ವಿಷಯದ ವಿವರಗಳಿಗೆ ದಾಟಿರಿ

Archive for

26
ಆಕ್ಟೋ

ಯೋಚಿಸಿ ಮಿಸ್ಡ್ ಕಾಲ್ ಕೊಡುವ ಮುನ್ನ

-ಇಂದುಶ್ರೀ ಬೆಂಗಳೂರು

 “ಮನೆ ಹತ್ರ ಬಂದಾಗ ಒಂದು ಮಿಸ್ಡ್ ಕಾಲ್ ಕೊಡು. ನಾ ಬಂದು ನಿನ್ನ ಭೇಟಿಯಾಗ್ತೀನಿ”

“ಬೆಳಿಗ್ಗೆ ಬೇಗ ಹೊರಡಬೇಕು. ನಾನು ಬೇಗ ಏಳೊಲ್ಲ. ನಿಂಗೆ ಎಚ್ಚರ ಆದ್ರೆ ೫ ಗಂಟೆಗೆ ಮಿಸ್ಡ್ ಕಾಲ್ ಕೊಡ್ತೀಯಾ?”
“ನಾನು ವಿಜಯನಗರಕ್ಕೆ ಬಂದಾಗ ಮಿಸ್ಡ್ ಕಾಲ್ ಕೊಡ್ತೀನಿ.ಆಗ ನೀನು ಮನೆಯಿಂದ ಹೊರಡು.”
ಹೌದಲ್ಲ… ಇದು ನಾವು ಸಾಮಾನ್ಯವಾಗಿ ಹೇಳುವ ಮಾತು. ಸುಮ್ನೆ ಸಿಗ್ನಲ್ ಕೋಡೋದಕ್ಕೆಲ್ಲಾ ಯಾಕೆ ದುಡ್ಡು ದಂಡ ಮಾಡೋದು ಅಂತ. ೧ ಸೆಕೆಂಡಿಗೆ ೧ ಪೈಸೆ ಚಾರ್ಜ್ ಮಾಡಿದ್ರೂ ಅದನ್ನು ಕಳೆದುಕೊಳ್ಳೋಕೂ ನಾವು ತಯಾರಿಲ್ಲ. ಆದ್ರೆ ಒಂದು ಮಿಸ್ಡ್ ಕಾಲ್ ನಮ್ಮ ಮೊಬೈಲ್ ಇಂದ ನಮ್ಮ ಸ್ನೇಹಿತರ ಮೊಬೈಲ್ ಗೆ ಹೋಗೋದಕ್ಕೆ ಏನೆಲ್ಲಾ ಕೆಲಸಗಳು ನಡೆಯುತ್ತವೆ ಗೊತ್ತಾ?

ಮೊಬೈಲ್ ಉಪಕರಣ ರೇಡಿಯೋ ತರಂಗಗಳ ಮೂಲಕ ನಮ್ಮ ಮಾತನ್ನು ರವಾನಿಸುತ್ತದೆ ಎಂಬುದು ಬಹುತೇಕರಿಗೆ ಗೊತ್ತು. ಆದರೆ ನಮ್ಮ ಮೊಬೈಲ್ ಇಂದ ಕರೆ ಮಾಡುತ್ತಿರುವವರ ಮೊಬೈಲ್ ವರೆಗೆ ಸಂದೇಶಗಳು ಕೇವಲ ರೇಡಿಯೋ ತರಂಗಗಳ ಮೂಲಕ ಗಾಳಿಯಲ್ಲೇ ಹೋಗುತ್ತಾ? ಇದಕೆ ಉತ್ತರ “ಇಲ್ಲ”. ಹಾಗಿದ್ರೆ ಮೊಬೈಲ್ ಇಂದ ಮೊಬೈಲ್ ಗೆ ಸಂಪರ್ಕ ಹೇಗೆ? ನಮ್ಮಲ್ಲನೇಕರು ಬಳಸುತ್ತಿರುವ ಜಿ.ಎಸ್.ಎಂ(Global System for Mobile communication) ತಂತ್ರಜ್ಞಾನದಲ್ಲಿ ಮೊಬೈಲ್ ದೂರ‍ಸಂಪರ್ಕ ಸೇವೆ ಲಭಿಸುವುದು ಹೀಗೆ…

ಮತ್ತಷ್ಟು ಓದು »

25
ಆಕ್ಟೋ

ಒಳಗಿಳಿದ ಬೆಂಗಳೂರು ಹಾಗೂ ನೈಪಾಲ್

-ಸುಪ್ರೀತ್ ಕೆ ಎಸ್ 

“ಇದು ನನ್ನ ಊರಲ್ಲ. ನಾನು ಇಲ್ಲಿ ಸೇರಿದವನಲ್ಲ. ಇದು ಸರಿಹೋಗುತ್ತಿಲ್ಲ” ಮೆಜೆಸ್ಟಿಕ್ ನಿಂದ ಆಟೋ ಹಿಡಿದು ಕೆ.ಆರ್ ವೃತ್ತದ ಬಳಿಯಿರುವ ನನ್ನ ಕಾಲೇಜಿಗೆ ತಲುಪುವುದಕ್ಕೆ ರಸ್ತೆಗಳನ್ನು ಹಾದು ಹೋಗುವಾಗ ನನಗೆ ಅನ್ನಿಸುತ್ತಿದ್ದದ್ದು ಹೀಗೆ. ನಾನು ಹೊಸ ಊರಿನ ಚಹರೆಯ ಅಪರಿಚಿತತೆಯನ್ನು ಎದುರುಗೊಂಡಿದ್ದು ಈ ಭಾವನೆಯಲ್ಲೇ. ದೇಶದ ಮೂಲೆ ಮೂಲೆಗಳಿಂದ ದಿನವೊಂದಕ್ಕೆ ಸಾವಿರಾರು ಮಂದಿ ಬೆಂಗಳೂರು ಸೇರುತ್ತಾರೆ. ಬೆಂಗಳೂರು ಸಹ ಕೊಸರದೆ ಕೆಮ್ಮದೆ ಎಲ್ಲರನ್ನು ಒಳಕ್ಕೆ ಬಿಟ್ಟುಕೊಳ್ಳುತ್ತದೆ. ಆದರೆ ಪ್ರವಾಸಿಯಾಗಿಯಲ್ಲದೆ ಸ್ಥಾವರ ಸ್ಥಾಪಿಸಿಕೊಳ್ಳಲು ಬಂದಿದ್ದ ನನ್ನನ್ನು ಒಳಕ್ಕೆ ಬಿಟ್ಟುಕೊಳ್ಳಲು ಬೆಂಗಳೂರು ಬಿಗುಮಾನ ತೋರಿದ ಹಾಗೇ ನನಗೆ ಭಾಸವಾಗಿತ್ತು. ಅತ್ತಿಂದಿತ್ತ ಓಡಾಡುವ ಅಷ್ಟು ಜನರಲ್ಲಿ ಯಾರಿಗೂ ನಾನು ಬಂದುದದರ ಕುರಿತು ಸಂಭ್ರಮವಿಲ್ಲ. ಅಸಲಿಗೆ ಟಾರು ಕವಿದ ರಸ್ತೆಯ ಮೇಲೆ ನಾನೊಬ್ಬ ಮಾಂಸ ಮಜ್ಜೆಗಳ ಮನುಷ್ಯ ನಡೆದು ಹೋಗುತ್ತಿರುವುದೂ, ನಾನು ಇಲ್ಲಿಯವನಾಗಲಿಕ್ಕೆ ಸಾಧ್ಯವಾಗದೆ ಒದ್ದಾಡುತ್ತಿರುವುದು ಯಾರ ಕಣ್ಣಿಗೂ ಮುಖ್ಯವಾಗಿಯೇ ಇರಲಿಲ್ಲ. ಓಡಾಡುವ ಜನರ ಕಣ್ಣಿಗೆ ಯಾವುದೂ ಮುಖ್ಯವಾಗಿದ್ದಂತೆ ಕಾಣುತ್ತಿರಲಿಲ್ಲ.

