ಯಡಿಯೂರಪ್ಪ ರಾಜಕೀಯದಲ್ಲಿ ‘ಮಾಜಿ’ ಆಗಿದ್ದಾರೆಯೇ?
-‘ಸಿದ್ಧಾರ್ಥ‘
೩೩ ವರ್ಷಗಳ ವೃತ್ತಿ ಜೀವನದಲ್ಲಿ ಅರ್ಧಾಂಶಕ್ಕೂ ಹೆಚ್ಚು ಕಾಲ ಅಧಿಕಾರಕ್ಕೆ ರಾಜಕಾರಣಿಗಳ ಪತ್ರಿಕಾ ಕಾರ್ಯದರ್ಶಿಯಾಗಿ ಆಪ್ತ ಸಿಬ್ಬಂದಿ ವರ್ಗದಲ್ಲಿ ಕೆಲಸ ಮಾಡಿರುವ ನನಗೆ ಅಧಿಕಾರ ತರುವ ಸಂತೋಷ, ಅಧಿಕಾರ ತ್ಯಾಗದಿಂದ ಬರುವ ವಿಷಾದ ಎರಡನ್ನೂ ಅತೀ ಸಂಮೀಪದಿಂದ ನೋಡಿ ಅನುಭವಿಸುವ ಅವಕಾಶ ಸಿಕ್ಕಿದೆ. ಅಧಿಕಾರ ಹೋದ ಕೂಡಲೇ, ಚುನಾವಣೆ ಸೋತ ಕೂಡಲೇ, ಆಕಾಶವೇ ಕಳಚಿ ಬಿದ್ದಂತೆ ಮೂಲೆಗೆ ಬೀಳುವ ರಾಜಕಾರಣಿಗಳನ್ನು, ಹೋದದ್ದು ಅಧಿಕಾರ ತಾನೇ? ಎಂದು sportive DV ಆಗಿ ನಗು ಮುಖ ಧರಿಸುವ ಧುರೀಣರನ್ನು ನೋಡಿದ್ದೇನೆ. ಹೊಟ್ಟೆಯಲ್ಲಿನ ನೋವು, ಮತ್ಸರ, ಈರ್ಷೆಗೆ ಸಿಲುಕಿ ಉತ್ತರಾಧಿಕಾರಿಯ ಪ್ರಮಾಣ ವಚನ ಸಮಾರಂಭಕ್ಕೆ ಗೈರುಹಾಜರಾದ ನಿರ್ಗಮಿತ ಮುಖ್ಯಮಂತ್ರಿಗಳನೇಕರನ್ನು ನೋಡಿದ್ದೇನೆ. ಅಧಿಕಾರ ಗ್ರಹಣದ ನಂತರ ಖುದ್ದಾಗಿ ಕಛೇರಿಗೆ ಕೊಂಡೊಯ್ದು ಪ್ರತಿಷ್ಠಾಪಿಸಿ ಶುಭ ಹಾರೈಸಿ ಹಗುರ ಹೃದಯದೊಂದಿಗೆ ಖಾಸಗಿ ವಾಹನದಲ್ಲಿ ಮನೆಗೆ ತೆರಳಿದ ವಿವೇಕಿಗಳನ್ನು, ಸಾಮಾನ್ಯ ಶಾಸಕರಾಗಿ ಅತೀವ ಉತ್ಸ್ಸಾಹ ದಿಂದ ಶಾಸನ ಸಭೆಗೆ ಮರಳಿ ಕ್ರಿಯಾತ್ಮಕವಾಗಿ ಕಲಾಪಗಳಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡಿದ ಹಿರಿಯರನೇಕರ ಮಾತುಗಳು ನನ್ನ ಕಿವಿಗಳಲ್ಲಿ ಇನ್ನೂ ರಿಂಗಣಿಸುತ್ತಿವೆ.
ಇವೆಲ್ಲವೂ ನೆನಪಾದದ್ದು ಯಡಿಯೂರಪ್ಪನವರು ಅಧಿಕಾರ ಕಳೆದುಕೊಂಡ ಮರುಕ್ಷಣವೇ ಅವರ ಮನೆಯ ಮುಂದೆ ತುಂಬಿದ್ದ ಗೋಜುಗೋಜು ಜನ ಜಂಗುಳಿ ಏಕಾಏಕಿ ಮಾಯವಾದಾಗ. ಅಧಿಕಾರ ತರುವ ಜನ ಭಾಹುಳ್ಯವನ್ನು ಅಧಿಕಾರ ನಂತರದ ಜನ ವಿಯೋಗವನ್ನು ಪತ್ರಿಕೆಯೊಂದು ಛಾಯಾಚಿತ್ರಗಳ ಮೂಲಕ ಸಮರ್ಥವಾಗಿ ಪ್ರತಿಬಿಂಬಿಸಿತ್ತು. ಗಾದೆ ಮಾತೇ ಇಲ್ಲವೇ. ನಗುವಾಗ ಎಲ್ಲ ನೆಂಟರು ಅಳುವಾಗ ಯಾರೂ ಇಲ್ಲ.
