ಹೋಳಿ ಹಬ್ಬದಂದು ನಮ್ಮ ಗೋಳಿನ ಕಥೆ
– ವಿಜಯ್ ಹೆರಗು
ದೇವರಾಜ ಅರಸು ರಸ್ತೆ ಯಲ್ಲಿ ನಾವಿಬ್ರು ನಡ್ಕೊಂಡು ಬರ್ತಾ ಇದ್ವಿ. ಆಗ ಇಬ್ರು ಫಾರಿನ್ನರ್ಸು (ಅಚ್ಚಕನ್ನಡದಲ್ಲಿ ಪರದೇಶಿಗಳು) ನಮ್ಮ ಬಣ್ಣದ ವೇಷ ನೋಡಿ ನಮ್ ಜೊತೆ ಫೋಟೋ ತೆಗೆಸ್ಕೊಂಡರು. ನಾವು ಅವ್ರ ಹತ್ರ ಸ್ವಲ್ಪ ಟಸ್ ಪುಸ್ ಅಂತ ಇಂಗ್ಲೀಷ್ ಮಾತಾಡಿ ಮುಂದಕ್ಕೆ ಹೊರಟ್ವಿ ಅಲ್ಲಿಂದ ಸ್ವಲ್ಪ ಮುಂದೆ ಬಂದ್ರೆ ಪ್ರಜಾವಾಣಿ ಆಫೀಸು. ಅಡ್ಡರಸ್ತೆಯಲ್ಲಿ ನಡ್ಕೊಂಡು ಹೋಗಿ ಮಹಾರಾಣಿ ಜ್ಯೂನಿಯರ್ ಕಾಲೇಜ್ ಮುಂದೆ ಬಂದ್ವಿ. ನಾನು ಆಂಬ್ರೋಸ್ ಹತ್ರ ಏನೋ ಹೇಳ್ತಾ ನಡ್ಕೊಂಡು ಹೋಗ್ತಾ ಇದ್ದೆ. ಇವನು ಹಿಂದೇನೆ ನಿಂತುಬಿಟ್ಟಿದ್ದಾನೆ. ತಿರುಗಿನೋಡಿದ್ರೆ ಮಹಾರಾಣಿ ಕಾಲೇಜ್ ಗೇಟ್ ಮುಂದೆ ನಿಂತ್ಕೊಂಡು ಯಾವ್ದೋ ಹುಡುಗಿಗೆ hoy ಹೇಳೋ ರೀತೀಲಿ ಕೈ ತೋರಿಸ್ತಾ ಇದ್ದ. ನಾನು ಹಿಂದಕ್ಕೆ ಬಂದು ಅವನ್ನ ಎಳ್ಕೊಂಡು ‘ಬಾರೋ ಮಗಾ ಇವತ್ತು ಎಲ್ಲಾ ಕಡೆ ಸ್ಕ್ವಾಡ್ ಇರ್ತಾರೆ’ ಅಂತ ಹೇಳ್ದೆ. ಅಷ್ಟರಲ್ಲಿ ಮಫ್ತಿಯಲ್ಲಿದ್ದ ಪೋಲಿಸ್ ಒಬ್ಬ ಬಂದು ನಮ್ಮಿಬ್ಬರನ್ನೂ ಹಿಡ್ಕೊಂಡ. ನಂಗೆ ಕೈಕಾಲು shake ಆಗೋಕೆ ಶುರುವಾಯ್ತು. ‘ಸರ್ ನಂಗೇನೂ ಗೊತ್ತಿಲ್ಲ ಸರ್ ಇವ್ನು ಅದ್ಯಾರೋ ಹುಡ್ಗಿಗೆ ಕೈ ತೋರಿಸ್ತಿದ್ದ, ನಾನು ಬೇಡ ಬಾ ಅಂತ ಕರದೆ ಅಷ್ಟೇ, ಬೇಕಾದ್ರೆ ಚೆಕ್ ಮಾಡ್ಕೊಳ್ಳಿ ಸರ್ ನನ್ ಹತ್ರ ಬಣ್ಣ ಕೂಡಾ ಇಲ್ಲ ಸರ್’ ಅಂತ ಪೋಲಿಸ್ ಹತ್ರ ಅಂಗಲಾಚಿದೆ. ಆಂಬ್ರೋಸ್ ‘ಆ ಹುಡ್ಗಿ ನನ್ ತಂಗಿ ಸರ್’ ಅಂತ ಸುಳ್ಳು ಹೇಳ್ದ. ‘ಆಯ್ತು ನಡೀರಿ ಸ್ಟೇಷನ್ ಗೆ ಹೋಗೋಣ, ಅದ್ನೇ ಸಾಹೇಬ್ರ ಹತ್ರ ಹೇಳಿ ಬಿಟ್ಬಿಡ್ತಾರೆ’ ಅಂತ ಹೇಳಿದ ಪೋಲಿಸ್ ಆಟೋ ಒಂದಕ್ಕೆ ನಮ್ಮಿಬ್ಬರನ್ನು ಹತ್ತಿಸಿ ತಾನೂ ಕೂತ್ಕೊಂಡ.
ಮೇಲೆ ಹಾರಿ, ನಿನ್ನ ಸೆಳೆತ ಮೀರಿ..!
