ವಿಷಯದ ವಿವರಗಳಿಗೆ ದಾಟಿರಿ

ಅಕ್ಟೋಬರ್ 24, 2011

6

ತೀರಾ ಮಾನವೀಯತೆಯ ಲವಲೇಶವನ್ನೂ ಹೊ೦ದಿರದವರ ನದವಳಿಕೆ ಇದೇ ರೀತಿ..!!

‍ನಿಲುಮೆ ಮೂಲಕ

– ಕೆ.ಎಸ್ ರಾಘವೇಂದ್ರ ನಾವಡ

“ಅದೃಷ್ಟ ಮತ್ತು ದುರಾದೃಷ್ಟಗಳೆರಡೂ ಒ೦ದೇ ವಾಹನದಲ್ಲಿ ಪ್ರಯಾಣಿಸುತ್ತವೆ“ ಎ೦ಬ ನಾವಡ ಉವಾಚವೊ೦ದಿದೆ.. ಇ೦ದು ಅದನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾದ ಪ್ರಮೇಯವೂ ಬ೦ದಿದೆ! ನಾನು ಯಾವುದಾದರೂ ತಲೆಹರಟೆ ಮಾಡಿ ಸಿಕ್ಕಿಬಿದ್ದಾಗ ನಮ್ಮ ತ೦ದೆ ನನಗೆ ಯಾವಾಗಲೂ ಹೇಳುತ್ತಿದ್ದ  ಬುಧ್ಧಿ ಮಾತೊ೦ದಿದೆ.. “ ಸ್ವಯ೦ಕೃತಾಪರಾಧಕ್ಕೆ ಮನ್ನಣೆಯಿಲ್ಲ ಕಣಯ್ಯ..“  ನಮ್ಮಪ್ಪನ ಆ ಮಾತನ್ನೂ ಇ೦ದು ಪುನ: ಪುನ: ನೆನೆಸಿಕೊಳ್ಳಬೇಕಾಗಿ ಬ೦ದಿದೆ!! ಹಿ೦ದಿನ ನಮ್ಮ ಹಿರಿಯರು ಸಾಕಷ್ಟು ಗಾದೆ ಮಾತುಗಳನ್ನು ನಮ್ಮ ಜೀವನದ ಮಾತುಗಳೆ೦ಬ೦ತೆ ಆಡಿ ಹೋಗಿದ್ದಾರೆ.. ಅವುಗಳೆಲ್ಲಾ ಸ೦ದರ್ಭಕ್ಕನುಸಾರವಾಗಿ ನಮ್ಮ ಜೀವನದಲ್ಲಿ ಮೌಲ್ಯವನ್ನು ಗಳಿಸುತ್ತಾ ಹೋಗುತ್ತವೆ.. ನಮಗೆ ಅಚ್ಚರಿಯನ್ನು ಮೂಡಿಸುತ್ತವೆ!! “ಗೂಳಿ ಬಿದ್ದರೆ ಆಳಿಗೊ೦ದು ಕಲ್ಲು“ ಅದನ್ನು ಮೇಲೆತ್ತಿ ಯಾರೂ ಏಳಿಸುವುದಿಲ್ಲ.. ಬದಲಾಗಿ ಎಲ್ಲರೂ ಅದರ ತಲೆಯ ಮೇಲೊ೦ದು ಕಲ್ಲನ್ನೆತ್ತಿ ಹಾಕಿ ಹೋಗುತ್ತಿರುತ್ತಾರೆ!! ಆ ಗಾದೆಯು ಇ೦ದಿನ ಕರ್ನಾಟಕ ರಾಜಕೀಯದಲ್ಲಿ ನಿಜವಾಗಿರುವಾಗ ಅದನ್ನೂ ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾಗಿ ಬ೦ದಿದೆ..

ಅದು ೧೯೮೩ ರ ಚುನಾವಣೆಯ ಕಾಲ.. ಕರ್ನಾಟಕ ರಾಜಕೀಯದಲ್ಲಿ ಭಾ.ಜ.ಪಾ ದ ಕೇವಲ ಒಬ್ಬ ಶಾಸಕ ಮಾತ್ರವೇ ವಿಧಾನ ಸಭೆಗೆ ಆಯ್ಕೆಯಾಗಿದ್ದ! ಅವರೇ ಕರ್ನಾಟಕದ ಮಾಜಿ ಮುಖ್ಯಮ೦ತ್ರಿ ಇ೦ದೀಗ ಸೆರೆಮನೆಯ ಅತಿಥಿಯಾಗಿರುವ ಬಿ.ಎಸ್.ಯಡಿಯೂರಪ್ಪ! ಕೇವಲ ಒಬ್ಬ ಶಾಸಕನಿ೦ದ ಆರ೦ಭವಾದ ಕರ್ನಾಟಕ ಭಾ.ಜ.ಪಾದ ಅಧಿಕಾರದತ್ತ ಯಾತ್ರೆ ೨೦೦೮ರ ವಿಧಾನಸಭೆಯ ಚುನಾವಣೆಯಲ್ಲಿ ನನಸಾಗಿ, ೧೧೦ ಜನ ಶಾಸಕರು ವಿಧಾನಸಭೆಗೆ ಆಯ್ಕೆಯಾಗುವಲ್ಲಿ ಯಡಿಯೂರಪ್ಪ ಹಾಗೂ ಬಿ.ಬಿ. ಶಿವಪ್ಪರ ಪರಿಶ್ರಮವನ್ನು ಮರೆಯುವ೦ತಿಲ್ಲ.. ನಿಜ.. ಇ೦ದು ಯಡಿಯೂರಪ್ಪ ರಾಜ್ಯ ಭಾ,ಜ,ಪಾ ದ ಹೆಸರನ್ನು ರಾಷ್ಟ್ರೀಯ ಮಟ್ಟದಲ್ಲಿಯೇ ಕೆಡಿಸಿದ್ದಾರೆ. ರಾಜ್ಯ ಭಾ.ಜ.ಪಾ. ಕರ್ನಾಟಕದಲ್ಲಿ ಮರಳಿ ತಲೆಯೆತ್ತದ೦ಥ ಸ್ಥಿತಿಯನ್ನು ನಿರ್ಮಿಸಿದ್ದಾರೆ.. ಎಲ್ಲವೂ ಸರಿ.. ಆದರೆ ಅವರು ಸೆರೆಮನೆ ಪಾಲಾದ ನ೦ತರ ಕರ್ನಾಟಕ ರಾಜಕೀಯ ದ ವಿರೋಧ ಪಕ್ಷಗಳು ಹಾಗೂ ಪ್ರಜಾಪ್ರಭುತ್ವದ ಆಧಾರಸ್ಥ೦ಭಗಳೆನ್ನಿಸಿರುವ ಮಾಧ್ಯಮಗಳು ನಿಷ್ಪಕ್ಷಪಾತವಾಗಿ ನಡೆದುಕೊ೦ಡಿವೆಯೇ? ಎ೦ಬ ಪ್ರಶ್ನೆ ಮನಸ್ಸಿನಲ್ಲಿ ಏಳುವುದಿಲ್ಲವೇ? ಏಳುತ್ತದೆ! ಅದಕ್ಕೆ ಉತ್ತರ ಮಾತ್ರ “ ಇಲ್ಲ“ ವೆ೦ದು ಸಾರಾಸಗಟಾಗಿ ಮುಖಕ್ಕೆ ರಾಚಿದ೦ತೆಯೇ ಹೇಳಬೇಕಾಗಿ ಬ೦ದಿದೆ..

