಯನ್ನು, ಅರ್ಥಾತ್ ತಾರಾರಾಶಿಯನ್ನು ಎರಡು ರೀತಿಯಲ್ಲಿ ವ್ಯಾಖ್ಯಾನಿಸಬಹುದು. ಅಧ್ಯಯಿಸಲು ಅನುಕೂಲ ಆಗಲಿ ಎಂದು ಖಗೋಲದ ಒಟ್ಟು ಕ್ಷೇತ್ರವನ್ನು ೮೮ ಭಾಗಗಳಾಗಿ ಇಂಟರ್ ನ್ಯಾಶನಲ್ ಅಸ್ಟ್ರನಾಮಿಕಲ್ ಯೂನಿಯನ್ ವಿಭಜಿಸಿದೆ. ಆಧುನಿಕ ಖಗೋಲವಿಜ್ಞಾನದ ಪ್ರಕಾರ ಈ ವಿಭಾಗಗಳಿಗೆ ತಾರಾರಾಶಿಗಳು (ಕಾನ್ಸ್ಟಲೇಷನ್ಸ್) ಎಂದು ಹೆಸರು. ಎಂದೇ, ಖಗೋಲದ ಒಂದು ಸೀಮಿತ ಕ್ಷೇತ್ರದಲ್ಲಿ ಇರುವ ತಾರೆಗಳ ಸಮೂಹವೇ ರಾಶಿ, ಪ್ರತೀ ಭಾಗದಲ್ಲಿಯೂ ಅನೇಕ ತಾರೆಗಳು ಇರುವುದರಿಂದ. ತಾರಾನಿಬಿಡ ಆಕಾಶವನ್ನು ತದೇಕಚಿತ್ತದಿಂದ ಅವಲೋಕಿಸುತ್ತಿದ್ದರೆ ಕೆಲವು ಒಂಟಿ ತಾರೆಗಳು ತಮ್ಮ ಉಜ್ವಲತೆಯಿಂದಾಗಿ ನಮ್ಮ ಗಮನ ಮೊದಲು ಸೆಳೆಯುತ್ತವೆ. ತದನಂತರ ಸಾಪೇಕ್ಷವಾಗಿ ಆಸುಪಾಸಿನಲ್ಲಿ ಇರುವ ಕೆಲವು ತಾರೆಗಳು ನಮ್ಮ ಮನಃಪಟಲದಲ್ಲಿ ವಿಶಷ್ಟ ಆಕೃತಿಗಳನ್ನು ಮೂಡಿಸುವುದರ ಮುಖೇನ ನಮ್ಮ ಗಮನ ಸೆಳೆಯುತ್ತವೆ.
ಸಿಂಗಂ ವಿವಾದ – ಕೇಳಿಕೊಳ್ಳಬೇಕಾದ ಕೆಲವು ಪ್ರಶ್ನೆಗಳು..
-ವಸಂತ್ ಶೆಟ್ಟಿ
ಸಿಂಗಂ ಅನ್ನುವ ನಕಲು ಚಿತ್ರದಲ್ಲಿ ಕನ್ನಡಿಗರನ್ನು ನಾಯಿಗಳೆಂದು ಜರಿಯುವ ಡೈಲಾಗ್ನಿಂದ ಕರ್ನಾಟಕದಲ್ಲಿ ಎಲ್ಲೆಡೆ ಪ್ರತಿಭಟನೆ ವ್ಯಕ್ತವಾಗಿದ್ದು ಕಂಡೆ. ಕರ್ನಾಟಕದಲ್ಲಿ ವ್ಯಕ್ತವಾದ ಭಾರಿ ವಿರೋಧಕ್ಕೆ ಪ್ರತಿಕ್ರಿಯಿಸಿದ ಸಿಂಗಂನಲ್ಲಿ ನಟಿಸಿರುವ ಕನ್ನಡ ಮೂಲದ ನಟ ಮಹಾಶಯರೊಬ್ಬರು “ಅದೇನು ದೊಡ್ಡ ವಿಷಯವೇ ಅಲ್ಲ. ಇದರ ವಿರೋಧಕ್ಕೆ ಅರ್ಥವಿಲ್ಲ” ಅಂದರು. ಘಟನೆ ಚಿಕ್ಕದೋ, ದೊಡ್ಡದೋ ಅನ್ನುವುದಕ್ಕಿಂತ ಇಂತಹ ಘಟನೆಯ ಹಿಂದೆ ಮನಸ್ಸಲ್ಲಿ ಏಳುವ ಕೆಲವು ಪ್ರಶ್ನೆಗಳು ಹಲವಾರು.
