ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ…!?
– ಕುಮಾರ ರೈತ
ಶೀರ್ಷಿಕೆ ಓದಿದಾಗ ಆಶ್ವರ್ಯ-ಪ್ರಶ್ನಾರ್ಥಕ ಭಾವಗಳು ಮೂಡುವುದು ಸಹಜ. ಆದರೆ ‘ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ ಎನ್ನುವುದು ಅಕ್ಷರಶಃ ಸತ್ಯ. ಗಡಿ ಅಂಚಿನ ಕಾಸರಗೋಡಿನಿಂದ ಕನ್ನಡಕ್ಕೆ ಸ್ಥಾನವೇ ಇಲ್ಲದಂತೆ ಮಾಡುವ ನಿಟ್ಟಿನಲ್ಲಿ ಆ ಸರಕಾರ ನಾನಾ ಬಗೆಯ ತಂತ್ರಗಾರಿಕೆಯನ್ನು ಮಾಡುತ್ತಲೇ ಬಂದಿದೆ. ಭಾಷಾವಾರು ಪ್ರಾಂತ್ಯ ರಚನೆಯಾಗಿ 54 ವರ್ಷ ಸಂದರೂ ಕಾಸರಗೋಡಿನಲ್ಲಿ ಕನ್ನಡ ಉಳಿದಿರುವುದನ್ನು ಕಂಡು ಈ ಬಾರಿ ಪ್ರಬಲ ಅಸ್ತ್ತ ಪ್ರಯೋಗಿಸಿದೆ. ಇದಕ್ಕೆ ತಕ್ಕ ಪ್ರತ್ಯಸ್ತ್ರ ಹೂಡದೇ ಇದ್ದರೆ ಸಂಭವಿಸುವ ಅಪಾಯಗಳು ಅನೇಕ. ಅವುಗಳೇನು…..?
ರಹಸ್ಯಗಳನ್ನು ಹುಡುಕತ್ತ…!
– ವಿಷ್ಣುಪ್ರಿಯ
ಸೌರಮಂಡಲದ ತುದಿಯಲ್ಲಿ ನೀರಿನ ಗುಳ್ಳೆಗಳ್ಳಂಥ ಗುಳ್ಳೆಗಳಿವೆ. ಇವು 10 ಕೋಟಿ ಮೈಲಿಗಳಷ್ಟು ವಿಶಾಲವಾಗಿವೆ ಎಂಬುದನ್ನು ಕೂಡಾ ತಿಳಿಸಿದ್ದು ಇವೇ ವಾಯೇಜರ್ ನೌಕೆಗಳು. ಜಗತ್ತು ಹೇಗಿರಬಹುದು? ಎಂಬ ಕಲ್ಪನೆ ನಮ್ಮಲ್ಲಿ ವೇದ, ಪುರಾಣಗಳ ಕಾಲದಿಂದಲೂ ಬೆಳೆದು ಬಂದಿದೆ. ಆವಾಗ ಭೂಮಿಯಿಂದ ಬೇರೆ ಜಗತ್ತಿನತ್ತ ಚಲಿಸಲು ಈಗಿರುವಂಥ ರಾಕೆಟ್ಗಳಿರಲಿಲ್ಲ. ಗಗನನೌಕೆಗಳಿರಲಿಲ್ಲ. ಆದರೂ ಅಂದಿನ ದಿನಗಳಲ್ಲಿ ಹೇಳಿದ್ದು ಈಗ ಸತ್ಯವಾಗುತ್ತಿದೆ. ಹಾಗಿದ್ದರೆ ವೇದಗಳ ಕಾಲದಲ್ಲಿ ಜೀವಿಸಿದ್ದ ಜನರು ಯಾವ ಮಟ್ಟದ ಜ್ಞಾನವನ್ನು ಹೊಂದಿದ್ದರು? ಸಪ್ತ ಸಾಗರಗಳ ಬಗ್ಗೆ ವೇದಗಳು ಹೇಳುತ್ತವೆ. 14 ಲೋಕಗಳ ಬಗ್ಗೆಯೂ ನಮ್ಮ ಪುರಾಣಗಳಲ್ಲಿ ಪ್ರಸ್ತಾಪವಿದೆ.
ಅಸಂವಿಧಾನಿಕ ಡಬ್ಬಿಂಗ್ ನಿಷೇಧದಿಂದ ಕನ್ನಡಕ್ಕಿಲ್ಲದ ಹ್ಯಾರಿ ಪಾಟರ್..!

ಇತ್ತೀಚಿಗೆ ಬಂದ ಸುದ್ದಿಯಂತೆ, ಹ್ಯಾರಿ ಪಾಟರಿನ ಹೊಸ ಚಿತ್ರ ತೆರೆಗೆ ಬಂದಿದೆ. ಅಶ್ಟೆ ಅಲ್ಲ ಇದು ಬಾರತದ ಪ್ರಾದೇಶಿಕ ಬಾಶೆಗಳತ್ತ ತನ್ನ ಗಮನವನ್ನು ಹರಿಸುತ್ತ, ಚಿತ್ರವನ್ನು ಇಂಗ್ಲೀಶಿನ ಜೊತೆಗೆ ತೆಲುಗು, ತಮಿಳು, ಹಿಂದಿಯಲ್ಲೂ ಬಿಡುಗಡೆ ಮಾಡುತ್ತಿದೆ. ಇದರರ್ಥ ಆಂದ್ರಪ್ರದೇಶ, ತಮಿಳುನಾಡಿನ ಮತ್ತು ಉತ್ತರ ಬಾರತದ ಅನೇಕ ರಾಜ್ಯಗಳ ಜನರು ಹ್ಯಾರಿ ಪಾಟರನ್ನು ತಮ್ಮ ತಾಯ್ನುಡಿಯಲ್ಲೇ ನೋಡಿ ಸವಿಯಬಹುದಾಗಿದೆ. ಆದರೆ ಈ ಸೌಬಾಗ್ಯ ಕನ್ನಡ ಬಾಶೆಯನ್ನಾಡುವ, ಕನ್ನಡದಲ್ಲೇ ಮನರಂಜನೆಯನ್ನು ಬಯಸುವ ನಮಗೆ ಇಲ್ಲ.