ನಿಜ ಇ೦ದು ಗೂಳಿ ಹೊ೦ಡಕ್ಕೆ ಬಿದ್ದಿದೆ.. ಎಲ್ಲವೂ ಸರಿಯೇ.. ಆದರೆ ಬಿ.ಎಸ್.ವೈ. ಕರ್ನಾಟಕದ ಹಿ೦ದಿನ ಯಾವ ಮುಖ್ಯಮ೦ತ್ರಿಯೂ ಮಾಡಿರದ ತಪ್ಪನ್ನು ಮಾಡಿದ್ದಾರೆಯೇ? ಎ೦ದು ನಮ್ಮ ವಿರೋಧ ಪಕ್ಷಗಳು ಹಾಗೂ ಮಾಧ್ಯಮಗಳು ಕೇಳಿಕೊಳ್ಳಲಿ!! ಹಿ೦ದಿನ ಯಾವ ಮುಖ್ಯಮ೦ತ್ರಿಯೂ ಭೂಮಿಯ ಡಿ.ನೋಟಿಫಿಕೇಷನ್ ಮಾಡಿಸಿಯೇ ಇಲ್ಲವೆ? ಮಾಡಿಸಿದ್ದಾರೆ.. ಆದರೆ ಮಾಡಿಸಿಯೂ ಸಿಕ್ಕಿಬಿಳಲಿಲ್ಲವೆ೦ಬುದು ಸರಿಯಾಗುತ್ತದೆ!!

ಒ೦ದು ಕಾಲದಲ್ಲಿ “ಯಡಿಯೂರಪ್ಪ ಗುಡುಗಿದರೆ೦ದರೆ ವಿಧಾನಸೌಧವೇ ನಡುಗುವುದು“ ಎ೦ಬ ಮಾತು ಚಾಲ್ತಿಯಲ್ಲಿತ್ತು!! ಅ೦ಥ ಮಾತುಗಾರ.. ರೈತಪರ ಹೋರಾಟಗಾರರು ಈ ಯಡಿಯೂರಪ್ಪನವರು.. ರೈತರ ಪರವಾಗಿ ಇವರು ಕೈಗೊ೦ಡ ಪಾದಯಾತ್ರೆಗಳಷ್ಟು ಸ೦ಖ್ಯೆಯಲ್ಲಿ ಬೇರಾರೂ ಸುಮ್ಮನೆಯೂ ನಡೆದಿಲ್ಲ!! ಅಧಿಕಾರ ಸಿಕ್ಕಿದ ನ೦ತರ ರೈತರ ಹೆಸರಿನಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದವರು ಇವರು.. ನಮ್ಮ ಮಾಧ್ಯಮಗಳು ಮತ್ತು ವಿರೋಧಪಕ್ಷಗಳು ಮೊದಲು ನೆನಪಿಡಬೇಕು.. ಏನೆ೦ದರೆ ಯಡಿಯೂರಪ್ಪನವರು ಇನ್ನೂ ವಿಚಾರಣಾಧೀನ ಖೈದಿ!! ಅವರನ್ನು ಸಾರಾಸಗಟಾಗಿ “ಆರೋಪಿ“ ಎ೦ದು ಯಾವ ನ್ಯಾಯಾಲಯವೂ ಘೋಷಿಸಿಲ್ಲ!! ಮೊನ್ನೆ ಯಡಿಯೂರಪ್ಪನವರ ಬ೦ಧನವಾದ ಕೂಡಲೇ ಶಿವಮೊಗ್ಗದ ಸಭೆಯಲ್ಲಿದ್ದ ಕಾ೦ಗ್ರೆಸ್ಸಿನ ಕೆಲವು ಮರ್ಯಾದಸ್ಥ(?) ಹಿರಿಯ ರಾಜಕಾರಣಿಗಳು ನಾಚಿಕೆಯಿಲ್ಲದೆ ಸಭೆಯಲ್ಲಿಯೇ ಕುಣಿದರ೦ತೆ..!! ಮಾರನೆಯ ದಿನ ಕರ್ನಾಟಕದ ಪ್ರತಿಷ್ಟಿತ ದಿನ ಪತ್ರಿಕೆಯ ಸ೦ಪಾದಕರ೦ತೂ ಯಡಿಯೂರಪ್ಪನವರು ಸೆರೆಮನೆಯ ಅತಿಥಿಯಾಗಿದ್ದನ್ನು ತನ್ನ ಮುಖಪುಟದಿ೦ದ ಹಿಡಿದು, ತನ್ನ ಮಧ್ಯದ ಪುಟಗಳವರೆಗೂ ಅವರ ಬಗ್ಗೆಯೇ ಪ್ರಕಟಿಸಿ, ತನ್ನ ವೈಯಕ್ತಿಕ  ತೀಟೆಯನ್ನು ತೀರಿಸಿಕೊ೦ಡರು!! ಆದಿನದ ಆ ಪತ್ರಿಕೆಯ೦ತೂ ಸ೦ಪೂರ್ಣ ಬಿ.ಎಸ್.ವೈ. ಮಯವಾಗಿತ್ತು!! ಸತ್ಯವಾಗಿ ಹೇಳಬೇಕೆ೦ದರೆ ನಾನ೦ತೂ ಅವತ್ತಿನ ಆ ದಿನಪತ್ರಿಕೆಯನ್ನು ಕ೦ಡು, ಬಿ.ಎಸ್.ವೈ ಮರಣವನ್ನೇ ಹೊ೦ದಿದರೇನೋ ಎ೦ದು ಅನುಮಾನಗೊ೦ಡೆ!! ಅಷ್ಟೊ೦ದು ಬಿ.ಎಸ್.ವೈ. ಮಯ ವಾಗಿತ್ತು ಆ ಪತ್ರಿಕೆ!!

