ನಿಲುಮೆಯ ಓದುಗರಲ್ಲಿ ಭಿನ್ನಹ….
– ಅರೆಹೊಳೆ ಸದಾಶಿವ ರಾವ್
‘ನಿಲುಮೆಯ’ ಓದುಗರೆಲ್ಲರಿಗೂ ನಮಸ್ಕಾರಗಳು
ಮು೦ದಿರುವ ಕನ್ನಡ ರಾಜ್ಯೋತ್ಸವದ ಶುಭ ಹಾರೈಕೆಗಳು.
ಇ೦ದಿನ ಪತ್ರಿಕಾ ರ೦ಗದಲ್ಲಿ ಅ೦ತರಜಾಲ ಮತ್ತು ಬ್ಲಾಗ್ ಗಳ ಕೊಡುಗೆ ನಿಜಕ್ಕೂ ಅಪಾರ ಮತ್ತು ವಿಸ್ಮಯ ಹುಟ್ಟಿಸುವಷ್ಟು ಬೆಳೆದು ನಿ೦ತಿದೆ. ಎಲ್ಲೋ ನನ್ನ ಪಾಡಿಗೆ ಪತ್ರಿಕೆಯೊ೦ದಕ್ಕೆ ಅ೦ಕಣ ಬರೆದು ಕುಳಿತಿದ್ದ ನನ್ನನ್ನು ನಿಲುಮೆಯ ನೀವೆಲ್ಲರೂ ಪ್ರೇತಿಯಿ೦ದ ಓದಿದ್ದೀರಿ….ಹರಸಿದ್ದೀರಿ…ಹಾರೈಸಿದ್ದೀರಿ. ನಿಮಗೆ ನಾನು ಋಣಿಯಾಗಿದ್ದೇನೆ.
ಮ೦ಗಳೂರಿನಲ್ಲಿ ವಿಶಿಷ್ಟವಾದ ಲಯನ್ಸ್ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಾವು ಆಯೋಜಿಸಿದ್ದು ತಮಗೂ ತಿಳಿದಿರಬಹುದು. ಅದು ಸಾಹಿತ್ಯಿಕ ವಲಯದಲ್ಲಿ ಒ೦ದು ವಿಶಿಷ್ಟ ದಾಖಲೆಯಾಗಿ ಉಳಿದಿದೆ. ಅದು ನನ್ನ ಒ೦ದು ಕನಸಾಗಿತ್ತು. ಅದಾದ ನ೦ತರ, ಶಿಕ್ಷಣ, ಕಲೆ, ಸಾಹಿತ್ಯ ಮತ್ತು ಸ೦ಸ್ಕ್ರತಿಗನ್ನು ಧ್ಯೇಯವಾಗಿಟ್ಟುಕೊ೦ಡು ಆರ೦ಭಿಸಿದ ಸ೦ಸ್ಥೆ ‘ಅರೆಹೊಳೆ ಪ್ರತಿಷ್ಠಾನ’. ಇದರ ಮೂಲಕ ನನ್ನ ಕೈಲಾದ ನೆಅರವನ್ನು ನಾಲ್ಕು ಕ್ಷೇತ್ರಗಳಲ್ಲಿ ಮಾಡುತ್ತಿದ್ದು, ಸಹ್ರದಯಿಗಳ ಪ್ರೋತ್ಸಾಹವೇ ಈ ಎಲ್ಲದಕ್ಕೂ ಕಾರಣವೆ೦ದು ನಾನು ಭಾವಿಸಿದ್ದೇನೆ.
ನನ್ನ ಮತ್ತೊ೦ದು ಹೊಸ ಕನಸಿನ ಮೂಟೆ ಹೊತ್ತು ಇ೦ದು ನಿಮ್ಮೆದುರು ಬ೦ದಿದ್ದೇನೆ. ಕೆಲವು ದಿನಗಳ ಕಾಲ ನನ್ನ ಬರಹ ಕ್ರಷಿ ನಿ೦ತು ಹೋಗಿತ್ತು. ಅದಕ್ಕೆ ಮುಖ್ಯ ಕಾರಣವೆ೦ದರೆ ನಾನು ಮತ್ತು ಒ೦ದು ಕೆಲಸವನ್ನು ಮೈ ಮೇಲೆ ಹಾಕಿಕೊ೦ಡಿದ್ದೆ. ನನ್ನ ಬಹುದಿನಗಳ ಕನ್ಸೊ೦ದಕ್ಕೆ ಜೀವ ಕೊಡುವ ಹುನ್ನಾರಿನಲ್ಲಿ ನಾನು ಅದರಲ್ಲಿ ತಲ್ಲೀನನಾಗಿದ್ದೆ. ಅದೆ೦ದರೆ ಕನ್ನಡದಲ್ಲಿ ವಿಶಿಷ್ಟವಾದ ಒ೦ದು ಅ೦ತರ್ಜಾಲ ಪತ್ರಿಕೆಯನ್ನು ಪ್ರಕಟಿಸುವ ಕನಸು. ಅದೀಗ ನನಸಾಗುವ ಹ೦ತದಲ್ಲಿದೆ…..ಅದನ್ನು ಹೇಲಲೆ೦ದೇ ನನ್ನ ಈ ಬರಹ
ಅಶ್ಫಾಕುಲ್ಲಾ ಖಾನ್” — ದೇಶಭಕ್ತಿಯ ಮೂರ್ತರೂಪ..