ವರ್ಷಗಳು ಕಳೆದಿವೆ. ಅಂದು ಕೆ.ಆರ್.ವೃತ್ತದಿಂದ, ಮೈಸೂರು ಬ್ಯಾಂಕ್ ವೃತ್ತದ ನಡುವೆ ಇರುವ ಗೊಂದಲಕಾರಿ ಒಮ್ಮಾರ್ಗಗಳ ಚಕ್ರವ್ಯೂಹದಲ್ಲಿ ಸಿಲುಕಿಕೊಂಡು, ಮರಳುಗಾಡಿನಲ್ಲಿ ದಿಕ್ಕು ತಪ್ಪಿದವನಂತೆ ಓಡಾಡುತ್ತಿದ್ದೆ. ರಾತ್ರಿ ಎಂಟುಗಂಟೆ ದಾಟಿತ್ತು. ಕತ್ತಲು ಗಾಢವಾದಷ್ಟು, ವಾಹನಗಳ ಸಂಖ್ಯೆ ವಿರಳವಾದಷ್ಟೂ ಎದೆ ಬಡಿತ ಜೋರಾಗುತ್ತಿತ್ತು. ದಾರಿಹೋಕರೊಂದಿಗೆ ಮಾತನಾಡಲೂ ಸಂಕೋಚ. ಯಾರಲ್ಲಾದರೂ ದಾರಿ ಕೇಳಬೇಕೆ ಬೇಡವೇ ಎನ್ನುವುದಕ್ಕೆ ನೂರು ಮಾರು ದೂರದಿಂದ ನಡೆದು ಬರುವ ವ್ಯಕ್ತಿಯನ್ನು ಅವಲೋಕಿಸುವುದು. ಆತನ ಚರ್ಯೆಯಲ್ಲಿ, ವರ್ತನೆಯಲ್ಲಿ, ಬಾಡಿ ಲ್ಯಾಂಗ್ವೇಜಿನಲ್ಲಿ ತುಸುವೇ ಆಕ್ರಮಣ ಕಂಡೊಡನೆ ಅವನಿಂದ ಕಣ್ಣು ಕೀಲಿಸಿ ಇನ್ನೊಬ್ಬನಿಗಾಗಿ ಕಾಯುವುದು. ಯಾರೋ ತೋರಿದ ದಿಕ್ಕಿನಲ್ಲಿ ನಿಂತು ಎಂದೂ ಬರದಿರುವ ಬಿ.ಎಂ.ಟಿ.ಸಿ ಬಸ್ಸಿಗಾಗಿ ಕಾಯುವುದು. ಕಾಲು ನಡಿಗೆಯ ದೂರದಲ್ಲಿದ್ದ ಮೆಜೆಸ್ಟಿಕ್ ಗೆ ದಾರಿ ಯಾವುದೆಂದು ಕೇಳುತ್ತ ಅಲೆಯುವುದು. ಬೆಂಗಳೂರೆಂಬ ಮರಳುಗಾಡಿನ ಓಯಸಿಸ್ ಆಗಿ ಕಂಡಿತ್ತು ಅಂದು ಮೆಜೆಸ್ಟಿಕ್. ಕಣ್ಣೆದುರು ಸರ್ರೆಂದು ಸಾಗುವ ಅಷ್ಟು ಬಸ್ಸುಗಳಲ್ಲಿ ಒಂದೂ ಮೆಜೆಸ್ಟಿಕ್ ಹೋಗುವುದಿಲ್ಲ ಎನ್ನುವುದನ್ನು ನಂಬುವುದಕ್ಕೇ ಸಾಧ್ಯವಾಗಿರಲಿಲ್ಲ. ಬೆಂಗಳೂರಿನ ಪಾಲಿಗೆ ರಕ್ತವನ್ನು ಪಂಪ್ ಮಾಡುವ ಹೃದಯ ಮೆಜೆಸ್ಟಿಕ್, ಅಲ್ಲಿಗೆ ಬಸ್ಸುಗಳು ಹೋಗುತ್ತಿಲ್ಲ ಎಂದರೆ ಏನರ್ಥ? ಮತ್ತಷ್ಟು ಓದು »

24
ಆಕ್ಟೋ

ಅವತ್ತು ಎದೆ ನೋವೂ ಬಂದಿರಲಿಲ್ಲ, ಶರಣರೂ ಬರಲಿಲ್ಲ..!