- ಇದೊಂದು ಚಿಕ್ಕ ಘಟನೆ ಅನ್ನುವ ಪ್ರಕಾಶ ರೈ ಅವರಿಗೆ ಕರ್ನಾಟಕ-ಮಹಾರಾಷ್ಟ್ರದ ನಡುವೆ ದಶಕಗಳಿಂದ ಗಡಿ ವಿವಾದವಿರುವುದು, ಅದು ಎರಡೂ ಕಡೆಯವರಿಗೆ ಭಾವನಾತ್ಮಕ ವಿಷಯವಾಗಿರುವುದರ ಅರಿವಿಲ್ಲವೇ? ಅರಿವಿದ್ದೂ ಇಂತಹದೊಂದು ಡೈಲಾಗ್ ಪ್ರಯೋಗ ಮಾಡಿರುವುದು ಪ್ರಚೋದಿಸಿ ಮರಾಠಿಗರನ್ನು ಈ ಹಿಂದಿ ಚಿತ್ರದತ್ತ ಸೆಳೆಯುವ playing to the gallery ಅನ್ನುವ ಮನಸ್ಥಿತಿಯಲ್ಲವೇ? ಇಲ್ಲದಿದ್ದರೆ ಚಿತ್ರದಲ್ಲಿ ಕರ್ನಾಟಕದಿಂದ ಸಾವಿರ ಜನರನ್ನು ಕರೆ ತರುವೆ ಎಂದು ಇವರು ಅನ್ನುವುದು, ಅದಕ್ಕೆ ಎದೆ ತಟ್ಟಿ ನಾನು ಮರಾಠ, ನಾನು ಮರಾಠ ಎಂದು ಕೂಗುತ್ತ ಕನ್ನಡಿಗರನ್ನು ನಾಯಿಗಳು ಎಂದು ಹೀರೊ ಬೊಬ್ಬಿರಿಯವುದು ಏನನ್ನು ತೋರಿಸುತ್ತದೆ? Artistic freedom ಹೆಸರಿನಲ್ಲಿ ಯಾವ ಅವಮಾನ ಮಾಡಿದರೂ, ಏನು ಮಾತನಾಡಿದರೂ ಸಹಿಸಿಕೊಳ್ಳಬೇಕೆ? ಅದನ್ನು ಪ್ರಶ್ನಿಸಿ ಬೀದಿಗಿಳಿಯುವುದು ಸಣ್ಣತನವೇ? ಸಂಕುಚಿತ ಮನೋಭಾವನೆಯೇ? ಪ್ರಕಾಶ್ ರೈಗೇನು ಬಿಡಿ, ಇವತ್ತು ಇಲ್ಲಿ ಕನ್ನಡಿಗ, ಅಲ್ಲಿ ತಮಿಳಿಗ, ಇನ್ನೆಲ್ಲೋ ತೆಲುಗ, ಮತ್ತೆಲ್ಲೋ ಇಂಡಿಯನ್ ಅಂದುಕೊಂಡು ತಮ್ಮ ಕೆಲಸ ಮಾಡ್ಕೊಂಡು ಮುಂದಕ್ಕೊಗ್ತಾರೆ. ಎಷ್ಟೇ ಅಂದರೂ ಕಲಾವಿದರಿಗ ಭಾಶೆಯ ಹಂಗಿಲ್ಲವಲ್ಲವೇ? 🙂 ಮತ್ತಷ್ಟು ಓದು

ಆಹಾ ಎಷ್ಟು ಮಜವಾಗಿತ್ತು ಆ ಕಾಲ…….!!!!