ಕರ್ನಾಟಕದಲ್ಲಿ ಇಂಗ್ಲೀಶ ಚಿತ್ರಗಳು ಇಂಗ್ಲೀಶಿನಲ್ಲೇ ಬಿಡುಗಡೆಯಾಗಬೇಕು ಎಂಬ ನಿಯಮವೇನು ಇಲ್ಲ. ಅದರರ್ಥ ಈ ಚಿತ್ರ ಕರ್ನಾಟಕದಲ್ಲಿ ಇಂಗ್ಲೀಶ ಜೊತೆಗೆ ತೆಲುಗು, ತಮಿಳು, ಹಿಂದಿಯಲ್ಲೂ ಬಿಡುಗಡೆ ಆಗಬಹುದು. ಹೀಗೆ ಕರ್ನಾಟಕದಲ್ಲಿ ಇಂಗ್ಲೀಶ ಚಿತ್ರ ಇಂಗ್ಲೀಶೇತರ ಇತರ ಬಾಶೆಗಳಲ್ಲಿ ಬಿಡುಗಡೆಯಾದರೆ ಅಲ್ಲಿಗೆ ಡಬ್ಬಿಂಗ್ ನಿಶೇದವಿದೆ ಎಂಬ ಮಾತು ಶುದ್ದ ಸುಳ್ಳಾಗುತ್ತದೆ. ಅದರರ್ಥ ಕರ್ನಾಟಕದಲ್ಲಿ ಡಬ್ಬಿಂಗ್ ಚಿತ್ರಗಳಿಗೆ ಅನುಮತಿಯಿದೆ, ಆದರೆ ಕನ್ನಡಕ್ಕೆ ಡಬ್ ಆದ ಚಿತ್ರಗಳಿಗೆ ಅನುಮತಿಯಿಲ್ಲ. ಹ್ಯಾರಿ ಪಾಟರ್ ತೆಲುಗು, ತಮಿಳು, ಹಿಂದಿಗಳಿಗೆ ಡಬ್ ಆಗಿ ಕರ್ನಾಟಕದಲ್ಲಿ ಬಿಡುಗಡೆಯಾದರೆ ಓಕೆ,, ಆದರೆ ಅದೇ ಚಿತ್ರ ಕನ್ನಡಕ್ಕೆ ಡಬ್ ಆಗಿ ಬಿಡುಗಡೆಯಾಗಲಿ ಅಂದ್ರೆ ಯಾಕೆ.? ಅಂತ ಕೇಳ್ತಾರೆ ನಮ್ಮ ಚಲನಚಿತ್ರ ಮಂಡಳಿ. ಈ ಪ್ರಶ್ನೆಯಲ್ಲಿ ಸ್ವಲ್ಪನಾದ್ರೂ ನ್ಯಾಯ ಇದೆಯಾ.!
ಅಸಂವಿಧಾನಿಕ ನಿಯಮ:
ಆಂಗ್ಲ ಬಾಶೆಯ ಬಹುಕೋಟಿ ವೆಚ್ಚದ, ಉನ್ನತ ತಂತ್ರಜ್ನಾನ, ಗ್ರಾಫಿಕ್ಸ್ ಇರುವ ಚಿತ್ರಗಳನ್ನು ಬರೀ ಇಂಗ್ಲೀಶ ಬಲ್ಲವರಶ್ಟೇ ನೋಡಬೇಕು ಎಂಬಂತಿದೆ ನಮ್ಮ ಚಿತ್ರರಂಗದ ಈಗಿನ ನಿಯಮ. ಕರ್ನಾಟಕದಲ್ಲಿ ಇಂಗ್ಲೀಶ್ ಬಾರದವರು ಈ ಚಿತ್ರ ನೋಡಬೇಕೆಂದರೆ ಅವರು ತಮಿಳು, ತೆಲುಗು, ಹಿಂದಿಗೆ ಮೊರೆ ಹೋಗಬೇಕಾದ ಪರಿಸ್ಥಿತಿಯನ್ನು ಈ ಡಬ್ಬಿಂಗ್ ನಿಶೇದದ ನಿಯಮ ತಂದೊಡ್ಡಿದೆ. ಚಿತ್ರರಂಗದ ಈ ಅಸಂವಿದಾನಿಕ ಡಬ್ಬಿಂಗ್ ನಿಶೇದದ ನಿಯಮದಿಂದ ಕೆಲವು ಒಳ್ಳೆಯ ಮನರಂಜನೆಯಿಂದ ಕರ್ನಾಟಕದ ಜನರು ವಂಚಿತರಾಗುತ್ತಿದ್ದಾರೆ. ಈ ಹ್ಯಾರಿ ಪಾಟರ್ ಚಿತ್ರ ಹೆಚ್ಚು ಮಕ್ಕಳ ಮನರಂಜನೆ ಉದ್ದೇಶಿಸಿ ಮಾಡಿರೋದ್ರಿಂದ ಡಬ್ಬಿಂಗ್ ನಿಶೇದದಿಂದಾಗಿ ಕನ್ನಡದ ಮಕ್ಕಳಿಗೆ ಮೋಸವಾಗ್ತಿದೆ ಎಂಬುದನ್ನು ಕೂಡ ಇಲ್ಲಿ ಗಮನಿಸಬೇಕು. ಪ್ರೇಕ್ಷಕನಿಗೆ ನೀನು ಇದನ್ನೇ ನೋಡು ಅಥವಾ ಇದೇ ಬಾಶೆಯಲ್ಲಿ ನೋಡು ಎಂದು ಡಬ್ಬಿಂಗ್ ನಿಶೇದ ಎಂಬ ಅಸ್ತ್ರದ ಮೂಲಕ ಒತ್ತಾಯಿಸುವುದು ಸಂವಿದಾನ ವಿರೋದಿಯಾದ ನಡೆ. ಜಗತ್ತಿನ ಎಲ್ಲ ಒಳ್ಳೆಯ ಮನರಂಜನೆಯನ್ನು ತನ್ನ ನುಡಿಯಲ್ಲಿ ನೋಡುವ ಹಕ್ಕು ಅವನಿಗಿದೆ. ಡಬ್ಬಿಂಗ್ ನಿಶೇದದಿಂದ ಈ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಡಬ್ಬಿಂಗ್ ಬರಲಿ. ಒಳ್ಳೆಯ ಮನರಂಜನೆ ಅನ್ನೋದು ನಗರ ಪ್ರದೇಶಗಳ ಅಥವಾ ಇಂಗ್ಲೀಶ್ ಬಲ್ಲ ಕೆಲವ್ರಿಗೆ ಮಾತ್ರ ಸೀಮಿತ ಆಗದೇ ರಾಜ್ಯದ ಎಲ್ಲರಿಗೂ ಅವರು ಆಡುವ ನುಡಿಯಲ್ಲೇ ಅದುಸಿಗುವಂತಾಗಲಿ. ಕರ್ನಾಟಕದಲ್ಲಿ ಎಲ್ಲರಿಗೂ ಕನ್ನಡದಲ್ಲಿ ಮನರಂಜನೆ ಸಿಗುತ್ತದೆ ಎಂಬ ಉದ್ದೇಶವನ್ನು ಡಬ್ಬಿಂಗ್ ಹೊಂದಿದೆ ಎಂಬ ಸಾಮಾನ್ಯ ತಿಳುವಳಿಕೆಯನ್ನು ಡಬ್ಬಿಂಗ್ ವಿರೋದಿಗಳು ಅರಿಯಬೇಕಿದೆ.!