-ಕಾಲಂ ೯

ನೂರು ವರ್ಷ ದಾಟಿದ ಸಿದ್ಧಗಂಗಾ ಸ್ವಾಮೀಜಿ ಜೈಲು-ಆಸ್ಪತ್ರೆ ಹುಡುಕಿಕೊಂಡು ಯಡಿಯೂರಪ್ಪನವರನ್ನು ನೋಡಲು ಹೋಗಿದ್ದಾರಲ್ಲ? ಏನಿದರ ಹಿಂದಿನ ಹಕೀಕತ್ತು? ಧರ್ಮಾಚರಣೆಗೂ ಪುರುಸೊತ್ತು ಇಲ್ಲದಷ್ಟು ಸಾಮ್ರಾಜ್ಯ ಕಟ್ಟಿಕೊಂಡು ಸ್ವಾಮೀಜಿಯೊ ಅಥವಾ JSS ಕಂಪೆನಿಯ CEO ನೋ ಎಂಬಂತಿರುವ ಜಗದ್ಗುರುಗಳು ಧಾವಿಸಿ ಬಂದರಲ್ಲ? ಅಂತಹದೇನು ಆಗಿತ್ತಲ್ಲಿ? ರಂಭಾಪುರಿಗಳು ಸೇರಿದಂತೆ ಅನೇಕ ಸಣ್ಣ-ಪುಟ್ಟ ವೀರಶೈವ ಸ್ವಾಮೀಜಿಗಳು ಯಡಿಯೂರಪ್ಪನವರನ್ನು ಸಂತೈಸಲು ಸಾಲುಗಟ್ಟಿದ್ದು ಮಾಧ್ಯಮಕ್ಕೆ ಆಶ್ಚರ್ಯವೆನಿಸಿರಲಿಲ್ಲ. ಆದರೆ ಈ ಹಿರಿತಲೆಗಳು ಹಾಗೇ ದೌಡಾಯಿಸಿದ್ದರ ಹಿಂದೇನು ನಡೆದಿದೆ? ಇದು ಮಾಧ್ಯಮದ ಒಳಗೂ-ಹೊರಗೂ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸೋಮವಾರದ ತಮ್ಮ ಅಂಕಣದಲ್ಲಿ ಅಮೀನ್‌ಮಟ್ಟು ತುಂಬಾ ಆಪ್ತವಾಗಿಯೇ ಯಡಿಯೂರಪ್ಪನವರ ಪ್ಲಸ್ಸು-ಮೈನಸ್ಸುಗಳನ್ನು ಹೊರಹಾಕಿದ್ದನ್ನು ಓದಿದ ಅನೇಕರು ’ಈ ಮಠಾಧಿಪತಿಗಳನ್ನೇಕೆ ಬಿಟ್ಟಿರಿ’ ಎಂದು ಪ್ರತಿಕ್ರಿಯಿಸಿದ್ದಾರೆ. ಸರ್ವ ವೀರಶೈವ ಮಠಗಳಿಗೂ ಒಬ್ಬನೇ ಆಡಳಿತಾಧಿಕಾರಿ ಎಂಬಂತಿರುವ ಸಚಿವ ಸೋಮಣ್ಣ ಬೆನ್ನುಹತ್ತಿ ಇವರನ್ನೆಲ್ಲ ಹೊರಡಿಸಿಕೊಂಡು ಬರುತ್ತಿದ್ದಾರೆಯೇ? ಸರ್ಕಾರದಿಂದ ದೇಣಿಗೆಯಾಗಿ ಪಡೆದ ೩-೫ ಕೋಟ ರೂಗಳ ಹಂಗು ಹಿಂಗೆಲ್ಲ ಮಾಡುವಂತೆ ಮಾಡಿತೆ?

ಒಟ್ಟು ರಾಜ್ಯದ ನಾಯಕತ್ವದ ಎಲ್ಲ ಲಕ್ಷಣಗಳು ಕರಗಿ ಶುದ್ಧ ವೀರಶೈವ ಮುಖಂಡನಂತೆ ಗೋಚರಿಸುತ್ತಿರುವ ಯಡಿಯೂರಪ್ಪನವರ ಜೈಲು-ಆಸ್ಪತ್ರೆಗಳ ಹರಾಕಿರಿ ನಗೆಪಾಟಲಾಗಿ ಹೋಗಿರುವಾಗ ಈ ’ಗೌರವಾನ್ವಿತ’ರೇಕೆ ಹರಸಲು ಹೊರಟರು? ಮತ್ತಷ್ಟು ಓದು »

24
ಆಕ್ಟೋ

ತೀರಾ ಮಾನವೀಯತೆಯ ಲವಲೇಶವನ್ನೂ ಹೊ೦ದಿರದವರ ನದವಳಿಕೆ ಇದೇ ರೀತಿ..!!

– ಕೆ.ಎಸ್ ರಾಘವೇಂದ್ರ ನಾವಡ

“ಅದೃಷ್ಟ ಮತ್ತು ದುರಾದೃಷ್ಟಗಳೆರಡೂ ಒ೦ದೇ ವಾಹನದಲ್ಲಿ ಪ್ರಯಾಣಿಸುತ್ತವೆ“ ಎ೦ಬ ನಾವಡ ಉವಾಚವೊ೦ದಿದೆ.. ಇ೦ದು ಅದನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾದ ಪ್ರಮೇಯವೂ ಬ೦ದಿದೆ! ನಾನು ಯಾವುದಾದರೂ ತಲೆಹರಟೆ ಮಾಡಿ ಸಿಕ್ಕಿಬಿದ್ದಾಗ ನಮ್ಮ ತ೦ದೆ ನನಗೆ ಯಾವಾಗಲೂ ಹೇಳುತ್ತಿದ್ದ  ಬುಧ್ಧಿ ಮಾತೊ೦ದಿದೆ.. “ ಸ್ವಯ೦ಕೃತಾಪರಾಧಕ್ಕೆ ಮನ್ನಣೆಯಿಲ್ಲ ಕಣಯ್ಯ..“  ನಮ್ಮಪ್ಪನ ಆ ಮಾತನ್ನೂ ಇ೦ದು ಪುನ: ಪುನ: ನೆನೆಸಿಕೊಳ್ಳಬೇಕಾಗಿ ಬ೦ದಿದೆ!! ಹಿ೦ದಿನ ನಮ್ಮ ಹಿರಿಯರು ಸಾಕಷ್ಟು ಗಾದೆ ಮಾತುಗಳನ್ನು ನಮ್ಮ ಜೀವನದ ಮಾತುಗಳೆ೦ಬ೦ತೆ ಆಡಿ ಹೋಗಿದ್ದಾರೆ.. ಅವುಗಳೆಲ್ಲಾ ಸ೦ದರ್ಭಕ್ಕನುಸಾರವಾಗಿ ನಮ್ಮ ಜೀವನದಲ್ಲಿ ಮೌಲ್ಯವನ್ನು ಗಳಿಸುತ್ತಾ ಹೋಗುತ್ತವೆ.. ನಮಗೆ ಅಚ್ಚರಿಯನ್ನು ಮೂಡಿಸುತ್ತವೆ!! “ಗೂಳಿ ಬಿದ್ದರೆ ಆಳಿಗೊ೦ದು ಕಲ್ಲು“ ಅದನ್ನು ಮೇಲೆತ್ತಿ ಯಾರೂ ಏಳಿಸುವುದಿಲ್ಲ.. ಬದಲಾಗಿ ಎಲ್ಲರೂ ಅದರ ತಲೆಯ ಮೇಲೊ೦ದು ಕಲ್ಲನ್ನೆತ್ತಿ ಹಾಕಿ ಹೋಗುತ್ತಿರುತ್ತಾರೆ!! ಆ ಗಾದೆಯು ಇ೦ದಿನ ಕರ್ನಾಟಕ ರಾಜಕೀಯದಲ್ಲಿ ನಿಜವಾಗಿರುವಾಗ ಅದನ್ನೂ ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾಗಿ ಬ೦ದಿದೆ..