– ಪವನ್ ಪರುಪತ್ತೇದಾರ್
ನಮ್ಮ ತಾತಂದಿರು ಹಳೆ ಕಾಲದ ಕಥೆಗಳನ್ನು ಹೇಳುವಾಗ ಮೊದಲು ಸ್ವಲ್ಪ ಸಮಾಧಾನದಿಂದ ಕೇಳ್ತೇವೆ ಬರು ಬರುತ್ತಾ ಅವರು ಅದೇ ಕಥೆಗಳನ್ನು ಮತ್ತೆ ಮತ್ತೆ ಹೇಳುತ್ತಾರೆ ನಮಗೂ ಬೋರ್ ಅನಿಸಿ
ತಾತಾ ಎಷ್ಟು ಸಲಿ ಅದೇ ಕಥೆಗಳನ್ನ ಹೇಳ್ತಿರ ಅಂತ ಗೊಣಗಿಕೊಂಡು ಎದ್ದು ಹೋಗ್ತಿವಿ. ಇಂಥ ಅನುಭವಗಳು ಸಾಮಾನ್ಯವಾಗಿ ಎಲ್ಲರಿಗು ಆಗ್ತವೆ. ನನಗು ಹಾಗೇ ನಮ್ಮ ತಾತ ಕಥೆಗಳನ್ನ ಹೇಳ್ತಾ ಇದ್ರೂ ಅವರು ತಮ್ಮ ಬ್ರಿಟಿಶ್ ಮೇಷ್ಟ್ರಿಗೆ ಚಳ್ಳೆ ಹಣ್ಣು ತಿನ್ನಿಸಿ ಚಕ್ಕರ್ ಹಾಕಿದ್ದು, ಆಗಿನ ಕಾಲಕ್ಕೆ ಲೋಯರ್ ಸೆಕೆಂಡರಿ ಮುಗಿಸಿ ಕುಟುಂಬದಲ್ಲಿ ಹೆಸರು ಮಾಡಿದ್ದೂ, ಊರಿಗೆ ಮೊದಲನೇ ಎಲೆಕ್ಟ್ರಿಕ್ contractor ಆಗಿದ್ದು, ಊರಿನ ಪ್ರೆಸಿಡೆಂಟ್ ಆಗಿದ್ದು, ಆಗಿನ ಜನ, ಹಾಗೆ ಹೀಗೆ ಹುಹ್! ಇನ್ನು ಬಹಳಾ.
ಆದರೆ ನಾವು ಅವರು ಕಥೆ ಹೇಳುವಾಗ ಮುಗು ಮುರಿದು ಹೋಗುತಿದ್ದೆವಲ್ಲ, ನಮಗೆಲ್ಲಿ ಅರಿವಿತ್ತು ಆಗಿನ ಅ ಕಾಲದ ಬಗ್ಗೆ ಎಷ್ಟು ಹೇಳಿದರು ಮತ್ತೆ ಮತ್ತೆ ನಮ್ಮ ತಾತನವರಿಗೆ ಹೇಳಬೇಕು ಎನಿಸಿತ್ತು ಎಂದು. ಯಾಕಂದರೆ ಅ ಕಾಲವೇ ಹಾಗಿತ್ತು ಎಷ್ಟು ಅದರ ಬಗ್ಗೆ ಕೊಂಡಾಡಿದರು ಸಾಲದಂಥ ಕಾಲ. ನನಗೆ ಯಾಕೆ ಹೀಗನಿಸಿತ್ತು ಅಂದರೆ ನನಗೂ ಸಹ ಕಳೆದ ಹತ್ತು ವರ್ಷಕ್ಕೂ ಇಗ್ಗು ಬಹಳ ವ್ಯತ್ಯಾಸ ಕಾಣುತ್ತಿದೆ. ನನಗೆ ಇತ್ತೀಚಿಗಷ್ಟೇ ಇದರ ಅರಿವಾಯಿತು.
