ಕಾಂಗ್ರೆಸ್ಸಿನ ದೇವರು ಮತ್ತು ಪೂಜಾರಿಗಳು..!
– ಸಚಿನ್.ಕೆ
ಯುಪಿಎ ಒಕ್ಕೂಟದ ಅಧ್ಯಕ್ಷರು ಮತ್ತು ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಆದ ಶ್ರೀಮತಿ ಸೋನಿಯ ಗಾಂಧಿ ಸರ್ವೈಕಲ್ ಕ್ಯಾನ್ಸರ್ ನಿಂದ ಬಳಲುತಿದ್ದು ಅಮೆರಿಕದ ಪ್ರಖ್ಯಾತ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಷಯ ಎಲ್ಲರಿಗೂ ಗೊತ್ತಿರುವಂತಹದ್ದು. ಅವರು ಬೇಗ ಗುಣಮುಖರಾಗಲಿ ಎಂದು ದೇಶದ ಬಹುತೇಕ ಜನರು ದೇವರಲ್ಲಿ ಪ್ರಾರ್ಥಿಸುತಿದ್ದಾರೆ. ನಾವು ಸಹ ಅವರು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇವೆ.
ಇಂದು ಮತ್ತು ಮೊನ್ನೆಯ ಕೆಲ ಮುಖ್ಯ ಘಟನೆಗಳನ್ನು ನಾನು ಇಲ್ಲಿ ಪ್ರಸ್ತಾಪಿಸಬೇಕೆಂದಿದ್ದೇನೆ.
ಬಳ್ಳಾರಿಯಲ್ಲಿ ಪ್ರತಿಪಕ್ಷದ ಮುಖಂಡರಾದ ಶ್ರೀ ಸಿದ್ದರಾಮಯ್ಯ ನವರು ಶ್ರೀ ದುರ್ಗಮ್ಮ ದೇವಸ್ಥಾನದಲ್ಲಿ ೧೦೧ ತೆಂಗಿನಕಾಯಿ ಹೊಡೆದು ಮೇಡಂ ಬೇಗ ಗುಣಮುಖರಾಗಲಿಎಂದು ಪೂಜೆ ಸಲ್ಲಿಸಿದರು