ಅದು ೧೯೮೩ ರ ಚುನಾವಣೆಯ ಕಾಲ.. ಕರ್ನಾಟಕ ರಾಜಕೀಯದಲ್ಲಿ ಭಾ.ಜ.ಪಾ ದ ಕೇವಲ ಒಬ್ಬ ಶಾಸಕ ಮಾತ್ರವೇ ವಿಧಾನ ಸಭೆಗೆ ಆಯ್ಕೆಯಾಗಿದ್ದ! ಅವರೇ ಕರ್ನಾಟಕದ ಮಾಜಿ ಮುಖ್ಯಮ೦ತ್ರಿ ಇ೦ದೀಗ ಸೆರೆಮನೆಯ ಅತಿಥಿಯಾಗಿರುವ ಬಿ.ಎಸ್.ಯಡಿಯೂರಪ್ಪ! ಕೇವಲ ಒಬ್ಬ ಶಾಸಕನಿ೦ದ ಆರ೦ಭವಾದ ಕರ್ನಾಟಕ ಭಾ.ಜ.ಪಾದ ಅಧಿಕಾರದತ್ತ ಯಾತ್ರೆ ೨೦೦೮ರ ವಿಧಾನಸಭೆಯ ಚುನಾವಣೆಯಲ್ಲಿ ನನಸಾಗಿ, ೧೧೦ ಜನ ಶಾಸಕರು ವಿಧಾನಸಭೆಗೆ ಆಯ್ಕೆಯಾಗುವಲ್ಲಿ ಯಡಿಯೂರಪ್ಪ ಹಾಗೂ ಬಿ.ಬಿ. ಶಿವಪ್ಪರ ಪರಿಶ್ರಮವನ್ನು ಮರೆಯುವ೦ತಿಲ್ಲ.. ನಿಜ.. ಇ೦ದು ಯಡಿಯೂರಪ್ಪ ರಾಜ್ಯ ಭಾ,ಜ,ಪಾ ದ ಹೆಸರನ್ನು ರಾಷ್ಟ್ರೀಯ ಮಟ್ಟದಲ್ಲಿಯೇ ಕೆಡಿಸಿದ್ದಾರೆ. ರಾಜ್ಯ ಭಾ.ಜ.ಪಾ. ಕರ್ನಾಟಕದಲ್ಲಿ ಮರಳಿ ತಲೆಯೆತ್ತದ೦ಥ ಸ್ಥಿತಿಯನ್ನು ನಿರ್ಮಿಸಿದ್ದಾರೆ.. ಎಲ್ಲವೂ ಸರಿ.. ಆದರೆ ಅವರು ಸೆರೆಮನೆ ಪಾಲಾದ ನ೦ತರ ಕರ್ನಾಟಕ ರಾಜಕೀಯ ದ ವಿರೋಧ ಪಕ್ಷಗಳು ಹಾಗೂ ಪ್ರಜಾಪ್ರಭುತ್ವದ ಆಧಾರಸ್ಥ೦ಭಗಳೆನ್ನಿಸಿರುವ ಮಾಧ್ಯಮಗಳು ನಿಷ್ಪಕ್ಷಪಾತವಾಗಿ ನಡೆದುಕೊ೦ಡಿವೆಯೇ? ಎ೦ಬ ಪ್ರಶ್ನೆ ಮನಸ್ಸಿನಲ್ಲಿ ಏಳುವುದಿಲ್ಲವೇ? ಏಳುತ್ತದೆ! ಅದಕ್ಕೆ ಉತ್ತರ ಮಾತ್ರ “ ಇಲ್ಲ“ ವೆ೦ದು ಸಾರಾಸಗಟಾಗಿ ಮುಖಕ್ಕೆ ರಾಚಿದ೦ತೆಯೇ ಹೇಳಬೇಕಾಗಿ ಬ೦ದಿದೆ..

ಮತ್ತಷ್ಟು ಓದು »

23
ಆಕ್ಟೋ

ಮಸುಕಾದ way2sms ನೊಂದಿಗೆ ನೆನಪಾಗೋ ಕಳೆದ ಕೊಂಡಿಗಳು

– ಪ್ರಶಸ್ತಿ.ಪಿ

“ಹರ್ ಏಕ್ ಪ್ರೆಂಡ್ ಜರೂರಿ ಹೋತಾ ಹೈ” ಅಂತ ಏರ್ಟೆಲ್ ಕಂಪ್ನಿ ಹಾಡು ಹಾಡ್ತಾ ಉದಾಸನಾಗಿ ಕೂತಿದ್ದ ಗುಂಡ. ಏನಾಯ್ತೋ ಗುಂಡ ಯಾರು ಕೈಕೊಟ್ರೋ ಅಂತ ಅಲ್ಲಿಗೆ ಬಂದ ಟಾಂಗ ತಿಪ್ಪ ಅಲಿಯಾಸ್ ತಿಪ್ಪೇಶಿ. ಎಲ್ಲಾ ಹಾಳಾಗಿ ಹೋಯ್ತು Do Not Disturb Directory(DND) ಅಂತ ಬಂದು ಹಾಳಾಗಿ ಹೋಯ್ತು ನನ್ನ ಕಥೆ ಅಂತ ಗೋಳಾಡಿದ. ಹೇ. ಮೊಬೈಲು ಕಂಪೆನಿ ಅವ್ರು, ಟೆಲಿ ಮಾಕ್ರೆಟಿಂಗ್ ಅವ್ರು ಕರೆ ಮಾಡಿ ತಲೆ ತಿನ್ನೋದನ್ನ ತಪ್ಸೋಕೆ ಅಂತಲ್ವಾ ಅದ್ನ ಮಾಡಿದ್ದು ಮಿ.ರೌಂಡ್ ಅಂತ ಬಂದ್ಲು ಇಳಾ ದೇವಿ ಅಲಿಯಾಸ್ ಇಳಾ. ಹೌದು ಮಾರ್ರೆ ನೀವು ಐದು ಲಕ್ಷ ಗೆದ್ದಿದ್ದೀರಿ.. ತಗೋಳೋಕೆ ಇದಕ್ಕೆ ಕರೆ ಮಾಡಿ.. ಗೋಲ್ಡ್ ಲೋನ್ ಬೇಕಾ ಅಂತೆಲ್ಲ ಸಂದೇಶ ಕಳ್ಸೂದ ಮಾರ್ರೇ.. ಮೊನ್ನೆ ನಮ್ಮಜ್ಜಯ್ಯನ ಮೊಬೈಲಿಗೆ ನಿಮ್ಮ ಜೀವನ ಸಂಗಾತಿಯನ್ನು ಹುಡುಕಬೇಕಾ ಅಂತ ಸಂದೇಶ ಕಳ್ಸಿದ್ರು ಮಾರ್ರೆ.. ಇದು ಬಂದಿದ್ದು ಒಳ್ಳೇದಾಯ್ತು.. ಅಂತದ್ರಲ್ಲಿ ಅದಕ್ಕೆ ಶಾಪ ಹಾಕೂದ ಗುಂಡೂ ಅಂದ ಮಂಗಳೂರು ಮಂಜ ಅಲಿಯಾಸ್ ಮಂಜುನಾಥ. ಹೌದು ಕಣ್ರೋ.. ಹೂಂ ಹೌದು. .ನಾನೂ ಅದಕ್ಕೆ ನನ್ನ ಹೆಸ್ರು ಸೇರ್ಸಬೇಕೂಂತ ಇದೀನಿ ಅಂದ್ಳು ಉಮಾ.. ಆ ಕೆಲ್ಸ ಮಾತ್ರ ಮಾಡ್ಬೇಡ ಮಹಾತಾಯಿ .. ಆಮೇಲೆ ನಾನು ನಿಮ್ಗೆಲ್ಲಾ way2sms ಇಂದ ಸಂದೇಶ ಕಳ್ಸೋಕು ಆಗಲ್ಲ.. ಈಗಿನ ತರ ಅಂದ ಗುಂಡ.. ಓ ಇಲ್ಲೇ ಎಲ್ಲೋ ಗುಂಡನ ದುಃಖಕ್ಕೆ ಮೂಲ ಇದೆ ಅಂತ ಅವ್ರೆಲ್ರಿಗೂ ಡೌಟು ಶುರು ಆಯ್ತು..  ಮತ್ತಷ್ಟು ಓದು »

