ವಿಷಯದ ವಿವರಗಳಿಗೆ ದಾಟಿರಿ

Archive for

30
ನವೆಂ

ಮಡೆಸ್ನಾನದ ಮರ್ಮವೇನು ?

-ಸಂತೋಷ ಕುಮಾರ್

ಕುಕ್ಕೆ ಸುಬ್ರಮಣ್ಯದಲ್ಲಿ ಜರುಗ ಬೇಕಾಗಿದ್ದ ಮಡೆಸ್ನಾದ ಆಚರಣೆಯನ್ನು ರದ್ದುಗೊಳಿಸಬೇಕೇಂದು ಅಲ್ಲಿನ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಆದರೆ ದಿಡೀರ್ ಬೆಳವಣಿಗೆ ಎಂಬಂತೆ ನಿಷೇಧದ ಆದೇಶದ ಮರುದಿನವೇ ನಿಷೇಧವನ್ನು ರದ್ದುಪಡಿಸುವ ಆದೇಶವನ್ನೂ ಸಹ ನೀಡಲಾಯಿತು. ಇದನ್ನು ರಾಜಕೀಯ ವ್ಯವಸ್ಥೆಯ ಲೋಪದೋಷ ಅಥವಾ ದೌರ್ಬಲ್ಯ ಹಾಗೂ ಆಚರಣೆಯ ಅಥವಾ ಅದನ್ನು ಆಚರಿಸುವವರ ಸಂಸ್ಕೃತಿಯ ವಿಶಿಷ್ಟತೆ ಎಂಬ ಎರಡೂ ವಿಭಿನ್ನ ಆಯಾಮಗಳಲ್ಲಿ ವಿಶ್ಲೇಷಿಸಬಹುದು. ಇಲ್ಲಿ ಎರಡನೇ ಆಯಾಮದಿಂದ ಈ ಘಟನೆಯನ್ನು ವಿಶ್ಲೇಷಿಸಲು ಪ್ರಯತ್ನಿಸಲಾಗುವುದು. ಕುಕ್ಕೆ ಸುಬ್ರಮಣ್ಯದ ಮಡೆಸ್ನಾನದ ಆಚರಣೆಯನ್ನು ನಿಷೇಧಿಸಬೇಕೆಂಬ ಆದೇಶ ಹೊರಡಿಸುತ್ತಿದ್ದಂತೆ ವಿಶೇಷವಾಗಿ ನಮಗೆ ಆ ಆಚರಣೆಯಲ್ಲಿ ಭಾಗವಹಿಸುವ ಭಕ್ತರು ಹೇಗೆ ಪ್ರತಿಸ್ಪಂದಿಸುತ್ತಾರೆ ಎಂಬ ಕುತೂಹಲವಿತ್ತು.

ಮತ್ತಷ್ಟು ಓದು »

30
ನವೆಂ

ಕಲಸೆ (ನಾಡಕಲಸಿ) ದೇವಸ್ಥಾನ

-ಪ್ರಹಸ್ತಿ ಪಿ 

ಸಾಗರ ತಾಲೂಕಿನ ಇತಿಹಾಸ ಪ್ರಸಿದ್ದ ದೇವಸ್ಥಾನಗಳಲ್ಲಿ ಕಲಸೆ, ನಾಡಕಲಸಿಯೂ ಒಂದು. ಸಾಗರದವನಾಗಿಯೂ ಅದನ್ನು ನೋಡಲಾಗಿರದ ಬಗ್ಗೆ ಸ್ವಲ್ಪ ಬೇಸರವಿತ್ತು. ಬೆಳಗ್ಗೆ ೮ಕ್ಕೆ, ಮಧ್ಯಾಹ್ನ ಒಂದಕ್ಕೆ ಮಾತ್ರ ಅಲ್ಲಿಗೆ ಬಸ್ಸಿನ ಸೌಕರ್ಯವಿದೆ ಎಂಬ ಗೆಳೆಯರ ಮಾತೂ ನೋಡದಿರುವುದಕ್ಕೊಂದು ಪಿಳ್ಳೆ ನೆವವಾಗಿತ್ತು. ಆದರೆ ಅಲ್ಲಿಗೆ ಹೋದ ಮೇಲೆಯೇ ತಿಳಿದಿದ್ದು. ಅದೆಷ್ಟು ಸುಂದರ ಎಂದು.

ಹೋಗುವ ಮಾರ್ಗ:
ಸಾಗರದಿಂದ ಸುಮಾರು ಎಂಟು ಕಿ.ಮೀ ದೂರವಷ್ಟೇ ನಾಡಕಲಸಿ ಅಥವಾ ಕಲಸಿಯ ದೇವಸ್ಥಾನ. ಸಾಗರದಿಂದ ಹೋಗುವುದಾದರೆ ಸೊರಬ ಮಾರ್ಗದಲ್ಲಿ ಸುಮಾರು ೫ ಕಿ.ಮೀ ಹೋದ ಕೂಡಲೇ ಕಲಸಿ ರಾಮೇಶ್ವರ ದೇವಸ್ಥಾನಕ್ಕೆ ದಾರಿ ಅಂತ ಬೋರ್ಡೊಂದು ಸಿಗುತ್ತದೆ. ಅಲ್ಲಿಂದ ಸುಮಾರು ಮೂರು ಕಿ.ಮೀ ಬಲಕ್ಕೆ ಹೋದರೆ ಸಿಗುವುದು ಕಲಸಿ ಊರು. ಅಲ್ಲಿಂದ ಸ್ವಲ್ಪ ಒಳಗಡೆ ಇದೆ ದೇವಸ್ಥಾನ. ಸೊರಬಕ್ಕೆ ತುಂಬಾ ಬಸ್ಸುಗಳಿವೆ. ಹಾಗಾಗಿ ಸೊರಬ ಬಸ್ಸಿನಲ್ಲಿ ಕಲಸಿ ಬೋರ್ಡಿನಲ್ಲಿ ಇಳಿದುಕೊಂಡರೆ ಮೂರು ಕಿ.ಮೀ ನಡೆದು ಕಲಸಿ ದೇವಸ್ಥಾನಕ್ಕೆ ಯಾವಾಗಲಾದರೂ ಹೋಗಬಹುದು. ಸ್ವಂತ ವಾಹನವಿದ್ದರೆ ಇನ್ನೂ ಉತ್ತಮ.

ಇತಿಹಾಸ:
ಇಲ್ಲಿ ಶ್ರೀ ಮಲ್ಲಿಕಾರ್ಜುನ ಮತ್ತು ರಾಮೇಶ್ವರ ದೇವಸ್ಥಾನಗಳಿವೆ. ಈ ಜೋಡಿ ದೇಗುಲಗಳನ್ನು ಹೊಯ್ಸಳ ರಾಜ ಬಳೆಯಣ್ಣ ಹೆಗ್ಗಡೆ ಕ್ರಿ.ಶ ೧೨೧೮ ರಲ್ಲಿ ಕಟ್ಟಿಸಿದನೆಂದು ಸಂಶೋಧನಕಾರರು ಹೇಳುತ್ತಾರೆ.

ಮೊದಲಿಗೆ ಹೋಗುತ್ತಿದ್ದಂತೆಯೇ ನಿಮ್ಮನ್ನು ಸ್ವಾಗತಿಸುವುದು ದೇಗುಲದ ಎದುರಿಗೆ ಅಥವಾ ಹೋಗುವವರ ಬಲಗಡೆಗೆ ಇರುವ ನಾಗರ ಬನ.ಅದಕ್ಕೆ ನಮಸ್ಕರಿಸಿ ಮೊದಲು ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಹೋದೆವು.

