ವಿಷಯದ ವಿವರಗಳಿಗೆ ದಾಟಿರಿ

Archive for

6
ಆಗಸ್ಟ್

ಕಾಸರಗೋಡಿನ ಕನ್ನಡಿಗರ ತ್ಯಾಗ ಮತ್ತು ಬಲಿದಾನಗಳನ್ನು ಕರ್ನಾಟಕ ಮರೆತಿದೆಯೇ..!?

– ಕುಮಾರ ರೈತ

 “ಕಾಸರಗೋಡು, ಕರ್ನಾಟಕದ ಕನ್ಯಾಕುಮಾರಿ. ಉತ್ತರದಲ್ಲಿ ಬೆಳಗಾವಿ, ಬಳ್ಳಾರಿಗಳಂತೆ ದಕ್ಷಿಣ ಕನ್ನಡದಲ್ಲಿ ನಮ್ಮದು ಕರ್ನಾಟಕದ ಕನ್ಯಾಕುಮಾರಿ. ಕನ್ನಡನಾಡಿನ ಈ ತೆಂಕಣ ಬಾಗಿಲನ್ನು ತೆರೆದಿಟ್ಟು ಕನ್ನಡಿಗರು ಎಚ್ಚರತಪ್ಪಿ ನಿದ್ರೆ ಹೋದುದ್ದೇ ಆದರೆ ನಮ್ಮ ಜನರಿಗೂ, ನಮ್ಮ ನಾಡಿಗೂ ಅಮೂಲ್ಯವಾದ ಕನ್ನಡ ಸಂಸ್ಕೃತಿಗೂ ಪ್ರಮಾದ ಒದಗುವುದರಲ್ಲಿ ಸಂಶಯವಿಲ್ಲ. ವಿಶಾಲ ಕೇರಳ ಚಳವಳಿಯು ಆರಂಭವಾಗಿ ಹತ್ತು ವರ್ಷಗಳು ಸಂದುಹೋದವು. ದಕ್ಷಿಣ ಕನ್ನಡ, ಕೊಡಗು, ನೀಲಗಿರಿ ಜಿಲ್ಲೆಗಳು ಮಲಬಾರಿನೊಂದಿಗೆ ಜತೆಗೊಂಡು ಕೇರಳ ಸಂಸ್ಥಾನ ಅಥವಾ ಪಶ್ಚಿಮ ಪ್ರಾಂತ ಸಂಸ್ಥಾನವೊಂದು ನಿರ್ಮಾಣವಾಗಬೇಕೆಂದು ಈ ಚಳವಳಿಯು ಪ್ರಬಲವಾಗುತ್ತಾ ನಡೆದಿದೆ. ಈ ಚಳವಳಿಯ ಮರ್ಮವನ್ನು ತಿಳಿದುಕೊಂಡು ಕನ್ನಡಿಗರು ಅದನ್ನು ಸಕಾಲದಲ್ಲಿಯೇ ಪ್ರತಿಭಟಿಸದೇ ಹೋದರೆ ಸ್ವಲ್ಪಕಾಲದೊಳಗಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯ ಕಾಸರಗೋಡಾದರೂ ಮಲಬಾರಿನವರ ಮಡಿಲಿಗೆ ಬೀಳಬೇಕಾಗಬಹುದು”

ಭಾಷಾವಾರು ಪ್ರಾಂತ್ಯ ರಚನೆಯಾಗುವುದಕ್ಕೂ ಒಂಭತ್ತು ವರ್ಷಗಳಿಗೂ ಮೊದಲೇ ಶ್ರೀಧರ ಕಕ್ಕಿಲಾಯರು ಹೇಳಿದ್ದ ಖಚಿತ ಅಭಿಪ್ರಾಯವಿದು. ಇವರು ಕಾಸರಗೋಡಿನ ಸುಪ್ರಸಿದ್ಧ ವಕೀಲರಾಗಿದ್ದರು. ಕಾಸರಗೋಡನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಲು ಸತತ ೨೫ ವರ್ಷ ಹೋರಾಟ ಮಾಡಿದರು. ಅವರ ಜೀವಿತಾವಧಿಯವರೆಗೂ ಈ ಹೋರಾಟದಲ್ಲಿ ಸಕ್ರಿಯರಾಗಿದ್ದರು. ೧೯೪೭ರ ಡಿಸೆಂಬರ್ನಲ್ಲಿ ಕಾಸರಗೋಡಿನ ಬೋರ್ಡ್ ಹೈಸ್ಲೂಲ್ ಆವರಣದಲ್ಲಿ ೩೧ನೇ  ಕನ್ನಡ ಸಾಹಿತ್ಯ ಸಮ್ಮೇಳನ ನಡೆತು. ಈ ಸಂದರ್ಭದಲ್ಲಿ ಹೊರಬಂದ ಸ್ಮರಣ ಸಂಚಿಕೆ ‘ತೆಂಕುನಾಡು’ ಸ್ಮರಣ ಸಂಚಿಕೆಯಲ್ಲಿ ಶ್ರೀಧರ ಕಕ್ಕಿಲಾಯರ ಈ ಲೇಖನ ಪ್ರಕಟವಾಯಿತು. ಅದರ ಶೀರ್ಷಿಕೆ ‘ಕನ್ನಡ-ಮಲೆಯಾಳ ಸಮಸ್ಯೆ’