22
ಆಕ್ಟೋ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 7 – ಗುರುವಿಗಾಗಿ ನಾಟ್ಯಶಾಲೆ

 ಯಕ್ಷಗಾನ ರಂಗದಲ್ಲಿ ಎಲ್ಲೂ ಸಲ್ಲುವ ಯಾವ ವೇಷಕ್ಕೂ ಸೈ ಎನಿಸಿಕೊಳ್ಳುತ್ತಿದ್ದ  ಒಬ್ಬ ಪ್ರಬುದ್ಧ ಹಾಗೂ ಮೇರು ಕಲಾವಿದರಾಗಿದ್ದ  ದಿವಂಗತ ಕುರಿಯ ವಿಠಲ ಶಾಸ್ತ್ರಿಯವರು  ಜನಿಸಿದ್ದು ಕಳೆದ ಶತಮಾನದ 1912ರ ಸೆಪ್ಟೆಂಬರ್ 08ರಂದು. ತಮ್ಮ ವಯಸ್ಸಿನ ನೂರನೇ ಸಂವತ್ಸರದ ಈ ಸಂದರ್ಭದಲ್ಲಿ ಖ್ಯಾತ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪ. ಗೋ.)ರವರರು ನಿರೂಪಣೆ ಗೈದಿರುವ ಕುರಿಯ  ವಿಠಲ ಶಾಸ್ತ್ರಿಯವರ ಆತ್ಮ ಕಥನ “ಬಣ್ಣದ ಬದುಕು”  ಯಕ್ಷಗಾನ ಅಭಿಮಾನಿಗಳಿಗಾಗಿ ನಿಲುಮೆ ದಲ್ಲಿ ಪ್ರಕಟವಾಗುತ್ತಿದೆ.
 
***
ರಂಗ ಪ್ರವೇಶದ ಪ್ರಥಮ ವರ್ಷದ ಸಂಪೂರ್ಣ ಕಥೆಯನ್ನು ದಿನ ದಿನಗಳ ಅನುಭವದ ವಿವರಗಳೊಂದಿಗೆ ಹೇಳುತ್ತಾ ಹೋಗಬೇಕೆನ್ನುವುದು ನನ್ನ ಉದ್ದೇಶವಲ್ಲ. ಆದರೆ ಮೊದಲಿನ ಎರಡು ದಿನಗಳ ಅನುಭವವನ್ನು ಅನಿವಾರ್ಯವಾಗಿ ಹೇಳಬೇಕಾಗುತ್ತದೆ. ಎರಡನೇ ಆಟ ಕಟೀಲಿನ ಬಳಿಯ ಶಿಬರೂರಿನಲ್ಲಿ ಆಗಿತ್ತು.ಅಂದಿನದು ‘ಪಟ್ಟಾಭಿಷೇಕ’ (ಪಾದುಕಾ ಪಟ್ಟಾಭಿಷೇಕದ ಕಥೆ.) ಅನುಭವದಲ್ಲಿ ನನಗೆ ಅಣ್ಣನಾದ ಅಳಿಕೆ ರಾಮಯ ರೈಗಳು ತಾನು ಭರತನ ಪಾತ್ರವಹಿಸಿ, ನನಗೆ ರಾಮನ ಪಾತ್ರವನ್ನೇ ತೆಗೆಸಿಕೊಟ್ಟಿದ್ದರು.ರಾಮಯ ರೈಗಳು ನಾಟ್ಯಪ್ರವೀಣ. ಮಾತುಗಾರಿಕೆಯಲ್ಲೂ ಮುಂದು. ವ್ಯಾಸಂಗ ಮಾಡುತ್ತಲೇ ಇರುವುದು ಅವರ ಅಭ್ಯಾಸ.ನಾಟ್ಯ ಬಲ್ಲ ಅವರೆಡೆಯಲ್ಲಿ ನಾನೆಲ್ಲಿ? ಎಂಬುದೇ ನನ್ನ ಕೊರಗು. ಆದರೆ, ಅವರೇ ನನಗೆದುರಾಗಿ ರಂಗದಲ್ಲಿ ಬಂದಾಗ ಆ ಕೊರಗು ಅದಾವ ಮಾಯದಿಂದಲೋ ಕಾಣದಾಯಿತು. ಚಿತ್ರಕೂಟದ ರಾಮ ಭರತರ ಸಮಾಗಮ ಅತ್ಯುದ್ಭುತವೆನಿಸಿತು. ನನಗೆ ಬಂದ ಆ ಸನ್ನಿವೇಶದ ಸಹಜ ಸ್ಫೂರ್ತಿ ಅದಕ್ಕೆ ಎಷ್ಟರ ಮಟ್ಟಿಗೆ ಕಾರಣವೋ, ಅಷ್ಟೇ ಪರಿಮಾಣದಲ್ಲಿ ರಾಮಯ ರೈಗಳ ಪಾತ್ರ ಸ್ಫೂರ್ತಿಯೂ ಕಾರಣ.

ಮರುದಿನ ಶ್ರೀ ಶೆಟ್ಟರು ವೇತನದ ವಿಷಯ ಪ್ರಸ್ತಾಪ ಮಾಡಿದರು.