ಎಂಥ ಫೋಟೊ ತೆಗೆಯೋಕೆ ನನಗಿಷ್ಟ-ಪೋಟೊಗ್ರಫಿ ಲೇಖನ-4
-ಶಿವು.ಕೆ
ನಾವು ಕ್ಯಾಮೆರವನ್ನು ಕೊಂಡು ಯಾವ ವಿಧದ ಫೋಟೊಗ್ರಫಿ ಮಾಡಬೇಕು ಎಂದು ನಂತರ ತೀರ್ಮಾನಿಸಬೇಕಾ? ಅಥವ ಫೋಟೊಗ್ರಫಿ ಆಯ್ಕೆ ಮಾಡಿಕೊಂಡು ನಂತರ ಅದಕ್ಕೆ ತಕ್ಕಂತ ಕ್ಯಾಮೆರ ಕೊಳ್ಳಬೇಕಾ? ಇದೊಂತರ ಮದುವೆಯಾಗುವವರೆಗೂ ಹುಚ್ಚು ಬಿಡೋಲ್ಲ, ಹುಚ್ಚು ಬಿಡುವವರೆಗೂ ಮದುವೆಯಾಗೋಲ್ಲ ಅನ್ನುವ ಗಾದೆಯನ್ನು ಉದಾಹರಿಸಿ,. ಮುಂದೇನು ಮಾಡಬೇಕೆನ್ನುವುದನ್ನು ಒಬ್ಬ ಛಾಯಾಗ್ರಾಹಕನ ಪುಟ್ಟಕತೆಯ ಮೂಲಕ ಮುಂದಿನ ಭಾಗದಲ್ಲಿ ಹೇಳುತ್ತೇನೆ ಅಂದಿದ್ದೆನಲ್ಲ., ಆ ಕತೆಗೆ ಮೊದಲು ಒಂದು ಪುಟ್ಟವಿಚಾರವನ್ನು ಚರ್ಚಿಸೋಣ.
ಇಂಥ ಸಮಯದಲ್ಲಿ ಫೋಟೊಗ್ರಫಿ ಸಾಧನೆ ಮಾಡಿದ ಗೆಳೆಯರನ್ನು ಹುಡುಕಿಕೊಂಡು ಹೋಗುತ್ತೀರಿ. ಅವರ ಬಳಿ ಈ ವಿಚಾರವನ್ನು ಚರ್ಚಿಸುತ್ತೀರಿ. ಆಗ ನಿಮಗೆ ಸಿಗುವ ಉತ್ತರ ಎಂತದ್ದು ಗೊತ್ತ? ಅವರ ಕ್ಯಾಮೆರ ಮತ್ತು ಅದರಿಂದ ತೆಗೆದ ಫೋಟೊಗ್ರಫಿ ಅನುಭವದ ಅಧಾರದ ಮೇಲೆ ಅವರಿಂದ ನಿಮಗೆ ಉತ್ತರ ಸಿಗುತ್ತದೆ. ಅದು ಆ ಕ್ಷಣಕ್ಕೆ ಸಮಾಧಾನವೆನಿಸಿದರೂ ನೀವು ಏಕಾಂತದಲ್ಲಿ ಯೋಚಿಸಿದಾಗ ಇಷ್ಟವಾಗದಿರಬಹುದು. ಇಂಥ ಸಮಯದಲ್ಲಿ ನೀವೊಬ್ಬ ಫೋಟೊಗ್ರಫಿ ಗುರುವನ್ನು ಹುಡುಕಿಕೊಳ್ಳಬೇಕು. ಇಲ್ಲೂ ಕೂಡ ಎಂಥ ಗುರುವನ್ನು ಆಯ್ಕೆ ಮಾಡಿಕೊಳ್ಳುತ್ತೀರಿ ಎನ್ನುವುದು ಮುಖ್ಯ. ಏಕೆಂದರೆ ಗುರುಗಳಲ್ಲಿ ಎರಡು ವಿಧ. ನಿಮ್ಮನ್ನು ಓಲೈಸಲು, ಮೆಚ್ಚಿಸಲು, ಅಥವ ಸಮಾಧಾನಿಸಲು, ಅಥವ ಸಾಗಹಾಕಲು ಇಂಥ ಕಾರಣಗಳಿಗಾಗಿ ಸಿಗುವ ಗುರುಗಳು ಒಂದು ರೀತಿ. ಇವರು ಏನು ಮಾಡುತ್ತಾರೆಂದರೆ ತಮಗೆ ಗೊತ್ತಿಲ್ಲದನ್ನು ಗೊತ್ತು ಎನ್ನುವ ರೀತಿ ಭಾಷಣ ಮಾಡಿ ನಿಮ್ಮನ್ನು ಚಕಿತಗೊಳಿಸುತ್ತಾರೆ. ಆ ಪ್ರೇರಣೆಯಿಂದಾಗಿ ನೀವು ಮೈಮರೆತು ಅವರ ಮಾತಿನಿಂದಾಗಿ ನಿಮ್ಮ ದಾರಿ ತಪ್ಪಿರುತ್ತೀರಿ. ಇನ್ನೂ ಕೆಲವೊಮ್ಮೆ ಅವರು ಪುಸ್ತಕದ ಬದನೆಕಾಯಿ ಎನ್ನುವಂತೆ ಎಲ್ಲವನ್ನು ಓದಿ ತಿಳಿದಿರುತ್ತಾರೆ. ಅದರ ಬಗ್ಗೆ ಅದ್ಬುತವಾಗಿ ಮಾತಾಡುತ್ತಾರೆ. ಅವರ ಮಾತುಗಳನ್ನು ಕೇಳಿದಾಗಲೂ ನೀವು ಪುಳಕಗೊಳ್ಳುವುದು ಖಚಿತ. ಎಷ್ಟೋವರ್ಷಗಳಿಂದ ಫೋಟೊಗ್ರಫಿ ಸಾಧನೆ ಮಾಡದೆ ಪ್ರಸ್ತುತ ಪರಿಸ್ಥಿತಿಯಲ್ಲಿನ ಹೊಸ ತಂತ್ರಜ್ಜತೆಯನ್ನು ತಿಳಿದುಕೊಳ್ಳದೇ ಮತ್ತು ಅದನ್ನು ನಿತ್ಯ ಫೋಟೊಗ್ರಫಿ ಮಾಡುತ್ತ ಕಲಿಯದೇ ಹಳೇ ಓಬಿರಾಯನ ಕಾಲದ ದಂತಕತೆಯನ್ನು ನಿಮ್ಮ ಮುಂದೆ ಮಂಡಿಸುತ್ತಾ ನಿಮ್ಮನ್ನು ಅಚ್ಚರಿಗೊಳಿಸುವುದರಿಂದ ನೀವು ಖಂಡಿತ ದಾರಿ ತಪ್ಪಿದಂತಾಗುತ್ತದೆ. ಅಂತ ಗುರುಗಳಿಂದ ದೂರವಾಗುವುದು ಒಳ್ಳೆಯದು.
