ಕರ್ ನಾಟಕ – ಘಟನಾವಳಿಗಳ ವೈಭವೀಕರಣ
ಜನ ಲೋಕಪಾಲ್ ಬಿಲ್ ಗಾಗಿ ಒತ್ತಾಯಿಸಿ ನಡೆದ ಭ್ರಷ್ಟಾಚಾರ ವಿರೋಧಿ ಚಳುವಳಿಯನ್ನ ಸಮೂಹ “ಸನ್ನಿ” ಅಂತ ಕೆಲ ಜನ ಕರೆದರು. ಆದರೆ ರಾಜ್ಯದಲ್ಲಿ ಕಳೆದೊಂದು ತಿಂಗಳಿಂದ ನಡೆಯುತ್ತಿರುವ ಪ್ರಹಸನ ಗಳನ್ನು ಯಾವ ಸನ್ನಿ ಅಂತಾರೆ? ನಟ ದರ್ಶನ್ ಪ್ರಹಸನದಿಂದ ಹಿಡಿದು ಯಡಿಯೂರಪ್ಪ ಕೋರ್ಟ್ ಗೆ ಅಲೆದಾಡಲು ಶುರುವಾದ ದಿನದಿಂದ ಇಂದಿನವರೆಗೆ ಬಿಟ್ಟು ಬಿಡದೆ ಹಿಂಬಾಲಿಸುತ್ತಿರುವುದು ಯಾರು? ಯಾಕೆ ಈ ವೈಭವೀಕರಣ?ನಿನ್ನೆ ಬಿಜೆಪಿಯ ಧನಂಜಯಕುಮಾರ್ ಸಿಎನ್ ಎನ್ ಐಬಿಎನ್ ವಾಹಿನಿಯಲ್ಲಿ ನಡೆದ ಚರ್ಚೆಯ ವೇಳೆ ರಾಜ್ ದೀಪ್ ಸರ್ದೇಸಾಯಿ ಅವರಿಗೆ ನೇರವಾಗಿ ಪ್ರಶ್ನೆ ಕೇಳಿದರು. ಯಡ್ಯೂರಪ್ಪನವರನ್ನು ಕವರೇಜ್ ಮಾಡಿದ ರೀತಿಯಲ್ಲಿ ನೀವು ಸೋನಿಯಾಗಾಂಧಿ ಯವರನ್ನು ಯಾಕೆ ಕವರೇಜ್ ಮಾಡಲಿಲ್ಲ
ಸೋನಿಯಾಗಾಂಧಿ ಚಿಕಿತ್ಸೆ ಗಾಗಿ ಅಮೇರಿಕದ ಒಂದು ಆಸ್ಪತ್ರೆಗೆ ದಾಖಲಾಗಿದ್ದ ಸಂಧರ್ಭದಲ್ಲಿ ಇಂತಹ ಆಸಕ್ತಿ ಯಾರು ವಹಿಸಿರಲಿಲ್ಲ. ಅವರಿಗೆ ಯಾವ ಕಾಯಿಲೆ ಇತ್ತು, ಯಾವ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದರು ಈಗ ಹೇಗಿದ್ದಾರೆ ಅಂತ ಯಾವುದೇ ವಿಷಯಗಳಬಗ್ಗೆ ಚರ್ಚಿಸಲೇ ಇಲ್ಲ ಮತ್ತು ಜನರಿಗೆ ಅದರ ಬಗ್ಗೆ ಹೆಚ್ಚಿನ ಮಾಹಿತಿ ಕೊಡುವ ಪ್ರಯತ್ನ ಮಾಡಲೇ ಇಲ್ಲ. ದೇಶದ ಮಹಾನ್ನಾಯಕಿಯ ಬಗ್ಗೆ ಪ್ರಜೆಗಳಿಗೆ ತಿಳಿದುಕೊಳ್ಳುವ ಅಗತ್ಯವಿಲ್ಲ ಎಂದು ಸುಮ್ಮನಾಗಿದ್ದೀರ? ಮತ್ತಷ್ಟು ಓದು 