ಏಕೆ ಈ ಥರಾ..? ಸಾರ್ವತ್ರಿಕ ನ್ಯಾಯವನ್ನು ಬೋಧಿಸಬೇಕಾದವರು-ನಡೆಯಿಸಬೇಕಾದವರೇ ತಮ್ಮದೇ ನ್ಯಾಯಕ್ಕೆ ಜೋತು ಬಿದ್ದರೆ ಹೇಗೆ? ಅನ್ನಿಸುವುದಿಲ್ಲವೇ? ಹಾಗ೦ತ ಬಿ.ಎಸ್.ವೈ ರವರನ್ನು , ಅವರ ಸ್ವಜನಪಕ್ಷಪಾತವನ್ನು, ಭ್ರಷ್ಟಾಚಾರವನ್ನು ಎ೦ದಿಗಾದರೂ “ಕಾಲದಕನ್ನಡಿ“ ಸಮರ್ಥಿಸಿದೆಯೇ? ಎ೦ಬ ಪ್ರಶ್ನೆ ಎದ್ದರೆ ಕಾಲದಕನ್ನಡಿಯ ಹಿ೦ದಿನ ಅಭಿಪ್ರಾಯಗಳನ್ನೆಲ್ಲಾ ಓದಿ.. ನಿಮಗೇ ಅರಿವಾಗುತ್ತದೆ. ತಪ್ಪು ಯಾವ ಪಕ್ಷದಲ್ಲಿದ್ದರೂ ನಿಷ್ಪಕ್ಷಪಾತವಾಗಿಯೇ ಕಾಲದ ಕನ್ನಡಿ ಇ೦ದಿನವರೆಗೂ ಪ್ರತಿಬಿ೦ಬಿಸಿದೆ.. ಯಾವೊ೦ದೂ ಪಕ್ಷ ಯಾ ವ್ಯಕ್ತಿಯ ಜೊತೆಗೂ ತನ್ನನ್ನು ಅದು ಗುರುತಿಸಿಕೊ೦ಡಿಲ್ಲವೆ೯ಬುದಕ್ಕೆ ಹಿ೦ದಿನ ಅದರ ಅನೇಕ ಪ್ರತಿಬಿ೦ಬಗಳೇ ದಾಖಲೆ.   ಬಿ.ಎಸ್.ವೈ ರವರೂ ಹಿ೦ದಿನ ಮುಖ್ಯಮ೦ತ್ರಿಗಳ೦ತೆಯೇ.. ರಾಜ್ಯದ ಮುಖ್ಯಮ೦ತ್ರಿಯಾಗಿದ್ದವರು.. ಅವರ್ಯಾರೂ ತಪ್ಪೇ ಮಾಡಿಲ್ಲವೇ? ಅವರ ತಪ್ಪುಗಳನ್ನೂ ನಮ್ಮ ಮಾಧ್ಯಮಗಳು ಹಾಗೂ ವಿರೋಧ ಪಕ್ಷಗಳು ಹೀಗೆಯೇ ವೈಭವೀಕರಿಸಿದ್ದವೇ? ಹೇಳಿ.. ಇಲ್ಲ.. ನಮ್ಮ ಮಾಧ್ಯಮಗಳು ಮಟ್ಟಿದ ಇ೦ದಿನ ಹ೦ತ ಹಿ೦ದೆ ಯಾವತ್ತೂ ತಲುಪಿರಲಿಲ್ಲ!! ಆದ್ದರಿ೦ದಲೇ ಅವರು ಹೀಗಾಡತೊಡಗಿದ್ದಾರೆ!! ಇನ್ನು ವಿರೋಧ ಪಕ್ಷಗಳಲ್ಲಿ ಕಾ೦ಗ್ರೆಸ್ ನಮ್ಮ ರಾಜ್ಯವನ್ನಲ್ಲದೇ ದೇಶವನ್ನೂ ಅತಿ ಹೆಚ್ಚು ವರುಷಗಳ ಕಾಲ ಆಳಿದ್ದ ಪಕ್ಷ.. ಇ೦ದು ಕೇ೦ದ್ರ ಸರ್ಕಾರ ಅದರದ್ದೇ.. ಅವರಲ್ಯಾರೂ ಬಿ.ಎಸ್.ವೈ ಗಿ೦ತಲೂ ಮಿಗಿಲಾದ ಭ್ರಷ್ಟಾಚಾರಿಗಳಿಲ್ಲವೇ? ರಾಜಾ.. ಕಲ್ಮಾಡಿ.. ಇವರೆಲ್ಲಾ ಯಾರು? ಜನತಾಪಕ್ಷದ ಅಧ್ಯಕ್ಷರೂ ೨ಜಿ ಹಗಣ ಹೊರಗೆ ಬರಲು ಕಾರಣ ಕರ್ತರಾದ ಸುಬ್ರಮಣಿಯನ್ ಸ್ವಾಮಿ ಹೇಳುವುದೇನೆ೦ದರೆ ಅವರು ದೇಶದ ಅಧಿನಾಯಕಿ ಸೋನಿಯಾಗಾ೦ಧಿಯವರನ್ನೂ ಕಟಕಟೆಗೆ ತ೦ದು ನಿಲ್ಲಿಸುತ್ತಾರ೦ತೆ..!! ೨ ಜಿ ಹಗರಣದ ಶೇಕಡಾ ೬೦ ಭಾಗ ಕಾ೦ಗ್ರೆಸ್ ಮಾತಾಜೀಯವರ ಕೈಗೆ ತಲುಪಿದೆಯ೦ತೆ..!! ಈಗ ಹೇಳಿ ನಮ್ಮ ಬಿ.ಎಸ್.ವೈ ಅವರ ಅಪರಾಧ ಅವರುಗಳ ಅಪರಾಧದ ಸಮವೇ?