ಮತ್ತಷ್ಟು ಓದು »

29
ನವೆಂ

ನಿರ್ವಾತದಲ್ಲಿ ಬೆಳಕಿನ ಸೃಷ್ಟಿ!

-ವಿಷ್ಣುಪ್ರಿಯ

ಕಾಂತವಲಯದ ದಿಕ್ಕನ್ನು ಪ್ರತಿ ಸೆಕೆಂಡಿಗೆ ಹಲವು ಬಿಲಿಯನ್ ಬಾರಿ ಬದಲಾಯಿಸುವ ಮೂಲಕ ವಿಜ್ಞಾನಿಗಳು ಈ ವಿಶೇಷ ಫಲಕವನ್ನು ಸೃಷ್ಟಿಸಿದ್ದಾರೆ. ಆದರೂ ಸಹ ಈ ಫಲಕವು ಬೆಳಕಿನ ವೇಗದ ಶೆಕಡಾ 25ರಷ್ಟು ವೇಗದಲ್ಲಷ್ಟೇ ಚಲಿಸುವುದಕ್ಕೆ ಸಾಧ್ಯವಾಯಿತು. ಆದಾಗ್ಯೂ ಇಷ್ಟು ವೇಗದಲ್ಲಿ ಫಲಕ ಚಲಿಸುತ್ತಿದ್ದ ಕಾರಣದಿಂದಾಗಿ ನಿರ್ವಾತದಲ್ಲಿ ಸೃಷ್ಟಿಯಾಗುತ್ತಿದ್ದ ಬೆಳಕಿನ ಕಣಗಳನ್ನು ಅರ್ಥಾತ್ ಜೊತೆ ಜೊತೆಯಾಗಿ (ಅವಳಿಗಳು) ಸೃಷ್ಟಿಯಾಗುತ್ತಿದ್ದ ಫೋಟಾನ್ಗಳನ್ನು ಗುರುತಿಸಿ ಅವುಗಳ ಗುಣಲಕ್ಷಣಗಳನ್ನು ಅಳೆಯುವುದಕ್ಕೆ ವಿಜ್ಞಾನಿಗಳಿಗೆ ಸಾಧ್ಯವಾಗಿದೆ.

ನಿರ್ವಾತ ಎಂದರೆ ಸಂಪೂರ್ಣ ಖಾಲಿ ಎಂದರ್ಥವಲ್ಲ. ಅಲ್ಲಿ ಮಿಂಚಿ ಮರೆಯಾಗುಂಥ ಫೋಟಾನ್ಗಳಿರುತ್ತವೆ. ಅಂದರೆ ವರ್ಚುವಲ್ ಅಥವಾ ಭ್ರಾಮಕ ಫೋಟಾನ್ಗಳಿರುತ್ತವೆ. ಈ ರೀತಿ ನಿರ್ವಾತದಲ್ಲಿ ಸೃಷ್ಟಿಯಾಗುವಂಥ ವರ್ಚುವಲ್ ಫೋಟಾನ್ಗಳು ಅಥವಾ ಭ್ರಾಮಕ ಫೋಟಾನ್ಗಳನ್ನು ಬಹುತೇಕ ಬೆಳಕಿನ ವೇಗದಲ್ಲಿ ಚಲಿಸುತ್ತಿರುವಂಥ ಫಲಕದಿಂದ ಪ್ರತಿಫಲಿಸುವಂತೆ ಮಾಡಿದರೆ ನೈಜ ಫೋಟಾನ್ಗಳ ಅರ್ಥಾತ್ ಬೆಳಕಿನ ಸೃಷ್ಟಿಯಾಗುತ್ತದೆ.
ಮತ್ತಷ್ಟು ಓದು »

29
ನವೆಂ

ಎಚ್ಚರ ಬ್ಲಾಗಿಗರೆ, ಕಳ್ಳರಿಹರು

-ಪ್ರಶಸ್ತಿ ಪಿ.

ಒಳ್ಳೆ ಸಾಹಿತ್ಯವನು ಸೃಷ್ಟಿಸಿಯೂ ಮುಂದೆ
ಕಳ್ಳನೆಂದೊಂದು ದಿನ ಬಿರುದು ಬೇಕೆ?
ನೀ ಮೊದಲು ಬರೆದದ್ದು ಎಂಬುದಕೆ ಏನುಂಟು
ಮಿಥ್ಯಾರೋಪಗಳ ಒಪ್ಪಬೇಕೆ?
ಪುಗಸಟ್ಟೆ ಮಾತುಗಳ ನುಂಗಬೇಕೆ?

ನೀವು ಕವಿಯೇ?ಸಾಹಿತಿಯೇ? ಬರೆದದ್ದ ನಿಮ್ಮ ಬ್ಲಾಗಲ್ಲಿ ಹಾಕುತ್ತಿದ್ದೀರಾ? ಜನ ಮೆಚ್ಚಲಿ , ಇಲ್ಲದಿರಲಿ ನಿಮಗೊಂದು ನಮನ ಮತ್ತು ಅಭಿನಂದನೆ. ನೀವು ಬರೆದಿದ್ದದು ಎಂಬುದಕ್ಕೆ ಅಲ್ಲಿರುವ ದಿನಾಂಕವೇ ಸಾಕ್ಷಿ. ಬೇರೆ ಯಾರಾದರೂ ಅದನ್ನು ಕದ್ದು ತನ್ನ ಹೆಸರಲ್ಲಿ ಪ್ರಕಟಿಸಿದರೆ ನೀವು ನಿಮ್ಮ ಬ್ಲಾಗಿನ ಪ್ರಕಟಗೊಂಡ ದಿನಾಂಕವನ್ನು ತೊರಿಸಿ ಅದನ್ನು ನೀವೇ ಬರೆದದ್ದೆಂದು ನಿರೂಪಿಸಬಹುದು.ಹಾಗಾಗಿ ಬ್ಲಾಗೆಂಬುದು ನಿಮ್ಮ ಕವನಕ್ಕೆ ಶ್ರೀ ರಕ್ಷೆ..ಹಾಂ.. ತಡೀರಿ, ಇಷ್ಟಿದ್ದೂ ನಿಮ್ಮ ಕವನವನ್ನು, ಲೇಖನವನ್ನು ಯಾರಾದರೂ ಕದೀಬಹುದು. ಅದನ್ನು ನಿಮಗಿಂತ ಮುಂಚಿನ ದಿನಾಂಕದಲ್ಲಿ ತನ್ನ ಬ್ಲಾಗಲ್ಲಿ ಹಾಕಿಕೊಳ್ಳಬಹುದು. ಅವಾಗೇನ್ಮಾಡ್ತೀರ? ಹೆಚ್ಚು ಕೇಳ ಹೋದರೆ ನೀವೇ ಕಳ್ಳರೆನ್ನುತ್ತಾರೆ.. ಅರೇ, ಇದು ಹೇಗೆ ಸಾಧ್ಯ? ಇದಕ್ಕೆ ಪರಿಹಾರವೇ ಇಲ್ಲವೇ ಅನಿಸುತ್ತಿದೆಯಾ? ಅದನ್ನು ತಿಳಿಸುವ ಒಂದು ಪುಟ್ಟ ಪ್ರಯತ್ನವೇ ಈ ಕಿರು ಲೇಖನ.