ಮತ್ತಷ್ಟು ಓದು »

22
ಆಕ್ಟೋ

ಉಸಿರಾಟದಿಂದ ವಿದ್ಯುತ್

-ಪ್ರಶಸ್ತಿ.ಪಿ

ಉಫ್, ಉಫ್ ಅಂತ ಗುಂಡ ಊದುತಾ ಇದ್ದ.. ಏನೋ ಬರ್ತಡೇ ಬತ್ತಿ ಊದಕ್ಕೆ ಅಂತ ಈ ಮಕ್ಳಾಟದ ಕೊಳವೇಲಿ ಪ್ರಾಕ್ಟೀಸ್ ಮಾಡ್ತಿದೀಯ ಅಂತ ಅಲ್ಲಿಗೆ ಬಂದ ಟಾಂಗ್ ತಿಪ್ಪ ಅಲಿಯಾಸ್ ತಿಪ್ಪೇಶಿ. ಹೇ, ಊರಲ್ಲಿ ಅಮ್ಮ ಒಲೆಗೆ ಕೊಳವೇಲೆ ಊದೋದು ನೆನಪಾಯ್ತಾ ಮಾರ್ರೆ.. ಎಷ್ಟು ಪ್ರೀತಿ ಅಮ್ಮನ ಮೇಲೆ ಅಂತ ಬಂದ ಮಂಗಳೂರು ಮಂಜ ಅಲಿಯಾಸ್ ಮಂಜುನಾಥ. ಇಳಾ ಬಂದು ನೋಡ್ತಾಳೆ, ಗುಂಡನ ಬಾಯಲ್ಲಿ ಒಂದು ಪ್ಲಾಸ್ಟಿಕ್ ಕೊಳವೆ, ಸ್ಟ್ರಾ ಅರ್ಧಕ್ಕೆ ಕತ್ತರಿಸಿದಂಗೆ, ಅದರ ತುದಿಗೆ ಸಣ್ಣ ಪ್ಲಾಸ್ಟಿಕ್ ಬುಟ್ಟಿ. ಅದರ ಮೇಲೆ ಅಲ್ಲಲ್ಲ ಗಾಳೀಲಿ ಪ್ಲಾಸ್ಟಿಕ್ ಚೆಂಡು..ವಾ! ಬರ್ನೋಲಿ ನಿಯಮ ಅಂತ ಕೂಗಿದ್ಲು.. ಹಾಂ.. ಎಲ್ಲಿ ಗರ್ನಲ್?..ಅಂತ ತಿಪ್ಪ ಒಂದ್ರೌಂಡು ಕೂತಲ್ಲಿಂದ ಹಾರಿದ.. ಎಲ್ಲ ನಕ್ರು..ಓಯ್ ಗರ್ನಲ್ಲಲ್ಲ ಮಾರ್ರೆ.. ಅವ್ಳು ಹೇಳಿದ್ದು ಗಾಳೀಲಿ ತೇಲಾಡೋ ಬಗೆಗಿನ ಬರ್ನೋಲಿ ನಿಯಮದ ಬಗ್ಗೆ ಅಂದ ಮಂಜ..

ಹೌದು.. ಉಸಿರಾಟದಿಂದ ವಿದ್ಯುತ್ತು ತಯಾರು ಮಾಡ್ಬೋದಂತೆ. ಅದ್ನ ಓದಿದ ಮ್ಯಾಲಿಂದ ನಂಗೆ ಇದ್ರ ಮ್ಯಾಲೆ ಸ್ಯಾನೆ ಪಿರುತಿ ಹುಟ್ಟೈತೆ ಅಂದ ಗುಂಡ.. ತನ್ನ ಪ್ಲಾಷ್ ಬ್ಯಾಕ್ ಆಟಿಕೆ ತೋರಿಸುತ್ತಾ..ಹೌದೆನ್ಲಾ? ಕೆಲವರ ಬಾಯಿಂದ ವಿಚಿತ್ರ ವಾಸ್ನೆ ಬರ್ತಾ ಇರ್ತೈತೆ. ಹತ್ರಕ್ಕೆ ಹೋದವ್ರು ದೂರ ಓಡೋಗಂಗೆ.. ನಾನೂ ಕಂಡಿವ್ನಿ ಅಂದ ತಿಪ್ಪ.. ಮಂಜಂಗೆ ಮೀನು ಸಂತೆ ದಿನ ಬೆಳಿಗ್ಗೆ ಬಸ್ಸಿಗೆ ಹೋಗಿದ್ದು ನೆನ್ಪಾತು. ಇಳಾಗೆ ಪಕ್ಕದ್ಮನೆ ಆಂಟಿಯ ಬೆಳ್ಳುಳ್ಳಿ ಎಫೆಕ್ಟು ನೆನ್ಪಾತು. ಆದ್ರೆ ಅದ್ರಿಂದ ಕರೆಂಟು ತಯಾರು ಮಾಡದು ಹೆಂಗೆ ಅಂತ ಮಾತ್ರ ಅವ್ರಿಗೆ ಹೊಳಿಲೇ ಇಲ್ಲ. ಕೊನೆಗೆ ಗುಂಡಂಗೇ ಕೇಳಿದ್ರು ಅದು ಹೆಂಗೆ ಅಂತ. ಇದು ನೋಡ್ರಾ ಅಮೇರಿಕದ ವಿನಕಂನ್ಸಿನ್ ವಿಶ್ವವಿದ್ಯಾಲಯದವ್ರು ಕಂಡು ಹಿಡ್ದಿದ್ದು ಅಂತ ತನ್ನತ್ರ ಇದ್ದ ಚಿತ್ರ ತೆಗ್ದು ತೋರ್ಸಿದ. ಮತ್ತಷ್ಟು ಓದು »

22
ಆಕ್ಟೋ

(ಪರಮ್)ಆತ್ಮ ವಿಮರ್ಶೆ

– ಅಭಿನಂದನ್ ಎಸ್ ಡಿ

ಆ non-stop ಡೈಲಾಗ್ಸು, ಆ ಹಣೆ ಕೆರ್ಕೊಂಡು ನಗ್ತಾ ಮಾತೋಡೋ ಸ್ಟೈಲು(ಹೀರೋದು), ಸ್ಮೈಲು(ಹೀರೋದು), ಆ ಅನಂತ್ ನಾಗು, ಆ ಒಂದೇ ಟ್ಯೂನಿನ ಎರಡು ಹಾಡು(infact ಹಾಡಿನ ಬಿಟ್ಸು), ಹಳ್ಳೀನಲ್ಲೂ ಚಡ್ಡಿಯಲ್ಲಿ ಓಡಾಡೋ ಹೆಣ್ಮಕ್ಳು..ಎಲ್ಲಾ mix ಆಗಿ…………………………