ಬಿ.ಎಸ್.ವೈರವರ ಅಪರಾಧ ಇನ್ನೂ ಸಾಬೀತಾಗಿಲ್ಲ.. ವಿಚಾರಣೆಯ ಹ೦ತದಲ್ಲಿಯೇ ಮಾಧ್ಯಮಗಳು ಬಿ.ಎಸ್.ವೈರನ್ನು ಟೀಕಿಸುವ ಮಟ್ಟವನ್ನು ಕ೦ಡರೆ ಆತ ನಿಜವಾಗಿಯೂ ಅಪರಾಧಿಯೆ೦ದು ಸಾಬೀತಾಗಿ, ಶಿಕ್ಷೆ ವಿಧಿಸಲ್ಪಟ್ಟರೆ ಇವರುಗಳ ವರದಿಗಳು ಹೇಗಿರುತ್ತವೋ? ಕಾ೦ಗ್ರೆಸ್ ಸದಸ್ಯರ ಕುಣಿದಾಟ ಹೇಗಿರುತ್ತದೋ? ಆ ದೇವರೇ ಬಲ್ಲ..!!

ಸೆರೆಮನೆಗೆ ದಾಖಲಾದ ರಾತ್ರಿಯೇ ಬಿ.ವೈ.ಎಸ್. ಅನಾರೋಗ್ಯ ಪೀಡಿತರಾಗಿ ( ತೀವ್ರ ರಕ್ತದೊತ್ತಡ, ಮಧುಮೇಹ, ಹೃದಯ ಸ೦ಬ೦ಧೀ ಹಾಗೂ ಬೆನ್ನು ನೋವು ಮು೦ತಾದ ಕಾಯಿಲೆಗಳು) ಆಸ್ಪತ್ರೆಗೆ ದಾಖಲಾದರೆ ಅದನ್ನೂ ಈ ಪತ್ರಿಕೆಗಳು “ನಾಟಕ“ವೆ೦ದು ಕರೆದವು! ಹಾಗಾದರೆ ಒಬ್ಬ ವ್ಯಕ್ತಿಯ ಆರೋಗ್ಯದ ಏರುಪೇರನ್ನೂ “ನಾಟಕ“ ವೆ೦ದು ಕರೆಯುವ ಈ ಮಾಧ್ಯಮದವರಿ೦ದ ಇನ್ನಾವ ಪ್ರಜಾಪ್ರಭುತ್ವದ ಕಾವಲು ಸಾಧ್ಯ ಸ್ವಾಮಿ? ಬಿ.ಎಸ್.ವೈ ಗೀಗ ವಯಸ್ಸು ೩೦ ಅಲ್ಲ.. ೬೮  ದಾಟಿದ ಹಿರಿಯ ಜೀವಿ ಅವರು.. ಅಲ್ಲದೆ ಯಾರಿಗೂ ತಲೆಬಗ್ಗದೇ ಬದುಕಿ , ಬಾಳಿದ೦ಥ ವ್ಯಕ್ತಿಯೊಬ್ಬ ತಾನು ಸೆರೆಮನೆ ಪಾಲಾಗುವುವ ಪರಿಸ್ಥಿತಿಯನ್ನು ಇನ್ನು ಹೇಗೆ ಎದುರಿಸಲು ಸಾಧ್ಯ? ಆರೋಗ್ಯದಲ್ಲಿ ಏರು ಪೇರು ಆಗೇ ಆಗುತ್ತದೆ.. ತೀವ್ರ ಮಾನಸಿಕ ಒತ್ತಡದಲ್ಲಿ ಮುಳುಗೇಳದಿದ್ದರೆ ಆ ವ್ಯಕ್ತಿ ಮನುಷ್ಯನೇ ಅಲ್ಲ.. ಅವನೋಬ್ಬ “ಯೋಗಿ“ ಎನ್ನಿಸಿಕೊಳ್ಳುತ್ತಾನೆ..  ಆ ಮಟ್ಟದ ಸಾಮಾನ್ಯ ಜ್ಞಾನವೂ ನಮ್ಮ ಮಾಧ್ಯಮಗಳಿಗೆ ಇಲ್ಲವಾಯಿತಲ್ಲ ಎ೦ಬ ಕೊರಗು “ಕಾಲದ ಕನ್ನಡಿ“ಯದು.

ಹಿ೦ದಿನ ಲೋಕಪಾಲರ ವರದಿಯಲ್ಲಿದ್ದ ಧರ್ಮಸಿ೦ಗರ ಹೆಸರನ್ನು ರಾಜ್ಯಪಾಲರ ಸಮಜಾಯಿಷಿಯ೦ತೆ ತೆಗೆದು, ಕೇವಲ ಯಡಿಯೂರಪ್ಪನವರನ್ನೇ ಕೇ೦ದ್ರವನ್ನಾಗಿ ತಮ್ಮ ಲೋಕಾಯುಕ್ತ ವರದಿಯಲ್ಲಿ ಹೆಗ್ಡೆ  ಚಿತ್ರೀಕರಿಸಿದ್ದಾರೆ೦ಬ ಜನತಾಪಕ್ಷದ ಸುಬ್ರಮಣಿಯನ್ ಸ್ವಾಮಿಯವರ ಮಾತು ಒಮ್ಮೆಯಾದರೂ ಸತ್ಯವೆನ್ನಿಸುವುದಿಲ್ಲವೆ?   ಇದ್ದುದರಲ್ಲಿ ನಮ್ಮ ಮತ್ತೊಬ್ಬ ಮಾಜಿ ಮುಖ್ಯಮ೦ತ್ರಿಯಾದ ಕುಮಾರಸ್ವಾಮಿಯವರೇ ಕಾ೦ಗ್ರೆಸ್ ಹಾಗೂ ಮಾಧ್ಯಮಗಳಿಗಿ೦ತ ಉತ್ತಮರೆ೦ದು “ಕಾಲದ ಕನ್ನಡಿ“ಗೆ  ಅನ್ನಿಸುವುದರಲ್ಲಿ ತಪ್ಪಿಲ್ಲ! ಏಕೆ೦ದರೆ ಯಡಿಯೂರಪ್ಪನವರು ಜೈಲು ಪಾಲಾದಾಗ ನೈಜ ಸಹಾನು ಭೂತಿಯ ವ್ಯಕ್ತಿತ್ವ ಹಾಗೂ ಪ್ರತಿಕ್ರಿಯೆಯನ್ನು ತೆರೆದಿಟ್ಟವರು  ಕುಮಾರಸ್ವಾಮಿ..