-ರಂಜಿತ್
ಇದುವರೆಗೂ ಬ್ಯಾಚುಲರ್ ಅಂತ ಹಣೆಪಟ್ಟಿ ಹಾಕ್ಕೊಂಡು ಒಬ್ಬನೇ ಆರಾಮಾಗಿದ್ದೆ. ನಾನು ಬೆಂಗಳೂರಿಗೆ ಬರುವೆ, ಇಲ್ಲೇ ಇರುವೆ ಅಂತ ಸುದ್ಧಿ ಪಕ್ಕಾ ಆದ ಕೂಡಲೇ ಅಮ್ಮ ನಾನೂ ಬೆಂಗಳೂರಿಗೆ ಬರ್ತೇನೆ, ನಿನ್ನ ಜತೆ ಇರ್ತೇನೆ ಅಂದಾಗ ಖುಷಿ ಆಯ್ತು. ಅಲ್ಲಿಗೆ ನನ್ನ ರೂಮು ಜೀವನ, ಚೆಲ್ಲಾಪಿಲ್ಲಿ ಪೇಪರುಗಳ ಫ್ಲೋರಿಂಗ್, ಅಶಿಸ್ತಿನ ಅಭ್ಯಾಸಗಳಿಗೆ ತಿಲಾಂಜಲಿ ಇಡುವ ಅನಿವಾರ್ಯತೆ ಉಂಟಾಯಿತು. ಆದರೂ ಹೊತ್ತೊತ್ತಿಗೆ ಕರೆಕ್ಟಾಗಿ ಸಿಗುವ ಭಾರೀ ಭೋಜನ, ಮನೆಗೆ ಬೇಗ ಹೋಗೋಣ ಅಂತ ಅನ್ನಿಸುವಂತೆ ಮಾಡುವ ಒಂದು ಜೀವ ನಮ್ಮನ್ನು ಕಾಯುತ್ತ ಇರುತ್ತದೆಂಬ ಭಾವನೆಗಳು ಆಸೆ ಹುಟ್ಟಿಸಿದವು. ಒಡಹುಟ್ಟಿದವರೂ ನಿಷ್ಕಲ್ಮಶ, ನಿಷ್ಕಾರಣ ಪ್ರೀತಿ ತೋರದಿರುವ ಈ ಕಾಲದಲ್ಲಿ ಅದಕ್ಕೆ ನಂಬಬೇಕಾದ್ದು ಅಮ್ಮ ಒಬ್ಬರನ್ನೇ ಅಲ್ಲವೇ? ಹಾಗಾಗಿ ರೂಮು ಹುಡುಕುವುದು ಬಿಟ್ಟು ಮನೆ ಹುಡುಕುವುದಕ್ಕೆ ಶುರು ಮಾಡಿದ್ದಾಯಿತು.
ಬೆಂಗಳೂರು ಮಧ್ಯದಲ್ಲಿರುವ ಆಸೆ, ಬೆಂಗಳೂರು ಮ್ಯಾಪಿನ ಎಲ್ಲೋ ಮೂಲೆಯಲ್ಲಿರುವ ಕೆಲಸದ ಜಾಗ, ಈ ಎರಡೂ ತುಂಬ ಮಾನಸಿಕ ಸಂಘರ್ಷ ಉಂಟುಮಾಡಿದವು. ಕೊನೆಗೂ ಎಲ್ಲಾ ಆಸೆಗಳನ್ನು ಟ್ರಾಫಿಕ್ ಎಂಬ ಭೂತ ಹೆದರಿಸಿ ’ಎಲ್ಲಿ ಕೆಲಸವೋ ಅಲ್ಲೇ ವಾಸ’ ಎಂಬ ಗಾದೆ ಹುಟ್ಟಿಸಿ ಮ್ಯಾಪಿನ ಮೂಲೆಯಲ್ಲೇ ಮನೆ ಮಾಡುವಂತೆ ಪ್ರೇರೇಪಿಸಿದವು. ಮನೆ ಆಯ್ತು, ಅಮ್ಮ ಬರುವ ಮುಂಚೆ ಎಲ್ಲಾ ತಯಾರಿರಬೇಕು ಅಂತ ಅನ್ನಿಸಿ ಮನೆಗೆ ಬೇಕಾದ ಎಲ್ಲಾ ಸಾಮಾನುಗಳೂ, ಯಂತ್ರ (ವಾಷಿಂಗ್ ಮೆಶೀನು, ಗ್ಯಾಸು ಸಿಲಿಂಡರು ಇತ್ಯಾದಿ) ತಂದಿರಿಸಿದ್ದಾಯಿತು. ಅಮ್ಮನಿಗೆ ಮುಖ್ಯವಾಗಿ ಬೇಕಾಗಿದ್ದ ಟೀವಿ ಠೀವಿಯಿಂದ ಡ್ರಾಯಿಂಗ್ ರೂಮಿನಲ್ಲಿ ಕೂತಿತು. ಮತ್ತಷ್ಟು ಓದು 
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 6 – ಕುಣಿಯಲು ಕಲಿತವರೇ …
ನನ್ನ ಇನ್ನೊಬ್ಬ ಗೆಳೆಯರಾದ ಕೆ.ಪಿ. ಗೋಪಾಲಕೃಷ್ಣ ಭಟ್ಟರು ಸಲಹೆ ನೀಡುವವರೆಗೂ ಮೇಳಕ್ಕೆ ಸೇರಿ ವೃತ್ತಿಪರ ಕಲಾವಿದನಾಗುವ ಯೋಚನೆ ನನ್ನ ತಲೆಯಲ್ಲೇ ಸುಳಿದಿರಲಿಲ್ಲ.
ಕೆಲವೊಂದು ಕಡೆ ಆಟಗಳಿಂದ ಆಕರ್ಷಿತನಾದಾಗ, ಒಂದೆರಡು ವೇಷಗಳು ನನ್ನ ಮೇಲೆ ಪ್ರಭಾವ ಬೀರಿದಾಗ ‘ನಾನು ಹಾಗೆ ಕುಣಿಯಲಾಗುತ್ತಿದ್ದರೆ?’ ಎಂದುಕೊಂಡಿದ್ದೆಯೇ ಹೊರತು, ಆರು ತಿಂಗಳ ಕಾಲ ಎಡೆಬಿಡದೆ ಪ್ರತಿ ರಾತ್ರೆಯೂ ಗೆಜ್ಜೆ ಕಟ್ಟುವ ಯೋಚನೆ ಮಾಡಿರಲಿಲ್ಲ.
ಮೇಳಗಳ ನೇರ ಸಂಪರ್ಕವಿರಲಿಲ್ಲವಾದರೂ, ವೇಷ ಹಾಕುವವರು ಕೆಲವರ ಗುರುತಿತ್ತು. ವೇಷಧಾರಿಗಳ ಜೀವನದ ‘ಸೊಗಸು’ ಕಾಣಿಸಿತ್ತು.
