ವಿಷಯದ ವಿವರಗಳಿಗೆ ದಾಟಿರಿ

ಜುಲೈ 11, 2011

1

ದಕ್ಷಿಣ ಸುಡಾನ್ ಈಗ ಸ್ವತಂತ್ರ

‍ನಿಲುಮೆ ಮೂಲಕ

ಗೋವಿಂದ ಭಟ್

ಸೈಕಲು ಪ್ರವಾಸದಲ್ಲಿ ನಾನು ಕೆನ್ಯಾ ರಾಜದಾನಿ ನೈರೋಬಿಗೆ ಹಾರುವುದು. ಅನಂತರ ಉಗಂಡಾ, ಸುಡಾನ್ ದಾರಿಯಾಗಿ ಈಜಿಪ್ಟ್ ತಲಪುವುದು ನನ್ನ ಗುರಿಯಾಗಿತ್ತು. ಬಹು ಪಾಲು ರಸ್ತೆ ಇಲ್ಲದ ಕಾರಣ ಜುಬಾ ಪಟ್ಟಣದಿಂದ ನೈಲ್ ನದಿಯ ದೋಣಿಯಲ್ಲಿ ಉತ್ತರಕ್ಕೆ ಸಾಗುವುದು ನನ್ನ ಆಲೋಚನೆಯಾಗಿತ್ತು. ನನ್ನ ಉದ್ದೇಶಿತ ಹಾದಿಯಲ್ಲಿ ಬಹು ಕಾಲದಿಂದ ಅಂದರೆ ಅಂದಿಗೆ ಮೂವತ್ತು ವರ್ಷದಿಂದ ಜನಾಂಗಿಯ ಕಲಹ ನಡೆಯುತ್ತಿದ್ದರೂ ಹಲವು ಪ್ರವಾಸಿಗರು ದೋಣಿಯಲ್ಲಿ ದಾಟುವುದರಲ್ಲಿ ಸಫಲರಾಗಿದ್ದರು. ಅಲ್ಲಿನ ಒಂದು ದೋಣಿಯ ಚಿತ್ರ ಇಲ್ಲಿದೆ. ನನ್ನ ಜರ್ಮನಿಯ ಸೈಕಲು ಗೆಳೆಯ ಫ್ರೆಡ್ ಪೋಲ್ ೧೯೬೪ ರಲ್ಲಿ ಇಲ್ಲೆ ದಾಟಿದ್ದರು. ಅದಕ್ಕೆ ನಾನು ಸಾಕಷ್ಟು ತಯಾರಿ ನಡೆಸಿದ್ದೆ.

ಆದರೆ ಕೆನ್ಯಾ ತಲಪುವಾಗ ಪರೀಸ್ಥಿತಿ ಕಠೀಣವಾಗಿರುವುದು ಅರಿವಾಯಿತು. ನನ್ನ ದಾರಿಯಲ್ಲಿದ್ದ ಉಗಂಡಾ ಹಾಗೂ ಸುಡಾನ್ ಅಂತರ್ಯುದ್ದ ಬರ್ಜರಿಯಾಗಿ ನಡೆಯುತ್ತಿದ್ದರೆ ಉತ್ತರದ ಇತಿಯೋಪಿಯ ಸಹಾ ದಾರಿ ಬಿಡುತ್ತಿರಲಿಲ್ಲ. ಹಾಗಾಗಿ ನನ್ನ ಯೋಜನೆಗಳೆಲ್ಲ ತಲೆಕೆಳಗಾಗಿ ಯುರೋಪಿನಿಂದ ಹಿಂತಿರುಗುವ ಬದಲು ಅಮೇರಿಕವನ್ನು ಹಾದು ಜಗತ್ತು ಪೂರ್ತಿ ಸುತ್ತು ಬರಲು ತೀರ್ಮಾನಿಸಿದೆ.