– ಭೀಮಸೇನ್ ಪುರೋಹಿತ್
ಆಗಸ್ಟ್ 9 – 1925.. ಅವತ್ತಿನ ರಾತ್ರಿ ಭಾರತದ ಕ್ರಾಂತಿಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು ದಾಖಲಾದ ದಿನ.. ಇನ್ನೂ ಮೀಸೆ ಚಿಗುರದ ನವತರುಣರು ಆಂಗ್ಲಶಾಹಿಯೆದುರಿಗೆ ತೊಡೆತಟ್ಟಿ ನಿಂತ ದಿನ ಅದು.. ಅದೇ “ಕಾಕೋರಿ” ಪ್ರಕರಣ..
ಆ ಹೊತ್ತಿಗಾಗಲೇ, ಅಮೇರಿಕಾದ “ಗದರ್” ಪಾರ್ಟಿಯ ಪ್ರಖರತೆ ಕಮ್ಮಿಯಾಗಿತ್ತು. ಭಾರತದಲ್ಲಿ, ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಗದರ್ ಪಾರ್ಟಿಯ ಹಳೆಯ ಕೆಲವು ನಾಯಕರು ಸೇರಿ “ಹಿಂದುಸ್ತಾನ್ ರಿಪಬ್ಲಿಕನ್ ಅಸೋಸಿಯೇಶನ್” ಎಂಬ ಕ್ರಾಂತಿಸಮಿತಿಯನ್ನು ಶುರು ಮಾಡಿದ್ರು. ಗದರ್ ಪಾರ್ಟಿಯ ಪತನದ ನಂತರ ಕ್ರಾಂತಿ ತಣ್ಣಗಾಗಿದೆ ಅಂತ, ಆಂಗ್ಲರು ಈ HRA ಅನ್ನು ಉಪೇಕ್ಷಿಸಿದ್ದರು.. ಅವರ ಆ ಅಲಕ್ಸ್ಯವೇ ಕ್ರಾಂತಿಕಾರಿಗಳಿಗೆ ವಾರವಾಯಿತು..
ರಾಮಪ್ರಸಾದ್ ಮತ್ತು ಅಶ್ಫಾಕ್ ಇಬ್ರೂ ಜೀವಕ್ಕೆ ಜೀವ ಕೊಡೊ ಗೆಳೆಯರು.. ಅವರ ಸ್ನೇಹದ ನಡುವೆ ಧರ್ಮ ಯಾವತ್ತೂ ಅಡ್ಡಿ ಬರ್ಲಿಲ್ಲ.. ಹಾಗೆ ನೋಡಿದರೆ, ರಾಮ್, ಪಕ್ಕಾ ಅರ್ಯಸಮಾಜದ ಹಿಂದೂವಾದಿ. ಆದ್ರೆ ಅವನು ಅಶ್ಫಾಕ್ ನನ್ನು ಅಪಾರವಾಗಿ ಗೌರವಿಸುತ್ತಿದ್ದ. ಹಾಗೆಯೇ ಅಶ್ಫಾಕ್ ಕೂಡ ಯಾವಾಗಲೂ “ನನ್ನ ರಾಮ” ಅಂತಾನೆ ಜಪಿಸುತ್ತಿದ್ದ.. ಅಶ್ಫಾಕ್ ಉತ್ತರಪ್ರದೇಶದ ಷಹಜಹಾನ್ ಪುರದವನು. ಅಶ್ಫಾಕ್ ಒಬ್ಬ ಮಹಾನ್ ಉರ್ದು ಕವಿ ಕೂಡ ಆಗಿದ್ದ.. ಅತ್ಯಂತ ಉದ್ಬೋಧಕ ದೇಶಭಕ್ತಿ ಗೀತೆಗಳನ್ನು ಬರೆದ ಸಾಹಿತಿ ಅವನು.. ಅದೇ ಅಶ್ಫಾಕ್ ಬಿಸ್ಮಿಲ್ಲನ ಸಹವಾಸಕ್ಕೆ ಬಂದೊಡನೆ, ಅವನ ಪಟ್ಟಶಿಷ್ಯನಾಗಿ ದೇಶಕ್ಕೆ ಅರ್ಪಿಸಿಕೊಂಡಿದ್ದ..
ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು………..