ಮತ್ತಷ್ಟು ಓದು »

28
ನವೆಂ

ಜಾಬ್ಸ್ ಜಾತ್ರೆಯಲ್ಲಿ ಮರೆತೋದ ‘ರಿಚ್ಚಿ’

-ಪ್ರಶಸ್ತಿ ಪಿ

ಆಪಲ್ ಸ್ಥಾಪಕ ಸ್ಟೀವ್ ಜಾಬ್ಸನ ವಿಚಾರಗಳೆಲ್ಲಾ ಕದ್ದಿದ್ದು. ಅವನ ಸ್ವಂತದ್ದು ಏನೂ ಇಲ್ಲ. ಅವನ ಸಾವಿಗೆ ಅಷ್ಟು ಮನ್ನಣೆ. C, Unix ಗಳನ್ನು ಕಂಡು ಹಿಡಿದ ಡೆನ್ನಿಸ್ ರಿಚ್ಚಿಯ ಸಾವು ಯಾರೂ ಕಂಡೂ ಕೇಳದಂತೆ ಮರೆಯಾಗಿ ಹೋಯಿತಲ್ಲಾ ಎಂಬ ವೇದನೆಯ ಹಲರೂಪಾಂತರಗಳು ಅಂತರ್ಜಾಲದಲ್ಲೆಲ್ಲಾ ಸುತ್ತಾಡುತ್ತಿದ್ದವು ಕೆಲವಾರದ ಹಿಂದೆ. ಇನ್ನೂ ಅಲ್ಲೊಂದು , ಇಲ್ಲೊಂದು ಅಂತಹ ಫೋಟೋಗಳು, ಪೋಸ್ಟುಗಳು ಸುತ್ತಾಡುತ್ತಲೇ ಇವೆ. ಇಬ್ಬರಲ್ಲಿ ಯಾರು ಹೆಚ್ಚೆಂಬ ವಿಮರ್ಶೆಯನ್ನು ಮಾಡೋದು ಆ ದೈತ್ಯ ಪ್ರತಿಭೆಗಳೆದುರು ಪಾಮರನಾದ ನನ್ನಿಂದಂತೂ ಅಸಾಧ್ಯ. ಆದರೆ ಇಂದು ಮತ್ತೊಂದು ಅಂತಹದೇ ಪೋಸ್ಟನ್ನೋದಿದಾಗ ನನಗನಿಸಿದ ಭಾವಗಳನ್ನು ಹಂಚಿಕೊಳ್ಳುತ್ತಿದ್ದೇನೆ.

ಪಿಯುಸಿಯಲ್ಲಿ ಕಂಪ್ಯೂಟರ್ ಓದಿದವರಿಂದ ಹಿಡಿದು, BCA, BE, B.Com (Computers) , Diploma ಹೀಗೆ ಹಲವು ವಿಷಯಗಳನ್ನೋದಿದ ಜನರೆಲ್ಲಾ C ಎಂಬ Programming ಭಾಷೆಯನ್ನು ಓದೇ ಇರುತ್ತಾರೆ. ಬಲ್ಬು ಕಂಡುಹಿಡಿದವರು ಯಾರು ಎಂದರೆ ಎಂಥಾ ಟ್ಯೂಬ್ಲೈಟಾದರೂ ಥಾಮಸ್ ಅಲ್ವಾ ಎಡಿಸನ್ ಅಂತ ಹೇಳ್ತಾರಲ್ವಾ ಹಾಗೇನೆ ಇವರಿಗೆಲ್ಲಾ C ಯನ್ನು ಕಂಡುಹಿಡಿದವರು ಯಾರು ಅಂದರೆ ತಟ್ಟನೆ ಬರುವ ಉತ್ತರ ಡೆನ್ನಿಸ್ ರಿಚ್ಚಿ, ಕೆರಿಂಗ್ ಹ್ಯಾಮ್. ನಾನೂ ಓದಿ ಇಷ್ಟಪಟ್ಟ Programming ನ ಮೊದಲ ಪುಸ್ತಕ The C Programming Language . ಆಗ ರಿಚ್ಚಿಯ ಬಗ್ಗೆ ಅಷ್ಟು ತಿಳಿದಿರಲಿಲ್ಲ. ನಂತರ ಮೂರನೆಯ ಸೆಮಿಸ್ಟರಿನಲ್ಲಿ Unix ಅನ್ನೋ ವಿಷಯ ಇತ್ತು. ಅದರ ಬಗ್ಗೆ ಗೊತ್ತಿಲ್ದೇ ಇರೋರಿಗೆ ಹೇಳೋದಾದರೆ ನೀವು ಬಳಸ್ತಾ ಇರೋ Windows XP, Windows 7, Vista ಗಳಂತೆ ದುಡ್ಡು ಕೊಟ್ಟು Genuine ಅವತರಣಿಕೆ ಪಡೆಯಬೇಕೆಂಬ ರೇಜಿಗೆಯಿಲ್ಲದ್ದದು, ಯಾರು ಬೇಕಾದರೂ ಉಚಿತವಾಗಿ ಬಳಸಬಹುದಾದ ದತ್ತಾಂಶ Open Source ಗಳ ಪರಿಕಲ್ಪನೆಯನ್ನು ಹುಟ್ಟಿಹಾಕಿದ್ದೇ Unix ನ ಮತ್ತೊಂದು ರೂಪ Linux. ಇರಲಿ, ಆ Linux ಅನ್ನು ರೂಪಿಸುವಲ್ಲಿಯೂ ಕೆನ್ ಥಾಮ್ಸನ್ ಅನುವವರೊಂದಿಗೆ ಕೈ ಜೋಡಿಸಿದ್ದು ಇದೇ ರಿಚ್ಚಿ.

ಸರಿ, ಪ್ರೋರ್ಗಾಮಿಂಗ್ ಭಾಷೆಯನ್ನು , ಇನ್ನೊಂದು ಕಂಪ್ಯೂಟರ್ ಭಾಷೆಯನ್ನು ಕಂಡುಹಿಡಿದಾಕ್ಷಣ ಅದು ಮಹಾನ್ ಸಾಧನೆಯೇ ಎಂಬ ಸಂದೇಹ ಈಗಾಗಲೇ ಬಂದಿದ್ದರೆ ಅದನ್ನು ಪರಿಹರಿಸಲೋಸುಗ ಈ ಕೆಲವು ಸಾಲುಗಳು..ರಿಚ್ಚಿ ಸತ್ತ ದಿನ ಅವರ ದೀರ್ಘ ಕಾಲೀನ ಸಹೋದ್ಯೋಗಿ ರೋಬ್ ಪೈಕ್ ಸೂಚಿಸಿದ ಸಂತಾಪ ನುಡಿಗಳಿಂದ.

ಮತ್ತಷ್ಟು ಓದು »

25
ನವೆಂ

ನಮ್ಮೂರ ಕನ್ನಡ ರಾಜ್ಯೋತ್ಸವ – ‘ಕೆಳದಿ’

ಪ್ರಹಸ್ತಿ ಪಿ.