ರಾಗಿ ಬೆಳೆ ಬಲೆ ಚೆನ್ನಾಗೈತೆ ಸ್ವಾಮಿ, ಈ ಸಲ ಒಳ್ಳೆ ಬಂಪರ್ ಕಾಸ್ ಮಾಡ್ತ್ಯ ಅಂತ ಚಿಕ್ಕಣ್ಣ ಹೇಳಿದಾಗ ನಮ್ಮಪ್ಪನಿಗೆ ಒಂಥರಾ ಸಂತೋಷ. ಅಂತು ಟೈಮ್ ಗೆ ಸರ್ಯಾಗಿ ಉಳಿಸಿ, ಬಿತ್ತನೆ ಮಾಡಿಸಿ, ಗೊಬ್ಬರ ಚೆಲ್ಲಿ, ಕಳೆ ಒರೆದು, ಗುಂಟುವೆ ಹಾಕಿಸಿ, ಇರೋ ಮುಕ್ಕಾಲು ಎಕರೆಗೆ 10 ಸಾವಿರ ಖರ್ಚ ಮಾಡಿದ್ದಕ್ಕೆ ಇಷ್ಟ ಮಾತ್ರ ಬೆಳೆ ಆಗಿರೋದು ಚಿಕ್ಕಣ್ಣ ಅಂತ ಸ್ವಲ್ಪ ಬಿಂಕದಿಂದನೆ ಅಂದ್ರು. ಅಂಗಲ್ಲ ಸ್ವಾಮಿ ರೇಟ್ ಚೆನ್ನಾಗೈತೆ ಈಗ ಕೆಂಪು ರಾಗಿ 13 ರೂಪಾಯಿಗೆ ತೊಕೊತಾರೆ ಅಂತ ಚಿಕ್ಕಣ್ಣ ಹೇಳೋವಾಗ ಮಧ್ಯಕ್ಕೆ ಬಾಯಿ ಹಾಕಿ ನಮ್ಮಪ್ಪ ನಂದೊಂದು ೧೫ ಮೂಟೆ ಆಗ್ತದಲ್ಲ ಚಿಕ್ಕಣ್ಣ ಅಂದ್ರು ಸ್ವಲ್ಪ ಹೊತ್ತು ಯೋಚನೆ ಮಾಡಿ ಇನ್ನ ಒಂದು ಹೆಚ್ಚೇ ಆಗ್ತದೆ ಸ್ವಾಮಿ ಅಂದ ಚಿಕ್ಕಣ್ಣ. ನಮ್ಮಪ್ಪ ಸರಿ ಹಾಗಾದ್ರೆ ನಾಳೇನೇ ಕೂಲಿಯವರನ್ನ ಕರೆಸಿಬಿಡು ಕುಯ್ಯಿಸಿಬಿಡನ ಅಂದ್ರು.
ಕನ್ನಡಿಗರೆಂದರೆ ನಾಯಿಗಳಾ?
– ಸಚಿನ್
ಸಿಂಗಮ್ ಚಿತ್ರದಲ್ಲಿ ನಟರಾದ ಅಜಯ್ ದೇವಗನ್ ಹಾಗು ಪ್ರಕಾಶ್ ರೈ ರವರ ಮಧ್ಯೆ ನಡೆಯುವ ಸಂಭಾಷಣೆ ಯಲ್ಲಿ ನಾಯಿಗಳು ಎನ್ನುವ ಪದ ತೂರಿ ಬರುತ್ತೆ.
ಪ್ರಕಾಶ್ ರೈ : ಕರ್ನಾಟಕ ಬಾರ್ಡರ್ ಇಂದ ೧೦೦೦ ಜನರನ್ನು ಕರೆದು ಕೊಂಡು ಬರುತ್ತೇನೆ.