ಸಂಸ್ಕೃತಿ ಸಂಕಥನ – ೨
-ರಮಾನಂದ ಐನಕೈ
ಸಂಸ್ಕೃತಿ ಸಂಕಥನ – ೧
ಭಾರತೀಯ ಸಂಸ್ಕೃತಿಯ ಕುರಿತಾದ ನಮ್ಮ ಸ್ಮೃತಿ ವಿಸ್ಮೃತಿಯಾಗಿದೆ. ಇದಕ್ಕೆ ಕಾರಣವೇನು ಈ ಮರೆವನ್ನು ಪುನಃ ನೆನಪಿಸಿಕೊಳ್ಳುವುದು ಹೇಗೆ? ಸಂಸ್ಕೃತಿಯನ್ನು ಮರೆತದ್ದರಿಂದ ಆದ ಪರಿಣಾಮಗಳೇನು? ಹೀಗೆ ಯೋಚಿಸಲು ಹೋದರೆ ನಮ್ಮೆದುರು ನೂರಾರು ಪ್ರಶ್ನೆಗಳುಂಟು. ಭಾರತೀಯರು ತಮ್ಮ ಸಂಸ್ಕೃತಿಯ ಕುರಿತಾಗಿ ಕೇಳುತ್ತಿರುವ, ಓದುತ್ತಿರುವ, ನಂಬಿಕೊಂಡಿರುವ ಹಲವು ಸಂಗತಿಗಳು ತಪ್ಪು ತಿಳುವಳಿಕೆಂದ ಕೂಡಿದ್ದರಿಂದ ವರ್ತಮಾನದ ಭಾರತದಲ್ಲಿ ಅನೇಕಾನೇಕ ಸಮಸ್ಯೆಗಳು ಜೀವಪಡೆಯುತ್ತಲೇ ಇವೆ. ಈ ಸತ್ಯ ಅರ್ಥವಾಗಬೇಕಾದರೆ ಇತ್ತೀಚೆಗೆ ಪ್ರಕಟಗೊಂಡ ಎರಡು ಕನ್ನಡದ ಪುಸ್ತಕಗಳನ್ನು ಪ್ರತಿಯೊಬ್ಬರೂ ಓದಲೇಬೇಕು.
ಒಂದು ಸ್ಮೃತಿ-ವಿಸ್ಮೃತಿ ಭಾರತೀಯ ಸಂಸ್ಕೃತಿ ಎಂಬ ಪುಸ್ತಕ ಇದು ಪ್ರೊ. ಬಾಲಗಂಗಾಧರರ ಸಂಶೋಧನಾ ಗ್ರಂಥ ಇದನ್ನು ಪ್ರೊ. ರಾಜಾರಾಮ ಹೆಗಡೆ ಕನ್ನಡಕ್ಕೆ ಅನುವಾದಿಸಿದ್ದಾರೆ. ಇನ್ನೊಂದು ಪುಸ್ತಕ ಪೂರ್ವಾವಲೋಕನ. ಇದು ಬಾಲಗಂಗಾಧರರ ಬಿಡಿ ಲೇಖನಗಳ ಅನುವಾದಗಳ ಸಂಗ್ರಹ. ಇವೆರಡೂ ಕೂಡಾ ಭಾರತೀಯ ಸಮಾಜ ವಿಜ್ಞಾನವನ್ನು ಪುನರ್ಪರಿಶೀಲನೆಗೆ ಹಚ್ಚುವ ಮಹತ್ವದ ಕೃತಿಗಳು.
ಕನ್ನಡಪ್ರೇಮದ ಕುರಿತು ಒಂಚೂರು…
ನಾನು ಕನ್ನಡಿಗ ಅಂತ ಅನ್ನುವಾಗ ನನಗೆ ಚೂರೂ ಹೆಮ್ಮೆಯೇ ಆಗುತ್ತಿದ್ದಿರಲಿಲ್ಲ.
ಹೌದು. ಇಸ್ಕೂಲು, ಹೈಸ್ಕೂಲು ಓದುವಾಗಲೆಲ್ಲ ’ನಾನು ಕನ್ನಡಿಗ’ ಅನ್ನುವುದರಲ್ಲಿ ಅಂತಹ ವಿಶೇಷಗಳೇನೂ ಇರಲಿಲ್ಲ. ಸುತ್ತಮುತ್ತಲೂ ಮುತ್ತಿಕೊಂಡಿದ್ದ ಗೆಳೆಯರೆಲ್ಲರೂ ಕನ್ನಡಿಗರೇ ಆಗಿದ್ದರಿಂದ ಅದೊಂದು ಸ್ಪೆಷಲ್ ಅನ್ನುವ ಭಾವ ಮೂಡುತ್ತಿರಲಿಲ್ಲ. ಕಾಲೇಜುಪರ್ವದಲ್ಲಿ ಕನ್ನಡಿಗ ಆಗಿರುವುದು ಕೊಂಚ ಸಂಕಟಗಳಿಗೆ ಸಿಕ್ಕಿಸಿತ್ತಾದರೂ ಅದಕ್ಕೆ ಕಾರಣ ’ನಾ ಕನ್ನಡದವ’ ಆಗಿರುವುದಲ್ಲ, ’ಇಂಗ್ಲೀಷ್ ಅರಿವು ಕಡಿಮೆ ಇರುವುದು’ ಎಂಬ ಜ್ಞಾನೋದಯ ಆದಮೇಲೆ ಆ ಕುರಿತು ಆಲೋಚನೆಯೂ ಬರಲಿಲ್ಲ.