ಶಿವಮೊಗ್ಗ ಜಿಲ್ಲೆಯ ಸುತ್ತಮುತ್ತಲಿರೋರಿಗೆ ಕೆಳದಿಯ ಬಗ್ಗೆ ಗೊತ್ತೇ ಇರುತ್ತದೆ. ಹೊಸಬರಿಗೆ ಹೇಳಬೇಕೆಂದರೆ, ನೀವು ಜಗತ್ಪ್ರಸಿದ್ಧ ಜೋಗ ಜಲಪಾತದ ಹೆಸರನ್ನು ಕೇಳಿಯೇ ಕೇಳಿರುತ್ತೀರಿ. ಅದಕ್ಕೆ ಹೋಗಬೇಕಾದರೆ ಸಾಮಾನ್ಯವಾಗಿ ಸಾಗರಕ್ಕೆ ಬಂದೇ ಹೋಗುತ್ತಾರೆ. ಸಾಗರದಿಂದ ಎಂಟು ಕಿ.ಲೋ ಮೀಟರು ದೂರವಿರುವ ಊರು ಕೆಳದಿ. ಇಲ್ಲಿಯ ಪಾಳೇಗಾರ ಶಿವಪ್ಪನಾಯಕ, ರಾಣಿ ಚೆನ್ನಮ್ಮ… ಈ ಹೆಸರುಗಳನ್ನು ಎಲ್ಲೋ ಕೇಳಿದ/ಓದಿದ ನೆನಪಾಗುತ್ತಿದೆಯೇ? ಹಾ ಅದೇ ಕೆಳದಿ. ಅದರ ಹತ್ತಿರವೇ ನಮ್ಮೂರು.

ಪ್ರತೀವರ್ಷವೂ ಕನ್ನಡ ರಾಜ್ಯೋತ್ಸವ ಬಂತೆಂದರೆ ನಮಗೆಲ್ಲಾ ಹಬ್ಬದ ವಾತಾವರಣ.ಹಂಪಿಯಿಂದ ಕೆಳದಿಗೆ ಬರುತ್ತಿದ್ದ ವಿದ್ಯಾರಣ್ಯ ಜ್ಯೋತಿಯದು ಕೆಳದಿಯಿಂದ ಸಾಗರದವರೆಗೆ ಮೆರವಣಿಗೆ..ಆ ಸಂದರ್ಭವೆಂದರೆ ನಮಗೆಲ್ಲಾ ಸಂಭ್ರಮವೋ ಸಂಭ್ರಮ.ಪ್ರತೀ ಮನೆಯೆದುರ ರಸ್ತೆಯನ್ನೂ ತೊಳೆದು ಎಳೆದ ದೊಡ್ಡದೊಡ್ಡ ರಂಗೋಲಿಗಳು,”ವಿದ್ಯಾರಣ್ಯ ಜ್ಯೋತಿಗೆ ಸ್ವಾಗತ”, “ರಾಜ್ಯೋತ್ಸವದ ಶುಭಾಶಯಗಳು” ಇತ್ಯಾದಿ ಬರಹಗಳೇನು, ಪ್ರತೀ ಹಳ್ಳಿಯ ಬಾಗಿಲುಗಳಲ್ಲಿ, ಹೆಚ್ಚೆಚ್ಚು ಮನೆಗಳಿದ್ದ ಕಡೆ ಹೀಗೆ ಸಾಲು ತೋರಣಗಳೇನು, ಪೇಟೆ ಹತ್ತಿರ ಸಾಗುತ್ತಿದ್ದಂತೆ ಸಾಲು ಸಾಲು ವಿದ್ಯುತ್ ದೀಪಗಳೇನು..ಅಬ್ಬಾ!! ಜ್ಯೋತಿಯೊಂದಿಗೆ ಎಂಟು ಕಿಲೋಮೀಟರಿಗಿಂತಲೂ ದೂರ ಸಾಗುವುದೆಂದರೆ ಒಂದು ಅವಿಸ್ಮರಣೀಯ ಅನುಭವ.. ವಿದ್ಯಾರಣ್ಯರು ಹಕ್ಕ-ಬುಕ್ಕರ ಗುರುಗಳಲ್ಲವೇ, ಆ ವಿಜಯನಗರ ಸಾಮ್ರಾಜ್ಯಕ್ಕೂ ಕೆಳದಿಗೂ, ಅವರ ಹೆಸರಿನ ಜ್ಯೋತಿಗೂ , ನಾನು ಹೇಳಹೊರಟಿರುವ ಮೆರವಣಿಗೆಗೂ ಎಲ್ಲಿಂದೆಲ್ಲಿಯ ಸಂಬಂಧವಯ್ಯಾ ಅಂತ ಸಂದೇಹ ಶುರು ಆಯ್ತಾ? ತಡೀರಿ ಒಂದೊಂದಾಗಿ ಹೇಳುತ್ತಾ ಹೋಗ್ತೇನೆ. ಮುಂದೆ ಓದಿ.

ವಿಜಯನಗರದ ಕೃಷ್ಣದೇವರಾಯನ ಕಾಲದಲ್ಲಿ ಕೆಳದಿಯ ಸಾಮಾನ್ಯ ರೈತನೊಬ್ಬನಾದ ಭದ್ರಗೌಡನೆಂಬುವನಿಗೆ ನಿಕ್ಷೇಪ ದೊರೆತು ಅದರಿಂದ ಅವನು ಪಾಳೆಯವನ್ನು ಕಟ್ಟಿಕೊಂಡನಂತೆ. ಅವನ ಪರಾಕ್ರಮಕ್ಕೆ ಮೆಚ್ಚಿ ಕೃಷ್ಣದೇವರಾಯ ಅವನಿಗೆ ಎಂಟು ಮಾಗಣಿಗಳ ನಾಯಕತ್ವವನ್ನು ಕೊಟ್ಟನೆಂದು ಇತಿಹಾಸವಿದೆ .ಕಾಲ ಕಳೆದಂತೆ ಸಂಸ್ಥಾನ ಬೆಳೆಯಿತು. ಕೆಳದಿ, ಇಕ್ಕೇರಿ, ಗೌರಿ ಬಿದನೂರು ಹೀಗೆ ಕೋಟೆ ಕೊತ್ತಲಗಳನ್ನು, ದೇವಾಲಯಗಳನ್ನು ಕಟ್ಟಿದರು. ಶಿವಪ್ಪನಾಯಕ, ಚೆನ್ನಮ್ಮ ರಾಣಿಯಂತಹವರು ಬಂದು ಹೋದರು.  ಕೆಳದಿಯ ವೀರಭದ್ರ ದೇವಸ್ಥಾನದ ಪ್ರಧಾನ ಬಾಗಿಲ ಬಳಿ ಶ್ರೀಕೃಷ್ಣನ ಸಣ್ಣ ವಿಗ್ರಹವಿದೆ. ಇದು ಅಂದಿನಾ ಘಟನೆಯ ಸವಿನೆನಪಿಗಾಗಿ ಎಂದು ಅನೇಕರು ಹೇಳುತ್ತಾರೆ.