ಅವರು ಯಾವ ದೇವಿಯ ವರಪ್ರಸಾದದಿಂದಾಗಿಯೇ ಕಲಾವಿದರಾಗಿರಲಿ, ಬೇರೇನೂ ಉದ್ಯೋಗ ದೊರೆಯದೆಯೇ ಆಟದ ಮೇಳ ಸೇರಲು ಬಂದವರು ಎನ್ನುವ ಭಾವನೆ ಜನರಲ್ಲಿ ಬೇರೂರಿತ್ತು. ಕೆಲವರಂತೂ, ಆ ಭಾವನೆಯನ್ನು ಮತ್ತೂ ಬೆಳೆಸಲು ಸಹಕರಿಸಿದ್ದರೆಂದರೆ ಹೆಚ್ಚಲ್ಲ.
ಆಜಬ್ಬ
– ಅಬ್ದುಲ್ ಸತ್ತಾರ್ ಕೊಡಗು
ಅದು ರಸ್ತೆ ಬದಿ. ಹೇಳ್ಕೊಳ್ಳೋಕೆ ಜಿಲ್ಲಾ ಹೆದ್ದಾರಿ ಆಗಿದ್ರೂ ಯಾರು ಈ ಸ್ಥಾನ ಕೊಟ್ರೋ ಗೊತ್ತಿಲ್ಲ. ದಿನಕ್ಕೆ ಮೂವತ್ತು ಗಾಡಿ ಓಡಾಡೋದೇ ಹೆಚ್ಚು. ಬರೀ ಗುಂಡಿಗಳಲ್ದೆ ರಸ್ತೆ ಏನೂ ಕಾನ್ತಿರ್ಲಿಲ್ಲ. ಒಂದು ಮಳೆಗಾಲಕ್ಕೆ ರಸ್ತೆ ಬದೀಲಿದ್ದ ಮರಗಳೆಲ್ಲಾ ಕೆಯೀಬಿಯೋರ ಇದ್ದ ಬದ್ದ ಕರೆಂಟು ಕಂಬದ ಮೇಲೆ ಬಿದ್ದಿದ್ದ್ರಿಂದ ಅವ್ರು ಆ ಮರಕ್ಕೆಲ್ಲಾ ಮೋಕ್ಷಾ ಕೊಟ್ಟಿದ್ರು. ವರ್ಷದ ಹಿಂದೆ ಕಡ್ದು ಹಾಕಿದ್ದ ಆ ಮರಗಳ ಬುಡ ಹಾಗೆ ಇದ್ದು ಈಗ ಸಂಪೂರ್ಣ ಒಣಗಿ ಹೋಗಿತ್ತು. ಮಾಗೊಡಪ್ಪನ ಅಂಗ್ಡಿಯಿಂದ ಹತ್ತಿಪ್ಪತ್ತು ಮೀಟರು ದೂರದಲ್ಲಿರೋ, ಕೆಯೀಬಿಯೋರ ಗರಗಸಾಕ್ಕೆ ಪ್ರಾಣ ಕೊಟ್ಟಿದ್ದ ಆ ಮರಗಳ ಬುಡ ನೆಲದಿಂದ ಎರಡಡಿ ಮೇಲೆ ನಿಂತಿದ್ವು. ಅವಕ್ಕೂ ಈಗ ಮೋಕ್ಷ ಸಿಕ್ಕಿತ್ತು.
ಆಜಬ್ಬನ ವಯ್ಸು ಸುಮಾರು ಅರವತ್ತು ದಾಟಿದೆ. ಬರೀ ಮೂಳೆ ಸ್ತಿತೀಗೆ ತಲುಪಿರೋ ಆಜಬ್ಬ ಹೊಟ್ಟೆ ಪಾಡಿಗೆ ರಸ್ತೆ ಬದೀಲಿದ್ದ, ಇಲ್ಲಾ ಇನ್ನೆಲ್ಲೇ ಸೌದೆ, ಕುಂಟೆ ಕಂಡರೆ ಅವನ್ನೆಲ್ಲಾ ಅವನ ಸೈಕಲ್ ಚಕ್ರದ ತಳ್ಳೋ ಗಾಡೀಲಿ ತುಂಬಿಸ್ಕೊಂಡು ಅಡ್ವಾನ್ಸಾಗಿ ಹೇಳಿದ್ದವ್ರ ಮನೆಗೆ ಸಾಗಿಸ್ತಿದ್ದ. ಒಂದು ಹೊರೆಗೆ ಹತ್ತಿಪ್ಪತ್ತು ರೂಪಾಯಿ ಜೊತೆಗೆ ಆಯಾ ಹೊತ್ತಿನೂಟ ಕೂಡ ಸಿಗ್ತಿತ್ತು. ಇತ್ತೀಚಿಗೆ ಸೌದೆ ಅಭಾವ ಉಂಟಾಗ್ತಾ ಬಂದಿದ್ರಿಂದ ರಸ್ತೆ ಬದೀಲಿದ್ದ ಒಂದೊಂದೇ ಬೊಡ್ಡೆ ಆಜಬ್ಬಂಗೆ ಸ್ವಾಹ ಆಗಿತ್ತು. ಮಾಗೊಡಪ್ಪನ ಅಂಗ್ಡಿ ಸಮೀಪ ಇರೋ ಆ ಬುಡಾನ ಕಡಿಯೋಕೆ ಆವತ್ತು ಗಾಡೀಲಿ ಗುದ್ಲಿ ಕೊಡಲಿ ಹಾಕ್ಕೊಂಡು ಬಂದಿದ್ದ ಆಜಬ್ಬ.