ಕರೆಕ್ಟು!!ಮುಂಗಾರು ಮಳೆ ಹ್ಯಾಂಗೋವರ್ರು. ಅದ್ರಿಂದ ಹೊರಗೆ ನಾವೂ ಬಂದಿಲ್ಲ. ಒಂದೊಂದು ವಿಷಯದಲ್ಲಿ ಭಟ್ರೂ ಅದ್ರಿಂದ ಹೊರಗೆ ಬಂದಂಗಿಲ್ಲ.
ಹ್ಯಾಂಗೋವರ್ರಿಂದ ಹೊರಗೆ ಬಂದಿರುವ ವಿಷಯಗಳು ಯಾವ್ದಪ್ಪ ಅಂದ್ರೆ..ಹೀರೋ ಗಡ್ಡ ಶೇವ್ ಮಾಡ್ಕೊಂಡು ನೀಟಾಗಿ ಇರೋದು ( ಇಡೀ ಚಿತ್ರದಲ್ಲಿರದ ಭಟ್ಟ್ರ ಗಡ್ಡ-ಪ್ರೀತಿ ಒಂದೇ ಸೀನಲ್ಲಿ full scaleನಲ್ಲಿ ವ್ಯಕ್ತವಾಗಿದೆ), ಧಾರಳವಾಗಿ ಹೀರೋ ಕಣ್ಣಿಂದ ಸುರೀತಿದ್ದ ನೀರಿಗೆ ಇಲ್ಲಿ ಕಟ್ಟೆ ಕಟ್ಟಿರೋದು, ಹೀರೋನ imageಗೋಸ್ಕರ ಭಟ್ಟರು ಅವರ ಸ್ಟೈಲನ್ನ ಸ್ವಲ್ಪ compromise ಮಾಡ್ಕೊಂಡಿರೋದು, “ರೀ”ಕಾರಕ್ಕೆ ಬ್ರೇಕ್ ಕೊಟ್ಟಿರೋದು.

ಟೈಟಲ್ ಕಾರ್ಡಿಂದಾನೇ ಮಾತಿನ ಮಳೆ. ಪುನೀತ್ ಕಣ್ಣಾಡಿಸೋ ರೀತಿ, dialogue ಡೆಲಿವರಿ, ಮಾತಿನ ವೇಗ, ಧಾಟಿ ಎಲ್ಲದರಲ್ಲೂ ಭಟ್ಟ-ತನವಿದೆ. ಹಾಗಾಗಿ ಅವರು ಭಟ್ಟರ ಬೇರೆ ಚಿತ್ರದ ನಾಯಕರಂತೆ ನಟಿಸಿದ್ದಂತೆ ಕಂಡರೆ ಅದನ್ನ ಅನ್ಯಥಾ ಭಾವಿಸಬಾರ್ದು. ಮತ್ತಷ್ಟು ಓದು »

21
ಆಕ್ಟೋ

ಕರ್ ನಾಟಕ – ಘಟನಾವಳಿಗಳ ವೈಭವೀಕರಣ

-ಸಚಿನ್.ಕೆ
ಜನ ಲೋಕಪಾಲ್ ಬಿಲ್ ಗಾಗಿ ಒತ್ತಾಯಿಸಿ ನಡೆದ ಭ್ರಷ್ಟಾಚಾರ ವಿರೋಧಿ ಚಳುವಳಿಯನ್ನ ಸಮೂಹ “ಸನ್ನಿ”  ಅಂತ ಕೆಲ ಜನ ಕರೆದರು. ಆದರೆ ರಾಜ್ಯದಲ್ಲಿ ಕಳೆದೊಂದು ತಿಂಗಳಿಂದ ನಡೆಯುತ್ತಿರುವ ಪ್ರಹಸನ ಗಳನ್ನು ಯಾವ ಸನ್ನಿ ಅಂತಾರೆ? ನಟ ದರ್ಶನ್ ಪ್ರಹಸನದಿಂದ ಹಿಡಿದು ಯಡಿಯೂರಪ್ಪ ಕೋರ್ಟ್ ಗೆ ಅಲೆದಾಡಲು ಶುರುವಾದ ದಿನದಿಂದ ಇಂದಿನವರೆಗೆ ಬಿಟ್ಟು ಬಿಡದೆ ಹಿಂಬಾಲಿಸುತ್ತಿರುವುದು ಯಾರು? ಯಾಕೆ ಈ ವೈಭವೀಕರಣ?

ನಿನ್ನೆ ಬಿಜೆಪಿಯ ಧನಂಜಯಕುಮಾರ್ ಸಿಎನ್ ಎನ್ ಐಬಿಎನ್ ವಾಹಿನಿಯಲ್ಲಿ ನಡೆದ ಚರ್ಚೆಯ ವೇಳೆ ರಾಜ್ ದೀಪ್ ಸರ್ದೇಸಾಯಿ ಅವರಿಗೆ ನೇರವಾಗಿ ಪ್ರಶ್ನೆ ಕೇಳಿದರು. ಯಡ್ಯೂರಪ್ಪನವರನ್ನು ಕವರೇಜ್ ಮಾಡಿದ ರೀತಿಯಲ್ಲಿ ನೀವು ಸೋನಿಯಾಗಾಂಧಿ ಯವರನ್ನು ಯಾಕೆ ಕವರೇಜ್ ಮಾಡಲಿಲ್ಲ

ಸೋನಿಯಾಗಾಂಧಿ ಚಿಕಿತ್ಸೆ ಗಾಗಿ ಅಮೇರಿಕದ ಒಂದು ಆಸ್ಪತ್ರೆಗೆ ದಾಖಲಾಗಿದ್ದ ಸಂಧರ್ಭದಲ್ಲಿ  ಇಂತಹ ಆಸಕ್ತಿ ಯಾರು ವಹಿಸಿರಲಿಲ್ಲ. ಅವರಿಗೆ ಯಾವ ಕಾಯಿಲೆ ಇತ್ತು, ಯಾವ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದರು ಈಗ ಹೇಗಿದ್ದಾರೆ ಅಂತ ಯಾವುದೇ ವಿಷಯಗಳಬಗ್ಗೆ ಚರ್ಚಿಸಲೇ ಇಲ್ಲ ಮತ್ತು ಜನರಿಗೆ ಅದರ ಬಗ್ಗೆ ಹೆಚ್ಚಿನ ಮಾಹಿತಿ ಕೊಡುವ ಪ್ರಯತ್ನ ಮಾಡಲೇ ಇಲ್ಲ.  ದೇಶದ ಮಹಾನ್ನಾಯಕಿಯ ಬಗ್ಗೆ ಪ್ರಜೆಗಳಿಗೆ ತಿಳಿದುಕೊಳ್ಳುವ ಅಗತ್ಯವಿಲ್ಲ ಎಂದು ಸುಮ್ಮನಾಗಿದ್ದೀರ? ಮತ್ತಷ್ಟು ಓದು »

20
ಆಕ್ಟೋ

ಸಂತಸ…ಸಂಕಟ…ಸಂತಾಪ ಆಗುತ್ತೆ ಪರಮಾತ್ಮ….!