ಸುಡಾನ್ ದೇಶದಲ್ಲಿ ಉತ್ತರದಲ್ಲಿ ಅರಬ್ ಮುಸ್ಲಿಮರ ಪ್ರಾಬಲ್ಯ. ಅದಿಕಾರವೆಲ್ಲ ಅವರ ಕೈಯಲ್ಲಿ ಕೇಂದ್ರಿತ. ದಕ್ಷಿಣದಲ್ಲಿ ವಾಸ್ತವ್ಯ ಇರುವುದು ಕರಿಯ ಕ್ರೈಸ್ತ ಅನುಯಾಯಿಗಳು. ಬ್ರೀಟಿಶರು ಸ್ವಾತಂತ್ರ ಕೊಡುವಾಗ ಈಜಿಪ್ಟ್ ಜತೆ ಒಪ್ಪಂದ ಮಾಡಿ ಒಂದು ಕಿತಾಪತಿ ಮಾಡಿದ್ದರು. ಈ ಕರಿ ಜನರೇ ಜೀವಿಸುವ ದಕ್ಷಿಣ ಸುಡಾನ್ ಪ್ರಾಂತ್ಯವನ್ನು ಪಕ್ಕದ ಕರಿಯ ಜನರಿರುವ ಕೆನ್ಯಾ ಉಗಂಡಾದಿಂದ ಬೇರ್ಪಡಿಸಿ ಬಹುಕಾಲ ಈಜಿಪ್ಟ್ ವಶವಾಗಿದ್ದ ಉತ್ತರ ಸುಡಾನ್ ಜತೆ ಸೇರಿಸಿಬಿಟ್ಟರು. ಚಿತ್ರದಲ್ಲಿ ಕಾಣುವಂತೆ ಉತ್ತರಬಾಗ ಮರುಭೂಮಿಯಾದರೆ ದಕ್ಷಿಣಬಾಗದಲ್ಲಿ ಹುಲ್ಲುಗಾವಲು ಹಾಗೂ ಕುರುಚಲು ಕಾಡು. ಉತ್ತರದವರಿಂದ ಸತತವಾಗಿ ದಬ್ಬಾಳಿಕೆ, ಅನ್ಯಾಯ. ಶ್ರೀಲಂಕದಲ್ಲಿ ಇದ್ದಂತಹ ಪರಿಸ್ಥಿತಿ.

ಸ್ವಾತಂತ್ರ ಸಿಕ್ಕರೂ ಶಾಂತಿ ನೆಲೆಸುವುದು ??? ನಲುವತ್ತು ಬಿಲಿಯ ಡಾಲರ್ ಸಾಲವನ್ನು ಹೇಗೆ ಪಾಲು ಮಾಡುವುದು – ಈ ಸಾಲ ಕರಿಯರ ದಮನಕ್ಕೆ ವಿಮಾನ ಹಾಗೂ ಮದ್ದುಗುಂಡು ಖರೀದಿಗೆ ಈ ಸಾಲದ ಹಣ ಉಪಯೋಗವಾದದ್ದು ಹೊರತು ಅನ್ನ ಬಟ್ಟೆಗಾಗಿ ಅಲ್ಲ. ಕರಿಯರಿಗಂತೂ ಬಡಿಗೆ ಕೊಟ್ಟು ಬಡಿಸಿಕೊಂಡ ಅನುಭವ. ಅಪಾರ ಜೀವಹಾನಿಯಾಗಿದೆ. ಉದ್ದೇಶಿತ ಗಡಿ ಪ್ರದೇಶದ ನೆಲದಡಿಯಲ್ಲಿ ತೈಲಸಂಪತ್ತಿದೆ. ಸತತ ದಬ್ಬಾಳಿಕೆ ಅನುಭವಿಸಿದ ದಕ್ಷಿಣದಲ್ಲೀಗ ಬೆಡಿ ಹಿಡಿದ ಹಲವಾರು ಬಣಗಳಿವೆ. ಅವುಗಳ ಒಟ್ಟುಗೂಡಿಸುವುದು ಸುಲಭಸಾದ್ಯವಲ್ಲ. ಇವೆಲ್ಲ ಲೆಕ್ಕಾಚಾರ ಗೊಂದಲಾಮಯ. ಅದರೂ ಇನ್ನಾದರೂ ಶಾಂತಿ ನೆಲಸುವುದೋ ?

1 ಟಿಪ್ಪಣಿ Post a comment
  1. sriharsha's avatar
    sriharsha
    ಜುಲೈ 11 2011

    ಭಾರತದಲ್ಲೂ ಇದೇ ಪರಿಸ್ಥಿತಿ. ದಕ್ಷಿಣದವರು ಕಷ್ಟ ಪಟ್ಟು ದುಡಿಯುವುದು ಅದನ್ನು ಉತ್ತರದವರು ತಿನ್ನುವುದು. ಸಾಲದ್ದಕ್ಕೆ ದಕ್ಷಿಣದವರ ಬಗ್ಗೆ ತುಚ್ಛ ನೋಟ. ಹತ್ತಾರು ಮಕ್ಕಳನ್ನು ಹಡೆದು ಬೀದಿಗೆ ಬಿಟ್ಟು ಕಡೆಗೆ ಬೆಂಗಳೂರು ಸೇರಿಸುವ ಕೆಳವರ್ಗದ ಜನರು ಇಲ್ಲಿಂದ ಪಡೆದ ತೆರಿಗೆಯ ಹಣವನ್ನೆಲ್ಲ ತಿಂದು ಹಾಕಿ ಸಿರಿವಂತರಾಗುವ ಮೇಲ್ವರ್ಗದವರು.

    ಉತ್ತರ

ನಿಮ್ಮ ಅನಿಸಿಕೆ...

Note: HTML is allowed. Your email address will never be published.

Subscribe to comments