ಜಯಶಂಕ್ರ ಬಸ್ಸು ಆ ರಸ್ತೇಲಿ ಅದರ ಚಕ್ರಾನ ಪ್ರಾಯಾಸ ಪಟ್ಕೊಂಡು ಇಳಿಸ್ತಾ ಯೇರಿಸ್ತಾ ಬರ್ತಿದ್ದನ್ನ ಕಂಡ ಆಜಬ್ಬ ಸೌದೆ ಒಡಿಯೋದನ್ನ ನಿಲ್ಸಿ ಕೊಡಲೀನ ಗಾಡಿಗೆ ಆನಿಸಿ ಮದ್ಯಾನ ಆಗ್ತಿದೆ ಅಂತಾ ಅಂದಾಜು ಮಾಡ್ದ. ಹಟಾ ಹಿಡ್ದು ಸೌದೆ ಹೊಡಿತಿದ್ರಿಂದ ಆಜಬ್ಬಂಗೆ ಸುಸ್ತಾಗಿ ಉಸ್ರಾಟ ಹೆಚ್ಚಾಗಿತ್ತು. ಗಾಡೀಲಿ ಹಕ್ಕೊಂದ್ಬಂದಿದ್ದ ಬಾಟಲಿ ತೆರದು ನೀರು ಕುಡ್ದು ಸ್ವಲ್ಪ ಮುಖಕ್ಕೂ ಯೆರಚ್ಕೊಂಡ. ಹೊಟ್ಟೆ ಚುರುಗುಟ್ತಾ ಬೆನ್ನಿಗೆ ಅಂಟಿತ್ತು. ಉದ್ದುದ್ದ ಕೈ ಕಾಲು ಸುಕ್ಕು ಹಿಡ್ದು ಕೆನ್ನೆ, ಕಣ್ಣು ಗುಳೀ ಸೇರಿ ಸುಮಾರು ವರ್ಷ ಆದಂಗಿತ್ತು. ಸುಸ್ತು ಸ್ವಲ್ಪ ಕಡಮೆ ಆದ್ರಿಂದ ಪಂಚೆನ ಬಿಚ್ಚಿ ಮೇಲಕ್ಕೆ ಕಟ್ಕೊಂಡು ಅಮರು ಬೀಡಿ ಹಚ್ಚಿ ಕೊಡ್ಲೀನ ಕೈಗೆ ತಗೊಂಡ. ಗಾಡೀಲಿ ಈಗಾಗ್ಲೆ ಎರಡು ಹೊರೆಷ್ಟು ಸೌದೆ ತುಂಬಿತ್ತು. ಎರಡಡಿ ಇದ್ದ ಆ ಬುಡ ಈಗ ನೆಲಾ ಮಟ್ಟವಾಗಿತ್ತು. ಕೊಡ್ಲಿಯಿಂದಿನ್ನು ಆಗೋದಿಲ್ಲ ಅಂತ ಗಾಡೀಲಿದ್ದ ಗುದ್ಲಿ ತಗೊಂಡು ಬೇರ ಮಣ್ಣ ಬಿದ್ಸೋಕೆ ಶುರುವಾದ. ಮಣ್ಣ ಕೆಬರೀ ಕೆಬರೀ ಅವರ ಸುತ್ತ ಹೊಂಡಾನೇ ಸೃಷ್ಟಿ ಮಾಡ್ದ. ಇನ್ನೊಂದು ಹೊರೆ ಸೌದೆ ಆಗುತ್ತೆ ಅಂತ ಅಂದಾಜು ಮಾಡ್ತಿರೋವಾಗ ಹೊಟ್ಟೆ ಏನಾದ್ರೂ ಬೇಕು ಅಂತಿತ್ತು. ಕೊಡ್ಲಿ ಗುದ್ಲೀನ ಅಲ್ಲಿತ್ತು ಸೀದಾ ಮಾಗೊಡಪ್ಪನ ಅಂಗ್ಡಿ ಕಡೆ ಹೋದ.
ಬೆಂಗಳೂರು ಮಳೆಯಲ್ಲಿ…
– ರಾಕೇಶ್ ಶೆಟ್ಟಿ
(ನಿನ್ನೆ ಸಂಜೆಯಿಂದ ಎಡಬಿಡದೆ ಸುರಿದ ಮಳೆಯಲ್ಲಿ ನೆನೆಯುತ್ತ ಮತ್ತೆ ನೆನಪಾಗಿದ್ದು ’ಬೆಂಗಳೂರು ಮಳೆಯಲ್ಲಿ’ ಲೇಖನ.ನಿಲುಮೆಯ ಓದುಗರಿಗಾಗಿ ಈ ಲೇಖನ)
ಎಂದಿನಂತೆ ಊಟಕ್ಕೆ ಅಂತ ಮೆಸ್ ಕಡೆ ಹೋದ್ರೆ ಅವ್ರು ಬಾಗಿಲು ಹಾಕಿದ್ರು.ಸಮಯ 10 ಆಗಿತ್ತು.ಅಲ್ಲೇ ಹತ್ತಿರದಲ್ಲೇ ಇರೋ ಇನ್ನೊಂದು ಹೋಟೆಲ್ ಕಡೆ ಹೋಗೋಣ ಬಾರೋ ಅಂದೇ ಶ್ರೀಕಾಂತಂಗೆ.ಹೇಯ್ ಅಲ್ ಬೇಡ್ವೋ ರಾಮಯ್ಯ ಕಾಲೇಜ್ ಹತ್ರ ಇರೋ ಪಂಜಾಬಿ ಮೆಸ್ಗೆ ಹೋಗೋಣ ಅಂದ.ಸರಿ ಅಂತ ಹೊರಟ್ವು.ಬಹುಶ ಅರ್ಧ ದಾರಿ ಹೋಗಿದ್ವು.ಹೊಟ್ಟೆ ಚುರು ಚುರು ಅನ್ನೋಕೆ ಶುರು ಆಗಿತ್ತು.ಶುರುವಾಯ್ತು ಭರ್ಜರಿ ಗಾಳಿ,ಮಳೆ.ಅಲ್ಲೇ ಒಂದು ಕಡೆ ಹೋಗಿ ನಿಂತು ಮಳೆ ಯಾವಾಗ ನಿಲ್ಲುತ್ತೋ ಅಂತ ಕಾಯ್ತಾ ಇದ್ವಿ.೧ ಗಂಟೆ ಕಳೆದರು ಮಳೆ ನಿಲ್ಲೋ ಹಾಗೆ ಕಾಣಲಿಲ್ಲ. ‘ಲೇ,ಇಲ್ಲೇ ನಿಂತ್ರೆ ಊಟ ಸಿಗೋಲ್ಲ,ಬಾ ಮಳೆಲಿ ಹೋಗಿ ಊಟ ಇದ್ರೆ ಪಾರ್ಸೆಲ್ ತಗೊಂಡು ಹೋಗೋಣ’ ಅಂದೇ.