– ಕುಮಾರ ರೈತ

ಯೋಗರಾಜ ಭಟ್ಟರೆ ನಿಮ್ಮಗೊಂದು ಬಹಿರಂಗ ಪತ್ರ……..‘ಪರಮಾತ್ಮ’ ಚಿತ್ರದ ಬಗ್ಗೆ ನನ್ನ ಅನೇಕ ಸ್ನೇಹಿತರು ನನ್ನೊಂದಿಗೆ ಮಾತನಾಡುತ್ತಿದ್ದರು. ಈ ಪ್ರತಿಯೊಬ್ಬರು ಹೇಳುತ್ತಿದ್ದ ಮಾತು ‘ ಚಿತ್ರ, ನಿರೀಕ್ಷೆಯನ್ನು ಹುಸಿಯಾಗಿಸಿದೆ’ ಇದು ನನ್ನ ಅಭಿಪ್ರಾಯ ಕೂಡ. ಸಿನಿಮಾ ತೆರೆಕಂಡ 12 ದಿನಗಳ ಬಳಿಕ ಈ ಪತ್ರ ಬರೆಯಲು ನನ್ನೊಳಗಿನ ಒತ್ತಡವೇ ಕಾರಣ. ಮಣಿ, ಮುಂಗಾರು ಮಳೆ ಮತ್ತು ಪಂಚರಂಗಿ ಯಿಂದ ಸಹಜವಾಗಿಯೆ ನಿಮ್ಮ ಚಿತ್ರಗಳೆಂದರೆ ನಮಗೆ ಹೆಚ್ಚು ನಿರೀಕ್ಷೆ-ಕುತೂಹಲ. ಪ್ರತಿಭಾನ್ವಿತ ನಟ ಪುನೀತ್ ಅವರು ನಟಿಸುವ ಚಿತ್ರವನ್ನು ನೀವು ನಿರ್ದೇಶಿಸುತ್ತೀರಿ ಎನ್ನುವುದು ಇವೆಲ್ಲವನ್ನೂ ಹೆಚ್ಚು ಮಾಡಿತ್ತು. ಬಹು ಕಲಾತ್ಮಕವಾಗಬಹುದಾಗಿದ್ದ ಚಿತ್ರವೊಂದು ನಿರೀಕ್ಷೆಯ ಮಟ್ಟ ಮುಟ್ಟದಿರಲು ನೀವೇ ಸಂಪೂರ್ಣ ಕಾರಣಕರ್ತರು. ಇದು ಹೇಗೆ….ಎನ್ನುತ್ತೀರಾ….ಮುಂದೆ ಓದಿ…ಭಟ್ಟರೆ…
ರೂಪಕ-ಪ್ರತಿಮೆಗಳನ್ನು ದುಡಿಸಿಕೊಳ್ಳಲು ನೀವು ಸಾಕಷ್ಟು ಪ್ರಯತ್ನಪಟ್ಟಿದ್ದೀರಿ ಎನ್ನುವುದು ಚಿತ್ರದುದ್ದಕ್ಕೂ ಕಾಣುತ್ತದೆ. ಇದರ ಮೊದಲ ನಿದರ್ಶನ. ನಾಯಕ ಪರಮಾತ್ಮ ಹಿಮಾಲಯ ಪರ್ವತವನ್ನೇರುವುದು. ಈ ಮೂಲಕ ಆತ ಹಿಮಾಲಯದೆತ್ತರದ ವ್ಯಕ್ತಿತ್ವವುಳ್ಳವನು ಎಂದು ಹೇಳಿದಿರಿ. ಕುಂಗ್ ಪು ಸಮರ ಕಲೆಯೂ ಹೌದು ಮತ್ತು ದೇಹ ಮನಸಿನ ನಡುವೆ ಅದ್ಬುತ ಹೊಂದಾಣಿಕೆ ಏರ್ಪಡಿಸುವ; ತನ್ಮೂಲಕ ಏಕಾಗ್ರತೆ ನೀಡುವ ಕಲೆಯೂ ಹೌದು. ಇದರಲ್ಲಿ ಪರಿಣಿತಿ ಪಡೆದ ಕಥಾನಾಯಕ ಈ ಎಲ್ಲವನ್ನು ಸಿದ್ದಿಸಿಕೊಂಡಿದ್ದಾನೆ ಎಂದು ಪರೋಕ್ಷವಾಗಿ ತಿಳಿಸಿದಿರಿ. ಇವೆಲ್ಲದರ ಜೊತೆಗೆ ಆತ ಮಾರುಕಟ್ಟೆ ಪರಿಣಿತ ಎನ್ನುವುದನ್ನು ಹೇಳಿದಿರಿ. ಇಷ್ಟೆಲ್ಲ ಹೇಳಿದ ನೀವು ಆತ ಎಂ.ಎಸ್ ಸ್ಸಿಯಲ್ಲಿ ಆರು ವರ್ಷ ಢುಂಕಿ ಹೊಡೆದಿದ್ದು ಯಾಕೆ ಎನ್ನುವುದನ್ನು ಅರ್ಥ ಮಾಡಿಸುವುದಿಲ್ಲ. ಈ ಸಂದರ್ಭದ ಹಾಡು ಕೂಡ ಈ ನಿಟ್ಟಿನಲ್ಲಿ ವಿಫಲವಾಗಿದೆ. ದುಶ್ಚಟಗಳಿಲ್ಲದ, ಸಂಪೂರ್ಣ ಸಂಯಮದಿಂದ ವರ್ತಿಸುವ, ಯಾರನ್ನೂ ಕಿಚಾಯಿಸಿ-ಗೋಳು ಹುಯ್ದುಕೊಳ್ಳದ ನಾಯಕ ಏಕಾಗಿ ಸತತ ಫೇಲಾಗುತ್ತಾನೆ ಎಂದು ಬಿಂಬಿಸಲು ನೀವು ವಿಫಲರಾದಿರಿ. ಪರೀಕ್ಷೆಯಲ್ಲಿ ಫೇಲಾಗುವುದಕ್ಕೂ ಜೀವನದಲ್ಲಿ ಯಶಸ್ವಿಯಾಗುವುದಕ್ಕೂ ಸಂಬಂಧವಿಲ್ಲ ಎಂದು ಹೇಳಲು ನೀವು ಪ್ರಯತ್ನಿಸಿದ್ದೀರಿ ನಿಜ. ಆದರೆ ‘ಪರಮಾತ್ಮ’ನ ವಿಷಯದಲ್ಲಿ ಈ ಎಣಿಕೆ ಹೊಂದಾಣಿಕೆಯಾಗುವುದಿಲ್ಲ.