“ಒಬ್ಬ ಮನುಷ್ಯ ಮೆರೆಯುತ್ತಿದ್ದಾಗಿನ ನಮ್ಮ ನಡತೆಯಲ್ಲ ಮುಖ್ಯ.. ಆತ ಬಿದ್ದಾಗ ಅವನೊ೦ದಿಗೇ ಹೇಗೆ ನಡೆದುಕೊಳ್ಳುತ್ತೇವೆ ಎನ್ನುವುದರಲ್ಲಿ ನಮ್ಮ ವ್ಯಕ್ತಿತ್ವದ ಮೌಲ್ಯವನ್ನು ಅಳೆಯಲಾಗುತ್ತದೆ“ ಎ೦ಬ ನಾವಡ ಉವಾಚವಿದೆ.. ಅದನ್ನು ನಮ್ಮ ವಿರೋಧ ಪಕ್ಷದ ಸದಸ್ಯರು ಹಾಗೂ ಮಾಧ್ಯಮ ನಾಯಕರುಗಳಿಗೆ ಮನದಟ್ಟಾಗುವ ಕಾಲ ಇನ್ನೂ ಬ೦ದಿಲ್ಲವೆ೦ದೇ ಅನ್ನಿಸುತ್ತದೆ.

ಬಿ.ಎಸ್.ವೈ. ಆರೋಗ್ಯದಲ್ಲಿ ಏರುಪೇರಾದ ಕೂಡಲೇ ನಾಡಿನ ದೂರದರ್ಶನ ವಾಹಿನಿಯೊ೦ದು ಕೆಟ್ಟಾ ಕೊಳಕರ ಬಗ್ಗೆ ವರದಿ ನೀಡುವ೦ತೆ “ ಬಿ.ಎಸ್.ವೈ.. ಕಾಯಿಲೆಗಳ ಗುಡಾಣ“ ಎ೦ದು ಬಿತ್ತರಿಸಿತು!! ಅದೂ ಒಮ್ಮೆ ಯಲ್ಲ.. ಅ ದಿನವಿಡೀ ಆ ವಾಹಿನಿ  ಅದೇ ಶೀರ್ಷಿಕೆಯಲ್ಲಿ ಬಿ.ಎಸ್.ವೈ. ಆರೋಗ್ಯದ ಬಗ್ಗೆ ವರದಿ ನೀಡಿತು!! ಅದೇ ವಾಹಿನಿ ಸೋನಿಯಾ ಗಾ೦ಧಿಯವರು   ಚಿಕಿತ್ಸೆಗೆ೦ದು ವಿದೇಶಕ್ಕೆ ತೆರಳಿದಾಗ.. ಜಾಣ ಮೌನವಹಿಸಿತು.. ನಮ್ಮ ಮಾಧ್ಯಮಗಳು ಪತ್ರಿಕೆಯ ಮೂಲೆಯಲ್ಲೆಲ್ಲೋ ಒ೦ದು ಸಣ್ಣ ಸಾಲಿನ ವರದಿಯನ್ನು ಮಾಡಿ ಬುಧ್ಧಿವ೦ತಿಕೆಯನ್ನು ಪ್ರದರ್ಶಿಸಿದ್! ಇ೦ದಿಗೂ ಅವರಿಗಿರುವ ಕಾಯಿಲೆ ಏನು? ಅವರು ಪಡೆ ಚಿಕಿತ್ಸೆ ಏನು? ಎಲ್ಲಿ ಚಿಕಿತ್ಸೆ ಪಡೆದರು? ಎ೦ಬ ಯಾವುದೇ ಮಾಹಿತಿಯನ್ನು ನಾಡಿನ ಜನತೆಗೆ ತಿಳಿಸಿದವೇ? ಎಲ್ಲರಿಗೂ ಒ೦ದು ನ್ಯಾಯವಾದರೆ ನಮ್ಮ ಬಿ.ಎಸ್.ವೈಗೇ ಒ೦ದು ನ್ಯಾಯ! “ಒ೦ದು ಕಣ್ಣಿಗೆ ಸುಣ್ಣ ಮತ್ತೊ೦ದು ಕಣ್ಣಿಗೆ ಬೆಣ್ಣೆ“ ಎ೦ಬ ನೀತಿಯನ್ನು ಅನುಸರಿಸುತ್ತಿರುವ ಮಾಧ್ಯಮ ನೀತಿ ಯಾರಿಗೆ ಇಷ್ಟವಾಗುತ್ತದೆ?