ಸರಿ ಅಂತೇಳಿ ನಾವ್ ಅಲ್ಲಿ ಹೋಗೋ ಅಷ್ಟೊತ್ತಿಗೆ ಅವ್ರು ಬಾಗಿಲು ಹಾಕಿದ್ರು. ಆಗಲೇ ೧೧.೨೦ ಆಗಿತ್ತು ಎಲ್ಲರು ಬಾಗಿಲು ಹಾಕಿಯಾಗಿತ್ತು.ಊಟ ಸಿಗ್ಲಿಲ್ಲ,ಸರಿ ವಾಪಸ್ ರೂಮ್ಗೆ ಹೋಗೋಣ ಅಂತ ಹೊರಟ್ರೆ,ರಸ್ತೆ ಅನ್ನೋದು ನದಿಯ ರೂಪ ಪಡೆದಿತ್ತು.’ಬೆಂಗಳೂರಿನ ರಸ್ತೆಗಳಲ್ಲಿ ಅದೆಲೆಲ್ಲಿ ಓಪನ್ ಮ್ಯಾನ್ ಹೋಲ್ಗಳಿವೆಯೋ ಮೊದ್ಲೇ ಗೊತ್ತಾಗೊಲ್ಲ.ಈಗ ಮಳೆ ನೀರಿಗೆ ರಸ್ತೇನೆ ಕಾಣ್ತಾ ಇಲ್ಲ,ಹುಶಾರೋ ಲೋ, ಎಲ್ಲಾದರು ಗುಂಡಿಗೆ ಬಿದ್ಬಿಟ್ಟಿಯಾ,ಕಡಿಮೆ ಅಂದ್ರು ೭೦ ಕೆ.ಜಿ ಇದ್ದೀಯ ನಾನ್ ಅಂತು ಹೋದ್ರೆ ಹೋದೆ ಅಂತ ಬಿಟ್ಬಿಡ್ತೀನಿ’ ಅಂದೇ ಶ್ರೀಕಾಂತಂಗೆ. ನೀನ್ ಬಿದ್ರೆ ನಾನು ಹಂಗೆ ಮಾಡ್ತೀನಿ ಮಗನೆ ಅಂದ.ಕಡೆಗೆ ಈ ಟೆನ್ಶನ್ ಬೇಡ ಮಧ್ಯ ರಸ್ತೆಲೆ ನಡೆಯೋಣ ಅಂತೇಳಿ ನಿರ್ಧರಿಸಿ ಹೋಗ್ತಾ ಇದ್ರೆ ಕಿಟಕಿಯಿಂದ ಇಣುಕಿ ನೋಡೋ ಜನ ಇಂತ ಕೆಟ್ಟ ಮಳೆಯಲ್ಲಿ ಅದು ಅಂತ ರಸ್ತೆಯಲ್ಲಿ ಹೋಗೋ ನಮ್ಮನ್ನ ಮೆಂಟಲ್ಗಳು ಅನ್ಕೊಂಡಿದ್ರೋ ಏನೋ 🙂
ವಾಕ್ಪಥ ಹಾಗು ಪುಳಿಯೋಗರೆ ಪಾಯಿಂಟ್
೨೨ ಸೆಪ್ಟೆಂಬರ್, ೨೦೧೧ ನನ್ನ ಸ್ನೇಹಿತನಿಂದ ಒಂದು ವಾಣಿಜ್ಯ-ಸಮಾಲೋಚನೆಗಾಗಿ ಕರೆಬಂದಾಗ, ಅದು ೨೪ರ ಸೆಪ್ಟೆಂಬರ್ಗೆ ನಿಗದಿಯಾಯಿತು. ೨೫ನೇ ಭಾನುವಾರ
ಚುಂಚನಗಿರಿಯಲ್ಲಿ ನಡೆಯಲಿರೋ ಕಾರ್ಯಕ್ರಮಕ್ಕೆ ಇನ್ನೊಬ್ಬ ಸ್ನೇಹಿತನಿಂದ ಬಂದ ಕರೆಗೆ ತುಂಬು ಆಸಕ್ತಿಯಿಂದಲೇ ಒಪ್ಪಿಗೆ ಇತ್ತಾಗಿತ್ತು. ೨೪ರ ಬೆಳಿಗ್ಗೆ ನಾ ಬೆಂಗಳೂರಿಗೆ ಬಂದಿಳಿದು, ಮಧ್ಯಾಹ್ನದ ಸಮಾಲೋಚನೆಯ ತಯ್ಯಾರಿಯಲ್ಲಿದ್ದಾಗ, ತಲೆ ಇನ್ನೇನೋ ಯೋಚಿಸಲಾರಂಭಿಸಿತ್ತು. ಮನಸ್ಸು ಹೊಯ್ದಾಡುತ್ತಾ, ಗೊಣಗುತಿತ್ತು.. ಸದ್ಯದಲ್ಲೆಲ್ಲೋ, ವಾಕ್ಪಥ ಕಾರ್ಯಕ್ರಮ ಇದೆ, ಎಂಬುದಾಗಿ. ಮನಸ್ಸಿನೊತ್ತಡ ತಡೆಯಲಾರದೇ, ಫೇಸ್ಬುಕ್ನ “ಇವೆಂಟ್ಸ್” ತೆರೆದು ನೋಡಿದಾಗ, ಆಶ್ಚರ್ಯ, ಆಘಾತ, ಸಂತೋಷ, ಎಲ್ಲಾ ಒಟ್ಟೊಟ್ಟಿಗೆ..! ನನ್ನ ಮನಸ್ಸಿನ ಹೊಳಹಿನಂತೆ ನಂತರದ ದಿನವೇ (೨೫/೦೯/೨೦೧೧) ವಾಕ್ಪಥದ “ಏಳನೇ ಹೆಜ್ಜೆ”. ಈ ವಿಚಾರ ಆಶ್ಚರ್ಯಕ್ಕೆ ಕಾರಣವಾಗಿತ್ತು. ಯಾವಾಗಲೂ ಕಾಯುತ್ತಿದ್ದ ಈ ವಿಶೇಷ ಕಾರ್ಯಕ್ರಮ ಅಚಾನಕ್ಕಾಗಿ ನನ್ನ ಮುಂದೆ ತೆರೆದುಕೊಂಡಿದ್ದು, ನಿಜಕ್ಕೂ ನನಗೆ ಸಂತೋಷದೊಂದಿಗೆ ಅಚ್ಚರಿಗೊಳಿಸಿತ್ತು. ಆದರೆ ನನ್ನ ಸ್ನೇಹಿತನಿಗೆ ಚುಂಚನಗಿರಿಯ ಕಾರ್ಯಕ್ರಮಕ್ಕೆ ಬರುವೆ ಅಂದದ್ದು, ವಾಕ್ಪಥದಲ್ಲಿ ಭಾಗವಹಿಸಲು ಅಡ್ಡಿಮಾಡುತ್ತಲ್ಲಾ ಎಂಬ ಆಘಾತಕ್ಕೆ ಕಾರಣವಾಯಿತು.