೧೯೫೬ ರಲ್ಲಿ ಕರ್ನಾಟಕ ಏಕೀಕರಣವಾಯಿತು. ರಾಜ್ಯೋತ್ಸವ ಆಚರಣೆಗಳು ಪ್ರಾರಂಭವಾದವು. ೭೦ರ ದಶಕದ ಕೊನೆಭಾಗದಲ್ಲಿ ರಾಜ್ಯೋತ್ಸವ ಆಚರಣೆಯ ಭಾಗವಾಗಿ ಇತಿಹಾಸ ಪ್ರಸಿದ್ದ ಸ್ಥಳಗಳಿಂದ ಜ್ಯೋತಿಯೊಂದನ್ನು ತಂದು ಮೆರವಣಿಗೆ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತಂತೆ. ಅದಾಗಿ ಕೆಲಸಮಯದಲ್ಲಿ ಅಂದರೆ ಈಗ್ಗೆ ಸುಮಾರು ಇಪ್ಪತ್ತು ವರ್ಶಗಳ ಹಿಂದಿಂದ ಕೆಳದಿಯಿಂದ ಜ್ಯೋತಿಯ ಮೆರವಣಿಗೆ ನಡೆಸುವ ಸಂಪ್ರದಾಯ ಶುರುವಾಗಿದೆ ಅಂತ ಅಲ್ಲಿನ ಹಿರಿಯರು ಹೇಳುತ್ತಾರೆ. ಮೊದಲಿಗೆ ನವೆಂಬರ್ ಒಂದರ ಹಿಂದಿನ ರಾತ್ರಿ ಹಂಪಿಯಿಂದಲೇ ವಿದ್ಯಾರಣ್ಯ ಜ್ಯೋತಿ ಕೆಳದಿಗೆ ಬರುತ್ತಿತ್ತಂತೆ. ಜೀಪಲ್ಲಿ ಹಿಂದಿನ ದಿನ ಮಧ್ಯರಾತ್ರಿಯ ಹೊತ್ತಿಗೆ ಕೆಳದಿಗೆ ಬರುತ್ತಿತ್ತು ಆ ಜ್ಯೋತಿ.  ಮಧ್ಯರಾತ್ರಿ ಎಷ್ಟೊತ್ತಾದರೂ ಕೆಳದಿಗೆ ಬಂದೇ ತಲುಪುತ್ತಿದ್ದ ಜ್ಯೋತಿ ಹೊತ್ತು ತಂದವರು ಕೆಳದಿ ದೇಗುಲದ ಪ್ರಾಂಗಣದಲ್ಲೇ ಮಲಗಿರುತ್ತಿದ್ದರಂತೆ. ನಂತರ ಬೆಳಗ್ಗೆ ಆರೂ ಮುಕ್ಕಾಲರ ಹೊತ್ತಿಗಾಗಲೇ ಅದಕ್ಕೆ ಪೂಜೆಯಾಗಿ ಕೆಳದಿ ರಾಮೇಶ್ವರ ದೇವಸ್ಥಾನದಿಂದ ಸಾಗರದ ಕಡೆಗೆ ಹೊರಡುತ್ತಿತ್ತು.

ಮತ್ತಷ್ಟು ಓದು »

25
ನವೆಂ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 12 -ಯಕ್ಷಗಾನ ತಾಯಿಯ ಮಡಿಲಲ್ಲಿ ಬೆಳೆದ ಮಕ್ಕಳು

-ರಾಮಚಂದ್ರ ಪಿ

ಶಿರ್ವದಲ್ಲಿ ಆಟ ಮುಗಿದ ತರುವಾಯ, ಮುಂದಿನ ಪ್ರದರ್ಶನಕ್ಕೆ ನನಗೆ ಅವಕಾಶ ಕೊಡಿ ಎಂದು ಬೇಡುವ ಸಂದರ್ಭ ಬರಲೇ ಇಲ್ಲ. ನಾನು ಬಣ್ಣ ತೆಗೆಯುತ್ತಿದ್ದಲ್ಲಿಗೆ ಬಂದ ಕಟ್ಪಾಡಿಯ ಶ್ರೀ ಮುದ್ದು ಸುವರ್ಣರು ನಮ್ಮೂರಿಗೆ ಬನ್ನಿ ಎಂದು ವೀಳ್ಯ ಕೊಟ್ಟರು. ಅವರ ಹಿಂದೆಯೇ ಇನ್ನಿಬ್ಬರು ಬಂದರು. ಅವರಿಗಿಂತಲೂ ಮೊದಲೇ 3 ಆಟಗಳಿಗೆ ವೀಳ್ಯ ಪಡೆದಿದ್ದ ಫಲಿಮಾರಿಗೆ, ಮಾತು ಕೊಟ್ಟಂತೆ ಹೋಗಿ ಆಟಗಳನ್ನು ಆಡಿದೆವು.

ಅಲ್ಲಿಯೂ “ಬ್ರಹ್ಮ ಕಪಾಲ”. ಅದನ್ನು ನೋಡಲು ಉಡುಪಿ, ಮಲ್ಪೆ, ಕಲ್ಯಾಣಪುರಗಳಿಂದ ಜನರು ಬಂದಿದ್ದರು. ಅವರೆಲ್ಲ ಹಿಂತಿರುಗಿದಾಗ ಮಾಡಿದ್ದ ಪ್ರಚಾರವೇ ನಾವು ಕಟ್ಪಾಡಿ-ಕಾಪುಗಳ ಆಟ ಮುಗಿಸಿ, ಮಲ್ಪೆಯ ಸಮೀಪದ ಕ್ರೋಢಪುರಕ್ಕೆ (ಅದಕ್ಕೆ ಶಂಕರ ನಾರಾಯಣವೆಂಬ ಹೆಸರೂ ವಾಡಿಕೆಯಲ್ಲಿದೆ) ಬಂದಾಗ, ನಮಗೆ ಬಡಗು ನಾಡಿನಿಂದ ಅನಿರೀಕ್ಷಿತ ಸ್ವಾಗತವನ್ನು ಕೊಡಿಸಿತು.

“ವಿಶ್ವಾಮಿತ್ರ-ಮೇನಕೆ” ಮತ್ತು “ಕಂಸವಧೆ” ಎಂಬ ಎರಡು ಕಥಾಭಾಗಗಳನ್ನು ಇರಿಸಿಕೊಂಡು ಕ್ರೋಢಪುರದಲ್ಲಿ ನಾವು ಆಟವಾಡಿದೆವು. ಮೊದಲು ವಿಶ್ವಾಮಿತ್ರನಾಗಿಯೂ,ಅನಂತರ ಕೃಷ್ಣನಾಗಿಯೂ ಪಾತ್ರ ವಹಿಸಿದ ನಾನು, ಪ್ರೇಕ್ಷಕರ ಹರ್ಷಭರಿತ ಕರತಾಡನಗಳ ಆನಂದವನ್ನು ಅನುಭವಿಸುತ್ತಿದ್ದೆ. ಜನಸಮೂಹದಲ್ಲಿದ್ದ, ಅಲ್ಲಿನ ಪಂಡಿತರೊಬ್ಬರು ನಮಗೆಲ್ಲ ಹಾರ ಸಮರ್ಪಣೆ ಮಾಡಿದರು.

ನಡುವೆ, ಅಂತಹ ಕಾರಣದಿಂದ ಕೆಲವು ನಿಮಿಷಗಳ ಕಾಲ ಬಿಡುವು ದೊರೆತರೆ, ಮುಂದಿನ ಆಟ ನಡೆಯಲಿರುವ ಸ್ಥಳವನ್ನು ರಂಗಸ್ಥಳದಿಂದ ಕರೆದು ಹೇಳುವ ಪದ್ಧತಿ. ಮುಂದಿನ ಒಂದು ದಿನದ ವಿವರವನ್ನು ಸಾರಲೆಂದು ಹಾಸ್ಯಗಾರರು ರಂಗಸ್ಥಳವನ್ನು ಸೇರುವಾಗಲೇ ಅವರ ಕೈಗೆ ಆರು ಕಡೆಗಳ ಆಟ ನಿರ್ಣಯವಾದ ಚೀಟಿ ಸೇರಿತು. ಅವುಗಳನ್ನೂ ಹೇಳತೊಡಗಿದಾಗ ಇನ್ನೂ ಕೆಲವು ಸ್ಥಳಗಳೂ ತಾರೀಕುಗಳೂ ಸೂಚಿಸಲ್ಪಟ್ಟವು. ಬೇಡಿಕೆ ಹೆಚ್ಚುವ ಸೂಚನೆ ಕಂಡು ಬಂದಾಗ, ಮುಂದಿನ ಎಲ್ಲ (ನಿಶ್ಚಯವಾದ) ಆಟಗಳ ಕುರಿತು ಸ್ಥಳ ಮತ್ತು ತಾರೀಕುಗಳ ಒಂದು ಯಾದಿಯನ್ನು ತಯಾರಿಸಿ ಅವರ ಕೈಗೆ ಕೊಟ್ಟಾಗ, ಒಟ್ಟು 33 ಆಟಗಳು ನಿಶ್ಚಯವಾದುದು ಗೊತ್ತಾಯಿತು.
ಮತ್ತಷ್ಟು ಓದು »

24
ನವೆಂ

ಸಿಟಿ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳು ಹ್ಯಾಕ್ ಆದದ್ದಾದರೂ ಹೇಗೆ?