ಆದರೆ ಕರುನಾಡ ಕೋಟೆ ದಾಟಿದ ಮೇಲೆ ಕನ್ನಡ ಎಂಬ ಭಾಷೆ ಎಷ್ಟು ಸಿಹಿ ಅನ್ನುವುದು ಗೋಚರವಾಗುತ್ತಿತ್ತು. ಇದೊಂಥರ ಮನೆಯಲ್ಲಿದ್ದಾಗ ಹಠ, ಗೊಂದಲ ಮಾಡುತ್ತಿದ್ದು ನಂತರ ಅಮ್ಮನ ಮಹತ್ವ ಅರಿವಾಗುವ ಹಾಸ್ಟೆಲ್ ಹುಡುಗನ ರೀತಿ. ಸಿಂಗಾಪೂರ್ ಗೆ ಬಂದ ಮೇಲೆ ನನ್ನ ಜತೆ ಕೆಲಸ ಮಾಡುವವರಿಗೆ ನನ್ನ ರಾಜ್ಯದ ಕುರಿತು, ಭಾಷೆಯ ಕುರಿತು ವಿವರಿಸುವಾಗ ಅದೆಂತದೋ ಪದಗಳಲ್ಲಿ ಸಿಲುಕದ ಸಂತಸ. ಅವರಂತೂ ಅಮೇರಿಕದ ವೈಭವವನ್ನೂ ಈ ರೀತಿಯ ವಿವರಣೆಯ ಸಹಿತ ಕೇಳಿರಲಿಕ್ಕಿಲ್ಲ, ಹಾಗೆ ಇರುತ್ತಿತ್ತು. ಇಲ್ಲಿಯ ಹೆಚ್ಚಿನವರಿಗೆ ಭಾರತೀಯರೆಂದರೆ ತಮಿಳರು ಅನ್ನುವ ಭಾವ ಇರುವುದರಿಂದ, ನನ್ನ ಭಾರತೀಯತೆ ಅರಿವಾದ ಕೂಡಲೇ, ’ತಮಿಳಾ?’ ಎನ್ನುವ ಪ್ರಶ್ನೆ ಕೇಳುತ್ತಾರೆ. “ಅಲ್ಲ, ನಾನು ಕನ್ನಡಿಗ’ ಎಂಬ ಉತ್ತರಕ್ಕೆ ಪೂರ ಹೆಮ್ಮೆಯ ಲೇಪ. ಅಲ್ಲೇ ಹುಟ್ಟಿ, ಅಲ್ಲೇ ಬೆಳೆದಿದ್ದರೂ ಯಾವಾಗಲೂ ಈ ವಾಕ್ಯ ಆಡಿದ ಉದಾಹರಣೆ ನೆನಪಿಲ್ಲ. ಮತ್ತಷ್ಟು ಓದು 
ಅಯೊಡಿನ್ ಹೆಸರಿನ ಮಹಾದ್ರೋಹ.!!!
-ಶ್ರೀ ಹರ್ಷ ಸಾಲೀಮಠ
ಅಯೊಡಿನ್ಯುಕ್ತ ಉಪ್ಪಿನ ಬಗ್ಗೆ ಸಾಕಷ್ಟು ಪ್ರಚಾರ ನಡೆದಿದೆ. ಇದಕ್ಕೆ ಸರ್ಕಾರದ ಕುಮ್ಮಕ್ಕೂ ಸಾಕಷ್ಟಿದೆ. ಸರ್ಕಾರದ ಈ ಕುಮ್ಮಕ್ಕಿನ ಹಿಂದೆ ಅನೇಕ ದುಷ್ಟ ಕೈಗಳ ಕೈವಾಡವಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.ಅಯೊಡಿನ್ ನಮ್ಮ ದೇಹಕ್ಕೆ ಮೈಕ್ರೊ ಪ್ರಮಾಣದಲ್ಲಿ ಬೇಕಾದ ಅಂಶ. ಅಯೋಡಿನ್ ಅಂಶ ನಮ್ಮ ದೇಹದಲ್ಲಿ ಕಡಿಮೆಯಾದಾಗ ಥೈರಾಯಿಡ್ ಗ್ರಂಥಿ ಅಯೋಡಿನ್ ಅನ್ನು ಹೆಚ್ಚಾಗಿ ಹೀರಿಕೊಳ್ಳಲು ಊದಿಕೊಳ್ಳತೊಡಗುತ್ತದೆ. ಇದೇ ಗಾಯ್ಟರ್ ರೋಗ.
ಗಾಯ್ಟರ್ ಅಥವಾ ಗಳಗಂಡ ರೋಗ ನಮ್ಮ ದೇಶದಲ್ಲಿ ಕಂಡುಬರುವುದೇ ವಿರಳ. ಅಯೋಡಿನ್ ಕೊರತೆಯನ್ನು ದೊಡ್ಡ ಗಂಡಾಂತರವೆಂಬಂತೆ ಬಿಂಬಿಸಿ ಅಯೋಡೀಕರಿಸಿದ ಉಪ್ಪನ್ನು ಬಲವಂತವಾಗಿ ಎಲ್ಲರಿಗೂ ತಿನ್ನಿಸಲಾಗುತ್ತಿದೆ. ಗಳಗಂಡ ರೋಗ ನಮ್ಮ ದೇಶದಲ್ಲಿ ಕಂಡು ಬರುವುದು ಲಡಾಕ್, ಶಿಮ್ಲಾ ರೀತಿಯ ಅತಿ ಹೆಚ್ಚಿನ ಮಣ್ಣಿನ ಸವೆತ ಇರುವ ಗುಡ್ಡಗಾಡು ಪ್ರದೇಶಗಳಲ್ಲಿ ಮಾತ್ರ. ಎಲ್ಲಾ ಸೇರಿದರೇ ಅಯೋಡಿನ್ ಕೊರತೆಯನ್ನು ಎದುರಿಸುತ್ತಿರುವುದು ಶೇ.೨ ರಷ್ಟು ಜನರು ಮಾತ್ರ. ಶೇ.೨ರ ಕೊರತೆಯನ್ನು ನೀಗಿಸುವುದಕ್ಕಾಗಿ ಉಳಿದ ಶೇ.೯೮ ರಷ್ಟು ಜನರಿಗೆ ಅಯೋಡಿನ್ ತಿನ್ನಿ ಎಂದು ಪ್ರಚಾರ ಮಾಡಲಾಗುತ್ತಿದೆ.