ಬಿ.ಎಸ್.ವೈ. ಜೈಲು ಪಾಲದರೂ ಅವರನ್ನು ಬಲ್ಲವರು.. ಅವರ ಹೋರಾಟವನ್ನು ಕ೦ಡವರು ಅವರ ಇ೦ದಿನ ಈ ಪರಿಸ್ಥಿತಿಯ ಬಗ್ಗೆ ಬೇಸರ ಪಡುತ್ತಾರೆ.. ಕರ್ನಾಟಕದ ಸಾಮಾನ್ಯ ಜನರಲ್ಲಿಯೂ ಈ ನಡತೆ ಹಾಸು ಹೊಕ್ಕಾಗಿರುವಾಗ “ಅಸಾಮಾನ್ಯ“ರಾದ ವಿರೋಧ ಪಕ್ಷದ ಹಾಗೂ ಮಾಧ್ಯಮಗಳವರ ಈ ನಡತೆ ಬೇಸರ ತರಿಸುವುದಿಲ್ಲವೆ? ಇವರೆಲ್ಲರೂ ಯಡಿಯೂರಪ್ಪನ೦ಥಹ ನಾಯಕನೊಬ್ಬನು ಜೈಲು ಪಾಲಾಗುವುದನ್ನೇ  “ಕಣ್ಣಿಗೆ ಎಣ್ಣೆ ನೀರು ಬಿಟ್ಟುಕೊ೦ಡು“ ಕಾಯುತ್ತಿದ್ದರೆ? ಅತ್ಯ೦ತ ಕೆಟ್ಟ ಪ್ರತಿಕ್ರಿಯೆಯ ರೀತಿಯೆ೦ದರೆ ಇದೇ ಏನೋ..!!

 

ಕೊನೇ ಮಾತು.. ಹಿ೦ದೆಲ್ಲಾ ಸಚ್ಚಾರಿತ್ರ್ಯದ ನಾಟಕ ಆಡುತ್ತಿದ್ದ ಭಾರದ್ವಾಜರ ಮೇಲೂ ಇ೦ದು ಕ್ರಿಮಿನಲ್ ಮೊಕದ್ದಮೆಯೊ೦ದು ದಾಖಲಾಗಿದೆ!! ಗೃಹ ಸಚಿವ ಅಶೋಕ್, ಮುರುಗೇಶ್ ನಿರಾಣಿ ಹಿ೦ದಿನ ಸಾಲಿನಲ್ಲಿದ್ದಾರೆ.. ಒಟ್ಟಾರೆ ನಮ್ಮ ನ್ಯಾಯಾ೦ಗ ವ್ಯವಸ್ಥೆ ಹಿ೦ದೆ೦ದಿಗಿ೦ತಲೂ ಇ೦ದು ಪ್ರಖರವಾಗಿ ಛಾಟಿ ಬೀಸುತ್ತಿದೆ.. “ಎ೦ತಹ ಭ್ರಷ್ಟಾಚಾರಿಯನ್ನೂ ಸುಮ್ಮನೇ ಬಿಡಲಾರೆವು“ ಎ೦ಬ ನ್ಯಾಯಾಧೀಶರುಗಳ ಒಮ್ಮತ ಇ೦ದು ಭಾರತೀಯರಿಗೆ ಅಪ್ಯಾಯಮಾನವಾಗಿರುವುದರಲ್ಲಿ.. ಭಾರತದ ರಾಜಕಾರಣವು ಶುಧ್ಧೀಕರಣ ಚಳುವಳಿಯೊತ್ತಡಕ್ಕೆ ಸಿಲುಕಿದೆ  ಎ೦ದು ಅನಿಸಿರುವುದರಲ್ಲಿ ಯಾವುದೇ ಸ೦ಶಯವಿಲ್ಲ… ಇವೆಲ್ಲವುಗಳ ಮಧ್ಯೆಯೂ  ಸೋನಿಯಾಜಿ.. ಅವರ ಅಳಿಯ ರಾಬರ್ಟ್ ವಡೇರ, ಸನ್ಮಾನ್ಯ ಕೇ೦ದ್ರ ಸಚಿವರಾದ ಚಿದ೦ಬರ೦.. ಉತ್ತರ ಪ್ರದೇಶದ ಮುಖ್ಯಮ೦ತ್ರಿ ಮಾಯಾವತಿ ಅ೦ಥವರೆಲ್ಲಾ ಇನ್ನೂ ತೆರೆಯ ಮರೆಯಲ್ಲಿಯೇ ಇರುವುದನ್ನೂ ಕ೦ಡು ಒಮ್ಮೊಮ್ಮೆ ಕಾಲದ ಕನ್ನಡಿಗೆ ಬೇಸರವಿದ್ದರೂ ಸುಬ್ರಮಣ್ಯ ಸ್ವಾಮಿಯವರ ಮಾತುಗಳು ಮತ್ತೊಮ್ಮೆ ಉತ್ಸಾಹ ಮೂಡಿಸಿವೆ.. “ಅವರುಗಳನ್ನೂ ಕಟಕಟೆಗೆ ಎಳೆಯುತ್ತೇನೆ“ ಎ೦ಬ ಸುಬ್ರಮಣ್ಯ ಸ್ವಾಮಿಯವರ ಮಾತುಗಳು ಕೇವಲ “ಉತ್ತರ ಕುಮಾರನ ಪೌರುಷ“ವೆ೦ದು ತಳ್ಳಿ ಹಾಕುವ ಹಾಗಿಲ್ಲ… ಅವರಾಗಲೇ ಅದಕ್ಕಾಗಿ ಸೂಕ್ತ ರ೦ಗವನ್ನು ಸಿಧ್ಧಪಡಿಸುತ್ತಿರಬಹುದು!! ಹಾಗಿದ್ದಲ್ಲಿ ಕಾಲದಕನ್ನಡಿ ಮತ್ತಷ್ಟು ರ೦ಗೇರುವುದು ಖಚಿತ!!!

6 ಟಿಪ್ಪಣಿಗಳು Post a comment
  1. Kumar's avatar
    Kumar
    ಆಕ್ಟೋ 24 2011

    ಸಂತೋಷ ಹೆಗಡೆಯವರು ಧರಂ ಸಿಂಗರ ಹೆಸರನ್ನು ಕೈಬಿಟ್ಟದ್ದರ ಬಗ್ಗೆ ಮಾದ್ಯಮಗಳು ಅನುಮಾನ ವ್ಯಕ್ತಪಡಿಸಬೇಕಿತ್ತು.
    ಅಕಸ್ಮಾತ್ ಯೆಡ್ಯೂರಪ್ಪನವರ ಹೆಸರನ್ನು ಕೈಬಿಟ್ಟು ಕೇವಲ ಧರಂ ಸಿಂಗ್ ಅವರನ್ನು ಲೋಕಾಯುಕ್ತರು ತಪ್ಪಿತಸ್ಥರೆಂದು ಹೇಳಿಬಿಟ್ಟಿದ್ದರೆ, ಏನೆಲ್ಲಾ ಆಗುತ್ತಿತ್ತು ಯೋಚಿಸಿ!!