ಭಾವುಕರಾಗೋಣ ಬನ್ನಿ!
-ಸಂತೋಷ್
ಮನುಷ್ಯನ ಜೀವನಕ್ಕೆ ಭಾವನೆಗಳು ಎಷ್ಟು ಮುಖ್ಯ? ಎಂದು ಕೇಳಿದರೆ ನಾನು ಕೋಡುವ ಉತ್ತರ ಖಂಡಿತ ಅವು ಮನುಷ್ಯನ ಜೀವನದ ಅವಿಭಾಜ್ಯ ಅಂಗವೆಂದು.ಭಾವನೆಗಳಿಲ್ಲದ ಮನುಷ್ಯ ಏನನ್ನು ಸಾದಿಸಲಾರ.ನಿಜವಾಗಲು ಭಾವನೆಗಳೇ ಮನುಷ್ಯನ ಜೀವನದ ದಾರಿದೀಪಗಳು.ಇದಕ್ಕೆಲ್ಲ ಅಪವಾದವೆಂಬಂತೆ,ನಮ್ಮಲ್ಲಿ ಹುಟ್ಟುವ ಸೂರ್ಯನನ್ನ,ಅರಳುವ ಗುಲಾಭಿಯನ್ನು,ಸುರಿಯುವ ಮಳೆಯನ್ನು,ಆಕಾಶದಲ್ಲಿ ಮೂಡುವ ಬಣ್ಣ ಬಣ್ಣದ ಚಿತ್ತಾರವನ್ನು,ರಂಗು ರಂಗಾಗಿ ಕಾಣುವ ಕಾಮನ ಬಿಲ್ಲನು ನೋಡಿ ಮುದಗೋಳದ ಕುಂಬಕರ್ಣರು ಇದ್ದಾರೆ!ಇದರ ಬಗ್ಗೆ ಅವರದೆಲ್ಲ ದಿವ್ಯ ನಿರ್ಲಕ್ಷೆ.
ಆದರೇ ಹಾಗೇ ನಿದ್ದೆ ಮಾಡುವ ಅವರು ಭಾವುಕತೆಯ ಸುಂದರ ಅನುಭವವನ್ನು ಕಳೆದುಕೋಳುತಾರೆ ಎಂಬುದೇ ನನ್ನ ಭಾವನೆ.ಕಡೇ ಪಕ್ಷ ಈ ಪ್ರಬಂದವನ್ನು ಓದಿದ ನಂತರವಾದರು ಅಂತ ಕುಂಬಕರ್ಣರು ನಿದ್ದೆಯಿಂದ ಎಚ್ಚೆತ್ತುಕೊಂಡರೆ ಸಂತೋಷ ಇಲ್ಲದಿದ್ದರೆ ನಾವು ನೀವು ಏನು ಮಾಡಕ್ಕೆ ಆಗುತ್ತೆ ಅವರನ್ನು ಅವರ ಪಾಡಿಗೆ ಬಿಡುವುದೇ ಸೂಕ್ತ.
ಭಾವುಕನಾದವನು ಸದ ಹೊಸತ್ತನ್ನೆ ಅನ್ವೇಷಣೆ ಮಾಡುತ್ತ ಇರುತ್ತಾನೆ.ಅವನು ಪ್ರಕೃತಿಯೊಂದಿಗೆ ಒಂದು ರೀತಿಯ ಸಂವಾದವನ್ನು ಸಮಾನತೆಯನ್ನು ಸಾದಿಸುತ್ತಾನೆ.ನಿಮ್ಮ ಕಣ್ಣಿಗೆ ಒಂದು ಸುಂದರ ಹೂವು ಅರಳಿ ನಿಂತಾಗ ಭಾವುಕನಾದವನ್ನು ಅದರ ಅರಳುವಿಕೆಯನ್ನು ನೆನೆದು ನೆನೆದು ಪುಳಕಗೋಳ್ಳುತದತ್ತಾನೆ.ಅದg ಬಣ್ಣಗಳನ್ನು ತನ್ನ ಕೈಯಿಂದ ಒರೆಸಿ ನೋಡುತ್ತಾನೆ. ಅದರ ಸುವಾಸನೆಗಾಗಿ ತನ್ನ,ಮೂಗನ್ನು ಅದರ ಬಳಿ ಕೊಂಡಯ್ಯತ್ತಾನೆ.ಧೀರ್ಘವಾದ ಉಸಿರನ್ನು ಏಳೆದುಕೊಂಡು ಅದರ ಸುವಾಸನೆಯನ್ನು ಆಸ್ವಾದಿಸುತ್ತಾನೆ.ಕೊನೆಗೆ ಆ ಹೂವಿನಿಂದ ಬಿಳ್ಕೋಡುವಾಗ ಆ ಹೂವಿಗೆ ಒಂದು ಹೂ ಮುತ್ತನ್ನು ನೀಡಿದರೇ ಅವನು ಭಾವುಕ ಎನಿಸಿಕೊಳ್ಳುತ್ತಾನೆ.