ಅನೇಕ ವ್ಯಕ್ತಿಗಳಲ್ಲಿ ಅಯೋಡಿನ್ ಅಲರ್ಜಿ ಇರುತ್ತದೆ. ಗಳಗಂಡ ಚಿಕಿತ್ಸೆಗಾಗಿ ಅಯೋಡಿನ್ ನೀಡಬೇಕಾದರೂ ಈ ಅಲರ್ಜಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಅಲರ್ಜಿ ಇರುವ ವ್ಯಕ್ತಿಗಳಲ್ಲಿ ಚಿಕ್ಕ ಪ್ರಮಾಣದ ಅಯೋಡಿನ್ ಸಹ ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡಬಲ್ಲುದು. ಇದಲ್ಲದೇ ದೇಹದಲ್ಲಿ ಅಯೋಡಿನ್ನ ಅನವಶ್ಯಕ ಹೆಚ್ಚಳದಿಂದಾಗಿ ಖಿನ್ನತೆ, ಉಸಿರಾಟದ ತೊಂದರೆಗಳು ನಪುಂಸಕತ್ವ, ಕೂದಲುದುರುವಿಕೆ,ಚರ್ಮದ ರೋಗಗಳು , ಗಳಗಂಡ ನಿಶ್ಯಕ್ತಿ ಇತ್ಯಾದಿ ಆರೋಗ್ಯಕ್ಕೆ ಹಾನಿಕಾರಕ ತೊಂದರೆಗಳು ಉಂಟಾಗುವ ಸಾಧ್ಯತೆಗಳಿವೆ. ಅಯೋಡಿನ್ ತಿನ್ನುವುದನ್ನು ಕಡಿಮೆ ಮಾಡುವುದರಿಂದ ಗಂಟಲಿನ ಕ್ಯಾನ್ಸರ್ ಕಡಿಮೆಯಾಗುವ ಸಾಧ್ಯತೆಯ ಬಗ್ಗೆ ಜಪಾನ್ನಲ್ಲಿ ಸಂಶೋಧನೆಗಳು ತಿಳಿಸುತ್ತವೆ. ಅಯೋಡಿನ್ ಕೊರತೆ ಇರುವ ಜರ್ಮನಿ ದೇಶದಲ್ಲಿ ಗಂಟಲು ಕ್ಯಾನ್ಸರ್ ಕೂಡ ಕಡಿಮೆಯೆ. ಅಲ್ಲದೇ ಗರ್ಭಿಣಿ ಸ್ತ್ರೀಯರಿಗೂ ಅಯೋಡಿನ್ ಅಪಾಯ ಉಂಟುಮಾಡುತ್ತದೆ. ಮತ್ತಷ್ಟು ಓದು 
ನಾಯಿ ಸನ್ಯಾಸಿಗೆ ನೀಡಿದ ಶಿಕ್ಷೆ…!
– ಗೋವಿಂದ ರಾವ್ ವಿ ಅಡಮನೆ
ಇಂದಿನ ಮಠಾಧಿಪತಿಗಳೂ ಅಸಂಖ್ಯ ‘ಜಗದ್ಗುರು’ಗಳೂ ‘ಧರ್ಮ’ ಪ್ರಚಾರಕರೂ ಮುಂದಿನ ಜನ್ಮದಲ್ಲಿ ಏನಾಗುತ್ತಾರೆ? ಈ ಪ್ರಶ್ನೆಗೆ ಉತ್ತರ ಇತ್ತೀಚೆಗೆ ನಾನು ಓದಿದ ಕಥೆಯಲ್ಲಿ ಹುದುಗಿದೆ. ಅದು ಇಂತಿದೆ:
ನಾಯಿಯೊಂದು ಶ್ರೀರಾಮಚಂದ್ರನ ಹತ್ತಿರ ಸನ್ಯಾಸಿಯೊಬ್ಬ ತನಗೆ ಕಲ್ಲು ಹೊಡೆದು ಹಿಂಸಿಸಿದ್ದಾನೆ ಎಂದು ದೂರು ಕೊಟ್ಟಿತು. ಶ್ರೀರಾಮಚಂದ್ರನ ಆಜ್ಞೆಯಂತೆ ಆ ಸನ್ಯಾಸಿಯನ್ನು ರಾಜಭಟರು ಹಿಡಿದು ನ್ಯಾಯಾಲಯದಲ್ಲಿ ಹಾಜರುಪಡಿಸಿದರು. ನಾಯಿಗೆ ಕಲ್ಲು ಹೊಡೆದದ್ದು ನಿಜವೆಂದು ಸನ್ಯಾಸಿ ಒಪ್ಪಿಕೊಂಡ. ನಾಯಿ ಅಗಲ ಕಿರಿದಾದ ಕಾಲುದಾರಿಯಲ್ಲಿ ದಾರಿಗೆ ಅಡ್ಡವಾಗಿ ಮಲಗಿತ್ತೆಂದೂ ಎಷ್ಟೇ ಗದರಿಸಿದರೂ ಎದ್ದು ತನಗೆ ದಾರಿ ಬಿಡದೇ ಇದ್ದದ್ದರಿಂದ ಕಲ್ಲುಹೊಡೆದು ಎಬ್ಬಿಸಬೇಕಾಯಿತೆಂದೂ ಆತ ಹೇಳಿದ.