ಅಜಯ್ ದೇವಗನ್: ಆ ಸಾವಿರ ನಾಯಿಗಳಿಗೆ ನಾನೊಬ್ಬ ಸಿಂಹ ಸಾಕು ಎನ್ನುತ್ತಾನೆ. ನನ್ನ ಹಿಂದೆ ಇಡೀ ಒಂದು ಜಿಲ್ಲೆ ಇದೆ ಎಂದು ರಾಜರೋಷವಾಗಿ ಅಜಯ್ ಹೇಳುತ್ತಾನೆ.
ಇದು ನಿಜವಾಗಲೂ ಬೇಕಿತ್ತಾ? ಈ ಮೇಲಿನ ಮಾತುಗಳು ಖಂಡಿತ ಆಕ್ಷೇಪಾರ್ಹ ವಾದದ್ದು.
ಕಣ್ಣೀರ ಭಾಷೆ ಅರ್ಥವಾಗದವರಿಗೆ…
– ಚಿತ್ರಾ ಸಂತೋಷ್
“ಒಬ್ಬ ವ್ಯಕ್ತಿಯ ಕಣ್ಣೀರು, ದುಃಖ, ವಿಷಾದಗಳು ಅರ್ಥವಾಗದವನಿಗೆ ಅಧಿಕಾರವೂ ಅರ್ಥವಾಗಲು ಸಾಧ್ಯವಿಲ್ಲ. ಈ ಮೂರು ಅರ್ಥವಾಗದವನು ಅಧಿಕಾರ ಎಂದರೆ ಮೋಜು ಎಂದು ಅರ್ಥಮಾಡಿಕೊಳ್ಳುವ ಅಪಾಯವಿದೆ” ಬ್ರಿಟನ್ ಮಾಜಿ ಪ್ರಧಾನಿ ವಿನ್ ಸ್ಟನ್ ಚರ್ಚಿಲ್ ತನ್ನ ಆತ್ಮಕಥೆಯಲ್ಲಿ ಹೇಳಿದ್ದು ಹೀಗೆ. ಜನರ ಕಣ್ಣೀರು, ಕಣ್ಣೀರ ಭಾಷೆ ಅರ್ಥವಾದವನಿಗೆ ಮಾತ್ರ ಅಧಿಕಾರ ಎಂದರೆ ಏನೂಂತ ಅರ್ಥವಾಗಬಹುದು ಎನ್ನುವುದು ಚರ್ಚಿಲ್ ಮಾತು.
ಹೌದು, ನನಗೂ ನೆನಪಾಯಿತು. ನಮ್ಮಲ್ಲೂ ಜನಪ್ರಿಯ ರಾಜಕಾರಣಿಗಳಿದ್ದಾರೆ. ಜನರ ಕಣ್ಣೀರ ಜೊತೆ ತಾವೂ ಕಣ್ಣೀರಧಾರೆಯಾಗುವ ಜನಪ್ರತಿನಿಧಿಗಳಿದ್ದಾರೆ. ಕೆಲತಿಂಗಳ ಹಿಂದೆ ರಾಜ್ಯದಲ್ಲಿ ನೆರೆ ಬಂದಾಗ, ಜನರು ಕಷ್ಟಗಳನ್ನು ತೋಡಿಕೊಂಡು ಅತ್ತಾಗ ತಾವೂ ಅತ್ತು ನೀರಾದವರು ಇದ್ದಾರೆ! ಗೋಲಿಬಾರ್ನಲ್ಲಿ ರೈತ ಗುಂಡೇಟಿಗೆ ಬಲಿಯಾದಾಗ ರೈತನ ಶವದೆದುರು ಗಳಗಳನೆ ಅತ್ತು ಮಾಧ್ಯಮದಲ್ಲಿ ದೊಡ್ಡ ಫೋಟೋವಾಗಿ ರಾರಾಜಿಸಿದ ರಾಜಕಾರಣಿಗಳಿಗೇನು ನಮ್ಮಲ್ಲಿ ಬರಗಾಲವಿಲ್ಲ.