-ಓಂ ಶಿವಪ್ರಕಾಶ್

ಇತ್ತೀಚೆಗೆ ನ್ಯೂಯಾರ್ಕ್ ಟೈಮ್ಸ್ ನಲ್ಲೊಂದು ದೊಡ್ಡ ಸುದ್ದಿ. ೨ಮಿಲಿಯನ್ ಸಿಟಿಬ್ಯಾಂಕ್ ಗ್ರಾಹಕರ ಅಕೌಂಟುಗಳು, ಹೆಸರು, ಕ್ರೆಡಿಟ್ ಕಾರ್ಡುಗಳ ಸಂಖ್ಯೆ, ವಿಳಾಸ ಜೊತೆಗೆ ಇ-ಮೈಲ್ ಎಲ್ಲವೂ ಹ್ಯಾಕರ್‌ಗಳ ಕೈಗೆ ಸಿಕ್ಕಿವೆ ಎಂದು. ಇದು ಸಾಧ್ಯವಾದದ್ದಾದರೂ ಹೇಗೆ? ಇಲ್ಲಿದೆ ಒಂದು ಸಣ್ಣ ಇಣುಕು ನೋಟ.

ಸಿಟಿಬ್ಯಾಂಕ್ ಆನೈಲ್ ಖಾತೆಗೆ ಲಾಗಿನ ಆಗಿ ಬ್ರೌಸರ್‌ನ ಅಡ್ರೆಸ್ ಬಾರ್‌ನಲ್ಲಿ ಬರುವ ವಿಳಾಸವನ್ನು ಸೂಕ್ಷ್ಮವಾಗಿ ಗಮನಿಸಿದಾಗ ನಿಮ್ಮ ಅಕೌಂಟ್ ನಂಬರ್ ಅದರಲ್ಲಿ ಸುಲಭವಾಗಿ ಕಾಣಿಸುತ್ತದೆ. ಉದಾಹರಣೆಗೆ  citibank.com/user/12345 . ಇಲ್ಲಿ ಕಂಡುಬರುವ ಸಂಖ್ಯೆಯನ್ನು ಮತ್ತೊಂದು ಸಂಖ್ಯೆಗೆ  citibank.com/user/123456 ಬದಲಿಸಿದರೆ ನೀವು ಮತ್ತಾವುದೋ ಗ್ರಾಹಕನ ಖಾತೆಯನ್ನು ಹೊಕ್ಕಲು ಸಾದ್ಯ ಎಂಬ ಅಂಶವನ್ನು ಅರಿತ ತಂಡವೊಂದು ಸುಲಭವಾಗಿ ಮಿಲಿಯನ್ ಗಟ್ಟಲೆ ಗ್ರಾಹಕರ ಜೇಬನ್ನು ಹೊಕ್ಕಲು ಅಣಿಯಾಗಿವೆ.
ಮೇಲೆ ತಿಳಿದಷ್ಟು ವಿಷಯವಷ್ಟೇ ಗೊತ್ತಿದ್ದರೆ ಸಾಕು ಒಂದು ವೆಬ್‌ಸೈಟ್‌ನಿಂದ ತಮಗೆ ಬೇಕಿರುವ ಮಾಹಿತಿಗಳನ್ನು ಸುಲಭವಾಗಿ ಇಳಿಸಿಕೊಳ್ಳಲು ಸಣ್ಣ ಸ್ಕ್ರಿಪ್ಟ್ ಒಂದನ್ನು ಬರೆದು ಕೆಲಸವನ್ನು ಸರಾಗಗೊಳಿಸಿಕೊಳ್ಳಬಹುದು. ಕೆಲವು ವರ್ಷ ಇಂಟರ್ನೆಟ್ ನಲ್ಲಿ ಸುತ್ತಾಡಿರುವವನಿಗೆ ಇಂತದ್ದೊಂದು ಕೆಲಸ ನೀರು ಕುಡಿದಷ್ಟೇ ಸುಲಭ. ಮಕ್ಕಳು ಕೂಡಾ ಹ್ಯಾಕ್ ಮಾಡಬಲ್ಲಂತಹ ದೋಷವೊಂದನ್ನು, ಜಗತ್ತಿಗೇ ೨೪ ತಾಸು ಹಣಕಾಸು ವ್ಯವಸ್ಥೆ ನೀಡುವ ಬ್ಯಾಕಿಂಗ್ ಸಂಸ್ಥೆಯೊಂದು ತೆರೆದಿಟ್ಟದ್ದು ಬಹಳ ನಾಚಿಕೆಗೇಡಿನ ವಿಷಯವಾಗಿದೆ. ಜೊತೆಗೆ ಆನ್ಲೈನ್ ಬ್ಯಾಂಕಿಂಗ್ ಎಷ್ಟೇ ಸುರಕ್ಷಿತವಾಗಿದ್ದರೂ ಕೆಲವೊಂದು ಮನುಷ್ಯನ ಕಣ್ತಪ್ಪಿನಿಂದಾಗಿ ಆಗಬಹುದಾದ ಅಚಾತುರ್ಯ ಹೇಗೆ ೨೧ನೇ ಶತಮಾನದಲ್ಲಿ ವಿಶ್ವವನ್ನೇ ಅಲುಗಾಡಿಸಬಹುದೆಂಬುದನ್ನು ಈ ಘಟನೆ ತಿಳಿಸುತ್ತದೆ.
ದೊಡ್ಡ ದೊಡ್ಡ ವ್ಯಾವಹಾರಿಕ ಸಂಬಂದಗಳಿಗೆ ಇಂದು ಇಂಟರ್ನೆಟ್‌ನ ಅನೇಕ ತಾಣಗಳು ಆನ್‌ಲೈನ್ ಬ್ಯಾಂಕಿಗ್ ವ್ಯವಸ್ಥೆಯನ್ನು ಬಳಸುತ್ತವೆ. ಹೀಗೆ ಆನ್‌ಲೈನ್ ಬ್ಯಾಂಕಿಂಗ್ ವ್ಯವಸ್ಥೆ ಬಳಸುವಾಗ ಅನೇಕ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದು ಕೊಳ್ಳಬೇಕಾಗುತ್ತದೆ. PCI DSS (Payment Card Industry Data Security Standard) ಎಂಬ ಇನ್ಮಾರ್ಮೇಷನ್ ಸ್ಟಾಂಡರ್ಡ್‌ಗಳಿಗೆ ಅನುಗುಣವಾಗಿ ತಮ್ಮ ತಾಣಗಳನ್ನು ಸುರಕ್ಷತೆಯ ಕವಚಕ್ಕೆ ಒಳಪಡಿಸಬೇಕಾಗುತ್ತದೆ. ಆದರೆ ಬ್ಯಾಂಕಿನ ತಾಣವೇ ಈ ನಿಯಮಗಳನ್ನು ಪಾಲಿಸದಿದ್ದಲ್ಲಿ ಬ್ಯಾಂಕನ್ನು ನಂಬಿದ ಗ್ರಾಹಕನ ಸ್ಥಿತಿ ನೇಣುಗಂಬಕ್ಕೆ ತಂತಾನೇ ಕೊರಳುಕೊಟ್ಟಂತಾಗುತ್ತದೆ.
24
ನವೆಂ