ಅಹಿಂಸೆಯ ದೀಕ್ಷೆ ಪಡೆದಿರುವ ಸನ್ಯಾಸಿ ನಾಯಿಗೆ ಕಲ್ಲು ಹೊಡೆದದ್ದು ಅಕ್ಷಮ್ಯ ಅಪರಾಧವೆಂದು ತೀರ್ಪು ನೀಡಿದ ಶ್ರೀರಾಮಚಂದ್ರ ಸನ್ಯಾಸಿಗೆ ಏನು ಶಿಕ್ಷೆ ನೀಡಬೇಕು ಎಂದು ಸಭಾಸದರನ್ನು ಕೇಳಲಾಗಿ ಅವರೆಲ್ಲರೂ ಒಮ್ಮತದಿಂದ ಫಿರ್ಯಾದುದಾರ ನಾಯಿಯೇ ಶಿಕ್ಷೆ ಏನಿರಬೇಕು ಎಂಬುದನ್ನು ತಿಳಿಸಲಿ ಎಂದರು. “ಇಲ್ಲಿಂದ ಒಂದುನೂರು ಹರದಾರಿ ದೂರದಲ್ಲಿ ಸನ್ಯಾಸಿಗಳು ವಾಸವಿರುವ ಆಶ್ರಮ ಒಂದಿದೆ. ಅದರ ಮುಖ್ಯಸ್ತ ದೈವಾಧೀನನಾಗಿ ಎರಡು ವರ್ಷಗಳು ಕಳೆದರೂ ಬೇರೊಬ್ಬ ಮುಖ್ಯಸ್ಥ ನೇಮಕಗೊಂಡಿಲ್ಲ. ಈ ಸನ್ಯಾಸಿಯನ್ನು ಆ ಆಶ್ರಮದ ಮುಖ್ಯಸ್ಥನನ್ನಾಗಿ ನೇಮಿಸಿ” ಎಂದಿತು ನಾಯಿ. ಎಲ್ಲರೂ ಆಶ್ಚರ್ಯಚಕಿತರಾಗಿ ಇದೂ ಒಂದು ಶಿಕ್ಷೆಯೇ ಎಂದು ಕೇಳಲಾಗಿ ಅದು “ಎರಡು ವರ್ಷದ ಹಿಂದೆ ತೀರಿಕೊಂಡ ಮುಖ್ಯಸ್ಥ ನಾನೇ. ಮುಖ್ಯಸ್ಥನಾಗಿದ್ದಾಗ ಐಷಾರಾಮೀ ಭೋಗ ಜೀವನ ನಡೆಸಿದ್ದರಿಂದ ಈ ಜನ್ಮದಲ್ಲಿ ನಾಯಿಯಾಗಿದ್ದೇನೆ. ಈ ಸನ್ಯಾಸಿಗೂ ಇದೇ ಗತಿಯಾಗಲಿ ಎಂದೇ ಈ ಮನವಿ” ಎಂದು ಹೇಳಿತು.
ಫೀವರ್ ಗೆ ಹಿಂದಿ ಜ್ವರ – ಎಚ್ಚೆತ್ತುಕೊಳ್ಳಲು ಸಕಾಲ !
-ವಸಂತ್ ಶೆಟ್ಟಿ
ಎಂದಿನಂತೆ ಕಚೇರಿಗೆ ಹೋಗ್ತಾ ಎಫ್.ಎಮ್ ಹಾಕಿದ್ರೆ ಅವಕ್ಕಾದೆ. 104% ಬೊಂಬಾಟ್ ಕನ್ನಡ ಹಾಡುಗಳು ಅಂತೆಲ್ಲ ನಮ್ಮ ಮೆಚ್ಚುಗೆ ಗಳಿಸಿದ್ದ ಫೀವರ್ ಎಫ್.ಎಮ್ ಕನ್ನಡ ಹಾಡಿಗೆ ಸೋಡಾ ಚೀಟಿ ಕೊಟ್ಟು ಕೇವಲ ಹಿಂದಿ ಹಾಡುಗಳನ್ನು ಹಾಕೋಕೆ ಶುರು ಮಾಡಿದ್ರು. ಒಂದ್ ಸಲಿ ಹಾಕಿರೋ ಸ್ಟೇಶನ್ ಸರಿಗಿದೆಯಾ ಅಂತ ನೋಡ್ಕೊಂಡೆ. ಸರಿಯಾಗೇ ಇದೆ, ಆದರೆ ಬೊಂಬಾಟ್ ಕನ್ನಡ ವಾಹಿನಿಯಲ್ಲಿ ಹಿಂದಿ ದೇವತೆಯನ್ನು ಪ್ರತಿಷ್ಟಾಪಿಸಿಯಾಗಿತ್ತು. ಸರಿ ಯಾವುದಕ್ಕೂ ಒಂದ್ ಸಲಿ ಫೀವರ್ ಎಫ್.ಎಮ್ ಅನ್ನೇ ಸಂಪರ್ಕಿಸಿ ಯಾಕ್ರಪ್ಪ ಹೀಗೆ ಅಂತ ಕೇಳೊಣ ಅಂತ ಅವರ ಫೇಸ್ ಬುಕ್ ಪುಟದಲ್ಲಿ ಒಬ್ಬ ಕೇಳುಗನಾಗಿ ವಿಚಾರಿಸಿದ್ರೆ ಸಿಕ್ಕ ಉತ್ತರ: “We have changed the sound of the station”, “Music has no language” “Hindi is our national language” ಅನ್ನೋ ಹಸಿ ಸುಳ್ಳಿನ ಕಾಗಕ್ಕ-ಗುಬ್ಬಕ್ಕನ ಕತೆಗಳು. ಇದನ್ನು ಪ್ರತಿಭಟಿಸಿ ಗ್ರಾಹಕರಾಗಿ ನಮ್ಮ ಆಯ್ಕೆ ಕನ್ನಡ, ಅದನ್ನು ಕೊಡದ ವಾಹಿನಿಗೆ ಬೆಂಗಳೂರಿನ ಮಾರುಕಟ್ಟೆಯೇ ಬುದ್ದಿ ಕಲಿಸುತ್ತೆ ಅಂತ ಹೇಳಿದೆ. ಅದಿರಲಿ, ಫೀವರ್ ಎಫ್.ಎಮ್ ನದ್ದು ಒಂದು ಉದಾಹರಣೆಯಷ್ಟೇ. ಇವತ್ತು ನಮ್ಮ ನಾಡಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಈ ನೆಲದ ನುಡಿಯನ್ನು ಬದಿಗೊತ್ತಿ ಪ್ರತಿ ಹಂತದಲ್ಲೂ ವಲಸೆ ಬಂದ ಯಾರೋ ನಾಲ್ಕು ಜನರಿಗಾಗಿ ವ್ಯವಸ್ಥೆಯೆಲ್ಲ ಕಟ್ಟಬೇಕು, ವ್ಯವಸ್ಥಯೆಲ್ಲ ಇರಬೇಕು ಅನ್ನುವಂತೆ ವರ್ತಿಸುವ ವಲಸಿಗರಿಗೆ, ಅವರ ತಾಳಕ್ಕೆ ತಕ್ಕಂತೆ ಕುಣಿಯುವ ಈ ವ್ಯವಸ್ಥೆಗೆ ಏನೆನ್ನಬೇಕು. ಯಾಕೆ ಹಾಗ್ ಹೇಳಿದೆ ಅನ್ನೋದನ್ನ ಒಂದ್ ನಾಲ್ಕು ಉದಾಹರಣೆ ಜೊತೆ ಹೇಳ್ತಿನಿ.
