ವಿಷಯದ ವಿವರಗಳಿಗೆ ದಾಟಿರಿ

Archive for

11
ನವೆಂ

ಲಿಂಗಪರಿವರ್ತನೆ: ಬಡವಾಗುತ್ತಿವೆ ಕಂದಮ್ಮಗಳು!

-ವಿಷ್ಣುಪ್ರಿಯ

ಜೆನಿಟೋಪ್ಲಾಸ್ಟಿ. ಈ ತಂತ್ರಜ್ಞಾನದ ಹಿಂದಿದ್ದ ಉದ್ದೇಶವೂ ಸಹ ಕೆಟ್ಟದಾಗೇನೂ ಇರಲಿಲ್ಲ. ನಪುಂಸಕತೆಯನ್ನು ನಿವಾರಿವಂಥ ಮಹತ್ವದ ಉದ್ದೇಶವನ್ನು ಇಟ್ಟುಕೊಂಡಿದ್ದಂಥ ಈ ತಂತ್ರಜ್ಞಾನ ಧನದಾಹಿ ವೈದ್ಯರ ಕೈಯಲ್ಲಿ ಲಿಂಗಪರಿವರ್ತನೆಯಂಥ ದುರುದ್ದೇಶಕ್ಕೆ ಬಳಕೆಯಾಗುತ್ತಿದೆ ಅಷ್ಟೆ. ಎಂತಹುದ್ದೇ ಅಭಿವೃದ್ಧಿಯಾದರೂ ಅದು ನಿಸರ್ಗವನ್ನು, ಆ ನಿಸರ್ಗದ ಸೃಷ್ಟಿಯನ್ನು ಕಾಪಾಡಿಕೊಂಡು ಬರಬೇಕೇ ಹೊರತು, ಅದನ್ನೇ ಧಿಕ್ಕರಿಸಿ ಮುನ್ನಡೆಯುವಂತಿರಬಾರದು.
ಗರ್ಭಿಣಿಯೊಬ್ಬಳು ಪ್ರಸವಿಸಿದ ತಕ್ಷಣ ಆಕೆಯ ಕಡೆಯವರು ನೋಡುವುದು- ಮಗು ಗಂಡೋ ಹೆಣ್ಣೋ ಎಂದು. ಒಂದು ವೇಳೆ ಮಗು ಹೆಣ್ಣಾಗಿದ್ದರೆ ಮುಗಿಯಿತು ಅದರ ಕಥೆ! ಹೀಗೆಲ್ಲ ಆಗುತ್ತದೆಯೇ ಎಂಬ ಪ್ರಶ್ನೆ ಒಂದಷ್ಟು ವರ್ಗಗಳ ಜನರ ಮನಸ್ಸಿನಲ್ಲಿ ಮೂಡಬಹುದು. ಕಾರಣ- ಮಗು ಗಂಡಾಗಲಿ, ಹೆಣ್ಣಾಗಲಿ… ಸುಸೂತ್ರವಾಗಿ ಆದರೆ ಸಾಕು ಎಂದು ಭಾವಿಸುವ ಜನರಿದ್ದಾರೆ. ಮುಖ್ಯವಾಗಿ ಕರ್ನಾಟಕ ಮತ್ತು ಕೇರಳಗಳಲ್ಲಿ ಹೆಣ್ಣು ಗಂಡೆಂಬ ತಾರತಮ್ಯ ಕಡಿಮೆಯಾಗುತ್ತಿದೆ. ಆದರೆ ಸಂಪೂರ್ಣ ಭಾರತದ ಪರಿಸ್ಥಿತಿ ಹೀಗಿಲ್ಲ. ಗಂಡು ಮಗು ಮಾತ್ರ ನಮಗೆ ಬೇಕು ಎಂದು ಭಾವಿಸುವ ಅದೆಷ್ಟೋ ಜನ ಭಾರತದಲ್ಲಿದ್ದಾರೆ. ಮಗು ಹೆಣ್ಣು ಎಂದಾಕ್ಷಣ ಅದನ್ನು ಒಂದೋ ಸಾಯಿಸಿ ಬಿಡುತ್ತಾರೆ, ಇಲ್ಲವಾದಲ್ಲಿ ಬಿಟ್ಟು ಹೋಗುತ್ತಾರೆ. ಇದು ಹಳೇ ದಿನಗಳ ವಿಚಾರವಾಯಿತು. ಆದರೆ ಯಾವಾಗ ಲಿಂಗಪರಿವರ್ತನೆ ತಂತ್ರಜ್ಞಾನವನ್ನು ವೈದ್ಯಲೋಕ ಬಳಸಿಕೊಳ್ಳಲಾರಂಭಿಸಿತೋ ಅಂದಿನಿಂದ ಹೆಣ್ಣು ಮಗುವಿನ ಹತ್ಯೆ ಕಡಿಮೆಯಾಗಿದೆ. ಹಾಗಂತ ಖುಷಿ ಪಡುವ ಹಾಗಿಲ್ಲ! ಹೆಣ್ಣು ಮಗುವಿನ ಲಿಂಗ ಪರಿವರ್ತನೆ ಮಾಡಿ ಗಂಡಾಗಿಸುತ್ತಾರೆ. ನಮ್ಮ ವಂಶಕ್ಕೊಂದು ಗಂಡು ಮಗು ಬಂತು ಎಂದು ಬೀಗುತ್ತಾರೆ.