ಪರಮಾತ್ಮ
– ಇಂಚರ
ಈ ನಮ್ಮ ಪರಮಾತ್ಮನಿಗೆ ಹಣ ಮಾಡುವುದರಿಂದ ಆಧ್ಯಾತ್ಮದವರೆಗೂ ಎಲ್ಲವೂ ಸುಲಭ. ಆದರೆ ಎಮ್ ಎಸ್ ಸಿ ಪರೀಕ್ಷೆ ಮಾತ್ರ ಬಿಡಿಸಲಾರದಷ್ಟು ಕಗ್ಗಂಟು. ಈತನ ತಂದೆ ಪ್ರಖ್ಯಾತ ಹೃದಯ ತಜ್ಞ. ವೈದ್ಯನಾಗಿ ಬೇಕಾದಷ್ಟು ಹಣ ಗಳಿಸಬಹುದಾದರೂ, ಆತ್ಮ ತೃಪ್ತಿಗೆ ಹಣವೇ ಮುಖ್ಯ ಅಲ್ಲವೆಂದು ಒಂದಷ್ಟು ಮಕ್ಕಳನ್ನು ಸಾಕಿಕೊಂಡು, ನೆಮ್ಮದಿಯಿಂದ ಬದುಕುತ್ತಿರುವ ಈತನಿಗೆ ಮಗನ ಹೃದಯದ ಬಗ್ಗೆ ಪರಮ ಹೆಮ್ಮೆ. ಈತ ಮಗ ಏನೂ ಮಾಡಿದರೂ ಪ್ರಶ್ನಿಸಲಾರ. ಮಗನ ಮೇಲೆ ಅದಮ್ಯ ವಿಶ್ವಾಸ. ಈಗಿನ ಅಪ್ಪಂದಿಗಿರುವ ಆತಂಕ, ನಿರೀಕ್ಷೆ ಈ ಅಪ್ಪನಿಗಿಲ್ಲ. ಹಾಗೆಯೇ ಅಪ್ಪ ನೀಡಿರುವ ಸ್ವಾತಂತ್ರದ ಇನಿತೂ ದುರುಪಯೋಗ ಪಡೆಯದ ಮಗ ಕಾಲೇಜಿನ ಪರೀಕ್ಷೆಯೊಂದನ್ನು ಬಿಟ್ಟು ಜೀವನದ ಎಲ್ಲಾ ಪರೀಕ್ಷೆಗಳಲ್ಲೂ ಫಸ್ಟ್ ಕ್ಲಾಸ್ ಪಾಸ್. ಮಗ ಪರೀಕ್ಷೆ ಪಾಸಾಗಲಿಲ್ಲವೆಂಬ ಕೊರಗು ಅಥವಾ ಮಗ ತನ್ನಂತೆಯೇ ವೈದ್ಯನಾಗಬೇಕೆಂಬ ಹಂಬಲವೂ ಕೂಡ ಈ ಅಪ್ಪನಿಗಿಲ್ಲ. ಆತನಿಗಿರುವ ಕಾಳಜಿಯೊಂದೇ, ತನ್ನ ಮಗನ ಹೃದಯಕ್ಕೆ ನೋವಾಗಬಾರದು. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವೆಲ್ಲರೂ ಎದುರಿಸುತ್ತಿರುವ ಆತಂಕ, ಒತ್ತಡ, ಸೋಲು, ಕಿರಿಕಿರಿ, ನಿರಾಶೆ ಇವುಗಳೆಲ್ಲವನ್ನೂ ಬಿಟ್ಟು ನಿರಾಳವಾಗಿ ಬದುಕುವುದು ಹೇಗೆ ಎಂಬುದನ್ನು ತೋರಿಸುವ ಮಾದರಿ ಈ ಅಪ್ಪ, ಮಗ!