ಸಂಸ್ಕೃತಿ ಸಂಕಥನ – ೧೨- ಭಾರತದಲ್ಲಿರುವ ಜಾತಿಗಳು ಒಂದು ‘ವ್ಯವಸ್ಥೆ’ ಅಲ್ಲ

– ರಮಾನಂದ ಐನಕೈ

ಭಾರತದಲ್ಲಿರುವ ಜಾತಿಗಳು ಒಂದು ‘ವ್ಯವಸ್ಥೆ’ ಅಲ್ಲ

ಕೆಲವು ವೈದ್ಯರಿರುತ್ತಾರೆ. ಔಷಧಿ ಕೊಟ್ಟಾಕ್ಷಣ ರೋಗ ವಾಸಿಯಾಗುತ್ತದೆ. ನಾವಂದುಕೊಳ್ಳುತ್ತೇವೆ ‘ಅವರು ತುಂಬಾ ಚೆನ್ನಾಗಿ ಔಷಧಿ ಕೊಡುತ್ತಾರೆ’ ಎಂದು. ಹಾಗಾದರೆ ಮಾರುಕಟ್ಟೆಯಲ್ಲಿ ಎಷ್ಟೊಂದು ವೈವಿಧ್ಯಮಯವಾದ ಔಷಧಿಗಳು ಸಿಗುತ್ತವೆ. ಎಲ್ಲ ವೈದ್ಯರು ಕೊಡಬಹುದಲ್ಲ? ಇಲ್ಲೇ ಇದೆ ಸೂಕ್ಷ್ಮ. ವೈದ್ಯರ ಯಶಸ್ಸು ಇರುವುದು ಔಷಧಿ ಕೊಡುವುದರಲ್ಲೊಂದೇ ಅಲ್ಲ. ಅದಕ್ಕಿಂತ ಮುಖ್ಯವಾಗಿ ವ್ಯಕ್ತಿಯಲ್ಲಿರುವ ರೋಗ ಪತ್ತೆಮಾಡುವುದರಲ್ಲಿರುತ್ತದೆ. ಒಮ್ಮೆ ರೋಗ ಗೊತ್ತಾದರೆ ಅದಕ್ಕೆ ಔಷಧ ಯಾವುದೆಂಬುದು ವೈದ್ಯಕೀಯ ಸಾಮಾನ್ಯಜ್ಞಾನ.

ಸದ್ಯದ ಸಮಾಜವಿಜ್ಞಾನ ಪ್ರಕಾರ ಭಾರತೀಯ ಸಮಾಜದ ಪರಿಸ್ಥಿತಿಯೂ ಇದೇ ಆಗಿದೆ. ಭಾರತೀಯ ಸಮಾಜ ವ್ಯವಸ್ಥೆ ಸರಿಯಾಗಿಲ್ಲ. ಮೌಢ್ಯ ಮತ್ತು ಅಸಮಾನತೆಯಿಂದ ಕೊಳೆಯುತ್ತ ರೋಗಗ್ರಸ್ತವಾಗಿವೆ ಎಂಬುದು ಚಿಂತಕರ ಅಭಿಮತ. ಜಾತಿವ್ಯವಸ್ಥೆ ಭಾರತೀಯಸಮಾಜಕ್ಕೆ ಅಂಟಿಕೊಂಡ ದೊಡ್ಡ ರೋಗ. ಹಾಗಾಗಿ ಈ ರೋಗ ಹೋಗಬೇಕಾದರೆ ಜಾತಿವ್ಯವಸ್ಥೆಯನ್ನು ಆಮೂಲಾಗ್ರವಾಗಿ ನಾಶಮಾಡಬೇಕು ಎಂಬ ಮಾತು ದಿನನಿತ್ಯ ಕೇಳಿಬರುತ್ತವೆ. ಭಾರತೀಯ ಸಮಾಜಕ್ಕೆ ಈ ರೀತಿಯ ರೋಗವಿದೆಯೆಂಬ ತಿಳುವಳಿಕೆ ಎಲ್ಲಿಂದ ಬಂತು? ಇದು ನಿಜವಾಗಿಯೂ ರೋಗ ಹೌದೋ ಎಂಬುದರ ಬಗ್ಗೆ ನಾವು ಚಿಂತಿಸಿಲ್ಲ. ನೂರಾರು ವರ್ಷಗಳಿಂದ ಹಲವಾರು ರೀತಿಯ ಔಷಧ ಮಾಡುತ್ತಲೇ ಬಂದಿದ್ದೇವೆ. ರೋಗ ಗುಣಾಗುವುದರ ಬದಲು ಉಲ್ಭಣಿಸುತ್ತ ಬಂದಿದೆ. ಅಂದರೆ ನಾವು ರೋಗವನ್ನು ಗುರುತಿಸುವಲ್ಲಿ ವಿಫಲರಾಗಿದ್ದೇವೆ. ಹಾಗಾಗಿ ನಾವು ನೀಡುವ ಔಷಧಿಗಳು ವ್ಯರ್ಥವಾಗುತ್ತಿವೆ. ರೋಗ ಇಲ್ಲದೆಯೇ ಔಷಧ ಕೊಡುವುದು ಅಥವಾ ಸರಿಯಾದ ರೋಗಕ್ಕೆ ಸರಿಯಾದ ಔಷಧ ಕೊಡದೇ ಇರುವುದು ಯಾವತ್ತೂ ಅಪಾಯ. ಅದು ದೊಡ್ಡ ರೋಗಕ್ಕೆ ನಾಂದಿಯಾಗುತ್ತದೆ.

ಮತ್ತಷ್ಟು ಓದು »

23
ನವೆಂ

‘ಮಾಡಿದ್ದುಣ್ಣೋ ಮಹಾರಾಯ’- ಒಂದು ವಿಶ್ಲೇಷಣೆ

– ಗೋವಿಂದ ರಾವ್ ವಿ ಅಡಮನೆ

‘ಮಾಡಿದ್ದುಣ್ಣೋ ಮಹಾರಾಯ’, ‘ಬಿತ್ತಿದಂತೆ ಬೆಳೆ’ ಈ ಜಾಣ್ನುಡಿಗಳು ಪುನರ್ಜನ್ಮದ ಪರಿಕಲ್ಪನೆಯ ಹುಟ್ಟಿಗೆ ಕಾರಣವಾದ ಕರ್ಮಸಿದ್ಧಾಂತದ ತಿರುಳನ್ನು ಬಿಂಬಿಸುತ್ತವೆ. ಪಟ್ಟಭದ್ರ ಹಿತಾಸಕ್ತಿಗಳು ಈ ಉಕ್ತಿಗಳನ್ನು ತಮ್ಮ ಹಿತಾಸಕ್ತಿಗಳನ್ನು ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಅರ್ಥೈಸಿ ಮೂಢನಂಬಿಕೆಗಳನ್ನೂ ಕರುಡು ಸಂಪ್ರದಾಯಗಳನ್ನೂ ಹುಟ್ಟುಹಾಕಲು ಬಳಸಿಕೊಂಡಿವೆ, ಯಶಸ್ವಿಯೂ ಆಗಿವೆ.