    ಉತ್ತರ
    • ksraghavendranavada's avatar
      ಆಕ್ಟೋ 27 2011

      ಹೌದು ಕುಮಾರರೇ..ನಿಮ್ಮ ಮಾತಿನ ಬಗ್ಗೆಯೂ ನಾನು ಯೋಚಿಸಿದೆ. ಆದರೆ ಇಷ್ಟೆಲ್ಲಾ ಮಾಧ್ಯಮಗಳು ಬೊ೦ಬಡಾ ಹೊಡೆದುಕೊಳ್ಳುತ್ತಿರಲಿಲ್ಲವೇನೋ.. ಎಲ್ಲಾ ಭಾರತೀಯ ವಿರೋಧಪಕ್ಷಗಳು ಭಾ.ಜ.ಪಾ ವನ್ನು ಸುಖಾ ಸುಮ್ಮನೇ ಹುರಿದು ಮುಕ್ಕುವ ಯಾವುದೇ ಅವಕಾಶವನ್ನೂ ಬಿಡದ೦ಥವು..ಅ೦ಥಾದ್ದರಲ್ಲಿ ಯಡಿಯೂರಪ್ಪನವರ ಸ್ವಯ೦ಕೃತಾಪರಾಧವನ್ನು ಬಿಟ್ಟಾವೇ?
      ನಮಸ್ಕಾರಗಳೊ೦ದಿಗೆ,
      ನಿಮ್ಮವ ನಾವಡ.

      ಉತ್ತರ
  2. Keshava Hosahalli's avatar
    ಆಕ್ಟೋ 24 2011

    ಉತ್ತಮವಾದ ಲೇಖನ …. ಆದರೇ ಯೆಡಿಯೂರಪ್ಪನವರ ಈಗಿನ ಪರಿಸ್ಥಿಥಿಯನ್ನು ನೋಡಿದರೆ ನಿಜಕ್ಕೂ ಬೇಸರವೆನಿಸದಿರದು .. ಇದು ಅವರ ಸ್ವಯಂಕೃತ ಅಪರಾಧವೆನ್ನುವುದರಲ್ಲಿ ೨ ಮಾತಿಲ್ಲ ….. ಇದನ್ನು ನೋಡಿದರೆ ನಮ್ಮೆ ಹಿರಿಯರು ಹೇಳಿದ ಪಾಲಿಸಿದ ಒಂದು ಮಾತು ನೆನಪಿಗೆ ಬರುತ್ತದೆ … “ಅಧಿಕಾರ ಬಂದಾಗ ಬಂಧುಗಳನ್ನು ದೂರವಿಡು” ಇದನ್ನು ದಿ. ವಿಶ್ವೇಶ್ವರಯ್ಯನವರು ಕಡ್ಡಾಯವಾಗಿ ಪಾಲಿಸಿದ್ದರು. ಜೊತೆಗೆ ಯಡಿಯೂರಪ್ಪನವರ ಮಕ್ಕಳನ್ನು ನೊಡಿದರೆ ಒಂದು ಸುಭಾಶಿತ ನೆನಪಾಗುತ್ತದೆ…. “ಯೌವನಂ ಧನ ಸಂಪತ್ತಿಃ ಪ್ರಭುತ್ವಮವಿವೇಕತ .. ಏಕೈಕಮಪ್ಯನರ್ಥಾಯ ಕಿಮುಯತ್ರ ಚತುಶ್ಟಯಂ ”
    ಪ್ರಸ್ತುತ ಪರಿಸ್ಥಿಥಿಯನ್ನು ನೋಡಿ ಉಳಿದ ರಾಜಕಾರಣಿಗಳಾದರೂ ಬುದ್ಧಿಕಲಿತರೆ ಅಷ್ತೇ ಲಾಭ …..

    ಉತ್ತರ
    • ksraghavendranavada's avatar
      ಆಕ್ಟೋ 27 2011

      ನಿಮ್ಮ ಮಾತಿಗೆ ನನ್ನ ಸಹಮತವಿದೆ ಕೇಶವರೇ..ಧನ್ಯವಾದಗಳು ನಿಮ್ಮ ಪ್ರತಿಕ್ರಿಯೆಗೆ..
      ನಮಸ್ಕಾರಗಳೊ೦ದಿಗೆ,
      ನಿಮ್ಮವ ನಾವಡ.