ಅಗಲಿದ ಚೇತನಗಳಿಗೆ ನಮನ
-ಪ್ರಶಸ್ತಿ.ಪಿ ಸಾಗರ
ಎಂದಿನಂತೆ fb ಗೆ ಬರ್ತಿದ್ದಂತೆಯೇ ಕಂಡ ಮೊದಲ ಪೋಸ್ಟು.. “ಮತ್ತೂರು ಕೃಷ್ಣಮೂರ್ತಿಗಳು,ಸ್ಟೀಪ್ ಜಾಬ್ಸ್ ಆತ್ಮಕ್ಕೆ ಶಾಂತಿ ಸಿಗಲಿ..” ವಿಜಯದಶಮಿಯ ದಿನವೆಂದರೆ ಕೆಟ್ಟದ್ದರ ಒಳ್ಳೆಯದರ ವಿಜಯದ ಸಂಕೇತವೆಂಸು ಪ್ರತೀತಿ.ಆದರೆ ಅಂದೇ ಇಬ್ಬರು ಅಪ್ರತಿಮ ಸಾಧಕರ ಸಾವಿನ ಸುದ್ದಿ ಕೇಳುವಂತಾಯಿತಲ್ಲ ವಿಧಿಯೇ ಅನಿಸ್ತು.. ಸುದ್ದಿ ಸುಳ್ಳಾಗಿರಬಹುದೇ ಅನ್ನೋ ಮನದ ಮೂಲೆಯ ಆಸೆಯಿಂದ ಒಮ್ಮೇ ನೆಟ್ಟಲ್ಲಿ ಹುಡುಕಿದೆ.. ಅದರ ತುಂಬೆಲ್ಲಾ ಸ್ಟೀವ್ ಜಾಬ್ಸನದೇ ಸುದ್ದಿ.. ಮತ್ತೂರು ಕೃಷ್ಣಮೂರ್ತಿಗಳ ಸುದ್ದಿ ತಿಳಿಯಲು ಮತ್ತೂರು ಗೆಳೆಯನಿಗೆ ಸಂದೇಶ ಕಳಿಸಾಯಿತು..ಎಲ್ಲೆಲ್ಲೂ ಬರೀ ಬೇಸರದ ಪೋಸ್ಟುಗಳು.. ಯಾಹೂ, ibn, times news ಹೀಗೆ ಎಲ್ಲೆಲ್ಲೂ ಸ್ಟೀವ್ ಜಾಬ್ಸ್ ಮರಣದ ವಾರ್ತೆ, fb, google + ಹೀಗೆ ಸಾಮಾಜಿಕ ತಾಣಗಳಲ್ಲೂ ಅವರಿಗೆ ನೆನಪಿನ ಕಂಬನಿ, ಫೋಟೋಗಳು, ವೀಡಿಯೋಗಳು,ಕೊಂಡಿಗಳು, ಅವರ ppt ಗಳು, ನುಡಿಮುತ್ತುಗಳು.. ಹೀಗೆ ಏನುಂಟು.. ಏನಿಲ್ಲ.. ಆ ಎರಡೂ ಮಹಾಚೇತನಗಳಿಗೆ ನನ್ನದೂ ಒಂದು ಈ ಮೂಲಕ ಪದಾಂಜಲಿ
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 5 – ಕರ್ಣನಿಂದಾಗಿ ಕಣ್ಣೀರು ಬಂತು ….
ಅಡವಿ ಗಿಡ ಮರ ಕಲ್ಲು ನೋಡಿದರೆಯರಸಿನದ ಪುಡಿಯಂತೆ ತೋರುತಿದೆ ತಮ್ಮಾ! ಒಡಲೊಳುರಿ ತಾಪ ಬೇರ್ವಿಡಿದು ಜಠರಾಗ್ನಿಯಲಿ ನಡುಗುತಿದೆ ಕೈ ಕಾಲು ತಮ್ಮಾ” ಎಂದು ಸೀತೆಯನ್ನು ಕಳೆದುಕೊಂಡ ಶ್ರೀರಾಮ ಹಂಬಲಿಸುತ್ತಾನೆ. ಲಕ್ಷ್ಮಣನೊಡನೆ ಅಳಲನ್ನು ತೋಡಿಕೊಳ್ಳುತ್ತಾನೆ. ಪದ್ಯದ ತರುವಾಯ, ರಾಮನ ಉದ್ವೇಗದ ಸಂಪೂರ್ಣ ಚಿತ್ರಣವಾಗಬೇಕಾದರೆ- ತಾಳಮದ್ದಳೆಯ (ಕುಳಿತು ಮಾತನಾಡುವ- ವೇಷವಿಲ್ಲದ) ರಾಮ ಬಹಳ ಮಾತುಗಳನ್ನು ಖರ್ಚು ಮಾಡಬೇಕಾಗುತ್ತದೆ. ಭಾವನೆಗಳು ಮೂಡದೆ ಬರಿಯ ಮಾತುಗಳನ್ನೇ ಹೊರಡಿಸುವವನು ರಾಮನಾಗಿದ್ದರೆ, ಪ್ರೇಕ್ಷಕರಲ್ಲಿ ಪ್ರತಿಕ್ರಿಯೆ ಮೂಡಿಸುವ ಪ್ರಯತ್ನ ನಿರರ್ಥಕ ಎನಿಸುತ್ತದೆ,
ಶೃಂಗಾರ ರಸದ ನಿರೂಪಣೆ ಇರುವ ಪಾತ್ರಗಳಲ್ಲೂ ಅಂತಹುದೇ ಅನುಭವ. ”ಕಾಮಸನ್ನಿಭ ಮಾತ ಕೇಳೂ! ನಿನ್ನೊಳ್! ಕಾಮಿಸಿ ಕಾಮಿಸಿ ಬಂದೆ ಕೃಪಾಳೂ!!” ಎಂದು ಮಾಯಾ ಶೂರ್ಪನಖಿಯು ಲಕ್ಷ್ಮಣನೊಡನೆ ನುಡಿದ ಸನ್ನಿವೇಶದಲ್ಲಿ ಬರಿ ಮಾತಿನ ಬರಡುತನವನ್ನೂ ಕಂಡುಕೊಳ್ಳುವಂತಾಗಿತ್ತು.
ಅತೃಪ್ತಿ
ವೀರರಸದ ಸಂದರ್ಭಗಳಲ್ಲೂ ಅದೇ ತೊಡಕು, ಒಂದೆರಡು ಸನ್ನೆಗಳು, ಎರಡು ಮೂರು ಮಾತುಗಳಲ್ಲಿ ಪರಿಣಾಮಕಾರಿಯಾಗಿ ಮಾಡಬಹುದಾದ ಕೆಲಸಕ್ಕೆ ಬಹಳ ಮಾತುಗಳನ್ನೇ ವೆಚ್ಚ ಮಾಡಿದ ತರುವಾಯವೂ ‘ಇದು ಸಾಕಾಗಲಿಲ್ಲ!’ ಎಂದು ಅತೃಪ್ತಿ.
