ವಿಷಯದ ವಿವರಗಳಿಗೆ ದಾಟಿರಿ

Archive for

2
ಆಗಸ್ಟ್

ಸಂತಾನಹೀನತೆಯ ಕಾರಣ ಶೋಧಿಸುತ್ತ….

– ವಿಷ್ಣುಪ್ರಿಯ
(ಯೋನಿಯ ಮೂಲಕ ಪ್ರವೇಶಿಸುವಂಥ ವೀರ್ಯವು ಗರ್ಭನಾಳವನ್ನು ಹಾದು, ಗರ್ಭಕೋಶವನ್ನು ಸೇರಿ ಅಲ್ಲಿರುವ ಅಂಡಾಣುವಿನೊಂದಿಗೆ ಮಿಲನವಾಗಬೇಕು. ಅಂದರೆ ಗರ್ಭವತಿಯಾಗಬೇಕೆಂದರೆ ಎರಡು ಮಿಲನಗಳಾಗಬೇಕು- ಒಂದು ಸ್ತ್ರೀ-ಪುರುಷ ಮಿಲನ, ಇನ್ನೊಂದು ಈ ಮಿಲನದ ಬಳಿಕದ ಅಂಡಾಣು-ವೀರ್ಯಾಣು ಮಿಲನ. ದೇಹದಲ್ಲಿರುವಂಥ ಪ್ರತಿರಕ್ಷಣಾ ವ್ಯವಸ್ಥೆ (ಇಮ್ಯೂನ್ ಸಿಸ್ಟಮ್) ವೀರ್ಯದ ಚಲನೆಯನ್ನು ತಡೆಯುವುದಕ್ಕೆ ಪ್ರಯತ್ನಿಸುತ್ತದೆ. ಆದರೆ ವೀರ್ಯಕ್ಕೆ ಹೊದಿಕೆಯಂತೆ (ಕೋಟ್ನಂತೆ) ಇರುವ ಪ್ರೋಟೀನ್ ಡಿಇಎಫ್ ಬಿ 126 ಈ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸೀಳಿಕೊಂಡು ಮುಂದಕ್ಕೆ ಚಲಿಸಿ ಅಂಡಾಣುವಿನೊಂದಿಗೆ ಮಿಲನವಾಗುತ್ತದೆ. ಒಂದು ವೇಳೆ ವೀಯಾಣುವಿನಲ್ಲಿ ಈ ಪ್ರೋಟೀನ್ ಹೊದಿಕೆ ಇಲ್ಲದೇ ಹೋದರೆ?  )
`ಮಕ್ಕಳಿರಲವ್ವ ಮನೆತುಂಬ’ ಎಂದರು ಹಿರಿಯರು. ಸುಮ್ಮನೇ ಹೇಳಿರುತ್ತಾರೆಯೇ? ಈ ಬಯಕೆಯ ಹಿಂದೊಂದು ವಾಸ್ತವವಿದೆ. ಮಕ್ಕಳು ಮನೆಯಲ್ಲಿದ್ದರೆ ಅದೆಷ್ಟೋ ನೋವುಗಳು ತಮ್ಮಷ್ಟಕ್ಕೇ ಶಮನಗೊಳ್ಳುತ್ತವೆ.ಮಗುವಿನ ಕಿಲಕಲ ನಗು, ಅದರ ಅಳು, ರಂಪಾಟ, ಅದರ ಚೇಷ್ಟೆಗಳು, ಆಟಗಳು… ಮಗುವಿನ ಒಂದೊಂದು ಕ್ಷಣದಲ್ಲೂ ಬೆರೆತುಕೊಂದಡರೆ ದೊಡ್ಡವರೂ ಕೂಡಾ ಮಕ್ಕಳೇ ಆಗುತ್ತಾರೆ! ಆ ಕಂದಮ್ಮಗಳೊಂದಿಗೆ ತಾವೂ ತೊದಲುನುಡಿಯಲ್ಲಿ ಮಾತನಾಡುತ್ತಾರೆ. ಮಕ್ಕಳೊಂದಿಗೆ ಕಳೆಯುವ ಆ ಕ್ಷಣಗಳನ್ನು ಪದಗಳಲ್ಲಿ ವರ್ಣಿಸುವುದು ಕಷ್ಟವೇನೋ? ಮುದ್ದಾದ ಮಕ್ಕಳನ್ನು ಕಂಡಾಗ ಭಾವುಕರಾಗದವರು ಯಾರಿದ್ದಾರೆ? ಇಂಥದ್ದೇ ಒಂದು ಮುದ್ದು ಕಂದ ನನಗೂ ಇರಬೇಕು… ಹಾಗಂತ ಹೆಂಗಸರೂ ಬಯಸುತ್ತಾರೆ, ಪುರುಷರೂ ಕೂಡಾ! ಬಯಕೆಗಳು ಎಲ್ಲಾ ಕಾಲದಲ್ಲೂ ಈಡೇರುವುದಿಲ್ಲ. ಸಂತಾನ ಪಡೆಯುವುದು ಸುಲಭದ ವಿಚಾರವೂ ಅಲ್ಲ. ಸ್ತ್ರೀ-ಪುರುಷ ಮಿಲನಗೊಂಡರೆ ಸಾಕು ಸಂತಾನವಾಗದೇ ಏನು ಎಂಬ ಪ್ರಶ್ನೆಗಳು ಸಹಜ. ಮಿಲನವೊಂದಷ್ಟೇ ಸಂತಾನದ ವಿಚಾರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುವುದಲ್ಲ.

ಮತ್ತಷ್ಟು ಓದು »