ಇದನ್ನೆಲ್ಲ ಪ್ರಸ್ತಾಪಿಸಲು ಕಾರಣವಿದೆ. ಕಾಸರಗೋಡಿಗೆ ಹೋದಾಗಲೆಲ್ಲ ನಾನು ಭೇಟಿ ಕೊಡುವ ಖಾಯಂ ಸ್ಥಳಗಳ ಸಾಲಿನಲಿಬೇಕಲ್ ಕೋಟೆ ಸೇರಿದೆ. ಇಲ್ಲಿ ಪ್ರಾಣದೇವರ ಗುಡಿಯಿದೆ. ಹೊರಭಾಗದಲ್ಲಿ ಗುಡಿ ಹೆಸರನ್ನು ಕನ್ನಡದಲ್ಲಿ ಬರೆಯಲಾಗಿದೆ. ಬೇಕಲ್ ಕೋಟೆ ನಿರ್ಮಾಣ ಮಾಡಿದ್ದು  ಕನ್ನಡಿಗ ರಾಮನಾಯಕ.  (ಟಿಪ್ಪು ಸುಲ್ತಾನ್ ಸೈನ್ಯದ  ದಂಡನಾಯಕ ( ಮೂಲತಃ ಬೇಕಲ್ ಕೋಟೆ ಕನ್ನಡ ಪ್ರದೇಶ. ಇದಕ್ಕೆ ಅನೇಕ ಕುರುಹುಗಳಿವೆ. ಕೋಟೆ ಇರುವ ಊರಿನ ಹೆಸರು ‘ಅಗಸರ ಹೊಳೆ. ಈ ಎರಡೂ ಪದಗಳು ಅಚ್ಚಗನ್ನಡ.

ಮತ್ತಷ್ಟು ಓದು »

6
ಆಗಸ್ಟ್

ಸಂಸತ್ತಿನಲ್ಲಿ ಕನ್ನಡದ ಕಂಪು ಸದಾ ಮೊಳಗಲಿ

– ಅರುಣ್ ಜಾವಗಲ್

ನೆನ್ನೆ ನಡೆದ ಸಂಸತ್ ಕಲಾಪದಲ್ಲಿ ನಮ್ಮ ರಾಜ್ಯದಿಂದ ಆಯ್ಕೆಯಾದ ಲೋಕಸಬಾ ಸದಸ್ಯರಾದ ಚಲುವರಾಯಸ್ವಾಮಿಯವರು ಕನ್ನಡದಲ್ಲಿ ಬಾಶಣ ಮಾಡಿ ಗಮನ ಸೆಳೆದಿದ್ದಾರೆ. ಬಹಳ ದಿನಗಳ ಮೇಲೆ ಸಂಸತ್ತಿನಲ್ಲಿ ಕನ್ನಡದ ಕಂಪು ಮೊಳಗಿದೆ.

೧೯೬೭ ರಲ್ಲಿ ಲೋಕಸಬೆಯ ಕಲಾಪಗಳಲ್ಲಿ ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ಜೆ ಹೆಚ್ ಪಟೇಲ್ ರವರು ಬಾಶಣ ಮಾಡಿದ್ದರು. ಮೊಟ್ಟ ಮೊದಲ ಬಾರಿಗೆ ಸಂಸತ್ತಿನಲ್ಲಿ ಕನ್ನಡದ ಡಿಂಡಿಮ ಮೊಳಗಿಸಿದ ಕೀರ್ತಿ ಪಟೇಲ್ ರವರಿಗೆ ಸಲ್ಲಬೇಕು.

ಲೋಕಸಬೆ ಕಲಾಪಗಳಿಗೆ ಹಿಂದಿ/ಇಂಗ್ಲೀಶ್ ಬರಲ್ಲ ಅಂತ ಹಲವಾರು ಜನ ಹಿಂದಿಯೇತರ ಲೋಕಸಬಾ ಸದಸ್ಯರು ಕಲಾಪಗಳಿಗೆ ಹೋಗದೆ ಅತವಾ ಹೋದರು ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳದ ಬಗ್ಗೆ ಕೇಳಿದ್ದಿವಿ. ಆದರೆ ತಮ್ಮ ಬಾಶೆಯಲ್ಲು ಬಾಶಣ ಮಾಡಲು ಪ್ರಜಾಪ್ರಬುತ್ವದಲ್ಲಿ ಅವಕಾಶವಿದ್ದರು ಹಲವಾರು ಜನ ಸದಸ್ಯರು ತಮ್ಮ ಬಾಶೆಯನ್ನ ಬಳಸದಿರುವುದು ದುರಂತವೇ! ನಿಜಕ್ಕು ಅವರು ತಮ್ಮ ಬಾಶೆಯನ್ನ ಬಳಸಿದ್ದೇ ಆದಲ್ಲಿ ವಿಶಯವನ್ನ ಅತ್ಯಂತ ನೇರ ಮತ್ತು ನಿಕರವಾಗಿ ಹೇಳಬಹುದಲ್ಲದೇ ಲೋಕಸಬಾ ಟಿವಿ ಅತವಾ ಇನ್ಯಾವುದೋ ಟಿವಿಯಲ್ಲಿ ಅವರವರ ಕ್ಷೇತ್ರದ ಜನರಿಗೂ ತಾವು ಆಯ್ಕೆ ಮಾಡಿ ಕಳಿಸಿದ ಸದಸ್ಯ ಏನ್ ಮಾತಾಡ್ತಿದ್ದಾರೆ, ಯಾವ ವಿಶಯ ಪ್ರಸ್ತಾಪಿಸುತ್ತಿದ್ದಾರೆ ಅನ್ನೊದು ತಿಳಿಯೋ ಹಾಗೆ ಆಗುತ್ತೆ.
ಮತ್ತಷ್ಟು ಓದು »