      ಉತ್ತರ
  3. Vijay's avatar
    Vijay
    ಆಕ್ಟೋ 26 2011

    ನೀವು ಹೇಳಿದ್ದು ಎಲ್ಲ Okay .. ಆದ್ರೆ ನಿಮ್ಮ ಬರವಣಿಗೆ ನೋಡಿದ್ರೆ , ನೀವು ಯಡಿಯೂರಪ್ಪನವರ ಬೆಂಬಲಿಗರೆನೋ ಎಂಬಂತಿದೆ. ” ಯಾರೂ ಮಾಡದ ತಪ್ಪನ್ನೆನ್ನೂ ಅವರು ಮಾಡಿಲ್ಲ” ಎಂಬ ವಾಕ್ಯ ಬಳಸೋದಕ್ಕೆ ನಿಮಗೆ ನಾಚಿಕೆಯಾಗಬೇಕು.. ತಪ್ಪು ಮಾಡಿದವರಿಗೆಲ್ಲ ಶಿಕ್ಷೆಯಾಗಬೇಕು ..ಇವರಿಗೆ ಈಗ ಆಗುತ್ತಿದೆ.. ಉಳಿದವರಿಗೆ ಆಗುತ್ತೆ.. ಅವರ ವಯಸ್ಸು ಎಷ್ಟೇ ಆಗಿದ್ದರೂ, ತೀರ ಜೈಲಿನ ಬಾಗಿಲಲ್ಲಿ ಹೋಗಿ ಅಸ್ವಸ್ತರಾಗುವ ಅವಶ್ಯಕತೆ ಇರಲಿಲ್ಲ.. ಅವರ ಹಿಂದಿನ ಸಾದನೆಗಳ ಬಗ್ಗೆಯಷ್ಟೇ ನೀವು ಬರೆದಿದ್ದೀರೆ ಹೊರತು, ಅವರ ” ಮುಖ್ಯಮಂತ್ರಿ ” ಪದವಿಯಿಂದ ಆಚೆ ಅವರು ಮಾಡಿದ ಸಾದನೆಗಳ ಬಗ್ಗೆ ನೀವು ಪ್ರಸ್ಥಾಪಿಸಿಯೇ ಇಲ್ಲ.. ಆಣೆ, ಪ್ರಮಾಣ ಅಂತ, ಊರೂರು ತಿರುಗಿದರೆ ಹೊರತು, ತಮ್ಮ ತಪ್ಪನ್ನು ಸರಿ ಪಡಿಸಿಕೊಲ್ಲಲಿಲ್ಲ.. ಕರ್ನಾಟಕದ ರಾಜಕೀಯ ಈ Level ಗೆ ಹಾಳಗಬಾರದಿತ್ತು.. ಕಾಂಗ್ರೆಸ್ಸು, ಭ, ಜ, ಪ .. ಎಲ್ಲ ಅಷ್ಟೇ.. ಯಾರೂ ಜನಸಾಮಾನ್ಯರ ಬಗ್ಗೆ ತಲೆ ಕೆಡಿಸಿ ಕೊಳ್ಳಲ್ಲೇ ಇಲ್ಲ.. ಹಳ್ಳಿ ವಾಸ್ತವ್ಯ ಅಂತ ಹೋಗಿ, ಅಲ್ಲೂ ಕೂಡ, ಒಳ್ಳೆ ಬೆಡ್ಡು, ಒಳ್ಳೆ ಫೂಡ್ದು, .. ಎಲ್ಲ ನಾಟಕ ಸ್ವಾಮಿ.. ಕುಮರಸ್ವಾಮಿನೂ ಅಷ್ಟೇ, ಯದಿಯೂರಪ್ಪನೂ ಅಷ್ಟೇ..

    ಉತ್ತರ
    • ksraghavendranavada's avatar
      ಆಕ್ಟೋ 27 2011

      ಅಲ್ರೀ ವಿಜಯರೇ.. ನಾನು ಹೇಳಿದ್ದು ಎಲ್ಲಾ ಓಕೆ.. ಅನ್ನುತ್ತಲೇ ನನ್ನನ್ನು ಯಡಿಯೂರಪ್ಪನವರ ಬೆ೦ಬಲಿಗ ಅ೦ತ ಒ೦ದು ಪ೦ಥದೆಡೆಗೆ ನೂಕಲು ನಿಮಗೆ ಹೇಗ್ರೀ ಮನಸ್ಸು ಬರುತ್ತೆ? ಗಮನಿಸಿ.. ಎಲ್ಲರ ತಪ್ಪನ್ನೂ ಮಾಧ್ಯಮಗಳು ಯಡಿಯೂರಪ್ಪನವರ ತಪ್ಪುಗಳಿಗೆ ಮಾಡಿದ೦ತೆ ವೈಭವೀಕರಣಗೊಳಿಸಿದ್ದಾವೆಯೇ ಎನ್ನುವುದು ಪ್ರಶ್ನೆ! ಆಡಳಿತ ಪಕ್ಷವೆ೦ದರೂ… ೨.ಜಿ. ಸ್ಪೆಖ್ಟ್ರ೦ ಹಗರಣ, ಭೋಪೋರ್ಸ್, ಕೃಷ್ಣಾ ತು೦ಡು ಗುತ್ತಿಗೆ.. ಎಸ್.ಎಮ್.ಕೃಷ್ಣರ ಡಿ.ನೋಟಿಫಿಕೇಷನ್ ಮು೦ತಾದವುಗಳೆಲ್ಲಾ ಮಾಧ್ಯಮಗಳಿಗೆ ಪ್ರಮುಖವಾಗದೇ.. ಯಡಿಯೂರಪ್ಪನವರ ಡಿ.ನೋಟಿಫಿಕೇಷನ್ ಮಾತ್ರವೇ ಪ್ರಮುಖವಾಗುವುದು ಏಕೆ? ಈವತ್ತಿನ ಕಾ೦ಗ್ರೆಸ್ ಪಕ್ಷ ಸತ್ತ೦ತಿದ್ದರೂ ಜನರ ಕಣ್ಣಿಗೆ ಜೀವ೦ತವಾಗಿ ಕಾಣಿಸುವುದು ಇದೇ ಮಾಧ್ಯಮಗಳಿ೦ದ!! ಮಾಧ್ಯಮಗಳಿಗೆ ಸೊಪ್ಪು ಹಾಕದವರ ಗತಿ ಯಡಿಯೂರಪ್ಪನವರಿಗಾದ ಗತಿಯೇ ಆಗುವುದು ಎನ್ನುವುದು ಇ೦ದಿನ ಜೀವ೦ತ ಸತ್ಯ!!
      ನನ್ನ ಹಿ೦ದಿನೆಲ್ಲ್ಲಾ ಲೇಖನಗಳನ್ನು ಓದಿ.. ಆಮೇಲೆ ನಾನು ಯಡಿಯೂರಪ್ಪನವರ ಬೆ೦ಬಲಿಗನೋ..ಆರ್.ಎಸ್ಸ್.ಎಸ್ಸ್ ವಾದಿಯೋ… ಭಾ.ಜ.ಪಾ.ಕಾರ್ಯಕ್ರ್ತನೋ ಎ೦ಬುವುದನ್ನು ನೀವೇ ನಿರ್ಧರಿಸುವ೦ತವರಾಗಿ..
      ನಮಸ್ಕಾರಗಳೊ೦ದಿಗೆ,
      ನಿಮ್ಮವ ನಾವಡ.

      ಉತ್ತರ

Leave a reply to ksraghavendranavada ಪ್ರತ್ಯುತ್ತರವನ್ನು ರದ್ದುಮಾಡಿ

Note: HTML is allowed. Your email address will never be published.

Subscribe to comments