– ಸುಬ್ರಮಣ್ಯ ಮಾಚಿಕೊಪ್ಪ
ಭ್ರಷ್ಟಾಚಾರದ ವಿರುದ್ದ ಹೋರಾಡಲು ಒಂದು ಹರಿತ ಆಯುಧಕ್ಕಾಗಿ ಉಪವಾಸ ಸತ್ಯಾಗ್ರಹಗಳೆಲ್ಲಾ ನಡೆದುದು ಎಲ್ಲರಿಗೂ ಗೊತ್ತಿರುವ ವಿಷಯವೇ. ಇನ್ನು ಸಿದ್ದವಾಗಿ ಬರಲಿರುವ ಲೋಕಪಾಲ್ ಮಸೂದೆ ಎಷ್ಟು ಹರಿತವೋ ಎಂಬುದನ್ನು ಕಾಲವೇ ಹೇಳಬೇಕು. ಭ್ರಷ್ಟಾಚಾರದ ವಿರುದ್ದ ಹೋರಾಡಲು ಈಗಾಗಲೇ ಒಂದು (ಸಾಕಷ್ಟು ಹರಿತವಾದ) ಆಯುದವಿದೆಯೆಂದು ಎಷ್ಟು ಜನಕ್ಕೆ ಗೊತ್ತು?? ಆ ಆಯುದವನ್ನು ಉಪಯೋಗಿಸಿ“ಅಲ್ಲಿ ಎನು ನಡಿಯುತ್ತಿದೆ?” ಎಂದು ತಿಳಿದುಕೊಂಡು ಭ್ರಷ್ಟಾಚಾರದ ಆಳವನ್ನು ಕಾಣಬಹುದು ಎಂಬುದು ಎಷ್ಟು ಜನರಿಗೆ ಗೊತ್ತಿದೆ?? ಆ ಆಯುದದ ಹೆಸರು ನಿಮಗೆಲ್ಲಾ ಎಲ್ಲೋ ಕೇಳಿ ಗೊತ್ತಿರಬಹುದು. ನಿಮ್ಮಲ್ಲಿ ಕೆಲವರಾದರೂ ಅದನ್ನು ಉಪಯೋಗಿಸಿಯೂ ಉಪಯೋಗಿಸಿರಬಹುದು. (ಕಾಮೆಂಟ್ ನಲ್ಲಿ ನಿಮ್ಮ ಅನುಭವ ಹೇಳಬಹುದು).ಅದೇ ಮಾಹಿತಿ ಹಕ್ಕು ಎಂಬ ಕಾನೂನು!!! ಈ ಲೇಖನ ಓದಿದ ಮೇಲೆ ಒಂದಿಬ್ಬರು ಇದನ್ನು ಉಪಯೋಗಿಸಿ“ಅಲ್ಲಿ ಎನು ನಡಿಯುತ್ತಿದೆ” ಎಂದು ತಿಳಿದುಕೊಂಡು ಸಂಬಂದಪಟ್ಟವರಿಗೆ ದೂರು ಕೊಟ್ಟರೆ ಕಾಮಗಾರಿಗಳು ಸ್ವಲ್ಪವಾದರೂ ಸರಿಯಾಗುತ್ತದೆ ಎಂಬುದೇ ನನ್ನ ಆಶಯ ಹಾಗೂ ನನ್ನ ಅನುಭವ. (ಹಾಗೆಲ್ಲಾ ಕಾಟಾಚಾರಕ್ಕೆ ಏನೇನೋ ಮಾಡದಂತೆ ಸ್ವಲ್ಪವಾದರೂ ಸರಿಯಾಗಿ ಕೆಲಸಮಾಡುವಂತೆ ಚುರುಕು ಮುಟ್ಟಿಸುತ್ತದೆ).ನಮ್ಮೂರ ರಸ್ತೆಯೊಂದರ ಕಳಪೆ ಡಾಮರ್ ಕಾಮಗಾರಿ ನಡೆದಾಗ – ಈ ಮಾಹಿತಿ ಹಕ್ಕು ಕಾನೂನು ಉಪಯೋಗಿಸಿ – ಕಾಮಗಾರಿಯ ಎಸ್ಟಿಮೆಶನ್ ತರಿಸಿ – ದೂರು ಕೊಡುತ್ತೇವೆಂದಾಗ – ಜಿಲ್ಲಾಪಂಚಾಯತ್ ಇಂಜೀನಿಯರ್ ಮತ್ತು ರಸ್ತೆ ಕಂಟ್ರಾಕ್ಟರ್ ನಮ್ಮ ಮನೆಯವರೆಗೂ ಪಾದಬೆಳೆಸಿ – ತಪ್ಪಾಗಿದ್ದನ್ನು ಒಪ್ಪಿಕೊಂಡು – ರಸ್ತೆಗೆ ಹೊಸದಾಗಿ ಜಲ್ಲಿ ಟಾರಿನ ಒಂದು ಪದರ ಹಾಕಿದ ವಿಷಯವೇ ಈ ಬ್ಲಾಗಿನ ಬರಹ. ಮತ್ತಷ್ಟು ಓದು