ಮತ್ತಷ್ಟು ಓದು »

11
ನವೆಂ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 10 -ಮೇಳವನ್ನು ಉಳಿಸಿದ ಹರಕೆಯ ಆಟಗಳು

ಧರ್ಮಸ್ಥಳ ಮೇಳದ ಆಡಳಿತವೆಂದರೆ ಅಷ್ಟು ಸುಲಭವಾಗಿ ತೀರ್ಮಾನಿಸುವ ವಿಷಯವಲ್ಲ. ಸುಲಭದ ಮಾತೂ ಅಲ್ಲ. ತುಂಬಾ ವಿಚಾರ ಮಾಡಿ ನಿರ್ಧರಿಸಬೇಕಾದುದು’ ಎಂದು ಸಿ. ಎಸ್. ಶಾಸ್ತ್ರಿಗಳು ನನ್ನ ಯೋಜನೆಯ ಬಗ್ಗೆ ತಿಳಿಸಿದರು.

ಒಂದೆರಡು ದಿನ ಕಳೆದು ಕಾಣಸಿಕ್ಕಿದ ಶ್ರೀ ರಾಮಕೃಷ್ಣಯ್ಯನವರಲ್ಲೂ ಅದೇ ಆಸೆಯನ್ನು ಪ್ರಸ್ತಾಪಿಸಿದಾಗ ಅವರು-

“ಯಾವುದಕ್ಕೂ ನೀವು ಸ್ಥಳಕ್ಕೆ ಬನ್ನಿ. ಅಲ್ಲಿ ಮಾತನಾಡಿ ನೋಡೋಣ” ಎಂದರು.

ಆ ಮಾತಿಗೆ ಅಣ್ಣನವರ ಒಪ್ಪಿಗೆಯೂ ಸಿಕ್ಕಿತು. ಹಾಗೆ ನಾವಿಬ್ಬರೂ ಧರ್ಮಸ್ಥಳಕ್ಕೆ ಹೋಗಿ ಶ್ರೀಮಾನ್ ಹೆಗ್ಗಡೆಯವರನ್ನು ಭೇಟಿಯಾದೆವು.

ನನ್ನ ಆಸೆಯನ್ನು ಶ್ರೀ ರಾಮಕೃಷ್ಣಯ್ಯನವರೇ ಶ್ರೀ ಹೆಗ್ಗಡೆಯವರೊಂದಿಗೆ ಅರುಹಿದರು.

ಅವರದು ಶೀಘ್ರ ನಿರ್ಧಾರದ ಕ್ರಮವೋ ಏನೋ ಎಂದು ನಾನು ಭಾವಿಸುವ ಹಾಗೆ-

“ಆಗಲಿ ಸಂತೋಷ” ಎಂದು ಅವರ ಅಪ್ಪಣೆ ಬಂದಿತು.

ಮೇಳಕ್ಕೆ ಬೇಕಾದ ವೇಷಭೂಷಣಗಳು ಯಾವುವೆಲ್ಲ ಅಗತ್ಯವಿದೆ ಎಂದು ಒಂದು ಪಟ್ಟಿ ತಯಾರಿಸಿ ಕೊಡಲೂ ಹೇಳಿದರು.

ಅವರಿಂದ ವಾಗ್ದಾನ ಪಡೆದು ಊರಿಗೆ ಬರುವಾಗಲೇ ಧರ್ಮಸ್ಥಳ ಮೇಳವನ್ನು ನಾನು ವಹಿಸಿಕೊಳ್ಳಲಿರುವ ಸುದ್ದಿ ಗಾಳಿಯಲ್ಲಿ ಹರಡತೊಡಗಿತ್ತು.

ಮತ್ತಷ್ಟು ಓದು »