”ಅರ್ಥ ಉದ್ದವಾಯಿತು.” ಎಂಬ ಮಾತು ಕೇಳಿ ಬಂದರೆ ಅದರಲ್ಲಿ ಆಶ್ಚರ್ಯವೇನು?
ಇಂತಹುದೇ ವಿಚಾರಗಳ ಚರ್ಚೆ ಜಿಜ್ಞಾಸೆಗಳು ಗೆಳೆಯರೊಂದಿಗೆ ಆಗಾಗ ನಡೆಯುತ್ತಿದ್ದವು.
ಮತ್ತಷ್ಟು ಓದು 
ಮರೆಯಲಾಗದ ಲಾಟರಿ ಟಿಕೆಟ್
– ಪವನ್ ಪಾರುಪತ್ತೇದಾರ
ಕಾಲೇಜ್ ನ ಗೋಡೆಯ ಮೇಲೆ ಹೋಗೆ ಬಿಡುತ್ತಾ ನಾನು ಮತ್ತು ಬಾಸ್ ಬಂಡಾರಿ ಕುಳಿತಿದ್ದೆವು. ಸಿಗರೇಟನ್ನು ಘಾಡವಾಗಿ ಎಳೆದ ಭಂಡಾರಿ ಎಲ್ಲೋ ಶಿಷ್ಯ ಇನ್ನು ಸಿಂಹ ಬಂದೆ ಇಲ್ಲಾ ಅಂದ. ನಾನು ಒಮ್ಮೆ ಗಡಿಯಾರವನ್ನು ನೋಡಿ ಬಾಸ್ ಈಗ fly ಓವರ್ ಕಾಮಗಾರಿ ನಡೆಯುತ್ತಿದೆ ಅಲ್ವಾ ಟ್ರಾಫಿಕ್ ತುಂಬಾ ಇರತ್ತೆ ಅದಕ್ಕೆ ಲೇಟ್ ಆಗಿರಬೇಕು ಎಂದೆ. ಆಗ ಸಮಯ ಸುಮಾರು ೧೧ ಘಂಟೆ. ನಾನು ದ್ವಿತೀಯ PUC ಡುಮ್ಕಿ ಹೊಡೆದು ನಮ್ಮ ಸರ್ಕಾರೀ ಕಾಲೇಜ್ ನ ಗೋಡೆಯ ಮೇಲೆ ಕೂತು ಗೆಳೆಯರ ಜೊತೆ ಹರಟೆ ಹೊಡೆಯುವುದನ್ನೇ ಕಾಯಕವಾಗಿ ಮಾಡಿಕೊಂಡಿದ್ದೆ. ಬಾಸ್ ನಮಗಿಂತ ಒಂದೆರಡು ವರುಷ ಹಿರಿಯರು. ಅವರು ಸಹ ಡಿಪ್ಲೋಮಾ ಇಯರ್ ಬ್ಯಾಕ್ ಆಗಿ ನಮ್ಮ ಜೊತೆಯಲ್ಲೇ ಅಡ್ಡ ಹೊಡೆಯುತಿದ್ದರು. ಬೆಳಿಗ್ಗೆ ತಿಂಡಿ ತಿಂದು ಮನೆಯಿಂದ ಹೊರಟರೆ ಊಟದ ಸಮಯಕ್ಕೆ ಮತ್ತೆ ಮನೆ ಸೇರುತಿದ್ದಿದ್ದು, ಮತ್ತೆ ಸಂಜೆ ೪ ಕ್ಕೆ ಕ್ರಿಕೆಟ್ ಆಡಲು ಹೊರಟರೆ ಮನೆ ಸೇರುತಿದ್ದಿದ್ದು ರಾತ್ರಿ ೧೦ ಘಂಟೆಗೆ.
ಇಂತಹ ನಮ್ಮ ದಿನಚರಿಯಲ್ಲಿ ಸಿಂಹ ಪ್ರತಿ ದಿನ ಸಿಂಹ ಒಂದು ಒಳ್ಳೆಯ ಕೆಲಸ ಮಾಡುತಿದ್ದ. ದ್ವಿತೀಯ PUC ಫೈಲ್ ಆದರು, ಮನೆಗೆ ಒಂದಷ್ಟು ಸಹಾಯವಗುತಿದ್ದ. ಅವನು ಮಾಡುತಿದ್ದ ಕೆಲಸ ನಮ್ಮೂರಿಂದ ಬೆಂಗಳೂರಿಗೆ ಹೋಗಿ ಲಾಟರಿ ಟಿಕೆಟ್ ಕೊಂಡು ತರುವುದು. ಇಷ್ಟಕ್ಕೂ ಸಿಂಹ ಎಂದರೆ ಇವನ ಧೈರ್ಯಕ್ಕೆ ಪ್ರತಾಪಕ್ಕೆ ಕೊಟ್ಟಿರುವ ಬಿರುದೇನಲ್ಲ ಬಿಡಿ. ಅ ವಯಸಿಗೆ ಅವನ ಕಿವಿಯ ಮೇಲೆ ಒಂದೆರಡು ರೋಮ ಹುಟ್ಟಿತ್ತು, ಅದನ್ನೇ ಆಗಾಗ ನಿವುತ್ತ ಸಿಂಹ ಸಿಂಹ ಹಹಹಹ ಎಂದು ವಿಚಿತ್ರವಾಗಿ ಘರ್ಜಿಸುತಿದ್ದ. ಅದಕ್ಕೆ ನಾವು ಆಯಿತು ಬಿಡಪ್ಪ ನೀನು ಸಿಂಹನೆ ಅಂತ ಹಾಗೆ ಕರೆಯುತಿದ್ದೆವು. ಅವನ ನಿಜವಾದ ಹೆಸರು ಮಹೇಶ್, ಮಹೇಶ್ ಕುಮಾರ್ ಯಾದವ್