- ಬೆಂಗಳೂರಿನ ಟ್ರಾಫಿಕ್ ಪೋಲಿಸರಿಗೆ (ಬಿಟಿಪಿ) ಹಿಂದಿ/ಇಂಗ್ಲಿಷ್ ಬರಲ್ಲ. ಅದರಿಂದ ಎಷ್ಟು ತೊಂದರೆಯಾಯ್ತು ಗೊತ್ತಾ ಅಂತ ಒಂದಿಷ್ಟು ಜನ ಬಿಟಿಪಿಯ ಫೇಸ್ ಬುಕ್ ತಾಣದಲ್ಲಿ ಹೋಗಿ ಗೋಳು ತೋಡಿಕೊಳ್ಳುತ್ತಾರೆ. ಯಾರಪ್ಪ ಈ ನಾಲ್ಕು ಜನರು ಅಂದ್ರೆ ಅದೇ ಅನ್ನ ಅರಸಿ ಬೆಂಗಳೂರಿಗೆ ವಲಸೆ ಬಂದ ಮಹನೀಯರು. ವಲಸೆ ಬಂದ ನಾಡಿನ ವ್ಯವಸ್ಥೆ ತನಗೆ ಅನುಕೂಲವಾಗುವಂತಿರಬೇಕು, ತನಗೆ ಚೂರೇ ಚೂರು ಕಷ್ಟವಾದರೂ ಅದನ್ನು ಸಹಿಸಲು ಆಗದು ಅನ್ನುವ ಈ ಜನರ ಮನಸ್ಥಿತಿ ಎಂತದ್ದು? ವಲಸಿಗರಿಗಾಗಿಯೇ ನಾಡಿನ ಎಲ್ಲ ವ್ಯವಸ್ಥೆಗಳನ್ನು ಜಗತ್ತಿನಲ್ಲಿ ಎಲ್ಲಿಯಾದರೂ ಕಟ್ಟಿದ್ದಾರಾ?
ಕಂದಮ್ಮನಿಗೆ ಎಲ್ಲವೂ ಅರ್ಥವಾಗುತ್ತೆ!
– ವಿಷ್ಣುಪ್ರಿಯ
ಮಕ್ಕಳು ಮೂರೇ ತಿಂಗಳು ಪ್ರಾಯವಾಗಿದ್ದಾಗಲೇ ಅಮ್ಮನ ಮಾತುಗಳನ್ನು ಅರ್ಥ ಮಾಡಿಕೊಳ್ಳುವ ಸಾಮಥ್ರ್ಯ ಹೊಂದಿರುತ್ತವಂತೆ. ಒಂದು ಜೀವ ತಾಯಗರ್ಭದಲ್ಲಿ ಮೊಳಕೆಯೊಡೆಯಬೇಕು
ಎಂದಾದರೆ ಅಲ್ಲಿ ತಂದೆಯ ರೇತಸ್ಸು (ವೀರ್ಯ) ಮತ್ತು ತಾಯಿ ಆತ್ಮಭೂಯದ (ಅಂಡಾಣು ಎನ್ನಬಹುದು) ಮಿಲನವಾಗಬೇಕು. ಗರ್ಭದಲ್ಲಿರುವ ಮಗುವಿನ ನಾಭಿಯಿಂದ ಹೊರಟಂಥ ಕರುಳಬಳ್ಳಿ ತಾಯಿಯ ಜೊತೆಗೆ ನಂಟು ಬೆಳೆಸುತ್ತದೆ. ತಾಯಿಯ ಆತ್ಮಭೂಯ ಮತ್ತು ತಂದೆಯ ರೇತಸ್ಸಿನಲ್ಲಿ ಹಲವು ತಲೆಮಾರುಗಳ ವಂಶವಾಹಿಗಳು ಹರಿಯುವುದರಿಂದ ಸಂಬಂಧ ಬಹಳ ದೂರದವರೆಗೆ ವಿಸ್ತರಿಸುತ್ತದೆ.
ಮಕ್ಕಳ ಗ್ರಹಣಶಕ್ತಿ ಎಷ್ಟಿರುತ್ತದೆ? ಯಾವಾಗಿನಿಂದ ಮಕ್ಕಳಿಗೆ ಈ ಶಕ್ತಿ ಲಭ್ಯವಾಗುತ್ತದೆ? ಎಂಬೆಲ್ಲ ವಿಚಾರಗಳ ಬಗ್ಗೆ ಹಲವು ವರ್ಷಗಳಿಂದ ಜಿಜ್ಞಾಸೆ ಇದೆ. ಮಕ್ಕಳಿಗೆ ಬುದ್ಧಿ ಬರುವಾಗ ಮೂರ್ನಾಲ್ಕು ವರ್ಷ ಆಗುತ್ತೆ. ಅಲ್ಲಿಯವರೆಗೆ ಆವರಿಗೆ ಏನೂ ಅರ್ಥ ಆಗಲ್ಲ ಅಂತ ಒಂದು ವಾದ ಹೇಳಿದರೆ, ನಮ್ಮ ಪುರಾಣಗಳು ಮಗು ಅಮ್ಮನ ಗರ್ಭದಲ್ಲಿರುವಾಗಲೇ ಎಲ್ಲವನ್ನೂ ಅರ್ಥ ಮಾಡಿಕೊಳ್ಳುತ್ತದೆ ಎಂದು ಹೇಳುತ್ತವೆ. ಹೀಗಿರುವಾಗ ಯಾವುದು ಸರಿ ಎಂಬ ಗೊಂದಲವೂ ಕಾಡುವುದು ಸಹಜ. ಪುರಾಣಗಳನ್ನು, ವೇದ, ಉಪನಿಷತ್ತುಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗದವರು, ಸಾಧ್ಯವಿದ್ದರೂ ಅವುಗಳತ್ತ ಕಣ್ಣೆತ್ತಿಯೂ ನೋಡದವರು, ವೇದ, ಉಪನಿಷತ್ತುಗಳು, ಪುರಾಣಗಳೆಂದರೆ ಕಟ್ಟುಕಥೆಗಳೆಂದು ಭಾವಿಸುವವರು ಮೊದಲಿನ ವಾದವನ್ನೇ ಒಪ್ಪಬಹುದು. ವೇದ, ಉಪನಿಷತ್ತುಗಳು ಮತ್ತು ಪುರಾಣಗಳನ್ನು ವೈಜ್ಞಾನಿಕ ದೃಷ್ಟಿಕೋನದಿಂದ ನೋಡುವವರು ಖಂಡಿತಕ್ಕೂ ಮೊದಲ ವಾದನನ್ನು ಸಾರಾಸಗಟು ತಳ್ಳಿಹಾಕುತ್ತಾರೆ.