ಪುನರ್ಜನ್ಮಪರ ವಾದಿಗಳು ಒದಗಿಸಿರುವ ಉದಾಹರಣೆಗಳನ್ನು ಆಧರಿಸಿ ಈ ಉಕ್ತಿಗಳ ಇಂಗಿತಾರ್ಥವನ್ನು ನಾನು ವಿವರಿಸುವ ಪರಿ ಇಂತಿದೆ: ಭೌತಪ್ರಪಂಚದ ಆಗುಹೋಗುಗಳನ್ನು ನಿಯಂತ್ರಿಸಲು ಕಾರಕ-ಪರಿಣಾಮ ಆಧಾರಿತ ನೈಸರ್ಗಿಕ ನಿಯಮಗಳು ಇರುವಂತೆಯೇ ಮಾನವನ ಜೀವನವನ್ನು ನಿಯಂತ್ರಿಸಲೂ ಕಾರಕ-ಪರಿಣಾಮ ಆಧಾರಿತ ನೈಸರ್ಗಿಕ ನಿಯಮಗಳು ಇವೆ. ಈ ನಿಯಮಗಳನ್ನೇ ನಾವು ನೈತಿಕ ನಿಯಮಗಳು ಎಂದು ಉಲ್ಲೇಖಿಸುತ್ತೇವೆ. ಇವು ಸಾರ್ವಕಾಲಿಕ, ಸಾರ್ವದೇಶಿಕ ಮತ್ತು ಸಾರ್ವತ್ರಿಕ. ಭೌತಪ್ರಪಂಚದ ನೈಸರ್ಗಿಕ ನಿಯಮಗಳು ಹೇಗೆ ಅನುಲ್ಲಂಘನೀಯವೋ ಅಂತೆಯೇ ಇವೂ ಕೂಡ. ಎಲ್ಲ ನೈಸರ್ಗಿಕ ನಿಯಮಗಳೂ ಅನಾದಿ ಹಾಗೂ ಅನಂತ್ಯ, ಯಾರೋ ಮಾಡಿದ ನಿಯಮಗಳು ಇವಲ್ಲವಾದ್ದರಿಂದ. ಭೌತಪ್ರಪಂಚದಲ್ಲಿ ಲಾಗೂ ಆಗುವ ನಿಯಮಗಳೇ ಆಧುನಿಕ ವಿಜ್ಞಾನಗಳ ಅಧ್ಯಯನ ವಸ್ತು. ನೈಸರ್ಗಿಕ ನೈತಿಕ ನಿಯಮಗಳನ್ನು ಅಧ್ಯಯಿಸಲು ಆಧುನಿಕ ವಿಜ್ಞಾನಗಳಿಗೆ ಸಾಧ್ಯವಾಗಿಲ್ಲ. ವಿವಿಧ ಮತಗಳ ಆಧಾರ ಗ್ರಂಥಗಳಲ್ಲಿ ಈ ನೈತಿಕ ನಿಯಮಗಳನ್ನು ಪಟ್ಟಿ ಮಾಡುವ ಪ್ರಯತ್ನಗಳು ಆಗಿವೆಯಾದರೂ ಸರ್ವಮಾನ್ಯವಾದ ಪಟ್ಟಿಮಾಡಲು ಸಾಧ್ಯವಾಗಿಲ್ಲದಿರುವುದು,  ಪಟ್ಟಿ ಮಾಡಿರುವ ನಿಯಮಗಳ ಅನುಸರಣೆ ಅಥವ ಉಲ್ಲಂಘನೆಯ ಪರಿಣಾಮಗಳ ಕುರಿತಾಗಿ ಇರುವ ಭಿನ್ನಾಭಿಪ್ರಾಯಗಳು ಅನೇಕ ಹಿಂಸಾಕೃತ್ಯಗಳ ಹುಟ್ಟಿಗೆ ಕಾರಣವಾಯಿತು.  ಭೌತನಿಯಮಗಳಂತೆಯೇ ಇವೂ ಅನುಲ್ಲಂಘನೀಯವಾದವುಗಳು ಆಗಿದ್ದರೂ ನಿಯಮೋಲ್ಲಂಘನೆಯ ಪರಿಣಾಮಗಳಿಂದ ತಪ್ಪಿಸಿಕೊಳ್ಳಲು ಸಾಧ್ಯ ಎಂದು ಸಾರಿದ ‘ಪುರೋಹಿತ ವರ್ಗ’ (ಇವರು ಬೇರೆ ಬೇರೆ ಹೆಸರುಗಳಲ್ಲಿ ಎಲ್ಲ ಮತಗಳಲ್ಲಿಯೂ ಇದ್ದಾರೆ) ಅದಕ್ಕಾಗಿ ಅನೇಕ ಕಂದಾಚಾರಗಳನ್ನೂ ಮೂಢನಂಬಿಕೆಗಳನ್ನೂ ಹುಟ್ಟುಹಾಕಿತು, ಬೆಳೆಯಿಸಿತು, ಪೋಷಿಸಿತು. ಮುಖಸ್ತುತಿಗೆ ಮರುಳಾಗಿ ಅಥವ ಮಾಡಿದ ಅನೈತಿಕ ಕೃತ್ಯಕ್ಕೆ ಅನುಗುಣವಾಗಿ ಸಂಕೀರ್ಣತೆ ಮತ್ತು ವೆಚ್ಚ ಹೆಚ್ಚುವ ‘ಪೂಜೆ, ಹೋಮ, ಹರಕೆ, ನೈವೇದ್ಯ, ದಾನ’ ಇವೇ ಮೊದಲಾದ ‘ಪ್ರಾಯಶ್ಚಿತ್ತ’ಗಳನ್ನು ಮಾಡಿದರೆ  ಎಲ್ಲ ರೀತಿಯ ಅನೈತಿಕತೆಯನ್ನು ಮನ್ನಿಸುವ ‘ದೇವರ’ ಪರಿಕಲ್ಪನೆಯನ್ನು ಸ್ವಲಾಭಕ್ಕಾಗಿ ಸೃಷ್ಟಿಸಿ ಪೋಷಿಸಿದ್ದೂ ಇದೇ ವರ್ಗ. ಪುನರ್ಜನ್ಮ ಇರುವುದೇ ನಿಜವಾದರೆ, ಇಂಥ ‘ದೇವರ’ ಪರಿಕಲ್ಪನೆಯನ್ನು ಒಪ್ಪಿಕೊಳ್ಳುವುದಕ್ಕೆ ಬದಲಾಗಿ ಕರ್ಮಸಿದ್ಧಾಂತ ಸೂಚಿಸುವ ನೈಸರ್ಗಿಕ ನೈತಿಕ ನಿಯಮಾನುಸಾರ ಬಾಳ್ವೆ ನಡೆಸುವುದು ಉತ್ತಮ.

ಪುನರ್ಜನ್ಮಪರ ವಾದಿಗಳ ಒದಗಿಸುವ ಸಾಕ್ಷ್ಯಾಧಾರ ಎಂದು ನೀಡುತ್ತಿರುವ ಉದಾಹರಣೆಗಳನ್ನು ಕರ್ಮಸಿದ್ಧಾಂತದ ನೆಲೆಗಟ್ಟಿನಲ್ಲಿ ವಿಶ್ಲೇಷಿಸಿದರೆ ಮತಾತೀತವೂ ಕುಲಾತೀತವೂ ಲಿಂಗಾತೀತವೂ ಆದ ಕೆಲವು ನಿಯಮಗಳನ್ನು ಅನುಮಾನಿಸಬಹುದು (ಇನ್ ಫರ್). ಈ ರೀತಿ ಅನುಮಾನಿಸಿದ ಪ್ರಧಾನ ನಿಯಮಗಳು ಇಂತಿವೆ:

ಮತ್ತಷ್ಟು ಓದು »