ವಿಷಯದ ವಿವರಗಳಿಗೆ ದಾಟಿರಿ

Archive for

10
ಆಕ್ಟೋ

ಪರಮಾತ್ಮ

– ಇಂಚರ

ಈ ನಮ್ಮ ಪರಮಾತ್ಮನಿಗೆ ಹಣ ಮಾಡುವುದರಿಂದ ಆಧ್ಯಾತ್ಮದವರೆಗೂ ಎಲ್ಲವೂ ಸುಲಭ. ಆದರೆ ಎಮ್ ಎಸ್ ಸಿ ಪರೀಕ್ಷೆ ಮಾತ್ರ ಬಿಡಿಸಲಾರದಷ್ಟು ಕಗ್ಗಂಟು.  ಈತನ ತಂದೆ ಪ್ರಖ್ಯಾತ ಹೃದಯ ತಜ್ಞ. ವೈದ್ಯನಾಗಿ ಬೇಕಾದಷ್ಟು ಹಣ ಗಳಿಸಬಹುದಾದರೂ, ಆತ್ಮ ತೃಪ್ತಿಗೆ ಹಣವೇ ಮುಖ್ಯ ಅಲ್ಲವೆಂದು ಒಂದಷ್ಟು ಮಕ್ಕಳನ್ನು ಸಾಕಿಕೊಂಡು, ನೆಮ್ಮದಿಯಿಂದ ಬದುಕುತ್ತಿರುವ ಈತನಿಗೆ ಮಗನ ಹೃದಯದ ಬಗ್ಗೆ ಪರಮ ಹೆಮ್ಮೆ. ಈತ ಮಗ ಏನೂ ಮಾಡಿದರೂ ಪ್ರಶ್ನಿಸಲಾರ.  ಮಗನ ಮೇಲೆ ಅದಮ್ಯ ವಿಶ್ವಾಸ.  ಈಗಿನ ಅಪ್ಪಂದಿಗಿರುವ ಆತಂಕ, ನಿರೀಕ್ಷೆ ಈ ಅಪ್ಪನಿಗಿಲ್ಲ. ಹಾಗೆಯೇ ಅಪ್ಪ ನೀಡಿರುವ ಸ್ವಾತಂತ್ರದ ಇನಿತೂ ದುರುಪಯೋಗ ಪಡೆಯದ ಮಗ ಕಾಲೇಜಿನ ಪರೀಕ್ಷೆಯೊಂದನ್ನು ಬಿಟ್ಟು ಜೀವನದ ಎಲ್ಲಾ ಪರೀಕ್ಷೆಗಳಲ್ಲೂ ಫಸ್ಟ್ ಕ್ಲಾಸ್ ಪಾಸ್. ಮಗ ಪರೀಕ್ಷೆ  ಪಾಸಾಗಲಿಲ್ಲವೆಂಬ ಕೊರಗು ಅಥವಾ ಮಗ ತನ್ನಂತೆಯೇ ವೈದ್ಯನಾಗಬೇಕೆಂಬ ಹಂಬಲವೂ ಕೂಡ ಈ ಅಪ್ಪನಿಗಿಲ್ಲ. ಆತನಿಗಿರುವ ಕಾಳಜಿಯೊಂದೇ, ತನ್ನ ಮಗನ ಹೃದಯಕ್ಕೆ ನೋವಾಗಬಾರದು. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವೆಲ್ಲರೂ ಎದುರಿಸುತ್ತಿರುವ ಆತಂಕ, ಒತ್ತಡ, ಸೋಲು, ಕಿರಿಕಿರಿ, ನಿರಾಶೆ ಇವುಗಳೆಲ್ಲವನ್ನೂ ಬಿಟ್ಟು ನಿರಾಳವಾಗಿ ಬದುಕುವುದು ಹೇಗೆ ಎಂಬುದನ್ನು ತೋರಿಸುವ ಮಾದರಿ ಈ ಅಪ್ಪ, ಮಗ!

ಮತ್ತಷ್ಟು ಓದು »

10
ಆಕ್ಟೋ

ಅಗಲಿದ ಚೇತನಗಳಿಗೆ ನಮನ

-ಪ್ರಶಸ್ತಿ.ಪಿ ಸಾಗರ

ಎಂದಿನಂತೆ fb ಗೆ ಬರ್ತಿದ್ದಂತೆಯೇ ಕಂಡ ಮೊದಲ ಪೋಸ್ಟು.. “ಮತ್ತೂರು ಕೃಷ್ಣಮೂರ್ತಿಗಳು,ಸ್ಟೀಪ್ ಜಾಬ್ಸ್ ಆತ್ಮಕ್ಕೆ ಶಾಂತಿ ಸಿಗಲಿ..” ವಿಜಯದಶಮಿಯ ದಿನವೆಂದರೆ ಕೆಟ್ಟದ್ದರ ಒಳ್ಳೆಯದರ ವಿಜಯದ ಸಂಕೇತವೆಂಸು ಪ್ರತೀತಿ.ಆದರೆ ಅಂದೇ ಇಬ್ಬರು ಅಪ್ರತಿಮ ಸಾಧಕರ ಸಾವಿನ ಸುದ್ದಿ ಕೇಳುವಂತಾಯಿತಲ್ಲ ವಿಧಿಯೇ ಅನಿಸ್ತು.. ಸುದ್ದಿ ಸುಳ್ಳಾಗಿರಬಹುದೇ ಅನ್ನೋ ಮನದ ಮೂಲೆಯ ಆಸೆಯಿಂದ ಒಮ್ಮೇ ನೆಟ್ಟಲ್ಲಿ ಹುಡುಕಿದೆ.. ಅದರ ತುಂಬೆಲ್ಲಾ ಸ್ಟೀವ್ ಜಾಬ್ಸನದೇ ಸುದ್ದಿ.. ಮತ್ತೂರು ಕೃಷ್ಣಮೂರ್ತಿಗಳ ಸುದ್ದಿ ತಿಳಿಯಲು ಮತ್ತೂರು ಗೆಳೆಯನಿಗೆ ಸಂದೇಶ ಕಳಿಸಾಯಿತು..ಎಲ್ಲೆಲ್ಲೂ ಬರೀ ಬೇಸರದ ಪೋಸ್ಟುಗಳು.. ಯಾಹೂ, ibn, times news ಹೀಗೆ ಎಲ್ಲೆಲ್ಲೂ ಸ್ಟೀವ್ ಜಾಬ್ಸ್ ಮರಣದ ವಾರ್ತೆ, fb, google + ಹೀಗೆ ಸಾಮಾಜಿಕ ತಾಣಗಳಲ್ಲೂ ಅವರಿಗೆ ನೆನಪಿನ ಕಂಬನಿ, ಫೋಟೋಗಳು, ವೀಡಿಯೋಗಳು,ಕೊಂಡಿಗಳು, ಅವರ ppt ಗಳು, ನುಡಿಮುತ್ತುಗಳು.. ಹೀಗೆ ಏನುಂಟು.. ಏನಿಲ್ಲ.. ಆ ಎರಡೂ ಮಹಾಚೇತನಗಳಿಗೆ ನನ್ನದೂ ಒಂದು ಈ ಮೂಲಕ ಪದಾಂಜಲಿ

 

ಮತ್ತಷ್ಟು ಓದು »